Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಯಲಹಂಕಾ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 11:00 ಯಿಂದ ಸಂಜೆ 04:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕೆಎಂಎಫ್, ವೈಎನ್ಕೆ ನ್ಯೂ ಟೌನ್ 208, 407, ‘ಬಿ’ ಸೆಕ್ಟರ್, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ ಇತ್ಯಾದಿ.ಬಾಗಲೂರು ಕ್ರಾಸ್, ವೆಂಕಟಾಲ್, ನಿಟ್ಟೆ ಕಾಲೇಜು, ಬಿಎಸ್ಎಫ್, ಐಎಎಫ್, ಇಂಟರ್ನ್ಯಾಶನಲ್ ಸ್ಕೂಲ್, ಕಾಗೆನ್ಅಡ್ಯಾನ್ಕಾಲೇಜ್, ಕಾಗೆನ್ಅಡ್ಯಾನ್ಕಾಲೇಜ್, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಖಾನಗರ ಇತ್ಯಾದಿ.ಪೂರ್ವಂಕರ RMZ ಗ್ಯಾಲೇರಿಯಾ. ಮತ್ತು ಸುತ್ತಮುತ್ತಲಿನ ಪ್ರದೇಶಲ್ಲಿ ಕರೆಂಟ್ ಇರೋದಿಲ್ಲ. 66/11ಕೆವಿ ಅಬ್ಬಿಗೆರೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.11.2025 (ಭಾನುವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕಮ್ಮಗೊಂಡನಹಳ್ಳಿ, ರಾಘವೇಂದ್ರ ಬಡಾವಣೆ, ಲಕ್ಷೀಪುರ, ವಡೇರಹಳ್ಳಿ, ಅಬ್ಬಿಗೆರೆ ಇಂಡಸ್ಟ್ರಿಯಲ್ ಎರಿಯ, ಸಿಂಗಾಪುರ, ಅಬ್ಬಿಗೆರೆ, ಪೈಪ್ ಲೈನ್ ರೋಡ್,ನಿಸರ್ಗ ಬಡಾವಣೆ, ಕೆಂಪೆಗೌಡ…
ಮೈಸೂರು: ಮುಂದಿನ ಎರಡೂವರೆ ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರಲಿದ್ದೇನೆ. ಬಜೆಟ್ ಕೂಡ ಮಂಡಿಸುತ್ತೇನೆ. ನಿಮಗೆ ಯಾವುದೇ ಅನುಮಾನ ಬೇಡ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ಇನ್ನೂ ಎರಡೂವರೆ ವರ್ಷ ಸಿಎಂ ಆಗಿರಲಿದ್ದೇನ. ಎರಡು ಬಜೆಟ್ ಕೂಡ ಮಂಡಿಸುತ್ತೇನೆ. ಮತ್ತೆ ಮತ್ತೆ ಸಿಎಂ ಬದಲಾವಣೆ ಬಗ್ಗೆ ಯಾಕೆ ಕೇಳುತ್ತೀರಿ. ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ್ಯಾ ಎಂಬುದಾಗಿ ಪ್ರಶ್ನಿಸಿದರು. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆಯ ಸೇರಿ ಎಲ್ಲದರ ಬಗ್ಗೆಯೂ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಮಾಡುತ್ತದೆ. ಅದರ ಬಗ್ಗೆ ಇಲ್ಲಿಯವರೆಗೆ ಯಾವುದೇ ಮಾತನಾಡಿದ್ಯಾ? ಇಲ್ಲ ತಾನೇ? ಹಾಗಿದ್ದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮತ್ತೆ ಮತ್ತೆ ಯಾಕೆ ಪ್ರಶ್ನೆ ಕೇಳುತ್ತೀರಿ ಎಂದರು.
ಬೆಂಗಳೂರು: ಬಾಲ್ಯ ವಿವಾಹ ತಡೆಗಟ್ಟಲು ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ. 18 ವರ್ಷ ಮೀರದೆ ನಿಶ್ಚಿತಾರ್ಥ ಮಾಡಿದರೂ ಶಿಕ್ಷೆಗೆ ಗುರಿ ಪಡಿಸಲಾಗುವುದು. ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತಿಗಳಿಗೆ ಇಲಾಖೆ ವತಿಯಿಂದ 25 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು ಎಂದ ಸಚಿವರು, ಮಕ್ಕಳ ಹಾಗೂ ಮಹಿಳೆಯರ ರಕ್ಷಣೆಗಾಗಿಯೇ ಅಕ್ಕ ಪಡೆಯನ್ನು ಆರಂಭಿಸಲಾಗುತ್ತಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ ಎಂದರು. ಅಧಿಕಾರ ಎಂಬುದು ಶಾಶ್ವತ ಅಲ್ಲ, ಅದು ಸಿಗುವ ಅವಕಾಶ. ಅದನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಕೆಲಸಗಳನ್ನು ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂಸತ್ -25 ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರೊಡನೆ ಮಕ್ಕಳ ಸಮಾಲೋಚನೆ ಎಂಬ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಪ್ರತಿಯೊಬ್ಬರು ಜೀವನದಲ್ಲಿ ತಮ್ಮದೇ ಆದ ಗುರಿ ಇಟ್ಟು ಕೊಳ್ಳಬೇಕು ಎಂದು ಕರೆ ನೀಡಿದರು. ನಾವು…
ನವದೆಹಲಿ: ಮಧ್ಯ ದೆಹಲಿಯ ಪ್ರಮುಖ ಶಾಲೆಯೊಂದರ 10 ನೇ ತರಗತಿಯ 16 ವರ್ಷದ ವಿದ್ಯಾರ್ಥಿ ಮಂಗಳವಾರ ಮಧ್ಯಾಹ್ನ ಪಶ್ಚಿಮ ದೆಹಲಿಯ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡನು. ಪೊಲೀಸರು ವಶಪಡಿಸಿಕೊಂಡ ಟಿಪ್ಪಣಿಯಲ್ಲಿ, ತನ್ನ ಶಿಕ್ಷಕರು ಮತ್ತು ಶಾಲಾ ಪ್ರಾಂಶುಪಾಲರು ತನ್ನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವನು ಸಾಯುವ ಸಮಯದಲ್ಲಿ ಇನ್ನೂ ಶಾಲಾ ಸಮವಸ್ತ್ರದಲ್ಲಿದ್ದನು. ಈ ವಿಷಯ ತಿಳಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಪಶ್ಚಿಮ ದೆಹಲಿಯ ಮೆಟ್ರೋ ನಿಲ್ದಾಣದ ಕಟ್ಟಡದಿಂದ ಬಾಲಕನೊಬ್ಬ ಬಿದ್ದಿದ್ದಾನೆ ಎಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ನಿಯಂತ್ರಣ ಕೊಠಡಿಗೆ ಕರೆ ಬಂದಿದೆ ಎಂದು ಹೇಳಿದರು. ತಂಡವೊಂದು ಸ್ಥಳಕ್ಕೆ ತಲುಪಿದಾಗ, ಬಾಲಕನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವನು ತಲುಪುವಾಗಲೇ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು. ಅವನ ಬಳಿ ಒಂದು ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಅವನ ಶಾಲಾ ಶಿಕ್ಷಕರು ಅವನೊಂದಿಗೆ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಯಾವುದೇ ವಿದ್ಯಾರ್ಥಿಯನ್ನು ತಾನು ಹೇಗೆ ನಡೆಸಿಕೊಳ್ಳಬೇಕೆಂದು ಅವನು…
ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಹೆಚ್ ಕೆ) ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ ಕೆ ಹಾಗೂ ನಾನ್- ಹೆಚ್ ಕೆ – ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.…
ಬೆಂಗಳೂರು: ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಎದುರಿಸುತ್ತಿರುವ ಟ್ರಾಫಿಕ್, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ನಿಮ್ಮ ಬಳಿಕ ಉತ್ತಮ ಆಲೋಚನೆಗಳಿದ್ದರೆ ಅಂತಹ ಸ್ಟಾರ್ಟ್ಅಪ್ಗಳಿಂದ ವಿಶ್ವ ಆರ್ಥಿಕ ವೇದಿಕೆಯು “ಯೆಸ್ ಬೆಂಗಳೂರು ಅರ್ಬನ್ ಇನ್ನೋವೇಶನ್ ಚಾಲೆಂಜ್” ಅಡಿಯಲ್ಲಿ ಅರ್ಜಿ ಆಹ್ವಾನಿಸಿದೆ. ಗಾರ್ಡನ್ ಸಿಟಿ ಬೆಂಗಳೂರು ವಾತಾವರಣ ಸೇರಿದಂತೆ ಹಲವು ವಿಷಯಗಳಲ್ಲಿ ಮೊದಲ ಸ್ಥಾನದಲ್ಲಿದೆ, ಆದರೆ, ಕೆಲ ಸಮಸ್ಯೆಗಳಿಂದ ಬೆಂಗಳೂರು ತನ್ನ ಸೌಂದರ್ಯ ಕಳೆದುಕೊಳ್ಳುತ್ತಿದೆ. ಹೀಗಾಗಿ ಪ್ರಸ್ತುತ ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸುವ ಆಲೋಚನೆ ಅಥವಾ ಐಡಿಯಾಗಳನ್ನು ಸ್ಟಾರ್ಟ್ಅಪ್ಗಳ https://uplink.weforum.org/uplink/s/uplink-issue/a00TE00000IOEHIYA5/yesbengaluru-urban-innovation-challenge?activeTab=Roadblocks ಈ ವೆಬ್ಸೈಟ್ಗೆ ಭೇಟಿ ನೀಡಿ ಹಂಚಿಕೊಳ್ಳಬಹುದು. ಆಯ್ಕೆಯಾಗುವ ಸ್ಟಾರ್ಟ್ಅಪ್ಗಳಿಗೆ 25 ಲಕ್ಷದವರೆಗೆ ಬಹುಮಾನ ಗೆಲ್ಲುವ ಅವಕಾಶವಿದೆ. ನವೆಂಬರ್ ೨೪ರೊಳಗೆ ತಮ್ಮ ನಾವಿನ್ಯತೆಯನ್ನು ಹಂಚಿಕೊಳ್ಳಲು ಅವಕಾಶವಿದೆ. ಆಯ್ಕೆಯಾದ ನಾವೀನ್ಯಕಾರರನ್ನು 2026 ರ ಆರಂಭದಲ್ಲಿ ಘೋಷಿಸಲಾಗುವುದು. ಬೆಂಗಳೂರು ಏಕೆ? ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಬೆಂಗಳೂರು, ಅದರ ದಿಟ್ಟತನ, ಅಭಿವೃದ್ಧಿ ದೃಷ್ಟಿಕೋನ, ಅಭಿವೃದ್ಧಿ ಹೊಂದುತ್ತಿರುವ ಐಟಿ ವಲಯ ಮತ್ತು ಸ್ಟಾರ್ಟ್-ಅಪ್…
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ ನಿರ್ವಾಹಕರು ಶಕ್ತಿ ಯೋಜನೆ ದುರುಪಯೋಗ ಮಾಡುತ್ತಿರೋದಾಗಿ ಹೇಳಲಾಗುತ್ತಿತ್ತು. ಹೀಗಾಗಿ ಶಕ್ತಿ ಯೋಜನೆಯ ದುರುಪಯೋಗ ತಡೆಯಲು ನಿಗಮವು ಮಹತ್ವದ ಕ್ರಮ ವಹಿಸಿದೆ. ಪುರುಷ ಪ್ರಯಾಣಿಕರಿಗೆ ಮತ್ತು ಅನ್ಯ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಉಚಿತ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುವವರ ವಿರುದ್ಧ ಮುಲಾಜಿಲ್ಲದೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಸಂಬಂಧ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಮಾರ್ಪಾಡು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ವಾಹನದಲ್ಲಿ ಪ್ರಯಾಣಿಕರ ಸಂಖ್ಯೆ 20ಕ್ಕಿಂತ ಹೆಚ್ಚು ಇರುವಾಗ 1 ಮಹಿಳಾ ಶಕ್ತಿ ಯೋಜನೆಯ ಉಚಿತ ಚೀಟಿಯನ್ನು ಅನಧಿಕೃತವಾಗಿ ವಿತರಿಸಿದ್ದಲ್ಲಿ, ಇಳಿಯುವ ಪ್ರಯಾಣಿಕರ ತನಿಖೆಯಲ್ಲಿ 1 ಮಹಿಳಾ ಶಕ್ತಿ ಯೋಜನೆಯ ಉಚಿತ ಚೀಟಿಯನ್ನು ಅನಧಿಕೃತವಾಗಿ ವಿತರಿಸಿದ್ದಲ್ಲಿ ಅದನ್ನು ಸಾಮಾನ್ಯ ಪ್ರಕಣವೆಂದು ಪರಿಗಣಿಸಲಾಗುತ್ತದೆ. ಪ್ರಯಾಣಿಕರಿಂದ ದಂಡ ವಸೂಲಿ ಮಾಡದೇ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ. ವಾಹನದಲ್ಲಿ ಪ್ರಯಾಣಿಕರ ಸಂಖ್ಯೆ 20 ಮತ್ತು ಅದಕ್ಕಿಂತ ಕಡಿಮೆ ಇರುವಾಗ 1 ಶಕ್ತಿ ಯೋಜನೆ ಉಚಿತ ಚೀಟಿಯನ್ನು ಅನಧಿಕೃತವಾಗಿ ವಿತರಿಸಿದಲ್ಲಿ,…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವಂತ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೂ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯಪತ್ರಿಕೆ ಹೊರಡಿಸಲಾಗಿದೆ. ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಅಧಿಸೂಚನೆ ಹೊರಡಿಸುವ ಸಂಬಂಧ ಚರ್ಚಿಸಿ ವರದಿ ಸಲ್ಲಿಸಲು ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು, ತಜ್ಞವೈದ್ಯರು, ಕಾರ್ಮಿಕ…
ಮಂಡ್ಯ : ಅಯ್ಯಪ್ಪ ಮಾಲಾದಾರಿಗಳ ಮಿನಿ ಬಸ್ ಹಾಗೂ ಗ್ಯಾಸ್ ಲಾರಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಚಾಲಕ ಹಾಗೂ ಇಬ್ಬರು ಮಾಲಾದಾರಿಗಳು ಗಾಯಗೊಂಡಿರುವ ಘಟನೆ ಮದ್ದೂರು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎಲಿವೇಟೆಡ್ ರಸ್ತೆಯಲ್ಲಿ ಗುರುವಾರ ಸಂಜೆ ಜರುಗಿದೆ. ಬೆಂಗಳೂರಿನ ಕುಂಬಳಗೂಡುವಿನಿಂದ 22 ಮಂದಿ ಖಾಸಗಿ ಮಿನಿ ಬಸ್ ನಲ್ಲಿ ಶಬರಿಮಲೆ ಅಯ್ಯಪ್ಪ ಯಾತ್ರೆಗೆ ತೆರಳುತ್ತಿದ್ದಾಗ ಮದ್ದೂರು ನಗರದ ಕೊಲ್ಲಿ ವೃತ್ತದ ಮೇಲ್ಬಾಗದ ಎಲಿವೇಟೆಡ್ ರಸ್ತೆಯಲ್ಲಿ ಬಸ್ ಪಂಚರ್ ಆಗಿದೆ. ಬಸ್ ನ ಟೈರ್ ಅನ್ನು ಬದಲಾಯಿಸಲು ಚಾಲಕನಿಗೆ ಇಬ್ಬರು ಮಾಲಾದಾರಿಗಳು ಸಹಾಯ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದ ಗ್ಯಾಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಬಸ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಮತ್ತು ಇಬ್ಬರು ಮಾಲಾದಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಳಿದವರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಮದ್ದೂರು ಸಂಚಾರ ಪೊಲೀಸರು ವಾಹನ ಸವಾರರ…














