Author: kannadanewsnow09

ಬೆಂಗಳೂರು: 20/66/11ಕೆವಿ ಹೆಬ್ಬಾಳ  ಎಂ ಯು ಎಸ್ ಎಸ್ ದಿನಾಂಕ  28.08.2024 ರಂದು 11:00ಗಂಟೆಗಳಿಂದ 16:00ಗಂಟೆಗಳವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ಜೈಲಲ್ಲಿ ರಾಜಾತಿಥ್ಯದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಕೆಲ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಅಂತ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದರು. ಆಗಸ್ಟ್.22ರಂದು ಸಂಜೆ ನಡೆದಿರುವಂತ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋಗಳು ತಡವಾಗಿ ಬೆಳಕಿಗೆ ಬಂದಿದ್ದಾವೆ. ಜೈಲಿನಲ್ಲಿ ಮೊಬೈಲ್ ಪೋನ್ ಬಳಕೆ, ಸಿಗರೇಟ್ ಸೇದಿರೋದು, ಕಾಫಿ ಕೊಟ್ಟಿರು ಬಗ್ಗೆ, ಜೊತೆಗೆ ಕುರ್ಚಿಗಳನ್ನು ಯಾರು ಕೊಟ್ಟರು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಮೂರರಲ್ಲೂ ನಟ ದರ್ಶನ್ ಹೆಸರು ಉಲ್ಲೇಖಿಸಲಾಗಿದೆ ಎಂದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರವಾ ವೈಫಲ್ಯವಾಗಿಲ್ಲ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ಬಕಾರಾಗೃಹ ಡಿಜಿಪಿ…

Read More

ಬೆಂಗಳೂರು: ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವ ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ವಿಭಿನ್ನ ಪ್ರಯತ್ನಕ್ಕೆ ಕೈಹಾಕಿದೆ. ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುವ ಓವಿ ಟ್ರ್ಯಾಪ್‌ ಸಾಧನಗಳನ್ನ ಬೆಂಗಳೂರಿನ ಗೋಪಾಲಪುರದಲ್ಲಿ ಅಳವಡಿಸಲಾಗಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳನ್ನ ಮನೆ ಮನೆಗಳಿಗೆ ಅಳವಡಿಸಲಾಗಿದೆ. ಓವಿ ಟ್ರ್ಯಾಪ್ ಬಯೋ ಸಾಧನವಾಗಿದ್ದು, ಈಡಿಸ್ ಸೊಳ್ಳೆಗಳನ್ನ ಆಕರ್ಷಿಸಿ ನಾಶಪಡಿಸುತ್ತದೆ. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಸೊಳ್ಳೆಗಳು ಹೆಚ್ಚಿರೋ ಕಡೆ ಈ ಸಾಧನ ಅಳವಡಿಸುವ ಮೂಲಕ ಡೆಂಗ್ಯೂ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಯೋಜನೆ ರೂಪಿಸಿವೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈಡಿಸ್ ಸೊಳ್ಳೆಗಳನ್ನ ನಾಶಪಡಿಸುವ ಬಯೋ ಸಾಧನಗಳನ್ನ ಪ್ರಾಯೋಗಿಕವಾಗಿ ಬಳಕೆ ಮಾಡುತ್ತಿದ್ದೇವೆ.. ಓವಿ ಟ್ರ್ಯಾಪ್ ಸಾಧನಗಳಿಂದ ಈಡಿಸ್ ಸೊಳ್ಳೆಗಳ ನಿಯಂತ್ರಣ ಚೆನ್ನಾಗಿ ಆದರೆ ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ…

Read More

ನಮ್ಮ ಮನೆಯಲ್ಲಿ ಬೆಳಗ್ಗೆ ಮತ್ತು ಸಂಜೆ ದೀಪ ಹಚ್ಚುವುದು ಸಂಪ್ರದಾಯ. ದಿನಕ್ಕೆರಡು ಬಾರಿ ದೀಪ ಹಚ್ಚಲು ಸಾಧ್ಯವಾಗದವರು ಕೂಡ ಒಮ್ಮೆಯಾದರೂ ದೀಪ ಹಚ್ಚುತ್ತಾರೆ. ದಿನವೂ ದೀಪ ಹಚ್ಚಲು ಸಾಧ್ಯವಾಗದವರೂ ವಾರದ ಪ್ರಮುಖ ದಿನಗಳಾದ ಮಂಗಳವಾರ ಮತ್ತು ಶುಕ್ರವಾರದಂದು ದೀಪವನ್ನು ಹಚ್ಚುತ್ತಾರೆ. ಬೆಳಕಿಲ್ಲದ ಮನೆ ಸುಭಿಕ್ಷವಲ್ಲ ಎಂಬ ಮಾತನ್ನೂ ಕೇಳಿದ್ದೇವೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ನಮ್ಮ ಸಂಪತ್ತು ಮತ್ತು ಸಮೃದ್ಧಿಯನ್ನು ಸುಧಾರಿಸಲು ನಾವು ಬೆಳಗಿಸಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ,…

Read More

ಮಂಡ್ಯ: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೈಲಿನ ವ್ಯವಸ್ಥೆ ಹೊಸದಾಗಿ ಆಗಿಲ್ಲ, ಹಿಂದಿನಿಂದಲೂ ನಡೆಯುತ್ತಾ ಇದೆ. ಹಿಂದೆ ಡಿಜಿ ಮತ್ತು ಡಿಸಿಪಿ ನಡುವೆ ದೊಡ್ಡ ಗಲಾಟೆ ಆಗಿತ್ತು. ತನಿಖೆ ನಡೆಯಬೇಕು ಎಂದು ಗಲಾಟೆ ಆಗಿತ್ತು. ಪರಪ್ಪನ ಅಗ್ರಹಾರದಲ್ಲಿರುವ ಖೈದಿಗಳಿಗೆ ಪಂಚತಾರ ವ್ಯವಸ್ಥೆ ಇದೆ. ಈಗ ದರ್ಶನ್ ವಿಚಾರದಲ್ಲಿ ಅದು ಪ್ರಚಾರಕ್ಕೆ ಬಂದಿದೆ. ಸರ್ಕಾರ ಆ ಖೈದಿಗಳನ್ನು‌ ಬೇರೆ ಕಡೆಗೆ ವರ್ಗಾಯಿಸಬೇಕು ಎಂದು‌ ತೀರ್ಮಾನ ಮಾಡ್ತಾ ಇದ್ಯಂತೆ. ಈ ಸರ್ಕಾರದ ಜನರಿಗೆ ನಂಬಿಕೆ ಬರಲು ಸಾಧ್ಯ ಇಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂಬುದಾಗಿ ಕಿಡಿಕಾರಿದರು. ರಾಜ್ಯದಲ್ಲಿ ಆಡಳಿತ ಎನ್ನುವ ನಡವಳಿಕೆ‌ ಇಲ್ಲ. ಭ್ರಷ್ಟಾಚಾರದ ಬಗ್ಗೆ ಬೀದಿ ಬೀದಿಯಲ್ಲಿ ಮಾತಾಡಿಕೊಂಡು ಇರುವ ಕೆಲಸ ಮಾಡ್ತಾ ಇದ್ದಾರೆ. ಸರ್ಕಾರದಲ್ಲಿ‌ ಮಂತ್ರಿಗಳಿಗೆ ಕೆಲಸವಿಲ್ಲ. ಸಿಎಂಗೆ…

Read More

ಬೆಂಗಳೂರು : ಕಾಂಗ್ರೆಸ್‌ ಶಾಸಕರಿಗೆ ಹಣ ನೀಡುತ್ತೇವೆಂದು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ಸರಿಯಾಗಿ ತಿಳಿಸಲಿ. ಇಲ್ಲವಾದರೆ ಇದು ಹಿಟ್‌ ಆಂಡ್‌ ರನ್‌ ಆಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮುಡಾ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಳುಗಿರುವುದರಿಂದ ಸರ್ಕಾರ ಉಳಿಸಿಕೊಳ್ಳಲು ಶಾಸಕರಿಗೆ ಬೇರೆ ದಾರಿ ಇಲ್ಲ. ಇದಕ್ಕಾಗಿ ಬಿಜೆಪಿ ವಿರುದ್ಧ ಆಪಾದನೆ ಮಾಡಲಾಗಿದೆ. ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಕುತಂತ್ರವಿದು. ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಅವರ ಪಕ್ಷದವರೇ ಸರ್ಕಾರ ಬೀಳಿಸಲು ಮುಂದಾಗಿದ್ದಾರೆ ಎಂದರು. ಕಾಂಗ್ರೆಸ್‌ ಶಾಸಕರ ಬಳಿ ಬಂದು ಮಾತಾಡಿದ ಬಿಜೆಪಿ ನಾಯಕರು ಯಾರು ಎಂದು ಕಾಂಗ್ರೆಸ್‌ ನಾಯಕರು ಸ್ಪಷ್ಟವಾಗಿ ತಿಳಿಸಲಿ. ಗ್ಯಾರಂಟಿಗಳನ್ನು ತೆಗೆದುಹಾಕಬೇಕೆಂದು ಶಾಸಕರೇ ಒತ್ತಾಯಿಸುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಮದ್ಯದ ತೆರಿಗೆಯನ್ನು ಮೂರನೇ ಬಾರಿಗೆ ಏರಿಕೆ ಮಾಡಲು ಪ್ರಯತ್ನ ಶುರುವಾಗಿದೆ. ನೀರಿನ ದರ ಹಾಗೂ ಬಸ್‌ ಟಿಕೆಟ್‌ ದರ ಹೆಚ್ಚಿಸಲು…

Read More

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಹುದೊಡ್ಡ ಭ್ರಷ್ಟಾಚಾರವನ್ನೇ ಖೈದಿಯೊಬ್ಬ ಬಿಚ್ಚಿಟ್ಟಿದ್ದಾನೆ. ಜೈಲಲ್ಲ ಅದು ಸ್ವರ್ಗ. ದುಡ್ಡು ಕೊಟ್ಟರೇ ಎಲ್ಲವೂ ಸಿಗುತ್ತದೆ. ಏನು ಬೇಕಾದ್ರೂ ವ್ಯವಸ್ಥೆ ಮಾಡುತ್ತಾರೆ ಎಂಬುದಾಗಿ ಬಿಡುಗಡೆಯಾದಂತ ಖೈದಿಯೊಬ್ಬ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಈ ಬಗ್ಗೆ ಮಾಧ್ಯಮಗಳಿಗೆ ಹೆಸರು ಹೇಳಲು ಇಚ್ಚಿಸದಂತ ಬಿಡುಗಡೆಯಾದಂತ ಖೈದಿಯೊಬ್ಬ ಮಾತನಾಡಿದ್ದು, ಪರಪ್ಪನ ಅಗ್ರಹಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಲ್ಲಿ ಏನು ಬೇಕಾದ್ರೂ ವ್ಯವಸ್ಥೆ ಮಾಡ್ತಾರೆ. ಅದಕ್ಕೆ ದುಡ್ಡು ಕೊಡಬೇಕು ಎಂದರು. ಸಿಗರೇಟ್, ಗಾಂಜಾ, ಗುಟ್ಕವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗುತ್ತೆ. ಮೊಬೈಲ್ ಪೋನ್ ಅಂತೂ ಎಲ್ಲರೂ ಬಳಕೆ ಮಾಡ್ತಾರೆ. ಚಿಕನ್ ಬೇಕಾದವರಿಗೆ ಚಿಕನ್ ಮಾಡಿಕೊಡ್ತಾರೆ. ಡ್ರಗ್ಸ್ ಬೇಕಾದವರಿಗೆ ಅದನ್ನು ಸಪ್ಲೈ ಮಾಡ್ತಾರೆ. ಅದಕ್ಕಾಗಿ ಇಂತಿಷ್ಟು ದುಡ್ಡು ಕೊಡಬೇಕು ಎಂದು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ನಾನು ಜೈಲಿನಲ್ಲಿ ಇದ್ದಾಗ ಎಲ್ಲಾ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡಿದ್ದೇನೆ. ಇದಕ್ಕಾಗಿ 1.30 ಲಕ್ಷ ಹಣವನ್ನು ಖರ್ಚು ಮಾಡಿದ್ದೇನೆ. ದುಡ್ಡು ಇದ್ದರೇ ದುನಿಯಾ ಅಂತಾರಲ್ಲ ಹಾಗೆ ಪರಪ್ಪನ ಅಗ್ರಹಾರ ಜೈಲು.…

Read More

ಬೆಂಗಳೂರು: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆ ಬರೆದಂತ ವಿದ್ಯಾರ್ಥಿಗಳು ಹೇಗೆ ರಿಸಲ್ಟ್ ಚೆಕ್ ಮಾಡಬೇಕು ಎನ್ನುವ ಬಗ್ಗೆ ಮುಂದೆ ಓದಿ. ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದು ತಿಳಿಸಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾದ ಹಿನ್ನಲೆಯಲ್ಲಿ, ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂಬುದಾಗಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಹೇಳಿದೆ. ಈ ರೀತಿ SSLC ಪರೀಕ್ಷೆ-3ರರ ಫಲಿತಾಂಶ ಚೆಕ್ ಮಾಡಿ ಇದೀಗ ಬಿಡುಗಡೆಯಾಗಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ವಿದ್ಯಾರ್ಥಿಗಳು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ವೀಕ್ಷಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ 97,952 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರಲ್ಲಿ 25,347 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಲಿಂಗವಾರು ಪ್ರಮಾಣ ನೋಡುವುದಾದರೇ 67729 ವಿದ್ಯಾರ್ಥಿಗಳು…

Read More

ಬೆಂಗಳೂರು: ಇಂದು ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಆಗಸ್ಟ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ:02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು ಎಂದಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದೆ. ಈ ರೀತಿ SSLC ಪರೀಕ್ಷೆ-3ರರ ಫಲಿತಾಂಶ ಚೆಕ್ ಮಾಡಿ https://karresults.nic.in ಜಾಲತಾಣದಲ್ಲಿ ಇಂದು ದಿನಾಂಕ:26.08.2024 ರಂದು ಮಧ್ಯಾಹ್ನ 12.00 ನಂತರ ವೀಕ್ಷಿಸಬಹುದಾಗಿದೆ ಎಂದು ಹೇಳಿದೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Read More

01.ವೀಳ್ಯದೆಲೆ ತುದಿಯಲ್ಲಿ – ಲಕ್ಷ್ಮೀ ದೇವಿಯವಾಸವಿರುತ್ತದೆ, 02.ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸಸ್ಥಾನ . 03.ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿಯ ವಾಸಸ್ಥಾನ, 04.ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿಯ ವಾಸಸ್ಥಾನ, 05.ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸಸ್ಥಾನ, 06.ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸಸ್ಥಾನ, 07.ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸಸ್ಥಾನ, 08.ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸಸ್ಥಾನ, ,ಇದೆ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು} 09.ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ, {ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ} ಅಹಂಕಾರಹಾಗೂ ದರಿದ್ರ ಲಕ್ಷ್ಮೀ ಬರಬಾರದೆಂಬ ಎಂದರ್ಥ} 10.ವೀಳ್ಯದೆಲೆಮಧ್ಯಭಾಗ ಮನ್ಮಥನ ವಾಸ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ…

Read More