Author: kannadanewsnow09

ಬೆಂಗಳೂರು: ದಕ್ಷಿಣ ಭಾರತದ ಮೊದಲ ಹವಾನಿಯಂತ್ರಿತ ಪಾಲಿಕೆ ಬಜಾರ್‌ ಬೆಂಗಳೂರಿನಲ್ಲಿ ನಿರ್ಮಾಣಗೊಂಡಿದೆ. ವಿಜಯನಗರ ಬಸ್‌ ಹಾಗೂ ಮೆಟ್ರೋ ನಿಲ್ದಾಣಗಳ ಬಳಿ ಸ್ಥಾಪಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿಜಯನಗರ ಬಸ್/ಮೇಟ್ರೊ ನಿಲ್ದಾಣದ ಬಳಿ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಲ್ಲಿ ಹವಾನಿಯಂತ್ರಿತ ಮಾರುಕಟ್ಟೆಯನ್ನು ನಿರ್ಮಿಸಲಾಗಿರುತ್ತದೆ. ಹವಾನಿಯಂತ್ರಿತ ಮಾರುಕಟ್ಟೆಯಾದ “ಪಾಲಿಕೆ ಬಜಾರ್” ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮ ಹವಾನಿಯಂತ್ರಿತ ಮಾರುಕಟ್ಟೆ ಎಂಬ ಹೆಗ್ಗಳಿಕೆಯನ್ನು ಹೊಂದಿರುತ್ತದೆ. ಪಾಲಿಕೆ ಬಜಾರ್ ಮಾರುಕಟ್ಟೆಯ ವಿವರಗಳು:  ಉದ್ದೇಶಿತ ಯೋಜನೆಯ ಮಾದರಿ:- ದಕ್ಷಿಣ ಭಾರತದಲ್ಲಿ ಪ್ರಪ್ರಥಮವಾಗಿ ಹವಾನಿಯಂತ್ರಿತ ಮಾರುಕಟ್ಟೆ.  ಯೋಜನೆಯ ಒಟ್ಟು ಅಂದಾಜು ಮೊತ್ತ 13 ಕೋಟಿ ರೂ.  ಅನುದಾನದ ವಿವರ:  2017-18ನೇ ಸಾಲಿನಲ್ಲಿ 5 ಕೋಟಿ ರೂ.  2021-22ನೇ ಸಾಲಿನಲ್ಲಿ 8 ಕೋಟಿ ರೂ.  ಕಾಮಗಾರಿಯ ಸ್ಥಳ:- ವಿಜಯನಗರ ಬಸ್/ಮೇಟ್ರೊ ನಿಲ್ದಾಣದ ಬಳಿ.  ಪಾಲಿಕೆ…

Read More

ಲಂಡನ್: ಇಂಗ್ಲೆಂಡ್ನ ಮಾಜಿ ಮ್ಯಾನೇಜರ್ ಸ್ವೆನ್-ಗೊರಾನ್ ಎರಿಕ್ಸನ್ ತಮ್ಮ 76 ನೇ ವಯಸ್ಸಿನಲ್ಲಿ ನಿಧನರಾದರು ಎಂದು ಇಟಲಿಯ ಕ್ರೀಡಾ ಪತ್ರಕರ್ತ ಫ್ಯಾಬ್ರಿಜಿಯೊ ರೊಮಾನೊ ವರದಿ ಮಾಡಿದ್ದಾರೆ. ಎರಿಕ್ಸನ್ ಮೇದೋಜ್ಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಸ್ವೀಡಿಷ್ ಮ್ಯಾನೇಜರ್ ಯುರೋಪಿನ ವಿವಿಧ ಲೀಗ್ಗಳಲ್ಲಿ 18 ಟ್ರೋಫಿಗಳನ್ನು ಗೆದ್ದರು, ರೋಮಾ, ಲಾಜಿಯೊ, ಬೆನ್ಫಿಕಾ ಮತ್ತು ಮ್ಯಾಂಚೆಸ್ಟರ್ ಸಿಟಿಯಂತಹ ಕ್ಲಬ್ಗಳನ್ನು ನಿರ್ವಹಿಸಿದರು. ಅತ್ಯಂತ ಗಮನಾರ್ಹವಾಗಿ, ಅವರು 2001 ರಿಂದ 2006 ರವರೆಗೆ ಇಂಗ್ಲೆಂಡ್ ’00 ರ ಗೋಲ್ಡನ್ ಜನರೇಷನ್’ ಅನ್ನು ನಿರ್ವಹಿಸಿದರು, ಲ್ಯಾಂಪಾರ್ಡ್, ಗೆರಾರ್ಡ್, ಸ್ಕೋಲ್ಸ್, ರೂನಿ, ಬೆಕ್ಹ್ಯಾಮ್ ಮುಂತಾದವರನ್ನು ನಿರ್ವಹಿಸಿದರು, ಆದರೆ ಅವರೊಂದಿಗೆ ಏನನ್ನೂ ಗೆಲ್ಲಲು ವಿಫಲರಾದರು. https://twitter.com/FabrizioRomano/status/1828030542912147507 https://kannadanewsnow.com/kannada/good-news-for-state-government-employees-special-casual-leave-granted-to-kas-exam-tomorrow/ https://kannadanewsnow.com/kannada/kpsc-kas-exam-tomorrow-additional-ksrtc-bus-facility-for-candidates/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ನಾಳೆ ಕೆಪಿಎಸ್ಸಿಯಿಂದ ನಡೆಯುತ್ತಿರುವಂತ ಕೆಎಎಸ್ ಪೂರ್ವಭಾವಿ ಪರೀಕ್ಷೆ ಬರೆಯಲು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರ ಉಪ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27.08.2024 ಮಂಗಳವಾರದಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ, ಸದರಿ ಪರೀಕ್ಷೆಗೆ ಅನುವಾಗುವ 214 ಸರ್ಕಾರಿ, 189 ಅನುದಾನಿತ ಮತ್ತು 161 ಶಾಸಗಿ ಶಾಲಾ-ಕಾಲೇಜುಗಳು ಸೇರಿದಂತೆ, ಒಟ್ಟಾರೆ 564 ಪರೀಕ್ಷಾ ಉಪ ಕೇಂದ್ರಗಳಿಗೆ, ಅನ್ವಯಿಸಿದಂತೆ ಒಂದು ದಿನದ (ದಿನಾಂಕ: 27.08.2024) ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ ಎಂದಿದ್ದಾರೆ. ಸದರಿ ದಿನಾಂಕವನ್ನು ಸಾರ್ವತ್ರಿಕ ರಜೆಯನ್ನಾಗಿ Negotiable Instrument Act 1881ರ ಅಡಿಯಲ್ಲಿ ಘೋಷಿಸಲಾಗಿದೆ. ಮುಂದುವರೆದು, ಮೇಲೆ ತಿಳಿಸಿರುವ ಪರೀಕ್ಷಾ ಉಪ ಕೇಂದ್ರಗಳಲ್ಲಿ ದಿನಾಂಕ:27.08.2024ರಂದು…

Read More

ಬೆಂಗಳೂರು: ನಾಳೆ ಕೆಪಿಎಸ್ಸಿಯಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 27.08.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿರುತ್ತಾರೆ ಎಂದಿದೆ. ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ…

Read More

ನವದೆಹಲಿ: ಸತ್ಯಗಳನ್ನು ತಪ್ಪಾಗಿ ನಿರೂಪಿಸಿದ ಆರೋಪದ ಮೇಲೆ 2021 ರ ನವೆಂಬರ್ನಲ್ಲಿ ಆರಂಭಿಕ ಸಾರ್ವಜನಿಕ ಕೊಡುಗೆಯ ಸಮಯದಲ್ಲಿ ಸೇವೆ ಸಲ್ಲಿಸಿದ ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ಮತ್ತು ಮಂಡಳಿಯ ಸದಸ್ಯರಿಗೆ ಸೆಬಿ ಶೋಕಾಸ್ ನೋಟಿಸ್ ನೀಡಿದೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ. ಪೇಟಿಎಂನ ಮಾತೃಸಂಸ್ಥೆಯಾದ ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್ನ ಷೇರುಗಳು ಸೋಮವಾರ ಶೇಕಡಾ 4 ಕ್ಕಿಂತ ಹೆಚ್ಚು ಕುಸಿದು ಎನ್ಎಸ್ಇಯಲ್ಲಿ 530 ರೂ.ಗೆ ಕೊನೆಗೊಂಡವು. ಪ್ರವರ್ತಕ ವರ್ಗೀಕರಣ ಮಾನದಂಡಗಳನ್ನು ಶರ್ಮಾ ಅನುಸರಿಸುತ್ತಿಲ್ಲ ಎಂಬ ಆರೋಪಕ್ಕೆ ಮಾರುಕಟ್ಟೆ ನಿಯಂತ್ರಕರಿಂದ ನೋಟಿಸ್ ಗಳು ಬಂದಿವೆ. ಆರ್ಬಿಐನ ಒಳಹರಿವಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಈ ವರ್ಷದ ಜನವರಿಯಲ್ಲಿ, ಫೆಬ್ರವರಿ 29 ರಿಂದ ಜಾರಿಗೆ ಬರುವಂತೆ ಯಾವುದೇ ಗ್ರಾಹಕರ ಖಾತೆಯಲ್ಲಿ ಠೇವಣಿ ಅಥವಾ ಟಾಪ್-ಅಪ್ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (ಪಿಪಿಬಿಎಲ್) ಅನ್ನು ನಿಷೇಧಿಸಲು ಕೇಂದ್ರ ಬ್ಯಾಂಕ್ ನಿರ್ದೇಶನ ನೀಡಿತು. https://kannadanewsnow.com/kannada/bengaluru-power-outages-in-these-areas-on-august-28/ https://kannadanewsnow.com/kannada/indian-railways-recruitment-2019-indian-railways-recruitment-2018-for-14298-vacancies-rrb-recruitment-2024/

Read More

ಬೆಂಗಳೂರು: ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ರಾಜಾತಿಥ್ಯ ನೀಡಿದಂತ ಪೋಟೋಗಳು ವೈರಲ್ ಆಗುತ್ತಿದ್ದ ಬೆನ್ನಲ್ಲೇ, ಈಗ ಆಗಸ್ಟ್.12ರಂದೇ ಜೈಲು ಅಧಿಕಾರಿಗಳಿಗೆ ಕಾರಾಗೃಹ ಡಿಜಿಪಿ ಬರೆದಿದ್ದಂತ ಪತ್ರ ಕೂಡ ವೈರಲ್ ಆಗಿದೆ. ಹಾಗಾದ್ರೇ ಪರಪ್ಪನ ಅಗ್ರಹಾರ ಜೈಲಲ್ಲಿ ನಡೆಯುತ್ತಿರುವಂತ ಕರ್ಮಕಾಂಡ ಮೊದಲೈ ಗೊತ್ತಿತ್ತ ಎಂಬ ಅನುಮಾನಕ್ಕೂ ಕಾರಣವಾಗಿದೆ. ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್, ಜೊತೆಗೆ ರೌಡಿ ಶೀಟರ್ ಗಳು. ಹೀಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯವನ್ನು ಸ್ವೀಕರಿಸುತ್ತ ಕುಳಿತಿರುವಂತ ನಟ ದರ್ಶನ್ ಪೋಟೋ ವೈರಲ್ ಆಗಿದೆ. ಜೊತೆಗೆ ರೌಡಿ ಶೀಟರ್ ಸತ್ಯ ಎಂಬಾತನ ಜೊತೆಗೆ ವೀಡಿಯೋ ಕಾಲ್ ಮಾಡಿದ್ದರ ವೀಡಿಯೋ ಕೂಡ ವೈರಲ್ ಆಗಿತ್ತು. ಓ ಜೈಲಲ್ಲಿಯೂ ಎಲ್ಲಾ ಸೌಲಭ್ಯಗಳು ಸಿಗುತ್ತವೆ. ದುಡ್ಡು ಕೊಟ್ರೆ ರಾಜಾತಿಥ್ಯ ಸಿಗುತ್ತದೆ ಎಂಬುದಾಗಿ ಸಾರ್ವಜನಿಕರು ಮಾತನಾಡಿಕೊಳ್ಳುವಂತಾಗಿದೆ. ಆಗಸ್ಟ್.22ರಂದು ನಡೆದಿದ್ದಂತ ಘಟನೆ, ಈಗ ವೈರಲ್ ಆಗಿದೆ ಎಂಬುದಾಗಿ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಸ್ಪಷ್ಟ ಪಡಿಸಿದ್ದರು. ಆ ಬೆನ್ನಲ್ಲೇ…

Read More

ಗೋಕಾಕ : ಗೆರಿಲ್ಲಾ ಹೋರಾಟಗಾರ ಸಂಗೊಳ್ಳಿರಾಯಣ್ಣ ಬ್ರಿಟೀಷರಿಗೆ ಸಿಂಹಸ್ವಪ್ನ ಆಗಿದ್ದ. ಈಗ ಇನ್ನಷ್ಟು ಕಾಲ ಬದುಕಿದ್ದರೆ ಕಿತ್ತೂರಿನ ಮೇಲೆ ಬ್ರಿಟೀಷರ ಕಣ್ಣುಬೀಳಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಗೋಕಾಕದ ಕಳ್ಳಿಗುದ್ದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ಇಲ್ಲದೇ ಹೋಗಿದ್ದರೆ ಇನ್ನಷ್ಟು ಕಾಲ ಕ್ರಾಂತಿಕಾರಿ ಗೆರಿಲ್ಲಾ ಹೋರಾಟ ಮುಂದುವರೆದು ಬ್ರಿಟೀಷರಿಗೆ ನೀರು ಕುಡಿಸುತ್ತಿದ್ದ ಎಂದರು. ರಾಯಣ್ಣನ ದೇಶಪ್ರೇಮ, ಜನಪ್ರೇಮವನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಸೈನಿಕ ಶಾಲೆ ಆರಂಭಿಸಿದ್ದೇವೆ. ನೀವೆಲ್ಲಾ ಸಂಗೊಳ್ಳಿಗೆ ಭೇಟಿ ನೀಡಿ ಎಂದು ಕರೆ ನೀಡಿದರು. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ, ಮುಖ್ಯಸಚೇತಕ ಅಶೋಕ್ ಪಟ್ಟಣ್, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷರಾದ ಡಾ.ಸಣ್ಣಕ್ಕಿ ಅವರು ಉಪಸ್ಥಿತರಿದ್ದರು. https://kannadanewsnow.com/kannada/bengaluru-power-outages-in-these-areas-on-august-28/ https://kannadanewsnow.com/kannada/indian-railways-recruitment-2019-indian-railways-recruitment-2018-for-14298-vacancies-rrb-recruitment-2024/

Read More

ಗೋಕಾಕ : ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು. ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು. ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು. ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು. ಇಂಥಾ…

Read More

ಬೆಂಗಳೂರು: 20/66/11ಕೆವಿ ಹೆಬ್ಬಾಳ  ಎಂ ಯು ಎಸ್ ಎಸ್ ದಿನಾಂಕ  28.08.2024 ರಂದು 11:00ಗಂಟೆಗಳಿಂದ 16:00ಗಂಟೆಗಳವರೆಗೆ 2*100 MVA ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ  ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 28-08-2024ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಪವರ್ ಕಟ್ ಆಗಲಿದೆ ಎಂದು ಹೇಳಿದೆ. ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾರ್ಟರ್ಸ್,, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟರ್ಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್‌ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ಜೈಲಲ್ಲಿ ರಾಜಾತಿಥ್ಯದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಕೆಲ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ ಅಂತ ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದರು. ಆಗಸ್ಟ್.22ರಂದು ಸಂಜೆ ನಡೆದಿರುವಂತ ನಟ ದರ್ಶನ್ ಗೆ ರಾಜಾತಿಥ್ಯದ ಪೋಟೋಗಳು ತಡವಾಗಿ ಬೆಳಕಿಗೆ ಬಂದಿದ್ದಾವೆ. ಜೈಲಿನಲ್ಲಿ ಮೊಬೈಲ್ ಪೋನ್ ಬಳಕೆ, ಸಿಗರೇಟ್ ಸೇದಿರೋದು, ಕಾಫಿ ಕೊಟ್ಟಿರು ಬಗ್ಗೆ, ಜೊತೆಗೆ ಕುರ್ಚಿಗಳನ್ನು ಯಾರು ಕೊಟ್ಟರು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಮೂರು ಎಫ್ಐಆರ್ ದಾಖಲಾಗಿದೆ. ಮೂರರಲ್ಲೂ ನಟ ದರ್ಶನ್ ಹೆಸರು ಉಲ್ಲೇಖಿಸಲಾಗಿದೆ ಎಂದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಭದ್ರವಾ ವೈಫಲ್ಯವಾಗಿಲ್ಲ. ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂಬುದಾಗಿ ಬಕಾರಾಗೃಹ ಡಿಜಿಪಿ…

Read More