Subscribe to Updates
Get the latest creative news from FooBar about art, design and business.
Author: kannadanewsnow09
12 ವರ್ಷಗಳ ನಂತರ ಗುರು ಮಿಥುನ ರಾಶಿಯಲ್ಲಿ ಉದಯಿಸುತ್ತಿದ್ದಾನೆ. ಗುರುವಿನ ಉದಯವು ಮಿಥುನ ಮತ್ತು ಧನು ರಾಶಿ ಸೇರಿದಂತೆ 5 ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರುತ್ತದೆ. ಈ ರಾಶಿಚಕ್ರ ಚಿಹ್ನೆಗಳ ವ್ಯವಹಾರವು ವೇಗಗೊಳ್ಳುತ್ತದೆ ಮತ್ತು ಇವರ ಉದ್ಯೋಗದಲ್ಲಿ ಹೊಸ ಅವಕಾಶಗಳ ಸಾಧ್ಯತೆ ಹೆಚ್ಚಾಗುತ್ತದೆ. ವಾಸ್ತವವಾಗಿ, ಗುರುವು ತನ್ನ ಸ್ನೇಹಿತ ಬುಧನ ರಾಶಿಯಾದ ಮಿಥುನ ರಾಶಿಯಲ್ಲಿ ಸಾಗುವಾಗ ಉದಯಿಸುತ್ತಿದ್ದಾನೆ. ಶುಭ ಸ್ಥಿತಿಯಲ್ಲಿರುವ ಗುರು ಗ್ರಹದ ಉದಯವು ಬಹಳ ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. ಆದ್ದರಿಂದ ಗುರುವಿನ ಉದಯದೊಂದಿಗೆ ಯಾವ 5 ರಾಶಿಗಳಿಗೆ ಶುಭವಾಗಲಿದೆ ಎಂಬುದು ಇಲ್ಲಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ…
ಬೆಂಗಳೂರು: ರಾಜ್ಯದಲ್ಲಿ ಕೆಪಿಎಸ್ ಮಾದರಿಯಲ್ಲೇ ಉರ್ದು ಶಾಲೆಗಳನ್ನು ಅಭಿವೃದ್ಧಿ ಮಾಡುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಬಾಹುಳ್ಯದ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಮಾದರಿಯಲ್ಲಿ 100 ಉರ್ದು ಶಾಲೆಗಳನ್ನು ಅಭಿವೃದ್ಧಿಪಡಿಸಲು ಬಜೆಟ್ನಲ್ಲಿ 500 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಜೊತೆ ಸೇರಿ ಸರ್ವೇ ಮಾಡಿ ಅಗತ್ಯವಿರುವ ಕಡೆ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. https://twitter.com/KarnatakaVarthe/status/1938214553671843900
ಬೆಂಗಳೂರು: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವಂತ 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದಾರೆ. 2023ರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇದ್ದಂತ 2000 ಚಾಲಕ ಕಂ ನಿರ್ವಾಹಕರ ಹುದ್ದಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿತ್ತು. ಆ ಬಳಿಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹುದ್ದೆಗಳಲ್ಲಿ 1000 ಚಾಲಕರನ್ನು ಭರ್ತಿ ಮಾಡಿಕೊಳ್ಳಲಾಗಿದ್ದು, 1000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಭರ್ತಿ ಮಾಡಿಕೊಳ್ಳಬೇಕಿದೆ. 2000 ಚಾಲಕ ಕಂ ನಿರ್ವಾಹಕರ ಹುದ್ದೆಗೆ ಬರೋಬ್ಬರಿ 57,000 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. 