Author: kannadanewsnow09

ಬೆಂಗಳೂರು: ಶಿವಮೊಗ್ಗಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಲ್ಲೆಯ ಮೂವರಿಗೆ ಝೀಕಾ ವೈರಸ್ ದೃಢಪಟ್ಟಿದೆ. ಇವರಲ್ಲಿ ಒಬ್ಬರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದಲ್ಲಿ ಒಟ್ಟು 9 ಝೀಕಾ ವೃರಸ್ ಪ್ರಕರಣಗಳು ಪತ್ತೆಯಾಗಿದ್ದು, ಝೀಕಾ ಹೆಚ್ಚಾಗಿ ಕಂಡುಬಂದಿರುವ ಸ್ಥಳಗಳಲ್ಲಿ ಹೆಚ್ಚಿನ ತಪಾಸಣೆ ನಡೆಸಿ. ಶಿವಮೊಗ್ಗ 3 ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ 6 ಜನರಿಗೆ ಝೀಕಾ ವೈರಸ್ ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿಯಲ್ಲಿ 5 ಮಹಿಳೆಯರಿಗೆ ಝೀಕಾ ಪತ್ತೆಯಾಗಿದ್ದು, ವೈರಸ್ ಗೆ ತುತ್ತಾದ ಗರ್ಭೀಣಿ ಸ್ತ್ರೀಯರ ಆರೈಕೆಗೆ ಹೆಚ್ಚಿನ ಒತ್ತು ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗದ 73 ವರ್ಷದ…

Read More

ಬೆಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್, ಝೀಕಾ ವೈರಸ್ ಬಗ್ಗೆ ಮುಂಜಾಗೃತ ಕ್ರಮವನ್ನು ವಹಿಸಲಾಗಿದೆ. ಇದರ ನಡುವೆ ಈವರೆಗೆ 9 ಝೀಕಾ ವೈರಸ್ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದ್ದಾವೆ. ಜನರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೊರದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಪ್ರಾದೇಶಿಕ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಕುರಿತು ಚರ್ಚೆ ನಡೆಸಿದ ಸಚಿವರು, ಏರ್ಪೋರ್ಟ್ ಗಳಲ್ಲಿ ಮಂಕಿಪಾಕ್ಸ್ ವೈರಸ್ ಗುಣಲಕ್ಷಣಗಳು ಕಂಡುಬಂದರೆ ಎಚ್ಚರಿಕೆ ವಹಿಸುವಂತೆ ರಾಜ್ಯದ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ವೇಳೆ ಮಂಕಿಪಾಕ್ಸ್ ವೈರಸ್ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ರಾಜ್ಯದಲ್ಲಿ ಹಾಗೂ…

Read More

ಬೆಂಗಳೂರು: ಕಾಂಗ್ರೆಸ್ಸಿನವರು ಮಾನ್ಯ ರಾಜ್ಯಪಾಲರ ಪ್ರತಿಕೃತಿ ದಹಿಸಿದ್ದಾರೆ, ಅವರನ್ನು ನಿಂದಿಸಿದ್ದಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋ಼ಷಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪ್ರಾಸಿಕ್ಯೂಷನ್ ಬಗ್ಗೆ ಕೋರ್ಟ್ ನಲ್ಲಿ ಪ್ರಶ್ನೆ ಮಾಡುವ ಹಕ್ಕಿದೆ, ಮಾಡಲಿ; ಆದರೆ, ಒಬ್ಬ ಹಿಂದುಳಿದ, ದಲಿತ ವರ್ಗದ ರಾಜ್ಯಪಾಲರ ಬಗ್ಗೆ ಅವಾಚ್ಯವಾಗಿ ಮಾತನಾಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ. ರಾಜ್ಯಪಾಲರು ದಲಿತ ವರ್ಗಕ್ಕೆ ಸೇರಿದವರು, ಅತ್ಯಂತ ಹಿಂದುಳಿದ ವರ್ಗದಿಂದ ಬಂದವರು; ದಲಿತರ ಬಗ್ಗೆ ಕಾಳಜಿ ಇದೆ ಎಂದು ಹೇಳುತ್ತಾರೆ, ದಲಿತರ ಉದ್ಧಾರಕರು ತಾವೇ ಅಂತಾರೆ. ಕಾಂಗ್ರೆಸ್ ಪಕ್ಷದವರು ಇವತ್ತು ಈ ರೀತಿ ನಡೆದುಕೊಂಡಿದ್ದು ಗಂಭೀರವಾದ ವಿಚಾರ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರಿಗೆ ಬಾಂಗ್ಲಾದಲ್ಲಿ ಬಂದAತಹ ಪರಿಸ್ಥಿತಿ ಬರಬಹುದು ಎಂದು ಕಾಂಗ್ರೆಸ್ಸಿನ ನಾಯಕರೊಬ್ಬರು ಹೇಳಿದ್ದಾರೆ ಎಂದು ಅವರು ಆಕ್ಷೇಪಿಸಿದರು. ಕಾನೂನು ಹೋರಾಟ ಮಾಡಿ ಆದರೆ ಹಿಂಸಾಚಾರ ಪ್ರತಿಭಟನೆ ಯಾಕೆ? ಎಂದು ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಕಲ್ಲು ತೂರಿದ್ದಾರೆ, ಮೈಸೂರಲ್ಲಿ ಹಿಂಸಾಚಾರ…

Read More

ಬೆಂಗಳೂರು : “ಪ್ರಾಥಮಿಕ ಶಿಕ್ಷಣದಲ್ಲಿ ಕರ್ನಾಟಕ ಕ್ರಾಂತಿ ಮಾಡಬೇಕು. ರಾಜ್ಯದ ಎಲ್ಲಾ ಕಂಪೆನಿಗಳು ಸರ್ಕಾರದ ಜೊತೆ ಕೈ ಜೋಡಿಸಿದರೆ ಮೂರು ವರ್ಷಗಳಲ್ಲಿ 2 ಸಾವಿರ ಕೆಪಿಎಸ್ ಶಾಲೆಗಳ ನಿರ್ಮಾಣದ ಕನಸನ್ನು ನನಸು ಮಾಡಬಹುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಿಎಸ್ ಆರ್ ಶಿಕ್ಷಣ ಸಮ್ಮೇಳನದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು; “ಕೆಪಿಎಸ್ ಶಾಲೆಗಳ ನಿರ್ಮಾಣಕ್ಖಾಗಿ ಸಮತ್ವ ಎನ್ನುವ ಕಾರ್ಯಕ್ರಮವನ್ನು ಸರ್ಕಾರ ಪರಿಚಯಿಸುತ್ತಿದೆ. ಶಾಲೆಗಳ ನಿರ್ಮಾಣ ಮಾಡುವ ಕಂಪೆನಿಗಳಿಗೆ ಗುತ್ತಿಗೆದಾರರು, ಶಾಲಾ ಕಟ್ಟಡ ವಾಸ್ತುಶಿಲ್ಪಿಗಳು ಸೇರಿದಂತೆ ತಾಂತ್ರಿಕ ಬೆಂಬಲ ನೀಡಲಾಗುವುದು. ಸರ್ಕಾರದ ಸಲಹೆ ಪಡೆದು ಕಂಪೆನಿಗಳು ಅವರ ಕಲ್ಪನೆಯ ವಿನ್ಯಾಸದ ಶಾಲೆಗಳನ್ನು ನಿರ್ಮಿಸಬಹುದು.” “ಕರ್ನಾಟಕದಲ್ಲಿ 43 ಬೃಹತ್ ಕಂಪೆನಿಗಳಿವೆ. ಇವುಗಳು 4 ಲಕ್ಷದ 8 ಸಾವಿರ ಕೋಟಿ ಲಾಭಾಂಶವನ್ನು ಘೋಷಿಸಿಕೊಂಡಿವೆ. ಇವುಗಳ ಸಿಎಸ್ ಆರ್ ಅನುದಾನದ ಮೊತ್ತ 8.63 ಸಾವಿರ ಕೋಟಿಯಾಗಲಿದೆ. ಇದರಲ್ಲಿ 6.6 ಸಾವಿರ ಕೋಟಿಯನ್ನು ಶಿಕ್ಷಣದ ಮೇಲೆ ಖರ್ಚು ಮಾಡುತ್ತಿವೆ. ಕೇವಲ 50 ಕಂಪೆನಿಗಳು 10…

Read More

ಬೆಂಗಳೂರು: ಕರ್ನಾಟಕಕ್ಕೂ ಝೀಕಾ ವೈರಸ್ ಕಾಲಿಟ್ಟಿದೆ. ಜಿಗಣಿಯಲ್ಲಿ ಐವರಿಗೆ ಝೀಕಾ ವೈರಸ್ ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಸಾರ್ವಜನಿಕರು ಝಿಕಾ ವೈರಸ್ ಬಗ್ಗೆ ಭಯಬೇಡ. ಕೆಲ ಎಚ್ಚರಿಕೆ ಇರಲಿ ಅಂತ ಆರೋಗ್ಯ ಇಲಾಖೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಝಿಕಾ ವೈರಸ್ ಲಕ್ಷಣಗಳು ಅಂದ್ರೆ ಅತಿಯಾದ ತೆಲೆನೋವು, ಕೆಂಪಾದ ಕಣ್ಣು, ಜ್ವರ ಹಾಗೂ ಮೈಯಲ್ಲಿ ಗಂಧೆಗಳು ಉಂಟಾಗುತ್ತವೆ ಎಂದು ತಿಳಿಸಿದೆ. ಈ ಲಕ್ಷಣಗಳು ಕಂಡು ಬಂದಲ್ಲಿ, ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ. ಅದು ಝೀಕಾ ವೈರಸ್ ಹೌದೋ ಅಲ್ಲವೋ ಎನ್ನುವ ಬಗ್ಗೆಯೂ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದೆ. https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/

Read More

ಅಮೇರಿಕಾ: ಹಗಲಿನ ದೂರದರ್ಶನ ಭೂದೃಶ್ಯದಲ್ಲಿ ಕ್ರಾಂತಿಯನ್ನುಂಟು ಮಾಡಿದ ಪ್ರವರ್ತಕ ಟಿವಿ ಟಾಕ್ ಶೋ ನಿರೂಪಕ ಫಿಲ್ ಡೊನಾಹ್ಯೂ ತಮ್ಮ 88 ನೇ ವಯಸ್ಸಿನಲ್ಲಿ ನಿಧನರಾದರು. ದೀರ್ಘಕಾಲದ ಅನಾರೋಗ್ಯದ ನಂತರ ಡೊನಾಹ್ಯೂ ಭಾನುವಾರ ರಾತ್ರಿ ಮನೆಯಲ್ಲಿ ನಿಧನರಾದರು ಎಂದು ಅವರ ಕುಟುಂಬ ಆಗಸ್ಟ್ 19 ರ ಸೋಮವಾರ ದೃಢಪಡಿಸಿದೆ. ಡೊನಾಹ್ಯೂ ಅವರಿಗೆ 88 ವರ್ಷ ವಯಸ್ಸಾಗಿತ್ತು ಮತ್ತು ದೀರ್ಘಕಾಲದ ಅನಾರೋಗ್ಯದ ನಂತರ ಶಾಂತಿಯುತವಾಗಿ ನಿಧನರಾದರು ಎಂದು ಅವರ ಕುಟುಂಬ ನೀಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 44 ವರ್ಷದ ಪತ್ನಿ ಮಾರ್ಲೊ ಥಾಮಸ್, ಸಹೋದರಿ, ಮಕ್ಕಳು, ಮೊಮ್ಮಕ್ಕಳು ಮತ್ತು ಅವರ ಪ್ರೀತಿಯ ಗೋಲ್ಡನ್ ರಿಟ್ರೀವರ್ ಚಾರ್ಲಿ ಅವರೊಂದಿಗೆ ಪತ್ರಕರ್ತ ಫಿಲ್ ಡೊನಾಹ್ಯೂ ಭಾನುವಾರ ರಾತ್ರಿ ಮನೆಯಲ್ಲಿ ನಿಧನರಾದರು. ಅವರ ಸಾವಿಗೆ ಮೂರು ತಿಂಗಳ ಮೊದಲು, ಪ್ರಸಾರ ಮತ್ತು ಸಾರ್ವಜನಿಕ ಸಂವಾದಕ್ಕೆ ನೀಡಿದ ಗಮನಾರ್ಹ ಕೊಡುಗೆಗಳನ್ನು ಗುರುತಿಸಿ ಅಧ್ಯಕ್ಷ ಜೋ ಬೈಡನ್ ಡೊನಾಹ್ಯೂ ಅವರಿಗೆ ಪ್ರೆಸಿಡೆನ್ಷಿಯಲ್ ಮೆಡಲ್ ಆಫ್ ಫ್ರೀಡಂ ನೀಡಿ ಗೌರವಿಸಿದರು. ಅವರ ವೃತ್ತಿಜೀವನದ ಉತ್ತುಂಗದಲ್ಲಿ,…

Read More

ಬೆಂಗಳೂರು: ರಾಜ್ಯದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಎನ್ಎಂಎಂಎಸ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್.5 ಕೊನೆಯ ದಿನವಾಗಿದೆ. NMMS ಪರೀಕ್ಷೆಯನ್ನು 2024ನೇ ಡಿಸೆಂಬರ್‌ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್‌ಕ್ಯುಎಎಸಿ ವತಿಯಿಂದ ನಡೆಸಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು 2024ನೇ ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ…

Read More

ಬೆಂಗಳೂರು: ಸಕಲೇಶಪುರ ಹಾಗೂ ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆಯೇ ಮಳೆಯಿಂದಾಗಿ ಭೂಕುಸಿತಗೊಂಡು ಮಣ್ಣು ಕುಸಿದಿತ್ತು. ಇಂದು ಈ ಮಣ್ಣುನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿತ್ತು, ನಾಳೆಯಿಂದ ಈ ಮಾರ್ಗದಲ್ಲಿ ಕೆಲ ರೈಲುಗಳ ಸಂಚಾರ ಪುನರಾರಂಭಿಸಲಾಗುತ್ತದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿತ್ತು, ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಪುನಃಸ್ಥಾಪನೆ ಕಾರ್ಯ ಪೂರ್ಣಗೊಂಡಿದೆ. ಹಳಿಯಲ್ಲಿನ ಎಲ್ಲಾ ಅಡೆತಡೆಗಳನ್ನು ತೆರವುಗೊಳಿಸಲಾಗಿದೆ ಮತ್ತು ಸಂಜೆ 4:45 ರವರೆಗೆ ಹಳಿ ಎಲ್ಲಾ ರೈಲು ಕಾರ್ಯಾಚರಣೆಗಳಿಗೆ ಸೂಕ್ತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದಿದೆ. ನಾಳೆಯಿಂದ ಈ ಮಾರ್ಗದಲ್ಲಿ ಈ ರೈಲುಗಳ ಸಂಚಾರ ಪುನರಾರಂಭ * ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ * ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್ಪ್ರೆಸ್ * ರೈಲು ಸಂಖ್ಯೆ 16595 ಕೆಎಸ್ಆರ್ ಬೆಂಗಳೂರು-ಕಾರವಾರ ಎಕ್ಸ್ಪ್ರೆಸ್ * ರೈಲು ಸಂಖ್ಯೆ 16596 ಕಾರವಾರ-ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ * ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ಪ್ರೆಸ್…

Read More

ಶಿವಮೊಗ್ಗ: ಬಿಜೆಪಿ, ಜೆಡಿಎಸ್ ಶಾಸಕರ ವಿರುದ್ಧದ ಹಗರಣದ ಸಂದರ್ಭದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದಾಗ ನೀಡಲಿಲ್ಲ. ಈಗ ಬಿಜೆಪಿ ಏಜೆಂಟ್ ರೀತಿಯಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿಸಿದ್ದಾರೆ. ಪಿಎಸ್ಐ ಹಗರಣದ ತನಿಖೆಯಾದ್ರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ. ಅದರಲ್ಲಿ ಎರಡು ಮಾತಿಲ್ಲ ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಭವಿಷ್ಯ ನುಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು,  ಪಿಎಸ್ಐ ಹಗರಣದ ತನಿಖೆ ಮಾಡಿದ್ರೆ ವಿಜಯೇಂದ್ರ ಜೈಲಿಗೆ ಹೋಗ್ತಾರೆ. ವಿಜಯೇಂದ್ರ ನೀವು ಸಹ ಜೈಲಿಗೆ ಹೋಗ್ತೀರ. ನಿಮ್ಮ ಅಣ್ಣನೂ ಜೈಲಿಗೆ ಹೋಗ್ತಾರೆ ನೋಡ್ತಾ ಇರಿ ಎಂಬುದಾಗಿ ಹೇಳಿದರು. ನಿಮ್ಮ ಹಗರಣವನ್ನು ತೆಗಿತೀವಿ. ನಿಮ್ಮ ಹಗರಣವನ್ನು ಬಿಡುವುದಿಲ್ಲ. ರಾಜ್ಯಪಾಲರ ಮನೆ ಮುತ್ತಿಗೆ ಹಾಕದೇ ಬಿಡುವುದಿಲ್ಲ ಎಂಬುದಾಗಿ ಶಿವಮೊಗ್ಗದಲ್ಲಿ ಶಾಸಕ ಬೇಳೂರು ಗೋಪಾಲ ಕೃಷ್ಣ ಅವರು ಗುಡುಗಿದರು. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/mla-belur-gopalakrishna-accuses-governor-of-defiance-of-bjp-agent/ https://kannadanewsnow.com/kannada/breaking-nwkrtc-bus-overturns-in-haveri-13-passengers-seriously-injured-hospitalised/ https://kannadanewsnow.com/kannada/congress-worker-dies-of-cardiac-arrest-during-press-conference-in-bengaluru/

Read More

ಶಿವಮೊಗ್ಗ: ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಅವರು ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜ್ಯಪಾಲರಿಗೆ ಧಿಕ್ಕಾರ, ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ಧಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯಪಾಲರ ನಡೆಯಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ರಾಜ್ಯಪಾಲರಿಗೆ ಗೌರವ ತರಲ್ಲ. ರಾಜ್ಯಪಾಲರು ಬಿಜೆಪಿ ಏಜೆಂಟ್ ಆಗಿದ್ದಾರೆ. ಅವರಿಗೆ ಧಿಕ್ಕಾರವನ್ನು ಕೂಗಿ ಆಕ್ರೋಶ ಹೊರ ಹಾಕಿದರು. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿತ್ತು. ಆದರೇ ಈವರೆಗೆ ಕೊಟ್ಟಿಲ್ಲ. ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡಲು ನಿಮಗೆ ಹಕ್ಕಿಲ್ಲ. ರಾಜ್ಯಪಾಲರೇ ನಿಮಗೆ ನಾಚಿಕೆ ಆಗಬೇಕು ಎಂಬುದಾಗಿ ಗರಂ ಆದರು.…

Read More