Author: kannadanewsnow09

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಗ್ ಶಾಕ್ ನೀಡಿದ್ದಾರೆ. ಅದೇ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದರೇ ಬ್ರೇಕ್ ಹಾಕುವುದಾಗಿ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರಿಸಿದರು. ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಹೇಳಿದ್ದಾರೆ. https://twitter.com/KarnatakaVarthe/status/1999017229992734972 https://kannadanewsnow.com/kannada/sharavati-pumped-storage-hydropower-project-will-not-harm-the-environment-minister-k-j-george/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ಬೆಳಗಾವಿ ಸುವರ್ಣಸೌಧ: ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2,000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರ ಉತ್ತರಿಸಿದರು. ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸುವವರಿಗೆ ಮಾಹಿತಿಯ ಕೊರತೆ ಇದೆ. ಜನಪ್ರತಿನಿಧಿಗಳು, ಪರಿಸರವಾದಿಗಳ ತಕಾರರು ಬಂದಾಗ ಇದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿಸಿದ ತಜ್ಞರು, ಅಧಿಕಾರಿಗಳಿಂದ ಪರಿಶೀಲಿಸಿ, ಅವರಿಂದ ವರದಿ ಪಡೆದುಕೊಂಡಿದ್ದೇನೆ. ಈಗಲೂ ಶಾಸಕರಿಗೆ ಪರಿಸರ ಹಾನಿ ಕುರಿತಂತೆ ಯಾವುದೇ ಸಂಶಯಗಳಿದ್ದಲ್ಲಿ, ಅವುಗಳನ್ನು ಪರಿಹರಿಸುವ ಕಾರ್ಯ ಮಾಡಲಾಗುವುದು. ಈ ಯೋಜನೆಯಲ್ಲಿ ಸುರಂಗ ಮಾರ್ಗವನ್ನು ಮಾಡಲಾಗುವುದಿಲ್ಲ, ಬದಲಿಗೆ ಪೈಪ್‍ಲೈನ್ ಅಳವಡಿಸಿ, ಆ ಪ್ರದೇಶವನ್ನು ಪುನಃ ಮೊದಲಿನ ಸ್ಥಿತಿಗೆ ತಂದು ಅರಣ್ಯೀಕರಣ ಮಾಡಲಾಗುವುದು.…

Read More

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ ಲೈನ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಗೆ ಹೊಸದಾಗಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ವೆಬ್ ಸೈಟ್ ನಲ್ಲಿ ಲಿಂಕ್ ತೆರೆದಿದ್ದು, ಡಿ.12ರಂದು ಸಂಜೆ 5ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು, ಮೂರನೇ ಸುತ್ತಿನಲ್ಲಿ ಪಾವತಿಸಿರುವ ವೈದ್ಯಕೀಯ ಕೋರ್ಸ್ ಶುಲ್ಕದ ಅನ್ವಯ ಇಚ್ಛೆಗಳನ್ನು ದಾಖಲಿಸಬಹುದು.‌ 3ನೇ ಸುತ್ತಿನಲ್ಲಿ ದಂತ ವೈದ್ಯಕೀಯ ಸೀಟು ಸಿಕ್ಕಿರುವವರು ಕೂಡ ವೈದ್ಯಕೀಯ ಕೋರ್ಸ್ ಗೆ ಆಪ್ಷನ್ಸ್ ದಾಖಲಿಸಬಹುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಡಿ.13ರಂದು ಬೆಳಿಗ್ಗೆ 10ಕ್ಕೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಅದೇ ದಿನ ಮಧ್ಯಾಹ್ನ 2ಗಂಟೆಗೆ ವೈದ್ಯಕೀಯ ಕೋರ್ಸ್ ನ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ದಂತ ವೈದ್ಯಕೀಯ ಕೋರ್ಸ್ ನ ಅಂತಿಮ ಫಲಿತಾಂಶವನ್ನು ಡಿ.13ರಂದು ಮಧ್ಯಾಹ್ನ 3ಗಂಟೆಗೆ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಡಿ.15ರೊಳಗೆ ಶುಲ್ಕ ಪಾವತಿಸಿ, ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು…

Read More

ಬೆಳಗಾವಿ: ಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು. ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ…

Read More

ಬೆಂಗಳೂರು: ವಿವಿಧ ಕಂಪನಿಗಳಲ್ಲಿ ಇಂಟರ್ ಶಿಪ್‌ಗಾಗಿ ಪ್ರವೇಶ ಪಡೆದುಕೊಳ್ಳಲು ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ಡಿಸೆಂಬರ್‌ 26 ರವರೆಗೆ ವಿಸ್ತರಿಸಿದೆ. ವಿಟಿಯು ಹಾಗೂ ಸ್ವಾಯತ್ತ, ಸಂಯೋಜಿತ ಕಾಲೇಜುಗಳಲ್ಲಿ 7 ಮತ್ತು 8ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಇಂಟರ್‌ ಶಿಪ್‌ಗೆ ಪ್ರವೇಶ ಪಡೆದುಕೊಳ್ಳಲು ಈ ಹಿಂದೆ ಡಿಸೆಂಬರ್‌ 15 ಕೊನೆಯ ದಿನವೆಂದು ನಿಗದಿ ಪಡಿಸಿತ್ತು. ವಿದ್ಯಾರ್ಥಿಗಳ ಮನವಿಯ ಮೇರೆಗೆ ವಿಟಿಯು ಇದೀಗ ಡಿಸೆಂಬರ್‌ 26ರವರೆಗೆ ವಿಸ್ತರಣೆ ಮಾಡಿರುವುದಾಗಿ ವಿಟಿಯು ಪ್ರಕಟಣೆ ತಿಳಿಸಿದೆ. https://kannadanewsnow.com/kannada/brother-kills-brother-for-scolding-mother-in-bengaluru/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ಬೆಂಗಳೂರು: ನಗರದಲ್ಲಿ ತಾಯಿಗೆ ಬೈದಿದ್ದರಿಂದ ಸಿಟ್ಟುಗೊಂಡಂತ ಅಣ್ಣನನ್ನೇ ತಮ್ಮನೊಬ್ಬ ಕೊಲೆಗೈದ ಘಟನೆ ನಡೆದಿದೆ. ಬೆಂಗಳೂರಿನ ಯಾರಬ್ ನಗರದ ಮೊಹಮ್ಮದ್ ಮುಜಾಹಿದ್(35) ಎಂಬಾತನೇ ಕೊಲೆಯಾದ ಅಣ್ಣನಾಗಿದ್ದಾನೆ. ಮುಜಾಹಿದ್ ನ ತಮ್ಮ ಮೊಹಮ್ಮದ್ ಮುಸೇದ್ ನಿಂದ ಈ ಕೃತ್ಯವನ್ನು ಎಸಗಲಾಗಿದೆ. ತಾಯಿಗೆ ಬೈದ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ ಉಂಟಾಗಿತ್ತು. ಮನೆಯಲ್ಲಿದ್ದ ವಸ್ತುಗಳಿಂದ ಇದೇ ವಿಚಾರಕ್ಕೆ ಸಹೋದರರು ಹೊಡೆದಾಡಿಕೊಂಡಿದ್ದರು. ಹೊಡೆದಾಟದಲ್ಲಿ ಮುಜಾಹಿದ್ ನನ್ನು ಮುಸೇದ್ ತೀವ್ರವಾಗಿ ಹಲ್ಲೆ ಮಾಡಿದ್ದನು. ಹೊಡೆದಾಟದಲ್ಲಿ ಅಣ್ಣ ಮುಜಾಹಿದ್ ನನ್ನು ತಮ್ಮ ಮುಸೇದ್ ತೀವ್ರವಾಗಿ ಗಾಯಗೊಳಿಸಿದ್ದನು. ಗಾಯಗೊಂಡ ಮುಸೇದ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/delhi-riots-accused-umar-khalid-granted-bail/ https://kannadanewsnow.com/kannada/why-heart-attacks-spike-in-winter-doctor-explains-risks-and-prevention-tips/

Read More

ನವದೆಹಲಿ: ದೆಹಲಿ ನ್ಯಾಯಾಲಯವು ಗುರುವಾರ ಮಾಜಿ ಜೆಎನ್‌ಯು ವಿದ್ವಾಂಸ ಮತ್ತು ದೆಹಲಿ ಗಲಭೆ ಸಂಚು ಆರೋಪಿ ಉಮರ್ ಖಾಲಿದ್‌ಗೆ ತನ್ನ ಸಹೋದರಿಯ ಮದುವೆಯಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ನೀಡಿದೆ. ಖಾಲಿದ್ ಡಿಸೆಂಬರ್ 16 ರಿಂದ ಡಿಸೆಂಬರ್ 29 ರವರೆಗೆ ಜಾಮೀನಿನ ಮೇಲೆ ಇರುತ್ತಾರೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್‌ಜೆ) ಸಮೀರ್ ಬಾಜ್‌ಪೈ ಹೇಳಿದ್ದಾರೆ. ಖಾಲಿದ್ ಸಾಮಾಜಿಕ ಮಾಧ್ಯಮವನ್ನು ಬಳಸಬಾರದು ಮತ್ತು ಅವರ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರನ್ನು ಮಾತ್ರ ಭೇಟಿಯಾಗಬೇಕು ಎಂದು ಆದೇಶಿಸಲಾಗಿದೆ. “ಇದಲ್ಲದೆ, ಅವರು ತಮ್ಮ ಮನೆಯಲ್ಲಿ ಅಥವಾ ಅವರು ಹೇಳಿದಂತೆ ವಿವಾಹ ಸಮಾರಂಭಗಳು ನಡೆಯುವ ಸ್ಥಳಗಳಲ್ಲಿ ಉಳಿಯಬೇಕು” ಎಂದು ನ್ಯಾಯಾಲಯ ಹೇಳಿದೆ. ಖಾಲಿದ್ ಡಿಸೆಂಬರ್ 14 ರಿಂದ ಡಿಸೆಂಬರ್ 29 ರವರೆಗೆ ಜಾಮೀನು ಕೋರಿದ್ದರು. ಅವರ ಸಹೋದರಿಯ ಮದುವೆ ಡಿಸೆಂಬರ್ 27 ರಂದು ನಡೆಯಲಿದೆ ಎಂದು ಹೇಳಲಾಗಿದೆ. ಖಾಲಿದ್ ಅವರನ್ನು ಸೆಪ್ಟೆಂಬರ್ 2020 ರಲ್ಲಿ ಬಂಧಿಸಲಾಯಿತು ಮತ್ತು ಕ್ರಿಮಿನಲ್ ಪಿತೂರಿ, ಗಲಭೆ, ಕಾನೂನುಬಾಹಿರ ಸಭೆ, ಹಾಗೆಯೇ…

Read More

ಬೆಳಗಾವಿ ಸುವರ್ಣವಿಧಾನಸೌಧ : ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ. ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ. ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು…

Read More

ಬೆಳಗಾವಿ ಸುವರ್ಣ ವಿಧಾನಸೌಧ : ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವÀ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ…

Read More

ಬೆಳಗಾವಿ ಸುವರ್ಣಸೌಧ : ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ…

Read More