Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಗೌರಿ ಹಬ್ಬದಂದು (ಸೆಪ್ಟೆಂಬರ್ 6) ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನಡೆಸಿತು. ಇಂದಿನ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್.9ಕ್ಕೆ ವಿಚಾರಣೆಯನ್ನು ಮುಂದೂಡಿತು. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇಂದು ದೂರುದಾರರ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ತಮ್ಮ ವಾದವನ್ನು ನ್ಯಾಯಪೀಠದ ಮುಂದಿಟ್ಟರು. ನಾನು ಕಾನೂನು, ವಾಸ್ತವಾಂಶದ ಪ್ರಶ್ನೆಗಳ ಬಗ್ಗೆ ವಾದಿಸುತ್ತೇನೆ. ವಾಕ್ಚಾತುರ್ಯ ಮತ್ತು ವ್ಯಂಗ್ಯದಿಂದ ವಾದಿಸಲು ಬಯಸುವುದಿಲ್ಲ. ಭ್ರಟಾಚಾರ ತಡೆ ಕಾಯ್ದೆ ಸೆಕ್ಷನ್.17ಎ ಆಧರಿಸಿ ವಾದಿಸುತ್ತೇನೆ ಎಂಬುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಸೆಕ್ಷನ್.7ಸಿ ಓದಲು ಬಯಸುತ್ತೇನೆ. ಅನಗತ್ಯ ಲಾಭ, ಅನುಕೂಲ ಪಡೆಯುವುದು ಕೂಡ ಕಾಯ್ದೆಯ ವ್ಯಾಪ್ತಿಯಲ್ಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿ ಹಿರಿಯ ವಕೀಲ ಕೆ.ಜಿ ರಾಘವನ್…
ಮಂಡ್ಯ: ಜಿಲ್ಲೆಯ ನಿಮಿಷಾಂಬ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ ದೇಗುಲಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿದರು. ಇಂದು ರಾಮಲಿಂಗಾ ರೆಡ್ಡಿ, ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಮಂಡ್ಯ ಜಿಲ್ಲೆಯ ನಿಮಿಷಾಂಬ ದೇವಸ್ಥಾನ ಹಾಗೂ ಪಾಂಡವಪುರ ತಾಲ್ಲೂಕಿನ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ ದೇಗುಲಗಳಿಗೆ ಭೇಟಿ ನೀಡಿದರು. ಮುಜರಾಯಿ ಸಚಿವರು ನಿಮಿಷಾಂಬ ದೇವಸ್ಥಾನಕ್ಕೆ ಭೇಟಿ, ಸದರಿ ದೇವಸ್ಥಾನಕ್ಕೆ ಹೆಚ್ಚ್ಇನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿರುವುದರಿಂದ ಭಕ್ತಾಧಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮತ್ತಷ್ಟು ಅಭಿವೃದ್ಧಿ ಕೈಗೊಳ್ಳುವ ಸಂಬಂಧ Master Plan ತಯಾರಿಸಲು ಸೂಚಿಸಿದರು. ಇದೇ ಸಂದರ್ಭದಲ್ಲಿ ಆರತಿ ಶ್ರೀ ಅಹಲ್ಯಾದೇವಿ ಉಕ್ಕಡ ಮಾರಮ್ಮನ ದೇಗುಲಕ್ಕೆ ಮಾನ್ಯ ಸಚಿವರು ಭೇಟಿ ನೀಡಿದರು. ಇಲ್ಲಿ ಮೂಲಭೂತ ಸೌಲಭ್ಯಗಳಾದ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯು ಇಲ್ಲದಿರುವುದನ್ನು ಕಂಡು ಕೂಡಲೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವಸ್ಥಾನಗಳು ಭಕ್ತಾಧಿಗಳ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಭಕ್ತಾಧಿಗಳು…
ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ರಿಯಾಸಿ ಜಿಲ್ಲೆಯ ವೈಷ್ಣೋ ದೇವಿ ದೇವಾಲಯದ ಹೊಸ ಟ್ರ್ಯಾಕ್ನಲ್ಲಿ ಸೋಮವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಹಿಳಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪ್ರಕಾರ, ಮಧ್ಯಾಹ್ನ 2.35 ರ ಸುಮಾರಿಗೆ ಭವನದಿಂದ ಮೂರು ಕಿಲೋಮೀಟರ್ ಮುಂದಿರುವ ಪಂಚಿ ಬಳಿ ಭೂಕುಸಿತ ಸಂಭವಿಸಿದೆ. ಓವರ್ ಹೆಡ್ ಕಬ್ಬಿಣದ ರಚನೆಯ ಒಂದು ಭಾಗಕ್ಕೂ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾತ್ರಾರ್ಥಿಗಳು ದೇವಾಲಯಕ್ಕೆ ತೆರಳುತ್ತಿದ್ದಾಗ ಭೂಕುಸಿತದ ನಂತರ ಕಬ್ಬಿಣದ ರಚನೆಯ ಅಡಿಯಲ್ಲಿ ಸಿಕ್ಕಿಬಿದ್ದರು ಎಂದು ಅವರು ಹೇಳಿದರು. ಘಟನೆಯಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಿಯಾಸಿಯ ಉಪ ಆಯುಕ್ತ ವಿಶೇಷ್ ಪಾಲ್ ಮಹಾಜನ್ ಪ್ರಾಥಮಿಕ ಮಾಹಿತಿ ವರದಿಯನ್ನು ಉಲ್ಲೇಖಿಸಿದ್ದಾರೆ. ಹಿರಿಯ ಪೊಲೀಸ್ ಮತ್ತು ನಾಗರಿಕ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ತ್ರಿಕೂಟ ಬೆಟ್ಟಗಳ ಮೇಲಿರುವ ದೇವಾಲಯಕ್ಕೆ ಭೇಟಿ…
ಬೆಂಗಳೂರು : “ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ” ಎಂದರು. “ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ…
ಬೆಂಗಳೂರು : “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿ ಎನ್ನುವ ಆರ್.ವಿ.ದೇಶಪಾಂಡೆಯವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು. “ಹಿರಿಯರಾದ ದೇಶಪಾಂಡೆ ಅವರು ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಲಾಗುವುದೋ ಅದನ್ನು ನೀಡೋಣ” ಎಂದರು. ನ್ಯಾಯಲಯದಲ್ಲಿ ಸಿದ್ದರಾಮಯ್ಯ ಅವರ ವಿರುದ್ದವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ “ಯಾವುದೇ ವ್ಯತಿರಿಕ್ತವಾಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಕೆಲಸ ಮಾಡುತ್ತಾರೆ” ಎಂದರು. ಕಾಂಗ್ರೆಸ್ ಬಗ್ಗೆ ಸಂಸದ ಸುಧಾಕರ್ ಪ್ರಮಾಣ ಪತ್ರ ನೀಡಲಿ ಕೋವಿಡ್ ವರದಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂಸದ ಡಾ.ಕೆ.ಸುಧಾಕರ್ ಅವರು, ಕಾಂಗ್ರೆಸ್ ಅವರು ಸತ್ಯಹರಿಶ್ಚಂದ್ರರೇ ಎನ್ನುವ ಹೇಳಿಕೆ ಬಗ್ಗೆ ಕೇಳದಾಗ “ಕಾಂಗ್ರೆಸ್ ಅಲ್ಲಿ ಇದ್ದು ಈಗ ಬಿಜೆಪಿಗೆ…
ನವದೆಹಲಿ: 2,817 ಕೋಟಿ ಮೌಲ್ಯದ ಡಿಜಿಟಲ್ ಕೃಷಿ ಅಭಿಯಾನಕ್ಕೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಘೋಷಿಸಿದರು. ಇಂದು, ರೈತರ ಜೀವನವನ್ನು ಸುಧಾರಿಸಲು ಮತ್ತು ಅವರ ಆದಾಯವನ್ನು ಹೆಚ್ಚಿಸಲು ಕ್ಯಾಬಿನೆಟ್ ಸಭೆಯಲ್ಲಿ 7 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮೊದಲನೆಯದು ಡಿಜಿಟಲ್ ಅಗ್ರಿಕಲ್ಚರ್ ಮಿಷನ್. ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯದ ರಚನೆಯ ಮಾದರಿಯಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೆಲವು ಉತ್ತಮ ಪ್ರಾಯೋಗಿಕ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಮತ್ತು ನಾವು ಯಶಸ್ಸನ್ನು ಸಾಧಿಸಿದ್ದೇವೆ. ಅದರ ಆಧಾರದ ಮೇಲೆ, ಒಟ್ಟು 2,817 ಕೋಟಿ ರೂ.ಗಳ ಹೂಡಿಕೆಯೊಂದಿಗೆ, ಡಿಜಿಟಲ್ ಕೃಷಿ ಮಿಷನ್ ಅನ್ನು ಸ್ಥಾಪಿಸಲಾಗುವುದು ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. https://twitter.com/ANI/status/1830542277237760141 ಎರಡನೇ ನಿರ್ಧಾರವು ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗೆ ಸಂಬಂಧಿಸಿದೆ, ಇದರಲ್ಲಿ ಹವಾಮಾನ ಸ್ಥಿತಿಸ್ಥಾಪಕ ಬೆಳೆ ವಿಜ್ಞಾನಗಳು ಮತ್ತು ಆಹಾರ ಭದ್ರತೆ ಮತ್ತು ಪೌಷ್ಠಿಕಾಂಶದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು 2047 ರ ವೇಳೆಗೆ ನಮ್ಮ ರೈತರನ್ನು ಹೇಗೆ ಸಿದ್ಧಗೊಳಿಸುವುದು ಎಂಬುದರ ಕುರಿತು ವೈಜ್ಞಾನಿಕ…
ಶಿವಮೊಗ್ಗ : ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಶಾಸಕರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಸೊರಬ ಪಟ್ಟಣದ ತಾಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಬಗರ್ ಹುಕುಂ ಸಮಿತಿಯ ಮೊದಲ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯು ಬಹು ದಿನಗಳಿಂದ ಇತ್ತು. ಈ ಸಮಸ್ಯೆಯ ಕುರಿತು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರನ್ನು ಒಮ್ಮೆಲೇ ಒಕ್ಕಲೆಬ್ಬಿಸುವುದರಿಂದ ಅನೇಕ ಕುಟುಂಬಗಳ ಬದುಕು ಶೋಚನೀಯವಾಗಲಿದೆ ಆದ್ದರಿಂದ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು. ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ವಿಷಯದಲ್ಲಿ ಕ್ರಮ ಕೈಗೊಳ್ಳುವ ಅಧಿಕಾರಿಗಳ…
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿನ ಮಾತಾ ವೈಷ್ಣೋ ದೇವಿ ದೇವಸ್ಥಾನದ ಪಾದಚಾರಿ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ. ಘಟನಾ ಸ್ಥಳದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ವೀಡಿಯೋದಲ್ಲಿ ವೈಷ್ಣೋ ದೇವಿ ದೇವಸ್ಥಾನದ ಮುಂಭಾಗದಲ್ಲಿರುವಂತ ಪಾದಚಾರಿ ಮಾರ್ಗದಲ್ಲಿ ಭೂಕುಸಿತದ ಅವಶೇಷಗಳು ಕುಸಿದು ಬಿದ್ದಿರುವುದನ್ನು ತೋರಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/vani_mehrotra/status/1830535690775654894 https://kannadanewsnow.com/kannada/breaking-aap-mla-amanatullah-khan-arrested-by-ed-in-money-laundering-case/ https://kannadanewsnow.com/kannada/attention-public-september-14-is-the-last-day-for-free-update-of-aadhaar-card/
ಬೆಂಗಳೂರು : “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ಮಾಡಿದ್ದು, ಅಲ್ಲಿಂದ ನಾಲೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸಲಾಗುವುದು. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುವುದು. ಅರಣ್ಯ ಇಲಾಖೆಯಿಂದ 502 ಎಕರೆ ಜಮೀನು ಪಡೆಯಬೇಕಾಗಿದ್ದು, ಇದಕ್ಕೆ ಬದಲಿಯಾಗಿ ನಾವು 452 ಎಕರೆ ಜಮೀನು ನೀಡಿದ್ದೇವೆ. ಮುಂದಿನ 4 ತಿಂಗಳಲ್ಲಿ ಈ ಕೆಲಸ ಮುಗಿಯಲಿದ್ದು, ಆನಂತರ ತುಮಕೂರು ಭಾಗದ ಕೆಲಸವನ್ನು ತ್ವರಿತವಾಗಿ ಮುಗಿಸಲಾಗುವುದು” ಎಂದು ಹೇಳಿದರು.…