Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಆನ್ ಲೈನ್ ಹಾಗೂ ಆಪ್ ಲೈನ್ ಗ್ಯಾಬ್ಲಿಂಗ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್, ಮತ್ತೆ 6 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಡಿ ಅಧಿಕಾರಿಗಳಿಂದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಆರೋಪದಡಿ ಬಂಧಿಸಲಾಗಿತ್ತು. ಬಂಧಿತ ಆರೋಪಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಇಡಿ ಅಧಿಕಾರಿಗಳು ಹಾಜರುಪಡಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಬಂಧಿಸುವಾಗ ಆರೋಪಿ ವಿರುದ್ಧ ಯಾವ ಕೇಸ್ ಗಳನ್ನ ಉಲ್ಲೇಖಿಸಿದ್ದೀರಿ? ಎಂಬುದಾಗಿ ಇಡಿ ಅಧಿಕಾರಿಗಳಿಗೆ ನ್ಯಾಯಾಧೀಶರು ತರಾಟೆಗೆ ತೆಗೆದುಕೊಂಡರು. 2011ರ ಕೇಸ್ ರದ್ದಾಗಿದೆ. 2016ರ ಸಿಬಿಐ ಕೇಸ್ ಸಹ ಕ್ಲೋಸ್ ಆಗಿದೆ. ಯಾವ ಪ್ರಕರಣ ಆಧರಿಸಿ ಇಸಿಐಆರ್ ದಾಖಲಿಸಿದ್ದೀರಿ ಎಂಬುದಾಗಿ ಇಡಿ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಮೂರ್ತಿಗಳು ಕೇಳಿದರು. ಈ…

Read More

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಪಾಲ್ಸ್ ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಯತ್ನಕ್ಕೆ ಮುಂದಾಗಿದ್ದಾನೆ. ಆದರೇ ಆ ವ್ಯಕ್ತಿಯನ್ನು ಮನವೊಲಿಸಿದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್ ಹೆಚ್.ಎನ್ ಅವರು, ಆತ್ಮಹತ್ಯೆ ಯತ್ನದಿಂದ ಪಾರು ಮಾಡಿ, ಬದುಕಿನ ಪಾಠ ಮಾಡಿದ್ದಾರೆ. ಅಲ್ಲದೇ ಜೀವದ ಅಮೂಲ್ಯತೆಯ ಬಗ್ಗೆ ತಿಳಿಹೇಳಿ, ಊರಿಗೆ ಮರಳಿಸುವಂತ ಕೆಲಸವನ್ನು ಮಾಡಿದ್ದಾರೆ. ಆಟೋ ಚಾಲಕ ಸುಳಿವು ಕಳೆದ ಆಗಸ್ಟ್.25, 2025ರಂದು ಮಧ್ಯಾಹ್ನ 1.30ರ ಸುಮಾರಿಗೆ ಆಟೋ ಚಾಲಕ ಶಿಯಾಬ್ ಎಂಬುವರು ಜೋಗ್ ಫಾಲ್ಸ್ ರೌಂಡ್ಸ್ ನಲ್ಲಿದ್ದಂತ ಪೊಲೀಸರಿಗೆ ಒಬ್ಬ ವ್ಯಕ್ತಿ ಜೋಗ್ ಫಾಲ್ಸ್ ಅಪಾಯಕಾರಿ ಸ್ಥಳಗಳ ಬಗ್ಗೆ ವಿಚಾರಿಸಿದಂತ ಮಾಹಿತಿಯನ್ನು ನೀಡಿದ್ದಾರೆ. ಆತ ಆತ್ಮಹತ್ಯೆಗೆ ಮುಂದಾಗಿರುವಂತ ಸುಳಿವು ಅದರೊಂದಿಗೆ ಪೊಲೀಸರಿಗೆ ಸಿಕ್ಕಿದೆ. ಕೂಡಲೇ ಅಲರ್ಟ್ ಆದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್.ಹೆಚ್.ಎನ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ. 20 ದಿನಗಳ ಹಿಂದೆಯೇ ಮನೆ ಬಿಟ್ಟಿದ್ದ ವ್ಯಕ್ತಿ ಆ ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತ ಸಾಲದಿಂದ ಬೇಸತ್ತು ಜೀವನದಲ್ಲಿ ಜಿಗುಪ್ಸೆಯನ್ನು ಬೆಂಗಳೂರು ಮೂಲದ ಬಟ್ಟೆ…

Read More

ಮಂಗಳೂರು: ಇಲ್ಲಿನ ಕರ್ನಾಟಕ-ಕೇರಳ ಗಡಿ ಭಾಗವಾಗಿರುವಂತ ತಲಪಾಡಿಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಒಂದು ಹಿಂದೆ ತೆಗೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿಯಾದ ಪರಿಣಾಮ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಆ ಭಯಾನಕ ಬೆಚ್ಚಿ ಬೀಳಿಸುವಂತ ವೀಡಿಯೋ ಕೆಳಗಿದೆ ನೋಡಿ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕೆ ಎಸ್ ಆರ್ ಟಿ ಸಿ ಬಸ್ ಬ್ರೇಕ್ ಫೇಲ್ ಆದಂತ ಪರಿಣಾಮ, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಿಂತಿದ್ದಂತ ಜನರಿಗೆ ಡಿಕ್ಕಿ ಹೊಡೆದಿದೆ. ಈ ಸಂದರ್ಭದಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದಂತ ಬಾಲಕಿ ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿದ್ದಾರೆ. ಈ ಭೀಕರ ಅಪಘಾತದಲ್ಲಿ ಬಾಲಕಿ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದರೇ, 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.…

Read More

ಬೆಂಗಳೂರು: ನಾಳೆ ರಾಜ್ಯಾಧ್ಯಂತ ಗಾಂಧಿ ಮತ್ತು ನೋಟು ಚಿತ್ರ ಬಿಡುಗಡೆಯಾಗಲಿದೆ. ಇದೊಂದು ಮಕ್ಕಳ ಚಿತ್ರದ ಜೊತೆಗೆ, ಕುಟುಂಬ ಸಮೇತರಾಗಿ ನೋಡುವಂತ ಸಿನಿಮಾವಾಗಿದೆ. ತಪ್ಪದೇ ಎಲ್ಲರೂ ಹೋಗಿ ಚಿತ್ರವನ್ನು ನೋಡಿ, ತಂಡವನ್ನು ಹಾರೈಸುವಂತೆ ಗೀತರಚನಾಕಾರ ಡಾ.ವಿ ನಾಗೇಂದ್ರ ಪ್ರಸಾದ್ ಮನವಿ ಮಾಡಿದ್ದಾರೆ. ಇಂದು ಅವರು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ನಾಳೆ ಗಾಂಧಿ ಮತ್ತು ನೋಟು ಚಿತ್ರ ತೆರೆಕಾಣದಲಿದೆ. ಇದೊಂದು ನೋಟಿನ ಮೇಲೆ ಗಾಂಧಿ ಚಿತ್ರ ಇರಬೇಕೇ ಬೇಡವೇ ಎನ್ನುವಂತ ಕಥಾಹಂತರವನ್ನು ಒಳಗೊಂಡಿದೆ. ಸಂಭಾಷಣಾಕಾರ ಗುರುಪ್ರಸಾದ್ ಅವರು ಕತೆಯನ್ನು ಚೆನ್ನಾಗಿ ನೋಡುಗರನ್ನು ಸೆಳೆಯುವಂತೆ ಹೆಣೆದಿದ್ದಾರೆ. ಶಾರ್ಟ್ ಫಿಲ್ಮ್ ಅನ್ನು ಬಿಗ್ ತೆರೆಗೆ ತಂದಿದ್ದಾರೆ ಎಂದರು. ತಮಾಷೆ, ಎಲ್ಲರಿಗೂ ಇಷ್ಟವಾಗುವಂತ ಕತೆಯಿದೆ. ಮಕ್ಕಳು ತುಂಬಾ ಇಷ್ಟ ಪಡುವಂತೆ ಚಿತ್ರವಿದು. ಮಲೆನಾಡು ಪ್ರದೇಶದಲ್ಲಿ, ಸಾಗರದ ಹಿನ್ನೀರು ಪ್ರದೇಶದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಇದರ ಪ್ರಮುಖ ಪಾತ್ರದಲ್ಲಿ ನನ್ನ ಮಗಳು ದಿವಿಜ ನಾಗೇಂದ್ರ ಪ್ರಸಾದ್ ನಟಿಸಿದ್ದಾಳೆ. ತಂದೆಯಾಗಿ ನನಗೆ ಮಗಳ ನಟನೆ ಬಗ್ಗೆ ಖುಷಿಯಿದೆ. ನಿಮಗೆಲ್ಲ ಮೆಚ್ಚುಗೆಯಾಗುವಂತಿದೆ.…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರರು ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮೀಯರೂ ಭೇಟಿ ಕೊಡುತ್ತಾರೆಂಬುದು ನಮಗೂ ಗೊತ್ತಿದೆ. ಆದರೆ, ಇದು ಹಿಂದೂಗಳಿಗೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆ ಹಿಂದೂಗಳಿಗೆ ಮಾಡಿದ ಅಪಮಾನ; ಇದು ಅಕ್ಷಮ್ಯ ಅಪರಾಧ ಎಂದು ವಿಶ್ಲೇಷಿಸಿದರು. ಡಿ.ಕೆ.ಶಿವಕುಮಾರ್ ಅವರು ಸದನದಲ್ಲಿ ನಮಸ್ತೇ ಸದಾ ವತ್ಸಲೇ ಗೀತೆ ಹೇಳಿದರು. ತಕ್ಷಣ ದೆಹಲಿ ಹೈಕಮಾಂಡಿನ ಒತ್ತಡ ಬಂದು ಕ್ಷಮಾಪಣೆ ಕೇಳುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಹೈಕಮಾಂಡಿನದು ಒಡೆದಾಳುವ ನೀತಿಯ ಸಂಸ್ಕøತಿ. ಹಾಗಾಗಿ ಕಾಂಗ್ರೆಸ್ ಸರಕಾರ…

Read More

ಬೆಳ್ತಂಗಡಿ: ಸುಳ್ಳು ದೂರು ಆರೋಪದಲ್ಲಿ ಯಾವುದೇ ಕ್ಷಣದಲ್ಲಾದರೂ ಸುಜಾತ ಭಟ್ ಅವರನ್ನು ಎಸ್ಐಟಿ ಬಂಧಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್ ವಿರುದ್ಧ ಸುಳ್ಳು ದೂರು ಆರೋಪ ಕೇಳಿ ಬಂದಿತ್ತು. ಸುಳ್ಳು ಸಾಕ್ಷಿ ಸೃಷ್ಟಿ ಆರೋಪದಲ್ಲಿ ಅವರನ್ನು ಎಸ್ಐಟಿ ಬಂಧಿಸಲಿದೆ ಎಂದು ಹೇಳಲಾಗುತ್ತಿದೆ. ನಿನ್ನೆ ಬೆಳ್ತಂಗಡಿಯ ಎಸ್ಐಟಿ ಪೊಲೀಸ್ ಠಾಣೆಗೆ ವಿಚಾರಣೆಗೆ ಸುಜಾತಾ ಭಟ್ ಹಾಜರಾಗಿದ್ದರು. ಈ ಸಂದರ್ಭದಲ್ಲಿ ಅನನ್ಯಾ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪೊಪ್ಪಿಕೊಂಡಿದ್ದರು. ಎಲ್ಲವೂ ಸುಳ್ಳು ಹೇಳಿರೋದಾಗಿ ತಪ್ಪೊಪ್ಪಿಕೊಂಡಿದ್ದರು. ಅನನ್ಯಾ ಭಟ್ ಎಂಬ ಮಗಳು ಇಲ್ಲ ಎಂಬುದಾಗಿಯೂ ಸುಜಾತಾ ಭಟ್ ಎಸ್ಐಟಿ ಮುಂದೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ದೂರುದಾರೆ ಸುಜಾತಾ ಭಟ್ ಅವರನ್ನು ಎಸ್ಐಟಿ ಪ್ರಕರಣದಲ್ಲಿ ಸುಳ್ಳು ದೂರು ನೀಡಿದ್ದರಿಂದ ಬಂಧಿಸೋ ಸಾಧ್ಯತೆ ಇದೆ. https://kannadanewsnow.com/kannada/actor-anirudh-met-cm-siddaramaiah-discussion-about-the-opening-of-vishnuvardhans-tomb/ https://kannadanewsnow.com/kannada/mangaluru-five-killed-in-bus-auto-rickshaw-collision-at-ullal-talapady/

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಟ ಅನಿರುದ್ಧ್ ಭೇಟಿಯಾಗಿದ್ದಾರೆ. ಇಂದಿನ ಭೇಟಿಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಕುರಿತಂತೆ ಚರ್ಚೆ ನಡೆಸಿದರು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ನಟ ಅನಿರುದ್ಧ್ ಭೇಟಿಯಾದರು. ಅವರೊಂದಿಗೆ ನಟ ವಿಷ್ಣು ವರ್ಧನ್ ಸಮಾಧಿ ತೆರವು ವಿಚಾರವಾಗಿ ಚರ್ಚಿಸಿದರು. ಅಲ್ಲದೇ ಸಮಾಧಿ ತೆರವಿನ ಹಿಂದಿನ ಕಾರಣ ಸೇರಿದಂತೆ ವಿವಿಧ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದ್ದಾಗಿ ತಿಳಿದು ಬಂದಿದೆ. https://kannadanewsnow.com/kannada/on-the-30th-a-seminar-on-ambedkars-perspective-in-the-media-will-be-held-in-chitradurga/ https://kannadanewsnow.com/kannada/mangaluru-five-killed-in-bus-auto-rickshaw-collision-at-ullal-talapady/

Read More

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಿದೆ. ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್‌ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸಲಿದ್ದಾರೆ. ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಕ್ರಾಂತಿಕಾರಿ ಚಿಂತನೆಗಳು, ಇಂದಿನ ದಿನದಲ್ಲಿಯೂ ಅವುಗಳ ಪ್ರಸ್ತುತತೆ, ಪತ್ರಕರ್ತರಾಗಿ ಅವರ ಕೊಡುಗೆ ಮತ್ತು ಎಲ್ಲರನ್ನು ಒಳಗೊಂಡ ಸಮಾಜ ನಿರ್ಮಾಣಕ್ಕೆ ಮುಂದಿನ ಹಾದಿ ಮುಂತಾದ ವಿಷಯಗಳ ಚರ್ಚೆಗೆ ಈ ವಿಚಾರ ಸಂಕಿರಣವು ವೇದಿಕೆಯಾಗಲಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ಅವರು ತಿಳಿಸಿದ್ದಾರೆ. ಹಿರಿಯ ಪತ್ರಕರ್ತ…

Read More

ಮಂಗಳೂರು: ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಮಂಗಳೂರಿನ ಉಳ್ಳಾಲದ ತಲಪಾಡಿಯ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತ ಸಂಭವಿಸಿದೆ. ಕೆಸಿ ರೋಡ್ ನಿಂದ ತೆರಳುತ್ತಿದ್ದಂತ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕೆಸಿ ರೋಡ್ ಮೂಲದವರೆನ್ನಲಾದಂತ ಐವರು ಮೃತಪಟ್ಟಿರೋದಾಗಿ ಹೇಳಲಾಗುತ್ತಿದೆ. ಮೃತರಲ್ಲಿ ನಾಲ್ವರು ಮಹಿಳೆಯರು, ಮಗು ಕೂಡ ಸೇರಿದೆ. ಆಟೋ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/newspaper-distributors-agents-are-the-backbone-of-journalism-cm-media-advisor-k-v-prabhakar/ https://kannadanewsnow.com/kannada/breaking-big-twist-in-dharmasthala-case-sowjanyas-mother-files-complaint-with-sit-against-masked-man-chinnaiah/

Read More

ಮೈಸೂರು: ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಪ್ರಾಯಪಟ್ಟರು. ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು. ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು. ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ…

Read More