Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮಹಿಳೆಯರು ಮನೆ ಕೆಲಸದ ಜೊತೆ ಸಮಾಜದ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮಾದರಿ ಬದುಕು ನಡೆಸುತ್ತಿರುವುದು ಲಾಗಾಯ್ತಿನಿಂದ ನಡೆದುಕೊಂಡು ಬಂದಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸಾಗರ ಹೋಟೆಲ್ ವೃತ್ತದಲ್ಲಿ ಸ್ನೇಹ ಸಾಗರ ಸ್ವಸಹಾಯ ಮಂಡಳಿ ವತಿಯಿಂದ ಸಂಸ್ಥೆಯ 25ನೇ ವರ್ಷದ ಅಂಗವಾಗಿ ಹಮ್ಮಿಕೊಳ್ಳಳಾಗಿದ್ದ ಮ್ಯಾರಥಾನ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಮಹಿಳೆಯರು ಸಮಾಜದ ಸ್ಪೂರ್ತಿಯಾಗಿರುತ್ತಾರೆ. ಕುಟುಂಬ ನಿರ್ವಹಣೆ ಸಮರ್ಥವಾಗಿ ನಿಭಾಯಿಸುವ ಜೊತೆಗೆ ಸಮಾಜಮುಖಿಯಾಗಿ ಯೋಚಿಸುವ ಶಕ್ತಿ ಮಹಿಳೆಯಲ್ಲಿ ಇರುತ್ತದೆ ಎಂದರು. ಸ್ನೇಹಸಾಗರ ಮಹಿಳಾ ಡೊಳ್ಳು ತಂಡವನ್ನು ಕಟ್ಟಿ ಸುಮಾರು 25 ದೇಶಗಳಲ್ಲಿ ಡೊಳ್ಳು ಪ್ರದರ್ಶನ ನೀಡಿದ ಚೂಡಾಮಣಿ ರಾಮಚಂದ್ರ ಅವರ ಸಾಧನೆ ಅನುಕರಣೀಯವಾದದ್ದು. ಸಾಗರದಲ್ಲಿ ಸುಸಜ್ಜಿತವಾದ ಈಜುಕೊಳ ನಿರ್ಮಿಸಲಾಗಿದ್ದು ಮಹಿಳೆಯರು ಈಜು ಕಲಿಯುವುದಾದರೆ ನುರಿತ ಮಹಿಳಾ ಕೋಚ್ ನೇಮಿಸಲಾಗುತ್ತದೆ. ಸಾಗರದಲ್ಲಿ ಜಿಲ್ಲಾಮಟ್ಟದ ಮಹಿಳೆಯರ ಈಜು ಸ್ಪರ್ಧೆ ನಡೆಸಲು ಅಗತ್ಯ ಸಹಕಾರ ನೀಡುವುದಾಗಿ ಎಂದರು. ಈ…
ಶಿವಮೊಗ್ಗ : ಕರ್ನಾಟಕದಲ್ಲಿ ಕನ್ನಡಿಗರಿಗೆ ಐಟಿ ಬಿಟಿ ಕಂಪನಿಗಳಲ್ಲಿ ಶೇ. 90ರಷ್ಟು ಉದ್ಯೋಗ ಕಡ್ಡಾಯಗೊಳಿಸಬೇಕು. ಕನ್ನಡಿಗರಿಗೆ ಉದ್ಯೋಗ ಕಲ್ಪಿಸದ ಐಟಿಬಿಟಿ ಕಂಪನಿಗಳಿಗೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದ್ದಾರೆ. ಶನಿವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ರಂಗಮಂದಿರದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಘಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಾಂಸ್ಕೃತಿಕ ವೈಭವವನ್ನು ಉದ್ಘಾಟಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಿ ಮಾತನಾಡಿದಂತ ಅವರು, ಕರ್ನಾಟಕದ ನೆಲಜಲ ಸಂಪನ್ಮೂಲ ಬಳಸಿಕೊಂಡು ಆದಾಯ ಗಳಿಸುತ್ತಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಡ್ಡಾಯವಾಗಿದೆ. ಶೇ. 90ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ಮೀಸಲಿಡುವ ಕಡ್ಡಾಯ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತರಬೇಕು. ಕನ್ನಡ ನೆಲದಲ್ಲಿರುವ ಕಂಪನಿಗಳಲ್ಲಿ ಕನ್ನಡಿಗರು ಪರಕೀಯರಾಗಿ ಕಳೆದು ಹೋಗಬಾರದು. ಅಧಿವೇಶನದಲ್ಲಿ ಈ ಕುರಿತು ಚರ್ಚೆ ನಡೆಸಿ ಸರ್ಕಾರದ ಮೇಲೆ ಒತ್ತಡ ತರುವುದಾಗಿ ಎಂದರು. ಸಾಂಸ್ಕೃತಿಕವಾಗಿ ಮೈಸೂರಿನ ನಂತರ…
ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಟೀಂಗೆ ಸ್ಪಷ್ಟ ಬಹುಮತವನ್ನು ಪಡೆದಿದೆ. ಬೆಳಗಾವಿಯ ಡಿಸಿಸಿ ಬ್ಯಾಂಕಿಗೆ ಅ.19ರಂದು ಮತದಾನ ನಡೆದಿತ್ತು. ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಹಿನ್ನಲೆಯಲ್ಲಿ ಫಲಿತಾಂಶ ಘೋಷಣೆ ಮಾಡಿರಲಿಲ್ಲ. ಬೆಲಹೊಂಗಲ, ಕಿತ್ತೂರು, ನಿಪ್ಪಾಣಿ, ಹುಕ್ಕೇರಿ ತಾಲ್ಲೂಕಿನ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಬೈಲಹೊಂಗಲ ತಾಲ್ಲೂಕಿನಿಂದ ಮಹಾಂತೇಶ ದೊಡ್ಡಗೌಡರ್ ಆಯ್ಕೆಯಾಗಿದ್ದಾರೆ. ಕಿತ್ತೂರು ತಾಲ್ಲೂಕಿನಿಂದ ನಾನಾಸಾಹೇಬ್ ಪಾಟೀಲ್ ಆಯ್ಕೆಯಾಗಿದ್ದರೇ, ನಿಪ್ಪಾಣಿ ತಾಲ್ಲೂಕಿನಿಂದ ಅಣ್ಣಾಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಹುಕ್ಕೇರಿ ತಾಲ್ಲೂಕಿನಿಂದ ರಮೇಶ್ ಕತ್ತಿ ಆಯ್ಕೆಯಾಗಿದ್ದಾರೆ. https://kannadanewsnow.com/kannada/unable-to-bear-the-burden-of-debt-farmer-commits-suicide-by-jumping-into-a-well/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಕಲಬುರ್ಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೇ ರೈತನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಗೂಡುರು ಗ್ರಾಮದಲ್ಲಿ ಸಾಲದ ಬಾಧೆಯಿಂದಾಗಿ ರೈತ ಶಿವಾಜಿ ಜಾಗಿರದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಂಕ್ ಸೇರಿ ಹಲವೆಡೆ 15 ಲಕ್ಷ ಸಾಲವನ್ನು ರೈತ ಶಿವಾಜಿ ಮಾಡಿದ್ದರು. ಅತಿವೃಷ್ಟಿಯಿಂದ ಬೆಳೆ ಕೈಕೊಟ್ಟಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೂಡುರು ಗ್ರಾಮದ ಬಳಿಯಲ್ಲಿರುವಂತ ಜಮೀನಿನಲ್ಲಿ ರೈತನ ಶವ ಪತ್ತೆಯಾಗಿದೆ. ಈ ಸಂಬಂಧ ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/kea-stumbles-again-during-k-set-exam-staff-removes-earrings-nose-rings-of-female-candidates/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಶಿವಮೊಗ್ಗಛ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಗೌರವಾನ್ವಿತ ಮಂಜುನಾಥ ನಾಯಕ್ ಅವರನ್ನು ಬೆಳಗಾವಿ ಜಿಲ್ಲೆಯ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿ ಗೌರವಾನ್ವಿತ ಉಚ್ಚ ನ್ಯಾಯಾಲಯವು ವರ್ಗಾವಣೆ ಮಾಡಿ ದಿನಾಂಕ 30.10.2025 ರಂದು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿ ಆದೇಶಿಸಿದೆ. ಮಂಜುನಾಥ್ ನಾಯಕ್ ರವರು 2023ರ ಜೂನ್ ತಿಂಗಳಿನಲ್ಲಿ ಬೆಂಗಳೂರಿನ ಗೌರವಾನ್ವಿತ ಉಚ್ಛ ನ್ಯಾಯಾಲಯದಲ್ಲಿ ನೇಮಕಾತಿ ನಿಭಂಧಕರಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಶಿವಮೊಗ್ಗದಲ್ಲಿ ಪದಗ್ರಹಣ ಮಾಡಿಕೊಂಡಿದ್ದರು. ಗೌರವಾನ್ವಿತ ನ್ಯಾಯಾಧೀಶರು ದಿನಾಂಕ 03.11.2025 ರಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದದಿಂದ ಮುಕ್ತಗೊಂಡು ದಿನಾಂಕ 05.11.2025 ರಂದು ಬೆಳಗಾವಿಗೆ ತೆರಳಿ ಅಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರ ಪದಗ್ರಹಣವನ್ನು ಮಾಡಲಿದ್ದಾರೆ. ಗೌರವಾನ್ವಿತ ನ್ಯಾಯಾಧೀಶರು ತಮ್ಮ ಸೇವಾ ಅವಧಿಯಲ್ಲಿ ಒಟ್ಟು 10 ರಾಷ್ಟ್ರೀಯ ಲೋಕ ಅದಾಲತ್ಗಳನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಆಯೋಜಿಸಿ ಶಿವಮೊಗ್ಗ ಜಿಲ್ಲೆಯ ನ್ಯಾಯಾಲಯಗಳಲ್ಲಿ…
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್ 2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ ಪ್ರಯಾಣಿಕರು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು ಮತ್ತು ಆಕೆ ಮಜೆಸ್ಟಿಕ್ ನಿಲ್ದಾಣದಲ್ಲೇ ಇದ್ದಳು. ಆಕೆಯ ತಾಯಿಯನ್ನು ಪತ್ತೆ ಹಚ್ಚಲು ಬಿಎಂಆರ್ ಸಿ ಎಲ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾದರು ಎಂದು ಹೇಳಿದೆ. ಎಲ್ಲಾ ನಿಲ್ದಾಣ ನಿಯಂತ್ರಕರಿಗೂ ಎಚ್ಚರಿಕೆ ನೀಡಲಾಯಿತು ಮತ್ತು ಕೆಂಪೇಗೌಡ ಮಜೆಸ್ಟಿಕ್ ನಿಲ್ದಾಣದ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನದ ಫಲವಾಗಿ ಬಾಲಕಿಯ ತಾಯಿಯನ್ನು ಪತ್ತೆ ಹಚ್ಚಿ, ಬಾಲಕಿಯನ್ನು ತಾಯಿಯವರ ಕೈಗೆ ಒಪ್ಪಿಸಲಾಯಿತು. ಎಂಬುದಾಗಿ ಬಿಎಂಆರ್ ಸಿ ಎಲ್ ತಿಳಿಸಿದೆ. https://kannadanewsnow.com/kannada/minister-ishwar-khandres-big-shock-to-illegal-homestay-and-resort-owners-in-the-state/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಚಾಮರಾಜನಗರ : ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂಸ್ಟೇ ಅಥವಾ ರೆಸಾರ್ಟ್ ಗಳಿಗಾಗಲೀ, ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರ್ಕಾರ ಅವಕಾಶ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಭರವಸೆ ನೀಡಿದರು. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ ಸಂಘರ್ಷ ಹೆಚ್ಚಳವಾಗುತ್ತಿದ್ದು, ಸ್ಥಳೀಯರ, ಸಾರ್ವಜನಿಕರ, ರೈತರ ಸಲಹೆ, ಅಭಿಪ್ರಾಯ ಪಡೆದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಸಭೆ ನಡೆಸಲಾಗಿದೆ ಎಂದರು. ಈಗಾಗಲೇ ಇಲಾಖೆಯ ವತಿಯಿಂದ 2 ತಜ್ಞರ ಸಮಿತಿ ರಚಿಸಲಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿರುವ…
ಬೆಳಗಾವಿ: ನಿನ್ನೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದು ಐವರಿಗೆ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದಿದ್ದಂತವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರುಣ್ ಕುರುಬರ, ಕಿರಿಣ್ ಕುರುಬರ ಎಂಬುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ಆದಿತ್ಯ ಬೇಂಡಿಗೇರಿಗೆ ಚಾಕುವಿನಿಂದ ದುರುಳರು ಇರಿದಿದ್ದರು. ಬೆಳಗಾವಿ ಡಿಸಿ ಕಚೇರಿ ಎದುರೇ ಈ ಘಟನೆ ನಡೆದಿತ್ತು. ಗಾಯಾಳು ಆದಿತ್ಯ ಬೆಳಗಾವಿ ತಾಲ್ಲೂಕಿನ ಕೆ.ಕೆ ಕೊಪ್ಪದ ನಿವಾಸಿಯಾಗಿದ್ದನು. https://kannadanewsnow.com/kannada/kendhuli-rajyotsava-award-for-writer-dr-bl-venu-editor-thuruvanur-manjunath/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಬೆಂಗಳೂರು: ಕೆಂಧೂಳಿ ಪತ್ರಿಕೆಗೆ ಐದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಖ್ಯಾತ ಸಾಹಿತಿ ಡಾ.ಬಿಎಲ್ ವೇಣು ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಸಂಪಾದಕ ತುರುವನೂರು ಮಂಜುನಾಥ್ ತಿಳಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಮೊದಲನೇ ವರ್ಷ ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ ಕೊಡಲು ಸಮಿತಿ ಆಯ್ಕೆ ಮಾಡಿದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಪ್ರಶಸ್ತಿಯೂ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ಶೀಘ್ರ ನೀಡಲಾಗುವುದು ಎಂದು ಹೇಳಿದ್ದಾರೆ. ಡಾ.ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು ಅವರ ಸಮಿತಿಯಿಂ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಡಾ.ಬಿಎಲ್ ವೇಣು ಅವರನ್ನು ಆಯ್ಕೆ ಮಾಡಿದೆ ಎಂದು ಮಾಹಿತಿ…
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ ಸಚಿವಾಲಯದ ಮುಖ್ಯಸ್ಥರಾಗಿದ್ದು, ಅವರು ಯಾವುದೇ ಪಕ್ಷದ ಪ್ರತಿನಿಧಿಯಾಗಿರುವುದಿಲ್ಲ. ಎಲ್ಲಾ ಪಕ್ಷಗಳ ಶಾಸಕರ ವಿಚಾರದಲ್ಲೂ…














