Author: kannadanewsnow09

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ ಎಂದಿದ್ದಾರೆ. ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ…

Read More

ಬೆಂಗಳೂರು: ಕರ್ನಾಟಕ ಸರ್ಕಾರವು 2025 ರ ಸೆಪ್ಟೆಂಬರ್ ವೇಳೆಗೆ ಪರಿಷ್ಕೃತ ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ಇಎಸ್ಡಿಎಂ) ನೀತಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ, ಇದಕ್ಕಾಗಿ ಈ ವರ್ಷದ ಉತ್ತರಾರ್ಧದಲ್ಲಿ ಉದ್ಯಮದೊಂದಿಗೆ ಚರ್ಚಿಸಲು ಪ್ರಾರಂಭಿಸುತ್ತದೆ ಎಂದು ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್ ಬುಧವಾರ ಬೆಂಗಳೂರಿನಲ್ಲಿ ನಡೆದ ಐಇಎಸ್ಎ ವಿಷನ್ ಶೃಂಗಸಭೆಯಲ್ಲಿ ಹೇಳಿದರು. “ಮೀಸಲಾದ ಇಎಸ್ಡಿಎಂ ನೀತಿಯನ್ನು ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕ ಸರ್ಕಾರವೂ ಒಂದಾಗಿದೆ. ನಮ್ಮ ನೀತಿಯನ್ನು 2017 ರಲ್ಲಿ ಘೋಷಿಸಲಾಯಿತು ಮತ್ತು 2022 ರವರೆಗೆ ಇತ್ತು. ಇದನ್ನು ಭಾರತ ಸರ್ಕಾರದ ನೀತಿಗೆ ಅನುಗುಣವಾಗಿ ತರಲು, ನಾವು ಅದನ್ನು ಸೆಪ್ಟೆಂಬರ್ 2025 ರವರೆಗೆ ವಿಸ್ತರಿಸಿದ್ದೇವೆ. ಸಹಜವಾಗಿ, ನಾವು ಈಗ ಅದರ ಮುಂದಿನ ಆವೃತ್ತಿಯನ್ನು ನೋಡುತ್ತಿದ್ದೇವೆ ಮತ್ತು ಮುಂದಿನ ದಾರಿ ಏನು ಎಂದು ಚರ್ಚಿಸಲು ನಾವು ಶೀಘ್ರದಲ್ಲೇ ಉದ್ಯಮದೊಂದಿಗೆ ತೊಡಗಿಸಿಕೊಳ್ಳಲು ಪ್ರಾರಂಭಿಸುತ್ತೇವೆ” ಎಂದು ಕೌರ್ ಹೇಳಿದರು. ರಾಜ್ಯ ಸರ್ಕಾರವು ನೀತಿಯ ಮೂಲಕ 5,000 ಕೋಟಿ ರೂ.ಗಳ ಹೂಡಿಕೆಯನ್ನು…

Read More

ಬೆಂಗಳೂರು; ವಿಧಾನಸಭಾ ಚುನಾವಣೆ ( Karnataka Assembly Election ) ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ (Congress Party ) ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಘರ್ ವಾಪಸ್ ಆಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ( Lakshman Savadi ) ಕೂಡ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ಆ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು, ನಾನು ಯಾವುದೇ ಕಾರಣಕ್ಕೂ ಮತ್ತೆ ಬಿಜೆಪಿ ಸೇರ್ಪಡೆ ಆಗೋದಿಲ್ಲ. ಆ ಪ್ರಶ್ನೆಯೇ ಇಲ್ಲ ಅಂತ ಸ್ಪಷ್ಟಪಡಿಸಿದರು. ನನಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಬಿಟ್ಟು, ಬಿಜೆಪಿಗೆ ಮತ್ತೆ ಯಾಕೆ ಹೋದ್ರು ಅಂತ ಗೊತ್ತಿಲ್ಲ. ಆದ್ರೇ ನಾನಂತೂ ಮತ್ತೆ ಬಿಜೆಪಿಗೆ ಹೋಗೋದಿಲ್ಲ. ಹೋಗೋ ಪ್ರಶ್ನೆಯೂ ಇಲ್ಲ ಎಂಬುದಾಗಿ ತಿಳಿಸಿದರು. ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿರೋದು ಅವರ ವೈಯಕ್ತಿಕ ವಿಚಾರವಾಗಿದೆ. ನಾನು ಆ ಬಗ್ಗೆ…

Read More

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಪ್ರಶಸ್ತಿಗಳ ಘೋಷಣೆ ಮಾಡಲಾಗಿದೆ. ಬಸವ, ಮಹಾವೀರ, ಚೌಡಯ್ಯ ಹಾಗೂ ಪಂಪ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪುರಸ್ಕೃತರಿಗೆ ಜನವರಿ 31ಕ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ವಿವಿಧ ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳ ಪುರಸ್ಕೃತರನ್ನು ಆಯ್ಕೆ ಸಮಿತಿಗಳ ಮೂಲಕ ಆಯ್ಕೆ ಮಾಡಲಾಗಿದೆ. ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಶ್ರೀ ಆನಂದ್‌ ತೆಲ್ತುಂಬಡೆ ಹಾಗೂ ಡಾ. ಎನ್‌.ಜಿ. ಮಹದೇವಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ  ಭಗವಾನ್‌ ಮಹಾವೀರ ಶಾಂತಿ ಪ್ರಶಸ್ತಿಗೆ ಜಿನದತ್ತ ದೇಸಾಯಿ ಹಾಗೂ ಗುಜರಾತಿನ ಗಾಂಧಿ ಸೇವಾಶ್ರಮ  ಅವರನ್ನು ಆಯ್ಕೆ ಮಾಡಲಾಗಿದೆ.  ಟಿ. ಚೌಡಯ್ಯ ಪ್ರಶಸ್ತಿಗಾಗಿ ನಿತ್ಯಾನಂದ ಹಳದಿಪುರ ಹಾಗೂ ಶ್ರೀರಾಮುಲು ಅವರನ್ನು ಆಯ್ಕೆ ಮಾಡಲಾಗಿದೆ. ಹಾಗೆಯೇ ಪ್ರತಿಷ್ಠಿತ ಪಂಪ ಪ್ರಶಸ್ತಿಯೂ ಸೇರಿದಂತೆ ವಿವಿಧ ರಾಜ್ಯಮಟ್ಟದ ಪ್ರಶಸ್ತಿಗಳಿಗೆ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಗಳನ್ನು ಇದೇ ಜನವರಿ 31ರಂದು ಬೆಂಗಳೂರಿನ ರವಿಂದ್ರ…

Read More

ಬೆಂಗಳೂರು : “ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಮತ್ತೆ ಬಿಜೆಪಿ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕೆಪಿಸಿಸಿ ಕಚೇರಿ ಬಳಿ ಪ್ರತಿಕ್ರಿಯಿಸಿದ ಅವರು  ಮತ್ತೆ ನನ್ನನ್ನು ಬಿಜೆಪಿಗೆ ವಾಪಸ್ ಬರುವಂತೆ ತಮ್ಮ ಕ್ಷೇತ್ರದ ನಾಯಕರು, ಕಾರ್ಯಕರ್ತರ ಮೂಲಕ ಆಹ್ವಾನಿಸಲಾಗುತ್ತಿದೆ ಎಂದು ಶೆಟ್ಟರ್ ಅವರು ನಿನ್ನೆ ನನಗೆ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಪಕ್ಷ ನನಗೆ ರಾಜಕೀಯವಾಗಿ ಮರುಜೀವ ಕೊಟ್ಟಿದೆ. ಹೀಗಾಗಿ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಅವರ ಮಾತಿನ ಮೇಲೆ ವಿಶ್ವಾಸ ಇಟ್ಟು, ಅವರು ಮತ್ತೆ ಬಿಜೆಪಿಗೆ ಹೋಗುವುದಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೆ. ಈಗ ಮಾಧ್ಯಮಗಳ ಮೂಲಕ ಶೆಟ್ಟರ್ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರಿದ್ದಾರೆ ಎಂಬ ಸುದ್ದಿ ತಿಳಿಯಿತು…

Read More

ಸುಬ್ರಮಣ್ಯನ ಪಾದಸ್ಪರ್ಶ ಮಾಡಿದರೆ ನಮ್ಮ ಸಂಸಾರ ಸುಖಿಯಾಗುತ್ತದೆ. ಬನದ ಹುಣ್ಣಿಮೆ ಬಾದಾಮಿ ಬನಶಂಕರಿ ಅಮ್ಮನವರ ವ್ರತಾಚರಣೆ ಸಮಾಪ್ತಿ ಹಬ್ಬ. ನಿಮ್ಮ ಕುಟುಂಬದಲ್ಲಿ ಯಾರಾದ್ರೂ ಆರೋಗ್ಯ ಹದಗೆಟ್ಟು ನಿತ್ಯ ಔಷಧಿ ಸೇವಿಸಬೇಕಾದ ಪರಿಸ್ಥಿತಿ ಇದೆಯೇ? ಅವರ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಹೋಗಲಾಡಿಸಲು ನಾಳೆ ನೀವು ಮಾಡಬೇಕಾದ ಸರಳವಾದ ಆಧ್ಯಾತ್ಮಿಕ ಪೂಜೆಯನ್ನು ಈ ಪೋಸ್ಟ್ ಮೂಲಕ ನಾವು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ…

Read More

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ಸಾಧ್ಯವಾದಷ್ಟು ಮತ ಚಲಾಯಿಸುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಕೊಡುಗೆ ನೀಡಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರುಗಳಾದ ಥಾವರ್ ಚಂದ್ ಗೆಹ್ಲೋಟ್ ಅವರು ಮತದಾರರಲ್ಲಿ ಮನವಿ ಮಾಡಿದರು. ನಗರದ ಟೌನ್ ಹಾಲ್ ನಲ್ಲಿ 14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪ್ರಜಾಪ್ರಭುತ್ವಕ್ಕೆ ಇಂದು ಮಹತ್ವದ ದಿನ. ಏಕೆಂದರೆ ಸ್ವತಂತ್ರ, ನಿಷ್ಪಕ್ಷಪಾತ ಮತ್ತು ಬಲಿಷ್ಠ ಚುನಾವಣಾ ಆಯೋಗವನ್ನು ಜನವರಿ 25, 1950 ರಂದು ಗಣರಾಜ್ಯವಾಗುವ ಒಂದು ದಿನದ ಮೊದಲು ಸ್ಥಾಪಿಸಲಾಯಿತು. ರಾಷ್ಟ್ರೀಯ ಮತದಾರರ ದಿನವನ್ನು 2011 ರಿಂದ ಪ್ರತಿ ವರ್ಷ ಆಯೋಜಿಸಲಾಗಿದೆ. ಇದು ಮತದಾರರನ್ನು ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ಮತ್ತು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಮೊದಲ ಬಾರಿಗೆ ಮತದಾರರನ್ನು ಪ್ರೇರೇಪಿಸಲು ಮೀಸಲಾಗಿರುವ ದಿನವಾಗಿದೆ ಎಂದರು. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಮತ್ತು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತದಾರರು ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಗಣ್ಯರು ಪ್ರಮುಖ…

Read More

ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ…

Read More

ಮಡಿಕೇರಿ: ರಾಜ್ಯದ ಕಾಫಿ ಬೆಳೆಗಾರರ ಮಹತ್ವದ ಬೇಡಿಕೆಯಲ್ಲಿ ಒಂದು ಉಚಿತ ವಿದ್ಯುತ್ ನೀಡೋದಾಗಿದೆ. ಇದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದು, ಪರಿಶೀಲಿಸಿ, ಶೀಘ್ರವೇ ಆದೇಶ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು. ಅಧ್ಯಕ್ಷರು, ಸಿಎಂ,ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು…

Read More

ಮಡಿಕೇರಿ : ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು. ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನ: ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ ಎಂದರು. ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಮಾತನಾಡಿ, ಅದನ್ನು ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂದರು. ಬಿಜೆಪಿಯಿಂದ…

Read More