Author: kannadanewsnow09

ಮಂಗಳೂರು: ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಸೇರಿದಂತೆ ಇಬ್ಬರ ಮೇಲೆ ವಾಮಾಚಾರ ನೆಡಸಿದ್ದಂತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ನೇಹಮಯಿ ಕೃಷ್ಣ, ಗೋವಿಂದರಾಜು ಮೇಲೆ ವಾಮಾಚಾರ ನಡೆಸಿದಂತ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ ನಗರದಲ್ಲಿರುವಂತ ಸ್ಮಶಾನದಲ್ಲಿ ವಾಮಾಚಾರ ಮಾಡಿಸಿದ್ದರು. ಸ್ಮಶಾನ ಕಾಳಿಕಾಂಬ ಗುಡಿಯಲ್ಲಿ ಕುರಿಗಳನ್ನು ಬಲಿ ನೀಡಿದ್ದರು. ಈ ವಿಚಾರವನ್ನು ಸ್ಮಶಾನ ಕಾಳಿಕಾಂಬ ದೇವಸ್ಥಾನದ ಅರ್ಚಕರಿಗೆ ತಿಳಿಯದಂತೆ ಬಲಿ ನೀಡಿದ್ದರು. ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ, ಸುಮಾ ಆಚಾರ್ಯ ಹೆಸರಿನ ಚೀಟಿ ನೀಡಿ ದೇವಿಗೆ ಪೂಜೆ. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ ಕೃಷ್ಣ, ಗಂಗರಾಜು ಪೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯವನ್ನು ಪ್ರಸಾದ್ ಅತ್ತಾವರ್ ಮೊಬೈಲ್ ನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಅತ್ತಾವರ ರಾಮಸೇನಾ ಸಂಘಟನೆಯ ಸಂಸ್ಥಾಪಕ ಆಗಿದ್ದಾರೆ. ಮಸಾಜ್ ಪಾರ್ಲರ್ ಗಲಾಟೆಯಲ್ಲಿ ಬಂಧನಕ್ಕೆ ಒಳಗಾಗಿದ್ದರು. ಮೊಬೈಲ್…

Read More

ಪ್ರಯಾಗ್ ರಾಜ್ : ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿಯ ಪವಿತ್ರ ಸಂಗಮಕ್ಕೆ 550 ಮಿಲಿಯನ್ ಭಕ್ತರನ್ನ ಆಕರ್ಷಿಸುವ ಮಹಾಕುಂಭ ಮೇಳ 2025ರಲ್ಲಿ, ವೈಯಕ್ತಿಕವಾಗಿ ಅಲ್ಲಿರಲು ಸಾಧ್ಯವಾಗದವರಿಗೆ ಆಶ್ಚರ್ಯಕರ ಹೊಸ ಸೇವೆ ವೈರಲ್ ಆಗುತ್ತಿದೆ. ಹೌದು, ವ್ಯಕ್ತಿಯೊಬ್ಬ ತನ್ನ ವಿಶಿಷ್ಟ ವ್ಯವಹಾರವನ್ನ ಉತ್ತೇಜಿಸುವ ವೀಡಿಯೊ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದೆ. ಸ್ಥಳೀಯ ಉದ್ಯಮಿ “ಡಿಜಿಟಲ್ ಸ್ನಾನ್” (ಪವಿತ್ರ ಸ್ನಾನ) ಸೇವೆಯನ್ನ ಪರಿಚಯಿಸಿದ್ದಾನೆ. ಅಲ್ಲಿ ಭಕ್ತರು ತಮ್ಮ ಫೋಟೋಗಳನ್ನ ವಾಟ್ಸಾಪ್ ಮೂಲಕ ಆತನಿಗೆ ಕಳುಹಿಸುತ್ತಾರೆ ಮತ್ತು ಆತ ಅವರ ಪರವಾಗಿ ಪವಿತ್ರ ಸಂಗಮದಲ್ಲಿ ಫೋಟೋಗಳನ್ನ ಮುಳುಗಿಸುತ್ತಾನೆ. ಅಂದ್ಹಾಗೆ, ಈ ವ್ಯಕ್ತಿ ಪಾಸ್ಪೋರ್ಟ್ ಗಾತ್ರದ ಪೋಟೋಗಳನ್ನ ನೀರಿನಲ್ಲಿ ಮುಳುಗಿಸುತ್ತಾನೆ. ಡಿಜಿಟಲ್ ಸೃಷ್ಟಿಕರ್ತ ಆಕಾಶ್ ಬ್ಯಾನರ್ಜಿ ಇದನ್ನು ವ್ಯಂಗ್ಯದ ಸ್ಪರ್ಶದೊಂದಿಗೆ ಹಂಚಿಕೊಂಡಿದ್ದು, ಅವರು ಇದನ್ನು ‘ಕೃತಕ ಸ್ನಾನ’ ಎಂದು ಕರೆದರು ಮತ್ತು “ಮುಂದಿನ ಹಂತದ ಎಐ ಐಡಿಯಾ ನೆಕ್ಸ್ಟ್ ಯುನಿಕಾರ್ನ್ ಕಂಪನಿ ಗುರುತಿಸಿದೆ” ಎಂದು ತಮಾಷೆಯಾಗಿ ಹೇಳಿದ್ದಾರೆ. ಅಚ್ಚರಿಯೆಂದ್ರೆ, ಈ ಸಾಂಕೇತಿಕ ಆಚರಣೆಯನ್ನ ಪ್ರತಿ ವ್ಯಕ್ತಿಗೆ…

Read More

ಬೆಂಗಳೂರು: ಇದೇ ಫೆಬ್ರವರಿ 26, 2025ಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂತಹ ಮಹಾ ಕುಂಭಮೇಳಕ್ಕೆ ಇದುವರೆಗೆ ಕರ್ನಾಟಕದಿಂದ ಹೋಗಿ ಬಂದವರೆಷ್ಟು ಅನ್ನೋ ಅಂಕಿ ಅಂಶ ಮುಂದಿದೆ ಓದಿ. ನೈಋತ್ಯ ರೈಲ್ವೆ ಕುಂಭಮೇಳಕ್ಕೆ ತನ್ನ ಮೂರು ವಿಭಾಗಗಳಿಂದ 20 ಟ್ರಿಪ್ ಗಳೊಂದಿಗೆ ಗಮನಾರ್ಹ ಕಾರ್ಯಕ್ಷಮತೆಯನ್ನು ಸಾಧಿಸಿ, 45,568 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ. (26 ಡಿಸೆಂಬರ್ 2024 ರಿಂದ 24 ಫೆಬ್ರವರಿ 2025 ವರಗೆ) ನೈಋತ್ಯ ರೈಲ್ವೆ ತನ್ನ ಮೂರು ವಿಭಾಗಗಳಾದ ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರಿನಿಂದ 20 ಪ್ಯಾಸೆಂಜರ್ ಟ್ರಿಪ್ ಗಳನ್ನು ಯಶಸ್ವಿಯಾಗಿ ನಿರ್ವಹಿಸಿ, ಒಟ್ಟು 45,568 ಪ್ರಯಾಣಿಕರನ್ನು ಸಾಗಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ಈ ವಿಶೇಷ ಟ್ರಿಪ್ ಗಳಿಂದ ರೈಲ್ವೆ 4,95,14,078 ರೂಪಾಯಿಗಳ ಆದಾಯವನ್ನು ಗಳಿಸಿದೆ. ಇದು ದಕ್ಷತೆಯನ್ನು ಮತ್ತು ಉತ್ತಮ ಕಾರ್ಯಾಚರಣೆಯನ್ನು ಪ್ರತಿಬಿಂಬಿಸುತ್ತದೆ. ಈ ರೈಲುಗಳು ಅತ್ಯಂತ ಜನಪ್ರಿಯವಾಗಿದ್ದು, ಸರಾಸರಿ 143.8% ಸೀಟ್ ಬರ್ತಿಯೊಂದಿಗೆ ರೈಲುಗಳ ಬಲವಾದ…

