Author: kannadanewsnow09

ನವದೆಹಲಿ: ಲಡಾಖ್ನ ಕಾರ್ಗಿಲ್ನಲ್ಲಿ ಶುಕ್ರವಾರ ಮುಂಜಾನೆ 5.2 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 2.50ಕ್ಕೆ 15 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಜಮ್ಮು ಮತ್ತು ಶ್ರೀನಗರದ ಅನೇಕ ಬಳಕೆದಾರರು ನಗರಗಳಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವರದಿ ಮಾಡಿದ್ದಾರೆ. “ಇಕ್ಯೂ ಆಫ್ ಎಂ: 5.2, ಆನ್: 14/03/2025 02:50:05 IST, Lat: 33.37 N, ಉದ್ದ: 76.76 E, ಆಳ: 15 ಕಿ.ಮೀ, ಸ್ಥಳ: ಕಾರ್ಗಿಲ್, ಲಡಾಖ್” ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪೋಸ್ಟ್ ತಿಳಿಸಿದೆ. https://TWITTER.com/NCS_Earthquake/status/1900300870904144243?ref_src=twsrc%5Etfw%7Ctwcamp%5Etweetembed%7Ctwterm%5E1900300870904144243%7Ctwgr%5Ef385e898588fbf84149b0c9953bc76275ea027cd%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fhindustantimes-epaper-dh6a1e8229c99f4403a520ea1f381dcb4f%2F52magnitudeearthquakestrikeskargiltremorsfeltacrossladakhjammuandkashmir-newsid-n655886987 ಲೇಹ್ ಮತ್ತು ಲಡಾಖ್ ಎರಡೂ ದೇಶದ ಭೂಕಂಪನ ವಲಯ -4 ರಲ್ಲಿವೆ, ಅಂದರೆ ಭೂಕಂಪಗಳಿಗೆ ಗುರಿಯಾಗುವ ದೃಷ್ಟಿಯಿಂದ ಅವು ಹೆಚ್ಚಿನ ಅಪಾಯದಲ್ಲಿವೆ. ಟೆಕ್ಟೋನಿಕಲ್ ಆಗಿ ಸಕ್ರಿಯವಾಗಿರುವ ಹಿಮಾಲಯ ಪ್ರದೇಶದಲ್ಲಿರುವ ಲೇಹ್ ಮತ್ತು ಲಡಾಖ್ ಆಗಾಗ್ಗೆ ಭೂಕಂಪನಕ್ಕೆ ಒಳಗಾಗುತ್ತವೆ. ಭೂಕಂಪನ, ಈ ಹಿಂದೆ ಸಂಭವಿಸಿದ ಭೂಕಂಪಗಳು ಮತ್ತು ಪ್ರದೇಶದ ಟೆಕ್ಟೋನಿಕ್ ಸೆಟಪ್ಗೆ ಸಂಬಂಧಿಸಿದ ವೈಜ್ಞಾನಿಕ ಒಳಹರಿವಿನ…

Read More

ಬೆಂಗಳೂರು: : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 3302 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳನ್ನು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಿನಿ ವಿಧಾನಸೌಧ (ನೆಲಮಹಡಿ) ಯಲಹಂಕ, ಬೆಂಗಳೂರು ಉತ್ತರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 080-28462513 ಮೂಲಕ ಸಂಪರ್ಕಿಸಬಹುದು ಎಂದು ಯಲಹಂಕ ಬೆಂಗಳೂರು ಉತ್ತರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/parents-beware-of-your-children-class-10-student-commits-suicide-due-to-online-game-addiction/ https://kannadanewsnow.com/kannada/india-57-corporation-vitaminb12/

Read More

ರಾಯಗಡ : ಆನ್ಲೈನ್ ಗೇಮಿಂಗ್ ಪ್ಲಾಟ್ಫಾರ್ಮ್ನಿಂದ 4 ಲಕ್ಷ ರೂಪಾಯಿ ಸಿಗದ ಕಾರಣ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ರಾಯಗಡದಲ್ಲಿ ನಡೆದಿದೆ. ತಂದೆಯ ಮರಣ ಮತ್ತು ತಾಯಿಯನ್ನು ತೊರೆದ ನಂತರ ಅಜ್ಜಿಯೊಂದಿಗೆ ವಾಸಿಸುತ್ತಿದ್ದ 10 ನೇ ತರಗತಿ ವಿದ್ಯಾರ್ಥಿನಿ ತನ್ನ ಮನೆಯ ಸ್ನಾನಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವಳು ಆನ್ಲೈನ್ ಗೇಮಿಂಗ್ಗೆ ವ್ಯಸನಿಯಾಗಿದ್ದಳು. ಆಗಾಗ್ಗೆ ಹಣವನ್ನು ಗೆಲ್ಲುತ್ತಿದ್ದಳು ಮತ್ತು ಕಳೆದುಕೊಳ್ಳುತ್ತಿದ್ದಳು ಎಂದು ಕುಟುಂಬ ಸದಸ್ಯರು ಬಹಿರಂಗಪಡಿಸಿದರು. ಇತ್ತೀಚೆಗೆ, ಅವರು 4 ಲಕ್ಷ ರೂ.ಗಳನ್ನು ಗೆದ್ದಿದ್ದಾರೆ ಎಂದು ಹೇಳಿಕೊಳ್ಳುವುದನ್ನು ಮತ್ತು ಪ್ಲಾಟ್ಫಾರ್ಮ್ ಅವಳಿಗೆ ಪಾವತಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕುವುದನ್ನು ಅವರು ಕೇಳಿದರು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ತಡೆಗಟ್ಟುವಿಕೆ ಮತ್ತು ಮಾನಸಿಕ ಆರೋಗ್ಯ ಸಹಾಯವಾಣಿ ಸಂಖ್ಯೆಗಳು: ಟೆಲಿ ಮನಸ್ (ಆರೋಗ್ಯ ಸಚಿವಾಲಯ) – 14416 ಅಥವಾ 1800 891 4416; ನಿಮ್ಹಾನ್ಸ್ – 080-46110007; ಪೀಕ್ ಮೈಂಡ್…

Read More

ಬೆಂಗಳೂರು :  ಮುಂದಿನ ಮೂರು ತಿಂಗಳಲ್ಲಿ ತಾಂತ್ರಿಕ ತಂಡಗಳು ಮತ್ತು ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ನಂತರ ದೀರ್ಘಾವಧಿಯಿಂದ ಬಾಕಿ ಇರುವ ನಕಲಿ ಎಪಿಕ್ (EPIC) ಸಮಸ್ಯೆಯನ್ನು ಪರಿಹರಿಸಲು ಭಾರತೀಯ ಚುನಾವಣಾ ಆಯೋಗವು ಈಗ ನಿರ್ಧರಿಸಿದೆ. ಭಾರತದ ಚುನಾವಣಾ ಪಟ್ಟಿಯು ಸುಮಾರು 99 ಕೋಟಿಗಿಂತಲೂ ಹೆಚ್ಚು ನೋಂದಾಯಿತ ಮತದಾರರನ್ನು ಹೊಂದಿರುವ ಪ್ರಪಂಚದಾದ್ಯಂತದ ಮತದಾರರ ಅತಿದೊಡ್ಡ ಡೇಟಾಬೇಸ್ ಆಗಿದೆ. ಚುನಾವಣಾ ಆಯೋಗವು ಪ್ರತಿವರ್ಷ ವಾರ್ಷಿಕ ವಿಶೇಷ ಸಾರಾಂಶ ಪರಿಷ್ಕರಣೆ (ಎಸ್‌ಎಸ್‌ಆರ್) ನಡೆಸುತ್ತಾ ಬಂದಿದ್ದು, ಚುನಾವಣಾ ಪಟ್ಟಿಯನ್ನು ಸಹ ಪರಿಷ್ಕರಿಸಿ ನವೀಕರಣ ಮಾಡುತ್ತದೆ. ಇದು ಪ್ರತಿವರ್ಷ ಅಕ್ಟೋಬರ್-ಡಿಸೆಂಬರ್ ಅವಧಿಯಲ್ಲಿ ನಡೆಯಲಿದೆ. ಜನವರಿ ಮಾಹೆಯಲ್ಲಿ ಮತದಾನಕ್ಕೆ ಹೋಗುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಚುನಾವಣೆಗೆ ಮುಂಚಿತವಾಗಿ ಎಸ್‌ಎಸ್‌ಆರ್ ಅನ್ನು ಸಹ ನಡೆಸಲಾಗುತ್ತದೆ. ಇತ್ತೀಚೆಗೆ ಮುಕ್ತಾಯಗೊಂಡ ಎಸ್‌ಎಸ್‌ಆರ್ 2025 ಗಾಗಿ, ವೇಳಾಪಟ್ಟಿಯನ್ನು ಆಗಸ್ಟ್ 7, 2024 ರಂದು ನೀಡಲಾಯಿತು ಮತ್ತು ಅಂತಿಮ ಪಟ್ಟಿಯನ್ನು 2025ನೇ ಜನವರಿ 6 ರಿಂದ 10 ರಲ್ಲಿ ಪ್ರಕಟಿಸಲಾಯಿತು. ಪ್ರತಿ ಬೂತ್‌ನಲ್ಲಿ,…

