Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೀದರ್: ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಇಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು ಇದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. ವಶದಲ್ಲಿರುವುದು ಅರಣ್ಯ ಭೂಮಿ ಎಂದು ತಮಗೆ ತಿಳಿದ ಕೂಡಲೇ ಕಾನೂನು ಹೋರಾಟಕ್ಕೆ ಮುಂದಾಗಿದ್ದೇನೆ. ಅದೇ ರೀತಿ ಯಾವುದು ಅರಣ್ಯ ಭೂಮಿಯೋ ಅದು ಅರಣ್ಯವಾಗಿ ಉಳಿಯತ್ತೆ ಎಂದರು. ಮೇರುನಟ ದಿವಂಗತ ವಿಷ್ಣುವರ್ಧನ್ ಅವರ ಬಗ್ಗೆ ಅಪಾರ ಗೌರವ ಇದೆ. ವಿಷ್ಣುವರ್ಧನ್ ಸ್ಮಾರಕಕ್ಕೆ ಭೂಮಿ ನೀಡುವ ಬಗ್ಗೆ ಮುಖ್ಯಮಂತ್ರಿಯವರು ನಿರ್ಧಾರ ಮಾಡುತ್ತಾರೆ ಎಂದು ಉತ್ತರಿಸಿದರು. https://kannadanewsnow.com/kannada/this-notice-regarding-the-transfer-related-to-the-state-government-employees-association/ https://kannadanewsnow.com/kannada/cm-siddaramaiah-said-that-vote-theft-has-happened-from-congress-let-the-people-respond-r-ashok/
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್ ಬಂಡೆಯಂತೆ ಆಗುತ್ತಿದ್ದಾರೆ. ಇವರು ಚಾಮುಂಡಿ ಬೆಟ್ಟವನ್ನು ಹಿಂದೂಗಳ ಆಸ್ತಿಯಲ್ಲ ಎನ್ನುವುದಾದರೆ, ಈ ದೇವಸ್ಥಾನಕ್ಕೆ ಯಾವಾಗ ಮುಲ್ಲಾಗಳನ್ನು ಹಾಗೂ ಪಾದ್ರಿಗಳನ್ನು…
ಬೆಂಗಳೂರು ಗ್ರಾಮಾಂತರ: ಪಟಾಕಿ ಬಾಕ್ಸ್ ಸ್ಪೋಟಗೊಂಡ ಪರಿಣಾಮ ಓರ್ವ ಬಾಲಕ ದುರ್ಮರಣ, ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಮುತ್ತೋರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಇಂದು ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಪಟಾಕಿ ಬಾಕ್ಸ್ ಸ್ಪೋಟಗೊಂಡ ಪರಿಣಾಮ ಮುತ್ತೂರು ನಿವಾಸಿ ತನುಷ್ ರಾವ್ (15) ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಫ್ರೆಂಡ್ಸ್ ಯುವಕರ ಬಳಗದಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ಮಾಡ್ತಿದ್ದ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಸ್ಪೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ. ಈ ದುರ್ಘಟನೆಯಲ್ಲಿ ಗಣೇಶ್(16), ಯೋಗೇಶ್(15), ಮುನಿರಾಜು(27) ಹಾಗೂ ನಾಗರಾಜು (35), ಚೇತನ್ ಶಾವಿ(13), ಕಾನ್ಸ್ ಸ್ಟೇಬಲ್ ಜಾಕೀರ್ ಹುಸೇನ್ ಗೆ ಗಾಯವಾಗಿದೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಸಿ ಜಾಕೀರ್ ಕೈ ಮತ್ತು ಭುಜಕ್ಕೆ…
ಶಿವಮೊಗ್ಗ: ಖರೀದಿಸಿದಂತ ಮನೆಯನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡೋದಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಶಶಿಧರ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಲಂಚ ಸ್ವೀಕಾರದ ವೇಳೆಯಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿ ಶಶಿಧರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿರಾದುದಾರರಾದ ಮೊಹ್ಮದ್ ಆಸೀಫ್ ಉಲ್ಲಾ ತಂದೆ ಅಬ್ದುಲ್ ಮಜೀದ್ ಟೈಲ್ಸ್ ಕೆಲಸ, ವಾಸ: ಆಶ್ರಯ ಬಡಾವಣೆ, ಬೊಮ್ಮನಕಟ್ಟೆ, ಶಿವಮೊಗ್ಗ ರವರು ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಮನೆಯನ್ನು ಅಮ್ಯಾದ್ ಅಲಿ ರವರಿಂದ ಖರೀದಿಸಿದ್ದು, ಸದರಿ ಮನೆಯನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡಲು ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಿರುತ್ತಾರೆ. ಈ ವಿಚಾರವಾಗಿ ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿಯಾದ ಶಶಿಧರ ರವರನ್ನು ಭೇಟಿ ಮಾಡಿ ವಿಚಾರಿಸಿದಾಗ, ಸದರಿಯವರು ಸ್ಥಳ ಮಹಜರ ನಡೆಸಿ, ದಾಖಲಾತಿಗಳನ್ನು ಪರಿಶೀಲನೆ ಮಾಡುವುದಾಗಿ ತಿಳಿಸಿ, ಪಿದ್ಯಾದಿ ಹೆಸರಿಗೆ ಖಾತೆ…
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತಂತೆ ಅಸಭ್ಯವಾಗಿ ಕಾಮೆಂಟ್ ಮಾಡಿದಂತ ಐದು ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಟಿವಿ14 ಎನ್ನುವಂತ ಯೂಟ್ಯೂಬ್ ಚಾನಲ್ ನಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತಾಗಿ ವೀಡಿಯೋ ಪ್ರಸಾರವಾಗಿತ್ತು. ಈ ವೀಡಿಯೋಗೆ ಅಶ್ಲೀಲವಾಗಿ ಕಾಮೆಂಟ್ ಗಳನ್ನು ಕೆಲವರು ಮಾಡಿದ್ದರು. ಈ ಹಿನ್ನಲೆಯಲ್ಲಿ ಮಹಿಳಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಬಿಆರ್ ಭಾಸ್ಕರ್ ಪ್ರಸಾದ್ ಸೂಕ್ತ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು. ಈ ಮನವಿ ಪುರಸ್ಕರಿಸಿದ್ದಂತ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅವರು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಪತ್ರ ಬರೆದು, ಸೂಕ್ತ ಕಾನೂನು ಕ್ರಮಕ್ಕೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಿಕೆ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ. ಐವರು ಯೂಟ್ಯೂಬ್ ಗಳ ವಿರುದ್ಧ ಅಶ್ಲೀಲವಾಗಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಎಫ್ಐಆರ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ಏನಿದೆ.?…
ಯೆಮೆನ್ ರಾಜಧಾನಿ ಸನಾ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್ ಬೆಂಬಲಿತ ಹೌತಿ ಪ್ರಧಾನ ಮಂತ್ರಿ ಅಹ್ಮದ್ ಅಲ್-ರಹಾವಿ ಸಾವನ್ನಪ್ಪಿದ್ದಾರೆ ಎಂದು ಯೆಮೆನ್ ಮತ್ತು ಇಸ್ರೇಲಿ ವರದಿಗಳನ್ನು ಉಲ್ಲೇಖಿಸಿ ಯೂರೋನ್ಯೂಸ್ ವರದಿ ಮಾಡಿದೆ. ಹೌತಿ ರಕ್ಷಣಾ ಸಚಿವರು ಸೇರಿದಂತೆ ಉನ್ನತ ಮಿಲಿಟರಿ ಅಧಿಕಾರಿಗಳನ್ನು ಸಹ ಈ ದಾಳಿಗಳು ಗುರಿಯಾಗಿಸಿಕೊಂಡಿವೆ. ಪ್ಯಾಲೆಸ್ಟೀನಿಯನ್ನರಿಗೆ ಬೆಂಬಲ ವ್ಯಕ್ತಪಡಿಸಲು ಪದೇ ಪದೇ ಕ್ಷಿಪಣಿಗಳು ಮತ್ತು ಡ್ರೋನ್ಗಳನ್ನು ಹಾರಿಸುತ್ತಿದ್ದ ಇರಾನ್ ಬೆಂಬಲಿತ ಗುಂಪಿನ ವಿರುದ್ಧ ಮಾರಕ ಸುತ್ತಿನ ಬಾಂಬ್ ದಾಳಿಯ ನಾಲ್ಕು ದಿನಗಳ ನಂತರ, ಗುರುವಾರ ಹೌತಿ ನಿಯಂತ್ರಿತ ರಾಜಧಾನಿ ಯೆಮೆನ್ ಮೇಲೆ ದಾಳಿ ನಡೆಸಿರುವುದಾಗಿ ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ತಿಳಿಸಿವೆ. ಆ ದಾಳಿಗಳ ನಂತರ ಇಸ್ರೇಲ್ ಸೇನೆಯು, ಇಸ್ರೇಲ್ ವಿರುದ್ಧದ ದಾಳಿಗಳಿಗೆ ಪ್ರತಿಯಾಗಿ ಅಧ್ಯಕ್ಷರ ಭವನ ಸೇರಿದಂತೆ ಹುತಿ ಮಿಲಿಟರಿ ತಾಣಗಳೆಂದು ಹೇಳಲಾದ ಸ್ಥಳಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. ಸನಾದಲ್ಲಿನ ಅಧಿಕಾರಿಗಳು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 90 ಜನರು ಗಾಯಗೊಂಡಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದಿಂದ ತಿರು ಓಣಂ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ವಿಶೇಷ ಸಾರಿಗೆ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 05.09.2025 ರಂದು ತಿರು ಓಣಂ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ: 02.09.2025 ರಿಂದ 04.09.2025 ರವರೆಗೆ ಬೆಂಗಳೂರಿನಿಂದ ಕೇರಳ ರಾಜ್ಯದ ಈ ಕೆಳಕಂಡ ಸ್ಥಳಗಳಿಗೆ ಹಾಲಿ ಕಾರ್ಯಾಚರಿಸುತ್ತಿರುವ ಸಾರಿಗೆಗಳ ಜೊತೆಗೆ 90 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ಕೇರಳ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 07.09.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಬಸ್ ನಿಲ್ದಾಣದಿಂದ ಕೇರಳ ರಾಜ್ಯಕ್ಕೆೆ ಅಂದರೆ ಕಣ್ಣೂರು, ಕೋಜಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ತ್ರಿಶೂರ್, ಕೊಟ್ಟಾಯಂ, ತಿರುವನಂತಪುರಂ ಮುಂತಾದ ಸ್ಥಳಗಳಿಗೆ ವಿಶೇಷ…
ಮೈಸೂರು: ದಸರಾ, ದೀಪಾವಳಿ ಮತ್ತು ಚಟ್ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು, ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07033/07034 ಸಿಕಂದರಾಬಾದ್ – ಮೈಸೂರು – ಸಿಕಂದರಾಬಾದ್ ವಿಶೇಷ ರೈಲುಗಳ ಸಂಚಾರವನ್ನು ಈ ಮೊದಲಿನ ಸಮಯ, ನಿಲ್ದಾಣಗಳು ಮತ್ತು ಬೋಗಿ ವಿನ್ಯಾಸದಲ್ಲೇ ಮುಂದುವರಿಸುವುದಾಗಿ ಪ್ರಕಟಿಸಿದೆ. ರೈಲು ಸಂಖ್ಯೆ. 07033 ಸಿಕಂದರಾಬಾದ್ – ಮೈಸೂರು ವಿಶೇಷ ರೈಲು 01.09.2025 ರಿಂದ 31.10.2025 ರವರೆಗೆ, ಸೋಮವಾರ ಮತ್ತು ಶುಕ್ರವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 29.09.2025ರಂದು ಸಿಕಂದರಾಬಾದ್ ನಿಂದ ಸಂಚರಿಸುವುದಿಲ್ಲ. ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ. 07034 ಮೈಸೂರು – ಸಿಕಂದರಾಬಾದ್ ವಿಶೇಷ ರೈಲು 02.09.2025 ರಿಂದ 01.11.2025 ರವರೆಗೆ, ಮಂಗಳವಾರ ಮತ್ತು ಶನಿವಾರಗಳಲ್ಲಿ ಒಟ್ಟು 17 ಟ್ರಿಪ್ ಗಳನ್ನು ಓಡುತ್ತದೆ. ಆದರೆ, 30.09.2025ರಂದು ಮೈಸೂರಿನಿಂದ ಸಂಚರಿಸುವುದಿಲ್ಲ. https://kannadanewsnow.com/kannada/the-idgah-maidan-in-hubballi-will-henceforth-be-known-as-rani-chennamma-maidan-official-announcement-from-the-municipality/ https://kannadanewsnow.com/kannada/ugcet-neet-2nd-round-provisional-results-announced/
ಹುಬ್ಬಳ್ಳಿ: ಪ್ರತಿ ವರ್ಷವೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗುತ್ತಿದ್ದಂತ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಗ್ರೌಂಡ್ ಎಂಬುದಾಗಿ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಪ್ರತಿ ವರ್ಷ ಗಣೇಶ ಹಬ್ಬ ಪ್ರಾರಂಭವಾಗುತ್ತಿದ್ದಂತೇ, ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದಕ್ಕೆ ಕಾರಣವಾಗುತ್ತಿತ್ತು. ಗಣೇಶೋತ್ಸವ ಕೂರಿಸುವ ಸಂಬಂಧ ವಿವಾದ ತೀರ್ವಗೊಳ್ಳುತ್ತಿತ್ತು. ಇದಕ್ಕೆ ಕಾರಣ ಈದ್ಗಾ ಮೈದಾನ ಎಂಬುದಾಗಿ ಹೆಸರಿದ್ದದ್ದೇ ಆಗಿತ್ತು. ಆದರೇ ಈ ಬಾರಿ ಗಣೋಶೋತ್ಸವ ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿಯೇ ನಡೆಯುತ್ತಿದೆ. ಈ ಗಣೇಶೋತ್ಸವದ ಸಂದರ್ಭದಲ್ಲಿ ಹುಬ್ಬಳ್ಳಿ ಮಹಾನಗರ ಪಾಲಿಕೆಯಿಂದ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂಬುದಾಗಿ ಮರುನಾಮಕರಣ ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಹುಬ್ಬಳ್ಳಿ ಮಹಾನಗರ ಪಾಲೀಕೆಯಿಂದ ಠರಾವು ಪಾಸ್ ಮಾಡಲಾಗಿದೆ. ಈ ಬಳಿಕ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನವೆಂದು ಹೆಸರಿಟ್ಟಿರೋದಕ್ಕೆ ಹಿಂದೂಪರ ಸಂಘಟನೆಗಳ, ಗಜಾನನ ಉತ್ಸವ ಸಮಿತಿಯವರು ಸಂತಸ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/special-trains-will-operate-between-hubballi-raksoul-and-hubballi-bhagat-ki-kothi/ https://kannadanewsnow.com/kannada/ugcet-neet-2nd-round-provisional-results-announced/
ಮುಂಬೈ : ಭಾರತದಲ್ಲಿ ಕೃತಕ ಬುದ್ಧಿಮತ್ತೆ ಕ್ಷೇತ್ರಕ್ಕೆ ಚಾಲನೆಯನ್ನು ನೀಡುವುದಕ್ಕೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಪೂರ್ಣ ಸ್ವಾಮ್ಯದ ಹೊಸ ಘಟಕವಾದ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ಇದು ಟೆಲಿಕಾಂ, ರೀಟೇಲ್ ವ್ಯಾಪಾರ ಮತ್ತು ಇಂಧನ ವ್ಯವಹಾರಗಳ ಜೊತೆಗೆ ಉದ್ಯಮ ಸಮೂಹವನ್ನು “ಡೀಪ್-ಟೆಕ್ ಉದ್ಯಮ” ವನ್ನಾಗಿ ಮಾಡುವ ಮುಕೇಶ್ ಅಂಬಾನಿ ಅವರ ಮಹತ್ವಾಕಾಂಕ್ಷೆಗೆ ಇದು ಪುಷ್ಟಿಯನ್ನು ನೀಡುತ್ತದೆ. ಕಂಪನಿಯು ತನ್ನ ನಾಲ್ಕು ಧ್ಯೇಯಗಳನ್ನು ಅನುಷ್ಠಾನಕ್ಕೆ ತರಲಿದೆ: ಜಾಮ್ನಗರದಲ್ಲಿ ಗಿಗಾವ್ಯಾಟ್-ಪ್ರಮಾಣದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್-ಸಿದ್ಧ ಡೇಟಾ ಕೇಂದ್ರಗಳ ಸ್ಥಾಪನೆ, ಪ್ರಮುಖ ತಂತ್ರಜ್ಞಾನ ಸಂಸ್ಥೆಗಳು ಮತ್ತು ಮುಕ್ತ-ಮೂಲ (ಓಪನ್ ಸೋರ್ಸ್) ಸಮುದಾಯಗಳೊಂದಿಗೆ ಸಹಯೋಗ ಮಾಡಿಕೊಳ್ಳುವುದು, ಶಿಕ್ಷಣ, ಆರೋಗ್ಯ, ಕೃಷಿ ಮತ್ತು ಸಣ್ಣ ವ್ಯಾಪಾರ ಕ್ಷೇತ್ರಗಳಲ್ಲಿ ಎಐ ಸೇವೆಗಳನ್ನು ತರುವುದು ಮತ್ತು ವಿಶ್ವ ದರ್ಜೆಯ ಎಐ ಪ್ರತಿಭೆಗಳನ್ನು ಭಾರತಕ್ಕೆ ಆಕರ್ಷಿಸುವುದು. ಇದನ್ನು ಸಾಕಾರ ಮಾಡುವುದಕ್ಕಾಗಿ ರಿಲಯನ್ಸ್ ಸಿಲಿಕಾನ್ ವ್ಯಾಲಿಯತ್ತ ಮುಖ ಮಾಡುತ್ತಿದೆ. ಸುಂದರ್ ಪಿಚೈ ನೇತೃತ್ವದ ಗೂಗಲ್ನೊಂದಿಗೆ “ಗಹನವಾದ, ಸಮಗ್ರ ಪಾಲುದಾರಿಕೆ”ಯನ್ನು ಅಂಬಾನಿ ಘೋಷಿಸಿದರು. “ಭಾರತದಲ್ಲಿ ಎಐ…














