Author: kannadanewsnow09

ಬೆಂಗಳೂರು: ಅತಿ ನಿರೀಕ್ಷಿತ ಪುಷ್ಪಾ-2 ಸಿನಿಮಾ ಇದೀಗ ಡಾರ್ಕ್‌ ಫ್ಯಾಂಟಸಿಯೊಂದಿಗೆ ಸಹಯೋಗ ಘೋಷಿಸಿದ್ದು, ನಟ ಅಲ್ಲು ಅರ್ಜುನ್‌ ಅವರನ್ನು ಭೇಟಿ ಮಾಡುವ “’ಬಿಗ್ಗೆಸ್ಟ್ ಫ್ಯಾನ್ ಬಿಗ್ಗೆಸ್ಟ್ ಫ್ಯಾಂಟಸಿ” ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ವಿಜೇತರಾಗುವ ಐದು ಅದೃಷ್ಟಶಾಲಿಗೆ ಸೂಪರ್‌ಸ್ಟಾರ್‌ ಅಲ್ಲು ಅರ್ಜುನ್‌ ಅವರನ್ನು ಭೇಟಿಯಾಗುವ ಸುವರ್ಣಾವಕಾಶ ಸಿಗಲಿದೆ. ಐಟಿಸಿ ಲಿಮಿಟೆಡ್‌ನ ಬಿಸ್ಕತ್ತುಗಳು ಮತ್ತು ಕೇಕ್ಸ್ ಕ್ಲಸ್ಟರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಅಲಿ ಹ್ಯಾರಿಸ್, ಆಸಕ್ತರು www.biggestfanbiggestfantasy.com ಈ ವೆಬ್‌ಸೈಟ್‌ನಲ್ಲಿ ಆಗ್ಮೆಂಟೆಡ್ ರಿಯಾಲಿಟಿ (AR) ಫಿಲ್ಟರ್ ಬಳಸಿ ಡಾರ್ಕ್‌ಫ್ಯಾಂಟಸಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣವಾದಲ್ಲಿ ಸನ್‌ಫೀಸ್ಟ್‌ ಡಾರ್ಕ್‌ ಫ್ಯಾಂಟಸಿ ಪೇಜ್‌ನನ್ನು ಅಟ್ಯಾಚ್‌ ಮಾಡಬೇಕು. ಇದರಲ್ಲಿ ಆಯ್ಕೆಯಾದ ಐದು ಅದೃಷ್ಟಶಾಲಿಗಳಿಗೆ ಅಲ್ಲುಅರ್ಜುನ್‌ ಭೇಟಿ ಮಾಡುವುದು ಹಾಗೂ ಇತರೆ ಅತ್ಯಾಕರ್ಷ ಬಹುಮಾನವನ್ನು ಗೆಲ್ಲಬಹುದು. ಪುಷ್ಟಾ-2 ಸಿನಿಮಾ ಪ್ರಚಾರದ ಭಾಗವಾಗಿ ಸನ್‌ಫೀಸ್ಟ್ ಡಾರ್ಕ್‌ ಫ್ಯಾಂಟಸಿಯ ಪ್ಯಾಕ್‌ಗಳ ಮೇಲೆ ಪುಷ್ಪಾ ಅವತಾರದಲ್ಲಿ ಅಲ್ಲು ಅರ್ಜುನ್‌ ಅವರ ವಿಶೇಷ ಚಿತ್ರವನ್ನು ಮುದ್ರಿಸಿದೆ ಎಂದು ಹೇಳಿದರು. ಸಿಇಒ, ಮೈತ್ರಿ ಮೂವಿ…

Read More

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ನಾನು ಹಿಂದೆಯೇ ಇದರ ಬಗ್ಗೆ ಹೇಳಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಡ್ತೇನೆ. ಇದನ್ನ ಮೊದಲೇ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಸಚಿವ ಸ್ಥಾನ ಬೇಡ. ಈಗಲೂ ಈಮಾತಿಗೆ ಬದ್ಧನಾಗಿದ್ದೇನೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಸಂಪುಟ ಪುನಾರಚನೆ ವಿಚಾರವಾಗಿ ಮಾತನಾಡಿದಂತ ಅವರು, ಅದು ಡಿಕೆ ಶಿವಕುಮಾರ್ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಪಕ್ಷವಾಗಿದೆ. ಏನೇ ನಿರ್ಧಾರ ಮಾಡಿದ್ರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತಾರೆ. ಇದರ ಬಗ್ಗೆ ಚರ್ಚೆಯಾಗುತ್ತೋ ಇಲ್ವೋ ಗೊತ್ತಿಲ್ಲ. ಪ್ರಿಯಾಂಕ ಸಂಸದೆಯಾಗಿ ಸ್ವೇರಿಂಗ್ ಇದೆ. ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ಇದೆ. ಹಾಗಾಗಿ ಮುಖ್ಯಮಂತ್ರಿಗಳು‌ ಹೋಗ್ತಿದ್ದಾರೆ. ನಾನು ನಿನ್ನೆ ದೆಹಲಿಗೆ‌ ಹೋಗಿದ್ದೆ. ಸಹಕಾರಿ ಸಮ್ಮೇಳನದಲ್ಲಿ ನಾನು ಭಾಗಿಯಾಗಿದ್ದೆ. ಅಮಿತ್ ಶಾ ಕೂಡ ಭಾಗವಹಿಸಿದ್ದರು. ಅದರ ವಿಚಾರ ಅಷ್ಟೇ ನಾನು ಮಾತನಾಡಿದ್ದೇನೆ ಎಂದರು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಪ್ರತಿಕ್ರಿಯಿಸಿದಂತ ಅವರು, ನಾನು ಹಿಂದೆಯೇ ಇದರ ಬಗ್ಗೆ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ಸಚಿವ ಸ್ಥಾನ ಬಿಡ್ತೇನೆ. ಇದನ್ನ ಮೊದಲೇ ಹೇಳಿದ್ದೇನೆ. ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಸಚಿವ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿಯಲ್ಲಿ ನಿರ್ಮಾಣ ಹಂತದಲ್ಲಿರುವಂತ ಬಸವನಹೊಳೆ ಹೊಸ ಸೇತುವೆಯು ಕಾಮಗಾರಿ ನಡೆಸುತ್ತಿದ್ದಂತ ಸಂದರ್ಭದಲ್ಲಿಯೇ ಸಾರ್ವೆ ಕುಸಿತಗೊಂಡಿದೆ. ಸೇತುವೆಯ ಸಾರ್ವೆ ಸ್ವಲ್ಪ ವಾಲಿ ಕುಸಿತಗೊಂಡ ಪರಿಣಾಮ, ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶಿವಮೊಗ್ಗ ರಸ್ತೆಯಲ್ಲಿ ಹೊಸದಾಗಿ ಬಸವನ ಹೊಳೆಗೆ ಸೇತುವೆಯನ್ನು ನಿರ್ಮಿಸುವಂತ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಈ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದೆ. ಇಂದು ಸ್ಲ್ಯಾಬ್ ಹಾಕುವಂತ ಸಂದರ್ಭದಲ್ಲಿ ಸೇತುವೆಯ ಸಾರ್ವೆ ಕುಸಿತಗೊಂಡ ಪರಿಣಾಮ, ಕಬ್ಬಿಣದ ಸರಳುಗಳೆಲ್ಲ ಬಗ್ಗಿ ಹೋಗಿದ್ದಾವೆ. ಒಂದು ವೇಳೆ ಸೇತುವೆ ಕೆಳಗಿನ ಸಾರ್ವೆ ಸಂಪೂರ್ಣ ಕುಸಿತಗೊಂಡಿದ್ದರೇ ಕಾಮಗಾರಿ ನಡೆಸುತ್ತಿದ್ದಂತ ಕಾರ್ಮಿಕರ ಜೀವ ಹಾನಿಯೇ ಸಂಭವಿಸುತ್ತಿತ್ತು ಎಂಬುದಾಗಿ ಪ್ರತ್ಯಕ್ಷ ದರ್ಶಿಗಳ ಮಾತು. ಇನ್ನೂ ಸ್ಲ್ಯಾಬ್ ಸಪೋರ್ಟಿಂಗ್ ಹಾಕೋದಲ್ಲಿ ನಿಲ್ಲಿಸಿದ್ದಂತ ಸಾರ್ವೆ ಕುಸಿತಗೊಂಡರೂ, ಅವುಗಳನ್ನು ಸರಿಯಾದ ರೀತಿಯಲ್ಲಿ ಕಾಮಗಾರಿ ಮಾಡಬೇಕು. ಆದರೇ ಇಂಜಿನಿಯರ್ ಬಾಗಿದ, ಬೆಂಡಾಗಿರುವಂತ ಕಂಬಿಗಳ ನಡುವೆಯೂ ಸೇತುವೆ ಕಾಮಗಾರಿ ಮುಂದುವರೆಸಿದ್ದಾರೆ. ಇದರಿಂದ ಮುಂದೊಂದು ದಿನ ಬಹುದೊಡ್ಡ ಅನಾಹುತಕ್ಕೆ ದಾರಿ…

Read More

ಬೆಂಗಳೂರು: ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನಡೆದಿದೆ ಎಂದು ನೀವು ಕೊಟ್ಟಿರುವ ಸಾವಿನ ಲೆಕ್ಕಾಚಾರವೇ ಕಪೋಲ‌ ಕಲ್ಪಿತ ಮತ್ತು ಉತ್ಪ್ರೇಕ್ಷೆ ಎಂಬುದಾಗಿ ಬಿಜೆಪಿಗರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾವಿನಲ್ಲಿ ರಾಜಕಾರಣ ನಡೆಸುವುದು ಹಾಗೂ ರಾಜಕೀಯ ಹುಡುಕುವುದೇ ಹೇಯ. ಇದು ನಾಗರಿಕ ಸಮಾಜ ಒಪ್ಪುವ ಸಂಗತಿಯಲ್ಲವೇ ಅಲ್ಲ ಎಂಬುದನ್ನು BJP ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರಿಗೆ ಮೊದಲು ತಿಳಿಸಬಯಸುತ್ತೇನೆ. ಸಾರ್ವತ್ರಿಕ ಆರೋಗ್ಯ ವ್ಯವಸ್ಥೆಯ ಸುಧಾರಣೆ ಎಂಬುದು ನಿರಂತರ ಪ್ರಕ್ರಿಯೆ. ಇಲ್ಲಿ ಸವಾಲು ಹಾಗೂ ಸಂವೇದನೆಗೆ ನಮ್ಮನ್ನು ನಿತ್ಯ ಒಡ್ಡಿಕೊಳ್ಳಬೇಕಾಗುತ್ತದೆ. ಈ ದಿಶೆಯಲ್ಲಿ ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಪ್ರತಿದಿನವೂ ಹೆಜ್ಜೆ ಇಡುತ್ತಿದ್ದೇನೆ ಎಂದಿದ್ದಾರೆ. ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನಡೆದಿದೆ ಎಂದು ನೀವು ಕೊಟ್ಟಿರುವ ಸಾವಿನ ಲೆಕ್ಕಾಚಾರವೇ ಕಪೋಲ‌ ಕಲ್ಪಿತ ಮತ್ತು ಉತ್ಪ್ರೇಕ್ಷೆ. 2019ರಿಂದ ಇಲ್ಲಿಯವರೆಗಿನ ಅಧಿಕೃತ ಅಂಕಿ ಸಂಖ್ಯೆಗಳನ್ನು ಅವಲೋಕಿಸಿದಾಗ ಈ ವರ್ಷ ಅತಿ ಕಡಿಮೆ ಬಾಣಂತಿ ಹಾಗೂ…

Read More

ಬೆಂಗಳೂರು: ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯ ಎರಡನೇ ಹಂತದಲ್ಲಿ ʼಟೆನೆಕ್ಟ್‌ ಪ್ಲಸ್‌ʼ ಚುಚ್ಚುಮದ್ದನ್ನು ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಿಗೆ ಪೂರೈಕೆ ಮಾಡಲಾಗಿದೆ. ಈ ಚುಚ್ಚುಮದ್ದು ಒಂದು ಬಾಟಲಿಗೆ ₹30 ಸಾವಿರ ದರ ಇದ್ದು, ಉಚಿತವಾಗಿ ನೀಡಲಾಗುತ್ತಿದೆ. ಹೃದಯಾಘಾತಕ್ಕೆ ಒಳಗಾದವರಿಗೆ ಇಸಿಜಿ ಪರೀಕ್ಷೆ ನಡೆಸಿ, ಚುಚ್ಚುಮದ್ದು ಅಗತ್ಯವಿದ್ದಲ್ಲಿ ನೀಡಲಾಗುತ್ತಿದೆ. ತೃತೀಯ ಹಂತದ ಚಿಕಿತ್ಸೆಗೆ ʼಹಬ್‌ ಆಸ್ಪತ್ರೆʼಗಳಾಗಿ ನೋಂದಾಯಿತವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಸೇರಿ ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಇದೇ ಚುಚ್ಚುಮದ್ದುಗಳಿಗೆ ರವಾನಿಸಲಾಗುತ್ತಿದೆ. ಡಾ. ಪುನೀತ್‌ ರಾಜ್‌ಕುಮಾರ್‌ ಹೃದಯಜ್ಯೋತಿ ಯೋಜನೆಯಡಿ ಕಳೆದ ಒಂದು ತಿಂಗಳಲ್ಲಿ 348 ಮಂದಿಯ ಜೀವ ರಕ್ಷಿಸಲಾಗಿದೆ. ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. 3 ಲಕ್ಷಕ್ಕೂ ಅಧಿಕ ಮಂದಿಗೆ ಇಸಿಜಿ ಪರೀಕ್ಷೆ ಮಾಡಿಸಲಾಗಿದೆ. https://twitter.com/KarnatakaVarthe/status/1862086916684079363 https://kannadanewsnow.com/kannada/dearness-allowance-for-state-government-employees-retirees-hiked-by-2-25/ https://kannadanewsnow.com/kannada/earthquake-strikes-kashmir-valley/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಆಗಸ್ಟ್‌ 1 ರಿಂದ ಪೂರ್ವಾನ್ವಯವಾಗುವಂತೆ ಶೇ. 2.25 ರಷ್ಟು ಹೆಚ್ಚಳ ಮಾಡಲಾಗಿದೆ. ನೌಕರರು ತಮ್ಮ ಮೂಲ ವೇತನದ ಶೇ. 8.50 ರಷ್ಟು ತುಟ್ಟಿಭತ್ಯೆ ಪಡೆಯುತ್ತಿದ್ದು, ಆರ್ಥಿಕ ಇಲಾಖೆಯ ಹೊಸ ಆದೇಶದಿಂದಾಗಿ ಒಟ್ಟು ತುಟ್ಟಿಭತ್ಯೆ ಪ್ರಮಾಣ 10.75ಕ್ಕೆ ಏರಿಕೆಯಾಗಿದೆ. https://twitter.com/KarnatakaVarthe/status/1862108227305103595 https://kannadanewsnow.com/kannada/earthquake-strikes-kashmir-valley/ https://kannadanewsnow.com/kannada/breaking-ed-officials-on-duty-attacked-in-delhi-director-injured/

Read More

ಬೆಂಗಳೂರು: ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ವತಿಯಿಂದ ಆಯೋಜಿಸಲಾಗಿರುವ ಬಹುನಿರೀಕ್ಷಿತ “ಬಿಎಲ್‌ಆರ್‌ಹಬ್ಬ”ವು ಇದೇ ನವೆಂಬರ್‌ 30 ರಿಂದ ಆರಂಭವಾಗಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರಿಂದ “ನಮ್ಮ ಜಾತ್ರೆ” ಉದ್ಘಾಟನಾ ಸಮಾರಂಭದ ಮೂಲಕ ಅದ್ಧೂರಿ ಚಾಲನೆ ದೊರೆಯಲಿದೆ. ನವೆಂಬರ್‌ 30ರಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ “ಬಿಎಲ್‌ಆರ್‌ ಹಬ್ಬ”ದ ಭಾಗವಾಗಿ ನಡೆಯಲಿರುವ “ನಮ್ಮ ಜಾತ್ರೆ”ಯ ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಈ ಮೂಲಕ ಕರ್ನಾಟಕದ ಶ್ರೀಮಂತ ಪರಂಪರೆ, ಕಲೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿದೆ. ಅಂದು ರಾಜ್ಯಾದ್ಯಂತ 50 ವೈವಿಧ್ಯಮಯ ಜಾನಪದ ನೃತ್ಯ ತಂಡಗಳಿಂದ 500 ಕ್ಕೂ ಹೆಚ್ಚು ಜಾನಪದ ನೃತ್ಯಗಾರರ ಸಮ್ಮೋಹನಗೊಳಿಸುವ ಪ್ರದರ್ಶನದೊಂದಿಗೆ ಉತ್ಸವ ಪ್ರಾರಂಭಗೊಳ್ಳಲಿದೆ. ವಿಶೇಷವಾಗಿ ಸಂಯೋಜಿಸಿದ ಸಂಗೀತಕ್ಕೆ ಹೊಂದಿಸಲಾದ ಈ ಪ್ರದರ್ಶನಗಳು ರಾಜ್ಯದ ನೃತ್ಯ ಪ್ರಕಾರಗಳ ಶ್ರೀಮಂತ ವೈವಿಧ್ಯತೆಯ ರೂಪಗಳನ್ನು ಅನಾವರಣಗೊಳಿಸಲಿವೆ. ವಿಧಾನಸೌಧದ ಭವ್ಯವಾದ ಮೆಟ್ಟಿಲುಗಳ ಮೇಲೆ ಈ ರೋಮಾಂಚಕ ದೃಶ್ಯವನ್ನು ವೀಕ್ಷಿಸಲು ನಾಗರಿಕರನ್ನು ಆಹ್ವಾನಿಸಲಾಗಿದ್ದು, ನಮ್ಮ ಪರಂಪರೆ, ಆಚರಣೆಗಳನ್ನು ಕಣ್ತುಂಬಿಸಿಕೊಳ್ಳಲು ಅವಕಾಶ ನೀಡಲಿದೆ. ಊದ್ಘಾಟನೆ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು. ನಟ ದರ್ಶ್ ಪರ ವಕೀಲರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ನಾಳೆಗೆ ಅರ್ಜಿಯ ವಿಚಾರಣೆಯನ್ನು ಮುಂದೂಡಿತು. ಇಂದು ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಲಾಯಿತು. ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಆರಂಭಿಸಿ ಎ.13 ದೀಪಕ್ ಕುಮಾರ್ ಶೆಡ್ ನಲ್ಲಿ ಇವರು ಕಾರ್ಮಿಕರು. ಇವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ. ಶೆಡ್ ಅನ್ನು ದೀಪಕ್ ಕುಮಾರ್ ಬಳಕೆ ಮಾಡುತ್ತಿದ್ದನು. ಈತನೂ ಹಲ್ಲೆ ಮಾಡಿದವರಲ್ಲಿ ಒಬ್ಬನಾಗಿದ್ದಾನೆ ಎಂದರು. 6 ಜನರನ್ನು ಪ್ರತ್ಯಕ್ಷ ಸಾಕ್ಷಿ ಎಂದು ಪ್ರಾಸಿಕ್ಯೂಷನ್ ಉಲ್ಲೇಖಿಸಿದೆ. ದರ್ಶಿಗಳೆಂದು ಉಲ್ಲೇಖಿಸಲಾಗಿದೆ. ಪ್ರತ್ಯಕ್ಷ ಸಾಕ್ಷಿ ಪುನೀತ್ ಎಂಬುದಾಗಿ ಹೆಸರಿಸಲಾಗಿದೆ. ಈತನೇ ಪೋಟೋ ತೆಗೆದಿರುವುದಾಗಿ ಆರೋಪಿಯೊಬ್ಬನ ಹೇಳಿಕೆ ಇದೆ. ಈತನೇ ಪವಿತ್ರಳನ್ನು ಮನೆಗೆ ಕರೆದುಕೊಂಡು ಹೋಗಿದ್ದನು. ಕೃತ್ಯದ ಬಳಿಕ…

Read More

ಬೆಂಗಳೂರು: ಜನವರಿ 1, 2025 ರಿಂದ ಜಾರಿಗೆ ಬರುವಂತೆ ದಕ್ಷಿಣ ಮಧ್ಯ ರೈಲ್ವೆ ತನ್ನ ಒಡೆತನದ ಹತ್ತು ಪ್ಯಾಸೆಂಜರ್ ವಿಶೇಷ ರೈಲುಗಳನ್ನು ಸಾಮಾನ್ಯ ಪ್ಯಾಸೆಂಜರ್ ರೈಲುಗಳಾಗಿ ಮರು ಸಂಖ್ಯೆ ನೀಡಲು ಅಧಿಸೂಚನೆ ಹೊರಡಿಸಿದೆ. ಬದಲಾವಣೆಗಳ ವಿವರಗಳು ಈ ಕೆಳಗಿನಂತಿವೆ: 1. ಗುಂತಕಲ್-ಹಿಂದೂಪುರ-ಗುಂತಕಲ್ ರೈಲು ಸಂಖ್ಯೆ 07693/07694 ಈಗ 77213/77214 ಎಂದು ಮರುಸಂಖ್ಯೆ ನೀಡಲಾಗಿದೆ. 2. ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ ರೈಲು ಸಂಖ್ಯೆ 07657/07658 ಈಗ 57401/57402 ಎಂದು ಮರುಸಂಖ್ಯೆ ನೀಡಲಾಗಿದೆ. 3. ತಿರುಪತಿ-ಕದಿದೇವರಪಲ್ಲಿ-ತಿರುಪತಿ ರೈಲು ಸಂಖ್ಯೆ 07589/07590 ಈಗ 57405/57406 ಎಂದು ಮರುಸಂಖ್ಯೆ ನೀಡಲಾಗಿದೆ. 4. ಚಿಕ್ಕಜಾಜೂರು-ಗುಂತಕಲ್-ಚಿಕ್ಕಜಾಜೂರು ರೈಲು ಸಂಖ್ಯೆ 07585/07586 ಈಗ 57416/57415 ಎಂದು ಮರುಸಂಖ್ಯೆ ಮಾಡಲಾಗಿದೆ. 5. ವಿಜಯಪುರ-ರಾಯಚೂರು-ವಿಜಯಪುರ ರೈಲು ಸಂಖ್ಯೆ 07663/07664 ಈಗ 57662/57661 ಎಂದು ಮರುಸಂಖ್ಯೆ ಮಾಡಲಾಗಿದೆ. ಪ್ರಯಾಣಿಕರು ಈ ಮಾರ್ಪಾಡುಗಳನ್ನು ಗಮನದಲ್ಲಿಟ್ಟುಕೊಂಡು ಸುಗಮ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳಬೇಕು. ರಾಜ್ಯದ ‘ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ‘ಕೌಶಲ್ಯಾಭಿವೃದ್ಧಿ ತರಬೇತಿ’ಗೆ ಅರ್ಜಿ ಆಹ್ವಾನ – Kannada News |…

Read More

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಗುರುವಾರ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರ ಕಣಿವೆಯಲ್ಲೂ ಭೂಕಂಪದ ಅನುಭವವಾಗಿದೆ. ಅಫ್ಘಾನಿಸ್ತಾನದಲ್ಲಿ ಉಂಟಾದಂತ 5.0 ತೀವ್ರತೆಯ ಭೂಕಂಪನದ ಕಾರಣ, ಭಾರತದ ಕಾಶ್ಮೀರ ಕಣಿವೆಯಲ್ಲೂ ಭೂಮಿ ಕಂಪಿಸಿದಂತ ಅನುಭವ ಉಂಟಾಗಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/important-information-for-second-puc-students-in-the-state-applications-invited-for-skill-development-training/ https://kannadanewsnow.com/kannada/breaking-ed-officials-on-duty-attacked-in-delhi-director-injured/

Read More