Author: kannadanewsnow09

ದಕ್ಷಿಣ ಕನ್ನಡ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹಪ್ಪಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆಯ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ 10 ದಿನಗಳ ಕಾಲ ಉಚಿತ ಹಬ್ಬಳ, ಉಪ್ಪಿನಕಾಯಿ, ಮಸಾಲ ಪೌಡರ್ ತಯಾರಿಕೆ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಿದೆ. ದಿನಾಂಕ 15-10-2024ರಿಂದ 24-10-2024ರವರೆಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ. 18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತ ಸ್ವ ಉದ್ಯೋಗಾಕಾಂಕ್ಷಿಗಳು ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದರೇ 6364561982ಗೆ ಕಳುಹಿಸಬಹುದಾಗಿದೆ. ಇಲ್ಲವೇ www.rudsetujire.com ಗೆ ಭೇಟಿ ನೀಡಿಯೂ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900 ಹಾಗೂ 9902594791 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.

Read More

ಬೆಂಗಳೂರು: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳ 945 ಹುದ್ದೆಗೆ ಕೆಪಿಎಸ್ಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಕರ್ನಾಟಕ ಲೋಕಸೇಲಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಖಾಲಿ ಇರುವಂತ ಗ್ರೂಪ್-ಬಿ ವೃಂದದ ಹಾಗೂ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಹುದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ವಿವರ ಕೃಷಿ ಅಧಿಕಾರಿಗಳು – 42 ಹುದ್ದೆ ಸಹಾಯ ಕೃಷಿ ಅಧಿಕಾರಿಗಳು – 231 ಹುದ್ದೆ ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಕೃಷಿ ಅಧಿಕಾರಿಗಳು – 86 ಹುದ್ದೆಗಳು ಸಹಾಯ ಕೃಷಿ ಅಧಿಕಾರಿಗಳು – 586 ಹುದ್ದೆ ಅರ್ಜಿ ಸಲ್ಲಿಕೆಯು ದಿನಾಂಕ 07-10-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-11-2024 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ www.kpsc.kar.nic ಗೆ ಭೇಟಿ ನೀಡಿ ಪಡೆಯಬಹುದಾಗಿದೆ.

Read More

ದಕ್ಷಿಣ ಕನ್ನಡ: ರಬ್ಬರ್ ಬೆಳೆಗಾರ ರೈತರಿಗೆ ಮಹತ್ವದ ಮಾಹಿತಿ ಎನ್ನುವಂತೆ ರಬ್ಬರ್ ಟ್ಯಾಪಿಂಗ್ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ 21-10-2024ರಿಂದ 30-10-2021ರವರೆಗೆ 10 ದಿನಗಳ ಕಾಲ ಉಚಿತವಾಗಿ ರಬ್ಬರ್ ಟ್ಯಾಪಿಂಗ್ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. 18 ವರ್ಷದಿಂದ 45 ವರ್ಷದ ಒಳಗಿನವರು ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಇದರ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವಂತ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9591044014, 9448348569, 9980885900, 9902594791 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ವಾಟ್ಸಾಪ್ ಮೂಲಕವೂ ಅರ್ಜಿಯನ್ನು 6364561982 ಗೆ ಕಳುಹಿಸಬಹುದಾಗಿದೆ ಎಂದು ಹೇಳಿದೆ. https://kannadanewsnow.com/kannada/centre-issues-notification-appointing-chief-justices-of-8-high-courts/ https://kannadanewsnow.com/kannada/air-marshal-ap-singh-appointed-as-next-chief-of-air-staff-air-marshal-a-p-singh/

Read More

ನವದೆಹಲಿ: ಇಂದು ಕೇಂದ್ರ ಸರ್ಕಾರವು ಎಂಟು ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡ ನ್ಯಾಯಾಧೀಶರು ಈ ಕೆಳಗಿನಂತಿದ್ದಾರೆ: ದೆಹಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಮನಮೋಹನ್ ಸಿಂಗ್ ಅವರನ್ನು ದೆಹಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕೈಟ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಇಂದ್ರ ಪ್ರಸನ್ನ ಮುಖರ್ಜಿ ಅವರನ್ನು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನಿತಿನ್ ಮಧುಕರ್ ಜಾಮ್ದಾರ್ ಅವರನ್ನು ಕೇರಳ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ತಾಶಿ ರಬ್ಸ್ತಾನ್ ಅವರನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್…

Read More

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ, ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ. 24ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜಾ.ಜಾರ್ಜ್ ಹೇಳಿದ್ದಾರೆ. ಕರ್ಟೈನ್ ರೈಸರ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, “ಕೆಪಿಸಿಎಲ್ ತನ್ನ ಅಂಗಸಂಸ್ಥೆಯಾದ ‘ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಲಿಮಿಟೆಡ್’ ಮೂಲಕ ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಈ ವಿದ್ಯುತ್ ಸ್ಥಾವರನ್ನು ಸ್ಥಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 24ರಂದು ಸಂಜೆ 5 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು”, ಎಂದು ತಿಳಿಸಿದರು. “ಒಟ್ಟು 370 ಮೆ.ವ್ಯಾ. ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್‌ ಸ್ಥಾವರ (ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್)ಅನ್ನು ಸುಮಾರು 2,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗ್ಯಾಸ್ ಮತ್ತು ಸ್ಟೀಮ್ ಮೂಲಕ…

Read More

ಬೆಂಗಳೂರು: ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಉಪಕ್ರಮಗಳಿಗಾಗಿ “ಸಾರಿಗೆ ಸಂಜೀವಿನಿ” ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಈ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುತ್ತದೆ. ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ. ಇಂದು, ಸ್ಕಾಚ್ ಸಂಸ್ಥೆಯು ದೆಹಲಿಯ, ಸಿಲ್ವರ್ ಓಕ್ ಹಾಲ್, ಇಂಡಿಯಾ ಹ್ಯಾಬಿಟೇಟ್ಸೆಂಟರ್ ನಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಮೀರ್ ಕೊಚ್ಚರ್, ಅಧ್ಯಕ್ಷರು, ಸ್ಕಾಚ್ ಗ್ರೂಪ್, ಡಾ.ಗುರುಶರಣ್ ಧನ್ಜಾಲ್, ಉಪಾಧ್ಯಕ್ಷರು ಸ್ಕಾಚ್ ಗ್ರೂಪ್ ಪ್ರಶಸ್ತಿಯನ್ನು ವೆಂಕಟೇಶ ಟಿ. ಮುಖ್ಯ…

Read More

ಬೆಂಗಳೂರು : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ ಸಾಲಿನ ಒಟ್ಟು 5 ವರ್ಷಗಳ ಅವಧಿಯ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅಧ್ಯಕ್ಷತೆಯ ರಚಿತವಾದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್, ಎಂ.ಎಸ್.ಮಣಿ ಹಾಗೂ ಸದಸ್ಯ ಕಾರ್ಯದರ್ಶಿಗಳಾದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಅವರಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಸರಕಾರ ಅನುಮೋದಿಸಿ ಪ್ರಶಸ್ತಿಗಳನ್ನು ಘೋಷಿಸಿದೆ. ಟಿ.ಎಸ್. ರಾಮಚಂದ್ರರಾವ್ (ಟಿಯೆಸ್ಸಾರ್) ಪತ್ರಿಕೋದ್ಯಮ ಪ್ರಶಸ್ತಿ ಕನ್ನಡ ಪತ್ರಿಕೋದ್ಯಮವನ್ನು ಹೊಸ ಎತ್ತರಕ್ಕೊಯ್ದ ದಿಗ್ಗಜ ದಿ. ಶ್ರೀ ಟಿ.ಎಸ್. ರಾಮಚಂದ್ರರಾವ್. ಸಮಾಜ,…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರ ಮೇಲೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಲ್ಲೆ, ಜಾತಿ ನಿಂದನೆ ಮಾಡುತ್ತಿರುವುದು ಕಂಡುಬಂದಿರುತ್ತದೆ. ಜಾತಿಯ ಹೆಸರಿನಲ್ಲಿ ನಿಂದಿಸುವುದು, ಹಲ್ಲೆ ಮಾಡುವುದು ಕಾನೂನು ರೀತ್ಯಾ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಭಾರತದ ಸಂವಿಧಾನದ 17ನೇ ವಿಧಿಯು “ಅಸ್ಪೃಶ್ಯತೆ” ಯನ್ನು ನಿಷೇಧಿಸಿದೆ ಮತ್ತು ಯಾವುದೇ ರೂಪದಲ್ಲಿ ಅದರ ಆಚರಣೆಯು ಅಪರಾಧವಾಗಿದೆ. ನೈರ್ಮಲ್ಯ/ಸ್ವಚ್ಛತಾ ಕಾರ್ಮಿಕರನ್ನು ಗೌರವಿಸುವುದು ಕೇವಲ ನೈತಿಕ ಬಾಧ್ಯತೆಯಾಗಿರದೆ ಸಮಾಜದ ಅಗತ್ಯವೂ ಆಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ಅವರು ನಿರ್ವಹಿಸುವ ಉದ್ಯೋಗಕ್ಕಿಂತ ವೈಯಕ್ತಿಕ ಘನತೆ ಮತ್ತು ಗೌರವಕ್ಕೆ ಅರ್ಹರಾಗಿರುತ್ತಾರೆ. ನೈರ್ಮಲ್ಯ ಕಾರ್ಮಿಕರ/ಪೌರಕಾರ್ಮಿಕರ ವಿರುದ್ಧ ತಾರತಮ್ಯವು ಮೂಲಭೂತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಯಾವುದೇ ಸ್ಥಳದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಸದಸ್ಯರನ್ನು ಜಾತಿ ಹೆಸರಿನಿಂದ ನಿಂದಿಸುವುದು ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸುವುದು ಅಥವಾ ಬೆದರಿಕೆ ಹಾಕುವುದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ತಿದ್ದುಪಡಿ ಕಾಯಿದೆ 2015 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ಹಿನ್ನೆಲೆಯಲ್ಲಿ, ಬಿಬಿಎಂಪಿಯಲ್ಲಿನ…

Read More

ಶ್ರಾದ್ಧ ಮಾಡುವಾಗ ಪಾಲಿಸಬೇಕಾದ ನಿಯಮಗಳು 1.ಶ್ರಾದ್ಧ ಮಾಡುವ ದಿನ ಮನೆ ಮುಂದೆ ರಂಗೋಲಿ ಹಾಕಬಾರದು 2. ತಲೆಗೆ ಎಣ್ಣೆ ಹಚ್ಚಿಕೊಳ್ಳಬಾರ್ದು, ಕೂದಲು ಬಾಚಿಕೊಳ್ಳಬಾರದು ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 3.ಆದಷ್ಟು ಮನೆಯಲ್ಲಿ ಶ್ರಾದ್ಧ ಮಾಡುವುದು ಅತ್ಯುತ್ತಮ.. ಹಿರಿಯರು ಹುಟ್ಟಿದ ಮನೆ, ಅಲ್ಲದೆ, ಮನೆಯಲ್ಲಿರೋ ಮಕ್ಕಳು, ಮೊಮ್ಮಕ್ಕಳು ಅವರ ಪ್ರಸಾದ ಸ್ವೀಕಾರ ಮಾಡಿ, ಹಿರಿಯರ ಆಶೀರ್ವಾದ ಪಡೆಯುತ್ತಾರೆ, ಹಿರಿಯರು, ನಾವು ಪೂಜಿಸುವ ಆಚಾರ್ರ ರೂಪದಲ್ಲಿ ಬರುತ್ತಾರೆ.. ಮನೆಯಲ್ಲಿ ಎಲ್ಲರೂ ಅವರ ಕಾಲಿಗೆರಗಿ ಆಶಿರ್ವಾದ ಪಡೆಯಬೇಕು.. ಈಗಿನ ಜನರಿಗೆ ಮಡಿ ಅಡುಗೆ ಅಂದ್ರೆ ಕಷ್ಟ.. ಅಡುಗೆ…

Read More

ಬೆಂಗಳೂರು: ರಾಜ್ಯದ ದೇಗುಲಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದವನ್ನು ವಿತರಣೆ ಮಾಡಲಾಗುತ್ತಿದೆ. ಹೀಗಾಗಿ ಯಾವುದೇ ಭಕ್ತಾಧಿಗಳಿಗೆ ಸ್ವೀಕರಿಸಲು ಆತಂಕ ಬೇಡ ಎಂಬುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ, ಅನ್ನದಾಸೋಹದ ವ್ಯವಸ್ಥೆಯಿದ್ದು, ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಹೀಗಾಗಿ ಭಕ್ತರು ಪ್ರಸಾದ ಸ್ವೀಕರಿಸಲು ಯಾವುದೇ ಆತಂಕಪಡಬೇಕಿಲ್ಲ ಎಂದು ಹೇಳಿದ್ದಾರೆ. ಅದಾಗ್ಯೂ ನಾವು ಈ ಬಗ್ಗೆ ಎಲ್ಲ ದೇವಾಲಯಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದೇವೆ. ಪ್ರಸಾದ ತಯಾರಿಕೆ, ವಿತರಣೆಯಲ್ಲಿ ಶುಚಿತ್ವ ಕಾಪಾಡಬೇಕು. ಗುಣಮಟ್ಟದ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ತಿಳಿಸಿದ್ದೇವೆ ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. https://twitter.com/KarnatakaVarthe/status/1837468727366824010 https://kannadanewsnow.com/kannada/elections-fix-to-hubballi-dharwad-municipal-corporation-standing-committees/ https://kannadanewsnow.com/kannada/nipah-scare-rises-in-bengaluru-one-person-diagnosed-with-symptoms-41-under-home-quarantine/

Read More