Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಪಾಲಾಗಿರುವಂತ ಪವಿತ್ರಾಗೌಡಗೆ, ಮತ್ತೆ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್.9ರವರೆಗೆ ಕೋರ್ಟ್ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಆರೋಪಿ ಪವಿತ್ರಾಗೌಡಗೆ ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಅವರ ನ್ಯಾಯಾಂಗ ಬಂಧನ ಕುರಿತಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಜಾಮೀನು ಅರ್ಜಿಯ ವಿಚಾರಣೆಯ ನಡುವೆಯೂ ಕೋರ್ಟ್ ಸೆಪ್ಟೆಂಬರ್.9ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಅಂದಹಾಗೇ ನಿನ್ನೆ ಕೋರ್ಟ್ ನಲ್ಲಿ ಆರೋಪಿ ಸ್ಥಾನದಲ್ಲಿರುವಂತ ಮಹಿಳೆ ಹಾಗೂ ಆನಾರೋಗ್ಯದ ಕಾರಣದಿಂದಾಗಿ ಸಿಆರ್ ಪಿಸಿ ಸೆಕ್ಷನ್ ನಡಿ 437ನಂತೆ ಆರೋಪಿ ಪವಿತ್ರಾಗೌಡಗೆ ಜಾಮೀನು ನೀಡುವಂತೆ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು. ಈ ಕುರಿತಾದಂತ ವಿಚಾರಣೆ ಇಂದಿಗೆ ಮುಂದೂಡಲಾಗಿತ್ತು. ಆ ವಿಚಾರಣೆ ಬಾಕಿ ಬೆನ್ನಲ್ಲೇ, ಕೋರ್ಟ್ ಸೆಪ್ಟೆಂಬರ್.9ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದೆ. https://kannadanewsnow.com/kannada/bengaluru-power-outages-in-these-areas-of-the-city-on-august-29/ https://kannadanewsnow.com/kannada/breaking-court-extends-actor-darshans-judicial-custody-till-september-9/
ಬೆಂಗಳೂರು: 20/66/11ಕೆವಿ ಮತ್ತಿಕೆರೆ ಎಂ ಯು ಎಸ್ ಎಸ್ ದಿನಾಂಕ 29.08.2024 ರಂದು 10:00ಗಂಟೆಗಳಿಂದ 17:00ಗಂಟೆಗಳವರೆಗೆ ವಾರ್ಷಿಕ ನಿರ್ವಹಣೆ ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್.ಜಿ. ಹಳ್ಳಿ, ಆರ್.ಎಮ್.ವಿ 2ನೇ ಹಂತ, ಸಂಜೀವಪ್ಪ ಕಾಲೋನಿ, ನ್ಯೂ ಬಿ.ಇ.ಎಲ್ ರಸ್ತೆ, ಎಂ.ಎಸ್. ಆರ್ ನಗರ, ಮೋಹನ್ ಕುಮಾರ ನಗರ, ಪಂಪಾ ನಗರ, ಬಿ.ಕೆ. ನಗರ,ಬಾಂಬೆ ಡೈಯಿಂಗ್ ರಸ್ತೆ, ಯಶವಂತಪುರ ಮೊದಲನೆ ಮುಖ್ಯ ರಸ್ತೆ, ಗೋಕುಲ, ಹೆಚ್.ಎಂ.ಟಿ. ಮುಖ್ಯ ರಸ್ತೆ, ಹೆಚ್.ಎಂ.ಟಿ. ಲೇ ಔಟ್, ಬೃಂದಾವನ ನಗರ, ಎಸ್.ಬಿ.ಎಮ್ ಕಾಲೋನಿ, ಎಂ.ಆರ್.ಜೆ ಕಾಲೋನಿ, ವಿ.ಆರ್.ಲೇ ಔಟ್, ಜೆ.ಪಿ ಪಾರ್ಕ್ ರಸ್ತೆಗಳಲ್ಲಿ ಆಗಸ್ಟ್.29ರ ನಾಳೆ ಕರೆಂಟ್ ಇರೋದಿಲ್ಲ ಎಂಬುದಾಗಿ ಬೆಸ್ಕಾಂ ತಿಳಿಸಿದೆ. https://kannadanewsnow.com/kannada/good-news-for-railway-passengers-special-train-service-between-mysuru-and-sengottai-launched/ https://kannadanewsnow.com/kannada/breaking-court-extends-actor-darshans-judicial-custody-till-september-9/ https://kannadanewsnow.com/kannada/the-process-of-transformation-has-begun-in-jammu-and-kashmir-under-the-bjp-central-government/
ಮೈಸೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಮೈಸೂರು ಮತ್ತು ಸೆಂಗೊಟ್ಟೈ ನಡುವೆ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಸೇವೆಯು ಎರಡು ಟ್ರಿಪ್ ಗಳಿಗೆ ಮಾತ್ರ ಲಭ್ಯವಿರುತ್ತದೆ. ಹೆಚ್ಚು ಆರಾಮದಾಯಕ ಪ್ರಯಾಣಕ್ಕಾಗಿ ಈ ಸೇವೆಯ ಲಾಭವನ್ನು ಪಡೆಯಲು ಪ್ರಯಾಣಿಕರನ್ನು ಪ್ರೋತ್ಸಾಹಿಸಲಾಗುತ್ತದೆ. ರೈಲು ವೇಳಾಪಟ್ಟಿ: 1.ರೈಲು ಸಂಖ್ಯೆ 06241 ಮೈಸೂರಿನಿಂದ ಸೆಂಗೊಟ್ಟೈ ಎಕ್ಸ್ಪ್ರೆಸ್: ಮೈಸೂರಿನಿಂದ ಸೆಪ್ಟೆಂಬರ್ 4, 2024 ರ ಬುಧವಾರ ಮತ್ತು ಸೆಪ್ಟೆಂಬರ್ 7, 2024 ರ ಶನಿವಾರ 21:20 ಗಂಟೆಗೆ ನಿರ್ಗಮಿಸುತ್ತದೆ ಮತ್ತು ಮರುದಿನ 16:50 ಗಂಟೆಗೆ ಸೆಂಗೊಟ್ಟೈಗೆ ಆಗಮಿಸುತ್ತದೆ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ವಾಣಿಜ್ಯ ನಿಲುಗಡೆಗಳನ್ನು ಮಾಡುತ್ತದೆ ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ, ಪುದುಕೊಟ್ಟೈ, ಕಾರೈಕುಡಿ, ಶಿವಗಂಗಾ, ಮನಮದುರೈ, ಅರುಪ್ಪುಕ್ಕೊಟ್ಟೈ, ವಿರುದುನಗರ ಜಂಕ್ಷನ್, ಶಿವಕಾಶಿ, ಶ್ರೀವಿಲ್ಲಿಪುಟ್ಟೂರು, ರಾಜಪಾಲಯಂ, ಶಂಕರನ್ ಕೋವಿಲ್, ಪಂಬಾಕೋವಿಲ್ ಶಾಂಡಿ, ಕಡಯನಲ್ಲೂರ್, ತೆಂಕನಲ್ಲೂರ್. 2. ರೈಲು…
ಬೆಂಗಳೂರು: ಸೈಬರ್ ವಂಚನೆಗಳು ದಿನೇ ದಿನೇ ಹೆಚ್ಚಾಗುತ್ತಿವೆ. ತಡೆಗೆ ಪೊಲೀಸರು ಎಷ್ಟೇ ಕ್ರಮ ವಹಿಸಿದ್ರೂ ವಂಚಕರು ಮಾತ್ರ ಮಗದೊಂದು ದಾರಿಯನ್ನು ಹಿಡಿಯುವ ಮೂಲಕ ಬ್ಯಾಂಕ್ ಗ್ರಾಹಕರ ಖಾತೆಗೆ ಕನ್ನ ಹಾಕಲಾಗುತ್ತಿದೆ. ಇದರ ನಡುವೆ ನೀವು ಈ ಆನ್ ಲೈನ್ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದೇ ಆದ್ರೇ, ನೀವು ವಂಚನೆಗೆ ಒಳಗಾಗೋಕೆ ಸಾಧ್ಯವೇ ಇಲ್ಲ. ಅವು ಏನು ಅಂತ ಮುಂದೆ ಓದಿ. ಸೋಷಿಯಲ್ ಮೀಡಿಯಾಗಳ ಬಳಕೆ ಹೆಚ್ಚಾದಂತೆ, ನಮ್ಮ ವೈಯಕ್ತಿಕ ಮಾಹಿತಿಗಳನ್ನು ಅಲ್ಲಿ ಹಂಚಿಕೊಂಡು, ಆನ್ ಲೈನ್ ವಂಚಕರಿಗೆ ನಾವೇ ಅವಕಾಶ ಮಾಡಿಕೊಡುವಂತ ನಡೆಯನ್ನು ತೋರಿ ಬಿಡುತ್ತೇವೆ. ಆದರೇ ಹೀಗೆ ಮಾಡೋದನ್ನು ತಪ್ಪಿಸಿದ್ರೇ, ಅಗತ್ಯವಿರುವ, ಗೌಪ್ಯತೆಗೆ ಧಕ್ಕೆ ಆಗದಂತ ವಿಷಯಗಳನ್ನು ಅಷ್ಟೇ ಹಂಚಿಕೊಳ್ಳುವುದರಿಂದ ನೀವು ಆನ್ ಲೈನ್ ವಂಚನೆಯನ್ನು ತಡೆಯಬಹುದಾಗಿದೆ. 5 ಆನ್ ಲೈನ್ ಸುರಕ್ಷಾ ಕ್ರಮಗಳು ಯಾವುದೇ ಕಾರಣಕ್ಕೂ ನಿಮ್ಮ ಮಾಹಿತಿಗಳಾದ ಪೂರ್ಣ ಹೆಸರು, ಮನೆಯ ವಿಳಾಸ ಮತ್ತು ನಿಮ್ಮ ಮಕ್ಕಳ ಶಾಲೆಯ ಹೆಸರನ್ನು ಇಂಟರ್ನೆಟ್ ನಲ್ಲಿ ಹಂಚಿಕೊಳ್ಳಬೇಡಿ. ಯಾವಾಗಲೂ ನಿಮ್ಮ ಕಂಪ್ಯೂಟರ್…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು WWW.SW.KAR.NIC.IN ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. https://kannadanewsnow.com/kannada/good-news-for-those-going-home-for-ganesh-festival-special-train-service-between-bengaluru-and-kalaburagi/ https://kannadanewsnow.com/kannada/good-news-from-the-central-government-rs-72000-will-be-available-every-year-under-this-scheme-pension/ https://kannadanewsnow.com/kannada/karnataka-govt-advertisements-heres-the-guidelines-for-digital-media/
ಬೆಂಗಳೂರು: ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ಕಲಬುರ್ಗಿ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ ಬೆಂಗಳೂರು- ಕಲಬುರಗಿ- ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲನ್ನು ಪ್ರತಿ ದಿಕ್ಕಿನಲ್ಲಿ 03 ಟ್ರಿಪ್ ಓಡಿಸಲಿದೆ ಎಂದಿದೆ. ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ ಬೆಂಗಳೂರು-ಕಲಬುರಗಿ ಎಕ್ಸ್ಪ್ರೆಸ್ ವಿಶೇಷ ರೈಲು ಎಸ್.ಎಂ.ವಿ.ಟಿ ಬೆಂಗಳೂರಿನಿಂದ 05.09.2024, 06.09.2024 ಮತ್ತು 07.09.2024 ರಂದು ರಾತ್ರಿ 9.15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 07.40 ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06590 ಕಲಬುರಗಿ – ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ 06.09.2024, 07.09.2024 ಮತ್ತು 08.09.2024 ರಂದು ಬೆಳಿಗ್ಗೆ 09.35 ಕ್ಕೆ ಹೊರಟು ಅದೇ ದಿನ ರಾತ್ರಿ 08.00 ಗಂಟೆಗೆ ಎಸ್.ಎಂ.ವಿ.ಟಿ ಬೆಂಗಳೂರು…
ಬೆಂಗಳೂರು: “ಘನತೆವೆತ್ತ ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಆಗಸ್ಟ್ 31ರಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಂಗಳವಾರ ಮಾತನಾಡಿದ ಶಿವಕುಮಾರ್ ಅವರು, “ನಮ್ಮ ಬಿಗ್ ಬ್ರದರ್, ಪ್ರಾಮಾಣಿಕ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮವಾಗಿ ಗಣಿಗಾರಿಕೆಗೆ ಮಂಜೂರು ಮಾಡಿದ ಪ್ರಕರಣವೂ ರಾಜ್ಯಪಾಲರ ಮುಂದಿದೆ. ಲೋಕಾಯುಕ್ತ ಸಂಸ್ಥೆಯು ಸುದೀರ್ಘ 10 ವರ್ಷಗಳ ತನಿಖೆ ನಡೆಸಿ ಕುಮಾರಸ್ವಾಮಿ ಅವರ ವಿಚಾರಣೆಗೆ ಅನುಮತಿ ಕೋರಿದ್ದಾರೆ. ಆದರೂ ವಿಚಾರಣೆಗೆ ಅನುಮತಿ ನೀಡಿಲ್ಲ. ಕುಮಾರಸ್ವಾಮಿ ಅವರು ಎಂದಿಗೂ ನಕಲಿ ಕೆಲಸ ಮಾಡುವುದಿಲ್ಲ ಕೇವಲ ಅಸಲಿ ಕೆಲಸ ಮಾಡುವವರು” ಎಂದು ಲೇವಡಿ ಮಾಡಿದರು. “ಆಗಸ್ಟ್ 31ರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ…
ಬೆಂಗಳೂರು: ವಿಶ್ವದ ವಿವಿಧೆಡೆ ಮಂಕಿಪಾಕ್ಸ್ ಆರ್ಭಟಿಸುತ್ತಿದೆ. ಕೋವಿಡ್ ರೀತಿಯಲ್ಲಿ ಜನರನ್ನು ತಲ್ಲಣಗೊಳಿಸುತ್ತಿದೆ. ಈ ಕಾರಣದಿಂದಲೇ ಮಂಕಿಪಾಕ್ಸ್ ಅನ್ನು ತುರ್ತು ಆರೋಗ್ಯ ಪರಿಸ್ಥಿತಿ ಎಂಬುದಾಗಿ ಡಬ್ಲ್ಯೂ ಹೆಚ್ಓ ಘೋಷಣೆ ಮಾಡಲಾಗಿತ್ತು. ಈಗ ಕರ್ನಾಟಕ ಸರ್ಕಾರವು ಮಂಕಿಪಾಕ್ಸ್ ಪ್ರಕರಣಗಳ ಸರ್ವೇಕ್ಷಣೆಗೆ ಮಹತ್ವದ ಮಾರ್ಗಸೂಚಿ ಕ್ರಮಗಳನ್ನು ಹೊರಡಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಆಫ್ರಿಕಾದ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC)ದಲ್ಲಿ ನವೆಂಬರ್ 2023 ರಿಂದ ಹರಡುತ್ತಿರುವ ಮಂಕಿಪಾಕ್ಸ್ (ಎಮ್-ಪಾಕ್ಸ್ ಪಕರಣಗಳು ಇತ್ತೀಚೆಗೆ ದಕ್ಷಿಣ ಆಫ್ರಿಕಾ, ಕೀನ್ಯಾ, ರುವಾಂಡಾ, ಉಗಾಂಡಾ, ಬುರುಂಡಿ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಕಾಂಗೋ ಬ್ರಜಾವಿ, ಕ್ಯಾಮರೂನ್, ನೈಜೀರಿಯಾ, ಐವರಿ ಕೋಸ್ಟ್, ಲೈಬೀರಿಯಾ ಸೇರಿದಂತೆ ಆಫ್ರಿಕನ್ ಮತ್ತು ಇತರ ದೇಶಗಳಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ದಿನಾಂಕ 14-08-2024 ರಂದು ಎಮ್-ಪಾಕ್ಸ್ ನ್ನು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿತು. ಆಫ್ರಿಕನ್ ರಾಷ್ಟ್ರವು ಜನವರಿ 2023 ರಿಂದ ಇಲ್ಲಿಯವರೆಗೆ…
ನವದೆಹಲಿ: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಮಾಜಿ ನಾಯಕ ಚಂಪೈ ಸೊರೆನ್ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಜನರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ ಸೊರೆನ್, ಇಂದು, ಬಾಬಾ ತಿಲ್ಕಾ ಮಾಂಝಿ ಮತ್ತು ಸಿಡೋ-ಕನ್ಹು ಅವರ ಪವಿತ್ರ ಭೂಮಿಯಾದ ಸಂತಾಲ್ ಪರಗಣದಲ್ಲಿ ಬಾಂಗ್ಲಾದೇಶದ ಒಳನುಸುಳುವಿಕೆ ದೊಡ್ಡ ಸಮಸ್ಯೆಯಾಗಿದೆ. ನೀರು, ಅರಣ್ಯ ಮತ್ತು ಭೂಮಿಗಾಗಿ ಹೋರಾಟದಲ್ಲಿ ವಿದೇಶಿ ಬ್ರಿಟಿಷರ ಗುಲಾಮಗಿರಿಯನ್ನು ಎಂದಿಗೂ ಒಪ್ಪಿಕೊಳ್ಳದ ಆ ವೀರರ ವಂಶಸ್ಥರ ಭೂಮಿಯನ್ನು ಈ ನುಸುಳುಕೋರರು ಆಕ್ರಮಿಸಿಕೊಂಡಿದ್ದಾರೆ ಎಂಬ ಅಂಶಕ್ಕಿಂತ ಹೆಚ್ಚು ದುರದೃಷ್ಟಕರವಾದುದು ಏನಿದೆ. ಅವರ ಕಾರಣದಿಂದಾಗಿ, ಫೂಲ್-ಜಾನೋ ಅವರಂತಹ ಧೈರ್ಯಶಾಲಿ ಮಹಿಳೆಯರನ್ನು ತಮ್ಮ ಆದರ್ಶವೆಂದು ಪರಿಗಣಿಸುವ ನಮ್ಮ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆ ಅಪಾಯದಲ್ಲಿದೆ ಎಂದಿದ್ದಾರೆ. ಬಿಜೆಪಿ ಮಾತ್ರ ಈ ವಿಷಯದ ಬಗ್ಗೆ ಗಂಭೀರವಾಗಿದೆ ಮತ್ತು ಇತರ ಪಕ್ಷಗಳು ಮತಗಳಿಗಾಗಿ ಇದನ್ನು ನಿರ್ಲಕ್ಷಿಸುತ್ತಿವೆ. ಆದ್ದರಿಂದ, ಬುಡಕಟ್ಟು ಜನರ ಅಸ್ಮಿತೆ ಮತ್ತು ಅಸ್ತಿತ್ವವನ್ನು ಉಳಿಸುವ ಈ…
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಗಸ್ಟ್ 27 ರಂದು (ಮಂಗಳವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕದಂದು ಶಾ ಐಸಿಸಿ ಉನ್ನತ ಹುದ್ದೆಗೆ ಆಯ್ಕೆಯಾಗುತ್ತಾರೆ ಎಂಬ ಸುದ್ದಿಯನ್ನು ದೃಢಪಡಿಸಲಾಯಿತು. ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶಾ ಪಾತ್ರರಾಗಿದ್ದಾರೆ. https://kannadanewsnow.com/kannada/karnataka-govt-advertisements-heres-the-guidelines-for-digital-media/ https://kannadanewsnow.com/kannada/breaking-dysp-m-k-ganapathy-suicide-case-sc-gives-big-relief-to-power-minister-kj-george/