Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ನಗರದಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಮದುವೆಯಾಗಿದ್ದರೂ ಬೇರೊಬ್ಬ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಂತ ವ್ಯಕ್ತಿಯನ್ನು ಬೆಳಗಾಗುವುದರೊಳಗೆ ಬರ್ಬರವಾಗಿ ಹತ್ಯೆ ಮಾಡಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಅನುಗನಹಳ್ಳಿಯಲ್ಲಿ ಇನ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದಂತ ಶ್ವೇತಾ ಎಂಬಾಕೆಯೊಂದಿಗೆ ಸೂರ್ಯ ಎಂಬಾತ ಅನೈತಿಕ ಸಂಬಂಧವನ್ನು ಹೊಂದಿದ್ದನು. ಈತನನ್ನು ತೋಟದ ಮನೆಗೆ ನಿನ್ನೆ ರಾತ್ರಿ ಶ್ವೇತಾ ಕರೆದುಕೊಂಡು ಹೋಗಿದ್ದಳು. ಇಂದು ಬೆಳಗಾಗುವುದರೊಳಗೆ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರೋ ಆರೋಪಿವನ್ನು ಸೂರ್ಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಶ್ವೇತಾ ಇನ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದರು. ಸೂರ್ಯನ ಅನೈತಿಕ ಸಂಬಂಧದ ಬಗ್ಗೆ ಕುಟುಂಬಸ್ಥರು ಎಚ್ಚರಿಸಿದ್ದರೂ ಆತ ಆಕೆಯ ಸಂಗವನ್ನು ಬಿಟ್ಟಿರಲಿಲ್ಲ. ನಿನ್ನೆ ಶ್ವೇತಾ ಕಡೆಯವರೇ ರಾತ್ರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರೋದಾಗಿ ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/bengaluru-gold-ornaments-valuables-worth-rs-2-40-lakh-seized-arrested-for-breaking-into-temple/ https://kannadanewsnow.com/kannada/american-airlines-flight-with-178-people-on-board-catches-fire-12-injured/
ಬೆಂಗಳೂರು: ನಗರದಲ್ಲಿ ನಡೆದಿದ್ದಂತ ಎರಡು ಪ್ರತ್ಯೇಕ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಸ್ಥಾನಕ್ಕೆ ಕನ್ನ ಹಾಕಿ ಆಭರಣ, ನಗದು ಕದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು, ಯಲಹಂಕ ಪೊಲೀಸರು ಒಂದು ದೇವಸ್ಥಾನದಿಂದ ಬೆಳ್ಳಿ ವಸ್ತುಗಳು ಮತ್ತು ನಗದು ಕದ್ದಿದ್ದ ವ್ಯಕ್ತಿಯನ್ನು ಬಂಧಿಸಿದ ಬಗ್ಗೆ ಮಾಹಿತಿ ನೀಡಿದರು. ವಿಗ್ರಹಗಳು, ಕಿರೀಟಗಳು, ದೀಪಗಳು, ಮತ್ತು ಬಟ್ಟಲುಗಳು ಸೇರಿದಂತೆ ಒಟ್ಟು 2 ಕೆಜಿ 740 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ₹4,000 ನಗದು, ಒಟ್ಟು ₹2.40 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಿಕರು ಎಚ್ಚರಿಕೆಯಿಂದಿರಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಬೇಕೆಂದು ಬೆಂಗಳೂರು ನಗರ ಪೊಲೀಸರು ಕೋರಿದ್ದಾರೆ. ಅದೇ ರೀತಿ, ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ ವ್ಯಕ್ತಿಯನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದು, 83 ಗ್ರಾಂ ಕದ್ದ…
ಬೆಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಂತ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ರೋಪಿಗಳಿಂದ 3 ಕೆಜಿ 200 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ. ಇದರ ಮೌಲ್ಯ ಬರೋಬ್ಬರಿ 1.80 ಲಕ್ಷವಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ನಗರ ಪೊಲೀಸರು, ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಂಕ:08/03/2025 ರಂದು ಬಾತ್ಮೀದಾರರಿಂದ ಖಚಿತ ಮಾಹಿತಿಯೊಂದು ದೊರೆತಿರುತ್ತದೆ. ಮಾಹಿತಿಯಲ್ಲಿ ಠಾಣಾ ಸರಹದ್ದಿನ ಎಂ.ಆರ್.ಲೇಔಟ್ನ ರಾಣಿ ಕ್ರಾಸ್ ಬಳಿ ಇಬ್ಬರು ವ್ಯಕ್ತಿಗಳು ಒಂದು ದ್ವಿ-ಚಕ್ರ ವಾಹನದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡುತ್ತಿರುವುದಾಗಿ ಮಾಹಿತಿಯಲ್ಲಿ ತಿಳಿಸಿರುತ್ತಾರೆ. ಈ ಮಾಹಿತಿಯನ್ನಾಧರಿಸಿ ಠಾಣೆಯಲ್ಲಿ ಎನ್.ಡಿ.ಪಿ.ಎಸ್ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ನಂತರ ಬಾತ್ಮಿದಾರರು ತಿಳಿಸಿದ ಸ್ಥಳಕ್ಕೆ ಧಾವಿಸಿ, ದಾಳಿ ಮಾಡಿ, ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ವಶಕ್ಕೆ ಪಡೆದ ವ್ಯಕ್ತಿಗಳಿಬ್ಬರಿಂದ 3 ಕೆ.ಜಿ 200 ಗಾಂಜಾ, 02 ಮೊಬೈಲ್ ಫೋನ್, 01 ತೂಕದ ಯಂತ್ರ ಹಾಗೂ…
ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಹೇಳಿದ್ದಾರೆ. https://twitter.com/siddaramaiah/status/1900460856053555370 https://kannadanewsnow.com/kannada/two-accused-of-goondaism-by-govt-school-teacher-in-tiptur/ https://kannadanewsnow.com/kannada/american-airlines-flight-with-178-people-on-board-catches-fire-12-injured/
ಅಮೇರಿಕಾ: ಕೊಲೊರಾಡೊ ಸ್ಪ್ರಿಂಗ್ಸ್ ನಿಂದ ಹೊರಟಿದ್ದ ಅಮೆರಿಕನ್ ಏರ್ ಲೈನ್ಸ್ ಜೆಟ್ ನ ಎಂಜಿನ್ ಡೆನ್ವರ್ ನಲ್ಲಿ ಇಳಿಯುವಾಗ ಬೆಂಕಿ ಕಾಣಿಸಿಕೊಂಡ ನಂತರ 170 ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ. ಇವರಲ್ಲಿ 12 ಮಂದಿಗೆ ಸುಟ್ಟ ಗಾಯಗಳಾಗಿದ್ದಾವೆ. ಬೋಯಿಂಗ್ 737-800 ವಿಮಾನವು ತನ್ನ ಡಲ್ಲಾಸ್ ಗಮ್ಯಸ್ಥಾನದಿಂದ ಬೇರೆಡೆಗೆ ತಿರುಗಿ ಸ್ಥಳೀಯ ಸಮಯ ಸಂಜೆ 5:15 ಕ್ಕೆ (23:15 ಜಿಎಂಟಿ) ಡೆನ್ವರ್ನಲ್ಲಿ ಇಳಿದ ನಂತರ ಈ ಘಟನೆ ನಡೆದಿದೆ. “ಡೆನ್ವರ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಡಿಇಎನ್) ಗೇಟ್ಗೆ ಸುರಕ್ಷಿತವಾಗಿ ಇಳಿದ ನಂತರ, ಅಮೆರಿಕನ್ ಏರ್ಲೈನ್ಸ್ ಫ್ಲೈಟ್ 1006 ಎಂಜಿನ್ ಸಂಬಂಧಿತ ಸಮಸ್ಯೆಯನ್ನು ಅನುಭವಿಸಿತು” ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಎಲ್ಲಾ 172 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಸೇರಿದಂತೆ 178 ಮಂದಿ ಇದ್ದರು. ಇವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಟರ್ಮಿನಲ್ಗೆ ಸ್ಥಳಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಹನ್ನೆರಡು ಪ್ರಯಾಣಿಕರನ್ನು ಹೆಚ್ಚಿನ ಮೌಲ್ಯಮಾಪನಕ್ಕಾಗಿ ಸ್ಥಳೀಯ ಆಸ್ಪತ್ರೆಗೆ…
ತುಮಕೂರು: ಜಿಲ್ಲೆಯ ತಿಪಟೂರಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಇಬ್ಬರ ಮೇಲೆ ಹಲ್ಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಇಂದು ಜಮೀನು ವ್ಯಾತ್ಯ ಸಂಬಂಧ ತಿಪಟೂರು ಎಸಿ ಕೋರ್ಟ್ ಗೆ ಸರ್ಕಾರಿ ಉರ್ದು ಶಾಲೆಯ ಶಿಕ್ಷಕ ಮಂಜಪ್ಪ ಆಗಮಿಸಿದ್ದರು. ಇಂದು ಕೋರ್ಟ್ ಜಮೀನು ವ್ಯಾಜ್ಯದ ಸಂಬಂಧ ರಾಕೇಶ್, ಉದಯ್ ಎಂಬುವರ ಪರವಾಗಿ ತೀರ್ಪು ನೀಡಿತ್ತು ಎನ್ನಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಮೀನು ವ್ಯಾಜ್ಯ ಸಂಬಂಧ ಶಿಕ್ಷಕ ಮಂಜಪ್ಪ ಹಾಗೂ ರಾಕೇಶ್, ಉದಯ್ ನಡುವೆ ಗಲಾಟೆಯಾಗಿದೆ. ಈ ವೇಳೆಯಲ್ಲಿ ಶಿಕ್ಷಕ ಮಂಜಪ್ಪ ರಾಕೇಶ್, ಉದಯ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ತಮ್ಮ ವಿರುದ್ಧ ತೀರ್ಪು ಬಂದಿದ್ದಕ್ಕೆ ಸಿಟ್ಟುಗೊಂಡಂತ ಶಿಕ್ಷಕ ಮಂಜಪ್ಪ ಹಲ್ಲೆ ಮಾಡಿದ್ದಾರೆ. ಶಾಲಾ ಶಿಕ್ಷಕ ಮಂಜಪ್ಪ ಹಲ್ಲೆ ಮಾಡಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಸಂಬಂಧ ತಿಪಟೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/forcing-wife-to-stop-her-studies-amounts-to-mental-cruelty-hc/ https://kannadanewsnow.com/kannada/chatting-with-men-on-behalf-of-wife-is-mental-toughness-for-husband-hc/
ಮಧ್ಯಪ್ರದೇಶ: ತನ್ನ ಅಧ್ಯಯನವನ್ನು ನಿಲ್ಲಿಸುವಂತೆ ಹೆಂಡತಿಯನ್ನು ಒತ್ತಾಯಿಸುವುದು ಅವಳ ಕನಸುಗಳನ್ನು ನಾಶಪಡಿಸುವುದಕ್ಕೆ ಸಮಾನವಾಗಿದೆ ಮತ್ತು ಮಾನಸಿಕ ಕ್ರೌರ್ಯಕ್ಕೆ ಸಮಾನವಾಗಿದೆ ಎಂಬುದಾಗಿ ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಕೌಟುಂಬಿಕ ನ್ಯಾಯಾಲಯದ ಎರಡು ಪ್ರತ್ಯೇಕ ತೀರ್ಪುಗಳಿಂದ ಉದ್ಭವಿಸಿದ ಎರಡು ಮೇಲ್ಮನವಿಗಳಲ್ಲಿ, ಕ್ರೌರ್ಯದ ಆಧಾರದ ಮೇಲೆ ಪತ್ನಿಯ ವಿಚ್ಛೇದನ ಅರ್ಜಿಯನ್ನು ವಜಾಗೊಳಿಸುವುದನ್ನು ಮತ್ತು ದಾಂಪತ್ಯ ಹಕ್ಕುಗಳನ್ನು ಮರುಸ್ಥಾಪಿಸಲು ಪತಿಯ ಪರವಾಗಿ ನೀಡಿದ ತೀರ್ಪನ್ನು ಪ್ರಶ್ನಿಸಿ, ವಿವೇಕ್ ರುಸಿಯಾ ಮತ್ತು ಗಜೇಂದ್ರ ಸಿಂಗ್, ಜೆಜೆ ಅವರ ವಿಭಾಗೀಯ ಪೀಠವು ಆದೇಶ ಮತ್ತು ತೀರ್ಪನ್ನು ರದ್ದುಗೊಳಿಸಿ, ಹಿಂದೂ ವಿವಾಹ ಕಾಯ್ದೆ, 1955 (ಹಿಂದೂ ವಿವಾಹ ಕಾಯ್ದೆ) ದ ಸೆಕ್ಷನ್ 13(1)(ia) ಅಡಿಯಲ್ಲಿ ಕ್ರೌರ್ಯದ ಆಧಾರದ ಮೇಲೆ ಮದುವೆಯನ್ನು ವಿಸರ್ಜಿಸಿತು. ಈ ಸಂದರ್ಭದಲ್ಲಿ, ಮೇಲ್ಮನವಿ (ಪತ್ನಿ) ಮತ್ತು ಪ್ರತಿವಾದಿ (ಪತಿ) ನಡುವಿನ ವಿವಾಹವನ್ನು 01-05-2015 ರಂದು ಹಿಂದೂ ಪದ್ಧತಿಗಳ ಪ್ರಕಾರ ನೆರವೇರಿಸಲಾಯಿತು. ಮದುವೆಯ ಸಮಯದಲ್ಲಿ, ಪತ್ನಿ 12ನೇ ತರಗತಿಯಲ್ಲಿ ಉತ್ತೀರ್ಣಳಾಗಿದ್ದಳು. ತನ್ನ ಅಧ್ಯಯನವನ್ನು ಮುಂದುವರಿಸಲು ಬಯಸಿದ್ದಳು. ಅದಕ್ಕೆ ಗಂಡನ ಕುಟುಂಬವು…
ಭೋಪಾಲ್: ಪತಿಯ ವಿಚ್ಛೇದನಕ್ಕೆ ಅನುಮತಿ ನೀಡಿದ ಕೌಟುಂಬಿಕ ನ್ಯಾಯಾಲಯದ ಆದೇಶದ ವಿರುದ್ಧ ಮಹಿಳೆಯೊಬ್ಬರು ಸಲ್ಲಿಸಿದ್ದ ಮೇಲ್ಮನವಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ. ಅಲ್ಲದೇ ಇತರ ಪುರುಷರೊಂದಿಗೆ ಪತ್ನಿ ಅಶ್ಲೀಲವಾಗಿ ಚಾಟ್ ಮಾಡುವುದನ್ನು ಯಾವುದೇ ಪತಿ ಸಹಿಸುವುದಿಲ್ಲ ಎಂಬುದಾಗಿ ಮಧ್ಯಪ್ರದೇಶ ಹೈಕೋರ್ಟ್ ತಿಳಿಸಿದೆ. ಪತ್ನಿ ತನ್ನ ಪುರುಷ ಸ್ನೇಹಿತರೊಂದಿಗೆ ತನ್ನ ಲೈಂಗಿಕ ಜೀವನದ ಬಗ್ಗೆ ಚಾಟ್ ಮಾಡುತ್ತಿದ್ದಳು ಎಂಬ ಆರೋಪವನ್ನು ನ್ಯಾಯಮೂರ್ತಿಗಳಾದ ವಿವೇಕ್ ರುಸಿಯಾ ಮತ್ತು ಗಜೇಂದ್ರ ಸಿಂಗ್ ಅವರ ನ್ಯಾಯಪೀಠ ಗಮನಿಸಿದೆ. ಮದುವೆಯ ನಂತರ ಪತ್ನಿ ಅಥವಾ ಪತಿ ತಮ್ಮ ಸ್ನೇಹಿತರೊಂದಿಗೆ ಅಮಾನವೀಯ ಅಥವಾ ಅಸಭ್ಯ ಸಂಭಾಷಣೆಯಲ್ಲಿ ತೊಡಗುವಂತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. “ಈ ರೀತಿಯ ಅಶ್ಲೀಲ ಚಾಟಿಂಗ್ ಮೂಲಕ ತನ್ನ ಹೆಂಡತಿ ಮೊಬೈಲ್ ಮೂಲಕ ಸಂಭಾಷಣೆ ನಡೆಸುವುದನ್ನು ಯಾವುದೇ ಪತಿ ಸಹಿಸುವುದಿಲ್ಲ. ಮದುವೆಯ ನಂತರ ಗಂಡ ಮತ್ತು ಹೆಂಡತಿ ಇಬ್ಬರೂ ಸ್ನೇಹಿತರೊಂದಿಗೆ ಮೊಬೈಲ್, ಚಾಟ್ ಮತ್ತು ಇತರ ವಿಧಾನಗಳ ಮೂಲಕ ಸಂಭಾಷಣೆ ನಡೆಸಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಆದರೆ ಸಂಭಾಷಣೆಯ ಮಟ್ಟವು…
ರಾಯಚೂರು: ಜಿಲ್ಲೆಯಲ್ಲಿ ಹಾಡಹಗಲೇ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ರೈತನೊಬ್ಬನಿಂದ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು 7 ಲಕ್ಷ ಲೂಟಿ ಮಾಡಿ ಪರಾರಿಯಾಗಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರಿನಲ್ಲಿ ರೈತ ಶ್ರೀನಿವಾಸ್ ರಾವ್ ಎಂಬುವರು ಬ್ಯಾಂಕ್ ನಿಂದ ಹಣ ಡ್ರಾಮಾಡಿಕೊಂಡು ಬೈಕಿನ ಬ್ಯಾಗಿನಲ್ಲಿಟ್ಟು ಹಣ್ಣು ಖರೀದಿಸಲು ತೆರಳಿದ್ದರು. ಇದೇ ಸಮಯಕ್ಕಾಗಿ ಕಾಯುತ್ತಿದ್ದಂತ ದುಷ್ಕರ್ಮಿಗಳು, ಬೈಕ್ ನಲ್ಲಿದ್ದಂತ 7 ಲಕ್ಷ ಹಣವನ್ನು ದೋಷಿಕೊಂಡು ಪರಾರಿಯಾಗಿರುವಂತ ಘಟನೆ ನಡೆದಿದೆ. ಈ ಸಂಬಂಧ ರೈತ ಶ್ರೀನಿವಾಸ್ ಗಬ್ಬೂರು ಠಾಣೆಗೆ ತೆರಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಕ್ ನಲ್ಲಿದ್ದಂತ ರೈತ ಶ್ರೀನಿವಾಸ್ ರಾವ್ ಅವರ ಹಣವನ್ನು ದೋಚಿಕೊಂಡು ಪರಾರಿಯಾಗುವಂತ ದುಷ್ಕರ್ಮಿಗಳ ಕೃತ್ಯವೆಲ್ಲ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/veteran-bollywood-actor-deb-mukherjee-passes-away/ https://kannadanewsnow.com/kannada/india-57-corporation-vitaminb12/
ನವದೆಹಲಿ: ಚಲನಚಿತ್ರ ನಿರ್ಮಾಪಕ ಅಯಾನ್ ಮುಖರ್ಜಿ ಅವರ ತಂದೆ ಮತ್ತು ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರ ಮಾವ ಹಿರಿಯ ನಟ ದೇಬ್ ಮುಖರ್ಜಿ ಮಾರ್ಚ್ 14 ರಂದು ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾದರು. ನಟ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಯೋಸಹಜ ಕಾಯಿಲೆಗಳಿಂದಾಗಿ ಅವರು ನಿಧನರಾದರು ಎಂದು ದೇಬ್ ಮುಖರ್ಜಿ ಅವರ ವಕ್ತಾರರು ಜೂಮ್ಗೆ ಮಾಹಿತಿ ನೀಡಿದರು. ಅವರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಮುಂಬೈನ ಜುಹುನಲ್ಲಿರುವ ಪವನ್ ಹನ್ಸ್ ಚಿತಾಗಾರದಲ್ಲಿ ನಡೆಯಲಿದೆ. ಪ್ರತಿ ವರ್ಷ ಕಾಜೋಲ್, ರಾಣಿ ಮುಖರ್ಜಿ, ರೂಪಾಲಿ ಗಂಗೂಲಿ ಮತ್ತು ತನಿಶಾ ಅವರಂತಹ ಪ್ರಸಿದ್ಧ ಭಾಗವಹಿಸುವವರನ್ನು ಆಕರ್ಷಿಸುವ ಜನಪ್ರಿಯ ಉತ್ತರ ಬಾಂಬೆ ದುರ್ಗಾ ಪೂಜಾ ಕಾರ್ಯಕ್ರಮದ ಹಿಂದಿನ ಪ್ರಮುಖ ಸಂಘಟಕರಾಗಿದ್ದರು. ಕಾಜೋಲ್, ಅಜಯ್ ದೇವಗನ್, ರಣಬೀರ್ ಕಪೂರ್, ಆಲಿಯಾ ಭಟ್, ತನಿಶಾ, ರಾಣಿ ಮುಖರ್ಜಿ, ತನುಜಾ, ಹೃತಿಕ್ ರೋಷನ್, ಸಿದ್ಧಾರ್ಥ್ ಮಲ್ಹೋತ್ರಾ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಸೇರಿದಂತೆ ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಇಂದು ಮುಂಬೈನಲ್ಲಿ…