2023ರ ಅಧಿಸೂಚನೆಯ ನೇಮಕಾತಿಗೆ 2025ರಲ್ಲಿ 1000 ಚಾಲಕರನ್ನು ನೇಮಕ ಮಾಡಿಕೊಂಡಿದ್ದರೇ, ಇನ್ನೂ 1000 ಹುದ್ದೆ ಬಾಕಿ ಇವೆ. ಅವುಗಳನ್ನು ಚಾಲಕ ಕಂ ನಿರ್ವಾಹಕರನ್ನು ಮಾತ್ರವೇ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇಂದಿಗೆ ಚಾಲಕ ಕಂ ನಿರ್ವಾಹಕರ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು ಸೋಮವಾರ ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಗಣೆ ಟ್ರಸ್ಟ್ (ರಿ) ಅಧ್ಯಕ್ಷರು, ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯೆ ಹಾಗೂ ಉಪನ್ಯಾಸಕಿ ಡಾ. ಜಿಕೆ. ಪ್ರೇಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಸಂಸದ ಪಿ. ಕೋದಂಡರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದಂತ ಸಣ್ಣ ಚಿತ್ತಯ್ಯ ಅವರು ಕಛೇರಿ ಉದ್ಘಾಟಿಸಲಿದ್ದಾರೆ. ಹಂಪಿ ವಿವಿ ಸಿಂಡಿಕೇಟ್ ಸದಸ್ಯ ಹಾಗೂ ಸಂಸ್ಕೃತಿ ಚಿಂತಕ ಡಾ. ಬಂಜಗೆರೆ ಜಯಪ್ರಕಾಶ್ ಮತ್ತು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ವೆಂಕಟೇಶಯ್ಯ ನೆಲ್ಲುಕುಂಟೆ ಅವರು ಗ್ರಂಥಾಲಯ ಲೋಕಾರ್ಪಣೆ ಮಾಡಲಿದ್ದು, ಕೃತಿಕಾ, ಡಾ. ವಿ. ಭಾಗ್ಯಲಕ್ಷ್ಮಿ,…
ಮೈಸೂರು: ಪ್ರಯಾಣಿಕರ ಅನುಕೂಲತೆ ಮತ್ತು ಸ್ಮಾರ್ಟ್ ನಿಲ್ದಾಣ ಯೋಜನೆಗೆ ಬೆಂಬಲ ನೀಡುವ ಉದ್ದೇಶದಿಂದ, ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಕ್ಯೂಆರ್ ಕೋಡ್ ಆಧಾರಿತ ಡಿಜಿಟಲ್ ನಕ್ಷೆ ಮತ್ತು ಸಂಚರಣೆ ವ್ಯವಸ್ಥೆಯಾದ ‘ಮಾರ್ಗದರ್ಶಕ್’ ಅನ್ನು ಮೈಸೂರು ರೈಲು ನಿಲ್ದಾಣದಲ್ಲಿ ಪ್ರಾರಂಭಿಸಿದೆ. ಆಧುನಿಕ ಹಾಗೂ ಬಳಕೆದಾರ ಸ್ನೇಹಿ ಈ ವ್ಯವಸ್ಥೆಯನ್ನು ಇಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀ ಮುದಿತ್ ಮಿತ್ತಲ್ ಅವರಿಂದ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ‘ಮಾರ್ಗದರ್ಶಕ್’ ಮೂಲಕ ಪ್ರಯಾಣಿಕರು ಗೂಗಲ್ ಮ್ಯಾಪ್ ಬಳಸುವ ರೀತಿಯಲ್ಲಿ ನಿಲ್ದಾಣದ ಒಳಾಂಗಣವನ್ನು ಸುಲಭವಾಗಿ ಸಂಚರಣೆ ಮಾಡಬಹುದು. ‘ಮಾರ್ಗದರ್ಶಕ್’ದ ಪ್ರಮುಖ ವೈಶಿಷ್ಟ್ಯಗಳು: * 24/7 ಸ್ವಯಂ ಸೇವೆ: ಮಾಹಿತಿಗಾಗಿ ಯಾರನ್ನೂ ಕೇಳುವ ಅಗತ್ಯವಿಲ್ಲ – ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಸಂಚರಣೆ ಮಾಡಬಹುದು. * ತಿರುವು ಸಂಚರಣೆ: ನಿಮ್ಮ ಸ್ಥಳದಿಂದ ಪ್ಲಾಟ್ಫಾರ್ಮುಗಳು, ಮೆಟ್ಟಿಲು ಸೇವೆಗಳು, ಕುಡಿಯುವ ನೀರಿನ ಕೇಂದ್ರಗಳು, ನಿರೀಕ್ಷಣಾ ಕೊಠಡಿಗಳು, ಆಹಾರ ಮಳಿಗೆಗಳು ಮುಂತಾದ ಸ್ಥಳಗಳ ದಿಕ್ಕುಗಳನ್ನು ತಿಳಿಯಬಹುದು. * ಬಹುಭಾಷೆ: ನಿಮ್ಮ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ದಿನಾಂಕ: 27.06.2025 ರ ಶುಕ್ರವಾರದಂದು 110/33/11 ಕೆವಿ ಸಾಗರ ವಿದ್ಯುತ್ ವಿತರಣಾ’ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜೂನ್.27ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಾಗರ / ಪಟ್ಟಣ ವ್ಯಾಪ್ತಿಯ ಎಫ್- ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-15 ಆರ್.ಎಂ.ಸಿ, ಎಫ್-11 ಎಸ್.ಎನ್.ನಗರ ಮತ್ತು ಗ್ರಾಮೀಣ ವ್ಯಾಪ್ತಿಯ ಏಫ್-2 ಮಾಲೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವರದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ. ಇನ್ನೂ ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಪನೆ, ಮಾಲೆ, ಭೀಮನೇರಿ,…
ಬೆಂಗಳೂರು: ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮತಿ ಕಡ್ಡಾಯಗೊಳಿಸಲಾಗಿದೆ. ಬಿಬಿಎಂಪಿ ನೀಡುವಂತ ನಕ್ಷೆಯ ಅನುಮತಿ ಪಡೆಯದೇ ಕಟ್ಟಡ ನಿರ್ಮಾಣ ಮಾಡಿದರೇ ನೀರು, ವಿದ್ಯುತ್ ಸಂಪರ್ಕ ನೀಡುವುದಿಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕಟ್ಟಡ ನಕ್ಷೆ ಮಂಜೂರು, ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ, ಅನುಮತಿ ಇಲ್ಲದೆ ಜನರು ಮನೆ ಕಟ್ಟಬಾರದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1938206611203612957 https://kannadanewsnow.com/kannada/while-teaching-the-school-teacher-died-of-a-heart-attack/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಬಾಗಲಕೋಟೆ: ರಾಜ್ಯದಲ್ಲಿ ದಿನೇ ದಿನ ಹದಿ ಹರೆಯದವರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವಂತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ತುಂಗಳ ಹೈಸ್ಕೂಲಿನಲ್ಲಿ ಇಂದು ಪಾಠ ಮಾಡುತ್ತಿದ್ದಂತ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಗುರುಪಾದ ಹಿಬ್ಬರಗಿ(49) ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಇನ್ನೇನು ಆಸ್ಪತ್ರೆಗೆ ಕರೆದೊಯ್ಯಬೇಕು ಎನ್ನುವ ವೇಳೆಗೆ ಹೃದಯಾಘಾತದಿಂದ ಕನ್ನಡ ಶಿಕ್ಷಕ ಗುರುಪಾದ ಹಿಪ್ಪರಗಿ ಅವರು ಸಾವನ್ನಪ್ಪಿದ್ದಾರೆ. ಶಿಕ್ಷಕರ ಸಾವಿನಿಂದಾಗಿ ವಿದ್ಯಾರ್ಥಿಗಳು ಕಣ್ಣೀರಾಗಿದ್ದಾರೆ. ಅಲ್ಲದೇ ಸಹ ಶಿಕ್ಷಕರು ಕಣ್ಣೀರಾಗಿದ್ದಾರೆ. ಇಡೀ ಶಾಲೆಯು ಶೋಕಸಾಗರದಲ್ಲಿ ಮುಳುಗುವಂತೆ ಮಾಡಿದೆ. https://kannadanewsnow.com/kannada/former-mp-ananth-kumar-hegde-gets-big-relief-from-the-high-court/ https://kannadanewsnow.com/kannada/purushottam-bilimale-demands-hearing-in-kannada-in-karnataka-high-court/
