Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪಾಲ್ಗೊಂಡು, ಗೆಲ್ಲುವಂತ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನವಾಗಿ 40,000 ಸಿಗಲಿದೆ. – ಸ್ಪರ್ಧೆಯಲ್ಲಿ ಬ್ಲಾಕ್ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. – ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ ವಿತರಿಸಲಾಗುತ್ತದೆ. – ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನವಿದೆ. ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು…
ಪುಣೆ: ಪ್ರತಿಕೂಲ ಹವಾಮಾನದಿಂದಾಗಿ ಪುಣೆ ಜಿಲ್ಲೆಯ ಪೌಡ್ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದೆ. ವಿಮಾನವು ಮುಂಬೈನಿಂದ ಹೈದರಾಬಾದ್ಗೆ ಹೋಗುತ್ತಿತ್ತು, ಹೆಲಿಕಾಪ್ಟರ್ನಲ್ಲಿ 4 ಜನರು ಪ್ರಯಾಣಿಸುತ್ತಿದ್ದರು. ಈ ಬಗ್ಗೆ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಲಾಗುತ್ತಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ. https://twitter.com/ANI/status/1827280692754997747 ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರಲ್ಲಿ ಕ್ಯಾಪ್ಟನ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರ ಸ್ಥಿತಿ ಸ್ಥಿರವಾಗಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್ಪಿ ಪಂಕಜ್ ದೇಶ್ಮುಖ್ ತಿಳಿಸಿದ್ದಾರೆ. https://twitter.com/ANI/status/1827285418292752793 https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/ https://kannadanewsnow.com/kannada/india-gifts-four-bhishma-cubes-to-ukraine-bhishm-cubes/
ಬೆಂಗಳೂರು: ನಿಗದಿಯಂತೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಗಳು ನಡೆಯಲಿದ್ದಾವೆ. ಆದರೇ ಕೃಷ್ಣ ಜನ್ಮಾಷ್ಟಮಿಯಂದು ನಿಗದಿ ಪಡಿಸಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮಾತ್ರವೇ ಬದಲಾವಣೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು. ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಂದಹಾಗೇ ಆಗಸ್ಟ್.27ರಿಂದ ಕೆಪಿಎಸ್ಸಿ ಪರೀಕ್ಷೆಗಳು ಆರಂಭಗೊಳ್ಳಲಿದ್ದಾವೆ. ಆಗಸ್ಟ್.27ರ ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಇನ್ನೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ಪತ್ರಿಕೆ-2ರ…
ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಉಪಮುಖ್ಯಮಂತ್ರಿಗಳು, ಗೃಹ ಸಚಿವರು ಸೇರಿದಂತೆ ಕೆಲ ಸಚಿವರೊಂದಿಗೆ ನವದೆಹಲಿಗೆ ತೆರಳಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು, ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ನಮ್ಮ ಸರ್ಕಾರ ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ, ರಾಜ್ಯಪಾಲರ ನಿರ್ಣಯವನ್ನು ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆಗಸ್ಟ್ 29 ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆಯೂ ವರಿಷ್ಠರಿಗೆ ವಿವರಿಸಲಾಗಿದೆ ಎಂದರು. ಎಲ್ಲಾ ಸಾಧ್ಯತೆಗಳಿಗೂ ಅವಕಾಶವಿದೆ ರಾಜ್ಯಪಾಲರ ನಡೆಯ ವಿರುದ್ಧ ಮಾನ್ಯ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ನವದೆಹಲಿಯಲ್ಲಿ…
