Author: kannadanewsnow09

ಬೆಂಗಳೂರು: ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಅರಣ್ಯ ಕೈಗಾರಿಕಾ ನಿಗಮದಿಂದಲೇ ಪೀಠೋಪಕರಣಗಳನ್ನು ಪೂರೈಕೆ ಮಾಡಲಾಗುತ್ತದೆ ಎಂಬುದಾಗಿ ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ಇಂದು ಅರಣ್ಯ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಶಂಕಿನಮಠ, ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡಾ ಮಾಜಿ ಅಧ್ಯಕ್ಷ ರಮೇಶ್, ಜಿಲ್ಲಾ ಈಡಿಗರ ಸಂಘದ ಅಧ್ಯಕ್ಷ ಶ್ರೀದರ್, ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇಗೌಡ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ, ಕಾಂಗ್ರೆಸ್ ಹಿರಿಯ ಮುಖಂಡ ಶ್ರೀಕಾಂತ್ ಸೇರಿದಂತೆ‌ ಅನೇಕ ಕಾಂಗ್ರೆಸ್ ಮುಖಂಡರು ಆಗಮಿಸಿ ಶುಭ ಕೋರಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಅರಣ್ಯ ಕೈಗಾರಿಕಾ ನಿಗಮದವತಿಯಿಂದ ಇನ್ನು ಮುಂದೆ ನೂತನವಾಗಿ ಲಿಡ್ಕರ್ ಮಾದರಿಯಲ್ಲಿ ಆಸನ ಪೀಠಪೋಕರಣಗಳ ಮಳಿಗೆಗಳನ್ನು ಆರಂಭಿಸಲಾಗುವುದು ಇದರಿಂದ ನಿಗಮಕ್ಕೆ ಹಾಗೂ ಸರ್ಕಾರಕ್ಕೆ ಹೆಚ್ಚಿನ ಲಾಭ ಮಾಡಿಕೊಡುವ ಉದ್ದೇಶ ಹೊಂದಲಾಗಿದೆ ಎಂದು…

Read More

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.40% ಕಮೀಷನ್ ದಂಧೆ ನಡೆಯುತ್ತಿದೆ ಎಂಬುದಾಗಿ ಕಿಡಿಕಾರಿದ್ವಿ. ಈಗ ನಮ್ಮದೇ ಸರ್ಕಾರದಲ್ಲಿ ಅದಕ್ಕಿಂತ ಹೆಚ್ಚು ಕಮೀಷನ್ ದಂಧೆ ನಡೆಯುತ್ತಿದೆ. ಇದನ್ನ ನಾನು ಮುಖ್ಯಮಂತ್ರಿ ಸಿದ್ಧರಾಮಯ್ಯ ಎದುರೇ ಹೇಳಿದ್ದೇನೆ ಎಂಬುದಾಗಿ ಸ್ವ ಪಕ್ಷದ ವಿರುದ್ಧವೇ ಕಾಂಗ್ರೆಸ್ ಶಾಸಕ ಶಿವರಾಂ ಗುಡುಗಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇದನ್ನು ಅವತ್ತು ನಾನು ಮುಖ್ಯಮಂತ್ರಿ ಎದುರಿಗೆ ನೇರವಾಗಿ ಹೇಳಿದೆ. ನಮ್ಮ ಜಿಲ್ಲೆಗೆ ಕೆಟ್ಟ ಹೆಸರು ಬರ್ತಾ ಇದೆ. ಸರಿಯಾಗಿ ಬುದ್ಧಿ ಹೇಳಿ ಅಂತ ನೇರವಾಗೇ ಹೇಳಿದೆ. ನಾನೊಬ್ಬನೇ ಅಲ್ಲ ಎಲ್ಲರೂ ಹೇಳಿದ್ವಿ ಎಂದರು. ಪಕ್ಷ ಉಳಿಯಬೇಕಾದ್ರೇ ಇವುಗಳನ್ನೆಲ್ಲ ಕಾಪಾಡಿಕೊಳ್ಳಬೇಕು. ನಾನು ನೇರವಾಗಿ ಹೇಳಿದ್ದಕ್ಕೆ ನಿಷ್ಟೂರವಾದಿ. ಇಷ್ಟು ಆಕ್ರೋಶ ಆಗೋದಕ್ಕೆ ಇದೇ ಕಾರಣ. ನಾನು ಶೇ.40ರಷ್ಟು ಬಿಜೆಪಿ ಅವಧಿಯಲ್ಲಿ ಕಮೀಷನ್, ಭ್ರಷ್ಟಾಚಾರ ದಂಧೆ ನಡೆಯುತ್ತಿತ್ತು. ಈಗ ಅದಕ್ಕಿಂತ ಹೆಚ್ಚು ಎಂದು ಹೇಳುತ್ತಿದ್ದೇನೆ ಎಂಬುದಾಗಿ ಆಕ್ರೋಶವನ್ನು ಹೊರ ಹಾಕಿದರು. ಎಕ್ಸ್ ಮಾಡಿ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಿಡಿ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ…

Read More

ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದ್ದರೆ ಹಾಗೂ ಆ ಹಣವನ್ನು ಕೇಳಲು ಹೋದಾಗ ಇಂದು ಹಣ ಕೊಡಲು ಸಾಧ್ಯವಿಲ್ಲ ಮತ್ತೊಂದು ದಿನ ಕೊಡುತ್ತೇವೆ ಎಂದು ಹೇಳುತ್ತಿದ್ದರೆ ನಾವು ಹೇಳುವ ಈ ಉಪಾಯವನ್ನು ಮಾಡಿದರೆ ಖಂಡಿತವಾಗಿ ನಿಮ್ಮ ಹಣ ಮರಳಿ ಬರುತ್ತದೆ. ಇದರ ಜೊತೆಗೆ ಮನೆಯಲ್ಲಿ ಯಾರಿಗಾದರೂ ದೃಷ್ಟಿ ದೋಷ ಇದ್ದರೂ ಸಹ ನಿವಾರಣೆಯಾಗುತ್ತದೆ. ಈ ಉಪಾಯವನ್ನು ಮನೆಯ ಹೆಣ್ಣುಮಕ್ಕಳು ಆಗಲಿ ಅಥವಾ ಗಂಡುಮಕ್ಕಳು ಆಗಲಿ ಯಾರಾದರೂ ಮಾಡಬಹುದು. ಈ ಉಪಾಯವನ್ನು ಬೆಳಿಗ್ಗೆಯಿಂದ ರಾತ್ರಿ ತನಕ ಯಾವ ಸಮಯದಲ್ಲಿ ಬೇಕಾದರೂ ಮಾಡಬಹುದು, ಈ ಉಪಾಯ ಮಾಡುವುದಕ್ಕೆ ನಿಮಗೆ ಬೇಕಾಗಿರುವುದು ಒಂದು ಬಿಳಿಹಾಳೆ ಹಾಗೂ ಕೆಂಪು ಬಣ್ಣದ ಪೆನ್ನು. ಈ ಉಪಾಯವನ್ನು ಸ್ನಾನ ಮಾಡಿದ ನಂತರವೇ ಮಾಡಬೇಕು ಹಾಗೂ ಪರಿಪೂರ್ಣವಾದ ನಂಬಿಕೆ ಇದ್ದರೆ ಮಾತ್ರ ಮಾಡಬೇಕು. ಬಿಳಿ ಹಾಳೆಯ ಮೇಲೆ ಮೊದಲಿಗೆ ಕೆಂಪುಬಣ್ಣದ ಪೆನ್ನಿನಿಂದ 1- 2- 27- 9 ಸಂಖ್ಯೆಯನ್ನು ಬರೆಯಬೇಕು. 1-ಸೂರ್ಯನಿಗೆ ಸಂಬಂಧಪಟ್ಟಿದ್ದು 2-ಗ್ರಹಗಳಿಗೆ ಸಂಬಂಧಪಟ್ಟಿದ್ದು 27-ನಕ್ಷತ್ರಗಳಿಗೆ ಸಂಬಂಧಪಟ್ಟಿದ್ದು 9-ಸಂಖ್ಯೆಗೆ…

Read More

ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ ಅನ್ಯಾಯವಾಗಿರುವ ಕಾರಣಕ್ಕೆ ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಲು ಉದ್ದೇಶಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,. ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನನ್ನೂ ನೀಡದೇ ರಾಜ್ಯಕ್ಕೆ ಅನ್ಯಾಯವನ್ನು ಎಸೆಗಲಾಗಿದೆ. ರಾಜ್ಯಕ್ಕೆ ಬರಗಾಲದ ಪರಿಹಾರವಾಗಿ ಎನ್ ಡಿಆರ್ ಎಫ್ ನಿಂದ 4663 ಕೋಟಿ ರೂ. ಮೊತ್ತವನ್ನು ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳೂ ಕಳೆದಿದ್ದರೂ , ಕೇಂದ್ರದಿಂದ ಯಾವ ಸ್ಪಂದನೆಯೂ ದೊರೆತಿಲ್ಲ. ಈ ಎಲ್ಲ ಕಾರಣಗಳಿಗಾಗಿ ಅನಿವಾರ್ಯವಾಗಿ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ತಾನೂ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ದೇಶ ಅಖಂಡವಾಗಿರಬೇಕು ಸಂಸದ ಡಿ.ಕೆ.ಸುರೇಶ್ ಅವರ ದೇಶವನ್ನು ಇಬ್ಭಾಗವಾಗಿಸುವ ಹೇಳಿಕೆ…

Read More

ಬೆಂಗಳೂರು: ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಸ್ಥಳೀಯ ಪರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 4 ರಂದು ನಿಗದಿಯಾಗಿರುವ ವಿಚಾರಣೆಗೆ ಖುದ್ದಾಗಿ ಹಾಜರಾಗುವಂತೆ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಕಳೆದ ವರ್ಷ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸುವ ಮೂಲಕ ವಿವಾದ ಸೃಷ್ಟಿಸಿದ್ದರು. ಸೆಪ್ಟೆಂಬರ್ 2023 ರಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು. ತಮ್ಮ ಹೇಳಿಕೆಯಿಂದ ಹಿನ್ನಡೆಯನ್ನು ಎದುರಿಸುತ್ತಿದ್ದರೂ, ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಶಾಶ್ವತವಾಗಿ ವಿರೋಧಿಸುವುದಾಗಿ ಹೇಳಿದರು. https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/ https://kannadanewsnow.com/kannada/fir-against-ed-officials-hc-stays-police-probe/

Read More

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು, ನಮಗೆ ಬಂದ ಮಾಹಿತಿ ಪ್ರಕಾರ ಡಿಕೆಶಿ ಹೈಕಮಾಂಡ್ ಮುಂದೆ ಶಾಸಕರ ಪರೇಡ್ ಮಾಡಲು ಹೋಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್‍ಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಮ್ಮ ಪರ ಎಷ್ಟು ಶಾಸಕರ ಬಲ ಇದೆ ಎಂದು ಹೈಕಮಾಂಡ್ ಶಕ್ತಿಪ್ರದರ್ಶನ ಮಾಡಲು ಡಿಕೆಶಿ ಮುಂದಾಗಿದ್ದಾರೆ ಎಂದೂ ಅವರು ನುಡಿದರು. ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ ಬಗ್ಗೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಘೋಷಣೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದರು. ಕೇಂದ್ರದಿಂದ ಅನುದಾನ ಬಂದಿಲ್ಲವೆಂದು ಕಾಂಗ್ರೆಸ್ ಶಾಸಕರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತೀವಿ ಅಂದಿರೋದು ಹಾಸ್ಯಾಸ್ಪದ ವಿಚಾರ. ಡಿಕೆ ಸುರೇಶ್ ಹೇಳಿಕೆಯಿಂದ ಆಗುವ ಹಾನಿ ತಪ್ಪಿಸಲು ಈ ಹೇಳಿಕೆ ಮೂಲಕ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಅನುದಾನ ಬಂದಿಲ್ಲ ಅಂತ ಹತ್ತಾರು ಸಲ ಸುಳ್ಳು ಹೇಳಿ ಕಾಂಗ್ರೆಸ್…

Read More

ಗದಗ: ನಟ ಯಶ್ ಅವರ ಹುಟ್ಟು ಹಬ್ಬದ ಕಾರಣ, ಕಟೌಟ್ ಕಟ್ಟೋ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೂವರು ಸಾವನ್ನಪ್ಪಿದ್ದರು. ಈಗಾಗಲೇ ಅವರಿಗೆ ರಾಜ್ಯ ಸರ್ಕಾರ, ಯಶ್ ಅಭಿಮಾನಿಗಳಿಂದ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ. ಈ ಬೆನ್ನಲ್ಲೇ ಗಾಯಾಳುಗಳಾಗಿದ್ದಂತ ಮೂವರಿಗೆ ನಟ ಯಶ್ 1 ಲಕ್ಷ ಪರಿಹಾರವನ್ನು ನೀಡಿದ್ದಾರೆ. ಗದಗದಲ್ಲಿ ನಟ ಯಶ್ ಬರ್ತ್ ಡೇ ಹಿಂದಿನ ದಿನ ಕಟೌಟ್ ಕಟ್ಟೋ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೇ ಇದೇ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಅವರ ನೆರವಿಗೆ ಧಾವಿಸಿರೋ ನಟ ಯಶ್, ಅವರ ಕುಟುಂಬಸ್ಥರಿಗೆ 1 ಲಕ್ಷ ನೆರವನ್ನು ನೀಡಿದ್ದಾರೆ. ಈ ಮೂಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಗಾಯಾಳುವಿಗೆ ನೆರವಾಗಿದ್ದಾರೆ. https://kannadanewsnow.com/kannada/good-news-for-the-people-of-the-state-teleicu-system-to-be-set-up-in-all-taluk-hospitals/ https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/

Read More

ಬೆಂಗಳೂರು: ಮಂಡ್ಯದ ಹನುಮಧ್ವಜ ವಿವಾದ ನಂತ್ರ ಸೋಷಿಯಲ್ ಮೀಡಿಯಾದಲ್ಲಿ ಆ ಕುರಿತಂತ ಪೋಸ್ಟ್, ವೀಡಿಯೋಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಅಲ್ಲದೇ ಹಾಗೆ ಮಾಡಿದ್ರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದೆ. ಇಂತಹ ಮಂಡ್ಯ ಜಿಲ್ಲಾಡಳಿತದ ಕ್ರಮವನ್ನು ಖಡಿಸಿರೋ ವಿಪಕ್ಷ ನಾಯಕ ಆರ್.ಅಶೋಕ್, ಇದು ಪೊಲೀಸರ ಮೂಲಕ ಬಾಯಿ ಮುಚ್ಚಿಸೋ ದುಸ್ಸಾಹಸ ಎಂಬುದಾಗಿ ಕಿಡಿಕಾರಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಇಳಿಸಿದ ನಂತರ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವ ಜನರಿಗೆ ಕಾನೂನಿನ ಭಯ ತೋರಿಸಿ, ಪೊಲೀಸರ ಮೂಲಕ ಬಾಯಿ ಮುಚ್ಚಿಸುವ ದುಸ್ಸಾಹಸಕ್ಕೆ ಕೈಹಾಕಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ದಿನ ಬೆಳಗಾದರೆ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ, ವಾಕ್ ಸ್ವಾತಂತ್ರ್ಯ ಹತ್ತಿಕ್ಕಲಾಗಿದೆ, ಪ್ರಜಾತಂತ್ರ ಅಪಾಯದಲ್ಲಿದೆ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ನಾಯಕರು, ಈಗ ಕರ್ನಾಟಕದಲ್ಲಿ ಮಾಡುತ್ತಿರುವುದೇನು? ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ಧರಾಮಯ್ಯನವರೇ, ತಮ್ಮ ಸರ್ಕಾರಕ್ಕೆ ಕೊಂಚವಾದರೂ ಮಾನ…

Read More

ಬೆಂಗಳೂರು: ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಟೆಲಿಐಸಿಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ನೂರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪಾಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿಐಸಿಯೂ ವ್ಯವಸ್ಥೆ ಸಹಕಾರಿ. ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವಂತಹ ತಂತ್ರಜ್ಞಾನಗಳ ಬಳಕೆ ಕಾರ್ಯಕ್ಕೆ ನಾವು ಒತ್ತು ನೀಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೋಗ್ಯ ಪರಿಶೀಲನೆ ಹಾಗೂ ಚಿಕಿತ್ಸಾ ಸಲಹೆಗಳನ್ನ ಟೆಲಿಐಸಿಯು ಮೂಲಕ ತಜ್ಞ ವೈದ್ಯರಿಂದ ಪಡೆಯಬಹುದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈಗಾಗಲೇ ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಈ ವ್ಯವಸ್ಥೆಯನ್ನ ಜಾರಿಗೆ ತರಲಾಗಿದ್ದು, ಇದೀಗ ಬೆಂಗಳೂರಿನ ವಿಕ್ಟೋರಿಯಾ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ತೆರವಿನ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರೋ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ ಎಂದಿದೆ. ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದೆ. ಉಪ ವಿಭಾಗ ಹಾಗೂ ವಲಯವಾರು ಅಧಿಕಾರಿಗಳ ವಿವರ: 1. ಉಪ ವಿಭಾಗ-1: (ಅ) ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ. ಮೊ.ಸಂ: 9663035011/9480683886 (ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)…

Read More