Author: kannadanewsnow09

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಭಾರೀ ಅವಾಂತರವೇ ಸೃಷ್ಠಿಯಾಗಿದೆ. ಎಲ್ಲೆಲ್ಲೂ ರಸ್ತೆಗಳು ಹೊಂಡಗಳಂತಾಗಿ ಜಲಾವೃತಗೊಂಡಿದ್ದಾವೆ. ಈ ಮಳೆ ಸಮಸ್ಯೆಗಾಗಿ ನಗರದ ಜನರು ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡುವಂತೆ ಮನವಿ ಮಾಡಿದೆ. ನಗರದಲ್ಲಿ ನಿನ್ನೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಇಂದು ಯಲಹಂಕ ವಲಯದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪರಿಶೀಲನೆ: ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಗೆ ಭೇಟಿ ನೀಡಿ ಪ್ರಸ್ತುತ ಸುಮಾರು 3 ಅಡಿ ನೀರು ನಿಂತಿದ್ದು, ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. * ಸದ್ಯ ಇರುವ ನೀರುಗಾಲುವೆಯ ಪಕ್ಕ ಖಾಸಗಿ ಜಾಗದಲ್ಲಿ ಇಟಾಚಿ ಮೂಲಕ ಕಚ್ಚಾ ಡ್ರೈನ್ ಮಾಡಲಾಗುತ್ತಿದ್ದು, ಕೂಡಲೆ ಕೆಲಸ ಮುಗಿಸಿ ಕಚ್ಚಾ ಡ್ರೈನ್ ಮೂಲಕ ನೀರು ಹರಿದು ಹೊಗುವಂತೆ ಮಾಡಲಾಗುತ್ತಿದೆ. * 02 ಅಗ್ನಿ ಶಾಮಕ ವಾಹನಗಳಿಂದ ಪಂಪ್ ಮೂಲಕ ನೀರನ್ನು…

Read More

ಬೆಂಗಳೂರು: ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ ಯೋಜನೆಗೆ 5,500 ಕೋಟಿ ರೂ. ಸಾಲ ಪಡೆಯಲು ಅಂದಿನ ಬಿಜೆಪಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆಗ ಕಾಮಗಾರಿಗೆ 90 ತಿಂಗಳ ಗಡುವು ವಿಧಿಸಲಾಗಿತ್ತು. ಜೊತೆಗೆ ಕಾಮಗಾರಿ ನಡೆಸುವ ಸಂಸ್ಥೆಗಳನ್ನೂ ನಿಗದಿಪಡಿಸಲಾಗಿತ್ತು. 2019 ರ ಜನವರಿ 1 ರಂದು ಯೋಜನೆಯ ಕಾಮಗಾರಿ ಆರಂಭವಾಗಿತ್ತು. ಆಗಲೂ ಬಿಜೆಪಿ ಸರ್ಕಾರವೇ ಇತ್ತು. ಪ್ಯಾಕೇಜ್‌ 2 ನಲ್ಲಿ ನಿತ್ಯ 77.5 ಕೋಟಿ ಲೀಟರ್‌ ನೀರು ಶುದ್ಧೀಕರಣ…

Read More

ಮುಂಬೈ: ತನ್ನ ಗೆಳತಿ ತನ್ನ ಸ್ನ್ಯಾಪ್ಚಾಟ್ ಪಾಸ್ವರ್ಡ್ ಅನ್ನು ತನ್ನೊಂದಿಗೆ ಹಂಚಿಕೊಳ್ಳಲು ನಿರಾಕರಿಸಿದ ನಂತರ 22 ವರ್ಷದ ಮುಂಬೈ ಯುವಕನೊಬ್ಬ ತನ್ನ ಮೇಲೆ ತಾನೇ ಮಾಡಿದ ಇರಿತದ ಗಾಯಗಳಲ್ಲಿ ಒಂದಾಗಿದೆ ಎಂದು ಆರಂಭದಲ್ಲಿ ಕೊಲೆ ಯತ್ನ ಪ್ರಕರಣ ಎಂದು ಭಾವಿಸಲಾಗಿತ್ತು. ಪೊಲೀಸರ ಪ್ರಕಾರ, ಭಾಂಡೂಪ್ನ ಹವಾನಿಯಂತ್ರಣ ಮೆಕ್ಯಾನಿಕ್ ರಿಜ್ವಾನ್ ಶೇಖ್ ಕಳೆದ ಕೆಲವು ತಿಂಗಳುಗಳಿಂದ ಹುಡುಗಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದ. ಅವರ ಸಂಬಂಧದಲ್ಲಿ ಅವನು ಅಸುರಕ್ಷಿತನಾಗಿದ್ದರಿಂದ, ಅವನು ಅವಳ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಖಾತೆಗಳಿಗೆ ಪ್ರವೇಶವನ್ನು ಪಡೆದಿದ್ದನು. ಇತ್ತೀಚೆಗೆ, ತನ್ನ ಗೆಳತಿ ಕೂಡ ಸ್ನ್ಯಾಪ್ಚಾಟ್ನಲ್ಲಿದ್ದಾಳೆ ಎಂದು ಅವನಿಗೆ ತಿಳಿದಿದೆ. ನಂತರ ಅವನು ಅದರ ಪಾಸ್ವರ್ಡ್ ಅನ್ನು ತನ್ನೊಂದಿಗೆ ಹಂಚಿಕೊಳ್ಳುವಂತೆ ಒತ್ತಾಯಿಸಲು ಪ್ರಾರಂಭಿಸಿದನು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಹುಡುಗಿ ಅವನ ವಿನಂತಿಯನ್ನು ವಿರೋಧಿಸಿದಳು. ಸೋಮವಾರ, ಶೇಖ್ ಥಾಣೆಯ ತನ್ನ ಕಾಲೇಜಿಗೆ ಅವಳನ್ನು ಕರೆದೊಯ್ಯಲು ಹೋದನು. ನಂತರ ಅವರು ಬಂದು ಭಾಂಡೂಪ್ ರೈಲ್ವೆ ನಿಲ್ದಾಣದ ಬಳಿಯ ಡ್ರೀಮ್ಸ್ ಮಾಲ್ ಬಳಿ ಕುಳಿತರು. ಘಟನೆಯ ನಂತರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ನವೆಂಬರ್.23, 2024 ಕೊನೆಯ ದಿನವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಪರಿಶಿಷ್ಟ ಪಂಗಡಗಳ ಸಮುದಾಯದವರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವಂತವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. ಗಂಗಾ ಕಲ್ಯಾಣ ಯೋಜನೆಗೆ 5 ಎಕರೆ ಒಳಗಿರುವಂತ ಸಣ್ಣ ಮತ್ತು ಅತಿ ಸಣ್ಣ ರೈತರು ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ, ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆಗೆ ಘಟಕ ವೆಚ್ಚವಾಗಿ ರೂ.4.75 ಲಕ್ಷ, 3.75 ಲಕ್ಷ ನೀಡಲಾಗುತ್ತದೆ. ಇದರಲ್ಲಿ 50,000 ಸಾಲವೂ ಸೇರಿರುತ್ತದೆ ಎಂದು ತಿಳಿಸಿದೆ. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿಯನ್ನು ಅಕ್ಟೋಬರ್ 23ರಿಂದ ಸಲ್ಲಿಸಲು ಆರಂಭಿಸಲಾಗುತ್ತದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ…

Read More

ಬೆಂಗಳೂರು: ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದ 1494 ಎಕರೆ 38 ಗುಂಟೆ ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಎಂದು ನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಆಧ್ಯಾತ್ಮಿಕ ಬೋಧನೆಗಳಿಂದ ಜನಮನ ಗೆದ್ದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪರಿಸರ ಸಂರಕ್ಷಣೆ ಮತ್ತು ಸಮುದಾಯ ಯೋಗಕ್ಷೇಮಕ್ಕೂ ದೊಡ್ಡ ಕೊಡುಗೆ ನೀಡಿದ್ದಾರೆ. ಶ್ರೀಗಳ ಸ್ಮರಣಾರ್ಥ ಅವರ 2ನೇ ಪುಣ್ಯ ಸ್ಮರಣೆಯ ದಿನವಾದ ಜನವರಿ 2ರಂದು ವಿಜಯಪುರದಲ್ಲಿ ವಿಧ್ಯುಕ್ತವಾಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಜೀವವೈವಿಧ್ಯ ಪಾರಂಪರಿಕ ತಾಣ ಫಲಕವನ್ನು ಅನಾವರಣ ಮಾಡಲಾಗುವುದು ಎಂದು ತಿಳಿಸಿದರು. ವಿವಿಧ ಕಾಲಾವಧಿಯಲ್ಲಿ ಮಮದಾಪುರ ಭಾಗದಲ್ಲಿನ ಅರಣ್ಯ ಪ್ರದೇಶಗಳ ಅಧಿಸೂಚನೆಯಾಗಿದ್ದು, ಪ್ರಸ್ತುತ ಸುಮಾರು 1494 ಎಕರೆ 38 ಗುಂಟೆ ವಿಸ್ತೀರ್ಣದ ಅರಣ್ಯವಿದೆ. ಪ್ರಾಣಿಸಂಕುಲ, ಪಕ್ಷಿ ಸಂಕುಲ, ಕೀಟ ಸಂಕುಲ ಮತ್ತು ಸಸ್ಯ ಸಂಕುಲದಿಂದ ಕೂಡಿರುವ ಶ್ರೀಮಂತ ಜೀವವೈವಿಧ್ಯತೆಯ ಈ…

Read More

ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದವರು ಕನಿಷ್ಠ 10 ಸದಸ್ಯರು ಇರುವಂತ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ 1.50 ಸಬ್ಸಿಡಿ ಸಹಾಯಧನದೊಂದಿಗೆ 2 ಲಕ್ಷದವರೆಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಘಟಕ ವೆಚ್ಚವಾಗಿ 2.50 ಲಕ್ಷವನ್ನು ಸಾಲ ಮತ್ತು ಸಹಾಯಧನವಾಗಿ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನವಾಗಿದ್ದರೇ, ರೂ.1 ಲಕ್ಷ ಸಾಲವಾಗಿದೆ. ಇದಕ್ಕೆ ಶೇ.4ರಷ್ಟು ಬಡ್ಡಿಯನ್ನು ವಿಧಿಸಲಾಗುತ್ತದೆ. ಅರ್ಜಿ ಸಲ್ಲಿಕೆ ಅಕ್ಟೋಬರ್.23ರಿಂದ ಆರಂಭಗೊಳ್ಳಲಿದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ. https://twitter.com/KarnatakaVarthe/status/1846493415946481884 https://kannadanewsnow.com/kannada/attack-on-election-meeting-led-by-ac-in-channapatna-badoota-seizure/ https://kannadanewsnow.com/kannada/good-news-for-scheduled-tribes-in-the-state-applications-invited-for-loan-facility-at-50-subsidy/

Read More

ರಾಮನಗರ: ಚನ್ನಪಟ್ಟಣದ ಉಪ ಚುನಾವಣೆ ಸಂಬಂಧ ನಡೆಸಲಾಗುತ್ತಿದ್ದಂತ ಸಭೆಯ ಮೇಲೆ ಎಸಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 500 ಕಾರ್ಯಕರ್ತರಿಗಾಗಿ ತಯಾರಿಸಿದ್ದಂತ ಬಾಡೂಟವನ್ನು ಜಪ್ತಿ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಶಿಶಿರ ಹೋಂ ಸ್ಟೇನಲ್ಲಿ ಸಿ.ಪಿ ಯೋಗೇಶ್ವರ್ ಅವರ ನೇತೃತ್ವದಲ್ಲಿ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋ ಸಂಬಂಧ ಮುಖಂಡರ ಸಭೆ ನಡೆಸಲಾಗುತ್ತಿತ್ತು. ಈ ಸಭೆಯನ್ನು ನಡೆಸಲು ಯಾವುದೇ ಅನುಮತಿಯನ್ನು ಪಡೆದಿರಲಿಲ್ಲ. ಈ ಹಿನ್ನಲೆಯಲ್ಲಿ ಚನ್ನಪಟ್ಟಣ ಚುನಾವಣಾಧಿಕಾರಿ ಹಾಗೂ ಎಸಿ ಬಿಜೋಯ್ ನೇತೃತ್ವದಲ್ಲಿ ಪೊಲೀಸರು, ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ 500 ಕಾರ್ಯಕರ್ತರಿಗೆ ಊಟ ಹಾಕಲು ತಯಾರಿಸಿದ್ದಂತ ಬಾಡೂಟವನ್ನು ಸೀಜ್ ಮಾಡಿದ್ದಾರೆ. ಶಿಶಿರ ಹೋಂ ಸ್ಟೇನಲ್ಲಿ ರೆಡಿಯಾಗಿದ್ದಂತ ಮಟನ್ ಸುಕ್ಕಾ, ಮಟನ್ ಬೋಟಿ, ಚಿಕನ್ ಕಬಾಬ್, ಗೀ ರೈಸ್, ಅನ್ನ, ಸಾಂಬಾರ್ ಹಾಗೂ ಮುದ್ದೆಯನ್ನು ಜಪ್ತಿ ಮಾಡಲಾಗಿದೆ. ಕಾರ್ಯಕರ್ತರಿಗೆ ಊಟ ಹಾಕೋದಕ್ಕೂ ಚುನಾವಣಾ ನೀತಿ ಸಂಹಿತೆಯ ಹಿನ್ನಲೆಯಲ್ಲಿ ಅನುಮತಿಯನ್ನು ಪಡೆಯಬೇಕಿತ್ತು. ಆದರೇ ಅದ್ಯಾವ…

Read More

ಬೆಂಗಳೂರು: ಶಿಗ್ಗಾವಿ ಸೇರಿದಂತೆ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಎರಡು ಮೂರು ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ವಿಧಾನಸಭಾ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಕುರಿತು ಕೋರ್ ಕಮಿಟಿಯಲ್ಲಿ ಚರ್ಚೆ ಆಗಿದೆ. ಮೂರು ತಂಡಗಳು ಕ್ಷೇತ್ರಗಳಿಗೆ ತೆರಳಿ ಸ್ಥಳಿಯರ ಅಭಿಪ್ರಾಯ ಪಡೆದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ನೀಡಿದ್ದಾರೆ. ಸದಸ್ಯತ್ವ ಅಭಿಯಾನದ ಸಂದರ್ಭದಲ್ಲಿಯೂ ಪಕ್ಷವನ್ನು ತಳಮಟ್ಟದಿಂದ ಸಂಘಟನೆ ಮಾಡುವ ಕೆಲಸ ಆಗಿದೆ ಎಂದು ಹೇಳಿದರು. ಶಿಗ್ಗಾವಿ‌ ನಾನು ಪ್ರತಿನಿಧಿಸುವ ಕ್ಷೇತ್ರ ಆಗಿರುವುದರಿಂದ ನನ್ನ ಮೇಲೆ ಹೆಚ್ಚು ಜವಾಬ್ದಾರಿ ಇದೆ. ನಮ್ಮ ಪಕ್ಷದ ಉಸ್ತುವಾರಿ ಕಾರ್ಯದರ್ಶಿ ರಾಧಾ ಮೋಹನ್ ಅಗರವಾಲ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ, ಸ್ಥಳೀಯರ ಜೊತೆ ಸಭೆ ನಡೆಸಿ ಅಭಿಪ್ರಾಯ ಪಡೆದಿದ್ದಾರೆ. ಅಲ್ಲಿ ಚುನಾವಣೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಮಗೆ…

Read More

ಬೆಂಗಳೂರು: ಶಿಗ್ಗಾವಿಯಲ್ಲಿ ಈ ಬಾರಿಯೂ ನಮಗೆ ದೊಡ್ಡ ಪ್ರಮಾಣದ ಬೆಂಬಲ ಸಿಗುವ ಭರವಸೆ ಇದೆ ಎಂಬುದಾಗಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅಲ್ಲದೇ ತಮ್ಮ ಪುತ್ರ ಸ್ಪರ್ಧೆಯ ಬಗ್ಗೆ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಮಗನ ಸ್ಪರ್ಧೆಗೆ ಪ್ರಸ್ತಾಪ ಇಟ್ಟಿಲ್ಲ ನನ್ನ ಮಗನ ಸ್ಪರ್ಧೆ ಬಗ್ಗೆ ನನಗೆ ಇಚ್ಚೆಯಿಲ್ಲ. ನಾನು ಆ ಪ್ರಸ್ತಾವನೆಯನ್ನು ಮುಂದೆ ಇಟ್ಟಿಲ್ಲ. ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪ ಆಗಿದ್ದು, ಆ ಸಭೆಯಲ್ಲಿ ನಾನು ಹಾಜರಾಗದೇ‌ ಇದ್ದಿದ್ದರಿಂದ ನನ್ನ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷರು ಹೇಳಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ನನ್ನ ಪುತ್ರ ಎಲ್ಲಿಯೂ ಕ್ಷೇತ್ರದಲ್ಲಿ ಓಡಾಡಿಲ್ಲ. ನನ್ನ ಮಗನ ಹೆಸರನ್ನು ಬಹಳ ಜನರು ಸೂಚಿಸಿರಬಹುದು. ಆದರೆ ನಾವಂತೂ ಎಲ್ಲಿಯೂ ಹೆಸರು ಪ್ರಸ್ತಾಪ ಮಾಡಿಲ್ಲ. ಅರ್ಜಿಯನ್ನೂ ಹಾಕಿಲ್ಲ. ಅವನು ವ್ಯೆಯಕ್ತಿಕವಾಗಿ ಅವನು ವ್ಯಾಪಾರದ ಕಡೆ ಗಮನ ಕೊಟ್ಟಿದ್ದಾನೆ. ಅದಕ್ಕೆ ಹಿನ್ನಡೆ ಆಗಬಾರದು ಎಂತಲೂ ಇದೆ. ಜೊತೆಗೆ ಬೇರೆಯವರಿಗೆ ಅವಕಾಶ ಮಾಡಿಕೊಡುವ ಬಗ್ಗೆ ಆಲೋಚನೆ ನಡೆದಿದೆ ಎಂದು…

Read More

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ಸಬ್ಸಿಡಿ ದರದಲ್ಲಿ 1 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚವಾಗಿ 1 ಲಕ್ಷವನ್ನು ನೀಡಲಾಗುತ್ತದೆ. ಇದರಲ್ಲಿ ಸಹಾಯಧನ 50,000 ಆಗಿದ್ದರೇ, ಸಾಲ 50,000ಕ್ಕೆ ಶೇ.4ರಷ್ಟು ಬಡ್ಡಿದರವಾಗಿದೆ. ಪರಿಶಿಷ್ಟ ಪಂಗಡದವರು ಅರ್ಜಿಯನ್ನು ಅಕ್ಟೋಬರ್.23ರಿಂದ ನವೆಂಬರ್.23ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಮೂಲಕ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ. https://twitter.com/KarnatakaVarthe/status/1846485729922126164 https://kannadanewsnow.com/kannada/breaking-diwali-gift-to-farmers-of-the-country-minimum-support-price-msp-of-rabi-crops-hiked-msp-hike/ https://kannadanewsnow.com/kannada/breaking-massive-fire-breaks-out-in-chikkaballapur-charred-slippers-showroom-gutted/

Read More