Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ, ಬೆಳಗಾವಿ ಮತ್ತು ಮೀರಜ್ ನಿಲ್ದಾಣಗಳ ನಡುವಿನ ಕಾಯ್ದಿರಿಸದ ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ರೈಲುಗಳ ಸಂಖ್ಯೆ 07301/07302 ಬೆಳಗಾವಿ-ಮೀರಜ್-ಬೆಳಗಾವಿ ಮತ್ತು 07303/07304 ಬೆಳಗಾವಿ-ಮಿರಜ್-ಬೆಳಗಾವಿ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರವನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ಇದಕ್ಕೂ ಮೊದಲು ಈ ರೈಲುಗಳ ಸಂಚಾರವನ್ನು ಜನವರಿ 31, 2025 ರವರೆಗೆ ಓಡಿಸಲು ಸೂಚಿಸಲಾಗಿತ್ತು. ಈ ರೈಲುಗಳು ಅಸ್ತಿತ್ವದಲ್ಲಿರುವ ಸಮಯ ಮತ್ತು ನಿಲುಗಡೆಗಳೊಂದಿಗೆ ಚಲಿಸುತ್ತವೆ. ರೈಲು ಸಂಚಾರ ಭಾಗಶಃ ರದ್ದು ಮುಂದುವರಿಕೆ ಕ್ಯಾಸಲ್ ರಾಕ್-ಲೋಂಡಾ ನಿಲ್ದಾಣಗಳ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಎಂಜಿನಿಯರಿಂಗ್ ಕಾಮಗಾರಿ ಸಲುವಾಗಿ ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ ನಡುವೆ ರೈಲು ಸಂಖ್ಯೆ 17333/17334 ರ ಭಾಗಶಃ ರದ್ದತಿಯನ್ನು ವಿಸ್ತರಿಸಲಾಗುತ್ತಿದೆ. ಫೆಬ್ರವರಿ 28, 2025 ರವರೆಗೆ, ರೈಲು ಸಂಖ್ಯೆ 17333 ಮೀರಜ್-ಕ್ಯಾಸಲ್ ರಾಕ್ ಡೈಲಿ ಕಾಯ್ದಿರಿಸದ ಎಕ್ಸ್ಪ್ರೆಸ್ ರೈಲು ಲೋಂಡಾವರೆಗೂ ಮಾತ್ರ ಸಂಚರಿಸಲಿದೆ. ಲೋಂಡಾ ಮತ್ತು ಕ್ಯಾಸಲ್ ರಾಕ್ ನಿಲ್ದಾಣಗಳ…
ಬೆಂಗಳೂರು : ಪ್ರಯಾಗ್ರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ಕು ಜನ ಮೃತಪಟ್ಟಿರುವ ಬಗ್ಗೆ ಶಂಕೆ ಇದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ವಿಕಾಸಸೌಧದ ಕಚೇರಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, “ಬೆಳಗಾವಿ ತಾಲೂಕು ಯಲ್ಲೂರು ರಸ್ತೆ ವಡಗಾಂವ್ ಭಾಗದ ಮೇಘಾ ದೀಪಕ್ ಹತ್ತರವರ್ (24), ಜ್ಯೋತಿ ದೀಪಕ್ ಹತ್ತರವರ್ (44) ಹಾಗೂ ಬೆಳಗಾವಿ ತಾಲೂಕಿನ ಶೆಟ್ಟಿಗಲ್ಲಿ ಭಾಗದ ಅರುಣಾ ಖೋರ್ಪಡೆ (61), ಮಹಾದೇವಿ ಹಣಮಂತ ಬಾವಣೂರ (48) ಮೃತಪಟ್ಟಿರುವ ಸಾಧ್ಯತೆ ಇದೆ ಎಂದರು. ರಾಜ್ಯದ ವಿಪತ್ತು ನಿರ್ವಹಣಾ ತಂಡ ಉತ್ತರಪ್ರದೇಶ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದೆ. ಆದರೆ, ಉತ್ತರಪ್ರದೇಶ ಸರ್ಕಾರ ಪ್ರಯಾಗ್ರಾಜ್ ಕುಂಭಮೇಳ ದುರುಂತದಲ್ಲಿ ರಾಜ್ಯದ ಎಷ್ಟು ಜನ ಮೃತಪಟ್ಟಿದ್ದಾರೆ, ಎಷ್ಟು ಜನ ಗಾಯಾಳುಗಳಾಗಿದ್ದಾರೆ ಎಂಬ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಬೆಳಗಾವಿ ಜಿಲ್ಲಾಧಿಕಾರಿ ಸ್ವತಃ ಕುಂಭಮೇಳಕ್ಕೆ ತೆರಳಿದವರ ಕುಟುಂಬದವರನ್ನು ಸಂಪರ್ಕಿಸಿ ನಾಲ್ಕು ಜನ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು. ಬಿಜೆಪಿ ನಾಯಕರ ಸಹಾಯದಿಂದ…
ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್ಎಪಿಡಿಆರ್ ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ದಿನಾಂಕ 30.01.2025 ರಿಂದ 01.02.2025 (3 ದಿನ)ರ ವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಕಂದಾಯ ಸಂಗ್ರಹ ಹೊರತು ಪಡಿಸಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/i-condemn-the-arrogance-and-attitude-of-state-president-b-y-vijayendra-mp-dr-k-sudhakar/ https://kannadanewsnow.com/kannada/aap-congress-post-poll-alliance-likely-in-delhi-pm-modi/
ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಯಾವುದೇ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಅವರು ಪಕ್ಷವನ್ನು ಅವನತಿಗೆ ಕೊಂಡೊಯ್ಯುವ ಜೊತೆಗೆ ನನ್ನನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಅವರನ್ನು ಬದಲಿಸಲು ವರಿಷ್ಠರಿಗೆ ಮನವಿ ಮಾಡುತ್ತೇನೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಕಿಡಿಕಾರಿದರು. ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬ ಕಾರಣಕ್ಕೆ ನಾನು 2019 ರಲ್ಲಿ ಕಾಂಗ್ರೆಸ್ನಿಂದ ಬಿಜೆಪಿಗೆ ಬಂದೆ. ಎಷ್ಟೇ ಅಪಮಾನವಾದರೂ, ರಾಜಕೀಯವಾಗಿ ತುಳಿಯಲು ಯತ್ನಿಸಿದರೂ ಪಕ್ಷವನ್ನು ಬಿಡಲಿಲ್ಲ. ನಂತರ ನಾನು ಸೋತರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಸಹಕಾರದಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಬಿಜೆಪಿ ಪಾಲಿಗೆ ಮರಳುಭೂಮಿಯಾಗಿರುವ ಈ ಪ್ರದೇಶದಲ್ಲಿ ಪಕ್ಷವನ್ನು ಬೆಳೆಸಲು ಶ್ರಮಿಸಿದ್ದೇನೆ ಎಂದರು. ಪಕ್ಷದ ಪದಾಧಿಕಾರಿಗಳ ಆಯ್ಕೆ ನಡೆಯುವಾಗ ಎಲ್ಲರ ಅಭಿಪ್ರಾಯ ಕೇಳಬೇಕು. ಆದರೆ ಏಕಚಕ್ರಾಧಿಪತ್ಯ ಎನ್ನುವಂತೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನನ್ನ ಮಾತೇ ನಡೆಯಬೇಕೆಂಬಂತೆ ವರ್ತಿಸಿದ್ದಾರೆ. ಜೀ ಹುಜೂರ್, ಯೆಸ್ ಬಾಸ್ ಎನ್ನುವವರನ್ನು ಪದಾಧಿಕಾರಿಗಳಿಗೆ ನೇಮಕ ಮಾಡಲಾಗಿದೆ. ಈ…
ಯಾದಗಿರಿ: ಇಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ರೈಲು ಸಂಖ್ಯೆ 22692 ಹಜರತ್ ನಿಜಾಮುದ್ದೀನ್ – ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ರೈಲಿಗೆ ಇಂದು ಜನವರಿ 28, 2025 ರಂದು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ರಿಮೋಟ್ ವಿಡಿಯೋ ಲಿಂಕ್ ಮೂಲಕ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ವಿ.ಸೋಮಣ್ಣ ಅವರು, ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಅಭಿವೃದ್ಧಿಯನ್ನು ಕಾಣುತ್ತಿದೆ. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯಕ್ಕೆ ರೈಲ್ವೆ ಬಜೆಟ್ ಅನುದಾನ 7,560 ಕೋಟಿ ರೂ ಆಗಿದ್ದು. ಕಳೆದ ಕೆಲವು ವರ್ಷಗಳಲ್ಲಿ, ಕರ್ನಾಟಕದ ರೈಲ್ವೆ ಜಾಲವು ಹೊಸ ಮಾರ್ಗಗಳು, ವಿದ್ಯುದ್ದೀಕರಣ, ಸಾಮರ್ಥ್ಯ ವರ್ಧನೆ ಇತ್ಯಾದಿಗಳ ವಿಷಯದಲ್ಲಿ ಭಾರಿ ಅಭಿವೃದ್ಧಿಯನ್ನು ಕಂಡಿದೆ ಎಂದು ಹೇಳಿದರು. ಯಾದಗಿರಿ ರೈಲು ನಿಲ್ದಾಣದಲ್ಲಿ ರಾಜಧಾನಿ ಎಕ್ಸ್ಪ್ರೆಸ್ ನಿಲುಗಡೆಯಿಂದ ಜನರ ಬಹುಕಾಲದ ಆಕಾಂಕ್ಷೆ ನನಸಾಗಿದೆ ಎಂದು ಹೇಳಿದರು. ಯಾದಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ…
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಉಂಟಾಗಿ, ಕರ್ನಾಟಕದ ನಾಲ್ವರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕನ್ನಡಿಗರಿಗೆ ನೆರವಾಗಲು ರಾಜ್ಯ ಸರ್ಕಾರದಿದಂ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ಉತ್ತರ ಪ್ರದೇಶದ ಸರ್ಕಾರದ ಪ್ರಕೃತಿ ವಿಕೋಪ ನಿರ್ವಹಣಾ ವಿಭಾಗದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕಂದಾಯ ಇಲಾಖೆಯ ಎಸಿಎಸ್ ರಶ್ಮಿಯವರು ಈಗಾಗಲೇ ಯುಪಿ ಸರ್ಕಾರದ ಜೊತೆ ಮಾತನಾಡಿದ್ದಾರೆ. ಒಂದಿಬ್ಬರಿಗೆ ಗಾಯ ಆಗಿದೆ ಎಂಬ ಮಾಹಿತಿ ಇದೆ. ಯುಪಿ ಸರ್ಕಾರದಿಂದ ಇಲ್ಲಿಯ ತನಕ ಸಾವು ನೋವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನೂ ಕುಂಭಮೇಳದಲ್ಲಿ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದರೇ, ಕಾಲ್ತುಳಿತದಲ್ಲಿ ಸಿಕ್ಕಿ ಗಾಯಗೊಂಡಿದ್ದರೇ ಅವರ ನೆರವಿಗೆ ಸರ್ಕಾರ ಧಾವಿಸಲಿದೆ. ಇದಕ್ಕಾಗಿ ಸಹಾಯವಾಣಿ ಸಂಖ್ಯೆನ್ನು ಆರಂಭಿಸಲಾಗಿದ್ದು, ಸಂತ್ರಸ್ತರು ಕರೆ ಮಾಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ. ಹೀಗಿದೆ ಕುಂಭಮೇಳದ ಸಂತ್ರಸ್ತರ ನೆರವಿಗಾಗಿ ರಾಜ್ಯ ಸರ್ಕಾರ ಬಿಡುಗಡೆ ಮಾಡಿದಂತ ಸಹಾಯವಾಣಿ…
ನವದೆಹಲಿ: ಸರ್ಕಾರವು ಸರ್ಕಾರಿ ಅಥವಾ ಖಾಸಗಿ ವಲಯದ ಉದ್ಯೋಗಿಗಳ ಪಿಂಚಣಿಯನ್ನು ನಿರ್ವಹಿಸಲು ಮೀಸಲಾಗಿರುವ ನಿರ್ದಿಷ್ಟ ವ್ಯವಸ್ಥೆಯನ್ನು ಹೊಂದಿದೆ. ಸ್ವಲ್ಪ ಸಮಯದ ಮೊದಲು, ಸರ್ಕಾರವು ಏಕೀಕೃತ ಪಿಂಚಣಿ ಯೋಜನೆಯನ್ನು ಘೋಷಿಸಿತು. ಇದು ಅದರ ಪ್ರಯೋಜನ ಪಡೆಯಬೇಕಿದ್ದ ಜನರಲ್ಲಿ ಸಾಕಷ್ಟು ಕೋಲಾಹಲವನ್ನು ಉಂಟುಮಾಡಿತು. ಭಾರತ ಸರ್ಕಾರವು ಇತ್ತೀಚೆಗೆ 8 ನೇ ವೇತನ ಆಯೋಗವನ್ನು ಅನುಮೋದಿಸಿದೆ ಮತ್ತು ಘೋಷಿಸಿದೆ. ಇದು ಏಕೀಕೃತ ಪಿಂಚಣಿ ಯೋಜನೆಯ (Unified Pension Scheme -UPS) ಪ್ರಮುಖ ನಿಬಂಧನೆಯನ್ನು ಹೊಂದಿದೆ. ಇದು ಪ್ರಸ್ತುತ ಈ ಪಿಂಚಣಿ ಯೋಜನೆಯಲ್ಲಿ ದಾಖಲಾದ ಎಲ್ಲಾ ಜನರಿಗೆ ಸಹಾಯ ಮಾಡುತ್ತದೆ. ಅದರೊಂದಿಗೆ ಅವರು ಹೊಂದಿರುವ ಯಾವುದೇ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಆಶಿಸುತ್ತೇವೆ. 8ನೇ ವೇತನ ಆಯೋಗದ ಮೂಲಕ ಘೋಷಿಸಲಾದ ಯುಪಿಎಸ್ ನ ಪ್ರಮುಖ ನಿಬಂಧನೆಗಳ ಬಗ್ಗೆ ಇನ್ನಷ್ಟು ತಿಳಿಯಲು ಸುದ್ದಿ ಲೇಖನವನ್ನು ಓದಿ. 8ನೇ ವೇತನ ಆಯೋಗದ ಬಗ್ಗೆ ಭಾರತ ಸರ್ಕಾರವು ಇತ್ತೀಚೆಗೆ 8 ನೇ ವೇತನ ಆಯೋಗವನ್ನು ಅನುಮೋದಿಸಿದೆ. ಇದು ವಿವಿಧ ವ್ಯವಸ್ಥೆಗಳಿಗೆ ವಿವಿಧ ನಿಬಂಧನೆಗಳನ್ನು…
ರಾಮನಗರ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತೆ ಪೈಶಾಚಿಕ ಕೃತ್ಯವೊಂದು ನಡೆಸಲಾಗಿದೆ. 20 ವರ್ಷದ ಯುವತಿಯ ಮೇಲೆ ಪಕ್ಕದ ಮನೆಯ ಯುವಕನೇ ಅತ್ಯಾಚಾರವೆಸಗಿರುವಂತ ಘಟನೆ ನಡೆದಿದೆ. ರಾಮನಗರ ತಾಲ್ಲೂಕಿನ ಬಿಡದಿಯಲ್ಲಿ ಅಸ್ಸಾಂ ಮೂಲದ ಮಂಜೂರ್ ಆಲಂ ಎಂಬಾತನಿಂದ ಪಕ್ಕದ ಮನೆಯ 20 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯವೆಸಗಿರುವಂತ ಘಟನೆ ನಡೆದಿದೆ. 20 ವರ್ಷದ ಯುವತಿ ಬಾತ್ ರೂಂಗೆ ಹೋಗಿದ್ದಂತ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸಿ ಹೋದಂತ ಆರೋಪಿ ಮಂಜೂರ್ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆ ಬಳಿಕ ತೀವ್ರ ರಕ್ತಸ್ತ್ರಾವವಾಗಿ, ರಕ್ತಸ್ತ್ರಾವದೊಂದಿಗೆ ಅಲ್ಲಿಂದ ಹೊರ ಓಡಿ ಬಂದಿರುವಂತ ಘಟನೆ ನಡೆದಿದೆ. ಈ ಸಂಬಂಧ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. https://kannadanewsnow.com/kannada/aap-congress-post-poll-alliance-likely-in-delhi-pm-modi/ https://kannadanewsnow.com/kannada/i-drink-the-same-water-pm-modi-hits-back-at-aaps-toxic-yamuna-remark/
ನವದೆಹಲಿ: ಭಾರತ ಸರ್ಕಾರವು ತನ್ನ ದೇಶದ ನಾಗರಿಕರಿಗಾಗಿ ಅನೇಕ ಸರ್ಕಾರಿ ಯೋಜನೆಗಳನ್ನು ಹೊಂದಿದೆ. ಸರ್ಕಾರದ ಈ ಅನೇಕ ಯೋಜನೆಗಳು ಬಡವರು ಮತ್ತು ನಿರ್ಗತಿಕರಿಗಾಗಿ ಇವೆ. ಇಂದಿಗೂ ಭಾರತದಲ್ಲಿ ಅನೇಕ ಜನರು ತಮ್ಮ ಕುಟುಂಬವನ್ನು ಪೋಷಿಸಲು ಸಾಕಷ್ಟು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ, ವಿಳಾಸ ನವೀಕರಣ, ಕೆವೈಸಿ ಅಪ್ ಡೇಟ್ ಕುರಿತಂತೆ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಭಾರತ ಸರ್ಕಾರವು ಅಂತಹ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಪಡಿತರವನ್ನು ಒದಗಿಸುತ್ತದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಭಾರತ ಸರ್ಕಾರವು ಈ ಬಡ ನಿರ್ಗತಿಕರಿಗೆ ಅತ್ಯಂತ ಕಡಿಮೆ ಬೆಲೆಗೆ ಪಡಿತರವನ್ನು ಒದಗಿಸುತ್ತದೆ. ಪಡಿತರ ಚೀಟಿ ಏಕೆ ಬೇಕು? ಕಡಿಮೆ ಬೆಲೆಯಲ್ಲಿ ಪಡಿತರ ಪಡೆಯಲು ಜನರು ಪಡಿತರ ಚೀಟಿಯನ್ನು ಹೊಂದಿರಬೇಕು. ಭಾರತದಲ್ಲಿ ನಾಲ್ಕು ರೀತಿಯ ಪಡಿತರ ಚೀಟಿಗಳಿವೆ, ಅವುಗಳನ್ನು ವಿಭಿನ್ನ ಅರ್ಹತೆಯ ಆಧಾರದ ಮೇಲೆ ತಯಾರಿಸಲಾಗುತ್ತದೆ. ಎಲ್ಲಾ ಪಡಿತರ ಚೀಟಿಗಳು ಕಡಿಮೆ ಬೆಲೆಯಲ್ಲಿ ಪಡಿತರ ಸೌಲಭ್ಯವನ್ನು ಹೊಂದಿಲ್ಲ. ಇದಲ್ಲದೆ, ಪಡಿತರ ಚೀಟಿಯನ್ನು…
ಬೆಂಗಳೂರು:- ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ “ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್ಹ್ಯೂಮನ್ ಆ್ಯಕ್ಷನ್ 2025” ಮಸೂದೆ ಕುರಿತು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕಂದಾಯ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟಲು ತ್ವರಿತವಾಗಿ ಕಾನೂನು ತರಬೇಕು ಎಂದು ಮುಖ್ಯಂಮತ್ರಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸಮಾಜದಲ್ಲಿ ಕೆಳಸ್ತರದ ಜನರು ಕಿರುಸಾಲ ತೆಗೆದುಕೊಳ್ಳುತ್ತಾರೆ. ಸಾಲ ವಸೂಲಿ ಮಾಡಲು ಅಮಾನವೀಯವಾಗಿ ವರ್ತಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳನ್ನು ನಿಲ್ಲಿಸಬೇಕಿದೆ. ಜನ ಊರು ಬಿಡುತ್ತಿರುವುದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ.…










