Subscribe to Updates
Get the latest creative news from FooBar about art, design and business.
Author: kannadanewsnow09
ಕೊಪ್ಪಳ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ಕೊಪ್ಪಳದಲ್ಲಿ ಲೆವೆಲ್ ಕ್ರಾಸಿಂಗ್ (LC) 66ರ ಬದಲಿಗೆ ಹೊಸದಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆಯನ್ನು (ROB) ಉದ್ಘಾಟಿಸಿದರು. ಈ ಪ್ರಮುಖ ಮೂಲಸೌಕರ್ಯ ಯೋಜನೆಯನ್ನು 2018-19ನೇ ಸಾಲಿನಲ್ಲಿ ಮಂಜೂರಾಗಿದ್ದು, 44.28 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ, ಈ ರೈಲ್ವೆ ಸೇತುವೆಯು ಕುಷ್ಟಗಿ-ಕೊಪ್ಪಳ ಪ್ರದೇಶದ ನಿವಾಸಿಗಳಿಗೆ ಸುಗಮ ಸಂಪರ್ಕವನ್ನು ಹೆಚ್ಚಿಸುತ್ತದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ರೈಲ್ವೆ ಮೇಲ್ಸೇತುವೆ ಉದ್ಘಾಟನೆಯು ಕೊಪ್ಪಳ ಮತ್ತು ಕುಷ್ಟಗಿ ಜನತೆಯ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಹೇಳಿದರು. ಸಂಪರ್ಕ ಮತ್ತು ಮೂಲಸೌಕರ್ಯಗಳನ್ನು ಸುಧಾರಿಸಲು ಭಾರತೀಯ ರೈಲ್ವೆಯ ನಿರಂತರ ಬದ್ಧತೆಯನ್ನು ಅವರು ಒತ್ತಿ ಹೇಳಿದರು. ಸೋಮಣ್ಣ ಅವರು ಗದಗ ಮತ್ತು ವಾಡಿ ನಡುವಿನ ಹೊಸ ರೈಲು ಮಾರ್ಗದ ಬಗ್ಗೆ ಮಾತನಾಡಿ, ಇದು ಪ್ರಸ್ತುತ ಕುಷ್ಟಗಿಯವರೆಗೆ ಕಾರ್ಯಾಪ್ರಗತಿಯಲ್ಲಿದ್ದು ಮತ್ತು ಪರಿಶೀಲನೆಯ ನಂತರ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ ಎಂದರು. ಹೆಚ್ಚುವರಿಯಾಗಿ, ಗಿಣಿಗೇರಾ ಮತ್ತು ರಾಯಚೂರು ನಡುವಿನ ಮಾರ್ಗವು ಸಿಂಧನೂರುವರೆಗೆ ಪೂರ್ಣಗೊಂಡಿದೆ,…
ನವದೆಹಲಿ: ಯುಪಿಎಸ್ಸಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಮಂಗಳವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಈ ವಿಷಯವನ್ನು ಜನವರಿ 15 ರ ಬುಧವಾರ ಉನ್ನತ ನ್ಯಾಯಾಲಯದ ಮುಂದೆ ಪಟ್ಟಿ ಮಾಡುವ ಸಾಧ್ಯತೆಯಿದೆ. ಖೇಡ್ಕರ್ ತನ್ನ ಗುರುತನ್ನು ನಕಲಿ ಮಾಡುವ ಮೂಲಕ ಅನುಮತಿಸಲಾದ ಮಿತಿಯನ್ನು ಮೀರಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಮೋಸದ ಪ್ರಯತ್ನಗಳನ್ನು ಪಡೆದ ಆರೋಪ ಎದುರಿಸುತ್ತಿದ್ದಾರೆ. ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಡಿಸೆಂಬರ್ನಲ್ಲಿ ನಿರಾಕರಿಸಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಯುಪಿಎಸ್ಸಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ ಹೆಚ್ಚಿನ ಪ್ರಯತ್ನಗಳನ್ನು ಪಡೆಯಲು ಖೇಡ್ಕರ್ ಅವರ ಗುರುತನ್ನು ನಕಲಿ ಮಾಡಿದ ಆರೋಪದ ನಂತರ ಸೆಪ್ಟೆಂಬರ್ನಲ್ಲಿ ಕೇಂದ್ರ ಸರ್ಕಾರ ಖೇಡ್ಕರ್ ಅವರನ್ನು ಐಎಎಸ್ನಿಂದ ಬಿಡುಗಡೆ ಮಾಡಿತು. ಖೇಡ್ಕರ್ ಅವರ ವಿರುದ್ಧದ ವಿಚಾರಣೆ ಪೂರ್ಣಗೊಂಡ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಮೀಸಲಾತಿ ಪ್ರಯೋಜನಗಳನ್ನು…
ಬೆಂಗಳೂರು: ಸಿದ್ಧರಾಮಯ್ಯ ಮುಖ್ಯಮಂತ್ರಿಗಳಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆ ಹುದ್ದೆ ಖಾಲಿ ಇಲ್ಲ ಎಂದು ನಾನು ಹೇಳಿದ್ದೇನೆ. ಅದು ವಾಸ್ತವ. ಏನಿದೆಯೋ ಅದನ್ನು ಹೇಳಿದ್ದೇನಷ್ಟೆ. ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ಸಿನಲ್ಲಿ ಯಾವ ಗೊಂದಲವೂ ಇಲ್ಲ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಗೊಂದಲವಿರುವುದು ಸುದ್ದಿ ಮಾಧ್ಯಮಗಳಲ್ಲಿ ಮಾತ್ರ ಎಂದು ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮುಖ್ಯಮಂತ್ರಿಗಳನ್ನು ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿ, ಸಂಕ್ರಾಂತಿಯ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಇವತ್ತಿನ ಭೇಟಿಯಲ್ಲಿ ಯಾವ ರಾಜಕೀಯವೂ ಚರ್ಚೆಯಾಗಿಲ್ಲ ಎಂದರು. ಸಿಎಂ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ಯಾವ ಸಮಸ್ಯೆಗಳೂ ಪಕ್ಷದಲ್ಲಿ ಇಲ್ಲ. ಇವೆಲ್ಲವೂಗಳ ಬಗ್ಗೆಯೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸೋಮವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೂಡ ಸುರ್ಜೇವಾಲಾ ಇದನ್ನೇ ಸ್ಪಷ್ಟವಾಗಿ ಹೇಳಿದ್ದಾರೆ. ಪರಮೇಶ್ವರ್, ರಾಜಣ್ಣ ಕಾರಣಾಂತರಗಳಿಂದ ಸಭಗೆ ಬಂದಿರಲಿಲ್ಲವಷ್ಟೆ ಎಂದು ಅವರು ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ರಾಜಕಾರಣ ಕುರಿತು ಡಿ.ಕೆ.ಶಿವಕುಮಾರ್ ಮತ್ತು ಸತೀಶ್ ಜಾರಕಿಜೊಳಿ…
ಬೆಂಗಳೂರು: ಇಂದು ಮುಂಜಾನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿ, ಬೆನ್ನು ಮೂಳೆ ಮುರಿತವಾಗಿದೆ. ಈ ದುರ್ಘಟನೆಗೂ ಮುನ್ನವೇ ಜ್ಯೋತಿಷಿ ಪುಂಡಲೀಕ ಶಾಸ್ತ್ರಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಂಕ್ರಾಂತಿಯವರೆಗೆ ತೊಂದರೆ ಇದೆ. ಹುಷಾರಾಗಿ ಇರಿ ಅಂತ ಭವಿಷ್ಯ ನುಡಿದಿದ್ದರಂತೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿ ಆಗ್ತಾರೆ. ಸಚಿವೆ ಆಗ್ತಾರೆ ಎಂಬುದಾಗಿ ಮೊದಲೇ ಭವಿಷ್ಯ ನುಡಿದಿದ್ದರಂತೆ. ಇದಲ್ಲದೇ ಸಂಕ್ರಾಂತಿವರೆಗೂ ತೊಂದರೆ ಇದೆ. ಹುಷಾರಾಗಿ ಇರುವಂತೆಯೂ ಸೂಚಿಸಿದ್ದಾಗಿ ತಿಳಿಸಿದ್ದಾರೆ. ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಹುಷಾರಾಗಲಿ. ಗುಣಮುಖರಾಗಿ ಸಾರ್ವಜನಿಕ ಜೀವನಕ್ಕೆ ಬರಲಿ. ಒಳ್ಳೇದಾಗಲಿ ಎಂಬುದಾಗಿಯೂ ಜ್ಯೋತಿಷಿ ಪುಂಡಲೀಕ ಶಾಸ್ತ್ರಿ ತಿಳಿಸಿದರು. https://kannadanewsnow.com/kannada/minister-laxmi-hebbalkars-car-accident-case-do-you-know-what-mlc-channaraja-hattiholi-said/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಸಂಬಂಧ ಕಾರಿನಲ್ಲಿದ್ದಂತ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಈ ಸಂಬಂಧ ಸುದ್ದಿಗಾರರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಸಂಬಂಧ ಮಾತನಾಡಿದಂತ ಅವರು, ಎರಡು ನಾಯಿ ಅಡ್ಡ ಬಂತು. ಒಂದರ ಹಿಂದೆ ಒಂದು ಬಂತು. ಡ್ರೈವರ್ ಗೆ ಏನು ಮಾಡೋದಕ್ಕೆ ಸಾಧ್ಯವಾಗಲಿಲ್ಲ. ಪ್ರಾಣಿಗಳ ಜೀವ ರಕ್ಷಣೆ ಮಾಡಲು ದಿಢೀರ್ ಎಡಬದಿಗೆ ಕಾರು ತೆಗೆದುಕೊಂಡರು. ಇದರಿಂದ ಕಾರು ಮರಕ್ಕೆ ಡಿಕ್ಕಿಯಾಯಿತು ಎಂಬುದಾಗಿ ತಿಳಿಸಿದರು. ನಿನ್ನೆ ಸಿಎಲ್ ಪಿ ಸಭೆ ಮುಗಿಸಿ ಬೆಳಗಾವಿಗೆ ಹೊರಟಿದ್ದೆವು. ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಬೆಳಗಾವಿಗೆ ಹೊರೆಟೆವು. ವೀರಭದ್ರ ದೇವಸ್ಥಾನಕ್ಕೆ ಹೋಗಲು ನಿರ್ಧಾರ ಮಾಡಿದ್ದವೆ. ರಾತ್ರಿ ತರಾತುರಿಯಲ್ಲಿ ಬೆಂಗಳೂರು ನಿವಾಸ ಬಿಟ್ಟೆವು. ಇಂದು ಮುಂಜಾನೆ 5 ಗಂಟೆಗೆ ಅಪಘಾತ ಸಂಭವಿಸಿದೆ ಎಂದರು. ನಾಯಿಗಳನ್ನು ರಕ್ಷಣೆ ಮಾಡಲು ಹೋಗಿ ಕಾರು ಎಡಕ್ಕೆ ತೆಗೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಸಚಿವೆ ಲಕ್ಷ್ಮೀ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಿತ್ರಗಳನ್ನು ಬಳಸಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಗಳನ್ನು ಹಂಚಿಕೊಂಡಿದ್ದಕ್ಕಾಗಿ ಆಮ್ ಆದ್ಮಿ ಪಕ್ಷ (Aam Aadmi Party -AAP) ವಿರುದ್ಧ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ. ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಿಸಲಾಗಿದೆ. ದೆಹಲಿ ಬಿಜೆಪಿ ಘಟಕದ ಕಾರ್ಯದರ್ಶಿ ಬ್ರಿಜೇಶ್ ರಾಯ್ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ( Prime Minister Narendra Modi and Union Home Minister Amit Shah ) ಅವರ ಚಿತ್ರಗಳನ್ನು ಬಳಸಿದ ವಿವಿಧ ಟ್ವೀಟ್ಗಳನ್ನು ಉಲ್ಲೇಖಿಸಿ ದೂರು ನೀಡಿದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ವಿಶೇಷವೆಂದರೆ, ಫೆಬ್ರವರಿ 5 ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಹೊರಬೀಳಲಿದೆ. https://kannadanewsnow.com/kannada/son-in-law-ends-mother-in-laws-story-with-oil-slap-stabs-her-to-death-after-going-to-give-sesame-seeds/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/
