Author: kannadanewsnow09

ಶಿವಮೊಗ್ಗ : ಜಿಲ್ಲೆಯ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಯು.ಯು.ಸಿ.ಎಂ.ಎಸ್. ಪೋರ್ಟಲ್ ಮೂಲಕ ಅ.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಪ್ರವೇಶಾತಿಗೆ ಸಂಬಂಧಿಸಿದ ಸೂಚನೆಗಳು: ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ ಡಿಪ್ಲೋಮಾ/ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿಯನ್ನು ಯು.ಯು.ಸಿ.ಎಂ.ಎಸ್. (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ) ಪೋರ್ಟಲ್ ಮೂಲಕ ಮಾಡಲಾಗುವುದು. ಯು.ಯು.ಸಿ.ಎಂ.ಎಸ್.ಗೆ ಸಂಬAಧಿಸಿದ ಎಲ್ಲಾ ಮಾಹಿತಿಯು https://uucms.karnataka.gov.in/Login/Index ನಲ್ಲಿ ಲಭ್ಯವಿರುತ್ತದೆ. ವಿಶ್ವವಿದ್ಯಾಲಯದ ಆವರಣ, ಶಂಕರಘಟ್ಟ., ಸ್ನಾತಕೋತ್ತರ ಕೇಂದ್ರ ಕಡೂರು ಹಾಗೂ ಚಿಕ್ಕಮಗಳೂರು, ಸಹ್ಯಾದ್ರಿ ಕಾಲೇಜು ಆವರಣ, ಶಿವಮೊಗ್ಗ ಮತ್ತು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳಲ್ಲಿ ಲಭ್ಯವಿರುವಂತೆ ಕೋರ್ಸ್ಗಳಿಗೆ ಪ್ರವೇಶಾತಿ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು https://uucms.karnataka.gov.in/Login/Index ನಲ್ಲಿ ಲಭ್ಯವಿರುವ ಯುಯುಸಿಎಂಎಸ್ ಪೋರ್ಟಲ್ ಮೂಲಕ ಅರ್ಜಿಸಲ್ಲಿಸುವುದು. ಹಾಗೂ ಅರ್ಜಿ ಮತ್ತು ಸಂಬAಧಪಟ್ಟ ದಾಖಲೆಗಳನ್ನು (ಹಾರ್ಡ್ ಕಾಪಿ) ಸಂಬAಧಿಸಿದ ಸ್ನಾತಕೋತ್ತರ ವಿಭಾಗಗಳಿಗೆ ಕಡ್ಡಾಯವಾಗಿ ಸಲ್ಲಿಸುವುದು. ವಿಶ್ವವಿದ್ಯಾಲಯದ ಸಂಯೋಜಿತ…

Read More

ಬಳ್ಳಾರಿ : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು. ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಕಂಪ್ಲಿ ಪಟ್ಟಣದ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನವಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅನುದಾನದ ಕೊರತೆ ಇಲ್ಲ. ಅದೇರೀತಿಯಾಗಿ ಎಲ್ಲಾ…

Read More

ಬೆಂಗಳೂರು: ಕಳೆದ ಒಂದು ವರ್ಷದಿಂದ ಎಸಿ (ಉಪ ವಿಭಾಗಾಧಿಕಾರಿ) ನ್ಯಾಯಾಲಯಗಳಲ್ಲಿ ತಕರಾರು ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸುತ್ತಿದ್ದು, ಬಾಕಿ ಪ್ರಕರಣಗಳನ್ನೂ ಮುಂದಿನ ಆರು ತಿಂಗಳಲ್ಲಿ ವಿಲೇಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸಮಯದ ಗಡುವು ನೀಡಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಎಸಿ ಕೋರ್ಟ್ ಗಳಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. “ಕಳೆದ ವರ್ಷ ನಾನು ಕಂದಾಯ ಇಲಾಖೆ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡ ಸಂದರ್ಭದಲ್ಲಿ ಎಸಿ ನ್ಯಾಯಾಲಯಗಳಲ್ಲಿ 73,682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 33,207 ಪ್ರಕರಣಗಳನ್ನು ಕೇವಲ ಒಂದು ವರ್ಷದ ಅವಧಿಯಲ್ಲಿ ಇತ್ಯರ್ಥಗೊಳಿಸಿರುವುದು ಉತ್ತಮ ಬೆಳವಣಿಗೆ. ಈ ಮೂಲಕ ರೈತರು -ಸಾರ್ವಜನಿಕರು ಅನಗತ್ಯವಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದಕ್ಕೆ ಬ್ರೇಕ್ ಹಾಕಿರುವುದು, ಹಲವು ರೈತರಿಗೆ ನ್ಯಾಯ ಒದಗಿಸಿ ನೆಮ್ಮದಿ ನೀಡಿರುವುದು ಸಾರ್ಥಕದ ಕೆಲಸ” ಎಂದು ಮೆಚ್ಚುಗೆ ಸೂಚಿಸಿದರು. “ಎಸಿ ಕೋರ್ಟ್ನಲ್ಲಿರುವ ತಕರಾರು ಪ್ರಕರಣಗಳನ್ನು ಆರು…

Read More

ನವದೆಹಲಿ: ಟಾಟಾ ಸನ್ಸ್ ಅಧ್ಯಕ್ಷ ರತನ್ ಟಾಟಾ ಅವರ ಸ್ಥಿತಿ ಗಂಭೀರವಾಗಿದೆ. ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಮೂಲಗಳು ಬುಧವಾರ ತಿಳಿಸಿವೆ. 86 ವರ್ಷದ ಟಾಟಾ ಅವರು ತಮ್ಮ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ವಾಡಿಕೆಯ ವೈದ್ಯಕೀಯ ತನಿಖೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಸೋಮವಾರ ಹೇಳಿದ್ದಾರೆ. ಟಾಟಾ ಅವರ ಪ್ರತಿನಿಧಿ ಬುಧವಾರ ಅವರ ಸ್ಥಿತಿಯ ಬಗ್ಗೆ ನವೀಕರಣಕ್ಕಾಗಿ ಮಾಡಿದ ಮನವಿಗೆ ತಕ್ಷಣ ಪ್ರತಿಕ್ರಿಯಿಸಲಿಲ್ಲ. ಆದರೇ ಮೂಲಗಳಿಂದ ತಿಳಿದು ಬಂದ ಮಾಹಿತಿಯಂತೆ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ರತನ್ ಟಾಟಾ ಅವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/ https://kannadanewsnow.com/kannada/demu-special-train-to-run-between-arasikere-and-mysuru-on-the-occasion-of-dasara-festival/ https://kannadanewsnow.com/kannada/important-information-for-property-owners-in-bengaluru-follow-this-step-view-e-khata-online/

Read More

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12 ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ಆಯುಧ ಪೂಜೆ, ವಿಜಯದಶಮಿಯ ಹೂ, ಇತರೆ ವಸ್ತುಗಳ ಮಾರಾಟಕ್ಕೆ ಅವಕಾಶ ಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ ವ್ಯವಸ್ಥೆಗೆ ಹಾಗೂ ಸಾರ್ವಜನಿಕರಿಗೆ, ತೊಂದರೆಯಾಗುತ್ತಿರುವ ಕಾರಣ ಅಕ್ಟೋಬರ್ 10 ರಿಂದ 12 ರವರೆಗೆ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತ್ರವೇ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಆದೇಶಿಸಿತ್ತು. ಅದರಂತೆ ಜಾರಿಗೊಳಿಸಿ ಆದೇಶ ಕೂಡ ಮಾಡಿದೆ. ಆದರೇ ಕೆಲ ಪ್ರಾಂಶುಪಾಲರು ವರ್ಗಾವಣೆಯಾದ ನಂತ್ರ ಉಂಟಾಗಿರುವ ಸಮಸ್ಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಹಾಲಿ ಹೆಚ್.ಎಂಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಸಂಬಂಧ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಅಭಿವೃದ್ಧಿಪಡಿಸಲಾಗಿರುವ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್‌-ಲೈನ್‌ನಲ್ಲಿ ದಾಖಲಿಸಲು ಉಲ್ಲೇಖ(1)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಈ ಕುರಿತು ಆನ್‌-ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಮುಂಚೆ ಕಾರ್ಯ ನಿರ್ವಹಿಸುತ್ತಿದ್ದ ಶಾಲಾ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆಗೆ OTP One Time Password) ಸ್ವೀಕೃತಿಯಾಗುತ್ತಿರುವ ಬಗ್ಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರುಗಳಿಂದ ದೂರುಗಳು ಬರುತ್ತಿರುವುದು ಈ ಕಛೇರಿ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಸ್ಯಾಟ್ಸ್ (SATS)…

Read More

ಬೆಂಗಳೂರು: ರಾಜ್ಯದಲ್ಲಿ ಬಹುಕೋಟಿ ಹಣ ವರ್ಗಾವಣೆ ಅವ್ಯವಹಾರವೆಂದೇ ಕರೆಯಲಾಗುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಇಡಿಯಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಈ ಬಳಿಕ ಜಾರಿ ನಿರ್ದೇಶನಾಲದಯದ ಅಧಿಕಾರಿಗಳಿಂದ ಕೋರ್ಟ್ ಗೆ ಪ್ರಾಸಿಕ್ಯೂಷನ್ ದೂರು, ಅಂದರೆ ಪ್ರಕರಣ ಸಂಬಂಧ ವರದಿಯನ್ನು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಪ್ರಾಸಿಕ್ಯೂಷನ್ ದೂರು (Prosecution Complaint – PC) ದಾಖಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಗಮನಕ್ಕೆ ತೆಗೆದುಕೊಂಡಿದೆ ಎಂದು ತಿಳಿಸಿದೆ. https://twitter.com/dir_ed/status/1843977188007461301?t=rBZyE3bssPyR91wV3PLTvw&s=08 https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/ https://kannadanewsnow.com/kannada/important-information-for-property-owners-in-bengaluru-follow-this-step-view-e-khata-online/ https://kannadanewsnow.com/kannada/demu-special-train-to-run-between-arasikere-and-mysuru-on-the-occasion-of-dasara-festival/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಸಿಲಿಕಾನ್ ಸಿಟಿಯಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಇ-ಖಾತಾ ತಂತ್ತಾಂಶ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈಗ ಕುಳಿತಲ್ಲೇ ಬೆಂಗಳೂರಿನ ಆಸ್ತಿ ಮಾಲೀಕರು ತಮ್ಮ ಡ್ರಾಫ್ಟ್ ಇ-ಖಾತಾವನ್ನು ವೀಕ್ಷಿಸಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ಇ-ಆಸ್ತಿ ವ್ಯವಸ್ಥೆಯಲ್ಲಿ ನಿಮ್ಮ ಡ್ರಾಫ್ಟ್ ಇ-ಖಾತಾ ಅನ್ನು ಆನ್ ಲೈನ್ ನಲ್ಲಿ ನೋಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ನೀವು ಕುಳಿತಲ್ಲೇ ನಿಮ್ಮ ಡ್ರಾಫ್ಟ್ ಇ-ಖಾತಾ ನೋಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ, ವೀಕ್ಷಿಸಿ ಎಂದು ತಿಳಿಸಿದೆ. ಈ ಹಂತ ಅನುಸರಿಸಿ, ಕುಳಿತಲ್ಲೇ ‘ಆನ್ ಲೈನ್’ ಮೂಲಕ ನಿಮ್ಮ ‘ಇ-ಖಾತಾ’ ವೀಕ್ಷಿಸಿ (1) ಎಲ್ಲಾ ಕರಡು ಇ-ಖಾತಾಗಳನ್ನು(ಸುಮಾರು 22 ಲಕ್ಷ) ವಾರ್ಡ್ ವಾರು BBMPeAasthi.karnataka.gov.in ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. (2) ನಿಮ್ಮ ಸ್ವತ್ತಿನ ಆಸ್ತಿ ತೆರಿಗೆಯ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದು. (3)…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರ ವಕೀಲರ ವಾದಕ್ಕೆ ಪ್ರತಿವಾದ ಸಲ್ಲಿಸಿದಂತ ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ವಾದವನ್ನು ಆಲಿಸಿದಂತ ನ್ಯಾಯಪೀಠವು, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈ ಮೂಲಕ ನಟ ದರ್ಶನ್ ಗೆ ಇಂದು ಶಾಕ್ ಆಗಿದೆ. ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಇಂದು ವಾದ ಮುಂದುವರೆಸುತ್ತಾ, ರಿಮ್ಯಾಂಡ್ ಅರ್ಜಿಯೊಂದಿಕೆ ಕೇಸ್ ಡೈರಿಯನ್ನೂ ಹಾಜರುಪಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೂಡ ಕೇಸ್ ಡೈರಿ ಪರಿಶೀಲಿಸಲಾಗಿದೆ. ಬಂಧನದ ಕಾರಣಗಳ್ನು ಹೇಳಿಲ್ಲವೆಂದ ಕೆಲ ಆರೋಪಿಗಳು ಹೇಳಿದ್ದಾರೆ. ಆದರೇ ಕೋರ್ಟ್ ಅವಗಾಹನೆಗೆ ತರಲಾಗಿದೆ ಎಂದರು. ಕೇಸ್ ಡೈರಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.…

Read More

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್‌ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸರಬರಾಜು ಮಾಡಿ, ಸಿಗುವಂತೆ ಆಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. https://twitter.com/KarnatakaVarthe/status/1843969954338771115 ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು.…

Read More