Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಕಾಗೋಡು ತಿಮ್ಮಪ್ಪನವರಿಗೆ ಈಗಾಗಲೇ ದೇವರಾಜ ಅರಸು ಪ್ರಶಸ್ತಿಯನ್ನು ಸರ್ಕಾರ ನೀಡಿ ಗೌರವಿಸಿದೆ. ಆ ಬಳಿಕ ಅವರಿಗೆ ಪ್ರಶಸ್ತಿಗಳ ಸುರಿಮಳೆಯೇ ಬಂದಿದೆ. ಇಂದು ನಾಗರೀಕ ಸನ್ಮಾನ ಅತ್ಯಂತ ಮಹತ್ವದ್ದು. ಅದು ಈ ಭೂಮಿ ಕೊಟ್ಟಂತ ನಾಯಕನಿಗೆ ಸಲ್ಲಬೇಕಾಗದ್ದು. ಆದರೂ ಅವರಿಗೆ ಡಾಕ್ಟರೇಟ್ ನೀಡಬೇಕು. ಡಾ.ಕಾಗೋಡು ತಿಮ್ಮಪ್ಪ ಆಗಬೇಕು. ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿಯಿಂದ ಗೌರವ ಡಾಕ್ಟರೇಟ್ ಕೊಡಲೇಬೇಕು ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ಮಾಜಿ ಸ್ಪೀಕರ್, ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಭೂಮಿಯನ್ನು ಕೊಡುವಂತ ನಿರ್ಧಾರ ಯಾರು ಮಾಡಲಿಲ್ಲ. ಕರ್ನಾಟಕದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದವರು ಇಬ್ಬರು ಮಾತ್ರ. ಒಬ್ಬರು ದಿವಂಗತ ಎಸ್ ಬಂಗಾರಪ್ಪನವರು, ಮತ್ತೊಬ್ಬರು ನಮ್ಮ ನಾಯಕರಾದಂತ ಕಾಗೋಡು ತಿಮ್ಮಪ್ಪನವರು. ಈ ಮಲೆನಾಡು ಭಾಗದ ಜನರಿಗೆ ಭೂಮಿಯನ್ನು ಕೊಟ್ಟಂತ ಮಹಾನ್ ನಾಯಕರು ಇವರು ಎಂದರು. ರೈತರು…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಗುಂಡ್ ಪ್ರದೇಶದಲ್ಲಿ ಸುರಂಗ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯ ಕಾರ್ಮಿಕರನ್ನು ಹೊಂದಿರುವ ಶಿಬಿರದ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು ಎಂದು ಅವರು ಹೇಳಿದರು. ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/rain-alert-yellow-alert-sounded-in-13-districts-of-the-state-for-the-next-two-days/ https://kannadanewsnow.com/kannada/breaking-bomb-threat-call-to-kempegowda-international-airport-security-forces-take-precautionary-measures/
ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯಲ್ಲಿ ಜಾತಿ ಸಮೀಕ್ಷೆ, ಒಳಮೀಸಲಾತಿ, ಪಂಚಮಸಾಲಿ ಬೇಡಿಕೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಯಿತು. ಕೆಲ ವಿಚಾರಗಳ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಆ ಪ್ರಮುಖ ಹೈಲೈಟ್ಸ್ ಈ ಕೆಳಗಿನಂತಿದೆ. *ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು. *ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಚಾಲೆಂಜಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು. *ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್…
ಶಿವಮೊಗ್ಗ: ಇಂದು ಅರಣ್ಯ ನೀತಿಗಳು ಕಠಿಣವಾಗಿದ್ದಾವೆ. ಬಗರ್ ಹುಕುಂ ಆಸೆಗಾಗಿ ಕಾಡು ಒತ್ತುವರಿ ಮಾಡುವುದಕ್ಕೆ ಹೋಗಬೇಡಿ ಎಂಬುದಾಗಿ ಮನವಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿದರು. ಅಲ್ಲದೇ ನಾನು ರೈತರು ಈಗ ಸಾಗುವಳಿ ಮಾಡುತ್ತಿರುವಂತ ಆಸ್ತಿಯನ್ನು ಕಿತ್ತುಕೊಳ್ಳುವುದಕ್ಕೆ ಬಿಡುವುದಿಲ್ಲ ಎಂಬುದಾಗಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪದಲ್ಲಿ ನಡೆದಂತ ಕಾಗೋಡು ತಿಮ್ಮಪ್ಪ ಅವರಿಗೆ ನಾಗರೀಕ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕಾಡೋಡು ಸಾಹೇಬ್ರು ಭೂಮಿ ಕೊಡಬೇಕಾದರೇ ಫಾರೆಸ್ಟ್ ಆಕ್ಟ್ ತುಂಬಾ ಕಠಿಣವಾಗಿರಲಿಲ್ಲ. ಆದರೇ ಇಂದು ಬಹಳ ಕಠಿಣವಾಗಿದೆ. ಸುಪ್ರೀಂ ಕೋರ್ಟ್, ಹೈಕೋರ್ಟ್ ನಿಂದ, ಗ್ರೀನ್ ಬೆಲ್ಡ್ ನಿಂದ ಒತ್ತಡವಿದೆ. ನಿಮ್ಮ ಜಮೀನು ಈಗ ಏನಿದ್ಯೋ ಅದನ್ನು ಮಾಡಿಕೊಂಡು ಹೋಗಿ. ಅದರ ಹೊರತಾಗಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಬೇಡಿ. ಇರುವ ಆಸ್ತಿಯನ್ನು ಕಿತ್ತುಕೊಳ್ಳುವುದಕ್ಕೆ ಖಂಡಿತಾ ನಾವು ಬಿಡುವುದಿಲ್ಲ. ರೈತರಿಗೆ ಪರವಾಗಿ ನಾವಿದ್ದೇವೆ ಎಂದರು. ಕಾಡೋಗು ತಿಮ್ಮಪ್ಪ ಅವರು ಅಷ್ಟು ಹೋರಾಟ ಮಾಡಿದ್ರು. ಅದರ ಫಲವಾಗಿ ನೀವು ಭೂಮಿ ಪಡೆದುಕೊಂಡಿದ್ದೀರಿ. ಭೂಮಿ ಪಡೆದುಕೊಂಡಿದ್ದರಿಂದ…
ಕೋಲಾರ: ಜಿಲ್ಲೆಯಲ್ಲಿ ಜೂಜಾಟದಲ್ಲಿ ಬ್ಯಾಂಕ್ ಅಧಿಕಾರಿ, ಅಬಕಾರಿ ಇಲಾಖೆಯ ಅಧಿಕಾರಿಗಳೇ ಭಾಗಿಯಾಗಿ ಬಂಧನಕ್ಕೆ ಒಳಗಾಗಿರುವಂತ ಘಟನೆ ಕೋಲಾರದ ಕಠಾರಿಪಾಳ್ಯದಲ್ಲಿ ನಡೆದಿದೆ. ಈ ಸಂಬಂಧ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯದಲ್ಲಿ ಜೂಜಾಟದಲ್ಲಿ ತೊಡಗಿರುವಂತ ಖಚಿತ ಮಾಹಿತಿ ಎಸ್ಪಿ ನಿಖಿಲ್ ಅವರಿಗೆ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಸಿಇಎನ್ ಠಾಣೆಯ ಪೊಲೀಸರು ದಾಳಿ ನಡೆಸಿ, ಬಂಧಿಸುವಂತೆ ಸೂಚಿಸಿದ್ದರು. ಕೋಲಾರ ಎಸ್ಪಿ ಸೂಚನೆಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಮಾಲೂರು ಪಿಎಲ್ ಡಿ ಬ್ಯಾಂಕ್ ನ ಶ್ರೀನಿವಾಸ್, ಅಬಕಾರಿ ಇಲಾಖೆಯ ಬಾಲರಾಜ್ ಅವರು ಕೂಡ ಜೂಜಾಟದಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದಿದ್ದಾರೆ. ಕೋಲಾರ ನಗರದ ಕಠಾರಿಪಾಳ್ಯದ ಮನೆಯೊಂದರಲ್ಲಿ ಜೂಜಾಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿಗಳಿಂದ 1.5 ಲಕ್ಷ ನಗರ, 1 ಕಾರು, 5 ಬೈಕ್ ಸೇರಿದಂತೆ ವಿವಿಧ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. https://kannadanewsnow.com/kannada/rain-alert-yellow-alert-sounded-in-13-districts-of-the-state-for-the-next-two-days/ https://kannadanewsnow.com/kannada/breaking-bomb-threat-call-to-kempegowda-international-airport-security-forces-take-precautionary-measures/
ನವದೆಹಲಿ: ಇಂಡಿಗೊ, ವಿಸ್ತಾರಾ, ಏರ್ ಇಂಡಿಯಾ ಮತ್ತು ಅಕಾಸಾ ಏರ್ ಸೇರಿದಂತೆ ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಒಟ್ಟು 24 ವಿಮಾನಗಳಿಗೆ ಭಾನುವಾರ ಬಾಂಬ್ ಬೆದರಿಕೆಗಳು ಬಂದಿವೆ. ಬೆದರಿಕೆಗಳು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳನ್ನು ಗುರಿಯಾಗಿಸಿಕೊಂಡವು. ಬಾಧಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾದ ಇಂಡಿಗೊ, ಜೆಡ್ಡಾದಿಂದ ಮುಂಬೈ, ಕೋಝಿಕೋಡ್ನಿಂದ ದಮ್ಮಾಮ್, ದೆಹಲಿಯಿಂದ ಇಸ್ತಾಂಬುಲ್, ಮುಂಬೈನಿಂದ ಇಸ್ತಾಂಬುಲ್, ಪುಣೆಯಿಂದ ಜೋಧ್ಪುರ ಮತ್ತು ಗೋವಾದಿಂದ ಅಹಮದಾಬಾದ್ನಂತಹ ವಿಮಾನಗಳಿಗೆ ಬೆದರಿಕೆ ಇದೆ ಎಂದು ವರದಿ ಮಾಡಿದೆ. ದೆಹಲಿಯಿಂದ ಫ್ರಾಂಕ್ಫರ್ಟ್, ಸಿಂಗಾಪುರದಿಂದ ಮುಂಬೈ, ಬಾಲಿಯಿಂದ ದೆಹಲಿ ಮತ್ತು ಮುಂಬೈನಿಂದ ಸಿಂಗಾಪುರ ಸೇರಿದಂತೆ ಮಾರ್ಗಗಳಲ್ಲಿ ವಿಸ್ತಾರಾ ಇದೇ ರೀತಿಯ ಬೆದರಿಕೆಗಳನ್ನು ಎದುರಿಸಿದೆ. ಈ ಬೆದರಿಕೆಗಳಿಗೆ ಪ್ರತಿಕ್ರಿಯೆಯಾಗಿ, ಇಂಡಿಗೊ ಮತ್ತು ವಿಸ್ತಾರಾ ಎರಡೂ ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಭದ್ರತಾ ಕ್ರಮಗಳನ್ನು ಜಾರಿಗೆ ತಂದವು. “ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆ ನಮ್ಮ ಅತ್ಯುನ್ನತ ಆದ್ಯತೆಯಾಗಿದೆ ಮತ್ತು ನಾವು ಸಂಬಂಧಿತ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ…
ಛತ್ತೀಸ್ ಗಢ: ಇಲ್ಲಿನ ದುರ್ಗ್ ಜಿಲ್ಲೆಯಲ್ಲಿ ಮೂಢನಂಬಿಕೆಯ ಪ್ರಭಾವದಿಂದ ವ್ಯಕ್ತಿಯೊಬ್ಬ ತನ್ನ ಅಜ್ಜಿಯನ್ನು ಕೊಂದು ಶಿವಲಿಂಗದ ಮೇಲೆ ರಕ್ತವನ್ನು ಅರ್ಪಿಸಿ, ತಾನು ತ್ರಿಶೂಲದಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ ಘಟನೆ ನಡೆದಿದೆ. ನಂದಿನಿ ಪೊಲೀಸ್ ಠಾಣೆ ವ್ಯಾಪ್ತಿಯ ನಂಕಟ್ಟಿ ಗ್ರಾಮದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಭಾನುವಾರದ ಇಂದು ತಡವಾಗಿ ಬೆಳಕಿಗೆ ಬಂದಿದೆ. ಏನಿದು ಘಟನೆ? 70 ವರ್ಷದ ರುಕ್ಮಿಣಿ ಗೋಸ್ವಾಮಿ ತನ್ನ ಮೊಮ್ಮಗ ಗುಲ್ಶನ್ ಗೋಸ್ವಾಮಿ (30) ಅವರೊಂದಿಗೆ ಶಿವ ದೇವಾಲಯದ ಬಳಿ ವಾಸಿಸುತ್ತಿದ್ದರು ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಧಮ್ಧಾ) ಸಂಜಯ್ ಪುಂಧೀರ್ ತಿಳಿಸಿದ್ದಾರೆ. ಗುಲ್ಶನ್ ದೇವಾಲಯದಲ್ಲಿ ನಿಯಮಿತವಾಗಿ ಆಚರಣೆಗಳನ್ನು ಮಾಡುತ್ತಿದ್ದರು. ಶನಿವಾರ ಸಂಜೆ, ಗುಲ್ಶನ್ ತನ್ನ ಅಜ್ಜಿಯ ಮೇಲೆ ತ್ರಿಶೂಲದಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅವಳನ್ನು ಕೊಂದ ನಂತರ, ಅವನು ಅವಳ ರಕ್ತವನ್ನು ಹತ್ತಿರದ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಪವಿತ್ರ ಸಂಕೇತವಾದ ‘ಶಿವಲಿಂಗ’ದ ಮೇಲೆ ಅರ್ಪಿಸಿದನು ಎಂದು ವರದಿಯಾಗಿದೆ. ಈ ಭಯಾನಕ ಕೃತ್ಯದ…
ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ. ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದರು. ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಆಗಸ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ ಭೇಟಿ ನೀಡಿ ಫಸಲು ವೀಕ್ಷಿಸಿದ ಬಳಿಕ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಾರೆ ಎನ್ನುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಕುಟುಂಬದವರನ್ನೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಹೀಗಾಗಿ ನಮ್ಮ ಮಿತ್ರ ಪಕ್ಷವೂ ಔದಾರ್ಯ ತೋರಲಿ ಎನ್ನುವ ಆಶಯ ನನ್ನದು. ಅವರು ಔದಾರ್ಯ ತೋರುತ್ತಾರೆ ಎನ್ನುವ ನಂಬಿಕೆ ನನಗಿದೆ…
ಗಾಝಾ: ಇಸ್ರೇಲಿ ರಕ್ಷಣಾ ಪಡೆ (Israeli Defence Forces -IDF) ಮತ್ತು ಯುಎಸ್ ರಾಯಭಾರ ಕಚೇರಿಯಿಂದ ಗಾಝಾದಲ್ಲಿ ಸೆರೆಯಿಂದ ರಕ್ಷಿಸಲ್ಪಟ್ಟ ಯಜಿದಿ ಮಹಿಳೆ ಫೌಜಿಯಾ ಅಮೀನ್ ಸಿಡೋ ( Fawzia Amin Sido ) ಬ್ರಿಟಿಷ್ ಸಾಕ್ಷ್ಯಚಿತ್ರ ನಿರ್ಮಾಪಕರಿಗೆ ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರು ಇತರ ಅನೇಕ ಯಾಜಿದಿಗಳೊಂದಿಗೆ ತನ್ನನ್ನು ಅಪಹರಿಸಿದ ನಂತರ, ಅವರು ಯಜಿದಿ ಶಿಶುಗಳ ಮಾಂಸವನ್ನು ತಿನ್ನಿಸಿದರು ಎಂದು ಹೇಳಿದರು. ಬ್ರಿಟಿಷ್ ಪಡೆಗಳಲ್ಲಿ ಸೇವೆ ಸಲ್ಲಿಸಿದ ಮತ್ತು ಇರಾಕಿ ಕುರ್ದ್ಗಳೊಂದಿಗೆ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದ ಸಾಕ್ಷ್ಯಚಿತ್ರ ನಿರ್ಮಾಪಕ ಅಲನ್ ಡಂಕನ್ ಅವರೊಂದಿಗೆ ಮಾತನಾಡಿದ ಫೌಜಿಯಾ, ಒಂಬತ್ತನೇ ವಯಸ್ಸಿನಲ್ಲಿ ತನ್ನ ಯುವ ಸಹೋದರರೊಂದಿಗೆ ಐಸಿಸ್ ತನ್ನನ್ನು ಒತ್ತೆಯಾಳಾಗಿ ತೆಗೆದುಕೊಂಡಿದೆ ಎಂದು ಹೇಳಿದರು. 2014ರಿಂದ ಐಸಿಸ್ ವ್ಯವಸ್ಥಿತವಾಗಿ ಇರಾಕ್ನಲ್ಲಿ ಯಾಜಿದಿ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮೂಹಿಕ ಹತ್ಯೆ, ಲೈಂಗಿಕ ಗುಲಾಮಗಿರಿ, ಬಲವಂತದ ಮತಾಂತರ ಮತ್ತು ಸ್ಥಳಾಂತರದ ಮೂಲಕ ದಾಳಿ ನಡೆಸಿತ್ತು. ಸಾವಿರಾರು ಯಜಿದಿಗಳು ಕೊಲ್ಲಲ್ಪಟ್ಟರು ಮತ್ತು ಅನೇಕ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಲಾಯಿತು. ಇರಾಕ್…
ಮಂಡ್ಯ : ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ ಶ್ರೀ ಮದ್ದೂರಮ್ಮನ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ದುರ್ಘಟನೆ ಭಾನುವಾರ ಸಂಜೆ ಜರುಗಿದೆ. ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು (14) ಮತ್ತು ತೇಜಸ್ ರವರ ಪುತ್ರ ರಂಜು (17) ಮೃತಪಟ್ಟ ಯುವಕರಾಗಿದ್ದಾರೆ. ಇಬ್ಬರು ಯುವಕರು ಭಾನುವಾರ ಮಧ್ಯಾಹ್ನ ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾರೆ. ಕೆಲಕಾಲ ಆಟವಾಡಿದ್ದು, ಬಳಿಕ ಕೆರೆ ನೀರಿನ ಆಳಕ್ಕೆ ಹೋದ ಪರಿಣಾಮ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಐವರು ಯುವಕರು ಕೆರೆಗೆ ಈಜಲು ಹೋಗಿದ್ದು, ಇಬ್ಬರು ಮೃತಪಟ್ಟಿದ್ದು, ಮೂವರು ಸ್ಥಳದಿಂದ ಆತಂಕಗೊಂಡು ಓಡಿ ಹೋಗಿದ್ದಾರೆ. ಮೃತ ಯುವಕ ಮುತ್ತುರಾಜು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದು, ರಂಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಪೋಲೀಸರು ಮೃತದೇಹಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ…