Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆಯಾಗಿದೆ. ಇದಕ್ಕೆ ತಯಾರಿಯಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಸರ್ಕಾರಿ ವಸತಿ ಗೃಹ ತೆರವಿಗೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದಂತ ಸಿ.ಎಸ್ ಷಡಕ್ಷರಿ ಅವರು ಈ ಹಿಂದೆ ಶಿವಮೊಗ್ಗದ ಲೆಕ್ಕಾಧಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸರ್ಕಾರಿ ವಸತಿ ಗೃಹದಲ್ಲಿ ವಾಸವಾಗಿದ್ದರು. ಶಿವಮೊಗ್ಗದಿಂದ ಕೋಲಾರಕ್ಕೆ ಅವರನ್ನು ವರ್ಗಾವಣೆಗೊಳಿಸಿದ ನಂತ್ರವೂ, ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಖಾಲಿ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಶಿವಮೊಗ್ಗದಲ್ಲಿನ ಲೋಕೋಪಯೋಗಿ ಇಲಾಖೆ ನೀಡಿದ್ದಂತ ವಸತಿ ಗೃಹವನ್ನು ತೆರವುಗೊಳಿಸುವಂತೆ ಕಾರ್ಯಪಾಲಕ ಎಂಜಿನಿಯರ್ ಸೂಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೂಚನೆಯ ಮೇರೆಗೆ ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಸಿಎಸ್ ಷಡಕ್ಷರಿ ತೆರವುಗೊಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/whoever-contests-channapatna-by-election-i-will-be-the-candidate-dk-shivakumar/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: “ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ನಮ್ಮ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಶನಿವಾರದಂದು ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯವೇನು ಎಂದು ಕೇಳಿದಾಗ, “ಅವರೆಲ್ಲರೂ ನನ್ನ ಜನ. ಪಕ್ಷದಿಂದ ಯಾರು ನಿಲ್ಲುತ್ತಾರೆ ಎಂದು ನೋಡಬೇಡಿ. ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ. ವಿರೋಧ ಪಕ್ಷದ ನಾಯಕರು ಹೆದರಿ ಶರಣಾಗುತ್ತಿದ್ದಾರೆ. ಅವರು ಅಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ರಾತ್ರಿಯೆಲ್ಲಾ ಸಭೆಗಳು ನಡೆದಿವೆ. ಜೆಡಿಎಸ್ ನವರೇ ಸೀಟು ಬಿಟ್ಟುಕೊಡುತ್ತಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದರು. ಅದು ಎಷ್ಟು ಸತ್ಯವೋ ನನಗೆ ಗೊತ್ತಿಲ್ಲ. ಇರಲಿ, ಅವರು ಏನಾದರೂ ಮಾಡಿಕೊಳ್ಳಲಿ” ಎಂದು ತಿಳಿಸಿದರು. ಮೈತ್ರಿಯಿಂದ ಯಾರಾದರೂ ಅಚ್ಚರಿ ಅಭ್ಯರ್ಥಿ ನಿಮ್ಮ…

Read More

ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ಬೆಂಗಳೂರಿನ ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ಹೆಲ್ತ್ ಟೂರಿಸಮ್ ಗೆ ಉತ್ತೇಜನ ನೀಡವತ್ರ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಸಚಿವರು, ಹೆಲ್ತ್ ಟೂರಿಸಮ್ ಬೆಳೆಸಲು ಸರ್ಕಾರದಿಂದ ಆಗಬೇಕಾಗಿರುವ ಕಾರ್ಯಗಳ ಕುರಿತು ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರಿಗೆ ಜನರು ಬರುತ್ತಾರೆ. ಇಲ್ಲಿಗೆ ಬರುವ ಜನರಿಗೆ ಇಲ್ಲಿಯ ಅತ್ಯಾದುನಿಕ ಆರೋಗ್ಯ ಸೌಲಭ್ಯಗಳು, ಹಾಗೂ ಚಿಕಿತ್ಸೆ ಬಗ್ಗೆ ಒಂದು ಭರವಸೆ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳ ಗುಣಮಟ್ಟದ ಚಿಕಿತ್ಸೆ ಕುರಿತು ಸರ್ಕಾರ ಸರ್ಟಿಫೈ ಮಾಡುವ ಕ್ರಮಗಳು ಆಗಬೇಕಿದೆ. ಸರ್ಕಾರದಿಂದ ಈ ರೀತಿಯ ಕ್ರಮಗಳನ್ನ ತೆಗೆದುಕೊಂಡಾಗ ಜನರಿಗೆ ವಿಶ್ವಾಸ…

Read More

ಬೆಂಗಳೂರು: ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐದು ಸ್ಥಳಗಳನ್ನು ಗುರುತಿಸಲಾಗಿದ್ದು, ಇನ್ನೊಂದು ವಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. https://twitter.com/KarnatakaVarthe/status/1847651210276311499 ರಾಜ್ಯದಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಈಗಾಗಲೇ ತೀರ್ಮಾನಿಸಲಾಗಿದೆ ಎನ್ನುವ ವರದಿಗಳಿಗೆ ಆಧಾರವಿಲ್ಲ. ಡಾಬಸಪೇಟೆ, ನೆಲಮಂಗಲ, ಬಿಡದಿ, ಹಾರೋಹಳ್ಳಿ ಸೇರಿದಂತೆ ಒಟ್ಟು ಐದು ಸ್ಥಳಗಳನ್ನು ನಾವು ಮುಕ್ತವಾಗಿ ಇಟ್ಟುಕೊಂಡಿದ್ದೇವೆ. ಇವತ್ತು ಇನ್ನೂ ಒಂದು ಸ್ಥಳದ ಬಗ್ಗೆ ಯೂ ಚರ್ಚೆ ಆಗಿದೆ. ಇವುಗಳ ಬಗ್ಗೆ ವಸ್ತುಸ್ಥಿತಿ ಆಧರಿಸಿ ಮತ್ತು ಸಾಧಕ-ಬಾಧಕಗಳನ್ನು ಗಮನಿಸಿ, ವರದಿ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನೊಂದು ವಾರದಲ್ಲಿ ಮತ್ತೊಂದು ಸುತ್ತು ಸಭೆ ಸೇರಿ, ಸ್ಥಳವನ್ನು ಆಖೈರುಗೊಳಿಸಲಾಗುವುದು’ ಎಂದು ವಿವರಿಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಸ್ಥಳ ಆಯ್ಕೆ ಮಾಡುವಲ್ಲಿ ಯಾರಿಗೂ ರಾಜಕೀಯ ಹಿತಾಸಕ್ತಿಗಳೇನಿಲ್ಲ. ಬೆಂಗಳೂರಿನ ಜನತೆಗೆ ಮತ್ತು ಉದ್ಯಮಿಗಳ ಅನುಕೂಲವಷ್ಟೇ ಇಲ್ಲಿ ಮುಖ್ಯ. ಇದರಿಂದ ನಮ್ಮ ಆರ್ಥಿಕ ಬೆಳವಣಿಗೆಗೆ ಒಳ್ಳೆಯ ಕೊಡುಗೆ ಬರಬೇಕು. ಇದರ ಜೊತೆ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅಂತಿಮವಾಗಿ…

Read More

ಬೆಂಗಳೂರು: ಶಿಕ್ಷಣ ಫೌಂಡೇಶನ್‌ ಮತ್ತು ಮೈಕ್ರೋಸಾಫ್ಟ್‌ ರಿಸರ್ಚ್‌ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್‌ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1847650325387416059 ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ನಿಟ್ಟಿನಲ್ಲಿ “ಶಿಕ್ಷಣ ಕೋಪೈಲಟ್” ಆರ್ಟಿಫಿಷಿಯಲ್ ಇಂಟಲಿಜೆನ್ಸ್ (AI) ಚಾಲಿತ ಡಿಜಿಟಲ್ ಸಂಶೋಧನಾ ಯೋಜನೆ ಜಾರಿಮಾಡಲಾಗಿದೆ. ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ “ಶಿಕ್ಷಣ ಫೌಂಡೇಶನ್” ಮತ್ತು “ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ” ನಡುವಿನ ಸಹಯೋಗದೊಂದಿಗೆ ಈ ಕಾರ್ಯಕ್ರಮ ತರಲಾಗಿದೆ. ಶಿಕ್ಷಕರು ಮಕ್ಕಳ ಶಕ್ತಿ ಮತ್ತು ದೌರ್ಬಲ್ಯವನ್ನು ಗುರುತಿಸಿ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಆವಿಷ್ಕಾರಗಳನ್ನೂ ತರುವ ಚಿಂತನೆಯ ಕಾರ್ಯಕ್ರಮ ಇದಾಗಿದೆ. ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದ್ದು ಸ್ಥಳೀಯ ಪಠ್ಯಕ್ರಮ, ಭಾಷೆ, ಸಂದರ್ಭವನ್ನು ಆಧರಿಸಿ ಸಮಗ್ರ…

Read More

ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಸಂಹಿತೆಯನ್ವಯ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. https://kannadanewsnow.com/kannada/karnataka-assembly-bypolls-bjp-announces-candidates-for-sandur-shiggaon/ https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/

Read More

ಬೆಂಗಳೂರು: ಶಿಗ್ಗಾವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಲಾಗಿತ್ತು. ಈ ಮೂರು ಕ್ಷೇತ್ರಗಳಲ್ಲಿ ಎರಡು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಪಕ್ಷದಿಂದ ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ಕೇಂದ್ರ ಬಿಜೆಪಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ. ವಯನಾಡಿನ ಒಂದು ಕ್ಷೇತ್ರ, ಅಸ್ಸಾಂನ ಮೂರು, ಬಿಹಾರದ ಎರಡು, ಛತ್ತೀಸ್ ಗಡದ ಒಂದು, ಕರ್ನಾಟಕದ ಶಿಗ್ಗಾವಿಯ ವಿಧಾನಸಭಾ ಉಪ ಚುನಾವಣೆಗೆ ಭರತ್ ಬಸವರಾಜ ಬೊಮ್ಮಾಯಿ ಹಾಗೂ ಸಂಡೂರು ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನೂ ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ್ದರೇ, ಮಧ್ಯಪ್ರದೇಶದ ಎರಡು, ರಾಜಸ್ಥಾನದ 6 ಕ್ಷೇತ್ರಗಳು ಪಶ್ಚಿಮ ಬಂಗಾಳದ 6 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಿಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಶಿಗ್ಗಾವಿಯಿಂದ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಟಿಕೆಟ್ ನೀಡಲಾಗಿದೆ. ಇಂದು ವಿಧಾನಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಸಂಡೂರು ಕ್ಷೇತ್ರ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಿದ್ದರೇ,  ಶಿಗ್ಗಾಂವಿ ಕ್ಷೇತ್ರ ಭರತ್ ಬಸವರಾಜ್ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. https://kannadanewsnow.com/kannada/ramesh-babu-writes-to-cm-to-release-scholarships-to-brahmin-students-in-the-state/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/

Read More

ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ 2023-24ನೇ ಸಾಲಿನ ವಿದ್ಯಾರ್ಥಿ ವೇತನವನ್ನು ತಾಂತ್ರಿಕ ಕಾರಣ ನೀಡಿ ಪಾವತಿ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಉಂಟಾಗಿದೆ. ಕೂಡಲೇ ರಾಜ್ಯದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡುವಂತೆ ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದು ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಮನವಿ ಮಾಡಿದ್ದಾರೆ. ಇಂದು ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಮುಖಾಂತರ ಪ್ರತಿ ವರ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಯನ್ನು ಕರೆಯಲಾಗುತ್ತದೆ. 2023-24ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳಾದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಪೋರ್ಟಲ್ ಮುಖಾಂತರ ಅರ್ಜಿಗಳನ್ನು ಕರೆಯಲಾಗಿತ್ತು. ನಿಯಮಾನುಸಾರ ಆನ್ಲೈನ್ ಮುಖಾಂತರ ಜನವರಿ/ಫೆಬ್ರವರಿ 2023ರಲ್ಲಿ…

Read More

ಬೆಂಗಳೂರು: ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಾಳೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ. ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ,…

Read More