Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು; ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಹೊರವಲಯದ ಐದು ಕಡೆಗಳಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುವುದು ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಗೃಹಮಂಡಳಿ ಕಚೇರಿಯಲ್ಲಿ ಶಾಸಕರ ಜತೆ ಈ ಸಂಬಂಧ ಸಭೆ ನಡೆಸಿದ ವಸತಿ ಸಚಿವ ಜಮೀರ್ ಅಹಮದ್ ಖಾನ್, ಟೌನ್ ಶಿಪ್ ನಿರ್ಮಾಣ ಕ್ಕೆ ಜಮೀನು ಸ್ವಾಧೀನ ಸಂಬಂಧ ರೈತರ ಅದಾಲತ್ ನಡೆಸಿ ಅವರ ಒಪ್ಪಿಗೆ ಪಡೆದ ನಂತರ ಮುಂದಿನ ಪ್ರಕ್ರಿಯೆ ನಡೆಸಲು ನಿರ್ಧರಿಸಲಾಯಿತು. ದಾಬಸ್ ಪೇಟೆ, ಸೋಲೂರು, ಹೊಸಕೋಟೆ, ಬಿಡದಿ, ರಾಮನಗರ ಭಾಗದಲ್ಲಿ ಜಮೀನು ಲಭ್ಯತೆ ಆಧಾರದಲ್ಲಿ ಟೌನ್ ಶಿಪ್ ನಿರ್ಮಾಣ ಕ್ಕೆ ತೀರ್ಮಾನ ಮಾಡಲಾಗಿದ್ದು, ಪೂರ್ವಭಾವಿಯಾಗಿ ರೈತರ ಅದಾಲತ್ ನಡೆಸೋಣ ನಂತರ ಶಾಸಕರ ಸಮ್ಮುಖದಲ್ಲಿ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳೋಣ ಎಂದು ತಿಳಿಸಿದರು. ಸಭೆಯಲ್ಲಿ ಹಾಜರಿದ್ದ ಶಾಸಕರಾದ ಶರತ್ ಬಚ್ಚೆಗೌಡ, ಮಾಗಡಿ ಬಾಲಕೃಷ್ಣ, ನೆಲಮಂಗಲ ಶ್ರೀನಿವಾಸ್, ದೊಡ್ಡಬಳ್ಳಾಪುರ ಧೀರಜ್ ಮುನಿರಾಜು, ರೈತರು ಜಮೀನು ಕೊಡಲು ಸ್ವಯಂ ಪ್ರೇರಿತ ರಾಗಿ…
ಬೆಂಗಳೂರು: ದಲಿತರನ್ನು ಮತ್ತು ಹಿಂದೂಗಳನ್ನು ಹತ್ತಿಕ್ಕುವ ಸರಕಾರ ರಾಜ್ಯದಲ್ಲಿದೆ; ಈ ಸರಕಾರದ ನಡೆನುಡಿ ಬಗ್ಗೆ ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಡಾ.ಅಶ್ವತ್ಥನಾರಾಯಣ್ ಅವರ ನೇತೃತ್ವದಲ್ಲಿ ಬೈರತಿ ಬಸವರಾಜ್, ಭಾಸ್ಕರ ರಾವ್, ನಾರಾಯಣಗೌಡರನ್ನು ಒಳಗೊಂಡ ಸತ್ಯ ಶೋಧನಾ ಸಮಿತಿ ರಚಿಸಲಾಗಿದೆ. ನಿನ್ನೆ ನಮ್ಮ ಅಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್ ಅವರು ನಾಗಮಂಗಲಕ್ಕೆ ತೆರಳಿ ನೋಡಿಕೊಂಡು ಬಂದಿದ್ದಾರೆ ಎಂದರು. ಹಿಂದೂಗಳಿಗೆ ಅನ್ಯಾಯ ಮಾಡುವ ಸರಕಾರ ಇದೆಂದು ಆಕ್ಷೇಪಿಸಿದರು. ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಗೆ ತೆರಳುವ ಮೆರವಣಿಗೆಯ ಮೇಲೆ ಮುಸಲ್ಮಾನರು ಕಲ್ಲುಗಳನ್ನು ಎಸೆದಿದ್ದಾರೆ. ನೂರಾರು ಕಲ್ಲುಗಳನ್ನು ಎಸೆದಿದ್ದಾರೆ. ಮಸೀದಿಯಲ್ಲಿ ಕಲ್ಲುಗಳು ಹೇಗೆ ಬಂದವು? ಲಾಂಗುಗಳು, ಪೆಟ್ರೋಲ್ ಬಾಂಬ್ ಹೇಗೆ ಬಂದವು? ಎಂದು ಕೇಳಿದರು. ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳನ್ನು ಸುಟ್ಟು ಹಾಕಿದ್ದಾರೆ. ಸುಮಾರು 40ಕ್ಕೂ ಹೆಚ್ಚು ಅಂಗಡಿಗಳು…
ಮಾಗಡಿ : ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು. ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ ಗ್ಯಾರಂಟಿ ಯೋಜನೆಗಳನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಎನ್ನುವಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಮೂಲಕ ನಾಗಮಂಗಲ ಗಲಭೆಯ ಬೆನ್ನಲ್ಲೇ, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನು ಎತ್ತಂಗಡಿ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗುಪ್ತಚರ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ಇದಲ್ಲದೆ ಕೆ.ವಿ.ಶರತ್ ಚಂದ್ರ, ಐಪಿಎಸ್ (ಕೆಎನ್ -1997) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಮಹಾನಿರ್ದೇಶಕ ಮತ್ತು ಆಯುಕ್ತರ ಹುದ್ದೆಗೆ ಸಮವರ್ತಿ ಉಸ್ತುವಾರಿಯಲ್ಲಿ ಇರಿಸಲಾಗಿದೆ. ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮತ್ತು ಆಯುಕ್ತರಾಗಿದ್ದ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಇದಲ್ಲದೆ, ಹೇಮಂತ್ ಎಂ.ನಿಂಬಾಳ್ಕರ್, ಐಪಿಎಸ್ (ಕೆಎನ್-1998) ಅವರು ಬೆಂಗಳೂರು…
ಬೆಂಗಳೂರು: ಭಾರತೀಯ ಯುವಜನರಲ್ಲಿ ಅತ್ಯಂತ ಜನಪ್ರಿಯ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ರಿಯಲ್ ಮಿ ಇಂದು ರಿಯಲ್ ಮಿ ನಾರ್ಜೋ 70 ಟರ್ಬೊ 5 ಜಿ ಮತ್ತು ರಿಯಲ್ ಮಿ ಬಡ್ಸ್ ಎನ್ 1 ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ರಿಯಲ್ ಮಿ ನಾರ್ಜೋ ಸರಣಿ ಮತ್ತು AIoT ಸಾಧನಗಳಿಗೆ ಇತ್ತೀಚಿನ ಸೇರ್ಪಡೆಗಳು ಆಯಾ ವಿಭಾಗಗಳಲ್ಲಿ ಗುಣಮಟ್ಟದ ಮಾನದಂಡಗಳನ್ನು ಮರುವ್ಯಾಖ್ಯಾನಿಸಲು ಸಜ್ಜಾಗಿವೆ. ಹೊಸ ರಿಯಲ್ ಮಿ ನಾರ್ಜೋ 70 ಟರ್ಬೊ 5 ಜಿ ತಮ್ಮ ಜೀವನಶೈಲಿ ಮತ್ತು ಆಕಾಂಕ್ಷೆಗಳಿಗೆ ಸರಿಹೊಂದುವಂತಹ ಹೆಚ್ಚಿನ ಕಾರ್ಯಕ್ಷಮತೆಯ ಸಾಧನಗಳನ್ನು ಬಯಸುವ ಯುವ, ತಂತ್ರಜ್ಞಾನ-ಬುದ್ಧಿವಂತ ಗ್ರಾಹಕರಿಗೆ ಟರ್ಬೊ ಪರಿಕಲ್ಪನೆಯನ್ನು ಪರಿಚಯಿಸುವ ಕಾರ್ಯತಂತ್ರದ ಹೆಜ್ಜೆಯಾಗಿದೆ. ನವೀನ ಟರ್ಬೊ ತಂತ್ರಜ್ಞಾನದಿಂದ ಚಾಲಿತವಾಗಿರುವ ಈ ಸಾಧನವು ಮೌಲ್ಯ-ಚಾಲಿತ ಸ್ಮಾರ್ಟ್ಫೋನ್ ವಿಭಾಗದಲ್ಲಿ ಕಾರ್ಯಕ್ಷಮತೆಯನ್ನು ಮರುವ್ಯಾಖ್ಯಾನಿಸುತ್ತದೆ, ಇದು ವಿದ್ಯುತ್ಗೆ ಆದ್ಯತೆ ನೀಡುವ ಬೇಡಿಕೆಯ ಬಳಕೆದಾರರ ನಿರೀಕ್ಷೆಗಳನ್ನು ಮೀರಿದೆ. ಹೊಸ ಟರ್ಬೊ ತಂತ್ರಜ್ಞಾನವು ವರ್ಧಿತ ಸಂಸ್ಕರಣಾ ವೇಗ ಮತ್ತು ಸುಗಮ ಬಳಕೆದಾರ ಅನುಭವವನ್ನು ಖಚಿತಪಡಿಸುತ್ತದೆ, ಇದು ಮೊಬೈಲ್…
ಬೆಂಗಳೂರು: ಸೆಪ್ಟೆಂಬರ್.16ರಂದು ಈದ್ ಮಿಲಾದ್ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಕೆಲ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ಪರ್ಯಾಯ ಮಾರ್ಗದ ರಸ್ತೆಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, DO:-16/09/2024 ರಂದು ಮುಸ್ಲಿಂ ಬಾಂಧವರು “ಈದ್-ಮಿಲಾದ್ ಹಬ್ಬವನ್ನು ಆಚರಣೆ ಮಾಡಲಿದ್ದು ಈ ಸಂಬಂಧ ನೃಪತುಂಗ ರಸ್ತೆಯಲ್ಲಿನ Y.M.C.A. ಮೈದಾನಕ್ಕೆ ಸಾವಿರಾರು ಜನರು ಅಲಂಕೃತ ವಾಹನ ಹಾಗೂ ಮೆರವಣಿಗೆ ಮೂಲಕ ನಗರದ ವಿವಿಧ ಸ್ಥಳಗಳಿಂದ ಬಂದು ಸೇರಲಿದ್ದಾರೆ. ಸುಗಮ ಸಂಚಾರದ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ ಎಂದು ತಿಳಿಸಿದೆ. ಈದ್-ಮಿಲಾದ್ ಮೆರವಣಿಗೆ ಮಾರ್ಗಗಳು: 1. ಜೆ.ಸಿ ನಗರ ದರ್ಗಾದಿಂದ ಹೊರಟು ಶಿವಾಜಿನಗರ ಕಂಟೋನ್ಮೆಂಟ್ ಕಡೆಗೆ ಸಾಗುವುದು. 2. ಯಲಹಂಕ ಓಲ್ಡ್ ಟೌನ್ ಮಸೀದಿಯಿಂದ ಯಲಹಂಕ ಓಲ್ಡ್ ಟೌನ್ ಮಸೀದಿಯವರೆಗೆ 3. ಹಳೇ ಬಸ್ ನಿಲ್ದಾಣದಿಂದ ಸಣ್ಣ ಅಮಾನಿಕೆರೆಯವರೆಗೆ 4. ಬೆಳ್ಳಳ್ಳಿ ಕ್ರಾಸ್ ನಿಂದ ನಾಗವಾರ ಸಿಗ್ನಲ್ ವರೆಗೆ 5. ರಾಜಗೋಪಾಲನಗರ ಮುಖ್ಯರಸ್ತೆಯಿಂದ…
ಬೆಂಗಳೂರು: ನಾಗಮಂಗಲ ಗಲಭೆಯ ನಂತ್ರ ಪೊಲೀಸ್ ಇಲಾಖೆ ಬೆಂಗಳೂರಲ್ಲಿ ಅಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಿದೆ. ಈ ಹಿನ್ನಲೆಯಲ್ಲೇ ಬೆಂಗಳೂರಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ:16/09/2024 ರಂದು ಬೆಂಗಳೂರು ನಗರಾದ್ಯಂತ ಮುಸ್ಲಿಮರು ಈದ್ಮಿಲಾದ್ ಹಬ್ಬವನ್ನು ಆಚರಿಸುವ ಪ್ರಯುಕ್ತ, ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ, ಮೆರವಣಿಗೆಯಲ್ಲಿ ಸ್ಥಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು, ನಡಿಗೆಯಲ್ಲಿ ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ರಸ್ತೆ ಖುದ್ದು ಸಾಬ್ ಇದ್ದಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಹಬ್ಬದ ದಿನದಂದು ಈ ಕೆಳಕಂಡ ಸೂಚನೆಗಳನ್ನು ಅನುಸರಿಸಲು ಸೂಚಿಸಲಾಗಿದೆ. 