Author: kannadanewsnow09

ಬೆಂಗಳೂರು: ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದ್ದು, ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲ್ಲೂಕುಗಳಲ್ಲಿ ಪ್ರತಿ ತಾಲ್ಲೂಕಿಗೆ ಒಬ್ಬರಂತೆ ‘ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ. ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ. ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್‌ ಆರಂಭಿಸಿರುವ ಪ್ರಮುಖ ಕಾರಣವಾಗಿದೆ. ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನದಲ್ಲಿ ತೊಡಗಿಕೊಂಡು, ಸ್ಥಳೀಯ ಅಡಳಿತ ಮತ್ತು…

Read More

ಬೆಂಗಳೂರು: ನಿನ್ನೆಯಷ್ಟೇ 34 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಿ ಸಿಎಂ ಸಿದ್ಧರಾಮಯ್ಯ ಅಧಿಕೃತ ಆದೇಶ ಮಾಡಿದ್ದರು. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ. ಕೊಡೋದಾದ್ರೇ ಸಚಿವ ಸ್ಥಾನವನ್ನೇ ನೀಡುವಂತೆ ಶಾಸಕರೊಬ್ಬರು ಆಗ್ರಹಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬಾಗೇಪಲ್ಲಿ ಶಾಸಕ ಎಸ್ ಎನ್ ಸುಬ್ಬಾ ರೆಡ್ಡಿಯವರು ನನಗೆ ನಿಗಮ ಮಂಡಳಿ ಸ್ಥಾನ ನೀಡಿರೋದಕ್ಕೆ ತೃಪ್ತಿಯಿಲ್ಲ. ನಾನು ಜನಸೇವೆಯನ್ನು ಬಯಸೋ ಹುದ್ದೆಯೇ ಹೊರತು ಇಂತಹ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಅಧ್ಯಕ್ಷ ಸ್ಥಾವನ್ನಲ್ಲ ಎಂಬುದಾಗಿ ಅಸಮಾಧನ ಹೊರ ಹಾಕಿದ್ದಾರೆ. ನಾನು ಈಗಾಗಲೇ ಹಲವು ಬಾರಿ ಕಾಂಗ್ರೆಸ್ ವರಿಷ್ಠರನ್ನು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ನನ್ನ ಬೇಡಿಕೆ ಇಟ್ಟಿದ್ದೇನೆ. ಕೊಡುವುದಾದ್ರೇ ಸಚಿವ ಸ್ಥಾನವನ್ನೇ ಕೊಡುವಂತೆಯೂ ಕೇಳಿದ್ದೇನೆ. ಅದಕ್ಕೆ ಒಪ್ಪಿಗೆ ಕೂಡ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಆ ನಿಟ್ಟಿನಲ್ಲಿ ಕ್ರಮ ವಹಿಸೋ ನಿರೀಕ್ಷೆಯಿದೆ ಎಂಬುದಾಗಿ ತಿಳಿಸಿದರು.…

Read More

ಉತ್ತರ ಕನ್ನಡ: ಜಿಲ್ಲೆಯಲ್ಲಿ ಯುವಕನೋರ್ವ ರಾಮ ಮಂದಿರದ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದನು. ಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟೋದಾಗಿ ಹಾಕಿದ್ದ ಪೋಸ್ಟ್ ವೈರಲ್ ಆಗಿತ್ತು. ಈ ಸಂಬಂಧ ದಾಖಲಾದಂತ ದೂರಿನ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ರಾಜೀವನಗರದ ನಿವಾಸಿಯಾಗಿದ್ದಂತ ಶಕೀಲ್ ಅಹ್ಮದ್ (23) ಎಂಬಾತ ಇನ್ ಸ್ಟಾಗ್ರಾಂನಲ್ಲಿ ರಾಮಮಂದಿರದ ವಿರುದ್ಧ ಪೋಸ್ಟ್ ಹಾಕಿದ್ದನು. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಶಿರಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶಕೀಲ್ ಹಾಕಿದ್ದಂತ ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ರಾಮಮಂದಿರ ಕೆಡವಿ ಬಾಬ್ರಿ ಮಸೀದಿ ಪುನರ್ ನಿರ್ಮಿಸೋದಾಗಿ ಹೇಳಿದ್ದನು. ಹೀಗಾಗಿ ಆತನ ವಿರುದ್ಧ ದೂರು ದಾಖಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಶಕೀಲ್ ಅಹ್ಮದ್ ನನ್ನು ಶಿರಸಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ರಾಮಮಂದಿರದ ವಿರುದ್ಧ ಪೋಸ್ಟ್ ಹಾಕಿದಂತ ಯುವಕ ಜೈಲು ಪಾಲು ಆಗುವಂತೆ ಆಗಿದೆ. https://kannadanewsnow.com/kannada/2021-22-higher-education/ https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/

Read More

ನವದೆಹಲಿ: ಮುಂಬರುವ 2024 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ನೇಮಿಸಿದೆ. ಬಿಹಾರಕ್ಕೆ ವಿನೋದ್ ತಾವ್ಡೆ, ಜಾರ್ಖಂಡ್ಗೆ ಲಕ್ಷ್ಮೀಕಾಂತ್ ಬಾಜಪೇಯಿ ಮತ್ತು ಹರಿಯಾಣಕ್ಕೆ ವಿಪ್ಲವ್ ಕುಮಾರ್ ದೇವ್ ಅವರನ್ನು ಬಿಜೆಪಿ ನೇಮಿಸಿದೆ. https://twitter.com/ANI/status/1751150767984251230 ಲೋಕಸಭಾ ಚುನಾವಣೆ 2024: 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿ ನಾಗರಿಕರು ಮತ ಚಲಾಯಿಸಲು ಅರ್ಹರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ 47 ಕೋಟಿ ಮಹಿಳೆಯರು ಸೇರಿದಂತೆ 96 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ, ಇದಕ್ಕಾಗಿ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಮತ ಚಲಾಯಿಸಲು ಅರ್ಹರಾದವರಲ್ಲಿ 1.73 ಕೋಟಿಗೂ ಹೆಚ್ಚು ಜನರು 18 ರಿಂದ 19 ವರ್ಷ ವಯಸ್ಸಿನವರು. 18 ನೇ ಲೋಕಸಭೆಯ ಸದಸ್ಯರನ್ನು ಆಯ್ಕೆ ಮಾಡಲು ಸಂಸದೀಯ ಚುನಾವಣೆಗಳನ್ನು ಸುಗಮವಾಗಿ ನಡೆಸಲು 1.5 ಕೋಟಿ ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.…

Read More

ಚಾಮರಾಜನಗರ: ಜಿಲ್ಲೆಯಲ್ಲಿ ಇಂದು ನಡೆದಂತ ಕನಕ ಜಯಂತಿ ಕಾರ್ಯಕ್ರಮದಲ್ಲಿ ಹೈಡ್ರಾಮಾವೇ ನಡೆದಿದೆ. ಯತೀಂದ್ರ ಸಿದ್ಧರಾಮಯ್ಯ ಅವರನ್ನು ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿರೋದಾಗಿ ತಿಳಿದು ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ಕನಕ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಯತೀಂದ್ರ ಸಿದ್ಧರಾಮಯ್ಯ ಮಾತನಾಡುತ್ತಿದ್ದಾಗ, ವೇದಿಕೆಯಲ್ಲಿ ಹೈಡ್ರಾಮಾವೇ ನಡೆದಿದೆ. ವೇದಿಕೆಯ ಬಳಿಗೆ ಬಂದಂತ ಯುವಕನೋರ್ವ, ಯತೀಂದ್ರ ಸಿದ್ಧರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸ್ಥಳದಲ್ಲಿದ್ದಂತ ಕಾರ್ಯಕರ್ತರು, ಯತೀಂದ್ರ ಅಭಿಮಾನಿಗಳು ಆತನನ್ನು ಹಿಡಿಯೋ ಮುನ್ನಲವೇ ಬೈಕ್ ಏರಿ ಅಲ್ಲಿಂದ ಪರಾರಿಯಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/2021-22-higher-education/ https://kannadanewsnow.com/kannada/lok-sabha-elections-2019-bjp-appoints-in-charges-for-28-constituencies-in-karnataka/

Read More

ಬೆಂಗಳೂರು: ಕರ್ನಾಟಕ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಲೋಕಸಭಾ ಚನಾವಣೆಗೂ ಮುನ್ನವೇ ರಾಜ್ಯದ 28 ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಬಿಜೆಪಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮುಂಬರುವಂತ ಲೋಕಸಭಾ ಚುನಾವಣೆಗೆ ತಯಾರಿ ನಡೆಸೋದಕ್ಕಾಗಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಅದರ ಭಾಗವಾಗಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಲಾಗಿದೆ ಎಂದಿದೆ. ಈಗಾಗಲೇ ಕರ್ನಾಟಕ ರಾಜ್ಯ ಚುನಾವಣಾ ಉಸ್ತುವಾರಿಗಳನ್ನಾಗಿ ಬಿಜೆಪಿ ಹೈಕಮಾಂಡ್ ನಿಂದ ರಾಧಾ ಮೋಹನ್ ದಾಸ್ ಅಗರ್ವಾಲ್ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿಯನ್ನು ನಿಯೋಜಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಹೀಗಿದೆ 28 ಕ್ಷೇತ್ರಗಳಿಗೆ ನೇಮಕ ಮಾಡಲಾದಂತೆ ಉಸ್ತುವಾರಿಗಳ ಪಟ್ಟಿ ಮೈಸೂರು – ಡಾ.ಸಿಎನ್ ಅಶ್ವತ್ಥನಾರಾಯಣ ಚಾಮರಾಜನಗರ – ಎನ್ ವಿ ಪಣಿಶ್ ಮಂಡ್ಯ – ಸುನೀಲ್ ಸುಬ್ರಹ್ಮಣಿ ಹಾಸನ – ಎಂ.ಕೆ ಪ್ರಾಣೇಶ್ ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ್…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳೋದಕ್ಕಾಗಿ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ ನೀಡಲಾಗುವಂತ ಸಹಾಯಧನದ ಮೊತ್ತವನ್ನು 4 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿತ್ತು ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಸ್ವಾಲಂಬಿ ಸಾರಥಿ ಯೋಜನೆಯಡಿ ನಿರುದ್ಯೋಗಿ ಯುವಕ, ಯುವತಿಯರು ಸರಕು ವಾಹನ, ಟ್ಯಾಕ್ಸಿ ಖರೀದಿಸೋದಕ್ಕೆ ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದೆ. ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ, ಯುವತಿಯರಿಗೆ ವಾಣಿಜ್ಯ ಉದ್ದೇಶಕ್ಕಾಗಿ ನಾಲ್ಕು ಚಕ್ರದ ವಾಹನ ಖರೀದಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ ಎಂದು ತಿಳಿಸಿದೆ. ಈ ಮೊದಲು 3.50 ಲಕ್ಷ ರೂ ಸಹಾಯಧನವನ್ನು ಸ್ವಾವಲಂಬಿ ಸಾರಥಿ ಯೋಜನೆಯಡಿ ನೀಡಲಾಗುತ್ತಿತ್ತು. 2023-24ನೇ ಸಾಲಿನಿಂದ 4 ಲಕ್ಷ ರೂಗಳಿಗೆ ಹೆಚ್ಚಿಸಲಾಗಿದೆ ಅಂತ ತಿಳಿಸಿದೆ. https://kannadanewsnow.com/kannada/australian-open-2024-aryna-sabalenka-wins-back-to-back-titles-in-melbourne/ https://kannadanewsnow.com/kannada/bank-holidays-in-february-2024-bank-customers-note-here-is-the-list-of-bank-holidays-for-the-month-of-february/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಶನಿವಾರ ನಡೆದ ಆಸ್ಟ್ರೇಲಿಯನ್ ಓಪನ್ ( Australian Open 2024 ) ಫೈನಲ್ನಲ್ಲಿ ಜೆಂಗ್ ಕ್ವಿನ್ವೆನ್ ಅವರನ್ನು ಸೋಲಿಸುವ ಮೂಲಕ ಆರ್ನಾ ಸಬಲೆಂಕಾ ( Aryna Sabalenka ) ತಮ್ಮ ಎರಡನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದರು. ವಿಕ್ಟೋರಿಯಾ ಅಜರೆಂಕಾ ಬಳಿಕ 2013ರ ಬಳಿಕ ಮೆಲ್ಬೋರ್ನ್ನಲ್ಲಿ ಸತತ ಪ್ರಶಸ್ತಿಗಳನ್ನು ಗೆದ್ದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಸಬಲೆಂಕಾ ಪಾತ್ರರಾಗಿದ್ದಾರೆ. ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಸಬಲೆಂಕಾ 6-3, 6-2 ಸೆಟ್ ಗಳಿಂದ ನೇರ ಗೆಲುವು ಸಾಧಿಸಲು ಕೇವಲ ಒಂದು ಗಂಟೆ 16 ನಿಮಿಷಗಳು ಬೇಕಾಯಿತು. ಒಂದು ಸೆಟ್ ಅನ್ನು ಕಳೆದುಕೊಳ್ಳದೆ ಹದಿನೈದು ದಿನಗಳ ಕಾಲ ಹೋದ ಬೆಲಾರಸ್ ಆಟಗಾರನಿಗೆ ಇದು ಸಮಗ್ರ ಎರಡು ವಾರಗಳನ್ನು ಪೂರ್ಣಗೊಳಿಸಿತು. ಚೀನಾದ 12ನೇ ಶ್ರೇಯಾಂಕಿತ ಕ್ವಿನ್ವೆನ್ ತಮ್ಮ ಚೊಚ್ಚಲ ಪ್ರಮುಖ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದರು. https://kannadanewsnow.com/kannada/bank-holidays-in-february-2024-bank-customers-note-here-is-the-list-of-bank-holidays-for-the-month-of-february/ https://kannadanewsnow.com/kannada/2021-22-higher-education/

Read More

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಬಿಜೆಪಿಯಿಂದ ಭರ್ಜರಿ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ನಿನ್ನೆಯಷ್ಟೇ ಕಾಂಗ್ರೆಸ್ ನಿಂದ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿತ್ತು. ಈ ಬೆನ್ನಲ್ಲೇ ಬಿಜೆಪಿಯಿಂದ ರಾಜ್ಯ ಉಸ್ತುವಾರಿಗಳನ್ನು ಮಾಡಿ ನೇಮಕ ಮಾಡಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದ್ದು, ಲೋಕಸಭಾ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ. ಅದರ ಸಲುವಾಗಿ ರಾಜ್ಯ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ. ಇನ್ನೂ ವಿವಿಧ ರಾಜ್ಯಗಳಿಗೆ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿದಂತೆ ಕರ್ನಾಟಕ ಉಸ್ತುವಾರಿಗಳಾಗಿ ರಾಧಾ ಮೋಹನ್ ದಾಸ್ ಹಾಗೂ ಸುಧಾಕರರೆಡ್ಡಿ ನೇಮಕ ಮಾಡಲಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಮಹತ್ವದ ಹೊಣೆಗಾರಿಕೆಯನ್ನು ನೀಡಲಾಗಿದೆ. https://kannadanewsnow.com/kannada/bank-holidays-in-february-2024-bank-customers-note-here-is-the-list-of-bank-holidays-for-the-month-of-february/ https://kannadanewsnow.com/kannada/bihar-political-development-nitish-kumar-likely-to-resign-as-bihar-cm-at-7-pm-today/

Read More

ಬಿಹಾರ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಉಂಟಾಗಿದೆ. ಇಂದು ಸಂಜೆ 7 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿರುವಂತ ನಿತೀಶ್ ಕುಮಾರ್ ಅವರು, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಸಂಜೆ 7 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿರುವಂತ ನಿತೀಶ್ ಕುಮಾರ್, ನಾಳೆ ಮತ್ತೆ ಜೆಡಿಯು ಹಾಗೂ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸೋ ಸಾಧಅಯತೆ ಇದೆ. ಈಗಾಗಲೇ ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವಂತ ನಿತೀಶ್ ಕುಮಾರ್, ಈಗ ಜೆಡಿಯು ಹಾಗೂ ಬಿಜೆಪಿಯೊಂದಿಗೆ ಸರ್ಕಾರ ರಚಿಸಿ, ಸಿಎಂ ಪಟ್ಟಕ್ಕೆ ಏರೋ ಎಲ್ಲಾ ಸಾಧ್ಯತೆ ಇದೆ. ಆ ಬಗ್ಗೆ ಕೆಲವೇ ಕ್ಷಣಗಳಲ್ಲಿ ಅಂತಿಮ ಅಧಿಕೃತ ಮಾಹಿತಿ ಹೊರ ಬೀಳಲಿದೆ. https://kannadanewsnow.com/kannada/pg-owners-note-adherence-to-these-guidelines-is-mandatory-warns-bengaluru-police/ https://kannadanewsnow.com/kannada/need-to-be-active-to-stay-mentally-and-physically-healthy-siddaramaiah/

Read More