Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ ಸುರ್ಣಸೌಧ : ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶಾಲಾ ಕಿಟ್ ನೀಡುವ ಬಗ್ಗೆ ಪುನರ್ ಪರಿಶೀಲನೆ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಲ್ಕನೇ ದಿನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಅವರು ಉತ್ತರಿಸಿದರು. ಈವರೆಗೆ ೧೩ ಲಕ್ಷಕ್ಕೂ ಹೆಚ್ಚು ಮಕ್ಕಳಿಗೂ ಸ್ಕಾಲರ್ ಶಿಪ್ ನೀಡಿದ್ದೇವೆ. ಹಾಗಾಗಿ ಶಾಲಾ ಕಿಟ್ ಕೊಡುವ ಅಗತ್ಯ ಇಲ್ಲ ಎಂದು ಮಂಡಳಿಯಲ್ಲಿ ತೀರ್ಮಾನ ಆಗಿದೆ. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿ ಶಾಲಾ ಕಿಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಈ ಬಗ್ಗೆ ಚರ್ಚಿಸೋಣ ಎಂದು ಹೇಳಿದರು. ಟೂಲ್ ಕಿಟ್: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್ ಕಿಟ್ಗಳನ್ನು ನೀಡಲಾಗುತ್ತಿಲ್ಲ ಎಂಬ ಶಾಸಕ ಹರೀಶ್ ಪೂಂಜಾ…
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್(RIG) ಉಚಿತವಾಗಿ ಒದಗಿಸುವಂತೆ ಪರಿಷ್ಕೃತ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಆಂಟಿ ರೇಬೀಸ್ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಬಗ್ಗೆ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, ಈ ಅಗತ್ಯ ಚಿಕಿತ್ಸೆಗಳ ಲಭ್ಯತೆಯನ್ನು ಸುಗಮಗೊಳಿಸಲು ಈ ಕೆಳಗಿನ ಪರಿಷ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದೆ ಎಂದಿದ್ದಾರೆ. ಪ್ರಾಣಿ ಕಡಿತದ ಪ್ರಕರಣಗಳಿಗೆ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು Equine ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ERIG) ಒದಗಿಸುವ ಕುರಿತು 30.11.2024 ರಂದು ಹೊರಡಿಸಲಾದ ಅದೇ ಸಮ ಸಂಖ್ಯೆಯ ಹಿಂದಿನ ಸುತ್ತೋಲೆಯನ್ನು ಉಲ್ಲೇಖಿಸಿ, 2025 ರ 07.11.2025 ರ ರಿಟ್ ಅರ್ಜಿ (ಸಿವಿಲ್) ಸಂಖ್ಯೆ (ಗಳು) 5 ರಲ್ಲಿ ಭಾರತದ ಗೌರವಾನ್ವಿತ…
ಬೆಳಗಾವಿ ಸುವರ್ಣಸೌಧ : ಉತ್ತರ ಕರ್ನಾಟಕ ಭಾಗದಲ್ಲಿ ಇಎಸ್ಐ ಆಸ್ಪತ್ರೆಗೆ ಬೇಡಿಕೆ ಇದೆ. ಆದರೆ ಐಪಿ ಹೋಲ್ಡರ್ (ESI ಯೋಜನೆಯಲ್ಲಿ ನೋಂದಾಯಿಸಿದ ವಿಮೆ ಮಾಡಿದ ವ್ಯಕ್ತಿ (Insured Person) ಕಡಿಮೆ ಇರುವ ಕಾರಣ ಇಎಸ್ಐ ಆಸ್ಪತ್ರೆಗೆ ಅನುಮತಿ ಸಿಗುತ್ತಿಲ್ಲ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಲ್ಕನೇ ದಿನ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಿ ರಾಣೆಬೆನ್ನೂರಿನ ಶಾಸಕರಾದ ಪ್ರಕಾಶ್ ಕೋಳಿವಾಡ ಅವರ ಪ್ರಶ್ನೆಗೆ ಉತ್ತರ ನೀಡಿದರು. ಇಎಸ್ಐ ಆಸ್ಪತ್ರೆ ಆಗಲು ೫೦ ಸಾವಿರ ಐಪಿ ಹೋಲ್ಡರ್ ಇರಬೇಕು. ಎರಡು ಅಥವಾ ಮೂರು ಜಿಲ್ಲೆಗೆ ಸೇರಿ ಒಂದು ಇಎಸ್ಐ ಆಸ್ಪತ್ರೆಗೆ ಅವಕಾಶ ನೀಡಲು ಕೇಂದ್ರ ಉದ್ಯೋಗ ಮತ್ತು ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದಿದ್ದೇನೆ. ಅನುಮತಿ ಸಿಕ್ಕರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇಎಸ್ಐ ಆಸ್ಪತ್ರೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಇದೆ.…
ಬೆಳಗಾವಿ: ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ನರ್ಸ್ ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ವೈದ್ಯಾಧಿಕಾರಿಗಳನ್ನು ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 1 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ…
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಯಿತು. ಕವಿಪ್ರನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನೇತೃತ್ವದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಂಡು, 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನಿಗಮದ ಉನ್ನತಾಧಿಕಾರಿಗಳು ವಿತರಿಸಿದರು. ಎರಡು ದಿನಗಳ ಕಾಲ ನಡೆದ ಕೌನ್ಸೆಲಿಂಗ್ ಪ್ರಕ್ರಿಯೆಗೆ ತಂತ್ರಾಂಶವನ್ನು ನಿಗಮದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಅಧಿಕಾರಿಗಳು ಅಭಿವೃದ್ದಿ ಪಡಿಸಿದ್ದರು. ಕೆಪಿಟಿಸಿಎಲ್ ವೆಬ್ಸೈಟ್ನಲ್ಲಿ ಪ್ರಕಟಿಸಿರುವಂತೆ ಒಟ್ಟು 491 ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಯ್ಕೆಗೊಂಡಿದ್ದು, ಈ ಪೈಕಿ 448 ಅಭ್ಯರ್ಥಿಗಳಿಗೆ ಈಗ ನೇಮಕಾತಿ ಆದೇಶಗಳನ್ನು ವಿತರಿಸಲಾಗಿದೆ. ಉಳಿದ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಅವರ ಮೀಸಲಾತಿ ನೈಜತೆ ಪ್ರಮಾಣಪತ್ರ ಮತ್ತು ಸಿಂಧುತ್ವ ಪ್ರಮಾಣಪತ್ರಗಳು ಸ್ವೀಕೃತಗೊಂಡ ನಂತರ ನೇಮಕಾತಿ ಆದೇಶಗಳನ್ನು…
ಬೆಳಗಾವಿ ಸುವರ್ಣಸೌಧ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಕಬ್ಬು ಮತ್ತು ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತ ಮುಖಂಡರು ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. • ಕಬ್ಬು ಬೆಳೆಗಾರರು ಸೇರಿದಂತೆ ಎಲ್ಲಾ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದು, ರೈತರ ಎಲ್ಲಾ ಬೇಡಿಕೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲಾಗುವುದು. • ನಮ್ಮ ಸರ್ಕಾರ ಬಂದ ಬಳಿಕ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರಸ್ತುತ ಪ್ರತಿದಿನ ಒಂದು ಕೋಟಿ ಲೀಟರ್ ಹಾಲು ಖರೀದಿಗೆ ರೂ.5 ಕೋಟಿ ಪ್ರೋತ್ಸಾಹ ಧನವನ್ನು ರೈತರಿಗೆ ನೀಡುತ್ತಿದ್ದೇವೆ. • ಕಬ್ಬಿನ ತೂಕದಲ್ಲಿ ಸಕ್ಕರೆ ಕಾರ್ಖಾನೆಗಳು ಮಾಡುವ ಮೋಸವನ್ನು ತಪ್ಪಿಸಲು, ಇಳುವರಿ ನಿಗದಿಯನ್ನು ವೈಜ್ಞಾನಿಕವಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. • ಭೂ ಸುಧಾರಣಾ ಕಾಯ್ದೆಗೆ ಹಿಂದಿನ ಸರ್ಕಾರ ಮಾಡಿರುವ…
ಕಲಬುರಗಿ: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರ್ಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮಾಜಿ ಶಾಸಕ, ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಕೇಂದ್ರ ಸರ್ಕಾರ ಪ್ರಸಕ್ತವಾಗಿ ತೊಗರಿ ಖರೀದಿಗೆ ಒಪ್ಪಿಗೆ ನೀಡಿದ್ದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರದ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಿವರಾಜಸಿಂಗ್ ಚೌವಾಣ ಅವರನ್ನು ಪತ್ರಿಕಾ ಹೇಳಿಕೆಯಲ್ಲಿ ತೇಲ್ಕೂರ ಅಭಿನಂದಿಸಿ. ಕೇಂದ್ರ ಸರ್ಕಾರ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದನ್ನು ಸಹ ಸ್ವಾಗತ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಿನಿಂದಲೇ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಿ ವಾರದೊಳಗೆ ತೊಗರಿ ಖರೀದಿ ಶುರು ಮಾಡಬೇಕೆಂದಿದ್ದಾರೆ. ಸಾವಿರ ರೂ ಪ್ರೋತ್ಸಾಹ ಧನ ನೀಡಲಿ ಅತಿವೃಷ್ಟಿ ಯಿಂದ ತೊಗರಿ ಬೆಳೆ ಹಾನಿಯಾಗಿ ಅಲ್ಲಲ್ಲಿ ಅಲ್ಪ ಸ್ವಲ್ಪ ಬೆಳೆ ಉಳಿದು ರಾಶಿಯಾಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ…
ಈ ಒಂದು ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆಹರಿಸುತ್ತಾರೆ. ಇದು ಸತ್ಯ ..!ರಾಯರ ಮಹಿಮೆ ಇದು ನೇರವಾಗಿ ನೋಡಿ..! ಮಹಾ ಮಹಿಮ ಗುರುಗಳು ಮತ್ತು ಜೀವಂತ ದೇವರು.ಗುರುರಾಘವೇಂದ್ರರ ಆರಾಧ್ಯ ದೈವ ಮೂಲರಾಮ ಅಂದರೆ ಮಹಾವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳೇ ಬಂದರು ಶ್ರೀ ಗುರುರಾಯರ ಸ್ಮರಣೆ ಮಾಡಿದ ತಕ್ಷಣವೇ ಕಷ್ಟವು ಮಂಜಿನಂತೆ ಕರಗುವುದು. ಗುರುರಾಯರನ್ನು ನೆನೆಯಲು ಹಲವಾರು ಮಂತ್ರಗಳಿವೆ ಅದರಲ್ಲಿ ರಾಘವೇಂದ್ರ ಗಾಯತ್ರಿ ಮಂತ್ರವು ತುಂಬಾ ಶ್ರೇಷ್ಠವಾದ ಮಂತ್ರವಾಗಿದೆ.ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಮೂರು ಬಾರಿ,ಐದು ಬಾರಿ,ಒಂಭತ್ತು ಬಾರಿ,ಇಪ್ಪತೊಂದು ಬಾರಿ,ಸಾವಿರದ ಎಂಟು ಬಾರಿ ಜಪಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರುರಾಯರು ನಿಮ್ಮ ಕನಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮ್ಮ ಸಕಲ ಸಂಕಷ್ಟಗಳನ್ನು ಕಳೆಯುತ್ತಾರೆ.ಆ ನಿಯಮಗಳು ಯಾವುವೆಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲವಾದರು ಗುರುರಾಯರ ವಿಶೇಷ ದಿನವಾದ…
ಬೆಂಗಳೂರು: ನಗರದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಪ್ರೋಟೋಟೈಪ್ ರೈಲನ್ನು ಅಂದರೆ ಚಾಲಕ ರಹಿತ ರೈಲನ್ನು ಇಂದು ಬಿ ಎಂ ಆರ್ ಸಿ ಎಲ್ ಅನಾವರಣಗೊಳಿಸಿದೆ. ಆ ಮೂಲಕ ಶೀಘ್ರದಲ್ಲೇ ಪಿಂಕ್ ಲೈನ್ ಯೋಜನೆ ಆರಂಭದ ಮುನ್ಸೂಚನೆಯನ್ನು ನೀಡಲಾಗಿದೆ. ಇಂದು ಬೆಂಗಳೂರಿನ ಪಿಂಕ್ ಲೈನ್ ಮೂಲ ಮಾದರಿಯನ್ನು ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ.ರವಿಶಂಕರ್, ಬಿಇಎಂಎಲ್ ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕ ಶಾಂತನು ಹಾಗೂ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಲಾಯಿತು. ಬೆಂಗಳೂರಿನ ಕಾಳೇನ ಅಗ್ರಹಾರದಿಂದ ನಾಗಾವರಣವರೆಗೆ ಸುಮಾರು 21.25 ಕಿಲೋಮೀಟರ್ ಗುಲಾಬಿ ಮಾರ್ಗವು ಸಂಪರ್ಕಿಸುತ್ತದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರವು ಡಿಸೆಂಬರ್ 2023 ಅಥವಾ 2027ರಲ್ಲಿ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಅಂದಹಾಗೇ ನಮ್ಮ ಮೆಟ್ರೋದ ಪಿಕ್ ಲೈನ್ ರೈಲು ಚಾಲಕ ರಹಿತ ರೈಲಾಗಿದೆ. ಮೊದಲ ಹಂತದಲ್ಲಿ ಐದು ಹೊಸ ಚಾಲಕ ರಹಿತ ರೈಲನ್ನು ಓಡಿಸೋದಕ್ಕೆ ಬಿಎಂಆರ್ ಸಿಎಲ್ ಮುಂದಾಗಿದೆ. ಡಿಸೆಂಬರ್.15ರ ನಂತ್ರ…
ಬಾಂಗ್ಲಾದೇಶ: ಗುರುವಾರ 13ನೇ ರಾಷ್ಟ್ರೀಯ ಸಂಸತ್ ಚುನಾವಣೆಯನ್ನು ಫೆಬ್ರವರಿ 12, 2026 ರಂದು ನಡೆಸುವುದಾಗಿ ಘೋಷಿಸಲಾಗಿದೆ. ಇದು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಪದಚ್ಯುತಿಯ ನಂತರದ ಮೊದಲ ಸಾರ್ವತ್ರಿಕ ಚುನಾವಣೆಯಾಗಿದೆ. ಬಾಂಗ್ಲಾದೇಶದ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ನಸೀರುದ್ದೀನ್ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ದೇಶವು “ಮುಕ್ತ ಮತ್ತು ಪ್ರಜಾಪ್ರಭುತ್ವ ಮತದಾನ” ನಡೆಸಬಹುದು ಎಂದು ಜಗತ್ತಿಗೆ ಪ್ರದರ್ಶಿಸಲು ಸಿದ್ಧವಾಗಿದೆ ಎಂದು ಹೇಳಿದರು. ನಾಗರಿಕರು ನಕಲಿ ಸುದ್ದಿ ಮತ್ತು ವದಂತಿಗಳ ವಿರುದ್ಧ ಜಾಗರೂಕರಾಗಿರಬೇಕು ಎಂದು ಅವರು ಒತ್ತಾಯಿಸಿದರು, ಚುನಾವಣೆಗೆ ಮುನ್ನ ಇವು ದೊಡ್ಡ ಸವಾಲುಗಳಾಗಿವೆ ಎಂದು ಕರೆದರು. ಸಾರ್ವತ್ರಿಕ ಚುನಾವಣೆ ಮತ್ತು ಜುಲೈ ಚಾರ್ಟರ್ ಜನಾಭಿಪ್ರಾಯ ಸಂಗ್ರಹಣೆಗೆ ಮತದಾನ ಫೆಬ್ರವರಿ 12 ರಂದು ಏಕಕಾಲದಲ್ಲಿ ನಡೆಯಲಿದೆ ಎಂದು ಸಿಇಸಿ ದೃಢಪಡಿಸಿತು. ಒಟ್ಟು 300 ಸಂಸದೀಯ ಸ್ಥಾನಗಳಿಗೆ ಮತದಾನ ನಡೆಯಲಿದೆ ಮತ್ತು ಅನಿವಾಸಿ ಬಾಂಗ್ಲಾದೇಶಿಯರು ನಾಳೆಯಿಂದ ಡಿಸೆಂಬರ್ 25 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ವೇಳಾಪಟ್ಟಿಯ ಪ್ರಕಾರ, ನಾಮಪತ್ರಗಳನ್ನು ಸಲ್ಲಿಸಲು ಕೊನೆಯ…