ಬೆಂಗಳೂರು: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಕಾರು ಓವರ್ ಟೇಕ್ ವೇಳೆ ಗಲಾಟೆ ಪ್ರಕರಣದಲ್ಲಿ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಕಾರು ಓವರ್ ಟೇಕ್ ವೇಳೆ ಗಲಾಟೆ ಪ್ರಕರಣ ಸಂಬಂಧ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದಂತ ನ್ಯಾಯಪೀಠವು ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬುದಾಗಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಅನಂತ್ ಕುಮಾರ್ ಹೆಗೆಡೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/farmers-cooperation-is-essential-for-the-conservation-of-village-forests-sagar-dfo-mohan-kumar/ https://kannadanewsnow.com/kannada/purushottam-bilimale-demands-hearing-in-kannada-in-karnataka-high-court/
ಶಿವಮೊಗ್ಗ: ಗ್ರಾಮ ಅರಣ್ಯಗಳ ಸಂರಕ್ಷಣೆಗೆ ರೈತರ ಸಹಕಾರ ಅತ್ಯಗತ್ಯ. ಇಲ್ಲವಾದಲ್ಲಿ ಕಾಡುಗಳನ್ನು ಉಳಿಸುವುದು ಕಷ್ಟವಾಗುತ್ತದೆ ಎಂಬುದಾಗಿ ಸಾಗರ ತಾಲ್ಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಹೆಗ್ಗೋಡು ಸಂಪೆಕೈ ಬೆಟ್ಟದಲ್ಲಿ ನಡೆದಂತ ಬೆಟ್ಟ, ಕಾನು ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತ ಜಾಗೃತಿ ಅಭಿಯಾನ, ವೃಕ್ಷರೋಪಣ ಪ್ರಕೃತಿ ವಂದನ ಸಮಾಲೋಚನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, 2010ರಲ್ಲಿ ಅರಣ್ಯ ಇಲಾಖೆ ಜಾರಿಗೆ ತಂದಂತ ಪಶ್ಚಿಮಘಟ್ಟ ಕಾರ್ಯಪಡೆಯ ಅರಣ್ಯ ಕಾನು ಅರಣ್ಯ ಯೋಜನೆಯಿಂದಾಗಿ ಸುಮಾರು 20,000 ಎಕರೆಯಷ್ಟು ಅರಣ್ಯ ಸಂರಕ್ಷಣೆ ಸಾಧ್ಯವಾಯಿತು ಎಂದರು. ಪರಿಸರ ಉಳಿದಾಗ ಮಾತ್ರವೇ ಮನುಷ್ಯನ ಬದುಕು ಹಸನಾಗುತ್ತದೆ ಎಂಬುದನ್ನು ಯಾರು ಮರೆಯಬಾರದು. ಕಾನು ಅರಣ್ಯ ಉಳಿಸುವಂತ ಅರಣ್ಯ ಇಲಾಖೆಯ ಸಂಕಲ್ಪಕ್ಕೆ ಸಾರ್ವಜನಿಕರು ಕೈಜೋಡಿಸಬೇಕು. ಆ ಮೂಲಕ ಪರಿಸರ ಉಳಿಸೋದಕ್ಕೆ ಮುಂದಾಗಬೇಕು. ಇದು ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಕೂಡ ಎಂದು ಹೇಳಿದರು. ಇನ್ನೂ ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ…