Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡವನಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಶಾಸಕ ಮಿತ್ರರಾದ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ಸಮೀಪದಿಂದ ಕಂಡು ಬಲ್ಲವರು. ಕಳೆದ ಹಲವು ವರ್ಷಗಳಿಂದ ಅವರು ಮುಡಾದ ಸದಸ್ಯರೂ ಆಗಿದ್ದಾರೆ. ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದು ಎಂದು ಹೇಳಿದ್ದಾರೆ. ಜಿ.ಟಿ.ದೇವೇಗೌಡರು ಇಂದು ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಬೃಹತ್ ಸಮಾರಂಭದಲ್ಲಿ ಸತ್ಯ ಮಾತನಾಡಿದ್ದಾರೆ. ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು. ಈಗ ಹೊರಗುತ್ತಿಗೆ ನೌಕರರನ್ನು ಸಹಕಾರ ಸಂಘದ ಮೂಲಕ ನೇಮಕಾತಿ ಸಂಬಂಧ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಕನಿಷ್ಠ ವೇತನದ ಪೀಠಾಧಿಕಾರಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರ ಕಲಂ 7 ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ: CMW:69:CLM: 2001, ದಿನಾಂಕ: 21/11/2001 ರಲ್ಲಿ ಪುದತ್ತವಾದ ಅಧಿಕಾರ ಚಲಾಯಿಸಿ, ಎಂ.ಡಿ. ಮಠಪತಿ, ಸಹಕಾರ ಸಂಘಗಳ ಸಂಯುಕ್ತ ನಿಬಂಧಕರು, ಗುಲಬರ್ಗಾ ಪ್ರಾಂತ್, ರಾಯಚೂರು ಇವರು ಬೀದರ್ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ (ನಿ) ಬೀದರ್ ಇದನ್ನು ನೋಂದಣಿ ಮಾಡಿದ್ದು, ನೋಂದಣಿ ಸಂಖ್ಯೆ: ಸಂನಿರಾ:ವಿ-1:ಎಓಟಿ:346991/2007-08, ದಿನಾಂಕ: 16.01.2008 ರಂದು ಸಂಘಕ್ಕೆ ದಾಖಲು ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳು ಹಾಗೂ ಅವುಗಳ ಅಧೀನದಲ್ಲಿ ಬರುವ ನಿಗಮ/ಮಂಡಳಿಗಳು ಮತ್ತು ಖಾಸಗಿ ಸಂಸ್ಥೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೌಕರರನ್ನು ಒದಗಿಸುತ್ತಿರುವ…
ಶಿವಮೊಗ್ಗ: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿಯ ಸಂಭ್ರಮ ಮನೆಮಾಡುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ಗುರುವಾರ ದಸರಾ ವೈಭವ ಕಾರ್ಯಕ್ರಮಕ್ಕೆ ಚೆಂಡೆ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ನವರಾತ್ರಿಯ ಸಂಭ್ರಮ ಇಮ್ಮಡಿಯಾಗಿದೆ. ರಾಜ್ಯ ಸರ್ಕಾರ ಸಂವಿಧಾನ ಓದು ಕಾರ್ಯಕ್ರಮವನ್ನು ಜಾರಿಗೆ ತಂದಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಅರಿವು, ಜಾತ್ಯತೀತ ಮನೋಭಾವ ಹೆಚ್ಚಾಗುತ್ತದೆ. ಮಕ್ಕಳನ್ನು ಜಾತಿ-ಧರ್ಮದ ತಾರತಮ್ಯದಿಂದ ದೂರ ಮಾಡುತ್ತದೆ ಎಂದರು. ಮಕ್ಕಳಲ್ಲಿ ಜಾತಿ ಪ್ರೇಮ ಮೂಡಬಾರದು. ಇದು ಎಂದಿಗೂ ದೇಶ ಪ್ರೇಮವಾಗುವುದಿಲ್ಲ. ಜಾತಿ- ಧರ್ಮದ ಸಂಕೋಲೆ ತೊರೆದು ಒಳ್ಳೆಯ ಪ್ರಜೆಯಾಗಬೇಕು ಎಂದರೆ, ಡಾ.ಬಿ.ಆರ್. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ…
ಬೆಂಗಳೂರು: ನಗರದಲ್ಲಿ ಲಾಂಗ್ ಹಿಡಿದು ಪುಂಡಾಟ ಮೆರೆಯುತ್ತಿದ್ದಂತ ಐವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪುಂಡರನ್ನು ಎಡೆಮುರಿಕಟ್ಟಿ ಜೈಲು ಸೇರಿಸಿದ್ದಾರೆ. ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐವರು ದುಷ್ಕರ್ಮಿಗಳು ಪುಂಡಾಟ ಮೆರೆಯುತ್ತಿದ್ದರು. ಈ ಮಾಹಿತಿಯನ್ನು ಪೊಲೀಸರಿಗೆ ಸ್ಥಳೀಯರು ನೀಡಿದ್ದರು. ಸ್ಥಳಕ್ಕೆ ಆಗಮಿಸಿದಂತ ಡಿಜೆ ಹಳ್ಳಿ ಠಾಣೆಯ ಪೊಲೀಸರು ಐವರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಅಂದಹಾಗೇ ಡ್ರಗ್ ನಶೆಯಲ್ಲಿ ಬಂಧಿತ ದುಷ್ಕರ್ಮಿಗಳು ಓರ್ವನಿಗೆ ಚಾಕುವನ್ನು ಇರಿದಿದ್ದರು. ಬಂಧಿತ ಆರೋಪಿಗಳನ್ನು ಸೈಯದ್, ಉಸ್ಮಾನ್, ಸಲ್ಮಾನ್, ಪ್ರವೀಣ್ ಹಾಗೂ ಸಂತೋಷ್ ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಡಿಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/hyderabad-cricket-association-corruption-case-ed-summons-mohammad-azharuddin/ https://kannadanewsnow.com/kannada/big-update-i-have-not-received-any-notice-from-ed-minister-byrathi-suresh/
ನವದೆಹಲಿ: ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್ (Hyderabad Cricket Association -HCA) ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ಮುಖಂಡ ಮೊಹಮ್ಮದ್ ಅಜರುದ್ದೀನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ. ಈ ಹಿಂದೆ ಎಚ್ಸಿಎ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅಜರುದ್ದೀನ್ ತಮ್ಮ ಅಧಿಕಾರಾವಧಿಯಲ್ಲಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕನಿಗೆ ಇಡಿ ಸಮನ್ಸ್ ಜಾರಿ ಮಾಡಿರುವುದು ಇದೇ ಮೊದಲು. ಹೈದರಾಬಾದ್ನ ಉಪ್ಪಲ್ನಲ್ಲಿರುವ ರಾಜೀವ್ ಗಾಂಧಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಡೀಸೆಲ್ ಜನರೇಟರ್ಗಳು, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳನ್ನು ಖರೀದಿಸಲು ನಿಗದಿಪಡಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು 61 ವರ್ಷದ ಮಾಜಿ ಸಂಸದ (ಸಂಸದ) ಆರೋಪಿಸಿದ್ದಾರೆ. ಕಳೆದ ವರ್ಷ ನವೆಂಬರ್ನಲ್ಲಿ ಇಡಿ ತನ್ನ ತನಿಖೆಗೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ಎಚ್ಸಿಎಯ ನಿಧಿಯನ್ನು 20 ಕೋಟಿ ರೂ.ಗಳ ಕ್ರಿಮಿನಲ್ ದುರುಪಯೋಗ ಮಾಡಿದ ಆರೋಪದ ಮೇಲೆ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (Telangana anti-corruption bureau -…
