Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ʼಕಂದಾಯ ಅದಾಲತ್ʼ ಕಾರ್ಯಕ್ರಮದ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ತಹಶೀಲ್ದಾರರಿಗೆ ಪ್ರತ್ಯಾಯೋಜಿಸುವ ಅವಧಿಯನ್ನು ವಿಸ್ತರಿಸುವ ಸಂಬಂಧ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ದಿನಾಂಕ ಘೋಷಿಸಲಾಗುವುದು. ಒಂದೇ ಸೂರಿನ ಅಡಿಯಲ್ಲಿ ಜನಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಸಂಬಂಧ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸೋಮವಾರ ಸಂಬಂಧಿತ ಅಧಿಕಾರಿಗಳ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಸರ್ಕಾರದ ಆದೇಶದಲ್ಲಿ ಗಣಕೀಕೃತ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನವನ್ನು ಕೈಗೊಳ್ಳಬೇಕು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಜನರ ಸಮಸ್ಯೆಗಳಿಗೆ ಒಂದೇ ಸೂರಿನಡಿ ಪರಿಹಾರ ನೀಡಬೇಕು” ಎಂದು ಸೂಚಿಸಿದರು. ರಾಜ್ಯಾದ್ಯಂತ ಕಂದಾಯ ಅದಾಲತ್ ಆಂದೋಲನ ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ. ಅದರನ್ವಯ, ಈ ಅಧಿಕಾರ ಪ್ರತ್ಯಾಯೋಜನೆಯು ದಿನಾಂಕ 2023ರ ಡಿಸೆಂಬರ್ 31ರಂದು ಮುಕ್ತಾಯಗೊಂಡಿತ್ತು. ಕಂದಾಯ ಅದಾಲತ್ ಕಾರ್ಯಕ್ರಮದಡಿಯಲ್ಲಿ ಆಕಾರ್ಬಂದ್…
ಪ್ರತಿನಿತ್ಯ ಮುಂಜಾನೆ ಈ ಒಂದು ಶಕ್ತಿಶಾಲಿಯಾದ ಅಂತಹ ನರಸಿಂಹ ಸ್ವಾಮಿಯ ಒಂದು ಮಂತ್ರವನ್ನು ಹೇಳಿಕೊಂಡು ದೈನದಿನ ಕೆಲಸಗಳಿಗೆ ಹೋಗುವುದರಿಂದ ಯಾವುದೇ ರೀತಿಯಾದಂತಹ ನಷ್ಟ, ತೋಂದರೆ,ವ್ಯವಾಹರದ ಅಡೆತಡೆ,ಹಾಗೂ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ನಿಮ್ಮ ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸುತ್ತಿದ್ದರೆ. ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುತ್ತಿಲ್ಲ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ನಾವು ಸೋತಿದ್ದೇವೆ…
ಕೋಲಾರ: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ ಈ ಸರ್ಕಾರವನ್ನು ಒಂದು ತಿಂಗಳಲ್ಲಿ ಮನೆಗೆ ಕಳುಹಿಸುವ ಗ್ಯಾರೆಂಟಿ ನಾವು ಕೊಡುತ್ತೇವೆ. ಕಾಂಗ್ರೆಸ್ನ ಐದು ಗ್ಯಾರೆಂಟಿಗೆ ನಮ್ಮದು ಒಂದೇ ಗ್ಯಾರೆಂಟಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಬಿಜೆಪಿ ವತಿಯಿಂದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಅನ್ನಭಾಗ್ಯದ ಬಗ್ಗೆ ಮಾತನಾಡುತ್ತದೆ. ಆದರೆ, ಅನ್ನ ಕೊಡುವಂತ ರೈತನ ಬಗ್ಗೆ ಯಾವುದೇ ರೀತಿಯ ಕಾಳಜಿ ಇಲ್ಲ. ಗ್ಯಾರೆಂಟಿಗಳ ಬಗ್ಗೆ ಹೇಳಿದ್ದೇ ಹೇಳಿದ್ದು, ಚುನಾವಣೆಗೂ ಮುನ್ನ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಕೊಡುತ್ತಿರುವ ಐದು ಕೆಜಿ ಕೂಡ ಕೇಂದ್ರದಿಂದ ಬರುತ್ತಿದೆ. ಇದು ಜನರಿಗೆ ಮಾಡುತ್ತಿರುವ ಮೋಸ. ಹೊಸ ರೇಷನ್ ಕಾರ್ಡ್ ಕೊಡುತ್ತಿಲ್ಲ. ರೇಷನ್ ಕಾರ್ಡ್ ಇಲ್ಲದಿದ್ದರೆ ಗೃಹ ಲಕ್ಷ್ಮಿ ಇಲ್ಲ ಎಂದು ಹೇಳಿದರು. 200 ಯುನಿಟ್ ಫ್ರಿ ವಿದ್ಯುತ್ ಅಂತ ಹೇಳಿದ್ದರು. ಆದರೆ, ರಾಜ್ಯದಲ್ಲಿ ಒಬ್ಬರಿಗೆ 200 ಯುನಿಟ್ ವಿದ್ಯುತ್…
ಚಾಮರಾಜನಗರ: ಜನರ ಬಳಿಗೆ ಆರೋಗ್ಯ ಸೇವೆಗಳನ್ನ ಕೊಂಡೊಯ್ಯುವ ನಿಟ್ಟಿನಲ್ಲಿ ರಾಜ್ಯದ ಹಳ್ಳಿಗಾಡಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರದಿಂದ ಆರೋಗ್ಯ ಮೇಳಗಳನ್ನ ಹಮ್ಮಿಕೊಳ್ಳಲು ವಿಶೇಷ ಕಾರ್ಯಕ್ರಮ ರೂಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ ಬೃಹತ್ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ಹಳ್ಳಿಗಾಡಿನ ಜನರು ಕೊಳ್ಳೆಗಾಲದ ಆರೋಗ್ಯ ಮೇಳಕ್ಕೆ ಆಗಮಿಸಿ, ಆರೋಗ್ಯ ತಪಾಸಣೆಗೆ ಆಸಕ್ತಿ ತೋರಿದ್ದನ್ನ ನೋಡಿದರೆ ಆರೋಗ್ಯ ಮೇಳಗಳ ಅಗತ್ಯೆತೆಯನ್ನ ನಾವು ಮನಗಾಣಬೇಕಿದೆ. ಇಷ್ಟೊಂದು ಸಂಖ್ಯೆಯಲ್ಲಿ ಜನರ ಸ್ಪಂದನೆ ಸಿಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಕೊಳ್ಳೆಗಾಲದ ಈ ಆರೋಗ್ಯ ಮೇಳ ರಾಜ್ಯ ಮಟ್ಟದ ಒಂದು ಆರೋಗ್ಯ ಮೇಳ ಕಾರ್ಯಕ್ರಮ ರೂಪಿಸಲು ಮುನ್ನುಡಿ ಬರೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಆರೋಗ್ಯ ಇಲಾಖೆಯನ್ನ ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನ ಹಾಕಿಕೊಳ್ಳಲಾಗಿದೆ. ಅದರಲ್ಲಿ ಆರೋಗ್ಯ ಮೇಳವೂ ಒಂದು. ಈ ಮೊದಲು ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ ಮೊದಲ ಆರೋಗ್ಯ ಮೇಳವನ್ನ ಆಯೋಜಿಸಲಾಗಿತ್ತು. ಅಲ್ಲಿ ಜನರಿಂದ…
ಬೆಂಗಳೂರು: ನಾಳೆ ಬೆಂಗಳೂರಲ್ಲಿ “ಸರ್ವೋದಯ ದಿನ”ದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶಿಸಿದೆ. ದಿನಾಂಕ: 30.01.2024ರ ಮಂಗಳವಾರ “ಸರ್ವೋದಯ ದಿನ”ದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ರವರು ತಿಳಿಸಿದ್ದಾರೆ. ಇನ್ನೂ ನಾಳೆ ಬೆಳಿಗ್ಗೆ 9 ಗಂಟೆಗೆ ಸರ್ವೋದಯ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ರಸ್ತೆಯಲ್ಲಿರುವ ಗಾಂಧೀಜಿಯವರ ಪ್ರತಿಮೆಗೆ ಆಡಳಿತಗಾರರು, ಮುಖ್ಯ ಆಯುಕ್ತರು ಹಾಗೂ ಇನ್ನಿತರೆ ಗಣ್ಯರುಗಳು ಮಾಲಾರ್ಪಣೆ ಹಾಗೂ ಪುಷ್ಪ ನಮನ ಸಲ್ಲಿಸಲಿದ್ದಾರೆ. https://kannadanewsnow.com/kannada/diploma-graduates-attention-applications-invited-for-yuvanidhi-scheme/ https://kannadanewsnow.com/kannada/shivamogga-power-outages-in-these-areas-of-the-district-on-january-31/
ಮಡಿಕೇರಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ಡಿಸೆಂಬರ್ 26 ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. 2023 ರಲ್ಲಿ ಪದವಿ/ ಡಿಪ್ಲೋಮಾ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ/ಖಾಸಗಿ/ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮಒನ್, ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 / 9113935220 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಜಿಲ್ಲಾ ಉದ್ಯೋಗಾಧಿಕಾರಿ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು…
ಮಡಿಕೇರಿ :-ಪ್ರಸಕ್ತ (2023-24) ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು (ಪವರ್ ವೀಡರ್), ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ ಮಿಲ್, ಮೊಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಆಸಕ್ತ ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ರೈತರು ಪಹಣಿ (ಆರ್ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಒಂದು ಭಾವಚಿತ್ರ, ರೂ.20 ರ ಛಾಪಾ ಕಾಗದದೊಂದಿಗೆ ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/kumaraswamy-is-now-a-bjp-spokesperson-siddaramaiah/ https://kannadanewsnow.com/kannada/shivamogga-power-outages-in-these-areas-of-the-district-on-january-31/
ತುಮಕೂರು : ಮಂಡ್ಯದ ಕೆರಗೋಡು ಗ್ರಾಮದಲ್ಲಿ ಭಗವಾಧ್ವಜ ಹಾರಿಸಿದ್ದರ ಪರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನೆ ಮಾಡಲು ಹೋಗುತ್ತಾರೆ ಎಂದರೆ ಇದು ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಹಾಗೂ ಪ್ರಚೋದನೆ ನೀಡಲು ಮಾಡುತ್ತಿರುವ ರಾಜಕೀಯ ಕುತಂತ್ರ. ಇದರಲ್ಲಿ ಸರ್ಕಾರದ ವೈಫಲ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸುತ್ತೇವೆ, ಯಾವುದೇ ಧರ್ಮದ ಧ್ವಜವನ್ನು ಹಾಕುವುದಿಲ್ಲ ಎಂದು ಹೇಳಿ ಅದನ್ನು ಉಲ್ಲಂಘಿಸಿ ಭಗವಾಧ್ವಜವನ್ನು ಹಾರಿಸಿದ್ದಾರೆ. ಅವರೇ ಬರೆದುಕೊಟ್ಟ ಮುಚ್ಚಳಿಕೆಗೆ ಬರೆದುಕೊಟ್ಟಿದ್ದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದರು. ಇಬ್ಬರಿಗೆ ಲಾಠಿ ಚಾರ್ಜ್ ವೇಳೆ ಗಾಯವಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಪೋಲಿಸರಿಗೆ ಹೊಡೆದಿದ್ದಾರೆ ಎಂಬ ಮಾಹಿತಿ ಇದೆ ಪೋಲಿಸಿನವರಿಗೆ ಹೊಡೆದರೆ ಏನು ಮಾಡುತ್ತಾರೆ ಎಂದರು. ಧ್ವಜದ ವಿಚಾರದಲ್ಲಿ ನಕಲಿ ದಾಖಲೆ ಸೃಷಿಯಾಗಿದ್ದು, ಘಟನೆಗೆ ಜಿಲ್ಲಾಧಿಕಾರಿ ಕಾರಣ, ಅವರು ಅಮಾನತು ಆಗುವವರೆಗೆ ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ ಮಾತನಾಡಿ…
ಬೆಂಗಳೂರು: ಮಂಡ್ಯದಲ್ಲಿ ಇಂದು ಹನುಮಧ್ವಜ ವಿವಾಧ ತೀವ್ರ ಪ್ರತಿಭಟನೆಗೆ ಕಾರಣವಾಗಿತ್ತು. ಇಂತಹ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ ಅಂತ ಹೇಳಿದೆ. ಈ ಬಗ್ಗೆ ಎಕ್ಸ್ ಮಾಡಿದ್ದು, ಅಂತಹ ಬ್ರಿಟಿಷರನ್ನೇ ಹೆದರಿಸಿದ ಕಾಂಗ್ರೆಸ್ ಈ ಬಿಜೆಪಿ RSS ಎಂಬ ದೇಶದ್ರೋಹಿಗಳಿಗೆ ಹೆದರುವುದುಂಟೆ. ಬ್ರಿಟಿಷರ ಗುಂಡಿಗೆ ಎದೆಗೊಟ್ಟು ತಿರಂಗಾ ಹಾರಿಸಿದ ವೀರ ಪರಂಪರೆ ನಮ್ಮದು, ಈ ಸಂಘಿ ಕ್ರಿಮಿ ಕೀಟಗಳು ನಮ್ಮನ್ನು ತಡೆಯಲು ಸಾಧ್ಯವೇ. ದೇಶದ ಘನತೆ, ಗೌರವವನ್ನು ಎತ್ತಿ ಹಿಡಿದಿದ್ದೇವೆ, ದೇಶದ್ರೋಹಿ ಬಿಜೆಪಿಗೆ ದಮ್ಮು ತಾಕತ್ತಿದ್ದರೆ ಈ ರಾಷ್ಟ್ರ ಧ್ವಜವನ್ನು ಕಿತ್ತು ಹಾಕುವ ಧೈರ್ಯ ತೋರಲಿ ಎಂದಿದೆ. https://twitter.com/INCKarnataka/status/1751837217130258575 ಅನುಮತಿ ಪಡೆದಿದ್ದು ರಾಷ್ಟ್ರ ಧ್ವಜ ಹಾರಿಸುವುದಕ್ಕೆ, ಆದರೆ ಹಾರಿಸಿದ್ದು ಧಾರ್ಮಿಕ ಧ್ವಜವನ್ನು. RSS ತ್ರಿವರ್ಣ ಧ್ವಜವನ್ನು “ಅನಿಷ್ಠದ ಸಂಕೇತ” ಎಂದು ಕರೆದಿತ್ತು, RSS ದಶಕಗಳ ಕಾಲ ತಿರಂಗವನ್ನು ಒಪ್ಪಿಕೊಳ್ಳಲಿಲ್ಲ, ಬಿಜೆಪಿಯೂ ಅದೇ ಹಾದಿಯಲ್ಲಿ ಸಾಗಿದೆ, ರಾಷ್ಟ್ರ ಧ್ವಜವನ್ನು ದ್ವೇಷಿಸುತ್ತಿದೆ. ರಾಷ್ಟ್ರ…
ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜ.30 ರಂದು ಉದ್ಯೋಗ ಮೇಳ ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್ಎಸ್ಎಲ್ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ದೂ.ಸಂ.: 08182-255293/ 9380663606 /8151093947/…