Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಇಂದು ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ಕಾವು ಏರಿದೆ. ಚುನಾವಣೆ ಹಿನ್ನೆಲೆಯಲ್ಲಿ ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ನಗರಸಭೆ ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆ ಇಂದಿನ ಸಾಗರ ನಗರಸಭೆ ಚುನಾವಣೆಗೆ ಭದ್ರತೆಗಾಗಿ ಇಬ್ಬರು ಡಿವೈಎಸ್ಪಿ, 07 PI, 12 PSI, 20 ಎಎಸ್ಐ, ಹೆಡ್ ಕಾನ್ಸ್ ಸ್ಟೇಬಲ್, ಪಿಸಿ 115 ಹಾಗೂ 2 KSRP, 3 DAR ತುಕಡಿಯನ್ನು ನಿಯೋಜಿಸಲಾಗಿದೆ. ಇನ್ನೂ ಭದ್ರತಾ ಕಾರ್ಯದಲ್ಲಿ ಖುದ್ದು ನಿಂತು ಮೇಲುಸ್ತುವಾರಿಯನ್ನು ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮಾರೆಡ್ಡಿ ಮಾಡುತ್ತಿದ್ದಾರೆ. ಅವರಿಗೆ ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯ್ಕ್, ಸಾಗರ…
ಬೆಂಗಳೂರು : ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ ಏಳು ವರ್ಷದಲ್ಲಿ ಈ ಕಂಪೆನಿಯಲ್ಲಿ ಹಣ ಹೂಡಿ ಕಳೆದುಕೊಂಡ ಎಷ್ಟು ಜನರಿಗೆ ಎಷ್ಟು ಪ್ರಮಾಣದಲ್ಲಿ ಹಣ ಹಿಂತಿರುಗಿಸಲಾಗಿದೆ ಮತ್ತು ಉಳಿದ ಸಂತ್ರಸ್ತರಿಗೆ ಯಾವಾಗ ಮತ್ತು ಹೇಗೆ ಹಣ ಹಿಂತಿರುಗಿಸಬೇಕು? ಎಂಬ ಕುರಿತು ಸೋಮವಾರ ವಿಕಾಸಸೌಧ ಕಚೇರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಸಚಿವರಾದ ಜಮೀರ್ ಅಹ್ಮದ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರ ಜೊತೆಗೆ ಐಎಂಎ ಹಗರಣದಿಂದ ಹಣ ಕಳೆದುಕೊಂಡ ಹಲವರು ಭಾಗಿಯಾಗಿದ್ದರು. ಈ ವೇಳೆ ಸಂತ್ರಸ್ತರಿಗೆ ಭರವಸೆ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು,…
ಮೈಸೂರು: ಕೇಂದ್ರ ಬಜೆಟ್ ಬಗ್ಗೆ ಟೀಕೆ ಸರಿಯಲ್ಲ. ವಿಶಾಲ ತಳಹದಿಯ, ದೂರದೃಷ್ಟಿಯ ಬಜೆಟ್ ಇದಾಗಿದೆ. ಬಡವರು, ಮಹಿಳೆಯರು, ರೈತರು ಹಾಗೂ ಯುವ ಜನರ ಶ್ರೇಯೋಭಿವೃದ್ಧಿಗೆ ಅತಿ ಹೆಚ್ಚು ಒತ್ತು ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶದ ಸರ್ವರ ವಿಕಾಸ ಆಗುತ್ತಿದೆ. ಎಲ್ಲರಿಗೂ ಕೇಂದ್ರ ಸರ್ಕಾರದ ಯೋಜನೆಗಳು ಮುಟ್ಟುತ್ತಿವೆ ಎಂದು ಅವರು ಹೇಳಿದರು. ಮೈಸೂರಿನಲ್ಲಿ ಸೋಮವಾರ ಕೇಂದ್ರ ಬಜೆಟ್ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ ಅವರು; ಮಧ್ಯಮ ವರ್ಗಕ್ಕೆ ತೆರಿಗೆಯ ಹೊರೆ ಇಳಿಸಲಾಗಿದೆ. ರೈತರ ಆರ್ಥಿಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಅನೇಕ ಕಾರ್ಯಕ್ರಮಗಳನ್ನು ಘೋಷಣೆ ಮಾಡಲಾಗಿದೆ. ಯಾವ ಕಾರ್ಯಕ್ರಮವೂ ಘೋಷಣೆಯಾಗಿ ಉಳಿಯುವುದಿಲ್ಲ, ಎಲ್ಲವೂ ಜಾರಿಗೆ ಬರುತ್ತವೆ ಎಂದು ಕೇಂದ್ರ ಸಚಿವರು ಹೇಳಿದರು. ರೈತರು, ಮಹಿಳೆಯರು, ಯುವಕರು, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡುವುದೇ ಈ ಬಜೆಟ್ ಆಶಯವಾಗಿದೆ. ಈ ಬಾರಿ ₹50 ಲಕ್ಷ…
ಮೈಸೂರು: ಮೈಸೂರಿನ ಉದಯಗಿರಿ ಗಲಭೆಯ ಗಲಭೆಕೋರರು ಯಾರೇ ಆಗಿದ್ದರೂ ಅವರನ್ನು ನಿರ್ದಯವಾಗಿ ಶಿಕ್ಷೆಗೆ ಗುರಿ ಮಾಡಬೇಕು. ಪೊಲೀಸ್ ವಾಹನಗಳ ಮೇಲೆ ಕಲ್ಲು ಹೊಡೆಯುತ್ತಾರೆ ಎಂದರೆ ನಮ್ಮ ರಾಜ್ಯದ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದಿದೆ ಎಂಬುದನ್ನು ಗಮನಿಸಬಹುದು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ಕರ್ನಾಟಕ ಕುವೆಂಪು ಅವರ ಸಂದೇಶದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿಯೇ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ನಾನು ಮನವಿ ಮಾಡಿಕೊಳ್ತೀನಿ. ನಮ್ಮ ಸಮಾಜಕ್ಕೆ ರಕ್ಷಣೆ ನೀಡಬೇಕೆಂದು ನೀವು ಹೋಗುತ್ತೀರಿ. ನಿಮ್ಮ ಒಳ್ಳೆಯ ಉದ್ದೇಶವನ್ನು ದುರುಪಯೋಗ ಮಾಡಿಕೊಂಡು ಅವರು ಭದ್ರವಾಗುತ್ತಾ ಹೋಗುತ್ತಿದ್ದಾರೆ. ಎರಡೂ ಪಕ್ಷದ ನಾಯಕರಿಗೆ ನಾನು ಮನವಿ ಮಾಡಿಕೊಳ್ಳುವೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಿ. ಶಾಂತಿ, ನೆಮ್ಮದಿ ಹಾಳು ಮಾಡುವ ಇಂಥ ಗಲಭೆಕೋರ ಶಕ್ತಿಗಳನ್ನು ಮಟ್ಟ ಹಾಕಿ ಎಂದು ಸರ್ಕಾರವನ್ನು ಒತ್ತಾಯ ಮಾಡಿದರು. ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ…
ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ನಾಲ್ವರು ಆರೋಪಿಗಳ ಅಪರಾಧದ ಕುರಿತು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಸಂಸ್ಥೆಯನ್ನು ದೇವರೇ ಕಾಪಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದರು. ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಮುಡಾ ಹಗರಣದಲ್ಲಿ ಏನೆಲ್ಲ ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ದಾಖಲೆಗಳು ಹಾದಿ ಸರಕಾರ ನಡೆಸುವ ಮುಖ್ಯಮಂತ್ರಿ ತಮಗೆ ಅವರಿಗೆ ಇಷ್ಟಬಂದಂತೆ, ಅನುಕೂಲ ಆಗುವಂತೆ ಲೋಕಾಯುಕ್ತ ವರದಿಯನ್ನು ಬರೆಸಿಕೊಂಡಿದ್ದಾರೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಕಾರಣ, ಪ್ರತಿ ಹಂತದಲ್ಲಿಯೂ ಸರ್ಕಾರ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದೆ. ಈ ವಿಚಾರ ಪ್ರಸ್ತಾಪ ಮಾಡಿದ್ದಕ್ಕೆ ನಮಗೆ ಕಿರುಕುಳ ನೀಡಲಾಗುತ್ತಿದೆ. ನಮ್ಮ ಜಮೀನು ತನಿಖೆಗೆ ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಐಎಎಸ್ ಎಸ್ ಐಟಿ ರಚನೆ ಮಾಡಲಾಗಿದೆ. ಐವರು ಐಎಎಸ್ ಅಧಿಕಾರಿಗಳನ್ನು ಎಸ್ ಐಟಿಗೆ ನೇಮಕ ಮಾಡಿದ್ದಾರೆ ಎಂದು ಅವರು ಕಟುವಾಗಿ ಟೀಕಿಸಿದರು. 40 ವರ್ಷದ ಹಿಂದೆ ನಾನು ಇದೇ ಮೈಸೂರಿನಲ್ಲಿ…
ನವದೆಹಲಿ: ಭಾರತವು 2024 ರಲ್ಲಿ 84 ಇಂಟರ್ನೆಟ್ ಸ್ಥಗಿತಗಳಿಗೆ ಸಾಕ್ಷಿಯಾಗಿದೆ, ಇದು ವಿಶ್ವದ ಎರಡನೇ ಅತಿ ಹೆಚ್ಚು ಎಂದು ಡಿಜಿಟಲ್ ಹಕ್ಕುಗಳ ಸಂಸ್ಥೆ ಆಕ್ಸೆಸ್ ನೌ ವರದಿ ತಿಳಿಸಿದೆ. ದೇಶದಲ್ಲಿ ಮಿಲಿಟರಿ ಜುಂಟಾ ವಿಧಿಸಿದ ಇಂತಹ 85 ಬ್ಲಾಕ್ಔಟ್ಗಳನ್ನು ಕಂಡ ಮ್ಯಾನ್ಮಾರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ವರದಿ ತಿಳಿಸಿದೆ. ಆರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಇಂಟರ್ನೆಟ್ ಸ್ಥಗಿತವನ್ನು ಕಂಡ ದೇಶವೆಂದು ಹೆಸರಿಸಲಾಗಿಲ್ಲ ಎಂದು ವರದಿ ಹೇಳಿದೆ. “2023 ರಿಂದ (116 ಇಂಟರ್ನೆಟ್ ಸ್ಥಗಿತಗಳು) ಸ್ಥಗಿತಗಳಲ್ಲಿ ಸಾಧಾರಣ ಇಳಿಕೆಯ ಹೊರತಾಗಿಯೂ, ಭಾರತವು 2024 ರಲ್ಲಿ ಇನ್ನೂ 84 ಬಾರಿ ಇಂಟರ್ನೆಟ್ ಸ್ಥಗಿತಗೊಂಡಿದೆ. ಇದು ಆ ವರ್ಷ ಪ್ರಜಾಪ್ರಭುತ್ವದಲ್ಲಿ ಆದೇಶಿಸಿದ ಅತಿ ಹೆಚ್ಚು ಅಡೆತಡೆಗಳು ಎಂದು ಸೋಮವಾರ ಪ್ರಕಟವಾದ ವರದಿ ತಿಳಿಸಿದೆ. ಭಾರತದಲ್ಲಿ, 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸ್ಥಗಿತವನ್ನು ಅನುಭವಿಸಿದವು. ಮಣಿಪುರ (21) ಅಗ್ರಸ್ಥಾನದಲ್ಲಿದ್ದರೆ, ಹರಿಯಾಣ (12) ಮತ್ತು ಜಮ್ಮು ಮತ್ತು ಕಾಶ್ಮೀರ…
ದಕ್ಷಿಣ ಕನ್ನಡ: ಜಿಲ್ಲೆಯ ಉಜಿರೆಯಲ್ಲಿನ ರುಡ್ ಸೆಟ್ ಸಂಸ್ಥೆಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆ ಮಾಹಿತಿ ನೀಡಿದೆ. ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ ಎಂದಿದೆ. ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯಲಿದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದಿದೆ. https://forms.gle/9LUE1UvHMAv21vRS7 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಸಂಪರ್ಕಿಸಬಹುದು. ಇನ್ನೂ ರುಡ್ ಸೆಟ್ ಸಂಸ್ಥೆಯ ವೆಬ್ ಸೈಟ್ https://www.rudsetujire.com…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ತಹಶೀಲ್ದಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ದಕ್ಷಿಣ ಕನ್ನಡದ ಮುಲ್ಕಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಶಿರಸಿಯ ಸಹಾಯಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಕೃಷ್ಣಾ ಕಾಮಕರ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿಗೆ ವರ್ಗಾವಣೆ ಮಾಡಿದ್ದಾರೆ. ಹಾಸನದ ಭೂಸ್ವಾಧೀನಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ಗೋವಿಂದರಾಜು ಬಿಎಂ ಅವರನ್ನು ಚಿತ್ರದುರ್ಗ ತಾಲ್ಲೂಕಿಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿಯ ಜಿಲ್ಲಾಧಿಕಾರಿಗಳ ಕಚೇರಿಯ ಗ್ರೇಡ್-1 ತಹಶೀಲ್ದಾರ್ ದುಂಡಪ್ಪ ಕೋಮಾರ ಅವರನ್ನು ಬೆಳಗಾವಿಯ ಖಾನಾಪುರ ತಾಲ್ಲೂಕಿಗೆ, ಶಿರಸಿ ತಾಲ್ಲೂಕು ಗ್ರೇಡ್-1 ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರನ್ನು ದಕ್ಷಿಣ ಕನ್ನಡದ ಮೂಡಬಿದಿರೆ ತಾಲ್ಲೂಕಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ. ಹೀಗಿದೆ 19 ತಹಶೀಲ್ದಾರ್ ವರ್ಗಾವಣೆಯ ಪಟ್ಟಿ https://kannadanewsnow.com/kannada/election-slated-to-be-held-tomorrow-to-elect-president-and-vice-president-prohibitory-orders-imposed-in-and-around-cmc-premises/ https://kannadanewsnow.com/kannada/breaking-good-news-for-motorists-in-the-state-hsrp-number-plate-installation-extended-till-march-31/ https://kannadanewsnow.com/kannada/super-offer-for-those-who-have-this-rs-2-coin-money-will-rain-5-lakh-rupees-will-be-your-own/
ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆಗಾಗಿ ನಾಳೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಆವರಣದ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಈ ಕುರಿತಂತೆ ಆದೇಶ ಹೊರಡಿಸಿರುವಂತ ತಹಶೀಲ್ದಾರ್, ದಿನಾಂಕ 25-02-2025ರ ನಾಳೆ ಸಾಗರ ನಗರಸಭೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಗರಸಭೆ ಅವರಣದಿಂದ 100 ಮೀಟರ್ ವ್ಯಾಪ್ತಿಯ ಒಳಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಚುನಾವಣಾಧಿಕಾರಿಗಳು ಕೋರಿದ್ದಾರೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ 25-02-2025ರ ಮಂಗಳವಾರ ಬೆಳಿಗ್ಗೆ 9.30 ಗಂಟೆಯಿಂದ ದಿನಾಂಕ 25-02-2025ರ ಮಧ್ಯಾಹ್ನ 1.30ರವರೆಗೆ ಸಾಗರ ತಾಲ್ಲೂಕು ನಗರಸಭೆ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಬಿಎನ್ ಎಸ್ ಎಸ್ 2023ರ ಕಾಯ್ದೆ ಕಲಂ 163ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿಷೇಧಾಜ್ಞೆ…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿಗೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ನಂತ್ರ ಮೊದಲ ಕಾರ್ಯನಿರತ ದಿನದಿಂದ ದಾಖಲಾತಿ ಪ್ರಾರಂಭಗೊಳ್ಳಲಿದೆ. ದ್ವಿತೀಯ ಪಿಯುಸಿಗೆ ದಿನಾಂಕ 22-05-2025ರಿಂದ ದಾಖಲಾತಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಶಾಲಾ ಶಿಕ್ಷಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲನೇ ಅವಧಿ ದಿನಾಂಕ 02-06-2025ರಿಂದ 21-09-2025ರವರೆಗೆ ನಡೆಯಲಿದೆ. ಎರಡನೇ ಅವಧಿಯು ದಿನಾಂಕ 08-10-2025ರಿಂದ 31-03-2026ರವರೆಗೆ ನಡೆಯಲಿದೆ. ಇನ್ನೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸಿಕೊಂಡ ವೇಳಾಪಟ್ಟಿಯಂತೆ ತರಗಳಿಗಳು ದಿನಾಂಕ 02-06-2025ರಿಂದ ಆರಂಭಗೊಳ್ಳಲಿದೆ. ಮಧ್ಯಂತರ ರಜೆಯು ದಿನಾಂಕ 22-09-2025ರಿಂದ ದಿನಾಂಕ 07-10-2025ರವರೆಗೆ ಇರಲಿದೆ. ಕೊನೆಯ ಕಾರ್ಯನಿರತ ದಿನ ದಿನಾಂಕ 31-03-2026 ಆಗಿದೆ. ಬೇಸಿಗೆ ರಜೆ ದಿನಾಂಕ 01-04-2026ರಿಂದ ಪ್ರಾರಂಭವಾಗಲಿದೆ. ದಿನಾಂಕ 16-06-2025ರಂದು ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳು ಪ್ರಾರಂಭವಾಗಲಿವೆ. ಪ್ರಥಮ…













