Author: kannadanewsnow09

ಕೆಎನ್ಎನ್ ಸಿನಿಮಾ ಡೆಸ್ಕ್: ಬಿಗ್ ಬಾಸ್ ಕನ್ನಡ 11ಗೆ ವೇದಿಕೆ ಸಿದ್ಧವಾಗಿದೆ. ಈ ಸ್ಪರ್ಧೆಗಾಗಿ ದೊಡ್ಮನೆ ಕೂಡ ಸಿದ್ದಗೊಂಡಿದೆ. ಈ ಬಾರಿಯ ಸ್ವರ್ಗ ಮತ್ತು ನರಕ ಅನ್ನೋ ಎರಡು ಥೀಮ್ ಗಳೊಂದಿಗೆ ಬಿಗ್ ಬಾಸ್ ಆಟ ಶುರುವಾಗಲಿದೆ. ಹಾಗಾದ್ರೇ ಬಿಗ್ ಬಾಸ್ ಮನೆ ಹೇಗಿಗೆ ಎನ್ನುವ ಬಗ್ಗೆ ಮೇಕಿಂಗ್ ವೀಡಿಯೋ ಔಟ್ ಆಗಿದ್ದು, ಆ ಬಗ್ಗೆ ಮುಂದೆ ಓದಿ. ಬಿಗ್ ಬಾಸ್ ಕನ್ನಡ 11ನೇ ಸೀಸನ್ ಮನೆಯ ತೆರೆಯ ಹಿಂದೆ ಹೇಗಿರಲಿದೆ ಎನ್ನುವ ಝಲಕ್ ರಿವೀಲ್ ಆಗಿದೆ. ಈ ಬಾರಿ ಸ್ವರ್ಗ ಮತ್ತು ನರಕ ಎನ್ನುವ ಥೀಮ್ ನೊಂದಿಗೆ ದೊಡ್ಮನೆಯ ಆಟ ಶುರುವಾಗಲಿದೆ. ಬಿಗ್ ಬಾಸ್ ಮನೆಗೆ ಯಾರೆಲ್ಲ ಸೇರಲಿದ್ದಾರೆ ಎನ್ನುವ ಬಗ್ಗೆ ಇನ್ನೂ ರಿವೀಲ್ ಆಗಿಲ್ಲ. ಆ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಇದೆಲ್ಲದರ ನಡುವೆ ಬಿಗ್ ಬಾಸ್ ತಂಡ ದೊಡ್ಡ ಮಟ್ಟದಲ್ಲಿ ಮನೆಯ ತಯಾರಿ ನಡೆದಿದ್ದು, ವಾಹಿನಿಯು ಹೇಗೆ ಬಿಗ್ ಬಾಸ್ ಮನೆ ರಚನೆಯಾಗುತ್ತಿದೆ ಎನ್ನುವಂತ ವೀಡಿಯೋವನ್ನು ರಿಲೀಸ್…

Read More

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ದೂರು ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರುದಾರ ಸ್ನೇಹಮಹಿ ಕೃಷ್ಣ ಅವರು ಇಡಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಇಡಿ ಸಂಕಷ್ಟ ಕೂಡ ಎದುರಾದಂತೆ ಆಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದರನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು. ಈ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿತ್ತು. ಅದರಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅವರ ಪತ್ನಿ ಹಾಗೂ ಭಾಮೈದ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/mangaluru-bmw-car-catches-fire-in-mangaluru/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/

Read More

ಪೂರ್ವ ಜನ್ಮದ ಕರ್ಮ ಫಲ ಈ ಜನ್ಮದಲ್ಲಿ ಪಡೆದಿರುವ ಪ್ರತಿಫಲ. ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…

Read More

ಮಂಗಳೂರು: ನಗರದಲ್ಲಿ ನಡು ರಸ್ತೆಯಲ್ಲೇ ಐಷಾರಾಮಿ ಕಾರಾಗಿರುವಂತ ಬಿಎಂಡಬ್ಲ್ಯೂ ಕಾರೊಂದು ಧಗಧಗಿಸಿ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಮಂಗಳೂರಿನ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಸಮೀಪದಲ್ಲಿ ಗುರುದೀಪ್ ಎಂಬುವರಿಗೆ ಸೇರಿದಂತ ಬಿಎಂಡಬ್ಲ್ಯೂಕಾರೊಂದು ದಿಢೀರ್ ಬೆಂಕಿಯಿಂದ ಹೊತ್ತಿ ಉರಿದಿದೆ. ದೆಹಲಿಯ ನೋಂದಣಿ ಹೊಂದಿದ್ದಂತ ಕಾರು ಇದಾಗಿದ್ದು, ಸರ್ವೀಸ್ ಮಾಡಿಸಲು ಗ್ಯಾರೇಜಿಗೆ ತರುತ್ತಿದ್ದಂತ ವೇಳೆಯಲ್ಲಿ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ನಡು ರಸ್ತೆಯಲ್ಲೇ ನಿಲ್ಲಿಸಿ, ಗುರುದೀಪ್ ಹೊರ ಓಡಿ ಬಂದ ಕಾರಣ, ಕ್ಷಣಾರ್ಧದಲ್ಲಿ ಕಾರು ಧಗಧಗಿಸಿ ಹೊತ್ತಿ ಉರಿದಿದೆ. ಕೂಡಲೇ ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ವೇಳೆಗಾಗಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳದಲ್ಲಿದ್ದಂತ ಜನರು ನಡು ರಸ್ತೆಯಲ್ಲೇ ಕಾರು ಧಗಧಗಿಸಿ ಹೊತ್ತಿ ಉರಿದಿದ್ದರಿಂದ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ. ಕಾರು ಹೊತ್ತಿ ಉರಿಯಲು ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಆದರೇ ಈ ಬಗ್ಗೆ ಹೆಚ್ಚಿನ ತನಿಖೆಯ ನಂತ್ರ ನಿಖರ ಮಾಹಿತಿ ತಿಳಿಯಬೇಕಿದೆ. https://kannadanewsnow.com/kannada/reliances-fresh-pick-store-opens-at-1mg-mall-in-bengaluru/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/

Read More

ಬೆಂಗಳೂರು : ರಿಲಯನ್ಸ್ ರೀಟೇಲ್‌ನ ಪ್ರಮುಖ ದಿನಸಿ ಮಳಿಗೆಯ ಬ್ರ್ಯಾಂಡ್ ಫ್ರೆಶ್‌ಪಿಕ್, ಬೆಂಗಳೂರಿನಲ್ಲಿ ತನ್ನ ಮೊದಲ ಮಳಿಗೆ ಪ್ರಾರಂಭಿಸುತ್ತಿದೆ. ಟ್ರಿನಿಟಿ ವೃತ್ತದ 1ಎಂಜಿ ಮಾಲ್‌ನ 4ನೇ ಮಹಡಿಯಲ್ಲಿ ಹೊಸ ಮಳಿಗೆ ಸಜ್ಜಾಗಿದೆ. ಫ್ರೆಶ್‌ಪಿಕ್ ಬ್ರ್ಯಾಂಡ್‌ ಭಾರತದಲ್ಲಿ ತೆರೆಯುತ್ತಿರುವ ಎರಡನೇ ಮಳಿಗೆ ಇದಾಗಿದೆ. ಮುಂಬೈನಲ್ಲಿ ಮೊದಲ ಮಳಿಗೆಯು ಅಭೂತಪೂರ್ವ ಯಶಸ್ಸು ಕಂಡ ಬಳಿಕ ಬೆಂಗಳೂರಿನಲ್ಲಿ ಎರಡನೇ ಮಳಿಗೆ ತೆರೆಯಲಾಗುತ್ತಿದೆ. 1ಎಂಜಿ ಮಾಲ್‌ನಲ್ಲಿ ಇರುವ ಹೊಸ ಮಳಿಗೆಯು 14,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಸಾಟಿಯಿಲ್ಲದ ಉತ್ತಮ ಶಾಪಿಂಗ್ ಅನುಭವವನ್ನು ಈ ಮಳಿಗೆ ನೀಡುತ್ತದೆ. ಆಹಾರ ಪ್ರಿಯರು ಮತ್ತು ಆರೋಗ್ಯ ಪ್ರಜ್ಞೆಯುಳ್ಳ ಗ್ರಾಹಕರ ಪರಿಷ್ಕೃತ ರುಚಿಯನ್ನು ಪೂರೈಸುವ ನಿಟ್ಟಿನಲ್ಲಿ ಇದನ್ನು ವಿನ್ಯಾಸಗೊಳಿಸಲಾಗಿದೆ. ಈ ಹೊಸ ಫ್ರೆಶ್‌ಪಿಕ್ ಸ್ಟೋರ್ ಪ್ರಮುಖ ದಿನಸಿ ತಾಣವಾಗಲು ಸಜ್ಜಾಗಿದೆ. ಗ್ರಾಹಕರು ಅದ್ಭುತವಾದ “ಶಾಪಿಂಗ್ ಥಿಯೇಟರ್” ಅನುಭವಗಳನ್ನು ಕಾಣಬಹುದು – ಇದು ವ್ಯಾಪಕ ಶ್ರೇಣಿಯ ಲೈವ್ ಫುಡ್ ಸ್ಟೇಷ‌ನ್ ಗಳನ್ನು ನೀಡುವ ನವೀನ ಪರಿಕಲ್ಪನೆಯಾಗಿದೆ. ಕ್ಯುರೇಟೆಡ್ ಪಾಕಶಾಲೆಯ ಅನುಭವಗಳ ಅನನ್ಯ ಸಮ್ಮಿಳನವನ್ನು…

Read More

ಕೋಲಾರ: ನಗರದ ಹೊರವಲಯದ ನಂದಿನಿ ಪ್ಯಾಲೇಸ್ ನಲ್ಲಿ ಇಂದು ಕಾಂಗ್ರೆಸ್ ಸಭೆ ನಡೆಯುತ್ತಿತ್ತು. ಈ ಸಭೆಯಲ್ಲಿ ಮುಖಂಡರ ನಡುವೆ ಪರಸ್ಪರ ಗದ್ದಲ, ಕೋಲಾಹಲ ಉಂಟಾಗಿ, ಆ ಬಳಿಕ ಮಾರಾಮಾರಿ ನಡೆದಿರುವಂತ ಘಟನೆ ನಡೆದಿದೆ. ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಇಂದು ನಡೆಯುತ್ತಿದ್ದಂತ ಕಾಂಗ್ರೆಸ್ ಸಭೆಯಲ್ಲಿ ರಮೇಶ್ ಕುಮಾರ್ ಸೇರಿದಂತೆ ಕೆಲವರಿಗೆ ಸಭೆಗೆ ಆಹ್ವಾನಿಸಿಲ್ಲ ಎಂಬುದಾಗಿ ಗಲಾಟೆ ಶುರುವಾಗಿತ್ತು. ಕಾಂಗ್ರೆಸ್ ಶಾಸಕರ ಎದುರೇ ಪರಸ್ಪರ ತಳ್ಳಾಟ ನೂಕಾಟ ಕೂಡ ವಾಗ್ವಾದದ ಬಳಿಕ ಉಂಟಾಗಿತ್ತು. ಗಲಾಟೆ ತಾರಕಕ್ಕೇರಿದ ನಂತ್ರ ಪರಸ್ಪರ ಗುಂಪುಗಳ ಮಧ್ಯೆ ಮುಖಂಡರು ಕೈಕೈ ಮಿಲಾಯಿಸಿಕೊಂಡಿದ್ದಾರೆ. ಶಾಸಕರ ಸಮ್ಮುಖದಲ್ಲಿಯೇ ಮಾರಾಮಾರಿ ನಡೆದಿದೆ. ಕೆಹೆಚ್ ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದ ನಂತ್ರ, ಈ ಗಲಾಟೆ, ಮಾರಾಮಾರಿ ನಡೆದಿದೆ ಎನ್ನಲಾಗಿದೆ. ಈ ವೇಳೆಯಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಕಾಂಗ್ರೆಸ್ ಮುಖಂಡರನ್ನು ಸಮಾಧಾನಿಸಿದರು. https://kannadanewsnow.com/kannada/ips-officer-m-chandrasekhar-exposes-a-series-of-irregularities/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/

Read More

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಸರಮಾಲೆಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಎಳೆಎಳೆಯಾಗಿ ಬಿಡಿಸಿಟ್ಟರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ದಾಖಲೆಗಳ ಸಮೇತ ಮಾತನಾಡಿದ ಅವರು; ಅಧಿಕಾರಿ ಚಂದ್ರಶೇಖರ್, ವಿಜಯ್ ತಾತಾ ಕುಮ್ಮಕ್ಕಾಗಿ ಮಾಡಿರುವ ಅಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಚಂದ್ರಶೇಖರ ಸಾಧನೆ ಏನು? ಪೊಲೀಸ್ ಇಲಾಖೆಯಲ್ಲಿ ದರೋಡೆಕೋರರು ಇದ್ದಾರೆ ಎಂದು ಹೇಳಿದ್ದೆ. ಅದಕ್ಕೆ ಒಂದು ಉದಾಹರಣೆ ಕೊಡುತ್ತೇನೆ ನೋಡಿ… ದೆಹಲಿಯಲ್ಲಿ PACL ಎಂಬ ಕಂಪನಿ ಇದೆ. ಭೂಮಿ ಖರೀದಿಸಿ ಲ್ಯಾಂಡ್ ಬ್ಯಾಂಕ್ ಮಾಡುವ ಕೆಲಸ ಇದು ಮಾಡುತ್ತದೆ. ಎರಡು ಲಕ್ಷ ಕೋಟಿ ಆಸ್ತಿಯನ್ನು ಕಂಪನಿ ಹೊಂದಿತ್ತು. ವಿಜಯ್ ತಾತಾ ಎಂಬವರು ಖಾಸಗಿ ವಾಹಿನಿ ನಡೆಸುತ್ತಿದ್ದರು. ಆ ವಾಹಿನಿ ಮುಚ್ಚಿ ಹೋಯಿತು, ಈಗ ಮತ್ತೊಂದು ಖಾಸಗಿ ಚಾನಲ್‌ ಇಟ್ಟಿಕೊಂಡು ಫೋರ್ಜರಿ ಮಾಡಲಾಗಿದೆ. ಆ ಇಡೀ ಹಗರಣಕ್ಕೆ ಈ ಚಂದ್ರಶೇಖರ ಗಾಡ್ ಫಾದರ್! 2023 ಫೆಬ್ರುವರಿಯಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ದೂರು ಕೊಡಲಾಗುತ್ತದೆ. ಹಣ…

