Subscribe to Updates
Get the latest creative news from FooBar about art, design and business.
Author: kannadanewsnow09
ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. 4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು. ಬಿಜಾಪುರ…
ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗೆ ನನ್ನ ಹೆಸರು ಹಾಕಿ, ಬಹಿರಂಗ ಪಡಿಸುವ ಮುನ್ನ ನನ್ನ ಆಗಲೀ, ನನ್ನ ಕಚೇರಿಯನ್ನು ಆಗಲೀ ಸಂಪರ್ಕಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಸಚಿವ ನಿತಿನ್ ಗಡ್ಕರಿ ಅವರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವಂತ ಅವರು ಶಿವಮೊಗ್ಗ ಕಾರ್ಯಕ್ರಮದ ಕುರಿತು ನಿಮ್ಮ ಪ್ರತಿಕ್ರಿಯೆಯನ್ನು ಗಮನಿಸಲಾಗಿದೆ. ಆದಾಗ್ಯೂ, ನಿಮ್ಮ ಸಚಿವಾಲಯವು ಕಾರ್ಯಕ್ರಮವನ್ನು ಅಂತಿಮಗೊಳಿಸುವ ಮೊದಲು ಮತ್ತು ನನ್ನ ಹೆಸರನ್ನು ಮುದ್ರಿಸಿದ ಆಹ್ವಾನ ಪತ್ರಿಕೆಯನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೊದಲು ನನ್ನನ್ನಾಗಲಿ ಅಥವಾ ನನ್ನ ಕಚೇರಿಯನ್ನಾಗಲಿ ಸಂಪರ್ಕಿಸಲಾಗಿಲ್ಲ ಎಂಬುದನ್ನು ನಾನು ಇಲ್ಲಿ ದಾಖಲಿಸಲು ಬಯಸುತ್ತೇನೆ ಎಂದಿದ್ದಾರೆ. ವಾಸ್ತವವಾಗಿ, ಅಧಿಕೃತ ಆಹ್ವಾನ ಪತ್ರಿಕೆಯನ್ನು ಜುಲೈ 11, 2025 ರಂದು ಮಾತ್ರ ಸ್ವೀಕರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇವಲ ಮೂರು ದಿನಗಳ ಮೊದಲು. ಅದೇ ದಿನ, ನನ್ನ ಕಚೇರಿಯು ವಿಜಯಪುರದ ಇಂಡಿಯಲ್ಲಿ ನೀರಾವರಿ ಮತ್ತು ಅಭಿವೃದ್ಧಿ ಯೋಜನೆಗಳ ರಾಜ್ಯ ಮಟ್ಟದ ಉದ್ಘಾಟನೆಗೆ ನನ್ನ ಪೂರ್ವ ಬದ್ಧತೆಯ…
ಬೆಂಗಳೂರು : “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ” ಎಂದರು. “ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ…
ಬೆಂಗಳೂರು: ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು. ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು. https://kannadanewsnow.com/kannada/permanent-liberation-for-six-decades-of-relentless-struggle-of-sharavathi-flood-victims-mp-b-y-raghavendra/ https://kannadanewsnow.com/kannada/sigandur-bridge-to-be-inaugurated-today-by-union-minister-under-pressure-from-local-bjp-leaders-cm-siddaramaiah/
ಬೆಂಗಳೂರು: ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರವನ್ನು ಇಂದು ರಾಷ್ಟ್ರಕ್ಕೆ ಅರ್ಪಣೆ ಮಾಡಲಾಯಿತು. ಮುಳುಗಡೆ ಸಂತ್ರಸ್ತರ ಆರು ದಶಕಗಳ ಅವಿರತ ಹೋರಾಟಕ್ಕೆ ಶಾಶ್ವತ ವಿಮುಕ್ತಿ ನೀಡಲಾಯಿತು. ಕರ್ನಾಟಕದ ಮಲೆನಾಡ ರಾಜಧಾನಿಯ ಕಲಶಕ್ಕೆ ಮುಕುಟದ ಮಣಿಯಾಗಿ ಪ್ರಜ್ವಲಿಸುತ್ತಿದ್ದ “ಶರಾವತಿ ನದಿ” ಯ ಹಿನ್ನೀರಿಗೆ ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ ರಾಜ್ಯದ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತ ಐತಿಹಾಸಿಕ ಕೇಬಲ್ ಆಧಾರಿತ 2.25 ಕಿ.ಮೀ ಉದ್ದದ ಸುಮಾರು 423 ಕೋಟಿ ಅನುದಾನದಲ್ಲಿ ದೇಶದ ಎರಡನೇ ಅತಿ ದೊಡ್ಡ ಸಂಪರ್ಕ ಸೇತುವೆ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು (ಸ್ಥಳೀಯರ ಹೊಳೆಬಾಗಿಲು ಸೇತುವೆ)” ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಿಸಲಾಗಿದೆ. ಇದನ್ನು ಇಂದು ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಜೊತೆಗೂಡಿ ರಾಷ್ಟ್ರಕ್ಕೆ ಸಮರ್ಪಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
ಮುಂಬೈ: ಎಂಐ ನ್ಯೂಯಾರ್ಕ್ ತಂಡ 2025ರ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್ಸಿ) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಅಮೆರಿಕದ ಪ್ರಮುಖ ಟಿ20 ಟೂರ್ನಿಯ ಕೇವಲ ಮೂರು ಆವೃತ್ತಿಗಳಲ್ಲಿ ಎರಡನೇ ಬಾರಿ ಚಾಂಪಿಯನ್ ಪಟ್ಟವೇರಿದ ಸಾಧನೆ ಮಾಡಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ ಜಾಗತಿಕವಾಗಿ ಒಲಿದ 13ನೇ ಪ್ರಮುಖ ಟಿ20 ಪ್ರಶಸ್ತಿ ಇದಾಗಿದೆ ಮತ್ತು 2025ರಲ್ಲಿ ಗೆದ್ದ ಮೂರನೇ ಟ್ರೋಫಿಯಾಗಿದೆ. ಎಂಐ ನ್ಯೂಯಾರ್ಕ್ ತಂಡ ಭಾನುವಾರ ರಾತ್ರಿ ಡಲ್ಲಾಸ್ನಲ್ಲಿ ನಡೆದ ಫೈನಲ್ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಮೇಜರ್ ಲೀಗ್ ಕ್ರಿಕೆಟ್ನಲ್ಲಿ ತನ್ನ ಪ್ರಾಬಲ್ಯವನ್ನು ಮರುಸ್ಥಾಪಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಂಐ ನ್ಯೂಯಾರ್ಕ್ ತಂಡ ಕ್ವಿಂಟನ್ ಡಿಕಾಕ್ (77 ರನ್, 46 ಎಸೆತ, 6 ಬೌಂಡರಿ, 4 ಸಿಕ್ಸರ್) ಬಿರುಸಿನ ಅರ್ಧಶತಕದಾಟದಿಂದ 7 ವಿಕೆಟ್ಗೆ 180 ರನ್ ಕಲೆಹಾಕಿತು. ಪ್ರತಿಯಾಗಿ ವಾಷಿಂಗ್ಟನ್ ಫ್ರೀಡಂ ಪರ ರಚಿನ್ ರವೀಂದ್ರ (70) ಮತ್ತು ಗ್ಲೆನ್ ಫಿಲಿಪ್ಸ್ (48*) ಹೋರಾಟ ನಡೆಸಿದರು. ಆದರೆ ಕೊನೇ ಓವರ್ನಲ್ಲಿ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ದೇಶದ ಅತೀ ಉದ್ದದ 2ನೇ ಕೇಬಲ್ ಸೇತುವೆಯನ್ನು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಿದ್ದಾರೆ. ಈ ಮೂಲಕ ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗಿದೆ. ಹೌದು ಇಂದು ಶರಾವತಿ ಹಿನ್ನೀರಿನ ಜನರ ಕನಸು ನನಸಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ್ ಜೋಶಿ ಅವರು ಶರಾವತಿ ಹಿನ್ನೀರಿಗೆ ಬಾಗಿನ ಅರ್ಪಿಸುವ ಮೂಲಕ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಯನ್ನು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಗಣಪತಿ ಹೋಮ ಹಾಗೂ ಸಿಗಂದೂರು ಚೌಡೇಶ್ವರಿ ದೇವಿಯ ಪೂಜಾ ಕೈಂಕರ್ಯದಲ್ಲಿ ತೊಡಗಿದಂತೆ ಕೇಂದ್ರ ಸಚಿವರು, ದೇವಿಗೆ ಆರತಿ ಬೆಳಗಿ, ಭಕ್ತಿ ಭಾವದಲ್ಲಿ ಪುನೀತರಾದರು. ಇಂದಿನ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಚಿವ ಸತೀಶ್ ಜಾರಕಿಹೊಳಿ, ಶಾಸಕ…
ಬೆಂಗಳೂರು: ಶಕ್ತಿ ಯೋಜನೆಯಲ್ಲಿ 500ನೇ ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಭ್ರಮ ಮನೆ ಮಾಡಿದೆ. ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿರೋದೇ ಈ ಇದಕ್ಕೆ ಕಾರಣವಾಗಿದ್ದು, ಇದು ದೇಶದಲ್ಲೇ ಕರ್ನಾಟಕ ಹೊಸ ಮೈಲಿಗಲ್ಲು ಸಾಧಿಸಿದಂತೆ ಆಗಿದೆ. ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆಯು ದಿನಾಂಕ 11-06-2023 ರಿಂದ ಜಾರಿಗೆ ಬಂದಿದ್ದು, ಜುಲೈ 14 ನೇ 2025 ಕ್ಕೆ 500 ಕೋಟಿ ಮಹಿಳಾ ಪ್ರಯಾಣಿಕರ ಟ್ರಿಪ್ ಅನ್ನು ತಲುಪುವ ಮುಖಾಂತರ ದೇಶದಲ್ಲೇ ಹೊಸ ಮೈಲಿಗಲ್ಲನ್ನು ತಲುಪಲಿದೆ. ಮುಂದುವರೆದು, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿರುವುದಿಂದ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ, ಆರೋಗ್ಯ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ. ಶಕ್ತಿ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡು ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಯೋಜನೆಯಾಗಿ ಮುಂದುವರೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ 500 ನೇ ಕೋಟಿ ಟಿಕೇಟ್ ಅನ್ನು ಸಾಂಕೇತಿಕವಾಗಿ ಇಂದು ವಿತರಿಸಿದ್ದು, ಶಕ್ತಿ ಯೋಜನೆಯಲ್ಲಿ ಇಲ್ಲಿಯವರೆಗೂ ರೂ.12669 ಕೋಟಿ ಮಹಿಳಾ ಟಿಕೇಟ್ ಮೌಲ್ಯ. ನಗರ,…
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದ್ದು, ವಿಶ್ವವಿದ್ಯಾಲಯದಲ್ಲಿ ಸಂತಸದ ವಾತಾವರಣ ಮೂಡಿದೆ. 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಂಡಿದ್ದು, 3.11 ಸಿಜಿಪಿಎ ಅಂಕಗಳೊಂದಿಗೆ ಕುವೆಂಪು ವಿವಿ ‘ಎ’ ಶ್ರೇಣಿಯ ಮಾನ್ಯತೆಯನ್ನು ಉಳಿಸಿಕೊಂಡಿದೆ. ಕಳೆದ ಮೌಲ್ಯಮಾಪನ ಅವಧಿಯಲ್ಲಿ 3.05 ಸಿಜಿಪಿಎನೊಂದಿಗೆ ‘ಎ’ ಶ್ರೇಣಿ ಪಡೆದಿದ್ದ ವಿವಿ, ಈ ಬಾರಿ ಅಂಕ ಹೆಚ್ಚಿಸಿಕೊಂಡಿದ್ದು, 3.11 ಸಿಜಿಪಿಎ ಪಡೆಯುವುದರ ಮೂಲಕ ಮತ್ತೊಮ್ಮೆ ‘ಎ’ ಶ್ರೇಣಿಯ ಗರಿ ಮುಡಿಗೇರಿಸಿಕೊಂಡಿದೆ. ವಿವಿಯ ಈ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಮೌಲ್ಯಮಾಪಮನದ ಅವಧಿಯಲ್ಲಿ ಕೋವಿಡ್-19ನಂತಹಾ ಮಹಾಮಾರಿ ಇದ್ದರೂ, ಅಧ್ಯಾಪಕರ ಸಂಶೋಧನಾ ಚಟುವಟಿಕೆಗಳು, ನಿರಂತರವಾಗಿ ಮುಂದುವರೆದ ಪಾಠ ಪ್ರವಚನ, ಅಧ್ಯಾಪಕೇತರ…
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ವಿವರಿಸಿದರು. ಸಿಗಂದೂರು ಕಾರ್ಯಕ್ರಮ-ಶಿಷ್ಠಾಚಾರ ಪಾಲನೆಯಾಗಿಲ್ಲ ಸಿಗಂದೂರು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಕಾರ್ಯಕ್ರಮದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ…