Subscribe to Updates
Get the latest creative news from FooBar about art, design and business.
Author: kannadanewsnow09
ಆಂಧ್ರಪ್ರದೇಶ: ರಾಜ್ಯದಲ್ಲಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತಂತ ಕುಟುಂಬವೊಂದು, ತಮ್ಮ ಅಂಗಡಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಭೀಕರ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಚಿಲುಕುರಿ ಬಟ್ಟೆ ಅಂಗಡಿ ಮುಂದೆಯೇ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಬೆಂಕಿ ಹಚ್ಚಿಕೊಂಡಂತ ಕುಟುಂಬದ ಸದಸ್ಯರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆಯೋ ಅಥವಾ ಬೇರೆ ಕಾರಣಕ್ಕೋ ಎನ್ನುವ ಬಗ್ಗೆ ತನಿಖೆಯ ನಂತ್ರ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/cyber-training-for-state-police-personnel-home-minister-dr-g-parameshwara/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕು ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. 2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ…
ಬೆಂಗಳೂರು: ಕೋರ್ಟ್ ಗೆ ಹಾಜರಾಗುವವರೆಗೂ ನನಗೆ ಊಟ ಕೊಟ್ಟಿಲ್ಲ. ನನಗೆ ಸರಿಯಾಗಿ ನಿದ್ರೆ ಮಾಡೋಕೆ ಬಿಟ್ಟಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಗಾವಿ ಹೀಗೆ ಮಾಡಿದ್ದಾರೆ. ನನಗೆ ಹಿಂಸೆ ಕೊಟ್ಟಿದ್ದಲ್ಲೇ ಕಣ್ಣೀರು ಬರುವಂತೆ ಹೊಡೆದ್ರು. ನನ್ನ ತಂದೆ, ಕುಟುಂಬದವರನ್ನ ಕೂಡ ಬೆದರಿಸುತ್ತಿದ್ದರು. ಅಧಿಕಾರಿಗಳ ವಿರುದ್ಧ ದೂರಿನಲ್ಲಿ ನಟಿ ರನ್ಯಾ ರಾವ್ ಉಲ್ಲೇಖ ಮಾಡಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಆರ್ ಐ ಅಧಿಕಾರಿಗಳ ವಿರುದ್ಧವೇ ದೂರಿನ ಸುರಿಮಳೆ ಮಾಡಿದ್ದಾರೆ. ಅದರಲ್ಲಿ ನನ್ನ ಮುಖಕಕ್ಕೆ 10 ರಿಂದ 15 ಬಾರಿ ಹೊಡೆದಿದ್ದಾರೆ. 40 ಖಾಲಿ ಹಾಳೆಗಳಲ್ಲಿ ಸಹಿ ಮಾಡಿಸಿಕೊಂಡಿದ್ದಾರೆ. ನನ್ನ ತಂದೆಗೂ ಇದಕ್ಕೂ ಸಂಬಂಧವಿಲ್ಲ. ಆದರೂ ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ಒತ್ತಡ ಹಾಕಿ, ಚಿತ್ರ ಹಿಂಸೆ ನೀಡಿದ್ದಾರೆ ಎಂದಿದ್ದಾರೆ. ನನಗೆ ಹೊಡೆದ ಅಧಿಕಾರಿಗಳನ್ನು ನಾನು ಗುರುತಿಸುತ್ತೇನೆ. ನನ್ನ ಹತ್ತಿರ ಖಾಲಿ ಹಾಳೆಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ. ಸಾಕ್ಷ್ಯ ಪತ್ರಗಳಲ್ಲಿ 50 ರಿಂದ 60 ಪುಟಗಳಲ್ಲಿ ಸಹಿ ಮಾಡಿದ್ದೇನೆ. ನನಗೆ ಸರಿಯಾಗಿ…
ಬೆಂಗಳೂರು: ನಗರದ ಜನತೆಗೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ರಾಜಧಾನಿ ಜನತೆಗೆ ಮತ್ತಷ್ಟು ಹೊರೆಯ ತೂಗುಗತ್ತಿ ಎದುರಾಗಿದೆ. ಏಪ್ರಿಲ್ ನಿಂದ ಕಸಕ್ಕೆ ಶುಲ್ಕ ನೀಡಬೇಕು. ನೀರಿನ ದರ 1 ಪೈಸೆ ಕೂಡ ಏರಿಕೆಯಾಗಲಿದೆ. ಹೌದು.. ಬೆಂಗಳೂರಲ್ಲಿ ಮೆಟ್ರೋ, ಬಸ್ ಪ್ರಯಾಣದ ಟಿಕೆಟ್ ದರ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ ಏಪ್ರಿಲ್ ನಿಂದ ಮತ್ತೊಂದು ಹೊರೆ ಹೇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಏಪ್ರಿಲ್ ನಿಂದ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದಕ್ಕೂ ಶುಲ್ಕ ವಸೂಲಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹಿಂದೆಯೂ ಬೆಂಗಳೂರಲ್ಲಿ ಘನತ್ಯಾಜ್ಯ ಸೇವಾ ಶುಲ್ಕ ವಿಧಿಸುವ ಕುರಿತು ಚರ್ಚೆ ನಡೆಸಲಾಗಿತ್ತು. ಆದರೇ ಸಾರ್ವಜನಿಕ ವಲಯದಲ್ಲಿ ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಘನ ತ್ಯಾಜ್ಯ ಸೇವಾ ಶುಲ್ಕವನ್ನು ಕೈಬಿಡಲಾಗಿತ್ತು. ಈಗ ಮತ್ತೆ ಅದು ಮುನ್ನೆಲೆಗೆ ಬಂದಿದೆ. ಇನ್ನೂ 2014ರ ನಂತ್ರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಬೆಂಗಳೂರು…
ನವದೆಹಲಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ 03-03-2025 ರಂದು ಪ್ರಾರಂಭವಾಗುತ್ತದೆ ಮತ್ತು 02-04-2025 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಯು ಎಸ್ಇಸಿಆರ್ ವೆಬ್ಸೈಟ್, secr.indianrailways.gov.in/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಹುದ್ದೆ ಹೆಸರು: ಎಸ್ಇಸಿಆರ್ ಅಪ್ರೆಂಟಿಸ್ ಆನ್ಲೈನ್ ಫಾರ್ಮ್ 2025 ಪೋಸ್ಟ್ ದಿನಾಂಕ: 06-03-2025 ಒಟ್ಟು ಹುದ್ದೆ: 1003 ಸಂಕ್ಷಿಪ್ತ ಮಾಹಿತಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಉದ್ಯೋಗ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಎಸ್ಇಸಿಆರ್ ನೇಮಕಾತಿ 2025 ಅಧಿಸೂಚನೆ ಅವಲೋಕನ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೇಮಕಾತಿ ಪ್ರಕ್ರಿಯೆ, ಅರ್ಹತೆ ಮತ್ತು ಅರ್ಜಿ…
ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರ್ಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1,450 ಎಂ.ಎಲ್.ಡಿ ಯಷ್ಟು ನೀರನ್ನು ಸಂಸ್ಕರಿಸಲಾಗುತ್ತದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ 34 ಎಸ್ಟಿಪಿಗಳನ್ನು ನಿರ್ಮಿಸಲಾಗಿದೆ. ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಎಸ್ಟಿಪಿಗಳಿಂದ ಸಂಸ್ಕರಿಸಲಾಗುವ ನೀರನ್ನು ಬೆಂಗಳೂರು ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಜಲ್ ಹಿ ಅಮೃತ್ ಯೋಜನೆಯ ಅಡಿಯಲ್ಲಿ ದೇಶದ ನಗರಗಳಲ್ಲಿನ ಎಸ್ಟಿಪಿಗಳ ಗುಣಮಟ್ಟ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ನೀಡಿತ್ತು. ಉತ್ತಮ ಮಾನದಂಡಗಳನ್ನು ಅಳವಡಿಸಿಕೊಳ್ಳುವ…
ಬೆಂಗಳೂರು: ಮೈಸೂರು ಎಕ್ಸ್ಪ್ರೆಸ್ವೇಗೆ ಸಂಬಂಧಪಟ್ಟಂತೆ ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವಿವಿಧೆಡೆ ನೀಡಲಾಗಿದ್ದ ಪ್ರವೇಶ ಹಾಗೂ ನಿರ್ಗಮನ ಮಾರ್ಗಗಳನ್ನು ಮುಚ್ಚಲಾಗಿಲ್ಲ ಎಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು, ಅಪಘಾತಗಳ ಹಿನ್ನೆಲೆಯಲ್ಲಿ ತೂಬಿನಕೆರೆ ಬಳಿ ಟೋಲ್ ಬೈಪಾಸ್ ಮಾಡುವ ಸ್ಥಳದಲ್ಲಿ ಟ್ರಕ್ಗಳನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದ್ದಾರೆ. ಬಿಡದಿ, ಮಂಡ್ಯ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ಕೇಂದ್ರಗಳಲ್ಲಿ ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ವೇಗೆ ಸಂಬಂಧಿಸಿದ ಆಗಮನ-ನಿರ್ಗಮನ ಪ್ರವೇಶದ್ವಾರಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ಮುಚ್ಚಿರುವುದು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ದಿನೇಶ್ ಗೂಳಿಗೌಡ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಚಿವರು, ಎನ್ಎಚ್ -275 ರ ಬೆಂಗಳೂರು – ಮೈಸೂರು ವಿಭಾಗದ ತೂಬಿನಕೆರೆ ಬಳಿ ಬೆಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿರುವ ಭಾರಿ ವಾಹನಗಳು ಟೋಲ್ ಪ್ಲಾಜಾವನ್ನು ಬೈಪಾಸ್ ಮಾಡುವ ಸರ್ವಿಸ್ ರಸ್ತೆಯಲ್ಲಿ ನಿರ್ಗಮಿಸುತ್ತಿದ್ದವು.…
ಬೆಂಗಳೂರು: ನಟಿ ರನ್ಯಾ ರಾವ್ ಅವರ ಅಕ್ರಮ ಚಿನ್ನ ಸಾಗಾಟ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖೆ ನಂತ್ರವೇ ಎಲ್ಲಾ ಮಾಹಿತಿ ಗೊತ್ತಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮೊದಲಿಗೆ ಸಿಐಡಿ ತನಿಖೆಗೆ ನಟಿ ರನ್ಯಾ ರಾವ್ ಪ್ರಕರಣ ವಹಿಸಲಾಗಿತ್ತು. ಆದರೇ ಪ್ರತ್ಯೇಕ ತನಿಖೆಗೆ ಸೂಚಿಸಿದ ಕಾರಣ ಸಿಐಡಿ ತನಿಖೆಯನ್ನು ಹಿಂಪಡೆಯಲಾಯಿತು ಎಂದರು. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ತನಿಖೆ ನಡೆಯುತ್ತಿದೆ. ತನಿಖೆಯ ಬಗ್ಗೆ ನಮಗೇನೂ ಮಾಹಿತಿ ಕೊಟ್ಟಿಲ್ಲ. ತನಿಖೆಯ ನಂತ್ರ ಎಲ್ಲಾ ಮಾಹಿತಿ ಗೊತ್ತಾಗುತ್ತದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/jds-protests-against-greater-bengaluru-bill-urges-governor/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು: ರಿಯಲ್ ಎಸ್ಟೇಟ್ ದಂಧೆ ನಡೆಸುವುದು ಹಾಗೂ ಬೆಂಗಳೂರು ನಗರದಲ್ಲಿ ಕನ್ನಡಿಗರನ್ನು ಒಡೆದು ಆಳುವ ದುರುದ್ದೇಶದಿಂದ ಕಾಂಗ್ರೆಸ್ ಸರಕಾರವು ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಹೆಸರಿನಲ್ಲಿ ಏಳು ಭಾಗಗಳನ್ನಾಗಿ ಛಿಧ್ರ ಮಾಡಲು ಹೊರಟಿದೆ ಎಂದು ಜೆಡಿಎಸ್ ಆರೋಪ ಮಾಡಿದೆ. ಗ್ರೇಟರ್ ಬೆಂಗಳೂರು ರಚನೆಯ ವಿರುದ್ಧ ಜೆಡಿಎಸ್ ಕಾರ್ಯರ್ತರು ನಗರದ ಫ್ರೀಡಂ ಪಾರ್ಕ್ ನಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಜೆಡಿಎಸ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು; ಕೇವಲ ಭೂ ದಂಧೆ ನಡೆಸುವ ಏಕೈಕ ಉದ್ದೇಶ ಹಾಗೂ ಬೆಂಗಳೂರಿನಲ್ಲಿಯೇ ಕನ್ನಡಿಗರನ್ನು ಪರಕೀಯರನ್ನಾಗಿ ಮಾಡುವ ದುರುದ್ದೇಶದಿಂದ ಸರಕಾರವು ಗ್ರೇಟರ್ ಬೆಂಗಳೂರು ಮಾಡಲು ಹೊರಟಿದೆ ಎಂದು ಗಂಭೀರ ಆರೋಪ ಮಾಡಿದರು. ಅಲ್ಲದೇ; ವಿಧಾನಮಂಡಲದಲ್ಲಿ ಕಾಂಗ್ರೆಸ್ ಸರಕಾರ ಬೆಂಗಳೂರು ಜನರ ಭಾವನೆಗಳಿಗೆ ವಿರುದ್ಧವಾಗಿ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪಾಸ್ ಮಾಡಿಕೊಂಡಿದೆ. ಗೌರವಾನ್ವಿತ ರಾಜ್ಯಪಾರು ಯಾವುದೇ ಕಾರಣಕ್ಕೂ ಈ ವಿಧೇಯಕಕ್ಕೆ ಸಹಿ ಹಾಕಬಾರದು. ಮತ್ತೂ ಆ ವಿಧೇಯಕವನ್ನು ತಿರಸ್ಕರಿಸಬೇಕು ಎಂದು ಕೋರುತ್ತೇವೆ.…
ಬೆಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧಿಸಲ್ಪಟ್ಟು, ಜೈಲುಪಾಲಾಗಿದ್ದಾರೆ. ಇತ್ತ ನಟಿ ರನ್ಯಾ ರಾವ್ ಅವರ ಕಾರು ಚಾಲಕ ದೀಪಕ್ ಎಂಬಾತ ಹಣ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದಂತ ದೀಪಕ್ ಎಂಬಾತನನ್ನು ಪೊಲೀಸರು ಹಣ ಡಬ್ಲಿಂಗ್ ಪ್ರಕರಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿ ದೀಪಕ್ ಚಿಕ್ಕಮಗಳೂರಿನ ಹೊಸಮನೆ ಬಡವಾಣೆಯ ನಿವಾಸಿಯಾಗಿದ್ದಾನೆ. ಈತ ನಟಿ ರನ್ಯಾ ರಾವ್ ಅವರ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸಿದ್ದನು. ಈತನ ವಿರುದ್ಧ ಹಣ ಡಬ್ಲಿಂಗ್ ಆರೋಪದಡಿ ಪ್ರಕರಣ ದಾಖಲಾಗಿದ್ದರಿಂದ ದೀಪಕ್ ನನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/belagavi-municipal-corporation-mangesh-elected-mayor-veena-elected-as-deputy-mayor/ https://kannadanewsnow.com/kannada/breaking-shivamogga-woman-dies-of-electrocution-while-starting-motor/