ಬೆಳಗಾವಿ: ಪತ್ನಿಯ ಚಿಕಿತ್ಸೆಗಾಗಿ ಹಣ ಕೊಡದ ಸಿಟ್ಟಿನಿಂದಲೇ ಆಕೆಯ ತಾಯಿಯನ್ನೇ ಅಳಿಯ ಚಾಕುವಿನಿಂದ ಏಣ್ಣೆ ಏಟಲ್ಲಿ ಇರಿದು ಹತ್ಯೆ ಮಾಡಿರುವಂತ ಘಟನೆ ಬೆಳಗಾವಿಯ ಖಾಸಾಬಾಗ್ ನಲ್ಲಿ ನಡೆದಿದೆ. ಬೆಳಗಾವಿಯ ಖಾಸಬಾಗ್ ನಲ್ಲಿ ಏಣ್ಣೆ ಏಟಲ್ಲಿ ಇಂದು ಸಂಕ್ರಾಂತಿಯ ಸಂದರ್ಭದಲ್ಲಿಯೇ ಅತ್ತೆಗೆ ಎಳ್ಳು ಬೆಲ್ಲ ಕೊಡೋದಕ್ಕೆ ತೆರಳಿದಂತ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಚಾಕು ಇರಿತಕ್ಕೆ ಒಳಗಾದಂತ ರೇಣುಕಾ ಶ್ರೀಧರ್ ಎಂಬಾಕೆ ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವ ಉಂಟಾಗಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಪತ್ನಿಯ ಚಿಕಿತ್ಸೆಗಾಗಿ ಅತ್ತೆ ರೇಣುಕಾ ಶ್ರೀಧರ್ ಗೆ ಹಣ ನೀಡುವಂತೆ ಅಳಿಯ ಶುಭಂ ಕಾಟ ಕೊಡುತ್ತಿದ್ದನಂತೆ. ಆದರೂ ಅತ್ತೆ ರೇಣುಕಾ ಹಣವನ್ನು ನೀಡಿರಲಿಲ್ಲವಂತೆ. ಇಂದು ಸಂಕ್ರಾಂತಿಯಂದು ಎಳ್ಳುಬೆಲ್ಲ ಕೊಡಲು ಹೋಗಿ, ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ. ಈ ಸಂಬಂಧ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/6-soldiers-injured-in-blast-along-loc-in-jammu-and-kashmir/ https://kannadanewsnow.com/kannada/is-swarna-prashana-helpful-for-the-sound-health-of-children-heres-the-complete-information/
ರಾಜೌರಿ : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಭವಾನಿ ಸೆಕ್ಟರ್ ನ ಮಕ್ರಿ ಪ್ರದೇಶದ ನಿಯಂತ್ರಣ ರೇಖೆಯ ಉದ್ದಕ್ಕೂ ಮಂಗಳವಾರ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಕನಿಷ್ಠ ಆರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಸೈನಿಕರು ನಿಯಂತ್ರಣ ರೇಖೆಯ ಬಳಿ ವಾಡಿಕೆಯ ಗಸ್ತು ನಡೆಸುತ್ತಿದ್ದಾಗ ಅವರಲ್ಲಿ ಒಬ್ಬರು ಆಕಸ್ಮಿಕವಾಗಿ ಗಣಿಯ ಮೇಲೆ ಕಾಲಿಟ್ಟರು. ಇದು ಸ್ಫೋಟಕ್ಕೆ ಕಾರಣವಾಯಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಸ್ಫೋಟದ ಪರಿಣಾಮವಾಗಿ ಆರು ಸಿಬ್ಬಂದಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣ ಸ್ಥಳಾಂತರಿಸಿ ವೈದ್ಯಕೀಯ ಚಿಕಿತ್ಸೆಗಾಗಿ ರಾಜೌರಿಯ 150 ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು. ಸೈನಿಕರಿಗೆ ಆಗಿರುವ ಗಾಯಗಳು ಸಣ್ಣದಾಗಿದ್ದು, ಎಲ್ಲಾ ಆರು ಮಂದಿಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. “ಸೈನಿಕರಿಗೆ ಸಮಯೋಚಿತ ವೈದ್ಯಕೀಯ ನೆರವು ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಳನುಸುಳುವಿಕೆಯನ್ನು ಎದುರಿಸಲು ಮತ್ತು ಗಡಿ ಭದ್ರತೆಯನ್ನು ಕಾಪಾಡಿಕೊಳ್ಳಲು ಭದ್ರತಾ ಕ್ರಮಗಳ ಭಾಗವಾಗಿ ರಾಜೌರಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ನಿಯಂತ್ರಣ ರೇಖೆಯನ್ನು ಭಾರಿ ಪ್ರಮಾಣದಲ್ಲಿ ಗಣಿಗಾರಿಕೆ…
