Author: kannadanewsnow09

ಬೆಂಗಳೂರು: ಕೆಪಿಎಸ್ಸಿ ಪರೀಕ್ಷೆ ವಿಚಾರದಲ್ಲಿ ಹುಡುಗಾಟಿಕೆ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಕೆಪಿಎಸ್ಸಿ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಇಂದು ಭೇಟಿ ನೀಡಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ರಾಜ್ಯ ಸರಕಾರಕ್ಕೆ ಬುದ್ಧಿ ಹೇಳುವ ದೃಷ್ಟಿಯಿಂದ ಹೋರಾಟಕ್ಕೆ ಬೆಂಬಲ ನೀಡಿದ್ದಾಗಿ ತಿಳಿಸಿದರು. ರಾಜ್ಯ ವಿದ್ಯಾರ್ಥಿಗಳ ಒಕ್ಕೂಟದಿಂದ ಕೆಪಿಎಸ್ಸಿಯಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ಖಂಡಿಸಿ ಹೋರಾಟ ನಿರತರಾಗಿದ್ದಾರೆ. ಪದೇಪದೇ ಪರೀಕ್ಷೆ ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್‍ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಮಸ್ರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಹೋರಾಟ ನಡೆಯುತ್ತಿದೆ ಎಂದು ವಿವರಿಸಿದರು. ನಾನು, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ ಮೊದಲಾದ ಮುಖಂಡರು ಇಲ್ಲಿಗೆ ಬಂದಿದ್ದು, ಹೋರಾಟಕ್ಕೆ ಬೆಂಬಲ ನೀಡಿದ್ದೇವೆ ಎಂದು…

Read More

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬದಲಾವಣೆ ಚರ್ಚೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ಮಾಡುವ ಕೆಲಸ, ಶ್ರಮವನ್ನು ಪಕ್ಷದ ನಾಯಕರು ಗುರುತಿಸಿ ಅದಕ್ಕೆ ಸೂಕ್ತವಾಗಿ ಹುದ್ದೆ ನೀಡುತ್ತಾರೆ. ಮಾಧ್ಯಮಗಳ ಮುಖಾಂತರ ಯಾರಾದರೂ ಹುದ್ದೆ ಕೇಳುತ್ತಾರೆಯೇ? ಇದನ್ನೆಲ್ಲಾ ಹೊಸದಾಗಿ ಕೇಳುತ್ತಿರುವೆ” ಎಂದರು. “ಪಕ್ಷದ ವಿಚಾರದ ವಿಚಾರವಾಗಿ ಯಾವುದೇ ಬೆಳವಣಿಗೆ ಇದ್ದರೂ ನಾನೇ ಮಾಧ್ಯಮಗೋಷ್ಠಿ ಕರೆದು ಮಾಹಿತಿ ನೀಡುತ್ತೇನೆ. ಈಗ ನಮ್ಮ ಪಕ್ಷ ಸಂಘಟನೆ ಮಾಡಿ, ಪಕ್ಷ ಉಳಿಸಿ, ಬೆಳೆಸುವ ಕೆಲಸ ಮಾಡಬೇಕು. ಪಕ್ಷದಲ್ಲಿ ಎಲ್ಲರೂ ಶಿಸ್ತು ಕಾಪಾಡಬೇಕು ಎಂದು ನಮ್ಮ ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬುದ್ಧಿವಾದ ಹೇಳಿದ್ದಾರೆ. ಯಾವುದೇ ವಿಚಾರವಾಗಿ ಬಹಿರಂಗವಾಗಿ ಚರ್ಚೆ ಮಾಡದಂತೆ ಸೂಚಿಸಿದ್ದಾರೆ” ಎಂದು…

Read More

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು. ಮತ್ತೊಂದು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ನೀವು ಮನೆಯಲ್ಲಿ ಬದಲಾದ ಜೀವನ ಶೈಲಿಗೆ ಅನುಗುಣವಾಗಿ ವಿವಿಧ ವಸ್ತುಗಳನ್ನು ಬಳಕೆ ಮಾಡುತ್ತಿರುತ್ತೀರಿ. ಅದಲ್ಲೂ ನೀವು ಬಳಸುವ ಕೆಲವು ವಸ್ತುಗಳ ಬಳಕೆ ಇಂದೇ ನಿಲ್ಲಿಸುವುದು ಒಳ್ಳೆಯದು. ಕಾರಣ ಅವು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ ಕ್ಯಾನ್ಸರ್ ಕಾರಕವಾಗಬಹುದಂತೆ. ಆ ಬಗ್ಗೆ ಮುಂದೆ ಮಾಹಿತಿ ಓದಿ. ವೇಗವಾಗಿ ಬದಲಾಗುತ್ತಿರುವ ಈ ಆಧುನಿಕ ಯುಗದಲ್ಲಿ, ನಿಮ್ಮ ಆರಾಮದ ವಿಷಯವನ್ನು ಹೆಚ್ಚಿಸಲು ಮತ್ತು ಪ್ರತಿದಿನ ಬಳಸುವ ವಸ್ತುಗಳನ್ನು ಬಳಸಲು ಹೊಸ ವಸ್ತುಗಳನ್ನು ನಿರಂತರವಾಗಿ ಆವಿಷ್ಕರಿಸಲಾಗುತ್ತಿದೆ. ತಯಾರಿಸುವಾಗ ಅನೇಕ ಹಾನಿಕಾರಕ ರಾಸಾಯನಿಕ ಸಂಸ್ಕರಣೆಗಳನ್ನು ಬಳಸುವ ಅನೇಕ ವಿಷಯಗಳಿವೆ ಮತ್ತು ಅಂತಹ ವಸ್ತುಗಳಲ್ಲಿ ರಾಸಾಯನಿಕಗಳ ಅತಿಯಾದ ಬಳಕೆಯಿಂದಾಗಿ, ಈ ವಸ್ತುಗಳು ನಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗುತ್ತವೆ. ಸಮಸ್ಯೆಯೆಂದರೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರಿಗೆ ಈ ವಸ್ತುಗಳ ಕೆಟ್ಟ ಪರಿಣಾಮಗಳ ಬಗ್ಗೆ ತಿಳಿದಿಲ್ಲ ಮತ್ತು ಈ ವಸ್ತುಗಳನ್ನು ಬಳಸುವುದನ್ನು ಮುಂದುವರಿಸುತ್ತಾರೆ. ನೈಸರ್ಗಿಕವಲ್ಲದ ಅಥವಾ ರಾಸಾಯನಿಕಗಳನ್ನು ಬಳಸಿ ಮಾನವರು ತಯಾರಿಸಿದ ಯಾವುದೇ ವಸ್ತುವು ಒಂದು ರೀತಿಯಲ್ಲಿ…

Read More

ಬೆಂಗಳೂರು: ದಿನಾಂಕ 16.01.2025 (ಗುರುವಾರ) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 5:00 ಗಂಟೆಯವರೆಗೆ “66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ,…

Read More

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಿ ಆದೇಶಿಸಿದೆ ಎಂದಿದ್ದಾರೆ. ಸದರಿ ಆದೇಶದಲ್ಲಿ ಅನುದಾನಿತ ಶಾಲೆಗಳು ಆನ್‌ಲೈನ್ ಮೂಲಕ ವಿವರಗಳು/ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿವಡಿಸುವುದು ಹಾಗೂ ಈ ತಂತ್ರಾಂಶದ ಮೂಲಕ ವ್ಯವಹರಿಸುವುದು ಎಂದು ಸೂಚಿಸಲಾಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ದಿನಾಂಕ:07-08-2024 ಹಾಗೂ ಸರ್ಕಾರದ ಪ್ರದಾನ ಕಾರ್ಯದರ್ಶಿಗಳು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ರವರ ಟಿಪ್ಪಣಿ ದಿನಾಂಕ:24-10-2024ರಂತೆ ಅನುದಾನಿತ ಶಿಕ್ಷಕರ ಖಾಲಿಯಾದ ಬೋದಕ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ತಂತ್ರಾಂಶ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. ತಂತ್ರಾಂಶವು…

Read More

ಬೆಂಗಳೂರು: ಇಂದಿನಿಂದ ನಗರದ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭಗೊಳ್ಳಲಿದೆ. ಇಂದಿನಿಂದ ಜನವರಿ 26ರವರೆಗೆ ಗಣರಾಜ್ಯೋತ್ಸವದ ಪ್ರಯುಕ್ತ ಫಲಪುಷ್ಪ ಪ್ರದರ್ಶ ನಡೆಯಲಿದೆ. ಈ ಹಿನ್ನಲೆ ಸಂಚಾರ ಮಾರ್ಗ ಬದಲಾವಣೆಯನ್ನು ಮಾಡಲಾಗಿದೆ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದು,  ತೋಟಗಾರಿಕೆ ಇಲಾಖೆಯ ವತಿಯಿಂದ ದಿನಾಂಕ:16/01/2025 ರಿಂದ ದಿನಾಂಕ:26/01/2025 ರವರೆಗೆ ಒಟ್ಟು 11 ದಿನಗಳ ವರೆಗೆ ಲಾಲ್‌ಬಾಗ್‌ನಲ್ಲಿ “ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿರುತ್ತದೆ. ಈ ಫಲಪುಷ್ಪ ಪ್ರದರ್ಶನಕ್ಕೆ ಗಣ್ಯವ್ಯಕ್ತಿಗಳು, ಸಾರ್ವಜನಿಕರು, ಪ್ರವಾಸಿಗರು ದೇಶ-ವಿದೇಶಿ ಪ್ರೇಕ್ಷಕರು ಹಾಗೂ ಶಾಲಾ ಮಕ್ಕಳುಗಳನ್ನೊಳಗೊಂಡಂತೆ ಸುಮಾರು 8 ರಿಂದ 10 ಲಕ್ಷ ಜನ ಆಗಮಿಸುವ ನಿರೀಕ್ಷೆ ಇರುವುದರಿಂದ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಹಾಗು ಸುತ್ತಮುತ್ತಲ್ಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಸುಗಮ ಸಂಚಾರ ಏರ್ಪಡಿಸುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮ ಕೈಗೊಳ್ಳಲಾಗಿದೆ ಎಂದಿದೆ.  ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು 1. ಡಾ|| ಮರಿಗೌಡ…

Read More

ಬೆಂಗಳೂರು: ನಾಳೆ ಸಿಎ ಪರೀಕ್ಷೆಯ ಸಮಯಕ್ಕೆ ಬೆಂಗಳೂರು ನಗರ ವಿವಿಯಿಂದ ಬಿಕಾಂ ಪರೀಕ್ಷೆಯನ್ನು ನಿಗದಿ ಪಡಿಸಿ ಎಡವಟ್ಟು ಮಾಡಿದ್ದರ ಬಗ್ಗೆ ಕನ್ನಡ ನ್ಯೂಸ್ ನೌ ಬೆಂಗಳೂರು ವಿವಿಯಿಂದ ಯಡವಟ್ಟು: ನಾಳೆ ‘CA ಪರೀಕ್ಷೆ’ಯ ಸಮಯಕ್ಕೆ ಬಿಕಾಂ ಪರೀಕ್ಷೆ ನಿಗದಿ ಎಂಬುದಾಗಿ ಸುದ್ದಿಯನ್ನು ಪ್ರಕಟಿಸಿತ್ತು. ಈ ಬೆನ್ನಲ್ಲೇ ನಾಳೆ ನಡೆಸಲು ನಿಗದಿ ಪಡಿಸಿದ್ದಂತ ಎಲ್ಲಾ ಸ್ನಾತಕ ಪದವಿಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ. ಈ ಕುರಿತಂತೆ ಬೆಂಗಳಊರು ನಗರ ವಿವಿಯ ಸೆಂಟ್ರಲ್ ಕ್ಯಾಂಪಸ್ ನ ಮೌಲ್ಯಮಾಪನದ ಕುಲಸಚಿವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 16-01-2025ರಂದು ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದ್ದ ಬೆಂಗಳೂರು ನಗರ ವಿವಿಯ ಎಸ್ಇಪಿ 1ನೇ ಸೆಮಿಸ್ಟರ್ ಎಲ್ಲಾ ಸ್ನಾತಕ ಪದವಿ ಕೋರ್ಸ್ ಗಳ ಪರೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದಿದ್ದಾರೆ. ಇನ್ನು ಮುಂದೂಡಲಾಗಿರುವ ಪರೀಕ್ಷೆಯ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂಬುದಾಗಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಮತ್ತು ಪ್ರಾಂಶುಪಾಲರುಗಳಿಗೆ ತಿಳಿಸಿದ್ದಾರೆ. https://kannadanewsnow.com/kannada/do-you-know-what-home-minister-dr-g-parameshwara-said-about-the-caste-census-report/ https://kannadanewsnow.com/kannada/the-state-government-has-given-green-signal-to-fill-up-the-vacant-posts-of-teachers-in-private-aided-high-schools/

Read More

ಬೆಂಗಳೂರು : ಜಾತಿಗಣತಿ ವರದಿಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವುದು ಈಗಿನ ಕೆಲಸ. ಅನುಷ್ಟಾನಗೊಳಿಸುವುದು ಸರ್ಕಾರದ ವಿವೇಚನೆಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯ ಸೀಲ್ಡ್ ಕವರ್‌ನ್ನು ಸಚಿವ ಸಂಪುಟ ಸಭೆಯಲ್ಲಿ ತೆರೆಯಬೇಕು. ಅದಕ್ಕು ಮುಂಚೆ ತೆರೆಯಬಾರದು. ಒಂದು ವೇಳೆ ತೆರೆದರೆ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುತ್ತದೆ ಎಂದರು. ವರದಿ ಬಗ್ಗೆ ಚರ್ಚೆ ಆಗುತ್ತದೆಯೇ ಎಂಬುದರ ಕುರಿತು ಹೇಳಲಾಗುವುದಿಲ್ಲ. ಒಂದಷ್ಟು ವಿಷಯಗಳು ಗೊತ್ತಾಗುತ್ತವೆ. ಸರ್ಕಾರವು 160 ಕೋಟಿ ರೂ. ಖರ್ಚು ಮಾಡಿ ವರದಿ ತರಿಸಿಕೊಳ್ಳಲಾಗಿದೆ. ವರದಿಯಲ್ಲಿರುವ ಅಂಶಗಳು ಸಾರ್ವಜನಿಕರಿಗೆ ಗೊತ್ತಾಗಬೇಕಲ್ಲವೇ ಅನುಷ್ಟಾನಗೊಳಿಸುವುದು ಸರ್ಕಾರದ ವಿವೇಚನೆಗೆ ಬಿಟ್ಟಿರುವ ವಿಚಾರ. ಸರ್ಕಾರದ ತೀರ್ಮಾನ ಅಂತಿಮ. ಜಾತಿಗಣತಿ ವರದಿಯಲ್ಲಿರುವ ಮಾಹಿತಿ ಹೊರಗಡೆ ಬರಬೇಕಲ್ಲವೇ? ಅದಕ್ಕಾಗಿ ಒತ್ತಾಯ ಮಾಡಲಾಗುತ್ತಿದೆ ಎಂದು ಹೇಳಿದರು. ಸಮುದಾಯಗಳ ಸಭೆಗಳನ್ನು ಪಕ್ಷವೇ ಮಾಡಲಿ.‌ ಅದರಲ್ಲಿ ಏನು ತಪ್ಪಿದೆ. ನಮಗೆ ನಮ್ಮ ಸಮಸ್ಯೆ ಬಗೆಹರಿಯಬೇಕು. ಪಕ್ಷ ಅಂದರೆ‌ ನಾವಲ್ಲವೇ? ಪಕ್ಷ ಅಂದರೆ ಬೇರೆ…

Read More

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೆಸಗಲಾಗಿದೆ. ಮನೆಯ ಮುಂದೆ ಆಟವಾಡುತ್ತಿದ್ದಂತ 5 ವರ್ಷದ ಬಾಲಕಿಯ ಮೇಲೆಯೇ ಅತ್ಯಾಚಾರ ಎಸಗಲಾಗಿದೆ. ಬಳ್ಳಾರಿಯ ತೋರಣಗಲ್ ನ ಖಾಸಗಿ ಕಾರ್ಖಾನೆಯೊಂದರಲ್ಲಿ ಉತ್ತರ ಭಾರತದ ದಂಪತಿಗಳು ಕೆಲಸ ಮಾಡುತ್ತಿದ್ದರು. ಇವರಿಗೆ 5 ವರ್ಷದ ಪುತ್ರಿ ಇದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಿರುವಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದಂತ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಗುವಿಗೆ ಚಿಕಿತ್ಸೆ ನೀಡಲಾಗಿದೆ. ಹೀಗಾಗಿ ಬಾಲಕಿ ಪ್ರಾಣಾಯಪಾಯದಿದಂ ಪಾರಾಗಿದ್ದಾಳೆ. ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯ ವೈದ್ಯರು 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಚಿತ ಪಡಿಸಿದ್ದಾರೆ. ಇದೀಗ ಅತ್ಯಾಚಾರವೆಸಗಿದಂತ ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಪುಸಲಾಯಿಸಿ ಆರೋಪಿ ಕರೆದೊಯ್ದಂತ ವೀಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಆತನನ್ನು ಬಂಧಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯೊಂದು ಬಳ್ಳಾರಿಯ ಡಿಸಿ ಕಚೇರಿ ಎದುರು ಪ್ರತಿಭಟನೆ ಕೂಡ ನಡೆಸಿತು. https://kannadanewsnow.com/kannada/if-you-are-using-these-things-at-home-stop-today-cancer-can-occur/ https://kannadanewsnow.com/kannada/the-state-government-has-given-green-signal-to-fill-up-the-vacant-posts-of-teachers-in-private-aided-high-schools/

Read More