ಹೈದರಾಬಾದ್: ತೆಲುಗಿನ ಖ್ಯಾತ ನಟ ನಾಗಾರ್ಜುನ್ ಅವರು ಅವರು ಕೆಲೆ ಒತ್ತುವರಿ ಮಾಡಿಕೊಂಡು ಕಟ್ಟಿದ್ದಾರೆ ಎಂಬುದಾಗಿ ಅವರ ಹೈದರಾಬಾದ್ ನಲ್ಲಿನ ಎನ್-ಕನ್ವೆಷನ್ಷನ್ ಸೆಂಟರ್ ಅನ್ನು ಧ್ವಂಸಗೊಳಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ತೆಲಂಗಾಣ ಹೈಕೋರ್ಟ್ ಮೊರೆಯನ್ನು ಹೋಗಿದ್ದರು. ಈಗ ಧ್ವಂಸಗೊಳಿಸದಂತೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದ್ದು, ನಟ ನಾಗಾರ್ಜುನ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತೆ ಆಗಿದೆ. ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಶನಿವಾರ ನಟ ಅಕ್ಕಿನೇನಿ ನಾಗಾರ್ಜುನ ಒಡೆತನದ ಮಾಧಪುರದ ಎನ್ ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದಾರೆ. ತಮ್ಮಿಡಿ ಕುಂಟ ಸರೋವರದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ನಗರದ ಮಾಧಾಪುರ ಪ್ರದೇಶದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಅಕ್ರಮವಾಗಿ ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಒಡೆತನದ ಕನ್ವೆನ್ಷನ್ ಹಾಲ್ ಅನ್ನು ನೆಲಸಮಗೊಳಿಸಲು ಹೈದರಾಬಾದ್ ವಿಪತ್ತು ಪರಿಹಾರ ಮತ್ತು ಆಸ್ತಿ ಸಂರಕ್ಷಣಾ ಸಂಸ್ಥೆ (ಹೈಡ್ರಾ)…
ಬೆಂಗಳೂರು: ಇತ್ತೀಚಿಗಷ್ಟೇ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರಲ್ಲಿ ನೀರಿನ ದರ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಬಸ್ ದರ ಏರಿಕೆ ಮಾಡುವುದಾಗಿಯೂ ಪ್ರಾಸಂಗಿಕವಾಗಿ ತಿಳಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಲ್ಲಿ ನೀರಿನ ದರ, ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವಂತ ಸುಳಿವು ನೀಡಿದ್ದಾರೆ. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ ನೀರಿನ ದರವನ್ನು ಏರಿಸಲಾಗುವುದು ಎಂದಿದ್ದರು. ಆದರೆ ಯಾವುದೇ ತೀರ್ಮಾನವನ್ನು ಇನ್ನೂ ಕೈಗೊಂಡಿಲ್ಲ. ನೀರಿನ ದರವನ್ನೂ ಬಹಳ ವರ್ಷಗಳಿಂದ ಏರಿಸಿಲ್ಲ. ಜಲಮಂಡಳಿಯಲ್ಲಿ ಕಷ್ಟ ಪರಿಸ್ಥಿತಿಯಿದ್ದು, ದರಗಳನ್ನು ಹೆಚ್ಚಿಸುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು. https://kannadanewsnow.com/kannada/jammu-and-kashmir-assembly-elections-2019-congress-hits-back-at-bjp-over-alliance-with-nc/…
ನವದೆಹಲಿ: ಹಿರಿಯ ಪತ್ರಕರ್ತ ನಾರಿ ಹಿರಾ ಆಗಸ್ಟ್ 23 ರಂದು ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ಮುದ್ರಣ ಮಾಧ್ಯಮದಲ್ಲಿ ಪ್ರವರ್ತಕ, ಕುಟುಂಬ ವ್ಯಕ್ತಿ ಮತ್ತು ತಂದೆಗೆ ಹೋಲಿಸಲಾಗದಷ್ಟು ಅವರ ನಿಧನದ ಸುದ್ದಿಯನ್ನು ನಾವು ತೀವ್ರ ದುಃಖದಿಂದ ಹಂಚಿಕೊಳ್ಳುತ್ತೇವೆ, ಅವರ ಅನುಪಸ್ಥಿತಿಯಲ್ಲಿ ಅವರು ನಮ್ಮನ್ನು ಹೃದಯವಿದ್ರಾವಕವಾಗಿ ಅಗಲಿದ್ದಾರೆ ಎಂದು ಅವರ ಕುಟುಂಬವು ಹೇಳಿಕೆಯಲ್ಲಿ ತಿಳಿಸಿದೆ. https://twitter.com/DeShobhaa/status/1827211621820768332 ಸ್ಟಾರ್ ಡಸ್ಟ್, ಸಾವಿ, ಶೋಟೈಮ್, ಸೊಸೈಟಿ ಮತ್ತು ಹೆಲ್ತ್ ನಂತಹ ನಿಯತಕಾಲಿಕೆಗಳನ್ನು ಪ್ರಕಟಿಸುವ ಮುಂಬೈ ಮೂಲದ ಮ್ಯಾಗ್ನಾ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್ ನ ಮಾಲೀಕರಾಗಿದ್ದರು. ಅವರು ತಮ್ಮ ಪ್ರಕಾಶನ ಕಂಪನಿಯ ಅಂಗಸಂಸ್ಥೆಯಾದ ಮ್ಯಾಗ್ನಾ ಫಿಲ್ಮ್ಸ್ ಮೂಲಕ ಚಲನಚಿತ್ರ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದರು. 1938 ರಲ್ಲಿ ಕರಾಚಿಯಲ್ಲಿ ಜನಿಸಿದ ಹಿರಾ ಮತ್ತು ಅವರ ಕುಟುಂಬ ವಿಭಜನೆಯ ನಂತರ ಮುಂಬೈಗೆ ಸ್ಥಳಾಂತರಗೊಂಡಿತು. ಅವರು ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದರೆ ನಂತರ ಪ್ರಕಟಣೆಗೆ ಹೋದರು. https://twitter.com/virsanghvi/status/1827230029849190433 1971 ರಲ್ಲಿ ಪ್ರಾರಂಭವಾದ ಅವರ ನಿಯತಕಾಲಿಕ ಸ್ಟಾರ್ ಡಸ್ಟ್ ಭಾರಿ ಯಶಸ್ಸನ್ನು…
ಹೈದರಾಬಾದ್: ಹೈದರಾಬಾದ್ ವಿಪತ್ತು ಪ್ರತಿಕ್ರಿಯೆ ಮತ್ತು ಆಸ್ತಿ ರಕ್ಷಣೆ (ಹೈಡ್ರಾ) ಅಧಿಕಾರಿಗಳು ಶನಿವಾರ ನಟ ಅಕ್ಕಿನೇನಿ ನಾಗಾರ್ಜುನ ಒಡೆತನದ ಮಾಧಪುರದ ಎನ್ ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದಾರೆ. ತಮ್ಮಿಡಿ ಕುಂಟ ಸರೋವರದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ನಗರದ ಮಾಧಾಪುರ ಪ್ರದೇಶದ ಫುಲ್ ಟ್ಯಾಂಕ್ ಲೆವೆಲ್ (ಎಫ್ಟಿಎಲ್) ಪ್ರದೇಶದಲ್ಲಿ ಅಕ್ರಮವಾಗಿ ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಒಡೆತನದ ಕನ್ವೆನ್ಷನ್ ಹಾಲ್ ಅನ್ನು ನೆಲಸಮಗೊಳಿಸಲು ಹೈದರಾಬಾದ್ ವಿಪತ್ತು ಪರಿಹಾರ ಮತ್ತು ಆಸ್ತಿ ಸಂರಕ್ಷಣಾ ಸಂಸ್ಥೆ (ಹೈಡ್ರಾ) ಶನಿವಾರ ಪ್ರಾರಂಭಿಸಿದೆ. https://twitter.com/ANI/status/1827212028894712269 ಎಕ್ಸ್ ಮೂಲಕ ಹೇಳಿಕೆ ನೀಡಿದ ನಟ, ನೆಲಸಮ ಕಾರ್ಯಾಚರಣೆಯನ್ನು “ಕಾನೂನುಬಾಹಿರ” ಎಂದು ಕರೆದರು. ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣದಲ್ಲಿ ಯಾವುದೇ ಕಾನೂನು ಉಲ್ಲಂಘನೆಯನ್ನು ನಿರಾಕರಿಸಿದರು. ನೆಲಸಮಗೊಳಿಸುವ ಕಾರ್ಯಾಚರಣೆಯ ಸಮಯದಲ್ಲಿ ಹೈದರಾಬಾದ್ ಪೊಲೀಸರು ಸಹ ಸ್ಥಳದಲ್ಲಿದ್ದರು. ಹೈದ್ರಾಬಾದ್ ಅಧಿಕಾರಿಗಳು ಇಂದು ಬೆಳಿಗ್ಗೆ ಎನ್ ಕನ್ವೆನ್ಷನ್ ಹಾಲ್…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಡಿಎ, ಹೆಚ್ಆರ್ ಎ ಸೇರಿದಂತೆ ಇತರೆ ವೇತನ ಶ್ರೇಣಿಯನ್ನು ಪರಿಷ್ಕರಿಸಲಾಗಿದೆ. ಹಾಗಾದ್ರೇ ವೇತನ ಶ್ರೇಣಿ ಪರಿಷ್ಕರಣೆಯ DA, CCA, HRA, MA, GIS ವಿಸ್ತ್ರುತವಾದ ಇತರೆ ಸಂಪೂರ್ಣ ಮಾಹಿತಿ ಈ ಕೆಳಕಂಡಂತೆ ಇದೆ. ಈ ಬಗ್ಗೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ರೇಜು ಎಂ.ಟಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿರಾಜ್ಯ ಸರ್ಕಾರದ ನೀತಿಯಂತೆ, 7ನೇ ರಾಜ್ಯ ವೇತನ ಆಯೋಗದ ಸಂಪುಟ I ರಲ್ಲಿನ ಶಿಫಾರಸ್ಸುಗಳನ್ನು ಮೇಲೆ (1) ರಲ್ಲಿ ಓದಲಾದ ದಿನಾಂಕ 22.07.2024ರ ಸರ್ಕಾರಿ ಆದೇಶದಲ್ಲಿ ನಮೂದಿಸಿರುವಂತೆ ಅಂಗೀಕರಿಸಲಾಗಿರುತ್ತದೆ. ಅದರಂತೆ ಸದರಿ ಆದೇಶದಲ್ಲಿ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು 25 ಪರಿಷ್ಕೃತ ಸ್ಥಾಯಿ ವೇತನ ಶ್ರೇಣಿಗಳನ್ನು, ವೇತನ ಸಂಬಂಧಿತ ಭತ್ಯೆಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ. ದಿನಾಂಕ 17.08.2024ರ ಅಧಿಸೂಚನೆಯಲ್ಲಿ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ನ್ನು ಅಧಿಸೂಚಿಸಲಾಗಿರುತ್ತದೆ.…
ಬೆಂಗಳೂರು: 220/66/11ಕೆವಿ ಎಸ್ಆರ್ಎಸ್ ಪೀಣ್ಯ ದಿನಾಂಕ 25.08.2024 ರಂದು 09:30ಗಂಟೆಗಳಿಂದ 15:30ಗಂಟೆಗಳವರೆಗೆ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಗೃಹಲಕ್ಷ್ಮಿ-ಅಪಾರ್ಟ್ಮೆಂಟ್, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ ಕರೆಂಟ್ ಇರೋದಿಲ್ಲ. ಇನ್ನೂ ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ…