Author: kannadanewsnow09

ಬೆಂಗಳೂರು : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿರುವ ವಿಚಾರ ಗೊತ್ತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳನ್ನು ಕೇಳಿದ್ದೇನೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುವನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲ ಪ್ರಕರಣಗಳು ಕಡಿಮೆಯಾಗಿವೆ‌.‌ಸೈಬರ್ ಪ್ರಕರಣಗಳು ಕಡಿಮೆಯಾಗಿದೆ. ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದರೆ ಯಾವ ಆಧಾರದ ಮೇಲೆ ಹೇಳುವುದು. ಈ ಬಗ್ಗೆ ಆರೋಪ ಮಾಡುವವರು ಸ್ವಲ್ಪ ಯೋಚಿಸಿ ಮಾತನಾಡಬೇಕು‌ ಎಂದು ಎಚ್ಚರಿಸಿದರು

Read More

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಾಲ್ವರು ಬ್ರಾಹ್ಮಣ ವಿದ್ಯಾರ್ಥಿಗೆ ತಮ್ಮ ಪವಿತ್ರ ದಾರವನ್ನು (ಜನಿವಾರ) ತೆಗೆಯುವಂತೆ ಹೇಳಿದ ನಂತರ ಕರ್ನಾಟಕ ಸರ್ಕಾರವು ಟೀಕೆಗಳನ್ನು ಎದುರಿಸುತ್ತಿದ್ದು, ಈ ಘಟನೆಗಳನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಖಂಡಿಸಿದ್ದಾರೆ ಮತ್ತು ವರದಿಯನ್ನು ಕೋರಿದ್ದಾರೆ. ಸಿಇಟಿ ನಡೆಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಗುರುವಾರ ಘಟನೆ ನಡೆದ ಬೀದರ್ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳಿಂದ ವಿವರವಾದ ವರದಿಗಳನ್ನು ಪಡೆದು ತನಿಖೆಗೆ ಆದೇಶಿಸಿದೆ. ಪರೀಕ್ಷಾ ಪ್ರೋಟೋಕಾಲ್ನಲ್ಲಿ ಜಾನಿವಾರನನ್ನು ತೆಗೆದುಹಾಕುವ ಅಗತ್ಯವಿಲ್ಲ. ಇದು ಹಿಂದೆಂದೂ ಸಂಭವಿಸಿಲ್ಲ. ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಾವು ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾನು ಅದನ್ನು ಖಂಡಿಸುತ್ತೇನೆ. ಈ ಬಗ್ಗೆ ವರದಿ ಕೇಳಿದ್ದೇನೆ ಎಂದು ಸುಧಾಕರ್ ಹೇಳಿದ್ದಾರೆ. ವರದಿಯನ್ನು ಸ್ವೀಕರಿಸಿದ ನಂತರ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಾವು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು. ಎಂಜಿನಿಯರಿಂಗ್ ನಂತಹ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಗೇಟ್ ವೇ ಆಗಿದೆ. ಬೀದರ್ನ…

Read More

ಬೆಂಗಳೂರು: ಕೃಷಿಕರಿಗೆ ಬೆಳೆ ವಿಮೆ ಸೌಲಭ್ಯ ಕಲ್ಪಿಸುವಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ಇದೇ ಕಾರಣದಿಂದಾಗಿ ಕೇಂದ್ರ ಸರ್ಕಾರದಿಂದ ಪ್ರಶಸ್ತಿಯನ್ನು ಕೂಡ ಗಳಿಸಿದೆ. ಈ ಮಾಹಿತಿಯನ್ನು ಎಕ್ಸ್ ನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಂಚಿಕೊಂಡಿದ್ದು, 2024ರ ಖಾರೀಫ್‌ ಹಾಗೂ 2023-24ನೇ ಸಾಲಿನ ರಬಿ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದಿದ್ದಾರೆ. ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ಅಗ್ರ 3 ಸ್ಥಾನದಲ್ಲಿರುವ ದೇಶದ ಮೂರು ಜಿಲ್ಲೆಗಳ ಪೈಕಿ ರಾಜ್ಯದ ಹಾವೇರಿ ಮತ್ತು ಕೊಪ್ಪಳ ಸ್ಥಾನ ಪಡೆದಿರುವುದು ವೈಯಕ್ತಿಕವಾಗಿ ಸಂತಸವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ…

Read More

ಬೆಂಗಳೂರು: ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. https://twitter.com/siddaramaiah/status/1913228718593450318 ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಿ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು. ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು…

Read More

ಬೀದರ್: ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ಮೀಸಲಿಟ್ಟ 38,500 ಕೋಟಿ ಹಣವನ್ನು ಕಾಂಗ್ರೆಸ್ ಸರಕಾರವು ದುರುಪಯೋಗ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು, ಸರಕಾರ ಜವಾಬ್ದಾರಿ ಮರೆತಿವೆ. ಅವರನ್ನು ಎಚ್ಚರಿಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ. ಅದಕ್ಕಾಗಿ ಈ ಜನಾಕ್ರೋಶದ ಯಾತ್ರೆ ಎಂದು ತಿಳಿಸಿದರು. ರಾಜ್ಯದ ಸಿಎಂ ಆಗಿ ರೈತರ ಕಣ್ಣೀರು ಒರೆಸಿದ್ದೀರಾ? ಬಡವರ ಕಣ್ಣೀರು ಒರೆಸಿದ್ದೀರಾ? ಪರಿಶಿಷ್ಟ ಜಾತಿ, ಪಂಗಡದವರ ನೋವಿಗೆ ಸ್ಪಂದಿಸಿದ್ದೀರಾ ಎಂದು ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರು. ರಾಜ್ಯವು ಹಿಂದೆ ಯಡಿಯೂರಪ್ಪನವರ ನೇತೃತ್ವದಲ್ಲಿ ಅಭಿವೃದ್ಧಿ ವಿಚಾರದಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿತ್ತು ಎಂದು ವಿವರಿಸಿದರು. ರಾಜ್ಯವು ಈಗ ಭ್ರಷ್ಟಾಚಾರದಲ್ಲಿ ನಂಬರ್ ವನ್ ಸ್ಥಾನ ಪಡೆದಿದೆ. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಈ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಬಡವರ, ರೈತರ, ಪರಿಶಿಷ್ಟ ಜಾತಿ, ಪಂಗಡದ ಪರವಾಗಿದ್ದ ಕಾಳಜಿ ಎಲ್ಲಿ ಹೋಗಿದೆ ಸಿದ್ದರಾಮಯ್ಯನವರೇ ಎಂದು ಕೇಳಿದರು.…

Read More

ಬೆಂಗಳೂರು: ನನ್ನ ಜೀವನಾನುಭವವೇ ವಿದ್ಯಾಸಿರಿ ಯೋಜನೆ ಜಾರಿಗೆ ಪ್ರೇರಣೆಯಾಗಿದೆ. ವಿದ್ಯಾಸಿರಿ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎನ್ನುವ ನಿಟ್ಟಿನಲ್ಲಿ ಜಾರಿಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು. https://twitter.com/siddaramaiah/status/1913226694652993981 ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 12ನೇ ಶತಮಾನದಲ್ಲೇ…

Read More

ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ. ಈ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:22.04.2025 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.…

Read More

ನವದೆಹಲಿ: ಭಾರತವು ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುವ ನಿರೀಕ್ಷೆಯಿದೆ. ಏಕೆಂದರೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭೇಟಿ ನೀಡುವ ಮೊದಲ ಭಾರತೀಯ ಗಗನಯಾತ್ರಿಯಾಗಲಿದ್ದಾರೆ. ಮೇ 29, 2025 ಕ್ಕಿಂತ ಮೊದಲು ಉಡಾವಣೆಗೆ ನಿಗದಿಪಡಿಸಲಾಗಿರುವ ಶುಕ್ಲಾ, ಆಕ್ಸಿಯಮ್ ಸ್ಪೇಸ್‌ನ ಆಕ್ಸ್-4 ಮಿಷನ್‌ನಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಲಿದ್ದಾರೆ. ಇದು ಆಕ್ಸಿಯಮ್ ಸ್ಪೇಸ್, ​​ನಾಸಾ ಮತ್ತು ಸ್ಪೇಸ್‌ಎಕ್ಸ್ ಒಳಗೊಂಡ ಸಹಯೋಗದ ಪ್ರಯತ್ನವಾಗಿದೆ. ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಈ ಸಮಯವನ್ನು ದೃಢಪಡಿಸಿದರು. ಇದು ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಲ್ಲಿ ಒಂದು ನಿರ್ಣಾಯಕ ಅಧ್ಯಾಯವಾಗಿದೆ ಎಂದು ಕರೆದರು. “ಇಸ್ರೋ ಹೊಸ ಗಡಿಗಳನ್ನು ರೂಪಿಸುತ್ತಿದ್ದಂತೆ ಭಾರತೀಯ ಗಗನಯಾತ್ರಿಯೊಬ್ಬರು ಐತಿಹಾಸಿಕ ಬಾಹ್ಯಾಕಾಶ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ” ಎಂದು ಅವರು ಹೇಳಿದರು. ಭಾರತದ ಬಾಹ್ಯಾಕಾಶ ಗುರಿಗಳಲ್ಲಿ ಗಗನಯಾನ, ಐಎಸ್‌ಎಸ್ ಹಾರಾಟ ಮತ್ತು ಈ ಬೇಸಿಗೆಯಲ್ಲಿ ಉಪಗ್ರಹ ಉಡಾವಣೆಗಳ ಸರಣಿ ಸೇರಿವೆ ಎಂದು ಅವರು ಹೇಳಿದರು. ಭಾರತದ ಗಗನಯಾತ್ರಿಗಳಲ್ಲಿ ಅತ್ಯಂತ ಕಿರಿಯ…

Read More

ಮದ್ರಾಸ್: ಜಾತಿ-ನಿರ್ದಿಷ್ಟ ಹೆಸರುಗಳು ಮತ್ತು ನಿರ್ಬಂಧಿತ ಬೈಲಾಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಾತಿ ಆಧಾರಿತ ಸಂಘಗಳು / ಸೊಸೈಟಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಅಸಂವಿಧಾನಿಕ ಮತ್ತು ತಮ್ಮ ಹೆಸರುಗಳು, ಉದ್ದೇಶಗಳು ಮತ್ತು ಸದಸ್ಯತ್ವ ಮಾನದಂಡಗಳನ್ನು ತಿದ್ದುಪಡಿ ಮಾಡದ ಹೊರತು ನೋಂದಾಯಿತ ಘಟಕಗಳಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರು ತೀಕ್ಷ್ಣವಾದ ತೀರ್ಪನ್ನು ನೀಡಿ, ಇಂತಹ ಸಂಘಗಳು ಸಾರ್ವಜನಿಕ ನೀತಿ ಮತ್ತು ಜಾತಿರಹಿತ ಸಮಾಜದ ಸಾಂವಿಧಾನಿಕ ದೃಷ್ಟಿಕೋನವನ್ನು ಉಲ್ಲಂಘಿಸುತ್ತವೆ ಎಂದು ಘೋಷಿಸಿದರು. ಸರ್ಕಾರದ ಆದೇಶಗಳನ್ನು ಪ್ರಶ್ನಿಸಿ ಅಥವಾ ಆಂತರಿಕ ಚುನಾವಣೆಗಳು ಮತ್ತು ನೋಂದಣಿ ನವೀಕರಣಗಳಿಗೆ ಸಂಬಂಧಿಸಿದ ಪರಿಹಾರಗಳನ್ನು ಕೋರಿ ಜಾತಿ ಆಧಾರಿತ ಸಂಘಗಳಾದ ದಕ್ಷಿಣ ಭಾರತೀಯ ಸೆಂಗುಂತ ಮಹಾಜನ ಸಂಗಮ್, ತಿರುಚೆಂಗೋಡ್ ವತ್ತ ಕೊಂಗು ವೇಲಾಲಾರ್ ಸಂಘಂ ಮತ್ತು ಬಡ ಶಿಕ್ಷಣ ನಿಧಿ ಸಲ್ಲಿಸಿದ್ದ ಮೂರು ರಿಟ್ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಆದರೆ ಸಂಕುಚಿತ ವಿವಾದಗಳನ್ನು ನಿರ್ಣಯಿಸುವ ಬದಲು, ನ್ಯಾಯಮೂರ್ತಿ ಚಕ್ರವರ್ತಿ ಒಂದು…

Read More

ಬೆಂಗಳೂರು: ನಗರದ ಕೇಂದ್ರ ಭಾಗದಲ್ಲಿರುವಂತ ಕಬ್ಬನ್ ಪಾರ್ಕ್ ನಲ್ಲಿ ಪ್ರತಿ ಭಾನುವಾರ ಮತ್ತು ಹೈಕೋರ್ಟ್ ಕಾರ್ಯನಿರ್ವಹಿಸದೇ ಇರುವಂತ ದಿನಗಳಲ್ಲಿ ನಿರ್ಧಿಷ್ಟ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಿದೆ. https://twitter.com/KarnatakaVarthe/status/1913156987434524713 ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಬ್ಬನ್ ಪಾರ್ಕ್‌ಗೆ ಭೇಟಿ ನೀಡುವ ಸಾರ್ವಜನಿಕರು ಪ್ರತಿ ಭಾನುವಾರದಂದು ಹಾಗೂ ಹೈಕೋರ್ಟ್‌ ಕಾರ್ಯನಿರ್ವಹಿಸದೇ ಇರುವ ಶನಿವಾರಗಳಂದು ಹಳೆಯ ಕೆಜಿಐಡಿ ಕಟ್ಟಡದ ಪಕ್ಕದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದಿದೆ. ಕಬ್ಬನ್ ಪಾರ್ಕ್‌ನ ಇತರ ಪಾರ್ಕಿಂಗ್ ಪ್ರದೇಶಗಳಿಗೆ ಅಸ್ತಿತ್ವದಲ್ಲಿರುವ ದರಗಳ ಪುಕಾರ ಪಾವತಿ ಆಧಾರದ ಮೇಲೆ ವಾಹನಗಳನ್ನು ಪಾರ್ಕಿಂಗ್ ಮಾಡಬಹುದಾಗಿದ್ದು, ಈ ಪಾರ್ಕಿಂಗ್ ಪ್ರದೇಶವು ಬೆಳಿಗ್ಗೆ 06:00 ರಿಂದ ಸಂಜೆ 06:30 ರವರೆಗೆ ವಾಹನಗಳನ್ನು ಪಾರ್ಕಿಂಗ್ ಮಾಡಲು ಮುಕ್ತವಾಗಿರುತ್ತದೆ ಎಂದು ಹೇಳಿದೆ. ಕಬ್ಬನ್ ಉದ್ಯಾನವನಕ್ಕೆ ಭೇಟಿ ನೀಡುವವರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತಾ, ಕಬ್ಬನ್ ಉದ್ಯಾನವನಕ್ಕೆ ಹೋಗುವ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ತಪ್ಪಿಸಲು ಕೋರಿದ್ದಾರೆ.…

Read More