Author: kannadanewsnow09

ಬೆಂಗಳೂರು : “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ‌ಭಾನುವಾರ ಪ್ರತಿಕ್ರಿಯೆ ನೀಡಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ” ಎಂದರು. ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ “ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿಯು ಶೂನ್ಯ. ಬಿಜೆಪಿ ಬದುಕಿರುವುದೇ ಆರ್ ಎಸ್ ಎಸ್…

Read More

ಹಾಸನ: ಜಿಲ್ಲೆಯಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಸ್ನೇಹಿತನನ್ನೇ ದುರುಳರು ಕೊಲೆ ಮಾಡಿದ್ದಾರೆ. ಕಲ್ಲಿನಿಂದ ಹೊಡೆದು ಗಿರೀಶ್(44) ಎಂಬಾತನನ್ನು ರಮೇಶ್ ಎಂಬಾತ ಹತ್ಯೆ ಮಾಡಿದ್ದಾನೆ. ನಿನ್ನೆ ಕೆಲಸ ಮುಗಿಸಿ ಅಂಗಡಿ ಬಳಿಯಲ್ಲಿ ಗಿರೀಶ್ ಕುಳಿತಿದ್ದನು. ಮದ್ಯ ಸೇವಿಸಿ ಗಿರೀಶ್ ಬಳಿಗೆ ಆರೋಪಿ ರಮೇಶ್ ಬಂದಿದ್ದನು. ಈ ಸಂದರ್ಭದಲ್ಲಿ ಕುಡಿಯಬೇಡ ಎಂಬುದಾಗಿ ರಮೇಶ್ ಗೆ ಬುದ್ಧಿವಾದವನ್ನು ಗಿರೀಶ್ ಹೇಳಿದ್ದನು. ಇದರಿಂದ ಸಿಟ್ಟಾದಂತ ರಮೇಶ್, ಗಿರೀಶ್ ಗೆ ಸಿಟ್ಟಿನಿಂದ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/government-grants-rs-1-crore-for-kodavar-chennad-hockey-tournament-cm-siddaramaiah-announces/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/

Read More

ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಇತರ ಬಿಜೆಪಿ ನಾಯಕರು ಭಾನುವಾರ ಸುರಂಗ ರಸ್ತೆ (Tunnel Road) ಕಾರಿಡಾರ್ ವಿರುದ್ಧ ಪ್ರತಿಭಟನೆ ನಡೆಸಿ, ಯೋಜನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ಈ ಯೋಜನೆಯು ಅವೈಜ್ಞಾನಿಕವಾಗಿದ್ದು, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಕರೆ ನೀಡಿದ ಸೂರ್ಯ, ಯೋಜನೆಯ ಡಿಪಿಆರ್ (DPR) ಪ್ರಕಾರ ಸುರಂಗದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ 22 ಹೆಚ್ಚುವರಿ ಸಂಚಾರ ಅಡಚಣೆಗಳು (ಚೋಕ್‌ಪಾಯಿಂಟ್‌ಗಳು) ಸೃಷ್ಟಿಯಾಗಲಿವೆ ಎಂದು ಗಮನ ಸೆಳೆದರು. ಅಲ್ಲದೆ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸದೆ ಯೋಜನೆಯನ್ನು ಹೇರಲಾಗುತ್ತಿದೆ ಎಂದು ಹೇಳಿದರು. ಜೊತೆಗೆ, ಈ ಪ್ರಸ್ತಾವನೆಗೆ ಕಡ್ಡಾಯವಾಗಿ ಬೇಕಾದ ಪರಿಸರ ಪರಿಣಾಮದ ಮೌಲ್ಯಮಾಪನ (EIA) ಮತ್ತು ಭೂವೈಜ್ಞಾನಿಕ ಅಧ್ಯಯನಗಳ (geological studies) ಕೊರತೆಯನ್ನೂ ಅವರು ಎತ್ತಿ ತೋರಿಸಿದರು. ಈ ವಿಷಯದ ಕುರಿತು ‘ಎಕ್ಸ್’ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿದ ಸೂರ್ಯ, “ಸುರಂಗ ರಸ್ತೆ ಯೋಜನೆಯು ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಪರಿಹಾರವಲ್ಲ.…

Read More

ಕೊಳ್ಳೇಗಾಲ : ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣದಲ್ಲಿ, ವನ್ಯಜೀವಿಗಳ ಸಾವಿಗೀಡಾದಾಗ ಅಧಿಕಾರಿಗಳ ಕರ್ತವ್ಯಲೋಪ, ನಿರ್ಲಕ್ಷ್ಯ ಸಾಬೀತಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾಮರಾಜನಗರದಲ್ಲಿಂದು ಆಯೋಜಿಸಿದ್ದ ಅರಣ್ಯ ಸಮಸ್ಯೆಗಳ ಕುರಿತಂತೆ ರೈತರು ಮತ್ತು ಸಾರ್ವಜನಿಕರೊಂದಿಗೆ ಸಂವಾದಕ್ಕೆ ತೆರಳುವ ಹಾದಿಯಲ್ಲಿ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಿಸಲು ರಾಜ್ಯಮಟ್ಟದ ನಿರ್ವಹಣಾ ಕಾರ್ಯಪಡೆ ರಚಿಸಲಾಗುತ್ತಿದ್ದು, ಈ ಕಾರ್ಯಪಡೆ ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ನಡೆಸಲಿದೆ ಜೊತೆಗೆ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ಪರಾಮರ್ಶಿಸಲಿದೆ ಎಂದರು. ಕೆಲವು ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಕಾಡಿನೊಳಗೆ ಮೋಜು ಮಸ್ತಿ ಮಾಡುತ್ತಿದ್ದಾರೆ ಈ ಬಗ್ಗೆ ಕ್ರಮ ಆಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮ ಎಲ್ಲರಿಗೂ ಒಂದೇ. ಯಾವುದೇ ಅಧಿಕಾರಿ ನಿಯಮ ಉಲ್ಲಂಘಿಸಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

Read More

ಬೆಂಗಳೂರು: 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. 2016 ರಿಂದ 2020 ರ ವರೆಗಿನ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಶಾಲೆಗಳಲ್ಲಿ ಸುಮಾರು 6,000 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು ಎಂಬುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೀಗಿದೆ ಇಂದಿನ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಅಂಗವಾಗಿ ಮಾಡಿದ ಭಾಷಣದ ಪ್ರಮುಖ ಹೈಲೈಟ್ಸ್.. ನಮ್ಮ ಇಲಾಖೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿ ಗುಣಾತ್ಮಕ ಕಾರ್ಯಕ್ರಮಗಳು ಶಿಕ್ಷಕರ ನೇಮಕಾತಿ 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ…

Read More

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಜನತೆಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ. ಲೈಟರ್ ಕೈಯಲ್ಲಿ ಹಿಡಿದು ತಾಸುಗಟ್ಟಲೆ ಸರದಿ ಸಾಲಿನಲ್ಲೋ, ಜನಸ್ಪಂದನ ಕಾರ್ಯಕ್ರಮದಲ್ಲೋ ನಿಂತು ತಮ್ಮ ಸಮಸ್ಯೆ ಪರಿಹರಿಸಿ ಎನ್ನುವ ವ್ಯವಸ್ಥೆ ಬದಲು ಮಾಡಿದ್ದಾರೆ. ರಾಜ್ಯದ ಸಾರ್ವಜನಿಕರಾದಂತ ನೀವುಗಳು ನಿಮ್ಮ ಸಮಸ್ಯೆಗಳನ್ನು ಸಿಎಂಗೆ ದೂರಿನ ಮೂಲಕ ನೀಡಬೇಕಾದರೇ, ಜಸ್ಟ್ ಒಂದು ಎಕ್ಸ್ ಪೋಸ್ಟ್ ಸಾಕಾಗಿದೆ. ಆ ಪೋಸ್ಟ್ ಗೆ ಪ್ರತ್ಯುತ್ತರ ಬಂದು, ನಿಮ್ಮ ಸಮಸ್ಯೆಗೆ ಪರಿಹಾರ ಖಂಡಿತ ಸಿಗಲಿದೆ ಎಂಬುದು ಸಿಎಂ ಕಚೇರಿಯ ಮಾಹಿತಿ. ಹಾಗಾದ್ರೇ ಸಿಎಂಗೆ ದೂರು ನೀಡೋದು ಹೇಗೆ ಅಂತ ಮುಂದೆ ಓದಿ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಿಂದ ಪ್ರಾರಂಭವಾಗಿರುವ ಹೊಸ ಉಪಕ್ರಮವಾಗಿದ್ದು, ಯಾವುದೇ ದೊಡ್ಡ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ. ಜನರಿಗೆ ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಸಹಾಯ ಮಾಡಲು, ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ (CMO) ಹೊಸ ಟ್ವಿಟರ್ ಹ್ಯಾಂಡಲ್ ಅನ್ನು ಪ್ರಾರಂಭಿಸಿದ್ದು, ಇದರ ಮೂಲಕ ಹೇಗೆ ದೂರು ನೀಡಬೇಕು? ದೂರು…

Read More

ಬೆಳಗಾವಿ: ಜಿಲ್ಲೆಯಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ರಾಜ್ಯೋತ್ಸವ ಮೆರವಣಿಗೆ ಸಂದರ್ಭದಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆಯಲ್ಲಿ ಐವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ವೃತ್ತದ ಬಳಿಯಲ್ಲಿ ಈ ಕೃತ್ಯವೆಸಗಲಾಗಿದೆ. ಚಾಕು ಇರಿತಕ್ಕೆ ಒಳಗಾದಂತ ಮೂವರನ್ನು ಬಿಮ್ಸ್ ಗೆ ದಾಖಲಿಸಲಿದ್ದರೇ, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೂಪಕಗಳ ಮೆರವಣಿಗೆ ವೇಳೆಯಲ್ಲಿ ಈ ಕೃತ್ಯವೆಸಗಲಾಗಿದೆ. ವಿಷಯ ತಿಳಿದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕಮೀಷನರ್ ಭೂಷಣ್ ಬೊರಸೆ ಭೇಟಿ ನೀಡಿ, ಮಾಹಿತಿ ಪಡೆದರು. https://kannadanewsnow.com/kannada/tomorrow-a-new-idol-of-lord-basavanna-will-be-installed-at-karjikoppa-in-sorabada-nadi-the-temple-will-be-dedicated-to-the-public/ https://kannadanewsnow.com/kannada/haveri-26th-annual-festival-of-goddess-tulja-bhavani-to-be-held-on-november-3/

Read More

ಶಿವಮೊಗ್ಗ: ನಾಳೆ, ನಾಡಿದ್ದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ದಿನಾಂಕ 02-11-2025ರ ನಾಳೆಯ ಭಾನುವಾರ ಮತ್ತು ದಿನಾಂಕ 03-11-2025ರ ನಾಡಿದ್ದು ಸೋಮವಾರದಂದು ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನಾ ಮತ್ತು ನೂತನ ದೇವಾಲಯ ಲೋಕಾರ್ಪಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಿಳಿಸಿದ್ದಾರೆ. ದಿನಾಂಕ 02-11-2025ರಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಲಿವೆ. ಸಂಜೆ 4 ಗಂಟೆಗೆ ಮಂಗಳ ವಾದ್ಯ ಮತ್ತು ಪೂರ್ಣಕುಂಭ ಸಮೇತ ನೂತನ ಬಸವಣ್ಣ ದೇವರ ವಿಗ್ರಹದ ಮೆರವಣಿಗೆ ನಡೆಯಲಿದೆ. ಸಂಜೆ 6.30ಕ್ಕೆ ಏಕಾದಶ ರುದ್ರದ ಮೂಲಕ ಪೂಜೆ ಆರಂಭಗೊಂಡು, ಕಂಕಣ ಧಾರಣೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ದಿನಾಂಕ 03-11-2025ರ…

Read More

ಹೊನ್ನಾವರ: ಇಲ್ಲಿನ ಗೇರುಸೊಪ್ಪ ಸಮೀಪದ ಸುಳಿಮುರ್ಕಿ ಕ್ರಾಸ್ ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿಯಾಗಿದ್ದು, ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿರುವುದಾಗಿ ಹೇಳಲಾಗುತ್ತಿದೆ. ಬೆಂಗಳೂರಿನಿಂದ ಭಟ್ಕಳಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಹೊನ್ನಾವರದ ಗೇರುಸೊಪ್ಪ ಬಳಿಯಲ್ಲಿ ಪಲ್ಟಿಯಾಗಿದೆ. ಈ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗುತ್ತಿದೆ. ಬಸ್ ಪಲ್ಟಿಯಾಗಿದ್ದರಿಂದ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇನ್ನೂ ಬಸ್ ಪಲ್ಟಿಯಿಂದಾಗಿ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ಅವರಿಗೆ ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ. https://kannadanewsnow.com/kannada/should-you-complain-to-chief-minister-siddaramaiah-just-do-this-your-problem-will-be-cleared/ https://kannadanewsnow.com/kannada/haveri-26th-annual-festival-of-goddess-tulja-bhavani-to-be-held-on-november-3/

Read More

ಹಾವೇರಿ: ಜಿಲ್ಲೆಯಲ್ಲಿ ಪ್ರಸಿದ್ಧ ಜಾತ್ರೆಗಳಲ್ಲಿ ಒಂದು ಅಕ್ಕಿ ಆಲೂರಿನ ಶ್ರೀ ತುಳಜಾಭವಾನಿ ದೇವಿಯದ್ದು. ನವೆಂಬರ್.3, 2025ರಂದು 26ನೇ ವರ್ಷದ ಜಾತ್ರಾ ಮಹೋತ್ಸವವನ್ನು ನಡೆಸಲು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಶ್ರೀ ತುಳಜಾಭವನಾನಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿಆಲೂರು ಗ್ರಾಮದ ಡೊಳ್ಳೇಶ್ವರ ಕ್ರಾಸ್ ಹತ್ತಿರದಲ್ಲಿರುವಂತ ಶ್ರೀ ತುಳಜಾಭವಾನಿ ದೇವಿಯ 26ನೇ ಜಾತ್ರಾ ಮಹೋತ್ಸವವನ್ನು ನವೆಂಬರ್.3ರಂದು ನಡೆಸಲಾಗುತ್ತಿದೆ ಎಂಬುದಾಗಿ ತಿಳಿಸಿದೆ. ನವೆಂಬರ್.3ರ ಸೋಮವಾರದಂದು ಬೆಳಗ್ಗೆ 5 ಗಂಟೆಗೆ ಶ್ರೀ ತುಳಜಾಭವಾನಿ ದೇವಿಗೆ ಸಕಲ ಮಂಗಲ ದ್ರವ್ಯಗಳ ಅಭಿಷೇಕದೊಂದಿಗೆ ಪೂಜೆ ಪ್ರಾರಂಭವಾಗಲಿದೆ. ಬೆಳಗ್ಗೆ 6 ಗಂಟೆಗೆ ಕುಂಭಗಳೊಂದಿಗೆ ದೇವಿಯ ಉತ್ಸವ ಮೂರ್ತಿಯ ಭವ್ಯ ಮೆರವಣಿಗೆ ಸಕಲ ವಾದ್ಯ ವೃಂದಗಳೊಂದಿಗೆ ಅಕ್ಕಿ ಆಲೂರು ನಗರ ಪ್ರದಕ್ಷಿಣೆ ಬಳಿಕ ದೇವಸ್ಥಾನಕ್ಕೆ ಆಗಮಿಸಲಿದೆ ಎಂದಿದೆ. ಇನ್ನೂ ಮಧ್ಯಾಹ್ನ 1 ಗಂಟೆಗೆ ಶ್ರೀ ತುಳಜಾಭವಾನಿ ದೇವಿಯ ಮಹಾಮಂಗಳಾರತಿಯು ಜರುಗಲಿದೆ. ಹಾನಗಲ್ ತಾಲ್ಲೂಕಿನ ಅಕ್ಕಿ-ಆಲೂರು ಡೊಳ್ಳೇಶ್ವರ ಕ್ರಾಸ್ ಹತ್ತಿರ ಪ್ರತಿಷ್ಠಾಪಿಸಿರುವಂತ ಶ್ರೀ…

Read More