Read More

ಬೆಂಗಳೂರು: ಪ್ರಿಯಕರನ ಮೊಬೈಲ್ ನಲ್ಲಿದ್ದಂತ ತನ್ನ ಖಾಸಗಿ ಪೋಟೋ, ವೀಡಿಯೋ ಡಿಲೀಟ್ ಮಾಡೋ ಸಲುವಾಗಿ ಚಾಲಾಕಿ ಪ್ರಿಯತಮೆಯೊಬ್ಬಳು ಆತನ ಮೊಬೈಲ್ ರಾಬರಿ ಮಾಡಿಸಿ, ತಗಲಾಕಿಕೊಂಡ ಘಟನೆ ಬೆಂಗಳೂರಲ್ಲಿ ನಡೆದಿದೆ. ಪ್ರಿಯಕರನನ್ನೇ ರಾಬರಿ ಮಾಡಿದಂತ ಪ್ರಿಯತಮೆ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಂತ ಶೃತಿ ಎಂಬಾಕೆ ಪ್ರಿಯಕರ ವಂಶಿಕೃಷ್ಣನನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಕೆಲ ದಿನಗಳಿಂದ ಅವರಿಬ್ಬರ ನಡುವೆ ವೈಮನಸ್ಸು ಉಂಟಾಗಿ ದೂರಾಗುವಂತ ಪ್ಲಾನ್ ಮಾಡಿದ್ದಳು. ಆದರೇ ವಂಶಿಕೃಷ್ಣ ಮೊಬೈಲ್ ನಲ್ಲಿ ಆಕೆಯ ಖಾಸಗಿ ಪೋಟೋ, ವೀಡಿಯೋಗಳು ಇದ್ದವು. ಅವುಗಳನ್ನು ಡಿಲಿಟ್ ಮಾಡುವಂತ ಪ್ಲಾನ್ ಮಾಡಿದ್ದಳು. ಈ ಕಾರಣದಿಂದಲೇ ಸೆಪ್ಟೆಂಬರ್.20ರಂದು ವಂಶಿಕೃಷ್ಣ ಭೇಟಿಯಾಗುವಂತೆ ಟೆಕ್ಕಿ ಸೂಚಿಸಿದ್ದರು. ಆಕೆಯ ಸೂಚನೆಯಂತೆ ಕಾರಿನಲ್ಲಿ ವಂಶಿಕೃಷ್ಣ ತೆರಳುತ್ತಿದ್ದಾಗ ಆತನ ಕಾರಿಗೆ ಬೈಕ್ ನಲ್ಲಿ ಬಂದಂತವರು ತಾಗಿಸಿ ಕಿರಿಕ್ ತೆಗೆದಿದ್ದರು. ಈ ಗಲಾಟೆಯಲ್ಲಿ ವಂಶಿಕೃಷ್ಣ ಅವರ ಒಂದೂವರೆ ಲಕ್ಷ ಬೆಲೆಯ ಮೊಬೈಲ್ ಪೋನ್ ರಾಬರಿ ಮಾಡಿದ್ದರು. ರಾಬರಿ ಮಾಡಿದ್ದಂತ ಮೊಬೈಲ್ ನಲ್ಲಿದ್ದಂತ ಟೆಕ್ಕಿ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು; ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ ಶಾಸಕರು, ಸಚಿವರು ಇದನ್ನೇ ಮಾಡುತ್ತಿದ್ದಾರೆ ಎಂದು ಅವರು ದೂರಿದರು. ಕಾಂಗ್ರೆಸ್ ನಾಯಕರದ್ದು ಹಂಸರಾಜ್ ಭಾರಧ್ವಾಜ್ ಅವರು ರಾಜ್ಯಪಾಲರು ಆಗಿದ್ದ ವೇಳೆ ಒಂದು ವರಸೆ, ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯಪಾಲರಾಗಿರುವ ವೇಳೆ ಇನ್ನೊಂದು ವರಸೆ. ಅದಕ್ಕೆ ಇಲ್ಲಿದೆ ನೋಡಿ ಸಾಕ್ಷಿ ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ರಾಜ್ಯಪಾಲರ ಹೊಣೆಗಾರಿಕೆ ಬಗ್ಗೆ ನೀಡಿದ್ದ ಹೇಳಿಕೆಯನ್ನು ಮಾಧ್ಯಮಗೋಷ್ಠಿಯಲ್ಲಿ ಪ್ರದರ್ಶಿಸಿದರು. ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ…

Read More

ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಆರೋಪದಲ್ಲಿ ವ್ಯಕ್ತಿಯೊಬ್ಬರು ನೀಡಿದಂತ ದೂರಿನ ಅನ್ವಯ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನ ತಿಲಕ್ ನಗರದಲ್ಲಿ ಆದರ್ಶ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಪೊಲೀಸರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಎ1 ಆರೋಪಿಯಾಗಿ, ಎ2 ಆರೋಪಿಯಾಗಿ ಇಡಿ, ಎ3 ಆರೋಪಿಯಾಗಿ ಬಿಜೆಪಿ ಪದಾಧಿಕಾರಿಗಳು, ಎ4 ಆರೋಪಿಯಾಗಿ ನಳೀನ್ ಕುಮಾರ್ ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳನ್ನು ಎ5 ಆರೋಪಿಯಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿದೆ. ಆದರ್ಶ್ ಅಯ್ಯರ್ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ತಿಲಕ್ ನಗರದಲ್ಲಿ ಐಪಿಸಿ ಸೆಕ್ಷನ್ 384, 120ಬಿ, 34ರಡಿ ಪ್ರಕರಣ ದಾಖಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. https://kannadanewsnow.com/kannada/breaking-muslims-say-hum-paanch-hamara-punchis-mla-yatnal/ https://kannadanewsnow.com/kannada/that-mother-never-came-out-she-was-innocent-what-ks-eshwarappa-said-about-cms-wife-parvathi/

Read More