Read More

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಯನ್ನು ನೀಡುವ ಉದ್ದೇಶದಿಂದ ಆರೋಗ್ಯ ಇಲಾಖೆಯು, ತಾಯಂದಿರು ಹಾಗೂ ಮಕ್ಕಳು ತೆಗೆದುಕೊಳ್ಳಬೇಕಾದ ಲಸಿಕೆ, ಆರೋಗ್ಯ ಕ್ರಮಗಳ ಬಗ್ಗೆ ಕರೆ ಮಾಡಿ ಮಾಹಿತಿ ನೀಡುವ “ಕಿಲ್ಕಾರಿ ಎಂಬ ಉಚಿತ ಮೊಬೈಲ್” ಆರೋಗ್ಯ ಸೇವೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಅಂದಾಜು 29,000 ಗರ್ಭಿಣಿಯರು ಹಾಗೂ ಅಂದಾಜು 26,500 ಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ. ಪ್ರತಿ ವರ್ಷ ಬೆಂಗಳೂರು ನಗರ ಜಿಲ್ಲೆಯಲ್ಲಿ 29 ರಿಂದ 30 ಸಾವಿರ ಗರ್ಭಿಣಿಯರು ದಾಖಲಾಗುತ್ತಾರೆ. ಈ ವೇಳೆ ನಾನಾ ಕಾರಣಗಳಿಗೆ ತಾಯಿ ಮತ್ತು ನವಜಾತ ಶಿಶುಗಳ ಮರಣ ಸಂಭವಿಸುವ ಸಾಧ್ಯತೆಯಿರುತ್ತದೆ. ಅದನ್ನು ತಪ್ಪಿಸಲು ಕೇಂದ್ರ ಸರ್ಕಾರ ಕಿಲ್ಕಾರಿ ಎಂಬ ಉಚಿತ ಮೊಬೈಲ್ ಆರೋಗ್ಯ ಸೇವೆಯನ್ನು ಜಾರಿಗೆ ತಂದಿದೆ. ಈ ಮೂಲಕ ಗರ್ಭದಾರಣೆ, ಗರ್ಭಿಣಿ ತಾಯಿ ಮತ್ತು ಮಗುವಿನ ಆರೋಗ್ಯದ ಮಾಹಿತಿಯನ್ನು ನೇರವಾಗಿ ಕುಟುಂಬಗಳ ಮೊಬೈಲ್ ಪೋನ್ಗೆ 01244451660 ಕಿಲ್ಕಾರಿ ಮೊಬೈಲ್ ಸಂಖ್ಯೆಯ ಮೂಲಕ ಮಾಹಿತಿಯನ್ನು ತಲುಪಿಸಲಾಗುತ್ತದೆ. ಈ ಕರೆಯನ್ನು ಸ್ವೀಕರಿಸಲು…

Read More

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಹಣವನ್ನು ವರ್ಗಾಯಿಸುವ ಪ್ರಕ್ರಿಯೆಯ ಬದಲಾಗಿ ಫೆಬ್ರವರಿ-2025 ರ ಮಾಹೆಯಿಂದ ಜಾರಿಗೆ ಬರುವಂತೆ ಅರ್ಹ ಫಲಾನುಭವಿಗಳಿಗೆ 05 ಕೆ.ಜಿ ಅಕ್ಕಿಯನ್ನು ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲು ಸರ್ಕಾರ ಆದೇಶಿಸಿದೆ. ಅದರಂತೆ ಫೆಬ್ರವರಿ-2025 ಮಾಹೆಯಲ್ಲಿ ವಿತರಿಸಬೇಕಾದ ಅಕ್ಕಿ ಪ್ರಮಾಣವನ್ನು ಸೇರಿ ಮಾರ್ಚ್-2025 ಮಾಹೆಯಲ್ಲಿ ವಿತರಿಸಲಾಗುವುದು. ಮಾರ್ಚ್ 1 ರಿಂದ ಮಾರ್ಚ್ 31 ರ ವರಗೆ ಬೆಳಿಗ್ಗೆ 7 ರಿಂದ ರಾ‍ತ್ರಿ 8 ಗಂಟೆಯವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಬೇಕು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ.…

Read More

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೀಟ್ ವೇವ್ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ಆಯಾ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಹೀಟ್ ವೇವ್ ಕುರಿತು ಸದಾ ಎಚ್ಚರಿಕೆಯಿಂದ ಇರಬೇಕು. ರೇಡಿಯೋ,ಟಿವಿ,ದಿನ ಪತ್ರಿಕೆಗಳಲ್ಲಿ ಬರುವ ಮುನ್ಸೂಚನೆಗಳನ್ನು ತಿಳಿದುಕೊಂಡು ಅವುಗಳನ್ನು ಪಾಲಿಸಬೇಕು. ಬಾಯಾರಿಕೆಯಿಲ್ಲದಿದ್ದರೂ ಹೆಚ್ಚಾಗಿ ನೀರನ್ನು ಕುಡಿಯುಬೇಕು. ಹಗುರ, ತಿಳಿ-ಬಣ್ಣದ, ಸಡಿಲವಾದ ಮತ್ತು ರಂಧ್ರವುಳ್ಳ ಹತ್ತಿ ಬಟ್ಟೆಗಳನ್ನು ರಕ್ಷಣಾತ್ಮಕ ಕನ್ನಡಕಗಳು, ಛತ್ರಿ,ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಿಬೇಕು. ರಾತ್ರಿ ವೇಳೆ ಬಸ್ಸಿನಲ್ಲಿ ದೂರದ ಪ್ರಯಾಣ ಉತ್ತಮ, ಒಂದು ವೇಳೆ ಹಗಲಿನಲ್ಲಿ ಪ್ರಯಾಣ ಮಾಡುವ ಸಂದರ್ಭ ಬಂದರೆ,…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವರು, ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂಪಾಯಿ ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂಪಾಯಿ ಅನುದಾನ ಹೊರೆಯಾಗಿದೆ ಎಂದರು. ಎರಡೂ ಬಾರಿ ಹೆಚ್ಚಿಸಿದ್ದು ಸಿದ್ದರಾಮಯ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್‌ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ, ಕಳೆದ ಬಿಜೆಪಿ ಸರ್ಕಾರದ ನಾಲ್ಕು…

Read More

ಶಿವಮೊಗ್ಗ: ಸಾಗರ ಉಪವಿಭಾಗಿಯ ಆಸ್ಪತ್ರೆಯಲ್ಲಿನ ಡಿ.ಎನ್.ಬಿ (ಪೀಡಿಯಾಟ್ರಿಕ್ಸ್) ತರಬೇತಿ ವೈದ್ಯ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಬಾಹ್ಯ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳಲು ಮಾ.20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳ ಕಛೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಆಸಕ್ತ ಎಂಬಿಬಿಎಸ್ ಎಂಡಿ/ ಎಂಎಸ್ ಇನ್ ಪೀಡಿಯಾಟ್ರಿಕ್ಸ್ ವಿದ್ಯಾರ್ಹತೆಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳು, ಇತರೆ ಮೂಲ ದಾಖಲಾತಿಗಳು ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೂಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಆಡಳಿತ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/indian-army-invites-online-application-for-agniveer-recruitment-exam/ https://kannadanewsnow.com/kannada/india-57-corporation-vitaminb12/

Read More

ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.  ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ ಮತ್ತು ಪಾರದರ್ಶಕ’ವಾಗಿದ್ದು, ಅರ್ಹತೆ ಮೇಲೆ ಮಾತ್ರ ನಡೆಯುತ್ತದೆ. ಯಾವುದೇ ಹಂತದಲ್ಲಿ ಭಾರತೀಯ ಸೇನೆಯಲ್ಲಿ ಆಯ್ಕೆ ಅಥವಾ ನೇಮಕಾತಿಗಾಗಿ ಯಾರಿಗೂ ಲಂಚ ನೀಡಬಾರದು ಹಾಗೂ ನೇಮಕಾತಿ ಏಜೆಂಟ್‌ಗಳAತೆ ನಟಿಸುವ, ಆಮಿಷ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ…

Read More