Read More

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಕೆಪಿಎಸ್ ಸಿ ಮಹತ್ವದ ಕ್ರಮ ಕೈಗೊಂಡಿದ್ದು, ಪರೀಕ್ಷೆಗಳಲ್ಲಿ ನೀಲಿ ಬಣ್ಣದ ಬಾಲ್ ಪೆನ್ ಬಳಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಪಿಎಸ್ ಸಿ ಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಇನ್ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಬಳಕೆ ಕಡ್ಡಾಯವಾಗಿ ಬಳಸಬೇಕು ಎಂದು ಸೂಚಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈವರೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್‌ನಿಂದ ಪರೀಕ್ಷೆ ಬರೆಯಬೇಕು ಎಂದು ಅಭ್ಯರ್ಥಿಗಳಿಗೆ ಸೂಚಿಸಲಾಗುತ್ತಿತ್ತು. ಆದರೀಗ ಸೂಚನೆಯಲ್ಲಿ ಮಾರ್ಪಾಡು ಮಾಡಿ  ಕೆಪಿಎಸ್‌ಸಿ ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಕಡ್ಡಾಯವಾಗಿ ನೀಲಿ ಬಣ್ಣದ ಪೆನ್ ಮಾತ್ರ ಬಳಸಬೇಕು ಎಂದು ಕೆಪಿಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಬಹುತೇಕ ಎಲ್ಲೆಡೆ ನೀಲಿ ಪೆನ್ ಬಳಕೆಯಲ್ಲಿದೆ. ಆದರೆ, ಕೆಪಿಎಸ್‌ಸಿ ಪರೀಕ್ಷೆಗೆ ಮಾತ್ರ ಕಪ್ಪು ಬಣ್ಣದ ಪೆನ್ ಬಳಕೆಗೆ ನಿರ್ದೇಶನ ನೀಡುವುದರಿಂದ ಅಭ್ಯರ್ಥಿಗಳು ಅನಗತ್ಯವಾಗಿ ಗೊಂದಲಕ್ಕೆ ಒಳಗಾಗುತ್ತಾರೆ. ಆಯೋಗದ ಸದಸ್ಯರು ಸಾಮಾನ್ಯವಾಗಿ ಬಳಕೆಯಲ್ಲಿರುವ ನೀಲಿ ಪೆನ್ ಬಳಕೆಗೆ ಸಲಹೆ ನೀಡಿದ…

Read More

ನರಗುಂದ: ರಾಮಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಂತ ಆರೋಪಿಗೆ 60 ದಿನಗಳ ಸಾದಾ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ನರಗುಂದದ ಸಿಜೆ ಮತ್ತು ಜೆಎಂಎಫ್ ಸಿ ಕೋರ್ಟ್ ರಾಮ ಮಂದಿರದ ಭಾವಚಿತ್ರದ ಮೇಲೆ ಅವಹೇಳನಕಾರಿ ಬರಹ ಬರೆದು, ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಂತ ವ್ಯಕ್ತಿಗೆ 60 ದಿನಗಳ ಜೈಲು ವಾಸ ಹಾಗೂ 5000 ದಂಡವನ್ನು ವಿಧಿಸಿದೆ. ನರಗುಂದದ ನಿವಾಸಿ ಅಕ್ಬರಸಾಬ ಖಾನ್ ಎಂಬುವರು ಅ.24, 2014ರಂದು ರಾಮಮಂದಿರ ಚಿತ್ರದ ಮೇಲೆ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ಅಕ್ಷೇಪಾರ್ಹ ಸಾಲುಗಳ್ನು ಬರೆದು ಪೋಸ್ಟ್ ಮಾಡಿದ್ದರು. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ವಿವಾದ ಆಲಿಸಿದಂತ ನ್ಯಾಯಧೀಶರು ಆರೋಪಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. https://kannadanewsnow.com/kannada/sub-registrars-to-go-on-strike-from-feb-27-boycott-service/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಶಿವಮೊಗ್ಗ: ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳಿಂದಲೇ ಭೂ ಮಾಫಿಯಾ ದಂಧೆ. ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿ ಅನಾಮಧೇಯ ವ್ಯಕ್ತಿಯ ಹೆಸರಿಗೆ ಮಾಡಲು ಪ್ರಯತ್ನ. ಈ ಘಟನೆ ಸಾಗರದಲ್ಲಿ ಬೆಳಕಿಗೆ ಬಂದಿದೆ. ಅದೂ ಸರ್ಕಾರಿ ಅಧಿಕಾರಿಯಿಂದಲೇ ಭೂಗಳ್ಳರ ಜೊತೆಗೆ ಸರ್ಕಾರಿ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ತಹಶೀಲ್ದಾರರಿಗೆ ಬರೆದಿರುವಂತ ಪತ್ರದಿಂದಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟದ ಸಮೀಪದ ಸರ್ವೆ ನಂ.12ರ ಸರ್ಕಾರಿ ಭೂಮಿಯನ್ನೇ ಭೂಗಳ್ಳರಿಗೆ ನಕಲಿ ದಾಖಲೆ ಸೃಷ್ಠಿಸಿ ಲಪಟಾಯಿಸೋದಕ್ಕೆ ಯತ್ನಿಸಿದಂತ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಸಾಗರದ ಹಿರಿಯ ಪತ್ರಕರ್ತ ಮಹೇಶ್ ಹೆಗಡೆ ಅವರು ಜನ ಹೋರಾಟ, ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ವರದಿಯನ್ನು ಮಾಡಿದ್ದರಿಂದ ಇಡೀ ಪ್ರಕರಣ ಬಟಾ ಬಯಲಾಗಿದೆ. ಸರ್ಕಾರಿ ಭೂಮಿ ಕಬಳಿಕೆಗೆ ನಕಲಿ ದಾಖಲೆ ಸೃಷ್ಟಿಯ ಬಹುದೊಂಡ ಹಗರಣ ಬೆಳಕಿಗೆ ಬಂದಿದೆ. ಏನಿದು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸೋ ಕೇಸ್? ಸಾಗರ ತಾಲ್ಲೂಕಿನಲ್ಲಿ ಭೂಮಿಗೆ ಬಂಗಾರದ ಬೆಲೆ ಬಂದಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವಂತ ಭೂಗಳ್ಳರು ಸರ್ಕಾರಿ ಜಾಗ…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾಧ್ಯಂತ ಫೆಬ್ರವರಿ 27ರಿಂದ ಸಬ್ ರಿಜಿಸ್ಟ್ರಾರ್ ಗಳು ಮುಷ್ಕರ ನಡೆಸಲಿದ್ದಾರೆ. ಈ ಹಿನ್ನಲೆಯಲ್ಲಿ ಫೆಬ್ರವರಿ 27ರಿಂದ ರಾಜ್ಯಾಧ್ಯಂತ ಆಸ್ತಿ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೌಕರರ ಸಂಘವು ಶುಕ್ರವಾರದಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಯವರಿಗೆ ಪತ್ರ ಸಲ್ಲಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೇ ಫೆಬ್ರವರಿ 27ರಿದಂ ಮುಷ್ಕರ ನಡೆಸುವುದಾಗಿ ಪತ್ರದಲ್ಲಿ ತಿಳಿಸಿದೆ. ಅಂದಹಾಗೇ ಕಾವೇರಿ-2 ತಂತ್ರಾಂಶದಲ್ಲಿನ ಸಮಸ್ಯೆ, ಇಸಿ, ಸರ್ವಸ್ ಸಮಸ್ಯೆ, ಐಟಿ ಅಧಿಕಾರಿಗಳ ಮಾಹಿತಿ ಹೆಸರಿನಲ್ಲಿ ಉಪ ನೋಂದಣಾಧಿಕಾರಿಗಳಿಗೆ ನೀಡುತ್ತಿರುವ ಕಿರುಕುಳ ಹಾಗೂ ಸಬ್ ರಿಜಿಸ್ಟ್ರಾರ್ ಗಳ ವರ್ಗಾವಣೆಗೆ ಪ್ರತ್ಯೇಕ ನಿಯಮಗಳ್ನು ರೂಪಿಸಲುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ ಫೆಬ್ರವರಿ.27ರಿಂದ ನೋಂದಣಿ ಪ್ರತ್ರಿಯೆ ಸ್ಥಗಿತಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/bengaluru-night-nakabandi-all-police-patrolling-mandatory/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: ಇನ್ನೊಂದು ವಾರದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ‌ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಾತನಾಡಿದ ಸಚಿವರು, ತಾಲೂಕು ಪಂಚಾಯಿತಿ ಮುಖಾಂತರ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರಸ್ತೆ ಅಪಘಾತದಿಂದಾಗಿ ವಿಶ್ರಾಂತಿಯಲ್ಲಿದ್ದುದರಿಂದಾಗಿ ಹಣ ಸಂದಾಯವಾಗಲು ಸ್ವಲ್ಪ ವಿಳಂಬ ಆಯಿತು. ಈಗಾಗಲೇ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶೀಘ್ರದಲ್ಲೇ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಇದುವರೆಗೆ ಬೆಂಗಳೂರಿನ ಕೇಂದ್ರ ಕಚೇರಿ ಮೂಲಕ ಹಣ‌ ಬಿಡುಗಡೆ ಮಾಡಲಾಗುತ್ತಿತ್ತು. ಇದನ್ನು ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ತಾಲೂಕು ಪಂಚಾಯಿತಿ ಮೂಲಕ ಹಣ ಬಿಡುಗಡೆ ಮಾಡಿ, ನಂತರ ನಮ್ಮ ಇಲಾಖೆಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳ (ಸಿಡಿಪಿಓ) ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನೊಂದು ವಾರದಲ್ಲಿ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ವಿರೋಧ…

Read More

ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆಯಲ್ಲಿ ನಡೆಯುತ್ತಿರುವಂತ ಅಪರಾಧ ತಡೆಗಾಗಿ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಎಲ್ಲಾ ಹಂತದ ಪೊಲೀಸರಿಗೆ ರಾತ್ರಿ ಗಸ್ತು ಕಡ್ಡಾಯಗೊಳಿಸಲಾಗಿದೆ. ಜೊತೆಗೆ ನಾಕಾಬಂದಿ ನಡೆಸುವಂತೆಯೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಬಿ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವಂತ ಅವರು, ನಗರದಲ್ಲಿ ರಾತ್ರಿ ವೇಳೆ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ ಎಲ್ಲಾ ವಿಭಾಗಗಳ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ನಾಕಾಬಂದಿ ಹಾಕುವುದಾಗಿ ತಿಳಿಸಿದರು. ನಗರದಲ್ಲಿ ಪೊಲೀಸರ ರಾತ್ರಿ ಗಸ್ತು ವ್ಯವಸ್ಥೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ ಮಾಡಿ ಚರ್ಚಿಸಲಾಗಿದೆ ಎಂದರು. ಬೆಂಗಳೂರಲ್ಲಿ ರಾತ್ರಿ ಗಸ್ತು, ಇ-ಬೀಟ್ ವ್ಯವಸ್ಥೆಯನ್ನು ಸುಧಾರಣೆಗೆ ತರುವ ನಿಟ್ಟಿನಲ್ಲಿ ಸಿಬ್ಬಂದಿಗೆ ವೀಡಿಯೋ ಕಾನ್ಫೆರೆನ್ಸ್ ಮುಖಾಂತರ ತರಬೇತಿ ನೀಡಲಾಗುವುದು ಎಂದು ಹೇಳಿದರು. https://kannadanewsnow.com/kannada/bengaluru-man-stabbed-to-death-by-mobile-thieves-in-majeschik/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/

Read More

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025ರ ಭಾನುವಾರದ ಇಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಏ 8ನೇ, 9ನೇ ಬ್ಲಾಕ್, ರೈಲ್ವೆ ಲೇಔಟ್, ಉಪಕಾರ ಲೇಔಟ್, ಬಾಲಾಜಿ ಲೇಔಟ್, ಭವಾನಿಲೇಔಟ್, ಗೊಲ್ಲರಹಟ್ಟಿ, ರತ್ನನಗರ, ಮಾರ್ಡನ್ ಲೇಔಟ್, ಡಿ ಗ್ರೂಪ್ ಲೇಔಟ್, ಹೇರೋಹಳ್ಳಿ, ತುಂಗಾನಗರ, ಕೇಪೇಗೌಡನಗರ, ಪೋಲಿಸ್ ಕ್ವಾಟ್ರಸ್, ಬೈರವೇಶ್ವರನಗರ ಇಂಡಸ್ಟ್ರೀಯಲ್ ಏಸ್ಟೇಟ್, ಹೊಸಹಳ್ಳಿ, ಚಿಕ್ಕ ಗೊಲ್ಲರಹಟ್ಟಿ, ಕಲ್ಲಹಳ್ಳಿ, ಹೊಸಹಳ್ಳಿ, ಬಿ.ಎಂ.ಟಿಸಿ. ಡಿಪೋ, ಅನಿಕೇತನನಗರ, ಪಂಮುಖಿ ಲೇಔಟ್, ನಡೇಕೇರಪ್ಪ ಇಂಡಸ್ಟ್ರೀಯಲ್ ಎಸ್ಟೇಟ್, ಮಹದೇಶ್ವರನಗರ, ಮಾರುತಿನಗರ, ನಾಗರಹೊಳೆನಗರ, ಮುನೇಶ್ವರ ನಗರ, ಸಂಜೀವ್ ನಗರ, ಅನ್ನಪೂರ್ಣೇಶ್ವರು ನಗರ, ಹೆಲ್ತ್ ಲೇಔಟ್, ಸುಂಕದಕಟ್ಟೆ ಇಂಡಸ್ಟ್ರೀಯಲ್ ಏರಿಯಾ ಕರೆಂಟ್…

Read More