Subscribe to Updates
Get the latest creative news from FooBar about art, design and business.
Author: kannadanewsnow09
ಹೊಸಪೇಟೆ: ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ದೊಡ್ಡ ರಾಜ್ಯ ಆಗಿದೆ. ವರ್ಷಕ್ಕೆ 4 ಲಕ್ಷ ಕೋಟಿ ತೆರಿಗೆಯನ್ನು ಕನ್ನಡಿಗರು ಕಟ್ಟುತ್ತಾರೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 50 ಸಾವಿರ ಕೋಟಿ. 15 ನೇ ಹಣಕಾಸು ಆಯೋಗದಲ್ಲೂ ರಾಜ್ಯಕ್ಕೆ ತೀವ್ರ ಅನ್ಯಾಯ ಆಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಫೆ 7 ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದು ಕರ್ನಾಟಕ ಮತ್ತು ಕನ್ನಡಿಗರ ಹಕ್ಕನ್ನು ಕೇಳಲು, ನಮ್ಮ ಪಾಲನ್ನು ನಮಗೆ ಕೊಡಿ ಎಂದು ಕೇಳಲು ನಡೆಸುತ್ತಿರುವ ಪ್ರತಿಭಟನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು…
ಬೆಂಗಳೂರು: ರಾಜ್ಯದ ಸಬ್ ರಿಜಿಸ್ಟಾರ್ ಕಚೇರಿ ಒಳಗೆ ಸಾರ್ವಜನಿಕರ ಲ್ಯಾಪ್ ಟಾಪ್, ಟ್ಯಾಬ್ಲೆಟ್ ಗಳ ಬಳಕೆಯನ್ನು ನಿಷೇಧ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದರಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಆಪ್ ಡೇಟ್ ಆದಮೇಲೆ ಆನ್ ಲೈನ್ ನಲ್ಲಿಯೇ ನೋಂದಣಿ ಇಲಾಖೆ ಸೇವೆಗಳು ಸಿಗುತ್ತಿವೆ. ಸಾರ್ವಜನಿಕರು ಕುಳಿತಲ್ಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಸಾಕಷ್ಟು ಸೇವೆ ಪಡೆಯಬಹುದು ಎಂದಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಾರದೇ ಕಾವೇರಿ 2.0ರಲ್ಲಿ ದಾಸ್ತಾವೇಜು ಅಪ್ ಲೋಡ್ ಮಾಡಿ, ನಂತ್ರ ಕಚೇರಿಗೆ ಬಂದು ನೋಂದಣಿ ಪ್ರಕ್ರಿಯೆ ಮುಗಿಸಬಹುದು ಎಂದು ಹೇಳಿದೆ. ಕೆಲವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬಂದು, ಅಲ್ಲಿಯೇ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಗಳಲ್ಲಿ ದಾಸ್ತಾವೇಜು ಅಪ್ ಲೋಡ್ ಮಾಡಿ, ಅಂದೇ ನೋಂದಣಿಗೆ ಪ್ರಯತ್ನಿಸುತ್ತಿರೋದು ಕಂಡು ಬಂದಿದೆ ಎಂದು ಹೇಳಿದೆ. ಇದಲ್ಲದೇ ಇಸಿ, ಸಿಸಿ ಪಡೆಯೋದಕ್ಕೆ ಅಲ್ಲಿಯೇ ಲ್ಯಾಪ್ ಟಾಪ್, ಟ್ಯಾಗ್ ಗಳ ಮೂಲಕ…
ಬೆಂಗಳೂರು: ದೊಡ್ಡ ಪ್ರಮಾಣದ ಹಾಗೂ ಸಾಮೂಹಿಕವಾಗಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಪ್ರತಿಯೊಬ್ಬರ ವರ್ಗಾವಣೆಗೂ ಸರ್ಕಾರ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ತನ್ನನ್ನು ವರ್ಗಾವಣೆ ಮಾಡಿದ ಸರ್ಕಾರದ ಕ್ರಮ ಪುರಸ್ಕರಿಸಿದ ಕೆಎಟಿ ಆದೇಶ ರದ್ದು ಕೋರಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತರಾಗಿದ್ದ ಎಸ್ ಎಸ್ ವೀಣಾ ಹಾಗೂ ಇತರೆ ಅಧಿಕಾರಿಗಳು ಸಲ್ಲಿಸಿದ್ದಂತ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಅವರ ನೇತೃತ್ವದ ವಿಭಾಗಿಯ ಪೀಠವು ಈ ಆದೇಶ ನೀಡಿದೆ. ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯದೇ ಹಾಗೂ ಸಕಾರಣ ನೀಡದೇ ತಮ್ಮನ್ನು ವರ್ಗಾಯಿಸಿರುವುದು ಕಾನೂನು ಬಾಹಿರ ಕ್ರಮ ಎಂಬ ಅರ್ಜಿದಾರರ ವಾದವನ್ನು ಹೈಕೋರ್ ತಳ್ಳಿಹಾಕಿದೆ. ಪ್ರಕರಣದ ದಾಖಲೆಗಳನ್ನು ಪರಿಶೀಲಿಸಿದಾಗ ಮುಖ್ಯಮಂತ್ರಿಗಳ ಪೂರ್ವಾನುಮತಿ ಪೆಡು ಅರ್ಜಿದಾರರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಅಂಶ ಸ್ಪಷ್ಟವಾಗುತ್ತಿದೆ. ಇನ್ನೂ ಸಾಮೂಹಿಕ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಪ್ರತಿಯೊಬ್ಬ ಅಧಿಕಾರಿಯ ವರ್ಗಾವಣೆಗೂ ಕಾರಣ ಉಲ್ಲೇಖಿಸಲು ಕಷ್ಟವಾಗುತ್ತದೆ. ಪ್ರತಿಯೊಬ್ಬ ಅಧಿಕಾರಿಯ ವರ್ಗಾವಣೆಗೂ ಕಾರಣ ನಮೂದಿಸಬೇಕಾದ…
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಕಾರಣ ವಿದ್ಯಾರ್ಥಿಗಳ ಗೊಂದಲ, ಸಂದೇಶ ಮತ್ತು ಸಮಸ್ಯೆಗಳ ನಿವಾರಣೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಶ್ನೋತ್ತರಗಳ ರೂಪದಲ್ಲಿ 20 ಅಶಂಗಳ ಪರಿಹಾರಗಳನ್ನ ಸಿದ್ಧಪಡಿಸುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್ ಮಂಜುಶ್ರೀ ಮಾಹಿತಿ ಹಂಚಿಕೊಂಡಿದ್ದು, ಇಲ್ಲಿಯವರೆಗೆ ವಾರ್ಷಿಕ ಪರೀಕ್ಷೆ ಮಾತ್ರವೇ ನಡೆಸಲಾಗುತ್ತಿತ್ತು. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಹಾಜರಾಗಿ ಮರು ಪ್ರಯತ್ನ ಮಾಡಲು ಅವಕಾಶ ನೀಡಲಾಗುತ್ತಿತ್ತು ಎಂದರು. ಆದರೇ ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಗೆ ಕೇವಲ ಒಂದೇ ತಿಂಗಳು ಬಾಕಿ ಇರೋ ಕಾರಣ, ವಿದ್ಯಾರ್ಥಿಗಳಿಗೆ ಪರೀಕ್ಷಾ ನಿಯಮಗಳ್ನು ಮನದಟ್ಟು ಮಾಡಿಕೊಡಲು 20 ಅಂಶಗಳ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು. ಮೂರು ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಯಾವೆಲ್ಲಾ ಸಾಧಕ-ಬಾಧಕಗಳಾಗಬಹುದು ಎಂಬುದು ಪ್ರಾಯೋಗಿಕವಾಗಿ ತಿಳಿದಿಲ್ಲ. ಮೊದಲ…
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40% ಕಮೀಷನ್ ದಂಧೆ ನಡೆಯುತ್ತಿದೆ ಎಂಬುದಾಗಿ ಕಿಡಿಕಾರಿದ್ವಿ. ಈಗ ನಮ್ಮದೇ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚು ಕಮೀಷನ್ ದಂಧೆ ನಡೆಯುತ್ತಿದೆ. ಇದನ್ನ ನಾನು ಮುಖ್ಯಮಂತ್ರಿ ಸಿದ್ಧರಾಮಯ್ಯ ಎದುರೇ ಹೇಳಿದ್ದೇನೆ ಎಂಬುದಾಗಿ ಸ್ವ ಪಕ್ಷದ ವಿರುದ್ಧವೇ ಕಾಂಗ್ರೆಸ್ ಶಾಸಕ ಶಿವರಾಂ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇದನ್ನು ಅವತ್ತು ನಾನು ಮುಖ್ಯಮಂತ್ರಿ ಎದುರಿಗೆ ನೇರವಾಗಿ ಹೇಳಿದೆ. ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬರ್ತಾ ಇದೆ. ಸರಿಯಾಗಿ ಬುದ್ಧಿ ಹೇಳಿ ಅಂತ ನೇರವಾಗೇ ಹೇಳಿದೆ. ನಾನೊಬ್ಬನೇ ಅಲ್ಲ ಎಲ್ಲರೂ ಹೇಳಿದ್ವಿ ಎಂದರು. ಪಕ್ಷ ಉಳಿಯಬೇಕಾದ್ರೇ ಇವುಗಳನ್ನೆಲ್ಲ ಕಾಪಾಡಿಕೊಳ್ಳಬೇಕು. ನಾನು ನೇರವಾಗಿ ಹೇಳಿದ್ದಕ್ಕೆ ನಿಷ್ಟೂರವಾದಿ. ಇಷ್ಟು ಆಕ್ರೋಶ ಆಗೋದಕ್ಕೆ ಇದೇ ಕಾರಣ. ನಾನು ಶೇ.40ರಷ್ಟು ಬಿಜೆಪಿ ಅವಧಿಯಲ್ಲಿ ಕಮೀಷನ್, ಭ್ರಷ್ಟಾಚಾರ ದಂಧೆ ನಡೆಯುತ್ತಿತ್ತು. ಈಗ ಅದಕ್ಕಿಂತ ಹೆಚ್ಚು ಎಂದು ಹೇಳುತ್ತಿದ್ದೇನೆ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದರು. ಎಕ್ಸ್ ಮಾಡಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ…
ನವದೆಹಲಿ: ಜೀವ ವಿಮೆ ಮತ್ತು ಎರಡು ಲಕ್ಷ ರೂ.ವರೆಗಿನ ಅಪಘಾತ ವಿಮೆಯ ಪ್ರಯೋಜನಗಳನ್ನು ಪ್ರತಿ ಅಂಗನವಾಡಿ ಕಾರ್ಯಕರ್ತೆಗೆ ವಿಸ್ತರಿಸಲಾಗಿದೆ. ಪ್ರತಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಲೋಕಸಭೆಯಲ್ಲಿ ಇಂದು ಪೂರಕ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಅಡಿಯಲ್ಲಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಯುಪಿಎ ಆಡಳಿತಾವಧಿಯಲ್ಲಿ 750 ರೂ.ಗಳಿಂದ ಕಾರ್ಮಿಕರಿಗೆ 4,500 ರೂ.ಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು. ಪ್ರತಿ ಸಮುದಾಯ ಆಧಾರಿತ ಕಾರ್ಯಕ್ರಮದ ಪ್ರಕಾರ, ಕಾರ್ಮಿಕರಿಗೆ 250 ರೂಪಾಯಿಗಳನ್ನು ನೀಡಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯು ಫಲಾನುಭವಿಯ ಮನೆಗೆ ಭೇಟಿ ನೀಡಿದರೆ ಅಥವಾ ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳ ಪ್ರಕಾರ ಮಗುವನ್ನು ಭೇಟಿಯಾದರೇ 500 ರೂಪಾಯಿಗಳನ್ನು ನೀಡಲಾಗುತ್ತದೆ ಎಂದು ಸ್ಮೃತಿ ಇರಾನಿ ಹೇಳಿದರು. ಮತ್ತೊಂದೆಡೆ…
ಬೆಂಗಳೂರು: ಕೆಎಎಸ್ ಹುದ್ದೆ ( KAS Jobs ) ಆಕಾಂಕ್ಷಿಗಳಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರದಿಂದ ( Karnataka Government ) 384 ಹುದ್ದೆಗಳ ನೇಮಕಾತಿಗೆ ( KAS Recruitment ) ಚಾಲನೆ ನೀಡಲಾಗಿದೆ. ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್-ಬಿ ವೃಂದದ 384 ಕೆಎಎಸ್ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ಅಲ್ಲದೇ ಇಲಾಖಾ ವಾರು ಹುದ್ದೆಗಳ ಸಂಖ್ಯೆಯನ್ನು ಶುಕ್ರವಾರದಂದು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಮಾಹಿತಿಯಂತೆ ಗ್ರೂಪ್-ಎಯಲ್ಲಿ 159 ಹುದ್ದೆಗಳು ಹಾಗೂ ಗ್ರೂಪ್-ಬಿಯಲ್ಲಿ 225 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಸಂಬಂಧ ಕೆಪಿಎಸ್ಸಿ ಕಾರ್ಯದರ್ಶಿಗೆ ಪತ್ರವನ್ನು ಬರೆದಿರುವ ಡಿಎಪಿಆರ್ ಕಾರ್ಯದರ್ಶಿಗಳು 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ನಿಯಮಗಳು-1993ರ ಅನುಸಾರ ಜಾರಿಯಲ್ಲಿರುವ ನಿಯಮಗಳಂತೆ ಷರತ್ತುಗಳನ್ನು ಅಳವಡಿಸಿಕೊಂಡು ನೇಕಾತಿ ಪ್ರಕ್ರಿಯೆ ನಡೆಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಕಂದಾಯ ಇಲಾಖೆಯಲ್ಲಿ 41 ತಹಶೀಲ್ದಾರ್ ಹುದ್ದೆಗಳು, ವಾಣಿಜ್ಯ ತೆರಿಗೆ ಅಧಿಕಾರಿಗಳ 50…
ನವದೆಹಲಿ: ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾಲಕರಿಗೆ ಆಹಾರ, ಶುದ್ಧ ಕುಡಿಯುವ ನೀರು, ಶೌಚಾಲಯಗಳು, ಪಾರ್ಕಿಂಗ್ ಮತ್ತು ವಿಶ್ರಾಂತಿ ಸೌಲಭ್ಯಗಳೊಂದಿಗೆ ಆಧುನಿಕ ಕಟ್ಟಡಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಹೊಸ ಯೋಜನೆಯನ್ನು ರೂಪಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಮೊದಲ ಹಂತದಲ್ಲಿ ಇಂತಹ 1,000 ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2024 ಅನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಹೇಳಿದರು. ಹೊಸ ಸೌಲಭ್ಯಗಳು ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗೆ ಜೀವನವನ್ನು ಸುಲಭಗೊಳಿಸಲು ಮತ್ತು ಪ್ರಯಾಣಿಸಲು ಸುಲಭವಾಗುವಂತೆ ಉತ್ತೇಜನ ನೀಡುತ್ತದೆ. ಆ ಮೂಲಕ ಅವರ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಅಪಘಾತಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು. “ಟ್ರಕ್ ಚಾಲಕರು ಮತ್ತು ಅವರ ಕುಟುಂಬಗಳ ಕಾಳಜಿಯನ್ನು ಸರ್ಕಾರ ಅರ್ಥಮಾಡಿಕೊಂಡಿದೆ” ಎಂದು ಟ್ರಕ್ ಚಾಲಕರು ಎದುರಿಸುತ್ತಿರುವ ಕಷ್ಟಗಳನ್ನು ಎತ್ತಿ ತೋರಿಸಿದರು. ವ್ಯಾಪಾರವನ್ನು ವೇಗಗೊಳಿಸುವಲ್ಲಿ ಮತ್ತು ರಾಜ್ಯ ಗಡಿಗಳಲ್ಲಿ ಚೆಕ್ ಪೋಸ್ಟ್ ಗಳನ್ನು ರದ್ದುಗೊಳಿಸುವಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ)…
ನವದೆಹಲಿ : ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸತತ ಮೂರನೇ ಅವಧಿಗೆ ಅಧಿಕಾರದಲ್ಲಿದ್ದು, ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಅನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ನಮ್ಮ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂಬುದು ಖಚಿತ. ಕಳೆದ 10 ವರ್ಷಗಳಲ್ಲಿ, ಸರ್ಕಾರದ ಪ್ರಯತ್ನಗಳಿಂದಾಗಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಇಂದಿನ ಭಾರತವು 2047 ರ ವೇಳೆಗೆ ದೇಶವನ್ನು ‘ಅಭಿವೃದ್ಧಿ’ ಮಾಡುವ ಗುರಿಯೊಂದಿಗೆ ಮುಂದುವರಿಯುತ್ತಿದೆ. ಈ ಗುರಿಯನ್ನು ಸಾಧಿಸುವಲ್ಲಿ ಚಲನಶೀಲತೆ ವಲಯವು ದೊಡ್ಡ ಪಾತ್ರ ವಹಿಸುತ್ತದೆ” ಎಂದು ಪಿಎಂ ಮೋದಿ ಹೇಳಿದರು. ಇದು ಸರಿಯಾದ ಸಮಯ ಎಂದು ನಾನು ಯಾವಾಗಲೂ ಹೇಳಿದ್ದೇನೆ. ಈ ಮಂತ್ರವು ಚಲನಶೀಲತೆ ವಲಯಕ್ಕೆ ಚೆನ್ನಾಗಿ ಕುಳಿತುಕೊಳ್ಳುತ್ತದೆ. ಭಾರತವು ಚಂದ್ರನ ಮೇಲಿದೆ ಮತ್ತು ವೇಗವಾಗಿ ಚಲಿಸುತ್ತಿದೆ. ಚಲನಶೀಲತೆ ಕ್ಷೇತ್ರಕ್ಕೆ ಇದು ಸುವರ್ಣ…
ಹೊಸಪೇಟೆ: ರಾಜ್ಯಕ್ಕೆ ಬರಗಾಲ ಬಂದರೂ ಕೇಂದ್ರದಿಂದ ನಮ್ಮ ಪಾಲಿನ ನಯಾಪೈಸೆ ಪರಿಹಾರದ ಹಣ ಇದುವರೆಗೂ ಬಂದಿಲ್ಲ. ಆದರೆ ರಾಜ್ಯ ಸರ್ಕಾರ 30 ಲಕ್ಷ ರೈತರ ಖಾತೆಗೆ ಮೊದಲ ಕಂತಿನ ಪರಿಹಾರದ ಹಣವನ್ನು ಜಮಾ ಮಾಡಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಐತಿಹಾಸಿಕ ಹಂಪಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ನಮ್ಮ ಗ್ಯಾರಂಟಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳಿಂದ ಪ್ರತೀ ಕುಟುಂಬಕ್ಕೆ ಹಣ ಉಳಿತಾಯ ಆಗಿ ಬರಗಾಲದ ಸಂಕಷ್ಟದಿಂದ ಬಡ ಮತ್ತು ಮಧ್ಯಮ ವರ್ಗದವರನ್ನು ಪಾರು ಮಾಡಿದೆ ಎಂದರು. ನಮ್ಮ ಕಾರ್ಯಕ್ರಮಗಳು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವ ಮತ್ತು ಮಧ್ಯಮ ವರ್ಗದವರಿಗೆ ತಲುಪುತ್ತಿದೆ. ವಿಜಯನಗರ ಸಾಮ್ರಾಜ್ಯದ ಕಾಲದ ವೈಭವ ಪುನಃ ರಾಜ್ಯದಲ್ಲಿ ಮರುಕಳಿಸಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ ಎಂದು ತಿಳಿಸಿದರು. ವಿಜಯನಗರ ಸಾಮ್ರಾಜ್ಯದ ವೈಭವವನ್ನು ಇತಿಹಾಸಕಾರ ಅಬ್ದುಲ್ ರಜಾಕ್ ಚಿತ್ರಿಸಿದ್ದಾರೆ, ಇತಿಹಾಸದ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ಇತಿಹಾಸ ಗೊತ್ತಿಲ್ಲದವರು ಭವಿಷ್ಯ ರೂಪಿಸಲಾರರು. ಎಂದರು. ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತೆರಿಗೆ…