Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ : ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110ಕೆ.ವಿ ಮೋಕಾ-ಮೀನಹಳ್ಳಿ ಮಾರ್ಗದ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೀನಹಳ್ಳಿ, 110/11ಕೆ.ವಿ ಮೋಕಾ ಮತ್ತು 33/11ಕೆ.ವಿ ರ್ರಗುಡಿ ಉಪಕೇಂದ್ರದಲ್ಲಿ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಆ.27 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ಬಾಬು ಅವರು ತಿಳಿಸಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಎಫ್-1 ಬಿ.ಡಿ.ಹಳ್ಳಿ ಐಪಿ ಮಾರ್ಗದ ಮೋಕಾ, ಬಿ.ಡಿ.ಹಳ್ಳಿ ಕೃಷಿ ಪ್ರದೇಶಗಳು. ಎಫ್-2 ಜಿ.ಎನ್ ಹಳ್ಳಿ ಐಪಿ ಮಾರ್ಗದ ಗೋಟೂರು, ಕೆ.ಕೆ.ಹಾಳ್, ಮಸೀದಿಪುರ, ವಣೆನೂರು, ಗುಡುದೂರು ಗ್ರಾಮಗಳು. ಎಫ್-4 ಮೋಕಾ, ಶಿವಪುರ ಐಪಿ ಮಾರ್ಗದ ಶಿವಪುರ, ಅಶೋಕನಗರ ಕ್ಯಾಂಪ್, ಕಪ್ಪಗಲ್ಲು, ಸಿರಿವಾರ, ಸಂಗನಕಲ್ಲು, ಚಾಗನೂರು ಕೃಷಿ ಪ್ರದೇಶಗಳು. ಎಫ್-5 ವಾಟರ್ ವರ್ಕ್ಸ್ ಮಾರ್ಗದ ಶಿವಪುರ ವಾಟರ್ ವರ್ಕ್ಸ್. ಎಫ್-12 ಬಸರಕೋಡು ಎನ್.ಜೆ.ವೈ ಮಾರ್ಗದ ಗೋಟೂರು, ಕೆ.ಕೆಹಾಳ್, ಮಸೀದಿಪುರ, ವಣೆನೂರು, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಗ್ರಾಮಗಳು. ಎಫ್-13 ಬಸರಕೋಡು…
ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವಂತ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಐದು ಜನಪರ ಗ್ಯಾರಂಟಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಯೋಜನೆಗಳು ಮಹಿಳೆಯರಿಗೆ ಸಾಮಾಜಿಕ ಮತ್ತು ಆರ್ಥಿಕವಾಗಿ ಬಲ ತುಂಬುವ ಕಾರ್ಯಕ್ರಮಗಳಾಗಿವೆ ಎಂದಿದ್ದಾರೆ. ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ದೊರೆತಾಗ ಮಾತ್ರ ದೇಶದಲ್ಲಿ ಬಡತನ ತೊಲಗಿಸಲು, ಸಾಮಾಜಿಕ ಸಮಾನತೆ ತರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://twitter.com/KarnatakaVarthe/status/1828053206477238714 https://kannadanewsnow.com/kannada/shirur-landslide-centre-releases-additional-relief-funds/ https://kannadanewsnow.com/kannada/bmtc-conductor-vacancy-recruitment-15-merit-list-published-for-verification-of-original-documents/
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…
ಬೆಂಗಳೂರು: ಬಿಎಂಟಿಸಿಯಿಂದ ಕರೆಯಲಾಗಿದ್ದಂತ ನಿರ್ವಾಹಕರ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ 1:5ರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕಲ್ಯಾಣ-ಕರ್ನಾಟಕ (371-ಜೆ) ಮೀಸಲಾತಿಯ ಸ್ಥಳೀಯ ವೃಂದದ ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳು ದಿನಾಂಕ:14/07/2024 ರಂದು ನಡೆದ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 75ರಷ್ಟು ಮತ್ತು ಹುದ್ದೆಗೆ ನಿಗಧಿಪಡಿಸಲಾದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡ 25ರಷ್ಟು ಅಂಕಗಳನ್ನು ಸೇರಿಸಿ ಬಂದ ಒಟ್ಟು ಶೇಕಡ ಅಂಕಗಳ ಆಧಾರದ ಮೇಲೆ ಮತ್ತು ನೇರನೇಮಕಾತಿ ಸಂಬಂಧ ಜಾರಿಯಲ್ಲಿರುವ ಸರ್ಕಾರದ ಮೀಸಲಾತಿ ನಿಯಮಾನುಸಾರ ಮೂಲದಾಖಲಾತಿಗಳ ಮತ್ತು ದೇಹದಾರ್ಢ್ಯತೆ ಪರಿಶೀಲನೆಗಾಗಿ 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. 371-ಜೆ ಮೀಸಲಾತಿಯ ನಿರ್ವಾಹಕ ಹುದ್ದೆಯ ಅರ್ಹತಾ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವ ಮೀಸಲಾತಿವಾರು ಕೊನೆಯ ಅಭ್ಯರ್ಥಿಯ ಶೇಕಡವಾರು (Cut-Off) ಅಂಕಗಳು ಈ ಕೆಳಕಂಡಂತಿದೆ ಎಂದಿದೆ. ಮೀಸಲಾತಿ ಶೇಕಡವಾರು ಸಾಮಾನ್ಯ ಮಹಿಳಾ ಮೀಸಲು ಗ್ರಾಮೀಣ ಮೀಸಲು ಕನ್ನಡ…
ಬೆಂಗಳೂರು; ಕೇಂದ್ರ ಸರ್ಕಾರದಿಂದ ಶಿರೂರು ಗುಡ್ಡ ಕುಸಿತ ಪ್ರಕರಣ ಸಂಬಂಧ ಈಗಾಗಲೇ ಪರಿಹಾರವನ್ನು ನೀಡಲಾಗಿತ್ತು. ಈಗ ಮುಂದುವರೆದು ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಅಧಿವೇಶನದ ವೇಳೆಯಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿರೂರು ಗುಡ್ಡ ಕುಸಿತ ದುರಂತವನ್ನು ವಿಶೇಷ ಪ್ರಕರಣವೆಂದು ಪರಿಗಣಿಸುವಂತೆ ಮನವಿ ಮಾಡಿದ್ದರು. ಕಾಗೇರಿ ಅವರ ಮನವಿಯನ್ನು ಪುರಸ್ಕರಿಸಿರುವಂತ ಪ್ರಧಾನಮಂತ್ರಿ ಕಾರ್ಯಾಲಯವು, ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರಿಗೆ ಹೆಚ್ಚುವರಿಯಾಗಿ 2 ಲಕ್ಷ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ಅಲ್ಲದೇ ಗಾಯಾಳುಗಳಿಗೆ ತಲಾ 50 ಸಾವಿರ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಅಂದಹಾಗೇ ಈ ಹಿಂದೆ ಎನ್ ಡಿ ಆರ್ ಎಫ್ ನಿಧಿಯಿಂದ ಕೇಂದ್ರ ಸರ್ಕಾರದಿಂದ ಪರಿಹಾರವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ನೀಡಲಾಗಿತ್ತು. ಈಗ ಹೆಚ್ಚುವರಿ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ. https://kannadanewsnow.com/kannada/helpline-for-women-call-this-number-in-case-of-emergency-need/ https://kannadanewsnow.com/kannada/state-govt-issues-guidelines-regarding-aadhaar-authentication-in-property-registration/
ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಘಟನೆಯ ನಂತ್ರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಠಾಣೆಗಳಲ್ಲಿ ರಾತ್ರಿ ಪಾಳಿಗೆ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಮಹಿಳೆಯರ ನೆರವಿಗಾಗಿ ಸಹಾಯವಾಣಿ ಸಂಖ್ಯೆ ಶುರು ಮಾಡಿದೆ. ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಮಹಿಳೆಯರು ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ 1091 ಅಥವಾ 080 22943225 ಗೆ ಸಂಪರ್ಕಿಸಬಹುದು. https://twitter.com/KarnatakaVarthe/status/1828024149584830932 https://kannadanewsnow.com/kannada/russia-launches-100-missiles-on-ukraine-launches-100-drones/ https://kannadanewsnow.com/kannada/state-govt-issues-guidelines-regarding-aadhaar-authentication-in-property-registration/ https://kannadanewsnow.com/kannada/indian-railways-recruitment-2019-indian-railways-recruitment-2018-for-14298-vacancies-rrb-recruitment-2024/
ಉಕ್ರೇನ್: ರಷ್ಯಾ ಸೋಮವಾರ ಬೆಳಿಗ್ಗೆ ಉಕ್ರೇನ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿಗಳು ಮತ್ತು ಸುಮಾರು 100 ದಾಳಿ ಡ್ರೋನ್ಗಳನ್ನು ಉಕ್ರೇನ್ ಮೇಲೆ ಉಡಾಯಿಸಿತು. ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಇಂಧನ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಷ್ಯಾದ ಪೂರ್ಣ ಪ್ರಮಾಣದ ಆಕ್ರಮಣದ 2-1/2 ವರ್ಷಗಳ ನಂತರ ಕನಿಷ್ಠ 10 ಪ್ರದೇಶಗಳಲ್ಲಿ ವಿದ್ಯುತ್ ಅಥವಾ ಇತರ ನಿರ್ಣಾಯಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಕೈವ್ನ ಕೆಲವು ಭಾಗಗಳು ಸೇರಿದಂತೆ ಹಲವಾರು ಸ್ಥಳಗಳಲ್ಲಿ ವಿದ್ಯುತ್ ಕಡಿತ ಮತ್ತು ನೀರು ಸರಬರಾಜು ಕಡಿತಗಳು ವರದಿಯಾಗಿವೆ. ಮಾರ್ಚ್ನಲ್ಲಿ ಉಕ್ರೇನಿಯನ್ ವಿದ್ಯುತ್ ಗ್ರಿಡ್ ಮೇಲೆ ರಷ್ಯಾ ನಾಟಕೀಯವಾಗಿ ತನ್ನ ದಾಳಿಯನ್ನು ಹೆಚ್ಚಿಸಿತು, ಜನರಿಗೆ ವಿದ್ಯುತ್ ಮತ್ತು ಹೆಚ್ಚು ಬಿಸಿಮಾಡುವ ಚಳಿಗಾಲದಲ್ಲಿ ವ್ಯವಸ್ಥೆಯನ್ನು ಕೆಳಮಟ್ಟಕ್ಕೆ ಇಳಿಸುವ ಸಂಘಟಿತ ಪ್ರಯತ್ನದಂತೆ ಕಾಣುತ್ತದೆ ಎಂದು ಕೀವ್ ಹೇಳಿದ್ದಾರೆ. ಸೋಮವಾರದ ಕ್ಷಿಪಣಿ ಮತ್ತು ಡ್ರೋನ್ ದಾಳಿಯು ವಾರಗಳಲ್ಲಿ ರಷ್ಯಾದ ಅತ್ಯಂತ ತೀವ್ರವಾಗಿದೆ, ರಷ್ಯಾದ…
ಬೆಂಗಳೂರು: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಪಾಲಿಕೆ ಬಜಾರ್ ಬೆಂಗಳೂರಿನಲ್ಲಿ ನಿರ್ಮಾಣಗೊಂಡಿದೆ. ವಿಜಯನಗರ ಬಸ್ ಹಾಗೂ ಮೆಟ್ರೋ ನಿಲ್ದಾಣಗಳ ಬಳಿ ಸ್ಥಾಪಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೇಟ್ರೊ ನಿಲ್ದಾಣದ ಬಳಿ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಲ್ಲಿ ಹವಾನಿಯಂತ್ರಿತ ಮಾರುಕಟ್ಟೆಯನ್ನು ನಿರ್ಮಿಸಲಾಗಿರುತ್ತದೆ. ಹವಾನಿಯಂತ್ರಿತ ಮಾರುಕಟ್ಟೆಯಾದ “ಪಾಲಿಕೆ ಬಜಾರ್” ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಮಾರುಕಟ್ಟೆ ಎಂಬ ಹೆಗ್ಗಳಿಕೆಯನ್ನು ಹೊಂದಿರುತ್ತದೆ. ಪಾಲಿಕೆ ಬಜಾರ್ ಮಾರುಕಟ್ಟೆಯ ವಿವರಗಳು: ಉದ್ದೇಶಿತ ಯೋಜನೆಯ ಮಾದರಿ:- ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ಹವಾನಿಯಂತ್ರಿತ ಮಾರುಕಟ್ಟೆ. ಯೋಜನೆಯ ಒಟ್ಟು ಅಂದಾಜು ಮೊತ್ತ 13 ಕೋಟಿ ರೂ. ಅನುದಾನದ ವಿವರ: 2017-18ನೇ ಸಾಲಿನಲ್ಲಿ 5 ಕೋಟಿ ರೂ. 2021-22ನೇ ಸಾಲಿನಲ್ಲಿ 8 ಕೋಟಿ ರೂ. ಕಾಮಗಾರಿಯ ಸ್ಥಳ:- ವಿಜಯನಗರ ಬಸ್/ಮೇಟ್ರೊ ನಿಲ್ದಾಣದ ಬಳಿ. ಪಾಲಿಕೆ…
ಲಂಡನ್: ಇಂಗ್ಲೆಂಡ್ನ ಮಾಜಿ ಮ್ಯಾನೇಜರ್ ಸ್ವೆನ್-ಗೊರಾನ್ ಎರಿಕ್ಸನ್ ತಮ್ಮ 76 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಇಟಲಿಯ ಕ್ರೀಡಾ ಪತ್ರಕರ್ತ ಫ್ಯಾಬ್ರಿಜಿಯೊ ರೊಮಾನೊ ವರದಿ ಮಾಡಿದ್ದಾರೆ. ಎರಿಕ್ಸನ್ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಸ್ವೀಡಿಷ್ ಮ್ಯಾನೇಜರ್ ಯುರೋಪಿನ ವಿವಿಧ ಲೀಗ್ಗಳಲ್ಲಿ 18 ಟ್ರೋಫಿಗಳನ್ನು ಗೆದ್ದರು, ರೋಮಾ, ಲಾಜಿಯೊ, ಬೆನ್ಫಿಕಾ ಮತ್ತು ಮ್ಯಾಂಚೆಸ್ಟರ್ ಸಿಟಿಯಂತಹ ಕ್ಲಬ್ಗಳನ್ನು ನಿರ್ವಹಿಸಿದರು. ಅತ್ಯಂತ ಗಮನಾರ್ಹವಾಗಿ, ಅವರು 2001 ರಿಂದ 2006 ರವರೆಗೆ ಇಂಗ್ಲೆಂಡ್ ’00 ರ ಗೋಲ್ಡನ್ ಜನರೇಷನ್’ ಅನ್ನು ನಿರ್ವಹಿಸಿದರು, ಲ್ಯಾಂಪಾರ್ಡ್, ಗೆರಾರ್ಡ್, ಸ್ಕೋಲ್ಸ್, ರೂನಿ, ಬೆಕ್ಹ್ಯಾಮ್ ಮುಂತಾದವರನ್ನು ನಿರ್ವಹಿಸಿದರು, ಆದರೆ ಅವರೊಂದಿಗೆ ಏನನ್ನೂ ಗೆಲ್ಲಲು ವಿಫಲರಾದರು. https://twitter.com/FabrizioRomano/status/1828030542912147507 https://kannadanewsnow.com/kannada/good-news-for-state-government-employees-special-casual-leave-granted-to-kas-exam-tomorrow/ https://kannadanewsnow.com/kannada/kpsc-kas-exam-tomorrow-additional-ksrtc-bus-facility-for-candidates/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆ ಕೆಪಿಎಸ್ಸಿಯಿಂದ ನಡೆಯುತ್ತಿರುವಂತ ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27.08.2024 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದಿದ್ದಾರೆ. ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು…