Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೇಶದ ಅತಿ ದೊಡ್ಡ ಸಾಫ್ಟ್ವೇರ್ ಸಂಸ್ಥೆಗಳಲ್ಲಿ ಒಂದಾಗಿರುವ ಎಚ್.ಸಿ.ಎಲ್-ಟೆಕ್ ಬೀ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗಾವಕಾಶ ಮತ್ತು ಹಣಕಾಸಿನ ನೆರವಿನೊಂದಿಗೆ ಉನ್ನತ ಪದವಿ ಶಿಕ್ಷಣ ಪಡೆಯಲು ಅವಕಾಶವನ್ನು ಕಲ್ಪಿಸಿದೆ. ಈ ಕುರಿತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ (KSDC) ಎಚ್ಸಿಎಲ್-ಟೆಕ್ ಬೀ ಸಂಸ್ಥೆಯು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಕೆಎಸ್ಡಿಸಿ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ ಮತ್ತು ಎಚ್ಸಿಎಲ್-ಟೆಕ್ ಬೀ ರಾಜ್ಯ ಮುಖ್ಯಸ್ಥರಾದ ಆರ್. ಪಾಪಿರೆಡ್ಡಿ ಅವರು ಇತ್ತೀಚಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಈ ಮೂಲಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ…
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.10 ರೊಳಗಾಗಿ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕಿ ಲತಾ ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-200266 / 9482762350 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/breaking-ed-officials-on-duty-attacked-in-delhi-director-injured/ https://kannadanewsnow.com/kannada/hemant-soren-takes-oath-as-jharkhand-cm/
BREAKING NEWS: ಜಾರ್ಖಂಡ್ ಮುಖ್ಯಮಂತ್ರಿಯಾಗಿ ‘ಹೇಮಂತ್ ಸೊರೆನ್’ ಪ್ರಮಾಣ ವಚನ ಸ್ವೀಕಾರ | Hemant Soren takes oath
ನವದೆಹಲಿ: ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. https://twitter.com/ANI/status/1862084472516366508 ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ರಾಷ್ಟ್ರೀಯ ಅಧ್ಯಕ್ಷ ಶಿಬು ಸೊರೆನ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ಸದಸ್ಯ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಸೇರಿದಂತೆ ದೇಶದ ಉನ್ನತ ನಾಯಕರು ಉಪಸ್ಥಿತರಿದ್ದರು. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಹೇಮಂತ್ ಸೊರೆನ್ ನೇತೃತ್ವದ ಜೆಎಂಎಂ 81 ಸದಸ್ಯರ ಜಾರ್ಖಂಡ್ ವಿಧಾನಸಭೆಯಲ್ಲಿ 56 ಸ್ಥಾನಗಳೊಂದಿಗೆ ಭಾರತೀಯ ಬಣವನ್ನು ಗೆಲುವಿನತ್ತ ಮುನ್ನಡೆಸಿತು. ಜೆಎಂಎಂ 34 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷಗಳು 22 ಸ್ಥಾನಗಳನ್ನು ಗಳಿಸಿವೆ. ಮಿತ್ರಪಕ್ಷಗಳ ಪೈಕಿ ಕಾಂಗ್ರೆಸ್ 16, ಆರ್ಜೆಡಿ 4 ಮತ್ತು ಸಿಪಿಐ-ಎಂಎಲ್ 2 ಸ್ಥಾನಗಳನ್ನು ಗೆದ್ದಿದೆ. https://kannadanewsnow.com/kannada/breaking-break-6-accused-arrested-in-chitradurga-murder-case/ https://kannadanewsnow.com/kannada/breaking-ed-officials-on-duty-attacked-in-delhi-director-injured/
ನವದೆಹಲಿ: ಉತ್ತರ ದೆಹಲಿಯ ಪ್ರಶಾಂತ್ ವಿಹಾರ್ನ ಪಿವಿಆರ್ ಮಲ್ಟಿಪ್ಲೆಕ್ಸ್ ಬಳಿಯ ಜನಪ್ರಿಯ ಸಿಹಿತಿಂಡಿ ಅಂಗಡಿಯಲ್ಲಿ ಗುರುವಾರ ಭಾರಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಸವೆತವಾಗಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ದೆಹಲಿ ಪೊಲೀಸ್ ಪಿಆರ್ಒ, ಹೆಚ್ಚುವರಿ ಸಿಪಿ ಸಂಜಯ್ ಕುಮಾರ್ ತ್ಯಾಗಿ ಮಾತನಾಡಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸ್ ತಂಡಗಳು ಮತ್ತು ಇತರ ವಿಶೇಷ ಸಿಬ್ಬಂದಿ – ವಿಶೇಷ ಸೆಲ್, ವಿಧಿವಿಜ್ಞಾನ ಮತ್ತು ಇತರ ಘಟಕಗಳು ಸ್ಥಳದಲ್ಲಿವೆ. ಸ್ಫೋಟಕ್ಕೆ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ. ಸದ್ಯಕ್ಕೆ ಯಾವುದೇ ಶಂಕಿತರು ಇಲ್ಲ. ಸಣ್ಣಪುಟ್ಟ ಗಾಯಗಳಾಗಿರುವ ವ್ಯಕ್ತಿಯನ್ನು ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದೆ. ಬನ್ಸಿ ವಾಲಾ ಎಂಬ ಸಿಹಿತಿಂಡಿ ಅಂಗಡಿಗೆ ಹೊಂದಿಕೊಂಡಿರುವ ಉದ್ಯಾನವನದ ಗಡಿ ಗೋಡೆಯ ಬಳಿ ಸ್ಫೋಟ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ರಾಷ್ಟ್ರೀಯ ಭದ್ರತಾ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಜರಿಯಾಗಲಿದೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟವನ್ನು ಪುನರ್ ರಚಿಸಲಿದ್ದಾರೆ. ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಸಿಎಂ ಸಿದ್ಧರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂಬುದಾಗಿ ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದ ಜನಪ್ರಿಯ, ಈಡಿಗ ಸಮುದಾಯದ ಪ್ರಭಾವಿ ನಾಯಕರಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ಒಬ್ಬರು. ಈಗಾಗಲೇ ಜಿಲ್ಲೆಯಲ್ಲಿ ದೀವರ ಸಮುದಾಯದ ಮಧು ಬಂಗಾರಪ್ಪ ಅವರಿಗೆ ಶಾಲಾ ಶಿಕ್ಷಣ ಸಚಿವ ಸ್ಥಾನವನ್ನು ನೀಡಲಾಗಿದೆ. ಅವರ ಬೆನ್ನಲ್ಲೇ ಸಿದ್ಧರಾಮಯ್ಯ ಸಂಪುಟ ಸರ್ಜರಿಯಾಗಿ, ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೂ ಸಚಿವ ಸ್ಥಾನ ನೀಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ತೆರೆ ಮರೆಯಲ್ಲಿ ಕಸರತ್ತು ನಡೆಸಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ, ಸಿಎಂ ಸಿದ್ಧರಾಮಯ್ಯ ಸಂಪುಟ ಪುನರಚನೆಯ ನಂತ್ರ,…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿತ್ತು, ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ದಿನಾಂಕ: 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿದೆ. ಮುಂದುವರೆದು, ಸದರಿ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ ಎಂದಿದೆ. ಭಾರತ ಸರ್ಕಾರದ ಆದೇಶವನ್ನು ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ಸರ್ಕಾರವು ಪರಿಗಣಿಸಿರುತ್ತದೆ ಮತ್ತು 6ನೇ ರಾಜ್ಯ ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿದ್ದ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 2024ರ ಮಾಹೆಗೆ ಅನ್ವಯವಾಗುವಂತೆ ತುಟ್ಟಿ ಭತ್ಯೆಯ ದರಗಳನ್ನು…
ನವದೆಹಲಿ: ಭಾರತೀಯ ನೌಕಾಪಡೆಯು ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ನೌಕೆ ಐಎನ್ಎಸ್ ಅರಿಘಾಟ್ನಿಂದ 3,500 ಕಿ.ಮೀ ಕೆ -4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿದೆ ಎಂದು ರಕ್ಷಣಾ ಮೂಲಗಳು ಗುರುವಾರ ತಿಳಿಸಿವೆ. ಬುಧವಾರ ಪರೀಕ್ಷಾ ಫೈರಿಂಗ್ ನಡೆಸಲಾಗಿದ್ದು, ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ ಎಂದು ಅವರು ಹೇಳಿದರು. “ದೋಣಿಯನ್ನು ಸ್ಟ್ರಾಟೆಜಿಕ್ ಫೋರ್ಸ್ ಕಮಾಂಡ್ ನಿರ್ವಹಿಸುತ್ತದೆ” ಎಂದು ಅವರು ಹೇಳಿದರು. “ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷೆಯನ್ನು ಪೂರ್ಣ ವ್ಯಾಪ್ತಿಯವರೆಗೆ ನಡೆಸಲಾಯಿತು. ವಿವರಗಳನ್ನು ವಿಶ್ಲೇಷಿಸಲಾಗುತ್ತಿದೆ ಮತ್ತು ಸಂಪೂರ್ಣ ವಿಶ್ಲೇಷಣೆಯ ನಂತರ ನಿಖರವಾದ ವಿವರಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ ಅಧಿಕಾರಿಗಳಿಗೆ ವಿವರಿಸಲಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. https://kannadanewsnow.com/kannada/bmtc-collects-rs-17-96-lakh-fine-from-8891-passengers-for-travelling-without-tickets/ https://kannadanewsnow.com/kannada/breaking-break-6-accused-arrested-in-chitradurga-murder-case/
ಬೆಂಗಳೂರು: ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತಪಾಸಣಾ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ರೂ. 17,96,030/- ದಂಡ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್-2024ರ ಮಾಹೆಗಳಲ್ಲಿ ಒಟ್ಟು 57,219 ಟ್ರಿಪ್ಗಳನ್ನು ತಪಾಸಿಸಿ 8,891 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 17,96,030/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 5268 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಎಂದಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 1,178 ಪುರುಷ ಪ್ರಯಾಣಿಕರಿಂದ ಒಟ್ಟು ರೂ.…
ಶಿವಮೊಗ್ಗ: ಜೋಗದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ತ್ವರಿತವಾಗಿ ನಡೆಸೋದಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರವಾಸಿಗರು ಜೋಗಕ್ಕೆ ಬಂದ್ರೆ ಇಲ್ಲಿಂದ ಬಿಟ್ಟು ಹೋಗಲೇ ಬಾರದು ಆ ರೀತಿ ಅಭಿವೃದ್ಧಿಗೊಳಿಸುವುದು. ಬಿಜೆಪಿ ಹೇಳುತ್ತಿರುವುದು ಸುಳ್ಳು. ಬಿಜೆಪಿ ಅವಧಿಯಲ್ಲಿ 20 ಕೋಟಿ ಮಾತ್ರವೇ ಜೋಗ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ. ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 75 ಕೋಟಿ ಬಿಡುಗಡೆ ಮಾಡಿದ್ದೇವೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಇಂದು ಜೋಗ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಜೋಗದಲ್ಲಿನ ಕಚೇರಿಯಲ್ಲಿ ನಡೆಸಿದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಜೋಗದಲ್ಲಿ ನಡೆಯುತ್ತಿರುವಂತ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲದೇ ಜೋಗದಲ್ಲಿ ನಡೆಯುತ್ತಿರುವಂತ ವಿವಿಧ ಅಭಿವೃದ್ಧಿ ಕಾಮಗಾರಿಯನ್ನು ಖುದ್ದು ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಜೋಗಕ್ಕೆ ಪ್ರವಾಸಿಗರು ಬಂದ್ರೆ ಬಿಟ್ಟೋಗ ಬಾರದು ಹಾಗೆ ಅಭಿವೃದ್ಧಿ ಜೋಗ ಅಭಿವೃದ್ಧಿಗೆ 185 ಕೋಟಿ ಅನುದಾನ ನೀಡಲಾಗಿದೆ. ಜೋಗದ ಎಲ್ಲಾ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಜನರಿಗೆ ಆಕರ್ಷಣೆ ಇರಬೇಕು. ಜನರು ನಿರಂತರವಾಗಿ ಈ…
ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ಮೇಷ ರಾಶಿ ಇಂದಿನ ದಿನ ಇಂದು ನೀವು ಮಿಶ್ರ ಫಲವನ್ನು ಪಡೆಯುವ ದಿನ. ಅಂತಹ ಪರಿಸ್ಥಿತಿಯಲ್ಲಿ, ಉನ್ನತ ಅಧಿಕಾರಿಯೊಂದಿಗಿನ ಸಂಘರ್ಷವು ಹಾನಿಕಾರಕವಾಗಿರುತ್ತದೆ. ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ವ್ಯವಹಾರದಲ್ಲಿ ಹೊಸ ಸಂಬಂಧಗಳು ಅದೃಷ್ಟವನ್ನು ತರುತ್ತವೆ. ಇಂದು ನಿಮಗೆ ಸಾಮಾಜಿಕ ಗೌರವ ಸಿಗುತ್ತದೆ. ಸ್ನೇಹಿತರೊಂದಿಗೆ ಸುದೀರ್ಘ ಪ್ರವಾಸಕ್ಕೆ ಹೋಗಬಹುದು. ದಂಪತಿಗಳು ಜೀವನದಲ್ಲಿ ಮಾಧುರ್ಯ…