ಬೆಂಗಳೂರು: ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೂರಾರು ವಿಕಲಚೇತನ ಉದ್ಯೋಗಿಗಳು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ 6ನೇ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದರು. 2019ರಿಂದಲೂ 600ಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಕುಮಾರಸ್ವಾಮಿ ಅವರೊಂದಿಗೆ ಪ್ರತೀ ವರ್ಷ ತಪ್ಪದೇ ಸಂಕ್ರಾಂತಿ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ತಮ್ಮ ಕುಟುಂಬ ಸಮೇತವಾಗಿ ಕುಮಾರಸ್ವಾಮಿ ಅವರೊಂದಿಗೆ ಸಂಕ್ರಾಂತಿ ಹಬ್ಬ ಆಚರಿಸಿಕೊಳ್ಳಲು ಈ ಸಿಬ್ಬಂದಿ, ರಾಜ್ಯದ ಎಲ್ಲಾ ಭಾಗಗಳಿಂದ ಬಂದಿದ್ದರು ಹಾಗೂ ಹಬ್ಬದ ದಿನ ಕುಮಾರಸ್ವಾಮಿ ಅವರು ಎಲ್ಲಿರುತ್ತಾರೋ ಅಲ್ಲಿಗೆ ಬಂದು ತಮ್ಮ ಮಕ್ಕಳ ಜತೆ ಸೇರಿಕೊಂಡು ಹಬ್ಬ ಆಚರಿಸುತ್ತಾರೆ. ಕಳೆದ ಆರು ವರ್ಷಗಳಿಂದ ಅವರು ಇದನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದ್ದಾರೆ. ಈ ಹಬ್ಬಕ್ಕೆ ಉದ್ಯೋಗಿಗಳೆಲ್ಲ ಮಂಗಳವಾರ ಸಚಿವರ ಬೆಂಗಳೂರಿನ ಜೆ.ಪಿ.ನಗರದ ನಿವಾಸಕ್ಕೆ ಬಂದು ಹಬ್ಬ ಆಚರಿಸಿದರು. ನಿಮ್ಮ ಹಾರೈಕೆ ಪ್ರೀತಿಯೇ ನನಗೆ ಶ್ರೀರಕ್ಷೆ ಎಂದು ಭಾವುಕರಾದ ಸಚಿವರು: ಈ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ ಸಚಿವ ಕುಮಾರಸ್ವಾಮಿ ಅವರು; ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು…
ಬೆಂಗಳೂರು: ನಗರದ ಬಿಎಂಟಿಸಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ನಾಳೆಯಿಂದ ಜನವರಿ.30ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ನ ತಾತ್ಕಾಲಿಕ ಅಲಭ್ಯವಾಗಲಿದೆ. ಈ ಬಗ್ಗೆ ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025 ರ ಜನವರಿ 15 ರಿಂದ 30 ರವರೆಗೆ “ನಮ್ಮ ಬಿಎಂಟಿಸಿ” ಮೊಬೈಲ್ ಅಪ್ಲಿಕೇಶನ್ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಸಾರ್ವಜನಿಕರಿಗೆ ತಿಳಿಯಪಡಿಸುತ್ತಿರುವುದಾಗಿ ಹೇಳಿದೆ. ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ (Karnataka State Data Centre -KSDC) ಮೈಗ್ರೆಂಟ್ ಕೆಲಸ ನಡೆಯುತ್ತಿದೆ. ಈ ಕಾರಣದಿಂದ ಸಮಸ್ಯೆ ಎದುರಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ನಿಗಮ ( Bangalore Metropolitan Transport Corporation -BMTC) ಈ ಅವಧಿಯಲ್ಲಿ ಉಂಟಾದ ಯಾವುದೇ ಅನಾನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತದೆ. ಪ್ರಯಾಣಿಕರ ತಿಳಿಯ ಪಡಿಸಲು ಬಯಸುತ್ತಿದ್ದೇವೆ ಎಂಬುದಾಗಿ ತಿಳಿಸಿದೆ. ನಮ್ಮ ಬಿಎಂಟಿಸಿ ಅಪ್ಲಿಕೇಷನ್ ತಾತ್ಕಾಲಿಕವಾಗಿ ಸ್ಥಗಿತದಿಂದ ಏನೆಲ್ಲ ಅಲಭ್ಯತೆ.? 1. ಲೈವ್ ಬಸ್ ಟ್ರ್ಯಾಕಿಂಗ್ ಲಭ್ಯವಿರಲ್ಲ 2. ಜರ್ನಿ ಪ್ಲ್ಯಾನರ್ ಸಿಗಲ್ಲ 3. ಶುಲ್ಕ ಕ್ಯಾಲ್ಕುಲೇಟರ್ ಮಾಡೋಕೆ ಆಗಲ್ಲ. 4.…