1. ಮೆರವಣಿಗೆ ಸಾಗುವ ಹಾದಿಯಲ್ಲಿ ಸಾರ್ವಜನಿಕರಿಗೆ ಆಡಚಣೆ ಉಂಟಾಗದಂತೆ ಸ್ವಯಂಸೇವಕರು ಹಾಗೂ ಅಯೋಜಕರು ರಸ್ತೆಯ ಎರಡು ಬದಿಯಲ್ಲಿ ನಿಂತು ಮೆರವಣಿಗೆಗಾರರಿಗೆ ಸೂಕ್ತ ನಿರ್ದೇಶನವನ್ನು ನೀಡಿ…
ಬೆಂಗಳೂರು: 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ಮೆರವಣಿಯ ಹಿನ್ನಲೆಯಲ್ಲಿ ದಿನಾಂಕ 14-09-2024ರ ನಾಳೆ ಹಾಗೂ ದಿನಾಂಕ 15-09-2024ರ ನಾಡಿದ್ದು ಕೆಲ ಏರಿಯಾಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2024ನೇ ಸಾಲಿನ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಉತ್ತರ, ಪೂರ್ವ ಮತ್ತು ಈಶಾನ್ಯ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.…
ಬೆಂಗಳೂರು: ಈಗಾಗಲೇ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಅನುಮತಿ ನೀಡಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮತ್ತೊಂದು ಖಾಸಗಿ ದೂರು ದಾಖಲಾಗಿದೆ. ಬಿಬಿಎಂಪಿ ಗೆ ಉದ್ದೇಶಪೂರ್ವಕವಾಗಿ 68 ಕೋಟಿ ರೂ.ಗಳಿಗೂ ಹೆಚ್ಚು ಮೊತ್ತ ವಂಚಿಸಿರುವ ಹಗರಣ ಇದಾಗಿದೆ. ಈ ಕುರಿತಂತೆ ಭ್ರಷ್ಟಾಚಾರ ವಿರೋಧಿ ವೇದಿಕೆ (ರಿ.) ಹಾಗೂ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ರಮೇಶ್ ಎನ್.ಆರ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಆ ದೂರಿನಲ್ಲಿ ಈ ಹಿಂದೆ 2013-2018 ರ ಅವಧಿಯಲ್ಲಿ ಸಿದ್ಧರಾಮಯ್ಯನವರ ಆಡಳಿತಾವಧಿಯಲ್ಲಿ, ಅವರ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇರುವ ಪಾಲಿಕೆಯ ಒಡೆತನದ 493 ಬಸ್ ತಂಗುದಾಣ (Bus Shelter) ಗಳನ್ನು ಬಳಸಿಕೊಂಡು, ಬಿಬಿಎಂಪಿ ಗೆ ಕಾನೂನು ರೀತ್ಯಾ ರಾಜ್ಯ ಸರ್ಕಾರವು ಪಾವತಿಸಬೇಕಿದ್ದ ₹ 68,14,90,236 /- ಗಳನ್ನು ಪಾವತಿಸದೆ ವಂಚಿಸಿರುತ್ತಾರೆ ಎಂದಿದ್ದಾರೆ. 2015-2017 ರ ಎರಡು…
ಬೆಂಗಳೂರು : ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ಸರ್ಕಾರ ತಿಪ್ಪೆ ಸಾರಿಸುವ ಮಾತಾಡುತ್ತಿದೆ. ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು…