Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಹೇಳಿದ ಮಾತು ಕೇಳುತ್ತಿಲ್ಲ ಅಂತ ಮಕ್ಕಳ ಮೇಲೆಯೇ ತಂದೆಯೊಬ್ಬ ಸೈಕೋ ಥರ ನಡೆದುಕೊಂಡು, ಚಿತ್ರ ಹಿಂಸೆ ನೀಡಿದ್ದಲ್ಲದೇ ಅವರ ಮೇಲೆ ರಾಕ್ಷಸನ ರೀತಿಯಲ್ಲಿ ನಡೆದುಕೊಂಡಿರುವಂತ ಘಟನೆ ದಾಸರಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತ ಸೈಕೋಪಾತ್ ಅಪ್ಪನ ವಿಚಾರ ಬೆಳಕಿಗೆ ಬಂದಿದೆ. ಹೇಳಿದ ಮಾತು ಕೇಳುತ್ತಿಲ್ಲವೆಂದು 9 ವರ್ಷದ ಹೆಣ್ಣುಮಗು ಹಾಗೂ 6 ವರ್ಷದ ಗಂಡು ಮಗುವನ್ನು ಮನೆಯಲ್ಲೇ ಕೂಡಿ ಹಾಕಿದ್ದಾನೆ. ಜೊತೆಗೆ ಶಾಲೆಗೂ ಕಳುಹಿಸದೇ, ಕೈ ಕಾಲುಗಳನ್ನು ವಾಟರ್ ಹೀಟರ್ ಬಳಸಿ ಸುಟ್ಟಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಬಾಗಲಗುಂಟೆ ಠಾಣೆಯ ಪೊಲೀಸರು ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಿದಾಗ ಸೈಕೋಪಾತ್ ಅಪ್ಪನ ರಾಕ್ಷಸಿ ಕೃತ್ಯ ಬೆಳಕಿಗೆ ಬಂದಿದೆ. ಈಗ ಮಕ್ಕಳನ್ನು ಮನೆಯಿಂದ ಹೊರ ಕರೆತಂದಿರುವಂತ ಪೊಲೀಸರು, ತಾಯಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸೈಕೋಪಾತ್ ಅಪ್ಪನ ವಿರುದ್ಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/cm-siddaramaiah-warns-of-strict-action-against-those-harassed-by-finance-staff/ https://kannadanewsnow.com/kannada/sudan-70-people-killed-in-attack-on-hospital-in-darfur-region-who-claims/
ಬೆಂಗಳೂರು: ಫೈನಾನ್ಸ್ ಸಿಬ್ಬಂದಿ ಕಿರುಕುಳ ನಿಯಂತ್ರಣಕ್ಕೆ ಕ್ರಮ ವಹಿಸಲಾಗುತ್ತಿದೆ. ಒಂದು ವೇಳೆ ಯಾವುದೇ ಫೈನಾನ್ಸ್ ಸಿಬ್ಬಂದಿ ಕಿರುಕುಳ ಕೊಟ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಫೈನಾನ್ಸ್ ಕಂಪನಿಗಳು ಆರ್ ಬಿಐ ನಿಯಮ ಮೀರುವಂತಿಲ್ಲ. ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಪಾಲಿಸಬೇಕು. ಇದು ಕಡ್ಡಾಯಕೂಡ ಅಂತ ತಿಳಿಸಿದರು. ಫೈನಾನ್ಸ್ ಸಿಬ್ಬಂದಿ ಸಾಲಪಡೆದವರಿಗೆ ಕಿರುಕುಳ ಕೊಟ್ಟರೇ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಸಾಲ ಪಡೆದು, ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಒಳಗಾದವರೂ ದೂರು ಕೊಟ್ರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಫೈನಾನ್ಸ್ ಸಿಬ್ಬಂದಿ ಕಿರುಕುಳ ಸಂಬಂಧ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗುತ್ತದೆ. ದೂರು ಕೊಟ್ಟರೇ ಫೈನಾನ್ಸ್ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳೋದಕ್ಕೆ ಹೇಳಿದ್ದೇನೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/appoint-a-non-corrupt-person-as-rguhs-vice-chancellor-crf-writes-to-state-govt/ https://kannadanewsnow.com/kannada/appeal-for-help-of-journalist-hospitalised-due-to-illness/
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ.ಎ.ಪಾಲ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಸಿ ಪೋಸ್ಟ್ ಬಿಕರಿಯಾಗದಿರಲಿ:…
ಶಿವಮೊಗ್ಗ: ಜಿಲ್ಲೆಯಲ್ಲಿ ಸುದ್ದಿ ಸಾಗರ ಎನ್ನುವಂತ ವೆಬ್ ಸೈಟ್, ವಾಟ್ಸ್ ಆಪ್ ಗ್ರೂಪ್ ಮೂಲಕ ಚಿರ ಪರಿಚಿತರಾದಂತ ಪತ್ರಕರ್ತ, ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ವ್ಯಹಿಸಲಾಗಿದ್ದು, ಇನ್ನಷ್ಟು ಚಿಕಿತ್ಸೆಗೆ ಖರ್ಚಾಗಲಿದೆ ಎಂಬುದಾಗಿ ವೈದ್ಯರ ಮಾತು. ಹೀಗಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದಂತ ಪತ್ರಕರ್ತನ ನೆರವಿಗಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಯ ತಾಲ್ಲೂಕು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಂತವರು ಉಮೇಶ್ ಮೊಗವೀರ. ಇದಷ್ಟೇ ಅಲ್ಲದೇ ಸುದ್ದಿ ಸಾಗರದ ಮೂಲಕವೂ ತಾಲ್ಲೂಕಿನ ಜನತೆಯಲ್ಲಿ ಉಮೇಶ್ ಮೊಗವೀರ ಪ್ರಸಿದ್ಧ ಪತ್ರಕರ್ತರು. ಯಾವುದೇ ಮುಲಾಜಿಗೆ ಒಳಗಾಗದೇ ತಮ್ಮ ಪತ್ರಿಕೋದ್ಯಮ ನಿರ್ವಹಿಸುತ್ತಿದ್ದಂತ ಅವರು, ನೇರ, ನಿಷ್ಠೂರ ಪತ್ರಕರ್ತರೆಂದೇ ಗುರುತಿಸಿಕೊಂಡವರು. ಕಳೆದ ಜನವರಿ 23, 2025ರಂದು ದಿಢೀರ್ ರಕ್ತದೊತ್ತಡ ಹೆಚ್ಚಾಗಿ ಕುಸಿದು ಬಿದ್ದಂತ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಕೋಮಾದಲ್ಲಿದ್ದಂತ ಉಮೇಶ್ ಮೊಗವೀರ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಮೆದುಳಿನಲ್ಲಿ ರಕ್ತಸ್ತ್ರಾವವಾಗಿದ್ದನ್ನು…
ಮೈಸೂರು: ನಗರದ ಹೋಟೆಲ್ ಒಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಂತರರಾಷ್ಟ್ರೀಯ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೇ ಈ ದಾಳಿಯ ವೇಳೆ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದ್ದು, 7 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ಬೋಗಾದಿ ಬಳಿಯ ಹೋಟೆಲ್ ನಲ್ಲಿ ಅಂತರಾಷ್ಟ್ರೀಯ ವೇಶ್ಯಾವಾಟಿಕೆ ನಡೆಯುತ್ತಿರುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಕೆ ಎಸ್ ಆರ್ ಟಿಸಿ ನೌಕರನಾಗಿದ್ದಂತ ರತನ್ ಎಂಬಾತ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವಂತ ಮಾಹಿತಿಯನ್ನು ಒಡನಾಡಿ ಸೇವಾ ಸಂಸ್ಥೆ ಪೊಲೀಸರಿಗೆ ಮುಟ್ಟಿಸಿತ್ತು. ಈ ಹಿನ್ನಲೆಯಲ್ಲಿ ಒಡನಾಡಿ ಸೇವಾ ಸಂಸ್ಥೆ ಹಾಗೂ ಪೊಲೀಸರು ಬೋಗಾದಿ ಬಳಿಯ ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10 ಸಾವಿರ ವಸೂಲಿ ಮಾಡುತ್ತಿದ್ದಂತ ಜಾಲವನ್ನು ಪತ್ತೆ ಹಚ್ಚಿ, ಜೈಲಿಗಟ್ಟಿದ್ದಾರೆ. ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. https://kannadanewsnow.com/kannada/sudan-70-people-killed-in-attack-on-hospital-in-darfur-region-who-claims/ https://kannadanewsnow.com/kannada/breaking-cabinet-meeting-at-male-mahadeshwara-hills-to-be-held-on-february-17-instead-of-feb-15/
ಬೆಂಗಳೂರು: ಸೆಲೆಬ್ರೆಟಿಯಾಗಿದ್ದಂತ ನಟ ದರ್ಶನ್ ಅವರಿಗೆ ಗನ್ ಲೈಸೆನ್ಸ್ ನೀಡಲಾಗಿತ್ತು. ಆದರೇ ಜೈಲುಪಾಲಾಗಿ ಜಾಮೀನಿನ ಮೇಲೆ ಹೊರ ಬಂದ ನಂತ್ರ, ಅವರ ಗನ್ ಲೈಸೆನ್ಸ್ ರದ್ದುಗೊಳಿಸಲಾಗಿತ್ತು. ಅಲ್ಲದೇ ಹಿಂಪಡೆಯಲಾಗಿತ್ತು. ಇದೀಗ ಕಮೀಷನರ್ ಆದೇಶ ಪ್ರಶ್ನಿಸಿ ನಾಳೆ ಹೈಕೋರ್ಟ್ ಗೆ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಲಿದ್ದಾರೆ. ನಟ ದರ್ಶನ್ ಅವರಿಗೆ ನೀಡಲಾಗಿದ್ದಂತ ಗನ್ ಲೈಸೆನ್ಸ್ ಅನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರು ರದ್ದುಗೊಳಿಸಿದ್ದರು. ಆ ಬಳಿಕ ನಟ ದರ್ಶನ್ ಗನ್ ಅನ್ನು ರಾಜ ರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಸರೆಂಡರ್ ಮಾಡಿದ್ದರು. ಇದೀಗ ನಾಳೆ ನಟ ದರ್ಶನ್ ಪರ ವಕೀಲ ಸುನೀಲ್ ಎಂಬುವರು ಕಮೀಷನರ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಆ ಮೂಲಕ ಗನ್ ಲೈಸೆನ್ಸ್ ರದ್ದು ವಿಚಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಿದ್ದಾರೆ. https://kannadanewsnow.com/kannada/malayalam-director-shafi-passes-away/ https://kannadanewsnow.com/kannada/sudan-70-people-killed-in-attack-on-hospital-in-darfur-region-who-claims/
ಬೆಂಗಳೂರು: ದೇಶದ ಸಂವಿಧಾನ ರಕ್ಷಣೆ ಹಾಗೂ ಐಕ್ಯತೆಗೆ ನಾವು ಹೋರಾಟ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು. 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಹೇಳಿದ್ದಿಷ್ಟು, 76ನೇ ಗಣರಾಜ್ಯೋತ್ಸವ ಬಹಳ ಮಹತ್ವದ್ದಾಗಿದೆ. ಸಂವಿಧಾನ ರಕ್ಷಣೆ ಹಾಗೂ ಸಂವಿಧಾನದ ಪ್ರಕಾರವಾಗಿ ನಡೆದುಕೊಳ್ಳುವುದು ಅತಿ ಮುಖ್ಯ. ಆದರೆ ಈಗಿರುವ ಕೇಂದ್ರ ಸರ್ಕಾರ ಸಂವಿಧಾನದ ಎಲ್ಲಾ ಮೌಲ್ಯಗಳನ್ನು ಮೂಲೆಗುಂಪು ಮಾಡುತ್ತಿದೆ. ಇದರಿಂದ ನಾಗರೀಕರಿಗೆ ಸಿಗಬೇಕಾದ ಮೂಲಭೂತ ಹಕ್ಕುಗಳು, ಅದರಲ್ಲೂ ಮಹಿಳೆಯರಿಗೆ ವಿಶೇಷವಾಗಿ ಸಿಗುವ ಸ್ವಾತಂತ್ರ್ಯ ಮೊಟಕುಗೊಳಿಸಲಾಗುತ್ತಿದೆ ಎಂದರು. ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ಸಿಕ್ಕ ನಂತರ ನಮಗೆ ವಿಶೇಷವಾದ ಸ್ಥಾನಮಾನ ಸಿಕ್ಕಿದೆ. ಇದು ಅನೇಕರಿಗೆ ಗೊತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ಹೋಗಿ ಮತ ಕೇಳಲಾಗುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಪಂಡಿತ್ ಜವಹಾರ್ ಲಾಲ್ ನೆಹರು ಅವರ ಕೊಡುಗೆ ಎಂದರು. ಇವರುಗಳ…
ಕೇರಳ: ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ಜನವರಿ 26 ರಂದು ಕೊಚ್ಚಿಯಲ್ಲಿ ತಮ್ಮ 56 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಜನವರಿ 16 ರಂದು ಪಾರ್ಶ್ವವಾಯುವಿಗೆ ಒಳಗಾಗಿದ್ದರು ಮತ್ತು ಅಂದಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಲಯಾಳಂ ಚಲನಚಿತ್ರೋದ್ಯಮದ ನಟರಾದ ಪೃಥ್ವಿರಾಜ್ ಸುಕುಮಾರನ್ ಮತ್ತು ಚಿಯಾನ್ ವಿಕ್ರಮ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮದಲ್ಲಿ ಅವರ ನಿಧನಕ್ಕೆ ಸಂತಾಪ ಸಲ್ಲಿಸಿದ್ದಾರೆ. ಶಫಿಗೆ ನರಶಸ್ತ್ರಚಿಕಿತ್ಸಾ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಪೃಥ್ವಿರಾಜ್ ಸುಕುಮಾರನ್ ಭಾನುವಾರ ಇನ್ಸ್ಟಾಗ್ರಾಮ್ನಲ್ಲಿ ಶಫಿಯ ಫೋಟೋವನ್ನು ಹಂಚಿಕೊಂಡಿದ್ದಾರೆ ಮತ್ತು “ಶಾಂತಿಯಿಂದ ವಿಶ್ರಾಂತಿ ಪಡೆಯಿರಿ ಎಂದು ಬರೆದಿದ್ದಾರೆ. ವಿಕ್ರಮ್ ಎಕ್ಸ್ ನಲ್ಲಿ ಹೃತ್ಪೂರ್ವಕ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅವರು ದಿವಂಗತ ಚಲನಚಿತ್ರ ನಿರ್ಮಾಪಕರೊಂದಿಗಿನ ತಮ್ಮ ಸಮಯವನ್ನು ನೆನಪಿಸಿಕೊಂಡರು ಮತ್ತು ಅವರು ಹಂಚಿಕೊಂಡ ನೆನಪುಗಳನ್ನು ಪ್ರೀತಿಯಿಂದ ಪೋಷಿಸಿದರು. ಇಂದು, ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಮತ್ತು ಜಗತ್ತು ನಂಬಲಾಗದ ಕಥೆಗಾರನನ್ನು…
ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿ ವರ್ಷ ನೀಡುವಂತ ಪದ್ಮಭೂಷಣ ಪ್ರಶಸ್ತಿಗೆ ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅನಂತ್ ನಾಗ್ ಪಾತ್ರರಾಗಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಮುಂತಾದ ವಿವಿಧ ವಿಭಾಗಗಳು / ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ‘ಪದ್ಮ ವಿಭೂಷಣ’ ನೀಡಲಾಗುತ್ತದೆ. ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ‘ಪದ್ಮಭೂಷಣ’ ಮತ್ತು ಯಾವುದೇ ಕ್ಷೇತ್ರದಲ್ಲಿನ ವಿಶಿಷ್ಟ ಸೇವೆಗಾಗಿ ‘ಪದ್ಮಶ್ರೀ’. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಈ ಪ್ರಶಸ್ತಿಗಳನ್ನು ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್ / ಏಪ್ರಿಲ್ ನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಔಪಚಾರಿಕ ಸಮಾರಂಭಗಳಲ್ಲಿ ಭಾರತದ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ. 2025ನೇ ಸಾಲಿಗೆ,…
ನವದೆಹಲಿ: ಬಿಲ್ಲುಗಾರಿಕೆಯಲ್ಲಿ ಪ್ಯಾರಾಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಹರ್ವಿಂದರ್ ಸಿಂಗ್ ಅವರಿಗೆ 76 ನೇ ಗಣರಾಜ್ಯೋತ್ಸವದ ಮುನ್ನಾದಿನವಾದ ಶನಿವಾರ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ವೈಯಕ್ತಿಕ ರಿಕರ್ವ್ ಓಪನ್ ಫೈನಲ್ನಲ್ಲಿ ಹರ್ವಿಂದರ್ ಪೋಲೆಂಡ್ನ ಲುಕಾಸ್ಜ್ ಸಿಸ್ಜೆಕ್ ಅವರನ್ನು 6-0 ಅಂತರದಿಂದ ಸೋಲಿಸಿ ಭಾರತಕ್ಕೆ 4 ನೇ ಚಿನ್ನದ ಪದಕವನ್ನು ಗೆದ್ದರು. 2021 ರಲ್ಲಿ ಟೋಕಿಯೊದಲ್ಲಿ ಕಂಚು ಗೆದ್ದ ಹರ್ವಿಂದರ್ ಪ್ಯಾರಾಲಿಂಪಿಕ್ಸ್ನಲ್ಲಿ ಇದು ಅವರ ಎರಡನೇ ಪದಕವಾಗಿದೆ. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತವು ಆರು ಪದಕಗಳನ್ನು ಗಳಿಸುವ ಮೂಲಕ ಗಮನಾರ್ಹ ಯಶಸ್ಸನ್ನು ಸಾಧಿಸಿದರು. ನಂತರದ ಪ್ಯಾರಾಲಿಂಪಿಕ್ಸ್ನಲ್ಲಿ ಏಳು ಚಿನ್ನ ಮತ್ತು ಒಂಬತ್ತು ಬೆಳ್ಳಿ ಸೇರಿದಂತೆ ದಾಖಲೆಯ 29 ಪದಕಗಳೊಂದಿಗೆ ನಿರೀಕ್ಷೆಗಳನ್ನು ಮೀರಿಸಿತು. ಭಾರತದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್,…







