Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮೇ 22 ರಂದು ಪತ್ರಿಕಾ ಹೇಳಿಕೆ ನೀಡಿದ ಹಿಸಾರ್ ಪೊಲೀಸರು, ಅವರು ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬುದಕ್ಕೆ ಯಾವುದೇ ನೇರ ಪುರಾವೆಗಳಿಲ್ಲ ಎಂದು ಹೇಳಿದ್ದಾರೆ. ಹಿಸಾರ್ ಟ್ರಾವೆಲ್ ವ್ಲೋಗರ್ ಜ್ಯೋತಿ ರಾಣಿ ಅವರ ಪೊಲೀಸ್ ಕಸ್ಟಡಿಯನ್ನು ಗುರುವಾರ (ಮೇ 22, 2025) ನಾಲ್ಕು ದಿನಗಳವರೆಗೆ ವಿಸ್ತರಿಸಲಾಗಿದೆ. ಕಳೆದ ವಾರ ಬೇಹುಗಾರಿಕೆ ಆರೋಪದ ಮೇಲೆ ಬಂಧಿಸಲ್ಪಟ್ಟ ಜ್ಯೋತಿ ಅವರನ್ನು ಐದು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿಸಾರ್ ಪೊಲೀಸರ ಹೇಳಿಕೆ ಹಿಸಾರ್ ಪೊಲೀಸ್ ವರಿಷ್ಠಾಧಿಕಾರಿ ಶಶಾಂಕ್ ಕುಮಾರ್ ಸಾವನ್ ಅವರು, ವ್ಲೋಗರ್ ಅವರಿಗೆ ರಕ್ಷಣೆ ಮತ್ತು ಮಿಲಿಟರಿಗೆ ಸಂಬಂಧಿಸಿದ ರಹಸ್ಯ ಮಾಹಿತಿ ಲಭ್ಯವಿಲ್ಲ ಎಂದು ಹೇಳಿದರು. ಆದರೆ ಪಾಕಿಸ್ತಾನ ಗುಪ್ತಚರ ಕಾರ್ಯಕರ್ತರೊಂದಿಗೆ ಅವರು ಹಂಚಿಕೊಂಡ ಮಾಹಿತಿಯ ವಿವರಗಳನ್ನು ಖಚಿತಪಡಿಸಿಕೊಳ್ಳಲು ಅವರ ಮೊಬೈಲ್ ಫೋನ್ ಮತ್ತು ಲ್ಯಾಪ್ಟಾಪ್ನ ಎಫ್ಎಸ್ಎಲ್ ವರದಿಯನ್ನು ನಿರೀಕ್ಷಿಸಲಾಗಿದೆ. ಗುರುವಾರ (ಮೇ 22, 2025) ಪತ್ರಿಕಾ ಹೇಳಿಕೆಯಲ್ಲಿ ಹಿಸಾರ್ ಪೊಲೀಸರು ಅವರು ಯಾವುದೇ ಭಯೋತ್ಪಾದಕ…
ಬೆಂಗಳೂರು: ಸಾರ್ವಜನಿಕರು ನರರೋಗದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಅದಕ್ಕಿಂತ ಮುನ್ನೆಚ್ಚರಿಕೆ ವಹಿಸಬೇಕು ಎಂಬುದಾಗಿ ಬೆಂಗಳೂರಿನ ಕನ್ನಿಂಗ್ಯಾಮ್ ರಸ್ತೆಯಲ್ಲಿರುವಂತ ಪೊರ್ಟಿಸ್ ಆಸ್ಪತ್ರೆಯ ಕನ್ಸಲ್ಟೆಂಟ್-ನ್ಯೂರಾಲಜಿಸ್ಟ್ ಆದಂತ ಡಾ.ಚಂದನಾ ಆರ್.ಗೌಡ ತಿಳಿಸಿದ್ದಾರೆ. ಬಾಹ್ಯ ನರರೋಗ ಎಂದೂ ಕರೆಯಲ್ಪಡುವ ನರರೋಗವು ಒಂದು ಸಂಕೀರ್ಣ ಮತ್ತು ಆಗಾಗ್ಗೆ ದುರ್ಬಲಗೊಳಿಸುವ ಸ್ಥಿತಿಯಾಗಿದ್ದು, ಇದು ಬಾಹ್ಯ ನರಗಳ ಮೇಲೆ ಪರಿಣಾಮ ಬೀರುತ್ತದೆ, ಅವು ಮೆದುಳು ಮತ್ತು ಬೆನ್ನುಹುರಿಯ ಹೊರಗಿನ ನರಗಳಾಗಿವೆ. ಕೇಂದ್ರ ನರಮಂಡಲ ಮತ್ತು ದೇಹದ ಉಳಿದ ಭಾಗಗಳ ನಡುವೆ ಸಂಕೇತಗಳನ್ನು ರವಾನಿಸುವಲ್ಲಿ, ಚಲನೆ, ಸಂವೇದನೆ ಮತ್ತು ಅಂಗಗಳ ಕಾರ್ಯದಂತಹ ಕಾರ್ಯಗಳನ್ನು ನಿಯಂತ್ರಿಸುವಲ್ಲಿ ಈ ನರಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ನರರೋಗವು ಸೌಮ್ಯ ಅಸ್ವಸ್ಥತೆಯಿಂದ ಹಿಡಿದು ತೀವ್ರ ನೋವು, ಮರಗಟ್ಟುವಿಕೆ ಮತ್ತು ಅಂಗವೈಕಲ್ಯದವರೆಗೆ ವ್ಯಾಪಕವಾದ ರೋಗಲಕ್ಷಣಗಳನ್ನು ಉಂಟುಮಾಡುತ್ತದೆ, ಇದು ವ್ಯಕ್ತಿಯ ಜೀವನದ ಗುಣಮಟ್ಟವನ್ನು ಗಮನಾರ್ಹವಾಗಿ ಪರಿಣಾಮ ಬೀರುತ್ತದೆ. ನರರೋಗದ ಕಾರಣಗಳು ಮಧುಮೇಹ, ಆಘಾತ, ಸೋಂಕುಗಳು, ವಿಷ ಮತ್ತು ಸ್ವಯಂ ನಿರೋಧಕ ಅಸ್ವಸ್ಥತೆಗಳು ಸೇರಿದಂತೆ ವಿವಿಧ ಅಂಶಗಳಿಂದ ನರರೋಗ ಉಂಟಾಗುತ್ತದೆ. ಮಧುಮೇಹ ನರರೋಗವು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ನಬಾರ್ಡ್ ಖಾತರಿ ವಿಸ್ತರಣೆ 2025-26ನೇ ಸಾಲಿಗೆ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ, ಬೆಂಗಳೂರು ರವರು ನಬಾರ್ಡ್ ಮೂಲಕ ಪುನರ್ಧನ ಪಡೆಯಲು ರೂ.1600 ಕೋಟಿಗಳಿಗೆ (ಒಂದು ಸಾವಿರದ ಆರುನೂರು ಕೋಟಿ ರೂಪಾಯಿಗಳು ಮಾತ್ರ) ಆರ್ಥಿಕ ಇಲಾಖೆಯು ವಿಧಿಸಿದ ಷರತ್ತಿಗೊಳಪಟ್ಟು ದಿನಾಂಕ:01.04.2025 ರಿಂದ ದಿನಾಂಕ: 31.03.2026 ರವರೆಗೆ ರಾಜ್ಯ ಸರ್ಕಾರದ ಖಾತರಿ ನೀಡಲು ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ ಐಟಂ 9ರನ್ವಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಎಚ್.ಕೆ ಪಾಟೀಲ ಮಾಧ್ಯವದವರಿಗೆ ವಿವರಿಸಿದರು. 2011ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಅಭಿಯೋಜನೆಗೆ ನಕಾರ ಈ ಪ್ರಕರಣದಲ್ಲಿ ಮಂಡಿಸಿರುವ…
ಬೆಂಗಳೂರು: ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವಂತ 400 ಕಿರಿಯ ಪ್ರಯೋಗ ಶಾಲಾ ತಂತ್ರಜ್ಞರು, 400 ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ ಹುದ್ದೆಗಳನ್ನು 2021-22ನೇ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ಮುಂದುವರಿಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಿಗೆ ಪತ್ರ ಹೊರಡಿಸಲಾಗಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು ಹಾಗೂ 400 ಫಾರ್ಮಾಸಿಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಮುಂದುವರೆಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರಿಗೆ ಪತ್ರ ಹೊರಡಿಸಲಾಗಿರುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 150 ಹಿರಿಯ ಪ್ರಯೋಗಶಾಲಾ ತಂತ್ರಜ್ಞರನ್ನು…
ಶಿವಮೊಗ್ಗ: ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಖಾಸಗಿ ಬಸ್ ಒಂದು ಬೈಕ್ ಗೆ ಹಿಂಬದಿಯಾಗಿ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದಂತ ಗಜಾನನ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದೆ. ತುಪ್ಪುರು ಬಳಿಯಲ್ಲಿ ನಡೆದಂತ ಅಪಘಾತದಲ್ಲಿ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದರೇ, ಹಿಂಬದಿಯಲ್ಲಿ ಕುಳಿತಿದ್ದಂತ ಓರ್ವ ಮಹಿಳೆ, ಮತ್ತೊಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನೂ ಮತ್ತೊಂದು ಮಗುವಿಗೆ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇಂದು ಸಂಜೆ 4.35ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/abuse-pregnancy-twice-abortion-artist-manu-reveals-the-face-of-the-victim/ https://kannadanewsnow.com/kannada/good-news-for-cancer-patients-in-the-state-chemotherapy-centers-started-in-16-district-hospitals/
ಬೆಂಗಳೂರು: ರಾಜ್ಯದಲ್ಲಿ ಯುವಕರನ್ನೇ ಹೆಚ್ಚಾಗಿ ಕಾಡುತ್ತಿದೆ ಹೃದಯಾಘಾತ ಎನ್ನುವಂತೆ ಹಾರ್ಟ್ ಅಟ್ಯಾಕ್ ನಿಂದ ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಹೌದು ಇಂದು ಒಂದೇ ದಿನ ಶಾಕಿಂಗ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ ಮೂವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕ್ಯಾಬ್ ಚಾಲಕ ಅಭಿಷೇಕ್ ಎಂಬುವರು ಅರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. ಇನ್ನೂ ಹಾಸನದಲ್ಲಿ 19 ವರ್ಷದ ಸಂಧ್ಯಾ ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬಾತ್ ರೂಮಿನ ಬಾಗಿಲಿನಲ್ಲೇ ಕುಸಿದು ಬಿದ್ದು ಸಂಧ್ಯಾ ಸಾವನ್ನಪ್ಪಿದ್ದಾರೆ. ಕೊಡಗಿನಲ್ಲಿ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕುಶಾಲನಗರದ ಉಪ ವಲಯ ಅರಣ್ಯಾಧಿಕಾರಿಯಾಗಿದ್ದಂತ ದಿನೇಶ್ ಇಂದು ಅರ್ಟ್ ಅಟ್ಯಾಕ್ ನಿಂದ ನಿಧನರಾಗಿದ್ದಾರೆ. https://kannadanewsnow.com/kannada/good-news-for-cancer-patients-in-the-state-chemotherapy-centers-started-in-16-district-hospitals/ https://kannadanewsnow.com/kannada/abuse-pregnancy-twice-abortion-artist-manu-reveals-the-face-of-the-victim/
ಬೆಂಗಳೂರು: ರಾಜ್ಯದ ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಕ್ಯಾನ್ಸರ್ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ಸಮೀಪದ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಲಭವಾಗಿ, ಗುಣಮಟ್ಟದ ಕೀಮೋಥೇರಪಿ ಮತ್ತು ಬೆಂಬಲ ಸೇವೆಗಳನ್ನು ಒದಗಿಸುವ ಉದೇಶದಿಂದ SAST ನೊಂದಯಿತ ತೃತೀಯ ಹಂತದ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಪ್ರಾರಂಭಿಕ ಚಿಕಿತ್ಸೆ ಪಡೆದ ನಂತರ ಮುಂದುವರೆದ ಕೀಮೋಥೆರಪಿ ಚಿಕಿತ್ಸೆಗಾಗಿ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಡೇ ಕೇರ್ ಕೀಮೋಥೆರಪಿ ಕೇಂದ್ರಗಳನ್ನು ಹಬ್- ಅಂಡ್-ಸ್ಟೋಕ್ ಮಾದರಿಯಲ್ಲಿ ಪ್ರಾರಂಭಿಸಲಾಗುವುದು. ಹಿನ್ನೆಲೆ ವಾರ್ಷಿಕವಾಗಿ ಕರ್ನಾಟಕ ರಾಜ್ಯದಲ್ಲಿ ICMR-NCRP 2023 ವರದಿಯ ಪ್ರಕಾರ ಸುಮಾರು 70,000 ಹೊಸ ಕ್ಯಾನ್ಸರ್ ಪ್ರಕರಣಗಳನ್ನು ವರದಿಯಾಗುತ್ತಿದೆ. ಪ್ರಮುಖ ಕ್ಯಾನ್ಸರ್ಗಳು: ಸ್ತನ ಕ್ಯಾನ್ಸರ್ (18%), ಗರ್ಭಕಂಠದ ಕ್ಯಾನ್ಸರ್ (14%), ಬಾಯಿ ಕ್ಯಾನ್ಸರ್ (12%), ಶ್ವಾಸಕೋಶ ಕ್ಯಾನ್ಸರ್ (8%), ಮತ್ತು ಕೊಲೊರೆಕ್ಟಲ್ ಕ್ಯಾನ್ಸರ್ (6%). ಬಾಯಿಯ ಕ್ಯಾನ್ಸರ್ ಸಂಭವ: 12 ಪುಕರಣಗಳು /1…
ಬೆಂಗಳೂರು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಗೃಹ ಸಚಿವರ ಶಿಕ್ಷಣ ಸಂಸ್ಥೆ ಮೇಲಿನ ಇಡಿ ದಾಳಿಗೂ ರನ್ಯಾ ರಾವ್ ಅವರ ಪ್ರಕರಣಕ್ಕೂ ಲಿಂಕ್ ಮಾಡಲಾಗುತ್ತಿದೆ ಎಂದು ಕೇಳಿದಾಗ, “ನಾನು ಪರಮೇಶ್ವರ್ ಅವರ ಮನೆಗೆ ಭೇಟಿ ಮಾಡಿ ಅವರ ಜತೆ ಚರ್ಚೆ ಮಾಡಿದೆ. ನಾವು ಸಾರ್ವಜನಿಕ ಜೀವನದಲ್ಲಿದ್ದು ಬೇಕಾದಷ್ಟು ಜನ ಟ್ರಸ್ಟ್ ನಡೆಸುತ್ತಾರೆ. ಮದುವೆ ಶುಭ ಸಮಾರಂಭದಲ್ಲಿ ಅನೇಕ ಉಡುಗೊರೆಗಳು ಕೊಟ್ಟಿರಬಹುದು. ಪರಮೇಶ್ವರ್ ರವರಂತಹ ಪ್ರಭಾವಿ ವ್ಯಕ್ತಿ ಬೇರೆಯವರಿಗೆ ಸ್ಮಗ್ಲಿಂಗ್ ಮಾಡಲು ಹೇಳಲು ಸಾಧ್ಯವೇ? ಈ ರೀತಿ ಯಾವುದೇ ರಾಜಕಾರಣಿ ಹೇಳಲು ಸಾಧ್ಯವಿಲ್ಲ. ಆ ಹೆಣ್ಣು ಮಗಳು ತಪ್ಪು ಮಾಡಿದ್ದರೆ ಅದು ಆಕೆಯ ವೈಯಕ್ತಿಕ ವಿಚಾರ. ತಪ್ಪು ಸಾಬೀತಾದರೆ ಆಕೆಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಪರಮೇಶ್ವರ್ ಅವರ ಪ್ರಕರಣದಲ್ಲಿ ಅವರು ಕಾನೂನಿಗೆ ತಲೆಬಾಗುವ ವ್ಯಕ್ತಿ. ರಾಜ್ಯದ ಗೃಹ…
ಬೆಂಗಳೂರು: ಮಳೆ ನೀರಿನಿಂದಾಗುತ್ತಿರುವ ಅನಾಹುತಗಳನ್ನು ತಪ್ಪಿಸಲು ಶಾಶ್ವತ ಪರಿಹಾರ ಕಂಡುಹಿಡಿಯುವುದು ನಮ್ಮ ಜವಾಬ್ದಾರಿ. ನಾವದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪುನರುಚ್ಚರಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಮಳೆ ಪ್ರಮಾಣ ಕಡಿಮೆಯಾಗಿದ್ದು, ಪರಿಹಾರ ಕಾರ್ಯ ಕೈಗೊಳ್ಳುವ ಬಗ್ಗೆ ಕೇಳಿದಾಗ, “ನಾನು ಹೆಚ್ಚು ಮಳೆಯಾಗಬೇಕು ಎಂದು ಬಯಸುವವನು. ಮಳೆ ಹೆಚ್ಚಾಗಿ ಬಂದಷ್ಟು ನಾವು ಏನೆಲ್ಲಾ ಸರಿಪಡಿಸಿಕೊಳ್ಳಬಹುದು ಎಂದು ತಿಳಿಯುತ್ತದೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆ ಮಾಡಿದ್ದು, ಮುಂಜಾಗ್ರತಾ ಸಭೆಯನ್ನು ಮಾಡಿದ್ದೇವೆ. ಬೆಂಗಳೂರಿನಲ್ಲಿ ಮಳೆನೀರುಗಾಲುವೆಗಳ ಅಭಿವೃದ್ಧಿ ಪೂರ್ಣಗೊಳಿಸಲು 2 ಸಾವಿರ ಕೋಟಿ ಮೊತ್ತದ ಯೋಜನೆ ರೂಪಿಸಲಾಗಿದೆ. ಮಳೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಜನರಿಗೆ ಆಕ್ರೋಶವಿದೆ. ಹೀಗಾಗಿ ತಗ್ಗು ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಬೇಸ್ ಮೆಂಟ್ ಪಾರ್ಕಿಂಗ್ ನಿರ್ಮಾಣ ಮಾಡದಿರುವಂತೆ ನಿಯಮ ರೂಪಿಸಲು ನಗರ ಯೋಜನಾ ಪ್ರಾಧಿಕಾರಕ್ಕೆ ಸೂಚಿಸಿದ್ದೇನೆ” ಎಂದು ತಿಳಿಸಿದರು. “ಕೆಲವು ಪ್ರದೇಶಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದರೂ ಭೂಮಿಯಿಂದ ಜಲ ಬರುತ್ತಿದೆ.…
ಬೆಂಗಳೂರು: ಕಿರುತೆರೆ ಕಲಾವಿದ ಮನು ಹಾಗೂ ಸಹ ಕಲಾವಿದೆಯ ನಡುವಿನ ತೆರೆಮರೆಯ ಕಿತ್ತಾಟ ಬಟಾ ಬಯಲಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮನು ಕರಾಳ ಮುಖ ಈ ಮೂಲಕ ಬಟಾ ಬಯಲಾಗಿದೆ. ಶಾಕಿಂಗ್ ಎನ್ನುವಂತೆ ಎತ್ಯಾಚಾರ ಎಸಗಿರುವಂತ ಮನು, ಎರಡು ಬಾರಿ ಪ್ರಗ್ನೆಂಟ್ ಮಾಡಿದ್ದಾರೆ. ಅಲ್ಲದೇ ಎರಡು ಬಾರಿ ಅಬಾಷನ್ ಕೂಡ ಮಾಡಿರೋ ಮಾಹಿತಿಯನ್ನು ಸಹ ಕಲಾವಿದೆ ತೆರೆದಿಟ್ಟಿದ್ದಾರೆ. ಈ ಬಗ್ಗೆ ಸಹ ಕಲಾವಿದೆ, ಸಂತ್ರಸ್ತೆ ದೂರಿನಲ್ಲಿ ಮಾಹಿತಿ ನೀಡಿದ್ದು, 2018ರಲ್ಲಿ ಮನು ಹಾಗೂ ಯುವತಿ ಮಧ್ಯೆ ಪರಿಚಯವಾಗಿದೆ. ಯುವತಿಗೆ ಇದೇ ಮನು ಬಾಡಿಗೆ ಮನೆ ಹುಡುಕೊಟ್ಟಿದ್ದಾಗಿ ತಿಳಿಸಿದ್ದಾರೆ. ಜೊತೆಗೆ ಕಾಮಿಡಿ ಕಿಲಾಡಿ ಶೋನಲ್ಲಿ ಮನು ಹಾಗೂ ಸಂತ್ರಸ್ತೆ ಒಟ್ಟಾಗಿ ಕಾಣಿಸಿಕೊಂಡಿದ್ದಾಗಿ ಹೇಳಿದ್ದಾರೆ. ಹೀಗೆ ಯುವತಿಯ ಜೊತೆಗೆ ಆಪ್ತನಾದಂತ ಕಿರುತೆರೆ ಕಲಾವಿದ ಮನು, ಮದುವೆಯಾಗಿ ಒಂದು ಮಗುವಿದ್ದರೂ ಕಾರ್ಯಕ್ರಮ ಒಂದಕ್ಕೆ ತೆರಳಿದ್ದಾಗ ಸಂತ್ರಸ್ತ ಯುವತಿಯ ಮೇಲೆ ಅತ್ಯಾಚಾರ ನಡೆಸಿರೋದಾಗಿ ಆರೋಪಿಸಿದ್ದಾರೆ. ಇನ್ನೂ ನವೆಂಬರ್ 29, 2022ರಂದು ಶಿವಮೊಗ್ಗದ ಶಿಕಾರಿಪುರದಲ್ಲಿನ ಕಾರ್ಯಕ್ರಮಕ್ಕೆ ಮನು ಹಾಗೂ…