Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ( Telangana CM Revanth Reddy, Karnataka Dy CM DK Shivakumar ) ಮತ್ತು ಇತರ ಹಲವಾರು ಹಿರಿಯ ಕಾಂಗ್ರೆಸ್ ನಾಯಕರನ್ನು ಜಾರಿ ನಿರ್ದೇಶನಾಲಯ (Enforcement Directorate -ED) ಹೆಸರಿಸಿದ್ದು, ಯಂಗ್ ಇಂಡಿಯನ್ ಮತ್ತು ಎಜೆಎಲ್ಗೆ ಈ ನಾಯಕರ ನಿರ್ದೇಶನದ ಮೇರೆಗೆ ಭಾರಿ ದೇಣಿಗೆ ನೀಡಲಾಗಿದೆ ಎಂದು ಹೇಳಿದೆ. ED ಯ ಆರೋಪಪಟ್ಟಿಯ ಪ್ರಕಾರ, ರೇವಂತ್ ರೆಡ್ಡಿ ಅವರ ಸೂಚನೆಯ ಮೇರೆಗೆ 80 ಲಕ್ಷ ರೂ.ಗಳ ದೇಣಿಗೆ ನೀಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಇತರ ಹಲವಾರು ವ್ಯಕ್ತಿಗಳಿಗೂ ದೇಣಿಗೆ ನೀಡುವಂತೆ ಕೇಳಿಕೊಂಡರು. ಶಿವಕುಮಾರ್ ತಮ್ಮ ಟ್ರಸ್ಟ್ನಿಂದ 25 ಲಕ್ಷ ರೂ. ಮತ್ತು 2 ಕೋಟಿ ರೂ.ಗಳನ್ನು ದೇಣಿಗೆ ನೀಡಿದ್ದಾರೆ. ಆಗಿನ ಎಐಸಿಸಿ ಖಜಾಂಚಿ ಪವನ್ ಬನ್ಸಾಲ್ ಅವರ ಸೂಚನೆಯ ಮೇರೆಗೆ ತಾನು ದೇಣಿಗೆ ನೀಡಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. ಆರೋಪಪಟ್ಟಿಯ ಪ್ರಕಾರ, ಪಕ್ಷದ ಹಿರಿಯ…
ನವದೆಹಲಿ: ಭದ್ರಾವತಿಯ ಸರ್ ಎಂ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ವಿಸ್ತೃತ ಯೋಜನಾ ವರದಿ (DPR) ಎರಡು ತಿಂಗಳಲ್ಲಿ ಸಿದ್ಧವಾಗಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವ ಪ್ರಶ್ನೆ ಇಲ್ಲ ಎಂಬುದನ್ನು ಒತ್ತಿ ಹೇಳಿದರು. ಈ ವರ್ಷಾಂತ್ಯಕ್ಕೆ ಪುನಶ್ಚೇತನ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು. ಪುನಾ ಹೊಸದಾಗಿ ಇಡೀ ಕಾರ್ಖಾನೆಯನ್ನು ಹೊಸದಾಗಿ ಅತ್ಯಾಧುನಿಕವಾಗಿ ನಿರ್ಮಾಣ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರೇ ಈ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು. ಇಡೀ ಕಾರ್ಖಾನೆಯನ್ನು ಹೊಸದಾಗಿ ಮರು ನಿರ್ಮಾಣ ಮಾಡಬೇಕಿದೆ. ಸುಮಾರು ₹8000ರಿಂದ 10,000 ಕೋಟಿ ಹೂಡಿಕೆ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಈಗಾಗಲೇ ಆ ಕಾರ್ಖಾನೆ ಭಾರತೀಯ ಉಕ್ಕು ಪ್ರಾಧಿಕಾರದ (SAIL) ಅಧೀನದಲ್ಲಿದೆ.…
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೊರಬ ತಾಲ್ಲೂಕಿನಲ್ಲಿ ಮೇ.24ರ ನಾಳೆ, ಮೇ.26ರಂದು ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಾಳೆ ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಈ ಬಗ್ಗೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 24-05-2025ರ ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸೊರಬ ತಾಲ್ಲೂಕಿನ ಸೊರಬ ಟೌನ್, ಇಂಡಸ್ಟ್ರೀಯಲ್ ಫೀಡರ್, ತಾವರೇಹಳ್ಳಿ, ಕಕ್ಕರಸಿ, ನಡಹಳ್ಳಿ, ಕಲ್ಲಂಬಿ, ಕಡಸೂರು, ಯಲವಳ್ಳಿ, ಬಿಳಗಿ, ಮಂಚಿ, ಓಟೂರು, ಚಿಕ್ಕಾವಲಿ, ಸಾರೇಕೊಬ್ಬ ಹಾಗೂ ಬಳ್ಳಿಬೈಲು ವ್ಯಾಪ್ತಿಯಲ್ಲಿ ಪವರ್ ಕಟ್ ಆಗಲಿದೆ ಎಂದಿದೆ. ಮೇ.26ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇನ್ನೂ ಮೇ.26ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಉಳವಿ ವಿದ್ಯುತ್ ಸರಬರಾಜು ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಮೇ.26ರಂದು ಪುರ, ಕಾನಳ್ಳಿ, ಉಳವಿ, ಹೊಸಬಾಳೆ, ದೂಗೂರು ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಪವರ್…
ನವದೆಹಲಿ: ದಲಿತ ನಾಯಕರನ್ನು ಮುಗಿಸಲು ಕುತಂತ್ರ ಮಾಡುತ್ತಿರುವ ಮಹಾನಾಯಕನೇ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಸಚಿವರು ಮಾತನಾಡಿದರು. ದಲಿತ, ಹಿಂದುಳಿದ ವರ್ಗಗದ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ನೀಡಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಸಚಿವ ಪರಮೇಶ್ವರ್ ಅವರು ಇಂಥ ಸಂಕಷ್ಟಕ್ಕೆ ಒಳಗಾಗಲು ಕಾಂಗ್ರೆಸ್ ಪಕ್ಷದ ಆ ಪ್ರಭಾವೀ ನಾಯಕನೇ ಕಾರಣ ಎಂದು ನೇರ ಆರೋಪ ಮಾಡಿದರು. ಸಚಿವ ರಾಜಣ್ಣ ವಿಧಾನಸಭೆಯಲ್ಲಿ ಹೇಳಿದರಲ್ಲ, ರಾಜ್ಯದಲ್ಲಿ ಸಿಡಿ, ಪೆನ್ ಡ್ರೈವ್ ಫ್ಯಾಕ್ಟರಿ ಇಟ್ಟುಕೊಂಡಿರುವ ಪ್ರಭಾವೀ ನಾಯಕನ ಬಗ್ಗೆ ನೇರವಾಗಿ ಹೇಳಿದ್ದರು ಅವರು. ಅವರು ಹೇಳಿದ್ದ ನಾಯಕನೇ ಇವತ್ತು ಪರಮೇಶ್ವರ್ ಅವರನ್ನು ಮುಗಿಸಲು ಹೊರಟಿದ್ದಾನೆ. ಪರಮೇಶ್ವರ್ ಅವರು ದಲಿತ ನಾಯಕರ ಸಭೆ ಮಾಡಲು ಹೊರಟಿದ್ದು, ದೆಹಲಿ ನಾಯಕರನ್ನು ಭೇಟಿ…
ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಈಶಾನ್ಯ ರಾಜ್ಯಗಳಲ್ಲಿ ತಮ್ಮ ಹೂಡಿಕೆಯನ್ನು 75 ಸಾವಿರ ಕೋಟಿ ರೂಪಾಯಿಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದಾರೆ. ಸದ್ಯಕ್ಕೆ ಕಂಪನಿಯು ಈ ರಾಜ್ಯಗಳಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿದೆ. ಅಂದರೆ, ಮುಂದಿನ ಐದು ವರ್ಷಗಳಲ್ಲಿ, ಈ ರಾಜ್ಯಗಳಲ್ಲಿ ಸುಮಾರು 45 ಸಾವಿರ ಕೋಟಿ ರೂಪಾಯಿಗಳ ಹೊಸ ಹೂಡಿಕೆಯನ್ನು ರಿಲಯನ್ಸ್ ಮಾಡಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ರೈಸಿಂಗ್ ನಾರ್ಥ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿಟ್’ನಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಸಶಸ್ತ್ರ ಪಡೆಗಳ ಅಪ್ರತಿಮ ಶೌರ್ಯದಿಂದಾಗಿ ಯಶಸ್ವಿಯಾದ ಆಪರೇಷನ್ ಸಿಂಧೂರ್ಗೆ ಪ್ರಧಾನಿ ಮೋದಿ ಮತ್ತು ದೇಶವನ್ನು ಅಭಿನಂದಿಸುವ ಮೂಲಕ ಮುಕೇಶ್ ಅಂಬಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಈ ಪ್ರಸ್ತಾವಿತ ಹೂಡಿಕೆಯು 25 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶ ಸೃಷ್ಟಿಸುತ್ತದೆ ಎಂದು ಅಂಬಾನಿ ಹೇಳಿದರು. ಈಶಾನ್ಯ ರಾಜ್ಯಗಳಲ್ಲಿ 350 ಜೈವಿಕ ಅನಿಲ ಸ್ಥಾವರಗಳನ್ನು ಸ್ಥಾಪಿಸುವ ಬದ್ಧತೆಯನ್ನು ಮುಕೇಶ್ ವ್ಯಕ್ತಪಡಿಸಿದರು. ಜಿಯೋ…
ನವದೆಹಲಿ : ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರೆಯೇ ಎಂದು ಕಿಡಿಕಾರಿರುವ ಅವರು; ಮುಂದೆ ಪರಿಸ್ಥಿತಿ ಬದಲಾಗಲಿದೆ. ಆಗ ಇವರು ಇಟ್ಟಿರುವ ಹೆಸರೂ ಬದಲಾಗಲಿದೆ ಎಂದು ಎಚ್ಚರಿಕೆ ನೀಡಿದರು ಕೇಂದ್ರ ಸಚಿವರು. ನವದೆಹಲಿಯ ತಮ್ಮ ಅಧಿಕೃತ ನಿವಾಸದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು. 2007 ರಲ್ಲಿ ನಾನು ತೀರ್ಮಾನ ಮಾಡುವಾಗ ಆಗ ವಿರೋಧ ಮಾಡಬಹುದಾಗಿತ್ತು ಆಗ ಮಾಡಲಿಲ್ಲ. ಈ ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ರಾಮನಗರ ಕೊಟ್ಟಿದೆ. ಇಡೀ ಜಗತ್ತೇ ನಿಬ್ಬೆರಗಾಗುವ ವಿಧಾನಸೌಧವನ್ನು ಕೆಂಗಲ್ ಹನುಮಂತಯ್ಯ ಅವರು ಕಟ್ಟಿಸಿದ್ದರು. ನೆಹರು ಅವರಿಗೆ ಸಡ್ಡು ಹೊಡೆದು ರಾಜಕೀಯ ಮಾಡಿದ್ದರು. ಅಂತಹ ಮಹನೀಯರ ಹೆಸರನ್ನಾದರೂ ಜಿಲ್ಲೆಗೆ ಇಡಬಹುದಿತ್ತು. ಅವರ ಹೆಸರು ಇಟ್ಟಿದ್ದಿದ್ದರೆ ನಾನು ಅಭಿನಂದಿಸುತ್ತಿದ್ದೆ. ಕೆಂಗಲ್ ಅವರ ಹೆಸರಿಟ್ಟರೆ ಇವರ ಭೂಮಿಗಳಿಗೆ ಬೆಲೆ ಬರುವುದಿಲ್ಲವಲ್ಲ? ಎಂದು…
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ಪ್ರಶಸ್ತಿಗಳ ಸರಮಾಲೆ ಮುಂದುವರೆದಿದೆ. ಇದೀಗ ಕನ್ನಡಿಗರ ಹೆಮ್ಮೆಯ ಕೆ ಎಸ್ ಆರ್ ಟಿಸಿಗೆ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳು ಗರಿಮೆ ಸಂದಿದೆ. ಹೌದು.. ಕೆ.ಎಸ್. ಆರ್.ಟಿ.ಸಿ ಗೆ 04 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿ-2025 ಲಭಿಸಿದೆ. ಕೆ.ಎಸ್.ಆರ್.ಟಿ.ಸಿ ಯು ಕೈಗೊಂಡಿರುವ ಅತ್ಯುತ್ತಮ ಪ್ರಯಾಣಿಕರ ಸ್ನೇಹಿ ಹಾಗೂ ಮಾಹಿತಿ ತಂತ್ರಜ್ಞಾನದ ಉಪಕ್ರಮಗಳಿಗಾಗಿ 04 ರಾಷ್ಟ್ರೀಯ ಬಿಸಿನೆಸ್ ಅವಾರ್ಡ್ ಫಾರ್ ಲೀಡರ್ಶಿಪ್ & ಎಕ್ಸಲೆನ್ಸಿ ಪ್ರಶಸ್ತಿಯು ಈ ಕೆಳಕಂಡ ವರ್ಗಗಳಲ್ಲಿ Most Best use of Technology Most Innovative Company of the year Most Customer Friendly Company of the year Best Brand Development ಲಭಿಸಿರುತ್ತದೆ. ಮುಂಬಯಿನ ಹೋಟಲ್ ಪಾರ್ಲೆ ಇಂಟರ್ನ್ಯಾಷನಲ್ ನಲ್ಲಿ ನಡೆದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮೋನಾಲಿ ಬಾಗುಲ್, ಸಂಸ್ಥಾಪಕರು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, VE BIZTALK ಮೀಡಿಯಾ, ರವರು ನಿಗಮಕ್ಕೆ ಪ್ರಶಸ್ತಿಗಳನ್ನು…
ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೈಸ್ ರಸ್ತೆಯಲ್ಲಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ಮಾರ್ಗವನ್ನು ದಿನಾಂಕ: 26.05.2025 ರಿಂದ ಪರಿಚಯಿಸಿದ್ದು ವಿವರ ಕೆಳಕಂಡಂತಿದೆ : ಮಾರ್ಗ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ/ ಸುತ್ತುವಳಿ ಸಂಖ್ಯೆ ನೈಸ್-6ಟಿ ತಾವರೆಕೆರೆ (ಬಿಡುವ ವೇಳೆ 07:20, 08:00 Hrs) ಆನೇಕಲ್- (ಬಿಡುವ ವೇಳೆ: 17:15, 17:45 Hrs) ಕಡಬಗೆರೆ ಕ್ರಾಸ್, ಗೊಲ್ಲರಹಟ್ಟಿ, ನೈಸ್ ರಸ್ತೆ 2 ಬಸ್ಸು 4 ಸುತ್ತುವಳಿಗಳು https://kannadanewsnow.com/kannada/sslc-re-evaluation-mandyas-maddur-student-c-puneeta-ranks-first-in-the-state/ https://kannadanewsnow.com/kannada/employment-news-notification-from-the-state-government-for-the-recruitment-of-51000-guest-teachers-here-is-the-complete-information/
ಮಂಡ್ಯ : ಪ್ರಸಕ್ತ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದ, ಮದ್ದೂರು ಪಟ್ಟಣದ ಶಿವಪುರದ ಪೂರ್ಣಪ್ರಜ್ಞಾ ಶಾಲೆಯ ಸಿ.ಪುನೀತ ಮರು ಮೌಲ್ಯಮಾಪನದಲ್ಲಿ ಒಂದು ಅಂಕ ಹೆಚ್ಚು ಗಳಿಸುವುದರೊಂದಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾಳೆ. ಮದ್ದೂರು ಪಟ್ಟಣದ ಶಿವಪುರದ ಪೂರ್ಣ ಶಾಲೆಯಲ್ಲಿ ಶುಕ್ರವಾರ ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದ ಸಿ.ಪುನೀತಾ ಕಡಿಮೆ ಅಂಕ ಬಂದಿದೆ ಎಂದು ವಿಚಲಿತರಾಗಿದ್ದರು. ಹೀಗಾಗಿ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ಇನ್ನೂ ಹೆಚ್ಚಿನ ಅಂಕ ಬರಬೇಕೆಂದು ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರು ಮೌಲ್ಯಮಾಪನ ಮಾಡಿಸಿದ ಪರಿಣಾಮ ಸಮಾಜ ವಿಜ್ಞಾನ ವಿಷಯದಲ್ಲಿ 1 ಅಂಕಗಳು ಲಭಿಸಿದ್ದು, ಈ ಮೂಲಕ 625 ಕ್ಕೆ 625 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ ಪ್ರಥಮ ಸ್ಥಾನ, ಜಿಲ್ಲೆಗೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧನಂಜಯ ಪ್ರಶಂಸೆ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಶ್ರೀಲಂಕಾದ ಸ್ಟಾರ್ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ಶುಕ್ರವಾರ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದು, ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ ಪಂದ್ಯವು ಈ ಸ್ವರೂಪದಲ್ಲಿ ಅವರ ಕೊನೆಯ ಪಂದ್ಯವಾಗಲಿದೆ ಎಂದು ದೃಢಪಡಿಸಿದ್ದಾರೆ. ಮ್ಯಾಥ್ಯೂಸ್ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ ಪ್ರೊಫೈಲ್ನಲ್ಲಿ ಸ್ವರೂಪದಿಂದ ನಿರ್ಗಮಿಸುವುದನ್ನು ದೃಢಪಡಿಸಿದ್ದಾರೆ. ನನ್ನ ಪ್ರೀತಿಯ ಸ್ನೇಹಿತರು ಮತ್ತು ಕುಟುಂಬ, ಕೃತಜ್ಞತೆಯ ಹೃದಯ ಮತ್ತು ಮರೆಯಲಾಗದ ನೆನಪುಗಳೊಂದಿಗೆ. ಆಟದ ಅತ್ಯಂತ ಪಾಲಿಸಬೇಕಾದ ಸ್ವರೂಪವಾದ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ನಾನು ವಿದಾಯ ಹೇಳುವ ಸಮಯ ಇದು! ಎಂದು ಮ್ಯಾಥ್ಯೂಸ್ ಬರೆದಿದ್ದಾರೆ. ಶ್ರೀಲಂಕಾ ಪರ ಕಳೆದ 17 ವರ್ಷಗಳ ಕ್ರಿಕೆಟ್ ನನ್ನ ಅತ್ಯುನ್ನತ ಗೌರವ ಮತ್ತು ಹೆಮ್ಮೆ. ರಾಷ್ಟ್ರೀಯ ಜೆರ್ಸಿ ಧರಿಸಿದಾಗ ದೇಶಭಕ್ತಿ ಮತ್ತು ಸೇವೆಯ ಭಾವನೆಗೆ ಯಾವುದೂ ಸರಿಸಾಟಿಯಾಗುವುದಿಲ್ಲ. ನಾನು ಕ್ರಿಕೆಟ್ಗೆ ನನ್ನ ಎಲ್ಲವನ್ನೂ ನೀಡಿದ್ದೇನೆ ಮತ್ತು ಕ್ರಿಕೆಟ್ ನನಗೆ ಪ್ರತಿಯಾಗಿ ಎಲ್ಲವನ್ನೂ ನೀಡಿದೆ ಎಂದಿದ್ದಾರೆ. ಶ್ರೀಲಂಕಾ ಕ್ರಿಕೆಟ್ನ ದಿಗ್ಗಜರಲ್ಲಿ ಒಬ್ಬರಾದ ಮ್ಯಾಥ್ಯೂಸ್…