Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರಂಭದಿಂದಲೇ ಮುಂಜಾಗೃತಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರದಂದು ಕೆ.ಎಫ್.ಡಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅರಳಗೋಡು, ತಲವಾಟ, ಹಿರೇಮನೆ ಸೇರಿದಂತೆ, ಶರಾವತಿ ಕಣಿವೆಯ ಅಂಚಿನ ಗ್ರಾಮಗಳಾದ ಭೇಟಿ ನೀಡಿದ ಸಚಿವರು, ಗ್ರಾಮಸ್ಥರ ಅಹವಾಲುಗಳನ್ನ ಸ್ವೀಕರಿಸಿದರು. ಮಂಗನ ಕಾಯಿಲೆ ಕುರಿತಂತೆ ಗ್ರಾಮಸ್ಥರು ಈಗಿನಿಂದಲೇ ಹೆಚ್ಚಿನ ಜಾಗೃತಿ ವಹಿಸುವಂತೆ ಕರೆ ನೀಡಿದ ಸಚಿವರು, ಸರ್ಕಾರದಿಂದ ಅಗತ್ಯ ಆರೋಗ್ಯ ಸೇವೆ ಒದಗಿಸಲಾಗುವುದು. 2026 ಕ್ಕೆ ಕೆಎಫ್.ಡಿ ಗೆ ಲಸಿಕೆ ದೊರೆಯುವ ನಿರೀಕ್ಷೆಯಿದೆ. ಲಸಿಕೆ ಒದಗಿಸಿಕೊಡುವ ನಿಟ್ಟಿನಲ್ಲಿ ಈಗಾಗಲೇ ಐಸಿಎಂಆರ್ ಜೊತೆ ಮಾತುಕತೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಮನವಿ ಮಾಡಲಾಗಿದೆ. ಅಲ್ಲಿಯ ವರೆಗು ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಂಗನ ಕಾಯಿಲೆಯಿಂದ ಯಾವುದೇ…
ಶಿವಮೊಗ್ಗ: ಕಳೆದ ಹತ್ತಾರು ವರ್ಷಗಳಿಂದ ರಾಜ್ಯ ಆರೋಗ್ಯ ಇಲಾಖೆಯಲ್ಲಿ ( Karnataka Health Departmetn ) ಎನ್ ಹೆಚ್ ಎಂ ಯೋಜನೆಯ ಅಡಿಯಲ್ಲಿ ಗುತ್ತಿಗೆ ನೌಕರರಾಗಿ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಕೆಲಸ ಖಾಯಂ ಆಗೋ ನಿರೀಕ್ಷೆಯಲ್ಲಿ ಕಡಿಮೆ ವೇತನದಲ್ಲೂ ಸರ್ಕಾರಿ ನೌಕರರ ಸಮಾನವಾಗಿಯೇ ದುಡಿಯುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಲವೆಡೆ ವೈದ್ಯರು ಅಲಭ್ಯದ ನಡುವೆ ರೋಗಿಗಳಿಗೆ ಸೇವೆ ಸಿಗುತ್ತಿರುವುದೇ ಎನ್ ಹೆಚ್ ಎಂ ಗುತ್ತಿಗೆ ಸ್ಟಾಫ್ ನರ್ಸ್ ಗಳಿಂದಾಗಿದೆ. ಹೀಗೆ ಇರುವಾಗ ಖಾಯಂ ನಿರೀಕ್ಷೆಯಲ್ಲಿದ್ದಂತ ನೌಕರರಿಗೆ ಸ್ಕೀಂ ಮುಗಿದ ಮೇಲೆ ನೋಡೋಣ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳುವ ಮೂಲಕ ಬಿಗ್ ಶಾಕ್ ನೀಡಿದ್ದಾರೆ. ಶಿವಮೊಗ್ಗದ ಸಾಗರ ಪ್ರವಾಸಿ ಮಂದಿರದಲ್ಲಿ ಮಂಗಳವಾರದಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದಂತ ಅವರು, ತಾಲ್ಲೂಕು, ಜಿಲ್ಲೆ, ರಾಜ್ಯದಲ್ಲಿನ ಮಂಗನಕಾಯಿಲೆ ಬಗ್ಗೆ ಮಾಹಿತಿಯನ್ನು ಪಡೆದರು. ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ವೇಳೆ ಕನ್ನಡ…
ಕಲಬುರಗಿ : ಸೇಡಂ ಮತಕ್ಷೇತ್ರದ ವ್ಯಾಪ್ತಿಯ ಕರ್ಚಖೇಡ, ಕಾನಗಡ್ಡ,ಮದನ, ಮುಧೋಳ ಗ್ರಾ.ಪಂನ ಉಪ ಚುನಾಚುನಾವಣೆಯಲ್ಲಿ ಬಿ.ಜೆ.ಪಿ ಬೆಂಬಲಿತ ಅಭ್ಯರ್ಥಿಗಳು ಜಯ ಘಳಿಸಿದ್ದಾರೆ ಎಂದು ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ತಿಳಿಸಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿರುವ ಅವರು ಕಚ೯ಖೇಡ ಗ್ರಾ.ಪಂ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ರೇಣುಕಾ ಶಂಕರ್ ಮುತ್ತಂಗಿ ಅವರು 188 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಕಾನಗಡ್ಡ ಗ್ರಾಮ ಪಂಚಾಯಿತಿಯ ಯನಗುಂದಿ ಗ್ರಾಮದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ರಾಜಶೇಖರ್ ಆವಂಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಶ್ರೀಮತಿ ಅನಿತಾ ಗಂಡ ಶಾಮಪ್ಪ ಮದನ ಗ್ರಾಮ ಪಂಚಾಯತನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ 112 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮುಧೋಳ ಗ್ರಾಮ ಪಂಚಾಯತಿಗೆ ನಡೆದ ಉಪಚುನಾವಣೆಯಲ್ಲಿ ಶ್ರೀಮತಿ ಲಲಿತ ಗಂಡ ಕಿಷ್ಟಪ್ಪ ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ 341 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 18 ತಿಂಗಳಲ್ಲಿ ಜನತೆ ತತ್ತರಿಸಿ ಹೋಗುವಂತಾಗಿದೆ. ರಾಜ್ಯ ಸರ್ಕಾರದ…
ಬೆಂಗಳೂರು: ಚಾರ್ಕೋಟ್ಸ್ ಪಾದ (ಪಾದದ ವಿರೂಪತೆ)ದಿಂದ ಬಳಲುತ್ತಿರುವ ಸೌದಿ ಅರೇಬಿಯಾದ 52 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು. ಚಾರ್ಕೋಟ್ ಪಾದ ಎಂದರೆ, ನರಗಳಿಗೆ ಹಾನಿಯುಂಟು ಮಾಡುವ ಅಪರೂಪದ ಸ್ಥಿತಿಯಿಂದ ಪಾದದ ಮೂಳೆಗಳು ಮತ್ತು ಕೀಲುಗಳನ್ನು ದುರ್ಬಲಗೊಳಿಸಿ, ಪಾದವನ್ನು ವಿರೂಪಗೊಳಿಸುತ್ತದೆ. ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ ಸರ್ಜನ್ ಡಾ. ಮೋಹನ್ ಪುಟ್ಟಸ್ವಾಮಿ ಅವರ ಪರಿಣಿತ ಆರೈಕೆಯಲ್ಲಿ, ರೋಗಿಯು ಇಲಿಜಾರೋವ್ ಎಂಬ ಉಪಕರಣದ ಸಹಾಯದಿಂದ ಚಿಕಿತ್ಸೆ ನೀಡಲಾಯಿತು. ಈ ಪ್ರಕ್ರಿಯೆಯು ಅವರ ಪಾದವನ್ನು ಸ್ಥಿರಗೊಳಿಸಿ, ಚಲನಶೀಲತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡಿತು. ಈ ಶಸ್ತ್ರಚಿಕಿತ್ಸೆಯು ಸುಮಾರು 8 ಗಂಟೆಗಳ ಕಾಲ ನಡೆಯಿತು, ರೋಗಿಯನ್ನು 7 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ರೀಟಾ (ಹೆಸರು ಬದಲಾಯಿಸಲಾಗಿದೆ) ಎಂಬ ರೋಗಿಯು ಸುಮಾರು ಒಂಬತ್ತು ವರ್ಷಗಳ ಕಾಲ ತನ್ನ ಎಡ ಪಾದದ ದೀರ್ಘಕಾಲದ ನೋವು, ಊತ ಮತ್ತು ವಿರೂಪತೆಯಿಂದ ಬಳಲುತ್ತಿದ್ದರು. ಈ ಸ್ಥಿತಿಯು ಆಕೆಯ ಚಲನಶೀಲತೆಯ ಮೇಲೆ ತೀವ್ರ ಪರಿಣಾಮ ಬೀರಿತ್ತು, ಇದರಿಂದ ಅವರು ಕುಂಟುತ್ತಾ…
ಮುಂಬೈ : ಸೌದಿ ಅರೇಬಿಯಾದ ಜಿದ್ದಾದಲ್ಲಿ ಭಾನುವಾರ ಮತ್ತು ಸೋಮವಾರ ನಡೆದ ಐಪಿಎಲ್ 18ನೇ ಆವೃತ್ತಿಯ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ ವಿಶ್ವಾಸ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ್ದಾಗಿದೆ. ಮೊದಲೇ ಐವರು ಪ್ರಮುಖ ಆಟಗಾರರನ್ನು ರಿಟೇನ್ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ ತಂಡ ಹರಾಜಿನಲ್ಲೂ ತನಗೆ ಬೇಕಾದ ಎಲ್ಲ ಆಟಗಾರರನ್ನು ಆರಿಸಿದ ಸಂತಸವನ್ನು ಹೊಂದಿದೆ. ‘ಹರಾಜಿನಲ್ಲಿ ನಾವು ಆಯ್ದುಕೊಂಡ ಆಟಗಾರರ ಬಗ್ಗೆ ತುಂಬಾ ಸಂತೋಷವಿದೆ. ಏಕೆಂದರೆ ನಾವು ಈಗ ನಮ್ಮ 12 ಬಲಿಷ್ಠ ಆಟಗಾರರನ್ನು ಲಾಕ್ ಮಾಡಿಕೊಂಡಿದ್ದೇವೆ. ಟಿ20 ಸ್ವರೂಪಕ್ಕೆ ಹೊಂದಿಕೊಳ್ಳುವಂಥ ಆಟಗಾರರನ್ನು ನಾವು ಖರೀದಿಸಲು ಬಯಸಿದ್ದೆವು. ನಾವು ಹರಾಜಿನಲ್ಲಿ ಪಡೆದುಕೊಂಡಿರುವ ಎಲ್ಲಾ ಆಟಗಾರರ ಬಗ್ಗೆ ಖುಷಿ ಇದೆ. ಮುಂಬೈ ಇಂಡಿಯನ್ಸ್ನ ಹಲವು ಮಾಜಿ ಆಟಗಾರರನ್ನು ಕಳೆದುಕೊಂಡಿದ್ದಕ್ಕೆ ಸಹಜವಾಗಿಯೇ ನಿರಾಸೆಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ನಾವು ನಿಜವಾಗಿಯೂ ಗೆಲುವಿನ ಹಾದಿಗೆ ಮರಳಬೇಕಾದ ಸಮತೋಲನ ಏನು ಎಂಬುದರ ಕುರಿತು ಸಾಕಷ್ಟು ಯೋಚಿಸಿದ್ದೇವೆ ಮತ್ತ ಆಟಗಾರರನ್ನು ಖರೀದಿಸುವ…
ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ನಂತರ ಏಕನಾಥ್ ಶಿಂಧೆ ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರಿಯಲು ಶಿಂಧೆ (60) ಅವರನ್ನು ಕೇಳಲಾಗಿದೆ. https://twitter.com/ANI/status/1861287847862641020 14 ನೇ ಮಹಾರಾಷ್ಟ್ರ ವಿಧಾನಸಭೆಯ ಅವಧಿ ಮುಗಿದ ನಂತರ ಮಹಾ ಯುಟಿ ವಿತರಣೆಯ ನೇತೃತ್ವ ವಹಿಸಿದ್ದ ಶಿವಸೇನೆಯ ಮುಖ್ಯ ನಾಯಕ ಶಿಂಧೆ ಮಂಗಳವಾರ ನಾಮಪತ್ರ ಸಲ್ಲಿಸಿದರು. ಶರದ್ ಪವಾರ್ ನೇತೃತ್ವದ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿದ ನಂತರ ಶಿಂಧೆ ಅವರನ್ನು ಜೂನ್ 30, 2022 ರಂದು ಸಿಎಂ ಆಗಿ ನೇಮಿಸಲಾಯಿತು. ಶಿಂಧೆ ಅವರೊಂದಿಗೆ ಬಿಜೆಪಿಯ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಒಂದು ವರ್ಷದ ನಂತರ, ಎನ್ಸಿಪಿಯ ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಮತ್ತು ಮಾರ್ಗದರ್ಶಕ ಶರದ್ ಪವಾರ್ ವಿರುದ್ಧ ದಂಗೆ ಎದ್ದ ನಂತರ ಜುಲೈ 2, 2023…
ಬೆಂಗಳೂರು: ರಾಜ್ಯದ ಮೂರು ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿನಿಂದಾಗಿ ಯಾರೂ ಎದೆಗುಂದಬೇಕಿಲ್ಲ. ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ ಎಂಬುದಾಗಿ ಬಿಜೆಪಿ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪತ್ರದಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಬಿಜೆಪಿ ಕಾರ್ಯಕರ್ತರಿಗೆ ಪತ್ರ ಬರೆದಿರುವಂತ ಅವರು, ಅದರಲ್ಲಿ ಸಹೃದಯ ಕಾರ್ಯಕರ್ತ ಬಂಧುಗಳೇ, ಉಪಚುನಾವಣೆ ಫಲಿತಾಂಶಗಳು ಪಕ್ಷ ಸಂಘಟನೆಯ ಸಾಮರ್ಥ್ಯ ಹಾಗೂ ಪ್ರಭಾವವನ್ನು ಬಿಂಬಿಸುವ ಅಳತೆಗೋಲಾಗಿರುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಸರ್ಕಾರದ ಪ್ರಭಾವವನ್ನು ಆಧರಿಸಿ ಈ ಚುನಾವಣಾ ಫಲಿತಾಂಶಗಳು ಹೊರಹೊಮ್ಮುತ್ತವೆ. ಸದ್ಯ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಎರಡು ಕ್ಷೇತ್ರಗಳಲ್ಲಿ, ಮಿತ್ರ ಪಕ್ಷ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಪರಾಜಯಗೊಂಡಿರುವ ಕಾರಣದಿಂದ ನಾವ್ಯಾರೂ ಎದೆಗುಂದಬೇಕಿಲ್ಲ. ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ ಎಂಬುದು ನಿಸ್ಸಂಶಯ, ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ, ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್.10ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ. ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತದ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೈಕೋರ್ಟಿಗೆ ಸಿಬಿಐ ತನಿಖೆ ನಡೆಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ನಲ್ಲಿ ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆಸಿತು. ಈ ವೇಳೆ ಹೈಕೋರ್ಟ್ ನ್ಯಾಯಪೀಠಕ್ಕೆ ಇದೇ ಕೇಸ್ ಸಂಬಂಧದ ಎರಡು ಆದೇಶಗಳನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೇವೆ. ಆ ಎರಡು ಅರ್ಜಿಗಳ ವಿಚಾರಣೆಯನ್ನು ಡಿಸೆಂಬರ್.5ಕ್ಕೆ ಮುಂದೂಡಲಾಗಿದೆ. ಹೀಗಾಗಿ ಈ ಅರ್ಜಿಯನ್ನು ಡಿಸೆಂಬರ್.9ಕ್ಕೆ ಮುಂದೂಡಲು ದೇವರಾಜು ಪರ ಹಿರಿಯ ವಕೀಲ ದುಷ್ಯಂತ್ ದವೆ ಮನವಿ ಮಾಡಿದರು. ಆದರೇ ವಿಚಾರಣೆ ಮುಂದೂಡದಂತೆ ಸ್ನೇಹಮಯಿ ಕೃಷ್ಣ ಪರ ವಕೀಲ…
ಬೆಂಗಳೂರು: ಮಗುವಿಗೆ ಎದೆ ಹಾಲುಣಿಸುವ ಮೂಲಭೂತ ಹಕ್ಕು ತಾಯಿಗಿದೆ. ಮಗುವಿನ ಹಿತದೃಷ್ಟಿಯಿಂದ ಏನು ಮಾಡಬೇಕು ಎಂಬ ನಿರ್ಧಾರವನ್ನು ತೆಗೆದುಕೊಳ್ಳಲು ತಾಯಿಯ ತೀರ್ಮಾವೇ ಅಂತಿಮ. ಹೀಗಾಗಿ ಹೆರಿಗೆ ಮತ್ತು ಮಕ್ಕಳ ಆರೈಕೆ ರಜೆಗಾಗಿ (Maternity and Child Care Leave – CCL) ಮಹಿಳಾ ಉದ್ಯೋಗಿಗಳ ಹಕ್ಕುಗಳನ್ನು ಪರಿಗಣಿಸಬೇಕು ಅಂತ ಹೈಕೋರ್ಟ್ ತಿಳಿಸಿದೆ. ಅಲ್ಲದೇ 120 ದಿನಗಳ ಸಿಸಿಎಲ್ ರಜೆ ಕೋರಿದ್ದಂತ ಮಹಿಳಾ ಶುಶ್ರೂಶಕಕಿಗೆ ಮಂಜೂರು ಮಾಡಿದೆ. ಈ ಮೂಲಕ ಸರ್ಕಾರಿ ಮಹಿಳಾ ನೌಕರರಿಗೆ ಸಿಸಿಎಲ್ ರಜೆ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಮ್ಹಾನ್ಸ್ ನ ತುರ್ತು ನಿಗಾ ಘಟಕದಲ್ಲಿ ಕೆಲಸ ಮಾಡುತ್ತಿದ್ದಂತ ಶುಶ್ರೂಶಕಿ ಅನಿತಾ ಜೋಸೆಫ್ ಎಂಬುವರು 120 ದಿನಗಳ ಕಾಲ ಹೆಚ್ಚುವರಿಯಾಗಿ ಸಿಸಿಎಲ್ ನೀಡುವಂತೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯು(ಸಿಎಟಿ) ವಿಚಾರಣೆ ನಡೆಸಿ ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ನಿಮ್ಹಾನ್ಸ್ ಆಡಳಿತ ಮಂಡಳಿಯು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ…
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಸೋಮವಾರ ಮುಕ್ತಾಯಗೊಂಡ ಐಪಿಎಲ್ 2025 ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore -RCB) ತನ್ನ ಶಾಪಿಂಗ್ ಪ್ರದರ್ಶನದಿಂದ ಸಂತೋಷವಾಗಿದೆ. ಬೆಂಗಳೂರು ಮೂಲದ ಫ್ರಾಂಚೈಸಿ ಎರಡು ದಿನಗಳ ಹರಾಜಿನಲ್ಲಿ 82.25 ಕೋಟಿ ರೂ.ಗಳನ್ನು ಖರ್ಚು ಮಾಡಿ 19 ಆಟಗಾರರನ್ನು ಖರೀದಿಸಿತು. ಹರಾಜಿಗೆ ಮುನ್ನ ಮಾಜಿ ನಾಯಕ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ.ಗೆ, ಬ್ಯಾಟ್ಸ್ಮನ್ ರಜತ್ ಪಾಟಿದಾರ್ ಅವರನ್ನು 11 ಕೋಟಿ ರೂ.ಗೆ ಮತ್ತು ಬೌಲರ್ ಯಶ್ ದಯಾಳ್ ಅವರನ್ನು 5 ಕೋಟಿ ರೂ.ಗೆ ಉಳಿಸಿಕೊಳ್ಳಲಾಗಿತ್ತು. ಒಟ್ಟು 22 ಆಟಗಾರರ ಪೈಕಿ ಆರ್ಸಿಬಿಯಲ್ಲಿ 14 ಭಾರತೀಯ ಆಟಗಾರರು ಮತ್ತು 8 ವಿದೇಶಿ ಆಟಗಾರರು ಇದ್ದಾರೆ. ಹರಾಜಿನ ಎರಡು ದಿನಗಳಲ್ಲಿ ಅವರ ಅತ್ಯಂತ ದುಬಾರಿ ಖರೀದಿ ವೇಗದ ಬೌಲರ್ಗಳು ಎಂದು ತಿಳಿದುಬಂದಿದೆ. ಭಾನುವಾರ ಆರ್ಸಿಬಿ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್ವುಡ್ ಅವರನ್ನು 12.5 ಕೋಟಿ ರೂ.ಗೆ ಖರೀದಿಸಿದರೆ, ಸೋಮವಾರ ಭಾರತದ ಅನುಭವಿ ವೇಗಿ ಭುವನೇಶ್ವರ್…