Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಬಿಎಂಪಿ ಆಟದ ಮೈದಾನಕ್ಕೆ ಆಟವಾಡಲು ತೆರಳಿದ್ದಂತ 10 ವರ್ಷದ ಬಾಲಕನ ಮೇಲೆ ಗೇಟ್ ಬಿದ್ದು, ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿರುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವಂತ ಬಿಬಿಎಂಪಿ ಆಟದ ಮೈದಾನಕ್ಕೆ ಭಾನುವಾರವಾದಂತ ಇಂದು ಒಬ್ಬನೇ ಆಟವಾಡುವುದಕ್ಕೆ 10 ವರ್ಷದ ಬಾಲಕ ನಿರಂಜನ್ ತೆರಳಿದ್ದನು. ಬಿಬಿಎಂಪಿ ಮೈದಾನಕ್ಕೆ ಅಳವಡಿಸಿದ್ದಂತ ಗೇಟ್ ತೆಗೆಯುವಾಗ ಮುರಿದು ಬಾಲಕನ ಮೇಲೆಯೇ ಬಿದ್ದಿದೆ. ಬಿಬಿಎಂಪಿ ಆಟದ ಮೈದಾನದ ಗೇಟ್ ಮುರಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಂತ 10 ವರ್ಷದ ಬಾಲಕ ನಿರಂಜನ್ ಅನ್ನು ಸಮೀಪದ ಕೆಸಿ ಜನರಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಮಲ್ಲೇಶ್ವರಂ ಆಟದ ಮೈದಾನದ ಗೇಟ್ ತುಕ್ಕು ಹಿಡಿದು ಹಾಳಾಗಿದ್ದರೂ ದುರಸ್ಥಿ ಮಾಡದೇ ಹಾಗೇ ಬಿಟ್ಟಿದ್ದಂತ ಬಿಬಿಎಂಪಿ ನಿರ್ಲಕ್ಷ್ಯದಿಂದಲೇ ಬಾಲಕ ನಿರಂಜನ್ ಸಾವನ್ನಪ್ಪಿರುವುದಾಗಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಮಲ್ಲೇಶ್ವರಂ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/cauvery-aarti-row-mla-dinesh-gooligowda-congratulates-govt/ https://kannadanewsnow.com/kannada/cauvery-aarti-begins-for-world-famous-mysuru-dasara/
ಮಂಡ್ಯ: ಜಿಲ್ಲೆಯ ಕಾವೇರಿ ನದಿಗೆ ರಾಜ್ಯ ಸರ್ಕಾರದಿಂದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ಆರತಿ ಮಾಡಲು ನಿರ್ಧರಿಸಿತ್ತು. ಈ ವಿಚಾರಕ್ಕಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ ಎಂದು ಹೇಳಿರುವ ಮಾತು ಅಕ್ಷರಶಃ ಸತ್ಯ. ಕಾವೇರಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೋಟ್ಯಂತರ ಜನರ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಸಹಾಯವನ್ನು ಮಾಡಿದೆ ಎಂದಿದ್ದಾರೆ. ಪ್ರವಾಸೋದ್ಯಮ ಇರಬಹುದು, ವ್ಯವಸಾಯ ಇರಬಹುದು ಅಥವಾ ನದಿ ದಂಡೆಯ ಮೇಲೆ ಇರುವ ಧಾರ್ಮಿಕ ಕೇಂದ್ರಗಳು ಇರಬಹುದು, ಇದರಿಂದ ಕೋಟ್ಯಂತರ ಜನರ ಬದುಕು ಹಸನಾಗುತ್ತಿದೆ. ಕಾವೇರಿ ನದಿಗೆ ಕಾವೇರಿ ಆರತಿಯನ್ನು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಹೆಮ್ಮೆಯ ವಿಚಾರವಾಗಿದೆ. ಹಾಗಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ. https://kannadanewsnow.com/kannada/cauvery-aarti-begins-for-world-famous-mysuru-dasara/ https://kannadanewsnow.com/kannada/cm-siddaramaiah-thanks-experts-for-saving-20-tmc-of-water-by-installing-gate-to-tungabhadra-reservoir/ https://kannadanewsnow.com/kannada/iran-coal-mine-blast-kills-30-says-state-media/
ವಾರಣಾಸಿ: ಗಂಗಾರತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡಲು ಮುಂದಾಗಿರುವ ರಾಜ್ಯ ಸರಕಾರ ಈ ಸಂಬಂಧ ಪರಿಶೀಲನೆ ನಡೆಸಲು ಮತ್ತೊಂದು ನಿಯೋಗದ ಭೇಟಿ ಅಗತ್ಯವಿದ್ದು, ಶೀಘ್ರದಲ್ಲಿಯೇ ಮತ್ತೊಮ್ಮೆ ಅಧಿಕಾರಿಗಳು ಭೇಟಿ ನೀಡಲು ತೀರ್ಮಾನಿಸಿದ್ದಾರೆ. ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ಈ ವೇಳೆ ಗಂಗಾರತಿ ಟ್ರಸ್್ಟ ಸದಸ್ಯರೊಂದಿಗೆ ಚರ್ಚಿಸಿದರು. ಸರಣಿ ಸಭೆಗಳ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ನಿಯೋಗವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇಲ್ಲಿ ನಾವು ನೋಡಿರುವ ಅಂಶ ಹಾಗೂ ಕಾವೇರಿ ಆರತಿಗೆ ಆಗಬೇಕಿರುವ ಮೂಲಸೌಕರ್ಯದ ಬಗ್ಗೆ ಶೀಘ್ರದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ವರದಿ ಸಲ್ಲಿಸಲಾಗುವುದು. ಇದರೊಂದಿಗೆ ಕಾವೇರಿ ಆರತಿಗೆ ಇನ್ನಷ್ಟು ಅಧ್ಯಯನ ಅಗತ್ಯವಿರುವುದರಿಂದ ರಾಜ್ಯದ ಅಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು…
ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ( watching child pornography ) ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾನೂನಿನ ಅಡಿಯಲ್ಲಿ ಅಪರಾಧವಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ( Supreme Court ) ಸೋಮವಾರ ತನ್ನ ತೀರ್ಪನ್ನು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (Protection of Children from Sexual Offences – POCSO) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (Information Technology -IT) ಕಾಯ್ದೆಯಡಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಅಪರಾಧವಲ್ಲ ಎಂದು ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಈ ಹಿಂದೆ ಒಪ್ಪಿಕೊಂಡಿತ್ತು. ಜನವರಿ 11 ರಂದು, ಮದ್ರಾಸ್ ಹೈಕೋರ್ಟ್ ತನ್ನ ಮೊಬೈಲ್…
ಕೋಲಾರ: ಜಿಲ್ಲೆಯಲ್ಲಿ ಟೋಮ್ಯಾಟೋ ಬಾಕ್ಸ್ ಗಳನ್ನು ಇಟ್ಟಿದ್ದಂತ ಗೋಡೌನ್ ಗೆ ಬೆಂಕಿ ಬಿದ್ದ ಪರಿಣಾಮ, ರೈತರೊಬ್ಬರಿಗೆ ಸೇರಿದಂತೆ ಟೊಮ್ಯಾಟೋ ಬಾಕ್ಸ್ ಗಳು ಬೆಂಕಿಗೆ ಆಹುತಿಯಾಗಿದ್ದಾವೆ. ಕೋಲಾರದ ಎಪಿಎಂಸಿಯಲ್ಲಿನ ಸೋಮಣ್ಣ ಎಂಬುವರಿಗೆ ಸೇರಿದಂತ ಮಂಡಿಯಲ್ಲಿ 1000 ಸಾವಿರಕ್ಕೂ ಹೆಚ್ಚು ಟೊಮ್ಯಾಟೋ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಾಕ್ಸ್ ಗಳು ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ, ಧಗಧಗಿಸಿ ಹೊತ್ತಿ ಉರಿದು ಹೋಗಿದ್ದಾವೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಂತ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/sangram-singh-makes-history-becomes-first-indian-male-wrestler-to-win-mma-fight/ https://kannadanewsnow.com/kannada/iran-coal-mine-blast-kills-30-says-state-media/ https://kannadanewsnow.com/kannada/cm-siddaramaiah-thanks-experts-for-saving-20-tmc-of-water-by-installing-gate-to-tungabhadra-reservoir/
ಜಾರ್ಜಿಯಾ : ಅಂತಾರಾಷ್ಟ್ರೀಯ ಕುಸ್ತಿಪಟು ಸಂಗ್ರಾಮ್ ಸಿಂಗ್ ( International wrestler Sangram Singh ) ಅವರು ಟಿಬಿಲಿಸಿಯಲ್ಲಿ ನಡೆಯುತ್ತಿರುವ ಗಾಮಾ ಇಂಟರ್ನ್ಯಾಷನಲ್ ಫೈಟಿಂಗ್ ಚಾಂಪಿಯನ್ಶಿಪ್ನಲ್ಲಿ ಚೊಚ್ಚಲ ಪಂದ್ಯವನ್ನು ಗೆಲ್ಲುವ ಮೂಲಕ ಮಿಶ್ರ ಸಮರ ಕಲೆಗಳ (Mixed Martial Arts – MMA) ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ತನಗಿಂತ ಹದಿನೇಳು ವರ್ಷ ಚಿಕ್ಕವನಾದ ಪಾಕಿಸ್ತಾನದ ಹೋರಾಟಗಾರ ಅಲಿ ರಾಜಾ ನಾಸಿರ್ ವಿರುದ್ಧ ಸಿಂಗ್ ಕೇವಲ ಒಂದು ನಿಮಿಷ ಮೂವತ್ತು ಸೆಕೆಂಡುಗಳಲ್ಲಿ ಗೆದ್ದರು. ಫಿಟ್ ಇಂಡಿಯಾ ಐಕಾನ್ ಮತ್ತು ಕಾಮನ್ವೆಲ್ತ್ ಹೆವಿವೇಯ್ಟ್ ಕುಸ್ತಿ ಚಾಂಪಿಯನ್. ಸ್ಪರ್ಧಿಸುತ್ತಿರುವ ಹನ್ನೊಂದು ರಾಷ್ಟ್ರಗಳ ಪೈಕಿ, ಈ ನಂಬಲಾಗದ ಸಾಧನೆಯು 93 ಕೆಜಿ ವಿಭಾಗದಲ್ಲಿ ಭಾರತೀಯ ಫೈಟರ್ ದಾಖಲಿಸಿದ ಅತ್ಯಂತ ವೇಗದ ಗೆಲುವನ್ನು ಪ್ರತಿನಿಧಿಸುತ್ತದೆ. ಕುಸ್ತಿಯಿಂದ ಮಿಶ್ರ ಸಮರ ಕಲೆಗಳಿಗೆ ಸುಗಮ ಪರಿವರ್ತನೆಯನ್ನು ನಿರೀಕ್ಷಿಸುತ್ತಿರುವ ಕಾಮನ್ವೆಲ್ತ್ ಹೆವಿವೇಯ್ಟ್ ಕುಸ್ತಿ ಚಾಂಪಿಯನ್ ಸಂಗ್ರಾಮ್ ಸಿಂಗ್ ಅವರ ಪ್ರದರ್ಶನವು ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕಾಗಿ ತಮ್ಮ ಎಂಎಂಎ ಚೊಚ್ಚಲ ಪಂದ್ಯದಲ್ಲಿ…
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭಗೊಂಡಿದೆ. ಇದರ ನಡುವೆ ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆ, ನಿಶಾನೆ ಆಯ್ಕೆ ಫೈನಲ್ ಮಾಡಲಾಗಿದೆ. ಇಂದು ಮೈಸೂರಿನ ಅರಮನೆಯಲ್ಲಿ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಅವರು ಖಾಸಗಿ ದರ್ಬಾರ್ ಗೆ ಆಯ್ಕೆ ಮಾಡಿದ್ದಾರೆ. ಅರಮನೆಯ ಖಾಸಗಿ ದರ್ಬಾರ್ ಗೆ ಪಟ್ಟದ ಆನೆಯಾಗಿ ಕಂಜನ್, ನಿಶಾನೆ ಆನೆಯಾಗಿ ಭೀಮ ಆಯ್ಕೆ ಮಾಡಲಾಗಿದೆ ಎಂಬುದಾಗಿ ಮೈಸೂರಿನಲ್ಲಿ ಡಿಸಿಎಫ್ ಡಾ ಪ್ರಭುಗೌಡ ಮಾಹಿತಿ ನೀಡಿದ್ದಾರೆ. ಖಾಸಗಿ ದರ್ಬಾರ್ ಗೆ ಇಂದು ಮಹಾರಾಣಿ ಪ್ರಮೋದ ದೇವಿ ಒಡೆಯರ್ ರವರು ಆನೆಗಳನ್ನ ವೀಕ್ಷಣೆ ಮಾಡಿದರು. ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈಗಾಗಿ ಅರಮನೆಯಲ್ಲಿನ ಖಾಸಗಿ ದರ್ಬಾರ್ ಗೆ ಎರಡು ಆನೆಗಳನ್ನ ಮಹಾರಾಣಿಯವರು ಆಯ್ಕೆ ಮಾಡಿದ್ದಾರೆ ಎಂದರು. ಕಂಜನ್ ಆನೆ ಪಟ್ಟದ ಆನೆಯಾಗಿದೆ. ಅರಮನೆಯ ಖಾಸಗಿ ದರ್ಬಾರ್ ಗೆ ನಿಶಾನೆ ಆನೆಯಾಗಿ ಭೀಮನನ್ನ ಆಯ್ಕೆ ಮಾಡಿದ್ದಾರೆ. ಶ್ರೀರಂಗಪಟ್ಟಣ ದಸರಾ ಆನೆ, ದಸರಾ ನಿಶಾನೆ ಆನೆ ಆಯ್ಕೆ…
ಹೊಸಪೇಟೆ: ಒಂದೇ ವಾರದಲ್ಲಿ ತುಂಗಭದ್ರ ಜಲಾಶಯಕ್ಕೆ ಗೇಟ್ ಅಳವಡಿಸಿ 20 ಟಿಎಂಸಿ ನೀರು ಉಳಿಸಿದ ತಜ್ಞರಿಗೆ ರೈತರ ಪರವಾಗಿ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಎರಡನೇ ಬೆಳೆಗೂ ನೀರು ಸಿಗತ್ತದೆ ಎಂದು ರೈತ ಕುಲಕ್ಕೆ ಭರವಸೆ ನೀಡಿದರು. ಮೈತುಂಬಿಕೊಂಡಿರುವ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿ, ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಅತ್ಯಂತ ತುರ್ತಾಗಿ ಅಳವಡಿಸಿದ ಎಂಜಿನಿಯರ್ ಮತ್ತು ಸಿಬ್ಬಂದಿಗೆ ಪ್ರಶಂಸಾ ಪತ್ರ ನೀಡಿ ಸನ್ಮಾನಿಸಿ ಮಾತನಾಡಿದರು. ಗೇಟ್ ಮುರಿದಾಗ ನನ್ನ ರೈತರು ಆತಂಕದಲ್ಲಿದ್ದರು. ಜಲ ಸಂಪನ್ಮೂಲ ಸಚಿವರು ಮತ್ತು ನಾನು ಚರ್ಚಿಸಿ ತುರ್ತಿನ ಕ್ರಮಕ್ಕೆ ಮುಂದಾದೆವು. ನಮ್ಮ ಸೂಚನೆಯಂತೆ ಒಂದೇ ವಾರದಲ್ಲಿ ಗೇಟ್ ಅಳವಡಿಸಿ 20 ಟಿಎಂಸಿ ನೀರನ್ನು ಉಳಿಸಿದ ತಜ್ಞ ಕನ್ನಯ್ಯ ನಾಯ್ಡು ಮತ್ತು ಎಂಜಿನಿಯರ್ ಸಿಬ್ಬಂದಿಗೆ ಸರ್ಕಾರ ಮತ್ತು ರೈತರ ಪರವಾಗಿ ಮುಖ್ಯಮಂತ್ರಿಗಳು ಧನ್ಯವಾದ ಅರ್ಪಿಸಿದರು. ಕರ್ನಾಟಕಕ್ಕೆ ಎಡ ಮತ್ತು ಬಲ ದಂಡೆ ಸೇರಿ 9,26,438 ಎಕರೆಗೆ, ಆಂದ್ರಪ್ರದೇಶದ 625097 ಎಕರೆ, ತೆಲಂಗಾಣದ 87,000 ಎಕರೆಗೆ ನೀರಾವರಿ…
ಬೆಂಗಳೂರು: ನಗರದ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದಂತ ದೆಹಲಿಯ ಶ್ರದ್ಧಾ ವಾಕರ್ ಮಾದರಿಯ ಮಹಾಲಕ್ಷ್ಮೀ ಮರ್ಡರ್ ಮಿಸ್ಟರಿ ಬೆಚ್ಚಿ ಬೀಳಿಸುವಂತಿದೆ. ಕೇವಲ ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ ತುಂಡರಿಸಿದಂತ ದೇಹದ 50 ಪೀಸ್ ಗಳನ್ನು ಜೋಡಿಸಿಟ್ಟಿದ್ದನ್ನು ಕಂಡ ಪೊಲೀಸರು, ಕುಟುಂಬಸ್ಥರೇ ಶಾಕ್ ಆಗಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಮಹಾಲಕ್ಷ್ಮೀ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ, ಆಕೆಯ ದೇಹವನ್ನು ಮೂರು ತುಂಡುಗಳನ್ನಾಗಿ ಮಾಡಿ, ಫ್ರಿಡ್ಜ್ ನಲ್ಲಿ ಅಡಗಿಸಿಟ್ಟಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಿನ್ನೆ ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು, ಕುಟುಂಬಸ್ಥರು ಭೇಟಿ ನೀಡಿದಾಗ ಫ್ರಿಡ್ಜ್ ನಲ್ಲಿದ್ದಂತ 50 ಪೀಸ್ ಪೀಸ್ ಮೃತ ದೇಹವನ್ನು ಕಂಡು ಶಾಕ್ ಆಗಿದ್ದಾರೆ. ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ 50 ಪೀಸ್ ಹಡಗಿಸಿಟ್ಟಿದ್ದಂತ ಹಂತಕರು ಮಹಾಲಕ್ಷ್ಮಿ ಕೊಲೆ ಮಾಡಿರುವಂತ ಹಂತಕರು, ದೇಹವನ್ನು ಮೂರು ಭಾಗವಾಗಿ ಕತ್ತರಿಸಿ, 50 ಪೀಸ್ ಪೀಸ್ ಮಾಡಿ, ಸಿಂಗಲ್ ಡೋರ್ ಫ್ರಿಡ್ಜ್ ನಲ್ಲಿ…
ನವದೆಹಲಿ: ಎಐಸಿಸಿಯಿಂದ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಆದೇಶ ಹೊರಡಿಸಿದ್ದು, ಪ್ರಸ್ತುತ ಭಾರತೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಮತ್ತು ಜಮ್ಮು ಮತ್ತು ಕಾಶ್ಮೀರ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರನ್ನು ಗೌರವಾನ್ವಿತ ಕಾಂಗ್ರೆಸ್ ಅಧ್ಯಕ್ಷರು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ ಎಂದಿದ್ದಾರೆ. ಇನ್ನೂ ನಿರ್ಗಮಿತ ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಅವರ ಕೊಡುಗೆಗಳನ್ನು ಪಕ್ಷ ಶ್ಲಾಘಿಸುತ್ತದೆ ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/pil-in-supreme-court-seeks-sit-probe-into-tirupati-laddu-row/ https://kannadanewsnow.com/kannada/iran-coal-mine-blast-kills-30-says-state-media/