Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಅನಾರೋಗ್ಯದಿಂದಾಗಿ ಸ್ಯಾಂಡಲ್ ವುಡ್ ನಿರ್ದೇಶಕ, ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ನಿರ್ದೇಶಕ ದೀಪಕ್ ಅರಸ್ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ದೀಪಕ್ ಅರಸ್(42) ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ನಟಿ ಅಮೂಲ್ಯ ಅವರ ಸಹೋದರ, ಕನ್ನಡ ಚಲನ ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅಂದಹಾಗೇ ದೀಪಕ್ ಅರಸ್ ಕನ್ನಡದ ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾ ನಿರ್ದೇಶಿಸುವ ಮೂಲಕ, ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. 2011ರಲ್ಲಿ ರಾಕೇಶ್ ಅಭಿನಯದಲ್ಲಿ ಮನಸಾಲಜಿ ಚಿತ್ರ ತೆರೆ ಕಂಡಿತ್ತು. 2012ರಲ್ಲಿ ಡಾರ್ಲಿಂಗ್ ಕೃಷ್ಣ, ಸೋನಲ್ ಮೊಂಥೆರೋ ಅಭಿನಯ ಶುಗರ್ ಫ್ಯಾಕ್ಟರಿ ಚಿತ್ರವನ್ನು ನಿರ್ದೇಶಿಸಿದ್ದರು. https://kannadanewsnow.com/kannada/bengaluru-2nd-airport-issue-deputy-cm-dk-shivakumar-to-chair-crucial-meeting-tomorrow/ https://kannadanewsnow.com/kannada/note-jan-shatabdi-train-to-stop-at-tiptur-railway-station-in-tumkur/
ಗಮನಿಸಿ: ಇನ್ಮುಂದೆ ತುಮಕೂರಿನ ‘ತಿಪಟೂರು ರೈಲು ನಿಲ್ದಾಣ’ದಲ್ಲಿ ‘ಜನ ಶತಾಬ್ದಿ ರೈಲು’ ನಿಲುಗಡೆ | Jan Shatabdi Train
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ತುಮಕೂರು ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲೂ ಜನ ಶತಾಬ್ದಿ ರೈಲು ನಿಲುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದು, ಹುಬ್ಬಳ್ಳಿ-ಬೆಂಗಳೂರು, ಶಿವಮೊಗ್ಗ-ಬೆಂಗಳೂರು ಮಾರ್ಗವಾಗಿ ತೆರಳುವಂತ ಜನ ಶತಾಬ್ದಿ ರೈಲನ್ನು ತುಮಕೂರಿನ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ. ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ. ಪ್ರಯಾಣಿಕರಿಗೆ…
ಬೆಂಗಳೂರು: ನಗರದಲ್ಲಿ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಚರ್ಚೆ ನಡೆಯುತ್ತಿದೆ. ಈ ಸಂಬಂಧ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಯಾವ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ. ನಾಳೆ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಶಾಸಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಬೆಂಗಳೂರು ನಗರದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಮಹತ್ವದ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಕೈಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/bomb-threat-call-to-flights-govt-plans-to-add-callers-to-no-fly-list/ https://kannadanewsnow.com/kannada/ugc-net-june-2024-results-declared-heres-how-to-check-results/
ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: ಕರೆ ಮಾಡಿದವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ
ನವದೆಹಲಿ: ವಿಮಾನಗಳಿಗೆ ಬಾಂಬ್ ಬೆದರಿಕೆಗಳ ಸರಣಿ ಗುರುವಾರವೂ ಮುಂದುವರೆದಿದ್ದು, ಕನಿಷ್ಠ ಒಂಬತ್ತು ವಿಮಾನಗಳಿಗೆ ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆಗಳು ಬಂದಿವೆ. ಇವುಗಳಲ್ಲಿ ಏರ್ ಇಂಡಿಯಾದ ಐದು ವಿಮಾನಗಳು, ವಿಸ್ತಾರಾದ ಎರಡು ವಿಮಾನಗಳು ಮತ್ತು ಇಂಡಿಗೊದ ಒಂದು ವಿಮಾನಗಳು ಸೇರಿವೆ. ಇದು ಈ ವಾರ ಅಂತಹ ಘಟನೆಗಳ ಸಂಖ್ಯೆಯನ್ನು ಸುಮಾರು 30ಕ್ಕೆ ಕೊಂಡೊಯ್ಯುತ್ತದೆ. ಈ ಹಿನ್ನಲೆಯಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದಂತವರನ್ನು ವಿಮಾನ ಹಾರಾಟ ನಿಷೇಧ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಜರ್ಮನಿಯ ಫ್ರಾಂಕ್ಫರ್ಟ್ನಿಂದ 147 ಪ್ರಯಾಣಿಕರನ್ನು ಹೊತ್ತ ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಫ್ರಾಂಕ್ಫರ್ಟ್-ಮುಂಬೈ ವಿಮಾನವು ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಿದೆ ಆದರೆ ಇಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ವಿಸ್ತಾರಾ ಹೇಳಿಕೆಯಲ್ಲಿ ತಿಳಿಸಿದೆ. “ಅಕ್ಟೋಬರ್ 16, 2024 ರಂದು ಫ್ರಾಂಕ್ಫರ್ಟ್ನಿಂದ ಮುಂಬೈಗೆ ಕಾರ್ಯನಿರ್ವಹಿಸುತ್ತಿರುವ ವಿಸ್ತಾರಾ ವಿಮಾನ ಯುಕೆ 028 ಸಾಮಾಜಿಕ ಮಾಧ್ಯಮದಲ್ಲಿ ಸ್ವೀಕರಿಸಿದ ಭದ್ರತಾ ಬೆದರಿಕೆಗೆ ಒಳಪಟ್ಟಿದೆ” ಎಂದು ಏರ್ಲೈನ್…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಯುಜಿಸಿ ನೆಟ್ 2024 ರ ( UGC NET 2024 ) ಜೂನ್ ಅಧಿವೇಶನದ ಫಲಿತಾಂಶಗಳನ್ನು ಪ್ರಕಟಿಸಿದೆ. ಜೂನ್ 2024 ರ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (University Grants Commission National Eligibility Test – UGC NET) ಫಲಿತಾಂಶವನ್ನು ಅಧಿಕೃತ ಯುಜಿಸಿ ನೆಟ್ ವೆಬ್ಸೈಟ್ ugcnet.nta.ac.in ಆನ್ಲೈನ್ನಲ್ಲಿ ಪ್ರವೇಶಿಸಬಹುದು. ತಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ಒಳಗೊಂಡ ತಮ್ಮ ಲಾಗಿನ್ ಮಾಹಿತಿಯೊಂದಿಗೆ, ಜೂನ್ 2024 ಅಧಿವೇಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಯುಜಿಸಿ ನೆಟ್ ಫಲಿತಾಂಶವನ್ನು ವೀಕ್ಷಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಯುಜಿಸಿ ನೆಟ್ ಪರೀಕ್ಷೆಯನ್ನು ಆಗಸ್ಟ್ 21 ರಿಂದ ಸೆಪ್ಟೆಂಬರ್ 5, 2024 ರವರೆಗೆ ದೇಶಾದ್ಯಂತ ಹಲವಾರು ಪರೀಕ್ಷಾ ಸ್ಥಳಗಳಲ್ಲಿ ಎನ್ಟಿಎ ನಡೆಸಿತು. ಅದರ ನಂತರ, ಸೆಪ್ಟೆಂಬರ್ 8, 2024 ರಂದು, ಅಧಿಕೃತ ವೆಬ್ಸೈಟ್ ಉತ್ತರ ಕೀಯನ್ನು ಬಿಡುಗಡೆ ಮಾಡಿತು. ಸೆಪ್ಟೆಂಬರ್ 11…
ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಗುರುವಾರ ಭಾರತ ತಂಡವನ್ನು ಪ್ರಕಟಿಸಿದೆ. ಹರ್ಮನ್ಪ್ರೀತ್ ಕೌರ್ ನಾಲ್ಕು ಅನ್ಕ್ಯಾಪ್ಡ್ ಆಟಗಾರರನ್ನು ಹೊಂದಿರುವ ತಂಡವನ್ನು ಮುನ್ನಡೆಸುತ್ತಿದ್ದಾರೆ ಆದರೆ ಪೂಜಾ ವಸ್ತ್ರಾಕರ್ ಮತ್ತು ಆಶಾ ಶೋಭನಾಗೆ ಸ್ಥಾನವಿಲ್ಲ. “ರಿಚಾ ಘೋಷ್ 12 ನೇ ತರಗತಿ ಬೋರ್ಡ್ ಪರೀಕ್ಷೆಗಳಿಂದಾಗಿ ಆಯ್ಕೆಗೆ ಲಭ್ಯವಿರಲಿಲ್ಲ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. “ಆಶಾ ಶೋಭನಾ ಪ್ರಸ್ತುತ ಗಾಯದಿಂದ ಬಳಲುತ್ತಿದ್ದಾರೆ ಮತ್ತು ಆಯ್ಕೆಗೆ ಲಭ್ಯವಿರಲಿಲ್ಲ. ಈ ಸರಣಿಯಿಂದ ಪೂಜಾ ವಸ್ತ್ರಾಕರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ಮಹಿಳಾ ತಂಡ ಪ್ರಕಟ ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಳನ್ ಹೇಮಲತಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸಯಾಲಿ ಸತ್ಗರೆ, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ತೇಜಲ್ ಹಸಬ್ನಿಸ್, ಸೈಮಾ ಠಾಕೂರ್, ಪ್ರಿಯಾ ಮಿಶ್ರಾ, ರಾಧಾ ಯಾದವ್, ಶ್ರೇಯಂಕಾ…
ಬೆಂಗಳೂರು: ನಗರದಲ್ಲಿ ರೌಂಡ್ಸ್ ಗೆ ತೆರಳಿದ್ದಂತ ಎಎಸ್ಐ ಒಬ್ಬರು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆಯಲ್ಲಿ ಹೃದಯಾಘಾತದಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಶಿವಶಂಕರ ಚಾರಿ ಎಂಬುವರಿಗೆ ರೌಂಡ್ಸ್ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಸಿಬ್ಬಂದಿಗಳೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೇ ಚಿಕಿತ್ಸೆ ಫಲಿಸದೇ ಶಿವಶಂಕರ ಚಾರಿ ಅವರು ಕೊನೆಯುಸಿರು ಎಳೆದಿರುವುದಾಗಿ ತಿಳಿದು ಬಂದಿದೆ. 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದಂತ ಶಿವಶಂಕರ ಚಾರಿ ಅವರು, ಪೇದೆಯ ಬಳಿಕ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ರೌಂಡ್ಸ್ ವೇಳೆಯಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಈ ವೇಳೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/railways-reduces-advance-ticket-booking-period-from-120-to-60-days-with-effect-from-november-1/ https://kannadanewsnow.com/kannada/7-bangladeshi-nationals-found-in-shivamogga-city-detained-by-police/
ಶಿವಮೊಗ್ಗ: ನಗರದಲ್ಲಿ ಇಂದು 7 ಬಾಂಗ್ಲಾ ಪ್ರಜೆಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಜಯನಗರ ಠಾಣೆಯ ಪೊಲೀಸರು 7 ಬಾಂಗ್ಲಾ ಪ್ರಜೆಗಳನ್ನು ನಗರದಲ್ಲಿ ಪತ್ತೆ ಹಚ್ಚಿದ್ದಾರೆ. ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡ ಕೆಲಸದಲ್ಲಿ ಕಾರ್ಯನಿರ್ವಹಿಸುತ್ತಿದ್ದಂತ ಜನರಲ್ಲಿ ಬಾಂಗ್ಲಾ ಪ್ರಜೆಗಳು ಇರುವುದಾಗಿ ತಿಳಿದು ಬಂದಿತ್ತು. ಹೀಗಾಗಿ ಜಯನಗರ ಠಾಣೆಯ ಪೊಲೀಸರು ದಾಳಿ ನಡೆಸಿ 7 ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಪತ್ತೆಯಾದಂತ ಬಾಂಗ್ಲಾದೇಶದ ಪ್ರಜೆಗಳ ಬಳಿಯಲ್ಲಿ ಮಂಗಳೂರು ವಿಳಾಸವಿರುವಂತ ಆಧಾರ್ ಕಾರ್ಡ್ ಕೂಡ ಪತ್ತೆಯಾಗಿದೆ. ಇವರನ್ನು ಕಟ್ಟಡ ಕೆಲಸಕ್ಕಾಗಿ ಮೇಸ್ತ್ರಿಯೊಬ್ಬರು ಕರೆದುಕೊಂಡು ಬಂದಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆಯನ್ನ ಜಯನಗರ ಠಾಣೆಯ ಪೊಲೀಸರು ನಡೆಸುತ್ತಿದ್ದಾರೆ. https://kannadanewsnow.com/kannada/railways-reduces-advance-ticket-booking-period-from-120-to-60-days-with-effect-from-november-1/ https://kannadanewsnow.com/kannada/breaking-boy-dies-after-falling-into-drain-in-haveri-dc-orders-suspension-of-two-officials/
ನವದೆಹಲಿ: ನಿಜವಾದ ಪ್ರಯಾಣಿಕರನ್ನು ಉತ್ತೇಜಿಸಲು ಮತ್ತು ಹೆಚ್ಚುತ್ತಿರುವ ಪ್ರದರ್ಶನ ಪ್ರವೃತ್ತಿಯನ್ನು ಕಡಿಮೆ ಮಾಡಲು, ಭಾರತೀಯ ರೈಲ್ವೆ 01.11.2024 ರಿಂದ ಜಾರಿಗೆ ಬರುವಂತೆ ಮುಂಗಡ ಕಾಯ್ದಿರಿಸುವ ಅವಧಿಯನ್ನು ಪ್ರಸ್ತುತ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿದೆ. ಭಾರತೀಯ ರೈಲ್ವೆ 01.11.2024 ರಿಂದ ಜಾರಿಗೆ ಬರುವಂತೆ ಮುಂಗಡ ಕಾಯ್ದಿರಿಸುವ ಅವಧಿಯನ್ನು ಪ್ರಸ್ತುತ 120 ದಿನಗಳಿಂದ 60 ದಿನಗಳಿಗೆ ಇಳಿಸಿದೆ. ಪ್ರಯಾಣದ ದಿನಾಂಕವನ್ನು ಹೊರತುಪಡಿಸಿ. ನಿಜವಾದ ಪ್ರಯಾಣಿಕರನ್ನು ಉತ್ತೇಜಿಸುವ ಸಲುವಾಗಿ ಭಾರತೀಯ ಪ್ರಯಾಣಿಕರು ರೈಲು ಬುಕಿಂಗ್ಗಾಗಿ ಮುಂಗಡ ಕಾಯ್ದಿರಿಸುವ ಅವಧಿಯಲ್ಲಿ (ಎಆರ್ಪಿ) ಈ ಬದಲಾವಣೆಯನ್ನು ರೈಲ್ವೆ ಸಚಿವಾಲಯ ಘೋಷಿಸಿದೆ. ಈ ನಿರ್ಧಾರವು ಭಾರತದಲ್ಲಿ ರೈಲು ಪ್ರಯಾಣಕ್ಕೆ ನಿಜವಾದ ಬೇಡಿಕೆಯ ಗೋಚರತೆಯನ್ನು ಸುಧಾರಿಸಲು ರೈಲ್ವೆ ಮಂಡಳಿಗೆ ಸಹಾಯ ಮಾಡುತ್ತದೆ. 61 ರಿಂದ 120 ದಿನಗಳ ಅವಧಿಗೆ ಮಾಡಿದ ಸುಮಾರು 21 ಪ್ರತಿಶತದಷ್ಟು ಕಾಯ್ದಿರಿಸುವಿಕೆಗಳು ರದ್ದಾಗುತ್ತಿರುವುದು ಗಮನಕ್ಕೆ ಬಂದಿದೆ. ಇದಲ್ಲದೆ, 5 ಪ್ರತಿಶತದಷ್ಟು ಪ್ರಯಾಣಿಕರು ತಮ್ಮ ಟಿಕೆಟ್ಗಳನ್ನು ರದ್ದುಗೊಳಿಸುತ್ತಿಲ್ಲ ಅಥವಾ ಪ್ರಯಾಣವನ್ನು ಕೈಗೊಳ್ಳುತ್ತಿಲ್ಲ. ಈ ನೋ ಶೋ ಪ್ರವೃತ್ತಿಯು…
ಬೆಂಗಳೂರು : “ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಹೇಗೆ ಕಾರ್ಯಕ್ರಮ ರೂಪಿಸುತ್ತಿದೆ ಎಂದು ತಿಳಿಸಿದರು. “ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ರೂಪಿಸಿದರು ಅದು ಮಹಿಳಾ ಕೇಂದ್ರಿತ ಕಾರ್ಯಕ್ರಮಗಳಾಗಿರುತ್ತವೆ. ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದನ್ನು ಬಳಸಿಕೊಂಡು ಈ ಯೋಜನೆಗಳ ಫಲಾನುಭವಿಗಳಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆಗಳನ್ನು ಮನದಟ್ಟು ಮಾಡಿ. ಆಮೂಲಕ ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ. ಆಗ ಬಿಜೆಪಿಯವರು ಏನೇ ತಿಪ್ಪರಲಾಗ…