Subscribe to Updates
Get the latest creative news from FooBar about art, design and business.
Author: kannadanewsnow09
ಉಡುಪಿ: “ನಾವೆಲ್ಲರೂ ಮಾನವೀಯತೆಗೆ ತಲೆಭಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಕಾಪುವಿನಲ್ಲಿ ಭಾನುವಾರ ನಡೆದ ಇತಿಹಾಸ ಪ್ರಸಿದ್ಧ ಶ್ರೀ ಹೊಸಮಾರಿಗುಡಿಯ ಬ್ರಹ್ಮ ಕಳಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. “ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದರು. “ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿಂದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ” ಎಂದು ಹೇಳಿದರು. “ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು…
ಉಡುಪಿ: “ಅನ್ಯಾಯಕ್ಕೆ ಒಳಗಾಗಿರುವವರಿಗೆ ನ್ಯಾಯ ಕೊಡಿಸುವುದು ನಮ್ಮ ಕರ್ತವ್ಯ. ನಿಮ್ಮ ಧ್ವನಿಗೆ ಸರ್ಕಾರ ಮನ್ನಣೆ ನೀಡಿ, ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 66 ರ ಸಮೀಪ ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆ ಎದಿರು ಅನಿರ್ದಾಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಉಡುಪಿ ಜಿಲ್ಲಾ ರೈತ ಸಂಘದ ಪ್ರತಿನಿಧಿಗಳನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಭೇಟಿ ಮಾಡಿ ಅವರ ಅಹವಾಲು ಆಲಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ನಿಮ್ಮ ಸಮಸ್ಯೆ ಬಗ್ಗೆ ನನಗೂ ಸ್ವಲ್ಪ ಅನುಭವವಿದೆ. ನಾನು ಸಹಕಾರ ಮಂತ್ರಿಯಾಗಿದ್ದಾಗ, ಆಸ್ಕರ್ ಫರ್ನಾಂಡಿಸ್ ಅವರು ಅಧ್ಯಕ್ಷರಾಗಿದ್ದರು. ಅವರು ನನ್ನ ಬಳಿ ಬಂದು ಸರ್ಕಾರದ ನೆರವು ಬಯಸಿದ್ದರು. ನಾನು ಈ ಜಾಗಕ್ಕೆ ಬಂದಿದ್ದೆ. ಇಲ್ಲಿ ದೊಡ್ಡ ಜಾಗ ಇದೆ. ಸುಮಾರು 100 ಕ್ಕೂ ಹೆಚ್ಚು ಎಕರೆ ಜಾಗ ಇದೆ. ಆ ಕಾಲದಲ್ಲಿ ಸರ್ಕಾರ…
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ/ನೌಕರರು ಹೆಚ್ಆರ್ಎಂಎಸ್ನ ನೌಕರರ ಸ್ವಯಂ ಸೇವೆ (Employee Self Service-ESS App) ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿಕೊಂಡು, ಸರ್ಕಾರಿ ನೌಕರರು ತಮ್ಮ ವೇತನ ಪ್ರಮಾಣ ಪತ್ರ,ರಜೆ ಬಾಕಿ, ಸಾಲ/ ಮುಂಗಡ,ಕಡಿತದ ವಿವರಗಳು,ವಿಮೆ,ಇ-ಸೇವಾ ಪುಸ್ತಕ,HRMS ಟಿಕೆಟ್,ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ),ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್ ಬಿವೈ)ಮುಂತಾದ ಮಾಹಿತಿ ಪಡೆಯಬಹುದು. ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗಲು ಹೆಚ್ಆರ್ ಎಂಎಸ್ ನಿರ್ದೇಶನಾಲಯವು ನೌಕರರ ಸ್ವಯಂ ಸೇವೆ (Employee Self Service-ESS) ಪೋರ್ಟಲ್ಅನ್ನು ಸಿದ್ಧಪಡಿಸಿದೆ. ಸದರಿ ಪೋರ್ಟಲ್ ಬಳಕೆದಾರರ ಸ್ನೇಹಿಯಾಗಿದ್ದು, ಈ ಕೆಳಕಂಡಂತೆ ಹಲವು ರೀತಿಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. 1) ವೇತನ ಚೀಟಿ (Pay Slip) ಸರ್ಕಾರಿ ನೌಕರರು ತಮ್ಮ ಕೆಜಿಐಡಿ ಸಂಖ್ಯೆಯ ಮೂಲಕ ನೋಂದಣಿಯಾಗಿ ನೇರವಾಗಿ ತಮ್ಮ ವೇತನ ಚೀಟಿಯನ್ನು (Pay Slip) ಅನ್ನು ಪಡೆಯಬಹುದು. 2) ರಜೆ ಬಾಕಿ (Leave Balance) ನೌಕರರು ತಮ್ಮ ರಜೆ ಬಾಕಿಯನ್ನು ವೀಕ್ಷಿಸಬಹುದು. 3) ಸಾಲ/ಮುಂಗಡ (Loan/Advance) ನೌಕರರು ಸಾಲ/ಮುಂಗಡದ ವಿವರಗಳನ್ನು ವೀಕ್ಷಿಸಬಹುದು. 4) ಕಡಿತದ ವಿವರಗಳು…
ಹಾಸನ : ನಿತ್ಯ ಬೆಳಗ್ಗೆ ಕೋಳಿ ಕೂಗುವ ಮೊದಲೇ ಎದ್ದು ಕೆಲಸಕ್ಕೆ ಹೊರಡುವ ಪತ್ರಿಕಾ ವಿತಕರು ಪತ್ರಿಕಾ ಕ್ಷೇತ್ರದ ನರಮಂಡಲ ಇದ್ದಂತೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಪತ್ರಿಕಾ ವಿತರಕರ ಸಂಘ, ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಂಘ, ಚನ್ನರಾಯಪಟ್ಟಣ ತಾಲೂಕು ಪತ್ರಿಕಾ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಹಾಸನ ಜಿಲ್ಲಾ ಪತ್ರಿಕಾ ವಿತರಕರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಿಕೋದ್ಯಮದ ನರಮಂಡಲ ಇದ್ದಹಾಗೆ. ನರ ಮಂಡಲ ಇದ್ದರಷ್ಟೆ ಮನುಷ್ಯನ ದೇಹ ಕೆಲಸ ಮಾಡುವುದು. ಹಾಗೆಯೇ ಪತ್ರಿಕಾ ವಿತರಕರು ಪತ್ರಿಕಾ ಕ್ಷೇತ್ರದ ನರಮಂಡಲ. ಇಡೀ ದೇಶದ ಬೀದಿ ಬೀದಿಗಳಲ್ಲಿ ಓಡಾಡಿ ಸುದ್ದಿ ವಿತರಣೆ ಮಾಡುವ ವಿತರಕರು ಇಲ್ಲದೆ ಮುದ್ರಣಗೊಂಡ ಪತ್ರಿಕೆಗಳಿಗೆ ಮೋಕ್ಷ ಸಿಗುವುದಿಲ್ಲ ಎಂದು ನುಡಿದರು. ಈ ನರಮಂಡಲಕ್ಕೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಮಾತೃ ಹೃದಯ. ಈ ಬಾರಿಯ ಬಜೆಟ್ ನಲ್ಲೂ ಪತ್ರಿಕಾ ಕಾರ್ಮಿಕರಿಗೆ ಅನುಕೂಲ ಆಗುವ ಭರವಸೆ ಇದೆ…
ನವದೆಹಲಿ: ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯ ಮುಕ್ತೈನಗರ ಪ್ರದೇಶದಲ್ಲಿ ದುಷ್ಕರ್ಮಿಗಳ ಗುಂಪು ತನ್ನ ಮಗಳು ಮತ್ತು ಇತರರಿಗೆ ಕಿರುಕುಳ ನೀಡಿದೆ ಎಂದು ಕೇಂದ್ರ ಯುವ ವ್ಯವಹಾರಗಳ ರಾಜ್ಯ ಸಚಿವೆ ರಕ್ಷಾ ಖಾಡ್ಸೆ ಭಾನುವಾರ ಆರೋಪಿಸಿದ್ದಾರೆ. ಈ ಘಟನೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಮುಖಂಡ ವಿಜಯ್ ವಾಡೆಟ್ಟಿವಾರ್, “ಕೇಂದ್ರ ಸಚಿವೆ ರಕ್ಷಾ ಖಾಡ್ಸೆ ಅವರ ಪುತ್ರಿಗೆ ಪೊಲೀಸ್ ರಕ್ಷಣೆಯಲ್ಲಿದ್ದಾಗ ಕಿರುಕುಳ ನೀಡಲಾಗಿದೆ ಎಂಬ ಸುದ್ದಿ ಮಹಾರಾಷ್ಟ್ರದಲ್ಲಿ ವಾಸ್ತವವಾಗಿದೆ” ಎಂದು ಹೇಳಿದ್ದಾರೆ. “ದರೋಡೆಕೋರರು ಮಹಾಯುತಿಯಿಂದ ರಾಜಕೀಯ ರಕ್ಷಣೆ ಪಡೆಯುವುದರಿಂದ ರಾಜ್ಯದಲ್ಲಿ ಪೊಲೀಸರಿಗೆ ಇನ್ನು ಮುಂದೆ ಭಯವಿಲ್ಲ ಎಂದು ನಾವು ಬಹಳ ಸಮಯದಿಂದ ಹೇಳುತ್ತಿದ್ದೇವೆ” ಎಂದು ಅವರು ಹೇಳಿದರು. https://kannadanewsnow.com/kannada/mayawati-removes-her-son-in-law-akash-anand-from-all-posts-in-bsp/ https://kannadanewsnow.com/kannada/virat-kohli-attains-300th-peak-in-odis-becomes-7th-indian-to-achieve-landmark/
ದುಬೈ : ನ್ಯೂಜಿಲೆಂಡ್ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 300 ಏಕದಿನ ಪಂದ್ಯಗಳನ್ನಾಡಿದ 7ನೇ ಭಾರತೀಯ ಹಾಗೂ ಒಟ್ಟಾರೆ 22ನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಹುಲ್ ದ್ರಾವಿಡ್, ಮೊಹಮ್ಮದ್ ಅಜರುದ್ದೀನ್, ಸಚಿನ್ ತೆಂಡೂಲ್ಕರ್ ಮತ್ತು ಯುವರಾಜ್ ಸಿಂಗ್ ನಂತರ ಚಾಂಪಿಯನ್ಸ್ ಟ್ರೋಫಿಯಲ್ಲಿ 300 ಏಕದಿನ ಪಂದ್ಯಗಳನ್ನು ಪೂರೈಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹೀಗಿದೆ ಏಕದಿನ ಪಂದ್ಯಗಳಲ್ಲಿ ಭಾರತಕ್ಕಾಗಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದಂತ ಆಟಗಾರರ ಪಟ್ಟಿ 463 – ಸಚಿನ್ ತೆಂಡೂಲ್ಕರ್ (1989-2012) 347 – ಎಂಎಸ್ ಧೋನಿ (2004-2019) 340 – ರಾಹುಲ್ ದ್ರಾವಿಡ್ (1996-2011) 334 – ಮೊಹಮ್ಮದ್ ಅಜರುದ್ದೀನ್ (1985-2000) 308 – ಸೌರವ್ ಗಂಗೂಲಿ (1992-2007) 301 – ಯುವರಾಜ್ ಸಿಂಗ್ (2000-2017) 300* – ವಿರಾಟ್ ಕೊಹ್ಲಿ (2008-2025) ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್,…
ನವದೆಹಲಿ: ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದ್ದಾರೆ. ಆಕಾಶ್ ಆನಂದ್ ಅವರನ್ನು ಬಿಎಸ್ಪಿಯ ರಾಷ್ಟ್ರೀಯ ಸಂಯೋಜಕರಾಗಿದ್ದರು ಮತ್ತು ಮಾಯಾವತಿ ಅವರ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿತ್ತು. ಈಗ ಆನಂದ್ ಕುಮಾರ್ ಮತ್ತು ರಾಮ್ಜಿ ಗೌತಮ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಡಲಾಗಿದೆ. ಅವರು ಬದುಕಿರುವವರೆಗೂ ಅವರ ಉತ್ತರಾಧಿಕಾರಿ ಇರುವುದಿಲ್ಲ ಎಂದು ಅವರು ಹೇಳಿದರು. https://twitter.com/Mayawati/status/1896110745181659572 ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಭಾನುವಾರ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದೆ. ಇದು ತನ್ನ ನಾಯಕತ್ವ ರಚನೆಯಲ್ಲಿ ಗಮನಾರ್ಹ ಬದಲಾವಣೆಯ ಸಂಕೇತವಾಗಿದೆ. ಪಕ್ಷದ ನಿರ್ಣಾಯಕ ಸಭೆಯ ನಂತರ, ಬಿಎಸ್ಪಿ ಅವರ ತಂದೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಆನಂದ್ ಕುಮಾರ್ ಮತ್ತು ರಾಜ್ಯಸಭಾ ಸಂಸದ ರಾಮ್ಜಿ ಗೌತಮ್ ಅವರನ್ನು ಹೊಸ ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಿಸಿತು. https://kannadanewsnow.com/kannada/ed-issues-notice-to-paytm-over-rs-611-crore-fema-violation/ https://kannadanewsnow.com/kannada/navarasa-nayaka-jaggesh-suggests-this-to-dcm-dk-shivakumar/
ನವದೆಹಲಿ: 611 ಕೋಟಿ ರೂ.ಗಳ ಹೂಡಿಕೆ ವಹಿವಾಟಿನಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಪೇಟಿಎಂನ ಮಾತೃ ಕಂಪನಿ ಒನ್ 97 ಕಮ್ಯುನಿಕೇಷನ್ಸ್ಗೆ ಶೋಕಾಸ್ ನೋಟಿಸ್ ನೀಡಿದೆ. ಫೆಬ್ರವರಿ 27 ರಂದು ನೋಟಿಸ್ ನೀಡಲಾಗಿದ್ದು, 2015 ಮತ್ತು 2019 ರ ನಡುವಿನ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದೆ, ಮುಖ್ಯವಾಗಿ ಪೇಟಿಎಂ ತನ್ನ ಅಂಗಸಂಸ್ಥೆಗಳಾದ ಲಿಟಲ್ ಇಂಟರ್ನೆಟ್ ಮತ್ತು ನಿಯರ್ಬೈ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದೆ. ಪೇಟಿಎಂ ಶನಿವಾರ ನಿಯಂತ್ರಕ ಫೈಲಿಂಗ್ನಲ್ಲಿ ಈ ಬೆಳವಣಿಗೆಯನ್ನು ದೃಢಪಡಿಸಿದ್ದು, “ನಾವು ಪ್ರಸ್ತುತ ಕಾನೂನು ಸಲಹೆಯನ್ನು ಪಡೆಯುತ್ತಿದ್ದೇವೆ ಮತ್ತು ನಮ್ಮ ಆಯ್ಕೆಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದು ಹೇಳಿದೆ. 2017 ರ ಡಿಸೆಂಬರ್ನಲ್ಲಿ ಒನ್ 97 ಕಮ್ಯುನಿಕೇಷನ್ಸ್ ಸ್ವಾಧೀನಪಡಿಸಿಕೊಳ್ಳುವ ಮೊದಲು ಕೆಲವು ಉಲ್ಲಂಘನೆಗಳು ನಡೆದಿರಬಹುದು ಎಂದು ಸೂಚಿಸುವ ಕೆಲವು ಫ್ಲ್ಯಾಗ್ ಮಾಡಿದ ವಹಿವಾಟುಗಳು ಈ ಅಂಗಸಂಸ್ಥೆಗಳ ಮಾಲೀಕತ್ವಕ್ಕೆ ಮುಂಚಿತವಾಗಿವೆ ಎಂದು ಕಂಪನಿ ಸಮರ್ಥಿಸಿಕೊಂಡಿದೆ. ಈ ಸ್ವಾಧೀನಗಳು ಡಿಜಿಟಲ್ ಪಾವತಿಗಳನ್ನು ಮೀರಿ ವಿಸ್ತರಿಸುವ ಆಫ್ಲೈನ್…
BREAKING: ಸಿದ್ದರಾಮಯ್ಯ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ, ವರ್ಷದ ಆಗುಹೋಗುಗಳ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ
ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ, ಸಿಎಂ ಬದಲಾವಣೆ ಹಾಗೂ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯ ಅವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂದಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ, ಡಿಕೆ ಶಿವಕುಮಾರ್ ಜೊತೆ ಅಧಿಕಾರ ಹಂಚಿಕೆ ಯಾವಾಗ ಎಂಬ ಚರ್ಚೆಯ ನಡುವೆ, ಈ ಭವಿಷ್ಯವಾಣಿ ಹೊರಬಿದ್ದಿದೆ. ಅಲ್ಲದೇ ಕೋಡಿಮಠ ಶ್ರೀ ಭವಿಷ್ಯವಾಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಭದ್ರ ಎಂಬುದಾಗಿಯೇ ತಿಳಿಸಿದ್ದಾರೆ. ಹಾಲು ಮತ ಸಮಾಜವು ಪ್ರಾಚೀನ ಕಾಲದಿಂದ ದೈವಾರಾಧನೆ ಮಾಡುವ ಸಮಾಜವಾಗಿದೆ. ಹಾಲು ಕೆಟ್ಟರೂ ಹಾಲು ಸಮಾಜ ಕೆಡದು. ಹಕ್ಕ ಬುಕ್ಕರು ವಿಜಯನಗರ ಸಾಮ್ರಾಜ್ಯ ಕಟ್ಟಿದರು. ಹಾಲು ಮತ ಸಮಾಜದವರಲ್ಲಿ ರಾಜ್ಯದ ಅಧಿಕಾರವಿದೆ. ಸಿಎಂ ಕುರ್ಚಿಯಿಂದ ಬಿಡಿಸುವುದು ಕಷ್ಟ. ಅದು ಸುಲಭವೂ ಅಲ್ಲ. ಸಿಎಂ ಸಿದ್ಧರಾಮಯ್ಯ ಅವರು ಅವರಾಗೇ ಸಿಎಂ…
BIG NEWS: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬಗ್ಗೆ ‘ಕೋಡಿಮಠ ಶ್ರೀ’ ಸ್ಪೋಟಕ ಭವಿಷ್ಯ | Kodimata Swami
ಯಾದಗಿರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ, ಈ ವರ್ಷದ ಆಗುಹೋಗುಗಳ ಬಗ್ಗೆ ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಅವರು, ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಯೋದು ಕಷ್ಟ. ಸ್ವತಃ ಸಿದ್ಧರಾಮಯ್ಯನವರೇ ಅಧಿಕಾರ ತ್ಯಜಿಸಬೇಕಾಗುತ್ತದೆ ಎಂಬುದಾಗಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಸಿಎಂ ಡಿ.ಕೆ ಶಿವಕುಮಾರ್ ಎನ್ನುವ ಚರ್ಚೆಯ ನಡುವೆ, ಸಿಎಂ ಸ್ಥಾನ ಸಿದ್ಧರಾಮಯ್ಯ ಅವರಿಗೆ ಭದ್ರ ಎಂಬುದಾಗಿಯೂ ಕೋಡಿ ಮಠ ಶ್ರೀ ಭವಿಷ್ಯವಾಣಿಯಾಗಿದೆ. ಇನ್ನೂ ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ ಮತ್ತು ಸುಭೀಕ್ಷೆ ಇರುತ್ತದೆ. ಆದರೇ ಜಾಗತಿಕವಾಗಿ ತೊಂದರೆ ಹೆಚ್ಚಾಗಲಿದೆ. ಭೂಕಂಪ, ಸುನಾಮಿಗಳು ಹೆಚ್ಚಾಗುವ ಸಾಧ್ಯತೆ ಇದೆ. ಯುಗಾದಿ ನಂತ್ರ ವಿವರವಾದ ಭವಿಷ್ಯ ನುಡಿಯುವುದಾಗಿ ಹೇಳಿದ್ದಾರೆ. https://kannadanewsnow.com/kannada/state-govt-to-launch-campaign-to-detect-bpl-cards-of-ineligible-people-at-panchayat-level-to-be-cancelled-soon/ https://kannadanewsnow.com/kannada/navarasa-nayaka-jaggesh-suggests-this-to-dcm-dk-shivakumar/