ಬೆಂಗಳೂರು :ಮುಡಾ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಪ್ರಕರಣ ದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು. ಮೊದಲ ದಿನದಿಂದ ನಾವು ಹೇಳುತತ್ತಲೇ ಇದ್ದೇವೆ. ಇದೀಗ ಜಿಟಿ ದೇವೇಗೌಡ, ಎಸ್ ಟಿ ಸೋಮಶೇಖರ್ ಹೇಳುತ್ತಿದ್ದಾರೆ. ಯಾವುದೇ ಕಾರಣ ಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಇವರೇ ಐದು ವರ್ಷಮುಖ್ಯಮಂತ್ರಿ ಯಾಗಿರಲಿದ್ದಾರೆ ಎಂದು ಹೇಳಿದರು. ನಿವೇಶನ ವಾಪಾಸ್ ಮಾಡಿದ ನಂತರವೂ ಬಿಜೆಪಿ ನಾಯಕರು ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಿದ್ದಾರೆ. ಹಾಗಾದರೆ ಲೊಟ್ಟೆ ಗೊಲ್ಲ ಹಳ್ಳಿ ಪ್ರಕರಣದಲ್ಲಿ ನೋಟಿಫೈ ಆಗಿದ್ದ ಜಾಗ ಖರೀದಿಸಿ ಡಿ ನೋಟಿ ಫೈ ಮಾಡಿಸಿಕೊಂಡು ವಿವಾದ ಆದ ನಂತರ ಬಿಡಿಎ ಗೆ ವಾಪಸ್ ನೀಡಿದ್ದಾರೆ. ಹಾಗಾದರೆ ಅವರು ರಾಜೀನಾಮೆ ನೀಡ ಬೇಕಲ್ಲವೇ.…
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ಈಶಾನ್ಯ ಗಡಿನಾಡು ರೈಲ್ವೆಯು ಅಸ್ಸಾಂ ರಾಜ್ಯದ ದಿಬ್ರುಗಢ ನಿಲ್ದಾಣದಿಂದ ಹುಬ್ಬಳ್ಳಿಗೆ ಏಕಮುಖ ವಿಶೇಷ ಎಕ್ಸ್ ಪ್ರೆಸ್ ರೈಲು (07359) ಸಂಚರಿಸಲಿದೆ. ರೈಲು ಸಂಖ್ಯೆ 07359 ಅಕ್ಟೋಬರ್ 5, 2024 ರಂದು (ಶನಿವಾರ) ಮಧ್ಯಾಹ್ನ 01:30 ಕ್ಕೆ ಅಸ್ಸಾಂ ರಾಜ್ಯದ ದಿಬ್ರುಗಢದಿಂದ ಹೊರಟು, ಅಕ್ಟೋಬರ್ 8, 2024 ರಂದು ಬೆಳಿಗ್ಗೆ 09:00 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ. ಮಾರ್ಗಮಧ್ಯೆ, ಈ ರೈಲು ನ್ಯೂ ಟಿನ್ಸುಕಿಯಾ, ಮಹರ್ಕಟಿಯಾ, ಸಿಮಲುಗುರಿ ಜಂ., ಮರಿಯಾನಿ ಜಂ., ಫರ್ಕಟಿಂಗ್ ಜಂ., ದಿಮಾಪುರ್, ದಿಫು, ಲುಮ್ಡಿಂಗ್ಜಂ., ಹೊಜಾಯಿ, ಚಾಪರ್ಮುಖ್ ಜಂ., ಜಾಗಿ ರೋಡ್, ಗುವಾಹಟಿ, ಕಾಮಾಖ್ಯ, ರಂಗಿಯಾ ಜಂ., ನ್ಯೂ ಬೊಂಗೈಗಾಂವ್, ನ್ಯೂ ಕೂಚ್ ಬೆಹಾರ್, ಧೂಪ್ಗುರಿ, ನ್ಯೂ ಜಲ್ಪೈಗುರಿ, ಖಿಶನ್ಗಂಜ್, ಮಾಲ್ಡಾ ಟೌನ್ ನಲ್ಲಿ ರೈಲು ನಿಲ್ಲಲಿದೆ. ರಾಂಪುರ್ ಹಟ್, ಬೋಲ್ಪುರ್ ಶಾಂತಿನಿಕೇತನ, ದಂಕುನಿ, ಖರಗ್ಪುರ ಜಂ., ಬಾಲಸೋರ್, ಭದ್ರಖ್, ಕಟಕ್, ಭುವನೇಶ್ವರ್, ಖುರ್ದಾ ರೋಡ್ ಜಂ., ಬೆರಹಂಪುರ್,…
ಶಿವಮೊಗ್ಗ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು ಅಕ್ಟೋಬರ್ 07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ಶಿವಮೊಗ್ಗ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಬೇಕಾದ ವ್ಯವಸ್ಥೆಯನ್ನು ಅ.07 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಅ.07 ರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿಯನ್ನು ಪಡೆದು ನೋಂದಾಯಿಸಲಾಗುತ್ತದೆ ಎಂದು ಹಿರಿಯ ಉಪನೋಂದಣಾಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/online-ticket-booking-drive-for-trekking-routes-in-the-state-heres-how-to-book-tickets/ https://kannadanewsnow.com/kannada/mysuru-film-city-to-be-built-on-150-acres-of-land-cm-siddaramaiah/
ಕರ್ನಾಟಕವು ಭಾರತದ ಕೆಲವು ಸುಂದರವಾದ ಶಕ್ತಿ ಪೀಠಗಳಿಗೆ ನೆಲೆಯಾಗಿದೆ. ಈ ಬ್ಲಾಗ್ ಪೋಸ್ಟ್ನಲ್ಲಿ, ನಾವು ಭೇಟಿ ನೀಡಲೇಬೇಕಾದ 9 ಪ್ರಸಿದ್ಧ ದೇವಿ ದೇವಾಲಯಗಳನ್ನು ಕರ್ನಾಟಕದ ನವ ಶಕ್ತಿ ಪೀಠಗಳ ಸಮಗ್ರ ಪಟ್ಟಿಗೆ ತರುತ್ತೇವೆ. ಈ ಎಲ್ಲಾ ಶಕ್ತಿ ಪೀಠಗಳು ಸತಿ / ಶಕ್ತಿ / ಪಾರ್ವತಿ ದೇವಿಗೆ ಸಮರ್ಪಿತವಾಗಿವೆ ಏಕೆಂದರೆ ಅವುಗಳು ಸತಿ ದೇವಿಯ ದೇಹದ ಭಾಗಗಳು ಬಿದ್ದ ಸ್ಥಳಗಳಲ್ಲಿ ನೆಲೆಗೊಂಡಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಕರ್ನಾಟಕದ 9 ಪ್ರಸಿದ್ಧ ಶಕ್ತಿ ಪೀಠ ದೇವಾಲಯಗಳ ಪಟ್ಟಿ ಶೃಂಗೇರಿ ಶಾರದಾಂಬಾ ದೇವಸ್ಥಾನ: ಕರ್ನಾಟಕದ…
ಮೈಸೂರು : ಮೈಸೂರಿನ ಇಮ್ಮಾವು ಗ್ರಾಮದಲ್ಲಿ 150 ಎಕರೆ ಪ್ರದೇಶದಲ್ಲಿ ಮೈಸೂರು ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ನಗರದಲ್ಲಿ ದಸರಾ ಉತ್ಸವ ಅಂಗವಾಗಿ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಬಾರಿ ನಾನು ಮುಖ್ಯಮಂತ್ರಿ ಆಗಿದ್ದಾಗ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಿಸಲು ತೀರ್ಮಾನಿಸಿ, ಇಮ್ಮಾವು ಗ್ರಾಮದಲ್ಲಿ 110 ಎಕರೆ ವಿಸ್ತೀರ್ಣದ ಭೂಮಿಯನ್ನು ಮೀಸಲಿರಿಸಲಾಗಿದ್ದು, ಇದರೊಂದಿಗೆ ಹೆಚ್ಚುವರಿಯಾಗಿ ಎರಡನೇ ಹಂತದ ವಿಸ್ತಣೆಗೆ 50 ಎಕರೆ ಜಮೀನನ್ನು ಗುರುತಿಸಿ ನೀಡಲು ತೀರ್ಮಾನಿಸಲಾಗಿದೆ. ಮಾದರಿ ಸಿನಿಮಾ ನಗರಿಯನ್ನು ನಿರ್ಮಿಸುವುದು ಸರ್ಕಾರ ಹಾಗೂ ಚಿತ್ರರಂಗದವರ ಉದ್ದೇಶವಾಗಿದ್ದು, ಇನ್ನು ಮೂರು ವರ್ಷದೊಳಗೆ ಫಿಲಂಸಿಟಿಯನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು. ಹೆಚ್ಚು ಕನ್ನಡ ಚಿತ್ರಗಳು ಬರಬೇಕು ಚಿತ್ರರಂಗದ ಬೆಳವಣಿಗೆ ಸರ್ಕಾರ ಎಲ್ಲರೀತಿಯ ಬೆಂಬಲವನ್ನು ನೀಡುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು, ಚಿತ್ರರಂಗ ಬೆಳೆಯಬೇಕು. ಜನರು ಸಿನಿಮಾಗಳನ್ನು ಚಿತ್ರಮಂದಿರಗಳಿಗೆ ಹೋಗಿಯೇ ವೀಕ್ಷಿಸಬೇಕೆಂದು ತಿಳಿಸಿದರು. ಅಕ್ಟೋಬರ್-04 ರಿಂದ 10 ವರೆಗೆ ಸಿನಿಮಾ ಪ್ರದರ್ಶನ ದಸರಾ…