Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕೆಲವು ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಗೆಲುವಿಗಾಗಿ ಜಿಲ್ಲಾ ಉಸ್ತುವಾರಿಗಳು, ರಾಜ್ಯ ಉಸ್ತುವಾರಿಗಳನ್ನು ನೇಮಕಗೊಳಿಸಿದ್ದಾವೆ. ಇದರ ನಡುವೆ ಸಮಾಜವಾದಿ ಪಕ್ಷದಿಂದ ಒಂದು ಹೆಚ್ಚು ಮುಂದೆ ಎನ್ನುವಂತೆ ಲೋಕಸಭಾ ಚುನಾವಣೆಗೆ 16 ಅಭ್ಯರ್ಥಿಗಳ ಹೆಸರನ್ನೇ ಘೋಷಣೆ ಮಾಡಿದೆ. ಹೌದು 2024 ರ ಲೋಕಸಭಾ ಚುನಾವಣೆಗೆ ( Lok Sabha elections 2024 ) ಸಮಾಜವಾದಿ ಪಕ್ಷ (Samajwadi Party -SP) ಮಂಗಳವಾರ 16 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮೈನ್ಪುರಿಯಿಂದ ಡಿಂಪಲ್ ಯಾದವ್, ಸಂಭಾಲ್ನಿಂದ ಶಫಿಕುರ್ ರೆಹಮಾನ್ ಬಾರ್ಕ್ ಮತ್ತು ಲಕ್ನೋದಿಂದ ರವಿದಾಸ್ ಮೆಹ್ರೋತ್ರಾ ಸ್ಪರ್ಧಿಸಲಿದ್ದಾರೆ. ಹೀಗಿದೆ ಲೋಕಸಭಾ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಘೋಷಣೆಯಾದ 16 ಅಭ್ಯರ್ಥಿಗಳ ಪಟ್ಟಿ ಅಕ್ಷಯ್ ಯಾದವ್ (ಫಿರೋಜಾಬಾದ್), ದೇವೇಶ್ ಶಾಕ್ಯ (ಇಟಾ), ಧರ್ಮೇಂದ್ರ ಯಾದವ್ (ಬದಾಯುನ್), ಉತ್ಕರ್ಷ್ ವರ್ಮಾ (ಖಿರಿ), ಆನಂದ್ ಭದೌರಿಯಾ (ಧೌರಾಹರಾ), ಅನು ಟಂಡನ್ (ಉನ್ನಾವೊ), ನವಲ್ ಕಿಶೋರ್ ಶಾಕ್ಯ (ಫರೂಕಾಬಾದ್), ರಾಜಾರಾಮ್…
ತ್ರಿಪುರ: ಕರ್ನಾಟಕ ರಣಜಿ ಕ್ಯಾಪ್ಟನ್ ಆಗಿರುವಂತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎಂಬುದಾಗಿ ಸದ್ಯಕ್ಕೆ ತಿಳಿದು ಬಂದಿದೆ. ಅವರು ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದಂತ ಅವರು, ವಿಮಾನದಲ್ಲಿ ನೀರು ಕುಡಿಯುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-imran-khan/
ಬೆಂಗಳೂರು: ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಹಾರಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ. ಕಾಂಗ್ರೆಸ್ ಸರ್ಕಾರ ಇನ್ನಷ್ಟು ಕೆದಕಿದರೆ ಇದು ದೇಶವ್ಯಾಪಿ ಹೋರಾಟವಾಗಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ನೆಹರು ಕಾಲದಿಂದಲೂ ರಾಮನ ಮೇಲೆ ದ್ವೇಷ ಇದೆ. ಆದರೀಗ ಹನುಮನ ಬಗ್ಗೆ ದ್ವೇಷ ಶುರುವಾಗಿದೆ. ಕೆರೆಗೋಡಿನಲ್ಲಿ 20-30 ವರ್ಷಗಳಿಂದ ಹನುಮ ಧ್ವಜ ಹಾರಿಸಲಾಗುತ್ತಿದೆ. ಯಾವುದೇ ಮಸೀದಿಯ ಬಳಿ ಧ್ವಜ ಹಾರಿಸಿಲ್ಲ. ಪ್ರತಿ ಮನೆಯವರಿಂದ ದೇಣಿಗೆ ಸಂಗ್ರಹಿಸಿ 6 ಲಕ್ಷ ರೂ. ಖರ್ಚು ಮಾಡಿ 108 ಅಡಿ ಸ್ತಂಭ ನಿರ್ಮಿಸಲಾಗಿದೆ. ಇಡೀ ವರ್ಷ ಅಲ್ಲಿ ಹನುಮ ಧ್ವಜ ಹಾರಿಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರಧ್ವಜ ಹಾರಿಸಲಾಗುತ್ತದೆ. ಹನುಮನ ನಾಡಿನಲ್ಲಿ ಹನುಮ ಧ್ವಜ ಹಾರಿಸಲು ಸರ್ಕಾರ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಮರ್ಯಾದೆ ಇದ್ದರೆ ಅವರ ಅನುದಾನದಿಂದ ಕಂಬ ನಿರ್ಮಿಸಿ ಧ್ವಜ ಹಾರಿಸಬೇಕಿತ್ತು. ಹನುಮನನ್ನು ಹೇಗೆ ವಿರೋಧ ಮಾಡಬೇಕೆಂದು ಚಿಂತಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಶಾಸಕ ಎಸ್ ಆರ್ ಶ್ರೀನಿವಾಸ (ವಾಸು) ಅವರನ್ನು ನೇಮಕ ಮಾಡಿ ಆದೇಶಿಸಿತ್ತು. ಅದರಂತೆ ಇಂದು ಅವರು ನಿಗಮದ ಕೇಂದ್ರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ತುಮಕೂರಿನ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರನ್ನು ಕೆ ಎಸ್ ಆರ್ ಟಿಸಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇಂತಹ ಅವರು ಇಂದು ನಿಗಮದ ಕಚೇರಿಯಲ್ಲಿ ಅಧಿಕಾರವನ್ನು ಸ್ವೀಕರಿಸಿದರು. ಅಧಿಕಾರ ಸ್ವೀಕರಾದ ಬಳಿಕ ಶಾಸಕ ಎಸ್ ಆರ್ ಶ್ರೀನಿವಾಸ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೂತನ ಅಧ್ಯಕ್ಷರಿಗೆ ಹೂ ಗುಚ್ಚ ನೀಡಿ ಶುಭ ಹಾರೈಸಿದರು. ಅಲ್ಲದೇ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ನೂತನ ಅಧ್ಯಕ್ಷರಿಗೆ ಶುಭಾಶಯ ತಿಳಿಸಿದರು. ಇದೇ ಸಂದರ್ಭದಲ್ಲಿ ವಿ. ಅನ್ಬುಕುಮಾರ್ ಭಾ.ಆ.ಸೇ. ವ್ಯವಸ್ಥಾಪಕ ನಿರ್ದೇಶಕರು, ಡಾ. ನಂದಿನಿದೇವಿ ಕೆ, ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಮಾನ್ಯ ಅಧ್ಯಕ್ಷರಿಗೆ ಶುಭ ಕೋರಿದರು. https://kannadanewsnow.com/kannada/major-surgery-from-state-government-to-administrative-machinery-order-transferring-218-psi/ https://kannadanewsnow.com/kannada/its-a-great-post-office-plan-you-get-a-lot-of-interest/
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 218 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ( Police Sub Inspector – PSI ) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು, ದೇವನಹಳ್ಳಿ ಠಾಣೆಯ ಪಿಎಸ್ಐ ಶಿವಪ್ಪ ಎಂ ನಾಯಕ್ ಅವರನ್ನು ರಾಮಮೂರ್ತಿ ನಗರಕ್ಕೆ ವರ್ಗಾವಣೆ ಮಾಡಲಾಗಿದೆ. ಶಿವಪ್ಪ ಅವರನ್ನು ವೈಟ್ ಫೀಲ್ಡ್ ಪೊಲೀಸ್ ಠಾಣೆ, ರಾಮದೇವಿ ಬಿಎಸ್ ಅವರನ್ನು ಮಹದೇವಪುರ ಪೊಲೀಸ್ ಠಾಣೆ, ಮೂರ್ತಿ ಅವರನ್ನು ಮಲ್ಲೇಶ್ವರಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಮಂಜುನಾಥ್ ಹೆಚ್ ಅವರನ್ನು ವರ್ತೂರು ಪೊಲೀಸ್ ಠಾಣೆಯಿಂದ ರಾಮಮೂರ್ತಿ ನಗರ ಪೊಲೀಸ್ ಠಾಣೆಗೆ, ಮೌನೇಶ್ ಅವರನ್ನು ವರ್ತೂರು ಪೊಲೀಸ್ ಠಾಣೆಗೆ, ಅಮರೇಶ್ ಅವರನ್ನು ಕೋರಮಂಗಲ ಠಾಣೆ, ಶಿವರಾಜ ಎಂ.ಜೆ ಅವರನ್ನು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 218 ಪಿಎಸ್ಐ ವರ್ಗಾವಣೆಯ ಸಂಪೂರ್ಣ ಪಟ್ಟಿ https://kannadanewsnow.com/kannada/its-a-great-post-office-plan-you-get-a-lot-of-interest/ https://kannadanewsnow.com/kannada/breaking-imran-khan/
ಬೆಂಗಳೂರು: ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಹಾರಿಸಲಾಗುತ್ತಿದ್ದಂತ ಹಸಿರು ಧ್ವಜವನ್ನು ಹಿಂದೂ ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ತೆರವುಗೊಳಿಸಲಾಗಿದೆ. ಆ ಧ್ವಜ ಕಂಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿರುವಂತ ಚಾಂದಿನಿ ಚೌಕ್ ನಲ್ಲಿನ ಬಿಬಿಎಂಪಿ ಧ್ವಜ ಸ್ತಂಭದಲ್ಲಿ ಹಸಿರು ಧ್ವಜವನ್ನು ಕಟ್ಟಲಾಗಿತ್ತು. ಇದಕ್ಕೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ವಿರೋಧವನ್ನು ವ್ಯಕ್ತ ಪಡಿಸಿದ್ದರು. ಹಿಂದೂಪರ ಸಂಘಟನೆಗಳ ವಿರೋಧದಿಂದಾಗಿ ಪೊಲೀಸರು ಶಿವಾಜಿನಗರ ಚಾಂದಿನಿ ಚೌಕ್ ನಲ್ಲಿದ್ದಂತ ಹಸಿರು ಧ್ವಜವನ್ನು ತೆರವುಗೊಳಿಸಿದ್ದಾರೆ. ಅಲ್ಲದೇ ಆ ಧ್ವಜ ಸ್ತಂಭದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ. https://kannadanewsnow.com/kannada/big-twist-to-mandya-keragodi-hanumandhwaja-controversy-gram-panchayat-conduct-book-goes-missing/ https://kannadanewsnow.com/kannada/its-a-great-post-office-plan-you-get-a-lot-of-interest/
ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿ ಗ್ರಾಮದಲ್ಲಿ ನಡೆದಿದ್ದಂತ ಹನುಮಧ್ವಜ ಹಾರಾಟ ವಿವಾದಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನುಮಧ್ವಜ ಹಾರಾಟ ಸಂಬಂಧ ಗ್ರಾಮ ಪಂಚಾಯ್ತಿ ನಡೆಸಿದ್ದಂತ ನಡವಳಿಯ ನಿರ್ಣಯದ ಪುಸ್ತಕವೇ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಮಂಡ್ಯ ತಾಲೂಕಿನ ಕೆರಗೋಡಿ ಗ್ರಾಮದಲ್ಲಿ ಹನುಮಧ್ವಜ ಹಾರಾಟಕ್ಕೂ ಮುನ್ನಾ, ಗ್ರಾಮ ಪಂಚಾಯ್ತಿಯ 22 ಸದಸ್ಯರಿಂದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ 18 ಜನರು ಹನುಮಧ್ವಜ ಹಾರಾಟ ಸಂಬಂಧ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಇನ್ನುಳಿದವರು ಒಪ್ಪಿಗೆ ಸೂಚಿಲ್ಲ. ಈ ಎಲ್ಲವನ್ನು ಜನವರಿ.25ರಂದು ನಡವಳಿ ಪುಸ್ತಕದಲ್ಲಿ ನಮೂದಿಸಲಾಗಿದೆ. ಇದೀಗ ಹೀಗೆ ಜನವರಿ.25ರಂದು ಹನುಮಧ್ವಜ ಹಾರಿಸೋ ಸಂಬಂಧ ನಡೆದಂತ ಗ್ರಾಮ ಪಂಚಾಯ್ತಿಯ ಸದಸ್ಯರ ಸಭೆಯ ನಡವಳಿಯ ನಿರ್ಣಯದ ಪುಸ್ತಕವೇ ನಾಪತ್ತೆಯಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಈಗ ಹನುಮಧ್ವಜ ವಿವಾದ ಮತ್ತೊಂದು ತಿರುವು ಪಡೆದಿದೆ. ಅಂದಹಾಗೆ ನಿನ್ನೆ ಇದೇ ವಿಚಾರವಾಗಿ ಬಿಜೆಪಿ ಕಾರ್ಯಕರ್ತರು, ನಾಯಕರು ಕೆರಗೋಡಿಯಿಂದ ಮಂಡ್ಯ ಡಿಸಿ ಕಚೇರಿಯವರೆಗೆ ಪಾದಯಾತ್ರೆ ಮಾಡಿ ಹನುಮಧ್ವಜ ತೆರವಿಗಾಗಿ ಆಕ್ರೋಶವನ್ನು ಹೊರ…
ಉತ್ತರ ಕನ್ನಡ: ಮಂಡ್ಯ ಜಿಲ್ಲೆಯ ಬಳಿಕ, ಉತ್ತರ ಕನ್ನಡಕ್ಕೂ ಧರ್ಮ ಧ್ವಜ ದಂಗಲ್ ಕಾಲಿಟ್ಟಿದೆ. ಅನುಮತಿ ಇದ್ದರೂ ಭಗವಧ್ವಜ ನಿರ್ಮಿಸಿದ್ದನ್ನು ತೆರವುಗೊಳಿಸಲಾಗಿದೆ. ಅಲ್ಲದೇ ಧ್ವಜ ಕಟ್ಟೆಯನ್ನು ತೆರವುಗೊಳಿಸಿದ್ದಕ್ಕಾಗಿ ಗ್ರಾಮಸ್ಥರು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ. ಉತ್ತರ ಕನ್ಡನ ಜಿಲ್ಲೆಯ ಭಟ್ಕಳದ ತೆಂಗಿನಗುಂಡಿ ಬೀಚ್ ನಲ್ಲಿ ಅನುಮತಿ ಪಡೆದು ವೀರಸಾರ್ವರ್ಕರ್ ವೃತ್ತದಲ್ಲಿ ಭಗವಧ್ವಜ, ನಾಮಫಲಕ ಹಾಗೂ ಧ್ವಜ ಕಟ್ಟೆಯನ್ನು ನಿರ್ಮಿಸಲಾಗಿತ್ತು. ಮಂಡ್ಯದಲ್ಲಿ ಭಗವಧ್ವಜ ವಿವಾದದ ಬಳಿಕ, ಭಟ್ಕಳದ ತೆಂಗಿನಗುಂಡಿ ಬೀಚ್ ನಲ್ಲಿ ಅನುಮತಿ ಪಡೆದು ನಿರ್ಮಿಸಲಾಗಿದ್ದಂತ ಭಗವಧ್ವಜವನ್ನು ತೆರವುಗೊಳಿಸಲಾಗಿದೆ ಎಂಬುದಾಗಿ ಆರೋಪ ಕೇಳಿ ಬಂದಿದೆ. ಭಗವಧ್ವಜ, ಧ್ವಜ ಕಟ್ಟೆಯನ್ನು ತೆರವುಗೊಳಿಸಿದ್ದಕ್ಕಾಗಿ, ಭಟ್ಕಳದ ತೆಂಗಿನಗುಂಡಿ ಬೀಚ್ ನಲ್ಲಿ ಪಿಡಿಓ ಅಧಿಕಾರಿಯನ್ನು ಗ್ರಾಮಸ್ಥರು ತೀವ್ರವಾಗಿ ತರಾಟೆಯನ್ನು ತೆಗೆದುಕೊಂಡಿದ್ದಾರೆ. ಈ ಮೂಲಕ ಆಕ್ರೋಶವನ್ನು ಹೊರ ಹಾಕಿದ್ದಾರೆ. https://kannadanewsnow.com/kannada/its-a-great-post-office-plan-you-get-a-lot-of-interest/ https://kannadanewsnow.com/kannada/breaking-imran-khan/
ಮಂಡ್ಯ: ಹನುಮಧ್ವಜ ವಿಚಾರವಾಗಿ ಮಂಡ್ಯದಲ್ಲಿ ಕೋಮು ಸೌಹಾರ್ಧತೆ ಕೆಡಿಸಿ, ಬೆಂಕಿ ಹಚ್ಚೋ ಕೆಲಸ ಮಾಡಿದ್ರೇ ಅದರ ಪರಿಣಾಮ ನೆಟ್ಟಗಿರಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಸ್ವಾಭಿಮಾನ, ಗೌರವದ ವಿಚಾರದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಜನತಾ ಪಕ್ಷವನ್ನ ನಿನ್ನೆಯೇ ಅಂತಿಮಗೊಳಿಸಿದ್ದೀರಿ. ನಿನ್ನೆ ಕೇಸರಿ ಶಾಲು ಹಾಕೊಂಡು ಪಕ್ಷದ ಅಂತಿಮ ಯಾತ್ರೆಗೆ ತಿಲಾಂಜಲಿ ಹಾಡಿದ್ದಾರೆ. ಇಷ್ಟು ದಿನ ಹಸಿರು ಶಾಲು ಹಾಕೊಂಡು ಹೋರಾಟ ಮಾಡುತ್ತಿದ್ರಿ. ನೀವು ಪಕ್ಷ ಸೇರ್ಪಡೆ ಆಗಿದ್ದರೆ ಜನತಾ ಪರಿವಾರದವರಿಗೆ ನೋವಾಗುತ್ತಿರಲಿಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ, ತಮ್ಮ ರಾಜಕೀಯಕ್ಕಾಗಿ ಜಯಪ್ರಕಾಶ್ ನಾರಾಯಣರ ಹೋರಾಟಕ್ಕೆ ತಿಲಾಂಜಲಿ ಹಾಡೀದ್ದೀರಿ. ನಿಮ್ಮ ಬೇಡಿಕೆ ಏನು? ರಾಷ್ಟ್ರ ಧ್ವಜ ಕೆಳಗೆ ಇಳಿಸಬೇಕ? ಈ ಬಗ್ಗೆ ಸ್ಪಷ್ಟನೆ ಕೊಡಬೇಕು ಎಂಬುದಾಗಿ ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದರು. ಸರ್ಕಾರ, ಜಿಲ್ಲಾಡಳಿತ ಕಾನೂನುಬದ್ಧವಾಗಿ ಏನು ಮಾಡಬೇಕೋ ಮಾಡಿದೆ. ನಿಮ್ಮ ಹೋರಾಟ ನೋಡಿದ್ರೆ ರಾಷ್ಟ್ರ…
ಬೆಂಗಳೂರು: ನಗರದ ಅನೇಕ ಕಡೆಯಲ್ಲಿ ಪುಟ್ ಪಾತ್ ಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಕೆಯಾಗಿತ್ತು. ಹೀಗಾಗಿ ಇಂದು ಪುಟ್ ಪಾತ್ ಗಳನ್ನು ಒತ್ತುವರಿ ತೆರವು ಮಾಡದಂತ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಇಂದು ಕರ್ನಾಟಕ ಹೈಕೋರ್ಟ್ ಬೆಂಗಳೂರಲ್ಲಿ ಪುಟ್ ಪಾತ್ ಒತ್ತುವರಿಗಳನ್ನು ತೆರವು ಮಾಡದಂತ ಬಿಬಿಎಂಪಿಯ ಕಾರ್ಯ ವೈಖರಿಗೆ ತೀವ್ರ ಅಸಮಾಧಾನವನ್ನು ಹೊರ ಹಾಕಿದೆ. ಇದೇ ಸಂದರ್ಭದಲ್ಲಿ ಬಿಬಿಎಂಪಿಗೆ ಎಲ್ಲಾ ಪುಟ್ ಪಾತ್ ಗಳ ಒತ್ತುವರಿಯನ್ನು ತೆರವು ಮಾಡುವಂತೆ ಖಡಕ್ ಸೂಚನೆಯನ್ನು ಹೈಕೋರ್ಟ್ ನೀಡಿದೆ. ಬಿಬಿಎಂಪಿಯಿಂದ ಬೆಂಗಳೂರಲ್ಲಿ ರಸ್ತೆ, ಪುಟ್ ಪಾತ್ ಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಒತ್ತುವರಿಯ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಹೀಗೆ ಆದ್ರೇ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಳ್ಳೋದಾಗಿ ಖಡಕ್ ಎಚ್ಚರಿಕೆ ನೀಡಿದೆ. ಇನ್ನೂ ಬೆಂಗಳೂರಲ್ಲಿ ಪುಟ್ ಪಾತ್ ಒತ್ತುವರಿಗಳ ತೆರವು ವಿಚಾರವಾಗಿ ಫೆ.1ರಂದು ಬಿಬಿಎಂಪಿಯ ಮುಖ್ಯ ಆಯುಕ್ತರೇ ಕೋರ್ಟ್ ಗೆ ಖುದ್ದು ಹಾಜರಾಗಿ, ವಿವರಣೆ…