Author: kannadanewsnow09

ಬೆಂಗಳೂರು: ಪ್ರತಿಭಟನಾ ನಿರತ ಎನ್ ಹೆಚ್ ಎಂ ಶುಶ್ರೂಷಾಧಿಕಾರಿಗಳ ಜೊತೆಗೆ ನಾವಿದ್ದೇವೆ. ನೀವು ಇದ್ದರೇ ವೈದ್ಯಕೀಯ ಸೇವೆ ಸುಗಮವಾಗಿ ನಡೆಯಲಿದೆ ಅಂತ ಸಂಸದ ಡಾ.ಸಿಎನ್ ಮಂಜುನಾಥ್ ತಿಳಿಸಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ನಡೆಸುತ್ತಿರುವಂತ ಪ್ರತಿಭಟನಾ ಸ್ಥಳಕ್ಕೆ ಭೇಟಿಯಾಗಿ, ನೌಕರರ ಕಷ್ಟವನ್ನು ಆಲಿಸಿದರು. ಆ ಬಳಿಕ ಸಂಸದ ಡಾ. ಮಂಜುನಾಥ್ ಅವರು ಮಾತನಾಡಿ, ನಾವು ನಿಮ್ಮ ಜೊತೆ ಇದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿಸುವುದು, ಖಾಯಂ ಮಾಡುವ ಬಗ್ಗೆ ಒತ್ತಾಯಿಸುತ್ತೇವೆ. ನರ್ಸ್‍ಗಳು, ತಂತ್ರಜ್ಞರು ಸೇರಿ ವೈದ್ಯೇತರ ಸಿಬ್ಬಂದಿ ಅತ್ಯಂತ ಅನಿವಾರ್ಯ ಎಂದು ತಿಳಿಸಿದರು. https://kannadanewsnow.com/kannada/demand-for-contract-nurses-proposed-in-house-leader-of-opposition-in-council-chalavadi-narayanasamy/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬಿದೆ. ಇವತ್ತಾ ನಾಳೆಯಾ ಎಂಬ ಪರಿಸ್ಥಿತಿಗೆ ಅದು ತಲುಪಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ನಗರದ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಡಿ ಹೋರಾಟ ನಡೆಸುತ್ತಿರುವ ಶುಶ್ರೂಷಾಧಿಕಾರಿಗಳ ನೋವಿನಲ್ಲಿ ನನಗೂ ಪಾಲಿದೆ. ನಿಮ್ಮ ಹೋರಾಟದಲ್ಲಿ ನಾನೂ ಜೊತೆಗೂಡುವೆ ಎಂದರು. ಸದನದಲ್ಲಿ ನಿಮ್ಮ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸರಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ. ನಿಮ್ಮ ಸದಸ್ಯನ ರೂಪದಲ್ಲಿ ಅಲ್ಲಿ ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು. ಸಂಸದ ಡಾ. ಮಂಜುನಾಥ್ ಅವರಿಂದ ನಿಮ್ಮ ಬೇಡಿಕೆಗಳ ಕುರಿತಂತೆ ವಿವರ ಪಡೆದುಕೊಳ್ಳುವೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಜೊತೆ ಮಾತನಾಡುವೆ. ಆರೋಗ್ಯ ಸಚಿವರ ಆರೋಗ್ಯ ಸರಿಯಾದರೆ ಅವರ ಜೊತೆಗೂ ಮಾತನಾಡುವೆ ಎಂದು ತಿಳಿಸಿದರು. ಅವರು ವೈದ್ಯರೇನೂ ಅಲ್ಲ; ಆರೋಗ್ಯ ಸಚಿವರಾಗುವ ಯೋಗ್ಯತೆ ಅವರಲ್ಲಿಲ್ಲ ಎಂದು ವ್ಯಂಗ್ಯವಾಡಿದರು. ದನಗಳಿಗೆ ಕೊಡುವ ಔಷಧಿಯನ್ನೂ ಜನರಿಗೆ…

Read More

ಪುಣೆ: ಇಲ್ಲಿನ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಂಗಳವಾರ ಬೆಳಿಗ್ಗೆ ರಾಜ್ಯ ಸಾರಿಗೆ ಬಸ್ ಒಳಗೆ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ. ಸತಾರಾ ಜಿಲ್ಲೆಯ ಫಾಲ್ಟಾನ್ ಗೆ ಪುಣೆ ಬಸ್ ನಿಲ್ದಾಣದಲ್ಲಿ ಬೆಳಿಗ್ಗೆ 5.45 ರ ಸುಮಾರಿಗೆ ಮಹಿಳೆ ಬಸ್ ಗಾಗಿ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ಅವಳನ್ನು ಸಮೀಪಿಸಿ ಸತಾರಾಗೆ ಹೋಗುವ ಬಸ್ ಮತ್ತೊಂದು ಪ್ಲಾಟ್ ಫಾರ್ಮ್ ಗೆ ಬಂದಿದೆ ಎಂದು ಸೂಚಿಸಿದನು. ಘಟನೆ ನಡೆದ ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣವು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಅತಿದೊಡ್ಡ ಬಸ್ ಜಂಕ್ಷನ್ಗಳಲ್ಲಿ ಒಂದಾಗಿದೆ ಮತ್ತು ಇದು ಪೊಲೀಸ್ ಠಾಣೆಯಿಂದ ಸುಮಾರು 100 ಮೀಟರ್ ದೂರದಲ್ಲಿದೆ. ಶಂಕಿತನನ್ನು 36 ವರ್ಷದ ದತ್ತಾತ್ರೇಯ ರಾಮದಾಸ್ ಗಾಡೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕಳ್ಳತನ ಮತ್ತು ಸರಗಳ್ಳತನದ ಅನೇಕ ಪ್ರಕರಣಗಳು ದಾಖಲಾಗಿವೆ ಎಂದು ಸ್ವರ್ಗೇಟ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿಂದ ಪೊಲೀಸರು ಆರೋಪಿ ಗಾಡೆ ಅವರನ್ನು…

Read More

ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಹೌದು ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್.1ರಿಂದ 20ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ತೆರಳೋದಕ್ಕೆ ಸಾರಿಗೆ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಫ್ರೀ ಆಗಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರ ತೋರಿಸಿ, ಸಾರಿಗೆ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. https://twitter.com/KarnatakaVarthe/status/1894690677159838053 https://kannadanewsnow.com/kannada/overwhelming-response-to-shakti-scheme-154955-trips-increased-to-176787/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ ಸಿಕ್ಕಿದೆ. ಈವರೆಗೆ 400 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣವನ್ನು ಸಾರಿಗೆ ಬಸ್ಸುಗಳಲ್ಲಿ ಬೆಳೆಸಿದ್ದಾರೆ. ಶಕ್ತಿ ಯೋಜನೆ ಜಾರಿಗೊಂಡ ಬಳಿಕ 1,54,955 ಟ್ರಿಪ್ ಗಳ ಪ್ರಮಾಣವು 1,76,787ಕ್ಕೆ ಹೆಚ್ಚಳವಾಗಿದೆ. ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ. ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ. ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. https://twitter.com/KarnatakaVarthe/status/1894714829841334728 https://kannadanewsnow.com/kannada/bengaluru-man-attempts-suicide-by-consuming-phenyl-at-police-station/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ನಗರದಲ್ಲಿ ಪೊಲೀಸ್ ಠಾಣೆಯಲ್ಲೇ ಆರೋಪಿಯೊಬ್ಬ ಪಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತ ಅಚ್ಚರಿಯ ಘಟನೆ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿಯನ್ನು ರವಿ ಆಲಿಯಾಸ್ ರಾಬಿನ್ ಎಂಬುದಾಗಿ ತಿಳಿದು ಬಂದಿದೆ. ರವಿ ಆಲಿಯಾಸ್ ರಾಬಿನ್ ನನ್ನು ಸರಗಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದರು. ಪೊಲೀಸ್ ವಶದಲ್ಲಿದ್ದಂತ ಆತ ನಿನ್ನೆ ರಾತ್ರಿ ಪೊಲೀಸರು ಹೊಡೆಯುತ್ತಾರೆ ಎಂಬ ಭಯಕ್ಕೆ ಠಾಣೆಯ ಬಾತ್ ರೂಮಿನಲ್ಲೇ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದಂತ ಆರೋಪಿ ರವಿ ಆಲಿಯಾಸ್ ರಾಬಿನ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗ ಪ್ರಾಣಾಪಾಯದಿಂದ ಪಾರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/good-news-for-job-seekers-state-govt-approves-recruitment-of-9000-posts-in-transport-corporations/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ. ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1894718627519344691 https://kannadanewsnow.com/kannada/it-will-be-mandatory-for-schools-colleges-and-government-offices-in-the-state-to-do-so-on-february-28-state-govt/ https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/

Read More

ಬೆಂಗಳೂರು: ಫೆಬ್ರವರಿ 28ರಂದು ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಶಾಂತಿ ಹಾಗೂ ಸಹೋದರತ್ವವನ್ನು ಸಮಾಜದಲ್ಲಿ ಸಾರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ನಾಗರಿಕರಲ್ಲಿ ಬೆಳೆಸುವುದು ಪ್ರಸ್ತುತ ಕಾಲಘಟ್ಟದಲ್ಲಿ ಅವಶ್ಯವಾಗಿದ್ದು, ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು ನಮ್ಮ ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದಿದೆ. ಈ ನಿಟ್ಟಿನಲ್ಲಿ ಫೆಬ್ರವರಿ 28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ವೈಜ್ಞಾನಿಕ ಮನೋಭಾವನೆ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವಂತೆ ಪ್ರತಿಜ್ಞಾವಿಧಿ ಸ್ವೀಕರಿಸಿ, ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಮೂಲಕ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆದ್ದರಿಂದ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಈ ಪ್ರತಿಜ್ಞಾ ವಿಧಿ ಸ್ವೀಕರಿಸಲು ಕ್ರಮವಹಿಸುವಂತೆ ಈ ಮೂಲಕ ಕೋರಲಾಗಿದೆ. ಪ್ರತಿಜ್ಞಾ ವಿಧಿಯನ್ನು ದಿನಾಂಕ: 28.02.2025, ಶುಕ್ರವಾರದಂದು ಪೂರ್ವಾಹ್ನ 10.30 ಕ್ಕೆ ರಾಜಾದ್ಯಂತ…

Read More

ಬೆಂಗಳೂರು: “ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ನನ್ನ ವೈಯಕ್ತಿಕ ನಂಬಿಕೆ, ನಾನು ಪಾಲಿಸುತ್ತೇನೆ. ಇದಕ್ಕೆ ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಕೆ.ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕೆಪಿಸಿಸಿ ಅಧ್ಯಕ್ಷರಾಗಿ ನೀವೇ ಮುಂದುವರಿಯಬೇಕು ಎಂದು ಮನವಿ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದು ಕೇಳಿದಾಗ, “ಇದು ಸುಳ್ಳು. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಸುದ್ದಿ. ಇನ್ನು ಅನೇಕ ವಿಚಾರಗಳಲ್ಲಿ ಸುದ್ದಿಗಳನ್ನು ಸೃಷ್ಟಿ ಮಾಡಲಾಗುತ್ತಿದೆ. ಸದ್ಗುರು ಅವರು ನನ್ನ ಮನೆಗೆ ಬಂದು ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದರು. ಅವರು ನಮ್ಮ ಮೈಸೂರಿನವರು. ಅವರ ಜ್ಞಾನವನ್ನು ನಾನು ಮೆಚ್ಚುತ್ತೇನೆ. ಕಳೆದ ವರ್ಷ ನನ್ನ ಮಗಳು ಆ ಕಾರ್ಯಕ್ರಮಕ್ಕೆ ಹೋಗಿದ್ದಳು. ಈ ಬಾರಿ ಅವರು ನಮ್ಮ ಮನೆಗೆ ಬಂದು ನನ್ನ ಹಾಗೂ ನನ್ನ ಕುಟುಂಬಕ್ಕೆ ಆಹ್ವಾನ ನೀಡಿದ್ದಾರೆ. ಈಗ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಇಷ್ಟಕ್ಕೆ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ನಿಗಮ ಮಂಡಳಿ ನೇಮಕದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ನಿಗಮ ಮಂಡಳಿ ನೇಮಕದಲ್ಲಿ ಪಟ್ಟಿ ಬಿಡುಗಡೆಯಾಗಿಲ್ಲ ಎಂದು ಕೇಳಿದಾಗ, “ನಾನು ಪಟ್ಟಿ ತರಿಸಿಕೊಂಡಿದ್ದು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಆದ್ಯತೆ ನೀಡಬೇಕು ಎಂಬ ಉದ್ದೇಶ ನನ್ನದು. ಬ್ಲಾಕ್ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರುಗಳಿಗೆ ಸ್ಥಾನಮಾನ ನೀಡಬೇಕು ಎಂದು ಎಲ್ಲಾ ಶಾಸಕರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಬಜೆಟ್ ತಯಾರಿಯಲ್ಲಿ ನಿರತರಾಗಿದ್ದು, ನನ್ನ ಹಾಗೂ ಸಣ್ಣ ನೀರಾವರಿ ಇಲಾಖೆ ಜತೆ ಸಭೆ ಮಾತ್ರ ಬಾಕಿ ಇದೆ. ನಮ್ಮ ಅಧಿಕಾರಿಗಳು ದೆಹಲಿಯಲ್ಲಿದ್ದ ಕಾರಣ ಸಭೆ ಮಾಡಲು ಆಗಿರಲಿಲ್ಲ ಎಂದು ತಿಳಿಸಿದರು. https://kannadanewsnow.com/kannada/big-news-cm-siddaramaiah-to-launch-3-day-hampi-utsav-from-feb-28/ https://kannadanewsnow.com/kannada/breaking-another-fire-breaks-out-in-mysuru-12-boilers-gutted-in-fire/

Read More