Author: kannadanewsnow09

ಶಿವಮೊಗ್ಗ: ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಆ ಪೊಲೀಸಪ್ಪ ಯಾರು.? ಎಲ್ಲಿ ಘಟನೆ ನಡೆದಿರುವುದು ಎನ್ನುವ ಬಗ್ಗೆ ಮುಂದೆ ಓದಿ. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ, ಕೇಶವಪುರ ಮತ್ತು ಬಟ್ಟೆಮಲ್ಲಪ್ಪ ಭಾಗಕ್ಕೆ ರೌಂಡ್ಸ್ ಹೋಗಿದ್ದಾರೆ. ಈ ವೇಳೆಯಲ್ಲಿ ಓಸಿ, ಮಟ್ಕಾ, ಇಸ್ಪೀಟ್ ಆಡುವವರಿಂದ ಪೋನ್ ಪೇ ಮೂಲಕ ಹಣವನ್ನು ಸ್ವೀಕರಿಸಿದ್ದಾರೆ. ಹೆಚ್.ಸಿ ಪ್ರಕಾಶ್ ಅವರು ಪೋನ್ ಪೇ ಮೂಲಕ ಓಸಿ ದಂಧೆಕೋರರಿಂದ ಲಂಚವಾಗಿ ಪೋನ್ ಪೇ ಮೂಲಕ ಹಣ ಸ್ವೀಕರಿಸಿದಂತ ಸ್ಕ್ರೀನ್ ಶಾಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸೂಕ್ತ ತನಿಖೆಗೆ ಇಲಾಖೆ ಆದೇಶಿಸಿತ್ತು. ಹೊಸನಗರ ಠಾಣೆಯ ಪಿಎಸ್ಐ…

Read More

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಶನಿವಾರ ಏಕೀಕೃತ ಪಿಂಚಣಿ ಯೋಜನೆ (Unified Pension Scheme -UPS) ಅನ್ನು ಪ್ರಾರಂಭಿಸಿದೆ. ಕೇಂದ್ರ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಉಳಿಯಬೇಕೆ ಅಥವಾ ಏಕೀಕೃತ ಪಿಂಚಣಿ ಯೋಜನೆಗೆ ಸೇರಬೇಕೆ ಎಂದು ನಿರ್ಧರಿಸುವ ಹಕ್ಕನ್ನು ಚಲಾಯಿಸುತ್ತಾರೆ. ಅಂತೆಯೇ, ರಾಜ್ಯ ಸರ್ಕಾರಗಳು ಸಹ ಯುಪಿಎಸ್ನ ಈ ಹೊಸ ಮಾಡ್ಯೂಲ್ ಅನ್ನು ಅಳವಡಿಸಿಕೊಳ್ಳಲು ನಿರ್ಧರಿಸಬಹುದು. ಯುಪಿಎಸ್ ಏಪ್ರಿಲ್ 1, 2025 ರಿಂದ ಅನ್ವಯವಾಗಲಿದೆ. 2004 ರಿಂದ ಎನ್ಪಿಎಸ್ ಅಡಿಯಲ್ಲಿ ನಿವೃತ್ತರಾದ ಎಲ್ಲರಿಗೂ ಯುಪಿಎಸ್ ಅನ್ವಯಿಸುತ್ತದೆ. ಯುಪಿಎಸ್ ನ ಪ್ರಮುಖ ಮುಖ್ಯಾಂಶಗಳು ಖಾತರಿಪಡಿಸಿದ ಪಿಂಚಣಿ: ಕನಿಷ್ಠ 25 ವರ್ಷಗಳ ಅರ್ಹತಾ ಸೇವೆಗಾಗಿ ನಿವೃತ್ತಿಗೆ ಮುಂಚಿತವಾಗಿ ಕಳೆದ 12 ತಿಂಗಳುಗಳಲ್ಲಿ ಪಡೆದ ಸರಾಸರಿ ಮೂಲ ವೇತನದ 50% .ಕನಿಷ್ಠ 10 ವರ್ಷಗಳ ಸೇವೆಯವರೆಗೆ ಕಡಿಮೆ ಸೇವಾ ಅವಧಿಗೆ ಪ್ರಮಾಣಾನುಗುಣ. ಭರವಸೆಯ ಕುಟುಂಬ ಪಿಂಚಣಿ: ಉದ್ಯೋಗಿಯ ಮರಣದ ಮೊದಲು ಅವರ ಪಿಂಚಣಿಯ @60% . ಕನಿಷ್ಠ ಪಿಂಚಣಿಯ ಭರವಸೆ: ಕನಿಷ್ಠ 10…

Read More

ಪ್ರತಿ ಮನೆಯವರು ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಎರಡು ಬಾರಿ ನೇತ್ರ ಶುದ್ಧೀಕರಣದ ಆಚರಣೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ನಮ್ಮ ಸುತ್ತ ಎಷ್ಟು ಒಳ್ಳೆಯ ಶಕ್ತಿಗಳಿವೆಯೋ ಅಷ್ಟೇ ಕೆಟ್ಟ ಶಕ್ತಿಗಳೂ ಇವೆ ಎಂಬುದು ನಿಜ. ಆ ಮೂಲಕ ನಮ್ಮ ಪ್ರಗತಿಯ ಬಗ್ಗೆ ಹೊಟ್ಟೆಕಿಚ್ಚುಪಡುವವರ ಆಲೋಚನೆಗಳು ಕಣ್ಣಿಗೆ ರಾಚುತ್ತವೆ ಮತ್ತು ನಮ್ಮ ಸುತ್ತಲಿನ ಚಲನಚಿತ್ರವಾಗುತ್ತವೆ. ಆಗ ನಮ್ಮ ಸೆಳವು ಕಡಿಮೆ ಪರಿಣಾಮಕಾರಿಯಾಗುತ್ತದೆ. ಆಲಸ್ಯ, ನಿದ್ದೆ, ಒಂದೇ ಒಂದು ಕೆಲಸವನ್ನೂ ಸರಿಯಾಗಿ ಮಾಡಲು ಆಗದಿರುವುದು. ಆಕಳಿಕೆ ಆಕಳಿಕೆಯಾಗುತ್ತದೆ. ದೇಹವು ಹೊಡೆದಂತೆ ಕಾಣುತ್ತದೆ. ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ವ್ಯಾಪಾರದಲ್ಲಿ ಕುಸಿತ ಉಂಟಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು: ನಗರದಲ್ಲಿ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಸಂಪಿಗೆಹಳ್ಳಿ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿನ ಖಾಲಿ ಜಾಗದ ಶೆಡ್ ನಲ್ಲಿ ಈ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಖಾಲಿ ಜಾಗದಲ್ಲಿ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿಯ ವೇಳೆಯಲ್ಲಿ ಉಂಟಾದಂತ ಜಗಳ ತಾರಕ್ಕೇರಿದಾಗ ಟೈಲ್ಸ್ ಕೆಲಸ ಮಾಡುತ್ತಿದ್ದಂತ ಪುಷ್ಪರಾಜ್(27) ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಸಂಜೆ 4.30ರ ವೇಳೆಗೆ ಪುಷ್ಪರಾಜ್ ಶವ ಪತ್ತೆಯಾಗಿದ್ದು, ವಿಷಯ ತಿಳಿದು ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-students-of-residential-schools-in-the-state-telescopes-supplied/ https://kannadanewsnow.com/kannada/to-the-attention-of-high-school-students-participate-in-this-quiz-competition-and-win-a-prize-of-40000/ https://kannadanewsnow.com/kannada/applications-invited-for-state-level-bapuji-essay-competition-rs-31000-prize/

Read More

ಬೆಂಗಳೂರು: ರಾಜ್ಯದ ವಸತಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ದೂರದರ್ಶಕ ಪೂರೈಕೆ ಮಾಡಲಾಗುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಅವರು, ವಿದ್ಯಾರ್ಥಿಗಳಲ್ಲಿನ ವಿಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ರಾಜ್ಯದ 833 ವಸತಿ ಶಾಲೆಗಳಿಗೆ ದೂರದರ್ಶಕಗಳನ್ನು ಪೂರೈಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ವಿಜ್ಞಾನವನ್ನು ಚಟುವಟಿಕೆಯ ಮೂಲಕ ಕಲಿಯಲು ಅನುವು ಮಾಡಿಕೊಡುವ ಸ್ಟ್ರೀಮ್‌ ಲ್ಯಾಬ್‌ ಗಳನ್ನು ಪ್ರಾರಂಭಕ್ಕೂ ಯೋಜನೆ ರೂಪಿಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ ಹಾಗೂ ಅರ್ಥ ಮಾಡಿಕೊಳ್ಳುವ ಶಕ್ತಿ ಇನ್ನಷ್ಟು ಮೊನಚಾಗುತ್ತದೆ ಎಂದು ಹೇಳಿದ್ದಾರೆ. ಸೂರ್ಯನ ಅಧ್ಯಯನಕ್ಕೆ ತೆರಳಿರುವ ಆದಿತ್ಯ ಎಲ್‌–1 ಉಪಗ್ರಹದ ಪ್ರತಿಕೃತಿಯನ್ನು ತಾರಾಲಯದ ಆವರಣದಲ್ಲಿ ಅಳವಡಿಸಲಾಗುತ್ತಿದೆ. ಈ ಸಂಬಂಧ ಇಸ್ರೊ ಜೊತೆ ಈಗಾಗಲೇ ತಾರಾಲಯದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ. ಆವರಣದಲ್ಲಿ ಜಾಗ ಸಿದ್ದಗೊಂಡ ಬಳಿಕ ಪ್ರತಿಕೃತಿಯನ್ನು ತಂದು ಅಳವಡಿಸಲಾಗುತ್ತದೆ ಎಂದು…

Read More

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ನಿರ್ಣಾಯಕ ಘಟ್ಟ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 ಲಕ್ಷ (Projected population for 2023-24) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು. ಜೊತೆಗೆ 05 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು…

Read More

ಬೆಂಗಳೂರು: ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನಲೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 26-08-2024 ಸೋಮವಾರದಂದು “ಶ್ರೀ ಕೃಷ್ಣಾ ಜನ್ಮಾಷ್ಟಮಿ ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್ ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ…

Read More

ಹಾವೇರಿ : ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು. ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಅತ್ಯಂತ ಪ್ರಮಾಣಿಕವಾಗಿ ನಿಷ್ಟೆಯಿಂದ ಶ್ರಮವಹಿಸಿ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀಕ್ಷೇತ್ರ ಪುಷ್ಪಗಿರಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಏರ್ಪಡಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ನಾಗೇನಹಳ್ಳಿ ಏತ ನೀರಾವರಿ ಯೋಜನೆಯನ್ನು ಹತ್ತು ಹನ್ನೆರಡು ವರ್ಷಗಳ ಹಿಂದೆ ಮಾಡಿದ್ದೇವು. ನಮ್ಮ ನಾಯಕರಾಗಿದ್ದ ಸಿ.ಎಂ. ಉದಾಸಿಯವರು ಏತ ನೀರಾವರಿ ಯೋಜನೆಗಳನ್ನು ಮಾಡಬೇಕೆಂದು ಹೇಳಿದಾಗ ಹಾನಗಲ್‌ನಲ್ಲಿ ಮೂರು ಏತನೀರಾವರಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಸಿಎಂ ಉದಾಸಿಯವರ ಪ್ರಯತ್ನ, ಶದ್ದೆಯಿಂದ ಮಾಡಿದ್ದೇವೆ. ಅದಕ್ಕೆ ನನ್ನ ಸಂಪೂರ್ಣ ಸಹಕಾರ ಇತ್ತು. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಶೀರ್ವಾದ ಇತ್ತು. ಹೀಗಾಗಿ ಹಾನಗಲ್ ತಾಲೂಕಿನ ಬಹುತೇಕ ಕೆರೆಗಳು ತುಂಬುವಂತಾಗಿದೆ. ಅದೇ ರೀತಿ ಧರ್ಮಾ…

Read More

ಬೆಂಗಳೂರು: ನಗರದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆ ಅನುಮತಿ ಪತ್ರವನ್ನು ಇಲಾಖೆಯಿಂದ ಏಕಗವಾಕ್ಷಿ ಪದ್ದತಿಯಡಿ ಪಡೆಯಲು ಬಿಬಿಎಂಪಿ ವ್ಯಾಪ್ತಿಯಲ್ಲಿ 63 ಏಕಗವಾಕ್ಷಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶೋತ್ವವ ಆಚರಣೆಗಾಗಿ ಆಯಾ ವಲಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಅಧಿಕಾರಿಗಳಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ…

Read More

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) 2024 ರ ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಎಕ್ಸಾಮಿನೇಷನ್ಗಾಗಿ ಟೈರ್ 1 ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಎಸ್ಎಸ್ಸಿ ಸಿಜಿಎಲ್ ನೇಮಕಾತಿ 2024 ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕಾಲ್ ಲೆಟರ್ಗಳನ್ನು ಎಸ್ಎಸ್ಸಿ ssc.nic.in ಅಧಿಕೃತ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಬಹುದು. ಆಯೋಗವು ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 2024 ಪರೀಕ್ಷೆಯನ್ನು ಸೆಪ್ಟೆಂಬರ್ 9 ರಿಂದ 24 ರವರೆಗೆ ನಡೆಸಲಿದೆ. ಇದಕ್ಕಾಗಿ ಪ್ರವೇಶ ಪತ್ರಗಳನ್ನು ಎಸ್ಎಸ್ಸಿಯ ಪ್ರಾದೇಶಿಕ ಅಧಿಕೃತ ವೆಬ್ಸೈಟ್ಗಳಿಗೆ ಅಪ್ಲೋಡ್ ಮಾಡಲಾಗಿದೆ. ಅಭ್ಯರ್ಥಿಗಳು ಎಸ್ಎಸ್ಸಿ ಸಿಜಿಎಲ್ 2024 ಶ್ರೇಣಿ 1 ಪ್ರವೇಶ ಪತ್ರವನ್ನು ssc.nic.in ಅಧಿಕೃತ ವೆಬ್ಸೈಟ್ ನಿಂದ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. ಎಸ್ಎಸ್ಸಿ ಸಿಜಿಎಲ್ ಟೈಯರ್ 1 ಅಡ್ಮಿಟ್ ಕಾರ್ಡ್ 2024 ಡೌನ್ಲೋಡ್ ಮಾಡುವುದು ಹೇಗೆ? ಎಸ್ಎಸ್ಸಿಯ ಪ್ರಾದೇಶಿಕ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಎಸ್ಎಸ್ಸಿ ಸಿಜಿಎಲ್ 2024 ಟೈರ್ 1 ಪ್ರವೇಶ ಪತ್ರಕ್ಕೆ ಲಿಂಕ್ ಅನ್ನು ನ್ಯಾವಿಗೇಟ್ ಮಾಡಿ ಇದು ನಿಮ್ಮನ್ನು…

Read More